Tag: ಶ್ರೀಕೃಷ್ಣ ಜನ್ಮಾಷ್ಟಮಿ

  • ಮಂತ್ರಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ – ಪಿಂಡ್ಲಿ ಉತ್ಸವದಲ್ಲಿ ಶ್ರೀಗಳು ಭಾಗಿ

    ಮಂತ್ರಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ – ಪಿಂಡ್ಲಿ ಉತ್ಸವದಲ್ಲಿ ಶ್ರೀಗಳು ಭಾಗಿ

    ರಾಯಚೂರು: ಮಂತ್ರಾಲಯ (Mantralya) ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನ (Krishna Janmashtami) ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಕೃಷ್ಣನ ಪೂಜೆಗೂ ಮುನ್ನ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಶ್ರೀಗಳ (Subudhendra Teertha Swamiji) ನೇತೃತ್ವದಲ್ಲಿ ಪಿಂಡ್ಲಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮಠದ ಹೊರಗೆ ರಾಜ ಬೀದಿಯಲ್ಲಿ ಪಿಂಡ್ಲಿ ಉತ್ಸವ ಆಯೋಜಿಸಲಾಗಿತ್ತು.

    ಸ್ವತಃ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಪಿಂಡ್ಲಿ ಉತ್ಸವದಲ್ಲಿ ಪಾಲ್ಗೊಂಡು ಮೊಸರು, ಹಾಲು, ಬೆಣ್ಣೆ ತುಂಬಿದ ಮಡಿಕೆಯನ್ನ ಒಡೆದರು. ಉತ್ಸವದಲ್ಲಿ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಹಾಗೂ ಮಠದ ಸಿಬ್ಬಂದಿ, ಭಕ್ತರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ನಿರಂತರ ಎರಚುವ ಓಕಳಿ ಮಧ್ಯೆಯೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಗಡಿಗಿ ಒಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಬಳಿಕ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳದ ಆರೋಪ – ಮಗುವಿನ ಎದುರೇ ತಾಯಿ ನೇಣಿಗೆ ಶರಣು

    ಇನ್ನೂ ರಾಯಚೂರು ಜಿಲ್ಲೆಯ ಎಲ್ಲೆಡೆ ಕೃಷ್ಣ ಜನ್ಮಾಷ್ಠಮಿ ಸಂಭ್ರಮ ಮನೆ ಮಾಡಿತ್ತು. ನಗರದ ಗೀತಾ ಮಂದಿರ, ಶ್ರೀಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆಗಳನ್ನ ನೆರವೇರಿಸಲಾಯಿತು. ಪುಟ್ಟಮಕ್ಕಳು ಕೃಷ್ಣ ರಾಧ ವೇಷಧರಿಸಿ ಸಂಭ್ರಮಿಸಿದರು. ಇದನ್ನೂ ಓದಿ: ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್

  • ದೇವಭೂಮಿ ʻದ್ವಾರಕೆʼಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ…

    ದೇವಭೂಮಿ ʻದ್ವಾರಕೆʼಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ…

    ದೇಶಾದ್ಯಂತ ಇಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಕೃಷ್ಣನ ಮಹಿಮೆಯ ಸ್ಥಳ ಬಗ್ಗೆ ತಿಳಿಯುವುದು ಅತ್ಯವಶ್ಯಕವೂ ಆಗಿದೆ. ʻದ್ವಾರಕೆʼ ಎಂದೊಡನೆ ನೆನಪಾಗೋದು ಮಹಾಭಾರತ. ದೇವಭೂಮಿ ಎಂದೇ ಕರೆಸಿಕೊಳ್ಳುವ ದ್ವಾರಕೆ ಈಗಲೂ ಶ್ರೀಕೃಷ್ಣನ ಧಾಮವಾಗಿ ಸುಪ್ರಸಿದ್ಧವಾಗಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಈ ದೇವಭೂಮಿಗೆ ಭೇಟಿ ನೀಡಿ ಶ್ರೀಕೃಷ್ಣನ ಕೃಪೆಗೆ ಪಾತ್ರರಾಗುತ್ತಾರೆ. ಈ ದಿನ ಕೃಷ್ಣಜನ್ಮಾಷ್ಟಮಿಯಲ್ಲಿ ಇಲ್ಲಿ ವೈಭವೋಪೇತವಾಗಿ ಆಚರಿಸಲಾಗುತ್ತಿದ್ದು, ದೇಶ ವಿದೇಶಗಳಿಂದ ಸಹಸ್ರಾರು ಭಕ್ತರು ಕೃಷ್ಣನ ದರ್ಶನಕ್ಕೆ ದಾಂಗುಡಿ ಇಡುತ್ತಿದ್ದಾರೆ. ʻದ್ವಾರಕಾʼ (Dwarka) ಎಂದರೆ ಸ್ವರ್ಗದ ದ್ವಾರ ಎಂದು ಅರ್ಥ. ಮಹಾಭಾರತದ ಪ್ರಕಾರ ಈ ಜಾಗದ ಪೂರ್ವನಾಮ ಕುಶಸ್ಥಲಿ. ಹಿಂದೂ ಸಂಪ್ರದಾಯದ ಪವಿತ್ರ ಸಪ್ತಪುರಿಗಳಲ್ಲಿ ಒಂದಾಗಿರುವ ಕಾರಣ ಇದು ಮೋಕ್ಷಪುರಿ.

    ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ್ದ ನಾಲ್ಕು ಪೀಠಗಳಲ್ಲಿ ಪಾಶ್ಚಿಮಾತ್ಯ ಶಾರದಾ ಪೀಠ ಇರುವುದು ಇಲ್ಲಿಯೇ. ಹಿಂದೂ ಧರ್ಮೀಯರಿಗೆ ಮಾತ್ರವೇ ಅಲ್ಲ, ಜೈನ ಮತ್ತು ಬೌದ್ಧ ಧರ್ಮಗಳಲ್ಲೂ ಪವಿತ್ರವಾಗಿರುವ ಕ್ಷೇತ್ರ ಈ ದ್ವಾರಕೆ. ಎಲ್ಲಕ್ಕಿಂತ ಹೆಚ್ಚಾಗಿ ದ್ವಾರಕೆ ಶ್ರೀಕೃಷ್ಣನ ರಾಜಧಾನಿಯಾಗಿತ್ತು. ಇದು ಸಾಕ್ಷಾತ್ ಭಗವಂತನ ಕರ್ಮಭೂಮಿ! ಯದುವಂಶದ ಕೊನೆಯ ನೆಲೆ ಇದು. ಶ್ರೀಕೃಷ್ಣನ ಅವತಾರ ಸಮಾಪ್ತಿಯ ಬಳಿಕ ಈ ಪಟ್ಟಣವನ್ನು ಸಮುದ್ರ ನುಂಗಿತ್ತು ಎಂದು ಪುರಾಣಗಳಲ್ಲಿ ಉಲ್ಲೇಖವಾಗಿದೆ.

    ಪುರಾಣಗಳ ದ್ವಾರಕೆ ಇಂದು ಗುಜರಾತ್ ರಾಜ್ಯದ ನೈಋತ್ಯ ಭಾಗದಲ್ಲಿರುವ ಒಂದು ಪಟ್ಟಣ. ಈ ಪ್ರದೇಶಕ್ಕೆ ದೇವಭೂಮಿ ದ್ವಾರಕಾ ಜಿಲ್ಲೆ ಎಂದು ಹೆಸರಿದೆ. ಇಲ್ಲಿರುವ ಶ್ರೀಕೃಷ್ಣನ ಪವಿತ್ರ ಕ್ಷೇತ್ರಗಳಲ್ಲಿ ದ್ವಾರಕಾಧೀಶ ಮಂದಿರ ಅತ್ಯಂತ ಮಹತ್ವದ್ದಾಗಿದೆ. ಹಾಗಿದ್ದರೇ ಆ ದ್ವಾರಕಾಧೀಶ ಮಂದಿರದ ಬಗ್ಗೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ..

    ದ್ವಾರಕಾಧೀಶ ಮಂದಿರ
    ದ್ವಾರಕೆಯ ಆರಾಧ್ಯದೈವವಾದ ಶ್ರೀಕೃಷ್ಣನ ದೇವಾಲಯಕ್ಕೆ ದ್ವಾರಕಾಧೀಶ ಮಂದಿರ ಎಂದು ಹೆಸರು. ಈ ದೇವಾಲಯ ಇರುವುದು ಗೋಮತೀ ನದಿಯ ಸಂಗಮಕ್ಷೇತ್ರದಲ್ಲಿ, ದೇಶ-ವಿದೇಶಗಳಿಂದ ಭಕ್ತರನ್ನು ಆಕರ್ಷಿಸುತ್ತಿರುವ ಪ್ರಾಚೀನ ದೇವಾಲಯ ಇದು. ದ್ವಾರಕಾಧೀಶ ಮಂದಿರದ ಗೋಪುರವನ್ನು 16ನೇ ಶತಮಾನದಲ್ಲಿ ರಾಜಾ ಜಗತ್ ಸಿಂಗ್ ರಾಠೋಡ್ ಕಟ್ಟಿಸಿದ್ದ ಕಾರಣ ಇದಕ್ಕೆ ಜಗನ್ಮಂದಿರ ಮತ್ತು ನಿಜ ಮಂದಿರ ಎಂಬ ಹೆಸರುಗಳೂ ಇವೆ.

    ಸ್ಥಳಪುರಾಣದ ಪ್ರಕಾರ ಈ ಜಾಗದಲ್ಲಿ 2,500 ವರ್ಷಗಳ ಪುರಾತನ ದೇವಾಲಯ ಇತ್ತು. ಹರಿಗೃಹ (ಶ್ರೀಕೃಷ್ಣನ ಅರಮನೆ) ಇದ್ದ ಜಾಗದಲ್ಲಿ ಅವನ ಮರಿ ಮೊಮ್ಮಗ ವಜ್ರನಾಭ ಮೂಲ ದೇವಾಲಯವನ್ನು ನಿರ್ಮಿಸಿದ. ಆರಂಭದಲ್ಲಿ ದೇವಾಲಯ ಛತ್ರಿಯ ಆಕಾರದಲ್ಲಿತ್ತು. ವರ್ಷಾಂತರಗಳಲ್ಲಿ ಇದು ಅನೇಕಾನೇಕ ಬದಲಾವಣೆಗಳನ್ನು ಕಂಡಿದೆ. ಪಶ್ಚಿಮಾಭಿಮುಖವಾಗಿ ನಿರ್ಮಾಣವಾಗಿರುವ ದ್ವಾರಕಾಧೀಶ ದೇವಾಲಯ ಒಂದು ಸುಂದರ ಭವನ. ಸಮುದ್ರ ಮಟ್ಟದಿಂದ 70 ಅಡಿ ಎತ್ತರದಲ್ಲಿರುವ ಸುಮಾರು 6,000 ಚದರಡಿ ವಿಸ್ತೀರ್ಣದ ದ್ವಾರಕಾಧೀಶ ಮಂದಿರದ ಗರ್ಭಗೃಹಕ್ಕೆ ನಿಜಮಂದಿರ ಅಥವಾ ಹರಿಗೃಹ ಎಂದು ಹೆಸರಿದೆ. ಇದರೊಳಗೆ ಅಂತರಾಳ ಎಂಬ ಗುಪ್ತ ಕೊಠಡಿ ಇದೆ. ಮಂದಿರದ ನಡುವೆ ವಿಶಾಲ ಸಭಾಂಗಣ ಇದೆ.

    16ನೇ ಶತಮಾನದಲ್ಲಿ ನಿರ್ಮಾಣವಾದ ದೇವಾಲಯದ ಎರಡು ಗೋಪುರಗಳ ಮೇಲೆ ಸುಂದರ ಶಿಲ್ಪಗಳ ಅಲಂಕಾರವಿದೆ. ಇವುಗಳಲ್ಲಿ 52 ಮೀಟರ್ (170 ಅಡಿ) ಎತ್ತರದ 7 ಮಾಳಿಗೆಗಳ ಹಿರಿಯ ಗೋಪುರಕ್ಕೆ ʻಲಡ್ವಾ ಶಿಖ‌ರ್’ ಎಂದು ಹೆಸರು. 157 ಅಡಿ ಎತ್ತರದ, 5 ಮಾಳಿಗೆಗಳ ಕಿರಿಯ ಗೋಪುರಕ್ಕೆ ʻನಿಜಶಿಖ‌ರ್’ ಎಂದು ಹೆಸರು.

    ಏಳು ಮಾಳಿಗೆಗಳ ಗೋಪುರವನ್ನು 72 ಕಗ್ಗಲ್ಲಿನ ಅಲಂಕೃತ ಸ್ತಂಭಗಳು ಆಧರಿಸಿ ಹಿಡಿದಿವೆ. ಐದು ಮಾಳಿಗೆಗಳ ನಿಜಶಿಖರದ ಆಧಾರವಾಗಿ 60 ಸ್ತಂಭಗಳಿವೆ. ಈ ಗೋಪುರದ ಕೆಳಗೆ ದ್ವಾರಕಾಧೀಶನ ಗರ್ಭಗುಡಿ ಇದೆ. ಭಕ್ತರು 56 ಮೆಟ್ಟಲುಗಳನ್ನು ಹತ್ತಿ ದೇವಾಲಯ ತಲುಪುತ್ತಾರೆ. ಯಾದವ ರಾಜ್ಯದ 52 ಆಡಳಿತ ವಿಭಾಗಗಳು ಮತ್ತು ಕೃಷ್ಣ, ಬಲರಾಮ, ಪ್ರದ್ಯುಮ್ನ ಹಾಗೂ ಅನಿರುದ್ಧರನ್ನು ಈ ಮೆಟ್ಟಲುಗಳು ಸೂಚಿಸುತ್ತವೆ.

    ದೇವಾಲಯಕ್ಕೆ ಎರಡು ಮುಖ್ಯದ್ವಾರಗಳಿವೆ. ಮಾರುಕಟ್ಟೆಯತ್ತ ತೆರೆದುಕೊಳ್ಳುವ ಉತ್ತರಾಭಿಮುಖವಾದ ಪ್ರವೇಶದ್ವಾರಕ್ಕೆ ʻಮೋಕ್ಷದ್ವಾರ’ ಎಂದು ಹೆಸರು, ದಕ್ಷಿಣಾಭಿಮುಖವಾದ ಪ್ರವೇಶದ್ವಾರಕ್ಕೆ ʻಸ್ವರ್ಗದ್ವಾರ’ ಎಂದು ಹೆಸರು. ಇದು ಗೋಮತೀ ನದಿಯತ್ತ ತೆರೆದುಕೊಳ್ಳುತ್ತದೆ. ಭಕ್ತರು ಗೋಮತೀ ನದಿಯಲ್ಲಿ ಮುಳುಗೆದ್ದು ಶ್ರೀಕೃಷ್ಣನ ದರ್ಶನಕ್ಕೆ ಹೋಗಬೇಕು ಎಂಬ ನಿಯಮ ಇದೆ.

    ಗರ್ಭಗುಡಿಯಲ್ಲಿರುವ ದ್ವಾರಕಾಧೀಶನ ವಿಗ್ರಹ ವಿಷ್ಣುವಿನಂತೆ ಚತುರ್ಭುಜದ್ದಾಗಿದ್ದು, ಶಂಖ, ಚಕ್ರ, ಗದೆ, ಪದ್ಮಗಳನ್ನು ಹಿಡಿದ ತ್ರಿವಿಕ್ರಮ ರೂಪದಲ್ಲಿದೆ. ಪ್ರತಿದಿನ ದ್ವಾರಕಾಧೀಶ ಮೂರ್ತಿಯನ್ನು ವೈಭವೋಪೇತವಾಗಿ ಅಲಂಕರಿಸಲಾಗುತ್ತದೆ. ಶ್ರೀಕೃಷ್ಣ ದ್ವಾರಕೆಯ ರಾಜಕುಮಾರನಾಗಿದ್ದ. ಅವನನ್ನು ಅದೇ ರೀತಿ ಪೂಜಿಸಲಾಗುತ್ತದೆ. ಗರ್ಭಗುಡಿಯ ಹೊರಗೆ ಎಡಭಾಗದ ವೇದಿಕೆಯಲ್ಲಿ ಬಲರಾಮನ ಮೂರ್ತಿ ಇದೆ. ಬಲಭಾಗದಲ್ಲಿ ಪ್ರದ್ಯುಮ್ನ ಮತ್ತು ಅನಿರುದ್ಧ (ಕೃಷ್ಣನ ಮಗ ಮತ್ತು ಮೊಮ್ಮಗ)ರ ವಿಗ್ರಹಗಳಿವೆ.

    ಸಭಾಂಗಣದ ಸುತ್ತ ರಾಧಿಕಾ, ಜಾಂಬವತಿ, ಸತ್ಯಭಾಮೆ, ಲಕ್ಷ್ಮೀದೇವಿ, ಬಲರಾಮ, ಪ್ರದ್ಯುಮ್ನ, ಅನಿರುದ್ಧ ಮಾಧವ ರಾವ್‌ ಜೀ (ಶ್ರೀಕೃಷ್ಣ), ರುಕ್ಕಿಣಿ, ಜುಗಲ್ ಸ್ವರೂಪ್ (ಶ್ರೀಕೃಷ್ಣನ ಇನ್ನೊಂದು ಹೆಸರು), ಶಿವ, ಲಕ್ಷ್ಮೀನಾರಾಯಣ ಮತ್ತು ಸೀತಾದೇವಿಯ ವಿಗ್ರಹಗಳಿರುವ ಪುಟ್ಟ ಗುಡಿಗಳಿವೆ. ದಂತಕಥೆಗಳ ಪ್ರಕಾರ ಶ್ರೀಕೃಷ್ಣನ ಪರಮಭಕ್ತಿ ಮೀರಾಬಾಯಿ ಕೃಷ್ಣನ ಮೂರ್ತಿಯೊಡನೆ ಲೀನವಾಗಿದ್ದು ಇದೇ ದಿವ್ಯ ಮಂದಿರದಲ್ಲಿ ಏಳು ಮಾಳಿಗೆಗಳ ಲಡ್ಡಾ ಶಿಖರ್ ಗೋಪುರದ ಮೇಲಿನ ಧ್ವಜಸ್ತಂಭದಲ್ಲಿ ಸೂರ್ಯ ಮತ್ತು ಚಂದ್ರರ ಚಿತ್ರಗಳಿರುವ ಶ್ರೀಹರಿಧ್ವಜ ಹಾರುತ್ತದೆ. ತ್ರಿಕೋನಾಕೃತಿಯಲ್ಲಿರುವ 50 ಅಡಿ ಅಗಲದ ಧ್ವಜ ಇದು. ಈ ಧ್ವಜವನ್ನು ದಿನಕ್ಕೆ ನಾಲ್ಕು ಬಾರಿ ಬದಲಾಯಿಸಲಾಗುತ್ತದೆ.

    ಮುಖ್ಯ ದ್ವಾರಕಾಧೀಶ ದೇವಾಲಯ ತೆರೆದುಕೊಳ್ಳುವುದು ಬೆಳಗ್ಗೆ 6.30ಕ್ಕೆ. ಬೆಳಗ್ಗಿನ ಮಂಗಳಾರತಿಯ ಬಳಿಕ ಮಧ್ಯಾಹ್ನ 1 ಗಂಟೆಯ ತನಕ ದೇವಾಲಯ ತೆರೆದಿರುತ್ತದೆ. ಮಧ್ಯಾಹ್ನ 1 ಗಂಟೆಗೆ ಬಾಗಿಲು ಹಾಕಿದರೆ ಮತ್ತೆ ತೆರೆಯುವುದು ಸಂಜೆ 5 ಗಂಟೆಗೆ. 5ರಿಂದ ರಾತ್ರಿ 9.30ರ ತನಕ ದೇವಾಲಯ ತೆರೆದಿರುತ್ತದೆ. ದ್ವಾರಕೆಗೆ ಚಳಿಗಾಲ ಮತ್ತು ಬೇಸಗೆಯಲ್ಲಿ ಭೇಟಿ ನೀಡಬಹುದು. ಸಮುದ್ರ ಸಾಮೀಪ್ಯದ ಕಾರಣ ಇಲ್ಲಿ ಸಮಶೀತೋಷ್ಣ ವಾತಾವರಣ ಇರುತ್ತದೆ.

  • ಕೃಷ್ಣ ಜನ್ಮಾಷ್ಟಮಿ: ಬಾಲಕೃಷ್ಣ, ಲೋಲ, ಮುರಳಿ ಕೊಳಲ ಲೀಲ- ಎಲ್ಲೆಲ್ಲೂ ಭಗವಾನ್ ಶ್ರೀಕೃಷ್ಣ ಜಪ

    ಕೃಷ್ಣ ಜನ್ಮಾಷ್ಟಮಿ: ಬಾಲಕೃಷ್ಣ, ಲೋಲ, ಮುರಳಿ ಕೊಳಲ ಲೀಲ- ಎಲ್ಲೆಲ್ಲೂ ಭಗವಾನ್ ಶ್ರೀಕೃಷ್ಣ ಜಪ

    ಲ್ಲೆಲ್ಲೂ ಕೃಷ್ಣ ಜನ್ಮಾಷ್ಟಮಿ (Krishna Janmashtami) ಸಂಭ್ರಮ. ಹರೇ ರಾಮ.. ಹರೇ ಕೃಷ್ಣ.. ಕೃಷ್ಣ ಕೃಷ್ಣ.. ಹರೇ ಹರೇ.. ಎಂದು ಭಜಿಸಿ ಪರಮಾತ್ಮನ ನಾಮ ಸ್ಮರಣೆ ಮಾಡುವ ದಿನ. ಬಾಲ್ಯದಲ್ಲಿ ತುಂಟ, ಪ್ರಾಯ ಪ್ರಣಯದಲ್ಲಿ ರಾಧಾ ಲೋಲ, ವಯಸ್ಸಿನಲ್ಲಿ ಆಪದ್ಭಾಂದವ, ಯುಗ ಯುಗದ ಅವತಾರ ಪುರುಷ. ಶ್ರೀಕೃಷ್ಣನ ಸ್ಮರಣೆಯೆಂದರೆ, ಅದು ಕೊಳಲ ನಿನಾದದಲ್ಲಿನ ತಲ್ಲೀನತೆ.

    ಭಾರತದಲ್ಲಿ ಶ್ರೀಕೃಷ್ಣನ ಜನ್ಮಾಷ್ಟಮಿ ಹಬ್ಬ ತನ್ನದೇ ಆದ ವಿಶೇಷತೆಗಳನ್ನು ಹೊಂದಿದೆ. ಮನೆ ಮನೆಗಳಲ್ಲಿ ಮಕ್ಕಳು ರಾಧಾ-ಕೃಷ್ಣರಾಗುತ್ತಾರೆ. ಮಕ್ಕಳಿಗೆ ರಾಧಾ-ಕೃಷ್ಣನ ವೇಷಭೂಷಣ ತೊಡಿಸಿ ಪೋಷಕರು ಸಂಭ್ರಮಿಸುತ್ತಾರೆ. ಹುಡುಗರು ಎತ್ತರಕ್ಕೆ ಬೆಣ್ಣೆ ಇರುವ ಮಡಿಕೆ ಕಟ್ಟಿ ಒಡೆಯುತ್ತಾರೆ. ಬಾಲಕೃಷ್ಣ ಬೆಣ್ಣೆ ಕದ್ದು ತಿನ್ನುವ ಸಂದರ್ಭವನ್ನು ಸ್ಮರಿಸುತ್ತಾರೆ. ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಭಕ್ತಿ-ಭಾವ ಮೆರೆಯುತ್ತಾರೆ.

    ಶ್ರೀಕೃಷ್ಣ ವೈಷ್ಣವ ಧರ್ಮದ ಪ್ರತೀಕ. ಭಗವಾನ್ ಕೃಷ್ಣನ ಜನ್ಮಸ್ಥಳ ಮಥುರಾದಲ್ಲಿ ಜನ್ಮಾಷ್ಟಮಿ ಆಚರಣೆ ವಿಶೇಷವಾಗಿರುತ್ತದೆ. ‘ದಹಿ ಹಂಡಿ’ ಒಡೆಯುವುದು ಹಬ್ಬದ ಪ್ರಮುಖ ಆಕರ್ಷಣೆ. ತಮಿಳುನಾಡಿನಲ್ಲಿ ಜನ್ಮಾಷ್ಟಮಿಯನ್ನು ಜನ ಸಾಮಾನ್ಯವಾಗಿ ಗೀತೆಗಳನ್ನು ಪಠಿಸುವ ಮೂಲಕ ಮತ್ತು ಮನೆಯಲ್ಲಿ ರೇಖಾಚಿತ್ರಗಳನ್ನು ಬಿಡಿಸುವ ಮೂಲಕ ಆಚರಿಸುತ್ತಾರೆ. ವಿಶಿಷ್ಟ ಆಚರಣೆಗಳು ಸಮೃದ್ಧಿಯನ್ನು ತರುತ್ತವೆ ಎಂದು ನಂಬಲಾಗಿದೆ.

    ಇಸ್ಕಾನ್ (Iskcon) ವೈಷ್ಣವ ಧರ್ಮವನ್ನು ಜನಪ್ರಿಯಗೊಳಿಸಿದ ಮಥುರಾದಲ್ಲಿ ಜನ್ಮಾಷ್ಟಮಿ ಆಚರಣೆ ವಿಜೃಂಭಣೆಯಿಂದ ನಡೆಯುತ್ತದೆ. ಪ್ರಪಂಚದಾದ್ಯಂತದ ಪ್ರವಾಸಿಗರು ಇಲ್ಲಿ ಭಾಗವಹಿಸುತ್ತಾರೆ. ಸಾಮೂಹಿಕ ಪೂಜೆಗಾಗಿ ಸಮುದಾಯಗಳು ಒಟ್ಟಾಗಿ ಸೇರುತ್ತವೆ. ಆಚರಣೆಗಳಿಗೆ ಅವಿಭಾಜ್ಯವಾದ ರಾಸ್ ಲೀಲಾ ಅಥವಾ ಕೃಷ್ಣ ಲೀಲಾ ಪ್ರದರ್ಶನಗಳು ಶ್ರೀಕೃಷ್ಣನ ದೈವಿಕ ಕಾಲಕ್ಷೇಪಗಳನ್ನು ಸ್ಪಷ್ಟವಾಗಿ ಚಿತ್ರಿಸುತ್ತವೆ. ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶ್ರೀಮಂತಿಕೆ ಸಮ್ಮಿಲನವಾಗುತ್ತದೆ. ಈ ವರ್ಷ ಹಿಂದೂ ಸಂಪ್ರದಾಯದ ಪ್ರಕಾರ ಭಗವಾನ್ ಕೃಷ್ಣನ 5,251 ಜನ್ಮ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ ಸ್ಪೆಷಲ್ ಗರಿಗರಿ ಉದ್ದಿನಬೇಳೆ ಚಕ್ಕುಲಿ

    ಬೃಂದಾವನ, ಮಥುರಾ:
    ಜನ್ಮಾಷ್ಟಮಿಯ ಸಮಯದಲ್ಲಿ ಮಥುರಾದ (Mathura) ಬೀದಿಗಳು ರೋಮಾಂಚಕ ಶೋಭಾ ಯಾತ್ರೆಯ ಮೆರವಣಿಗೆಗಳೊಂದಿಗೆ ಜೀವಂತವಾಗುತ್ತವೆ. ಅಲಂಕೃತ ರಥಗಳು, ಸಾಂಪ್ರದಾಯಿಕ ಸಂಗೀತ ಮತ್ತು ಅಪಾರ ಉತ್ಸಾಹದಿಂದ ಆಚರಿಸುವ ಉತ್ಸಾಹಿ ಭಕ್ತಸಾಗರವೇ ಇಲ್ಲಿ ನೆರೆದಿರುತ್ತದೆ. ಗೋವರ್ಧನ ಬೆಟ್ಟಕ್ಕೂ ಶ್ರೀಕೃಷ್ಣನಿಗೂ ಅವಿನಾಭಾವ ಸಂಬಂಧ. ಬೆಟ್ಟದಲ್ಲಿ ಭಕ್ತರು ಪ್ರದಕ್ಷಿಣೆ ಹಾಕುತ್ತಾರೆ. ಶ್ರೀಕೃಷ್ಣನನ್ನು ಪಾರ್ಥಿಸುತ್ತಾರೆ. ವೃಂದಾವನದಲ್ಲಿರುವ ಬಂಕೆ ಬಿಹಾರಿ ದೇವಾಲಯವು ಜನ್ಮಾಷ್ಟಮಿಯಂದು ಅತ್ಯಂತ ಪೂಜ್ಯ ಸ್ಥಳಗಳಲ್ಲಿ ಒಂದಾಗಿದೆ. ಸಾವಿರಾರು ಭಕ್ತರನ್ನು ಸೆಳೆಯುವ ದೇವಾಲಯ ಹಬ್ಬದ ಕೇಂದ್ರಬಿಂದುವಾಗಿದೆ.

    ವೃಂದಾವನದಲ್ಲಿರುವ ಪ್ರಶಾಂತ ಪರಿಸರದ ತಾಣ ರಾಧಾ ರಾಮನ್ ದೇವಾಲಯದಲ್ಲೂ ಜನ್ಮಾಷ್ಟಮಿಯನ್ನು ವಿಜೃಂಭಣೆಯಿAದ ಆಚರಿಸಲಾಗುತ್ತದೆ. ಶ್ರೀಕೃಷ್ಣನು ರಾಧೆಯೊಂದಿಗೆ ರಾಸಲೀಲೆ ಆಡಿದನೆಂದು ನಂಬಲಾದ ‘ಸೇವಾ ಕುಂಜ್’ ಕೃಷ್ಣ ಜನ್ಮಾಷ್ಟಮಿಯಂದು ಭೇಟಿ ನೀಡುವ ಮತ್ತೊಂದು ಆಧ್ಯಾತ್ಮಿಕ ಮಹತ್ವದ ತಾಣ. ದೀಪಗಳು ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟ ಈ ಶಾಂತಿಯುತ ತಾಣವು ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಭಕ್ತರಿಗೆ ಪ್ರಶಾಂತವಾದ ಏಕಾಂತವನ್ನು ನೀಡುತ್ತದೆ.

    ಮಹಾರಾಷ್ಟ್ರ:
    ಜನ್ಮಾಷ್ಟಮಿಯನ್ನು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ದಹಿ ಹಂಡಿ (Dahi Handi) ಒಡೆಯುವ ಸಂಪ್ರದಾಯ ಇಲ್ಲಿ ಜನಪ್ರಿಯ. ಗೋವಿಂದಾಸ್ ತಂಡಗಳು ಮಾನವ ಪಿರಮಿಡ್‌ಗಳನ್ನು ರಚಿಸಿ, ಎತ್ತರದ ಭಾಗದಲ್ಲಿರುವ ಮೊಸರು ತುಂಬಿದ ಮಡಿಕೆ ಹೊಡೆಯುತ್ತಾರೆ. ಆ ಮೂಲಕ ಬೆಣ್ಣೆ ಕದ್ದ ಬಾಲಕೃಷ್ಣನನ್ನು ಸ್ಮರಿಸುತ್ತಾರೆ. ಮುಂಬೈ ಮತ್ತು ಪುಣೆಯಂತಹ ನಗರಗಳು ಈ ರೋಮಾಂಚಕ ಆಚರಣೆಗಳೊಂದಿಗೆ ಗಮನ ಸೆಳೆಯುತ್ತವೆ. ದೊಡ್ಡ ಜನಸಮೂಹವನ್ನು ಹಬ್ಬದಂದು ನಗರಗಳು ಸೆಳೆಯುತ್ತವೆ.

    ಮುಂಬೈನ ಇಸ್ಕಾನ್ ದೇವಾಲಯ ಮತ್ತು ಪಂಢರಪುರದ ವಿಠ್ಠಲ್ ರುಕ್ಮಿಣಿ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ, ಭಜನೆ ಮತ್ತು ಕೀರ್ತನೆಗಳನ್ನು ಆಯೋಜಿಸಲಾಗುತ್ತದೆ. ಆರಾಧನೆಗಾಗಿ ಭಕ್ತರನ್ನು ಆಕರ್ಷಿಸುತ್ತವೆ. ಮನೆಗಳಲ್ಲಿ ಶ್ರೀಕೃಷ್ಣನಿಗೆ ಅರ್ಪಿಸಲು ಪೇಡಾಸ್ ಮತ್ತು ಶ್ರೀಖಂಡದಂತಹ ಸಿಹಿತಿಂಡಿಗಳನ್ನು ತಯಾರಿಸುತ್ತಾರೆ. ಇದು ಹಬ್ಬದ ಉತ್ಸಾಹವನ್ನು ಹೆಚ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ಜನ್ಮಾಷ್ಟಮಿಯು ಆಳವಾದ ಭಕ್ತಿ ಮತ್ತು ರೋಮಾಂಚಕ ಸಂದರ್ಭದ ಸಮ್ಮಿಶ್ರಣವಾಗಿದೆ.

    ಉಡುಪಿ:
    ಉಡುಪಿಯಲ್ಲಿ ಜನ್ಮಾಷ್ಟಮಿಯನ್ನು ವಿಶೇಷವಾಗಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಅಪಾರ ಭಕ್ತಿ ಮತ್ತು ವೈಭವದಿಂದ ಆಚರಿಸಲಾಗುತ್ತದೆ. ಕರ್ನಾಟಕದ (Karnataka) ಪ್ರಮುಖ ಯಾತ್ರಾಸ್ಥಳವಾದ ಈ ದೇವಾಲಯವು ಉತ್ಸವಗಳ ಕೇಂದ್ರಬಿಂದುವಾಗಿದೆ. ಸಾವಿರಾರು ಭಕ್ತರನ್ನು ಆಕರ್ಷಿಸುತ್ತದೆ. ಭಕ್ತಿ ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ದೇವಾಲಯವನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಭಗವಾನ್ ಕೃಷ್ಣನ ವಿಗ್ರಹವು ಸೊಗಸಾದ ವಸ್ತ್ರಗಳು ಮತ್ತು ಆಭರಣಗಳಿಂದ ಅಲಂಕೃತಗೊಂಡು ಭಕ್ತರಲ್ಲಿ ಪರವಶ ಭಾವವನ್ನು ಮೂಡಿಸುತ್ತದೆ. ಉಡುಪಿಯಲ್ಲಿ ಜನ್ಮಾಷ್ಟಮಿಯ ವೈಶಿಷ್ಟ್ಯವೆಂದರೆ ಮುದ್ದು ಕೃಷ್ಣ ಸ್ಪರ್ಧೆ. ಅಲ್ಲಿ ಮಕ್ಕಳು ಚಿಕ್ಕ ಕೃಷ್ಣನ ವೇಷಭೂಷಣ ತೊಡುತ್ತಾರೆ. ಭಕ್ತರು ಉಪವಾಸ, ಪ್ರಾರ್ಥನೆ ಮಾಡುತ್ತಾರೆ. ಪ್ರಸಾದ ವಿತರಣೆಯಲ್ಲಿ ಭಾಗವಹಿಸುತ್ತಾರೆ.

    ದ್ವಾರಕ:
    ದ್ವಾರಕಾದಲ್ಲಿ ಜನ್ಮಾಷ್ಟಮಿಯು ಐತಿಹಾಸಿಕ ಮತ್ತು ಆಧ್ಯಾತ್ಮಿಕ ಪ್ರಾಮುಖ್ಯತೆಯ ಆಚರಣೆಯಾಗಿದೆ. ಉತ್ಸವಗಳು ಪೂಜ್ಯ ದ್ವಾರಕಾದೀಶ್ ದೇವಾಲಯದ ಸುತ್ತ ಸುತ್ತುತ್ತವೆ. ಮಧ್ಯರಾತ್ರಿಯ ಮಂಗಳ ಆರತಿಯು ಶ್ರೀಕೃಷ್ಣನ ದೈವಿಕ ಜನ್ಮವನ್ನು ಸೂಚಿಸುತ್ತದೆ. ಗರ್ಬಾ ಮತ್ತು ದಾಂಡಿಯಾ ರಾಸ್‌ನಂತಹ ಸಾಂಪ್ರದಾಯಿಕ ನೃತ್ಯಗಳು ರೋಮಾಂಚಕವಾಗಿರುತ್ತವೆ. ಸಂಭ್ರಮಾಚರಣೆಯ ವಾತಾವರಣವನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ. ಕೃಷ್ಣನ ಮೂರ್ತಿಗೆ ಸ್ನಾನ ಮಾಡಿಸಿ, ಅಲಂಕರಿಸಿ ನಂತರ ಭವ್ಯ ಮೆರವಣಿಗೆಗಳು ಸೇರಿದಂತೆ ವಿಶಿಷ್ಟ ಆಚರಣೆಗಳನ್ನು ಮಾಡಲಾಗುತ್ತದೆ. ವಿಶೇಷ ಪ್ರಸಾದ ವಿತರಣೆ ಇರುತ್ತದೆ.

    ಮಣಿಪುರ:
    ಮಣಿಪುರದಲ್ಲಿ ಜನ್ಮಾಷ್ಟಮಿಯು ಶ್ರೀಮಂತ ವೈಷ್ಣವ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ಗೋವಿಂದಜೀ ಸೇರಿದಂತೆ ಅನೇಕ ದೇವಾಲಯಗಳು ವಿಶೇಷ ಪ್ರಾರ್ಥನೆ, ಭಕ್ತಿಗೀತೆಗಳನ್ನು ಆಯೋಜಿಸಲಾಗುತ್ತದೆ. ಭಗವದ್ಗೀತೆ ಪಠಣವೂ ಇರುತ್ತದೆ. ಕೃಷ್ಣ ಮತ್ತು ರಾಧೆಯ ದೈವಿಕ ಪ್ರೀತಿಯನ್ನು ಚಿತ್ರಿಸುವ ಶಾಸ್ತ್ರೀಯ ಮಣಿಪುರಿ ನೃತ್ಯ ನಾಟಕವಾದ ಸಾಂಪ್ರದಾಯಿಕ ರಾಸ್ ಲೀಲಾ ಪ್ರದರ್ಶನಗಳಿಂದ ಉತ್ಸವವು ಹೈಲೈಟ್ ಆಗಿದೆ. ಭಕ್ತರು ಉಪವಾಸ ಮತ್ತು ಪ್ರಾರ್ಥನೆಯಲ್ಲಿ ತೊಡಗುತ್ತಾರೆ. ಆಚರಣೆಗಳು ಮಧ್ಯರಾತ್ರಿಯಲ್ಲಿ ಮುಕ್ತಾಯಗೊಳ್ಳುತ್ತವೆ.

    ದಕ್ಷಿಣ ಭಾರತ:
    ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಆಚರಣೆಗಳು ವಿಭಿನ್ನವಾಗಿವೆ. ಜನರು ಉಪವಾಸ ಆಚರಿಸುತ್ತಾರೆ. ಕೋಲಂಗಳನ್ನು ಎಳೆಯುತ್ತಾರೆ. ಭಗವದ್ಗೀತೆ ಪಠಿಸುತ್ತಾರೆ. ಆಂಧ್ರಪ್ರದೇಶದಲ್ಲಿ ಸಂಬಂಧಿಕರು ಮತ್ತು ಸ್ನೇಹಿತರನ್ನು ಭೇಟಿ ಮಾಡಲು ಮಕ್ಕಳು ಕೃಷ್ಣನಂತೆ ವೇಷಧರಿಸಿ ಗಮನ ಸೆಳೆಯುತ್ತಾರೆ. ವೆರ್ಕಡಲೈ ಉರುಂಡೈಯಂತಹ ಸಿಹಿ ತಿನಿಸುಗಳನ್ನು ತಯಾರಿಸಲಾಗುತ್ತದೆ.

    ಪಶ್ಚಿಮ ಬಂಗಾಳ, ಒಡಿಶಾ:
    ಜನ್ಮಾಷ್ಟಮಿಯಂದು ಕೋಲ್ಕತ್ತಾದಲ್ಲಿ ಭವ್ಯವಾದ ಮೆರವಣಿಗೆ ಇರುತ್ತದೆ. ಇದು ಕೃಷ್ಣನ ಜೀವನದ ದೃಶ್ಯಗಳನ್ನು ಚಿತ್ರಿಸುವ ವಿಸ್ತಾರವಾಗಿ ಅಲಂಕರಿಸಿದ ಫ್ಲೋಟ್‌ಗಳು ಮತ್ತು ರೋಮಾಂಚಕ ಸಂಗೀತವನ್ನು ಒಳಗೊಂಡಿರುತ್ತದೆ. ಈ ನಗರವು ಸಂದೇಶ ಮತ್ತು ರಸಗುಲ್ಲಾದಂತಹ ವಿಶೇಷ ಸಿಹಿತಿಂಡಿಗಳಿಗೆ ಹೆಸರುವಾಸಿಯಾಗಿದೆ. ಇದನ್ನು ಶ್ರೀಕೃಷ್ಣನಿಗೆ ಅರ್ಪಿಸಲಾಗುತ್ತದೆ. ಬಳಿಕ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ಕಾಳಿಘಾಟ್ ದೇವಾಲಯವನ್ನು ಅಲಂಕರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಜನೆಗಳು ಮತ್ತು ಕೀರ್ತನೆಗಳು ಸೇರಿದಂತೆ ಭಕ್ತಿ ಸಂಗೀತ ಮತ್ತು ನೃತ್ಯ ಪ್ರದರ್ಶನಗಳಿರುತ್ತವೆ.

    ಒಡಿಶಾದಲ್ಲಿ ಜನ್ಮಾಷ್ಟಮಿ ಆಚರಣೆಗಳು ಪುರಿಯ ಜಗನ್ನಾಥ ದೇವಾಲಯದ ಸುತ್ತಲೂ ಕೇಂದ್ರೀಕೃತವಾಗಿವೆ. ದೇವರಿಗೆ ಮಾಡುವ ‘ಅಭಿಷೇಕಂ’ ಇಲ್ಲಿ ವಿಶಿಷ್ಟ. ಸಾಂಪ್ರದಾಯಿಕ ಒಡಿಸ್ಸಿ ನೃತ್ಯ ಮತ್ತು ಒಡಿಯಾ ಪಾಕಪದ್ಧತಿ ಹಬ್ಬದ ಪ್ರಮುಖ ಆಕರ್ಷಣೆ. ಭಕ್ತಿಗೀತೆ ಮತ್ತು ನೃತ್ಯದೊಂದಿಗೆ ಬೀದಿಗಳಲ್ಲಿ ಶ್ರೀಕೃಷ್ಣನ ಚಿತ್ರಗಳನ್ನು ಹೊತ್ತುಕೊಂಡು ಮೆರವಣಿಗೆ ಮಾಡಲಾಗುತ್ತದೆ.

  • ಮಡಕೆ ಒಡೆಯುವ ಜಾನ್ ಸಿನಾ ಫೋಟೋ ಹಂಚಿಕೊಂಡು ಶ್ರೀಕೃಷ್ಣ ಜನ್ಮಾಷ್ಟಮಿ ಶುಭಕೋರಿದ WWE

    ಮಡಕೆ ಒಡೆಯುವ ಜಾನ್ ಸಿನಾ ಫೋಟೋ ಹಂಚಿಕೊಂಡು ಶ್ರೀಕೃಷ್ಣ ಜನ್ಮಾಷ್ಟಮಿ ಶುಭಕೋರಿದ WWE

    ಮುಂಬೈ: ದೇಶಾದ್ಯಂತ ಇಂದು ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ನಡೆದಿದೆ. ಭಾರತದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್‌ (WWE) ಡಬ್ಲ್ಯೂ ಡಬ್ಲ್ಯೂ ಇ ಸೂಪರ್ ಸ್ಟಾರ್ ಜಾನ್ ಸಿನಾ ಮಡಕೆ ಒಡೆಯುತ್ತಿರುವ ಫೋಟೋ ಹಂಚಿಕೊಂಡು ಶುಭ ಕೋರಿದೆ.

    ಭಾರತದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹ್ಯಾಪಿ ಜನ್ಮಾಷ್ಟಮಿ ಇಂಡಿಯಾ ಎಂದು ಹ್ಯಾಷ್‌ಟ್ಯಾಗ್ ಬಳಕೆ ಮಾಡಿ ಫೋಟೋ ಹಂಚಿಕೊಂಡು WWE ಟ್ವೀಟ್ ಮಾಡಿದೆ. ಫೋಟೋದಲ್ಲಿ ಜಾನ್ ಸಿನಾ ಏಣಿಯ ಮೇಲೆ ಕೂತು ಎರಡು ಕೈ ಮೇಲೆತ್ತಿ ಮಡಕೆಯನ್ನು ಹಿಡಿದಿರುವಂತೆ ಚಿತ್ರಿಸಲಾಗಿದೆ. ಈ ಬಗ್ಗೆ ಕಾಮೆಂಟ್‌ ಮಾಡಿರುವ ನೆಟ್ಟಿಗರು, ಮನಿ ಇನ್‌ ದಿ ಬ್ಯಾಂಕ್‌ಗಿಂತ ಮೊಸರು ಇನ್‌ ದಿ ಬ್ಯಾಂಕ್‌ ಚೆನ್ನಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿದ್ದ ಇಶನ್ ಕಿಶನ್‍ಗೆ ಕಚ್ಚಿದ ಜೇನುನೊಣ

    ಈ ಫೋಟೋ ಕಂಡ WWE ಅಭಿಮಾನಿಗಳು ಸಂಭ್ರಮಿಸಿದ್ದು, ತಮ್ಮ ನೆಚ್ಚಿನ WWE ಸೂಪರ್ ಸ್ಟಾರ್ ಈ ರೀತಿ ಕಾಣಿಸಿಕೊಂಡಿರುವುದಕ್ಕೆ ಸಂತಸ ಪಟ್ಟಿದ್ದಾರೆ. ಭಾರತ ಸೇರಿದಂತೆ ವಿಶ್ವದಾದ್ಯಂತ WWEಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನದಲ್ಲಿ ಬಿರುಕು – ಚಹಲ್‍ರನ್ನು ಕೈಬಿಟ್ರಾ ಧನಶ್ರೀ?

    Live Tv
    [brid partner=56869869 player=32851 video=960834 autoplay=true]

  • ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪತ್ನಿ ಜೊತೆಗೆ ದೇವಾಲಯಕ್ಕೆ ರಿಷಿ ಸುನಕ್ ಭೇಟಿ

    ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪತ್ನಿ ಜೊತೆಗೆ ದೇವಾಲಯಕ್ಕೆ ರಿಷಿ ಸುನಕ್ ಭೇಟಿ

    ನವದೆಹಲಿ: ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಅವರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

    ದೇವಾಲಯಕ್ಕೆ ಭೇಟಿ ನೀಡಿರುವ ಫೋಟೋಗಳು ರಿಷಿ ಸುನಕ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಶ್ರೀಕೃಷ್ಣನ ಜನ್ಮದಿನವನ್ನು ಆಚರಿಸುವ ಜನಪ್ರಿಯ ಹಿಂದೂ ಹಬ್ಬಕ್ಕೆ ಮುಂಚಿತವಾಗಿ ಜನ್ಮಾಷ್ಟಮಿಯನ್ನು ಆಚರಿಸಲು ನಾನು ಇಂದು ನನ್ನ ಪತ್ನಿ ಅಕ್ಷತಾ ಅವರೊಂದಿಗೆ ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಭೇಟಿ ನೀಡಿದ್ದೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Rishi Sunak (@rishisunakmp)

     

    ಕೃಷ್ಣ ಜನ್ಮಾಷ್ಟಮಿಯು ಹಿಂದೂ ಹಬ್ಬವಾಗಿದ್ದು, ಈ ದಿನದಂದು ಭಗವಾನ್ ಕೃಷ್ಣನ ಜನ್ಮವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಕೃಷ್ಣನಂತೆ ವೇಷವನ್ನು ಧರಿಸುತ್ತಾರೆ ಮತ್ತು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಇಂದು ಹಿಂದೂಗಳಿಗೆ ವಿಶೇಷ ದಿನವಾಗಿದೆ. ಇದನ್ನೂ ಓದಿ: ಸೌದಿಯಲ್ಲಿ ಪತ್ನಿ ಮೋಜು – ತುಮಕೂರಿನಲ್ಲಿ ಮೂವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

    ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಭಾರತೀಯ ಸಾಫ್ಟ್‍ವೇರ್ ಉದ್ಯಮಿ ಎನ್‍ಆರ್ ನಾರಾಯಣ ಮೂರ್ತಿ ಅವರ ಪುತ್ರಿಯಾಗಿದ್ದಾರೆ. ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂಬಿಎ ಓದುತ್ತಿದ್ದಾಗ ಭೇಟಿಯಾದ ಈ ದಂಪತಿ 2006ರಲ್ಲಿ ಬೆಂಗಳೂರಿನಲ್ಲಿ ವಿವಾಹವಾದರು. ಇದನ್ನೂ ಓದಿ: ಟ್ವೀಟ್ ಮಾಡಿದ್ದಕ್ಕೆ ಸೌದಿ ಮಹಿಳೆಗೆ 34 ವರ್ಷ ಜೈಲು ಶಿಕ್ಷೆ

    Live Tv
    [brid partner=56869869 player=32851 video=960834 autoplay=true]

  • ಕೃಷ್ಣಾಷ್ಟಮಿಗೆ ಶ್ವೇತಾ ಶ್ರೀವಾತ್ಸವ್ ಫೋಟೋಶೂಟ್

    ಕೃಷ್ಣಾಷ್ಟಮಿಗೆ ಶ್ವೇತಾ ಶ್ರೀವಾತ್ಸವ್ ಫೋಟೋಶೂಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ವೇತಾ ಶ್ರೀವಾತ್ಸವ್ ಫೋಟೋಶೂಟ್ ಮೂಲಕವಾಗಿ ಇತ್ತೀಚೆಗೆ ಹೆಚ್ಚು ಸುದ್ದಿಯಾಗುತ್ತಲಿರುತ್ತಾರೆ. ಇದೀಗ ಮಗಳ ಜೊತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತೆಗೆಸಿರುವ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

    ಸದಾ ಫೋಟೋ ಶೂಟ್ ಮೂಲಕವಾಗಿ ಸೋಶಿಲ್ ಮೀಡಿಯಾದಲ್ಲಿ ಸುದ್ದಿಯಲ್ಲಿರುವ ಅಮ್ಮ, ಮಗಳು ಇದೀಗ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವೇಷ ಭೂಷಣ ತೊಟ್ಟು ಮುದ್ದಾಗಿ ಪೋಸ್ ಕೊಟ್ಟು ಫೋಟೋಶೂಟ್ ಮಾಡಿಸಿದ್ದಾರೆ. ಇದನ್ನೂ ಓದಿ: ಬಾಲಕೃಷ್ಣನಾಗಿ ದರ್ಶನ ಕೊಟ್ಟ ಉಡುಪಿ ಕೃಷ್ಣ

     

    View this post on Instagram

     

    A post shared by Shwetha Srivatsav (@shwethasrivatsav)

    ಕೃಷ್ಣ ಜನ್ಮಾಷ್ಟಮಿಗೆ ಶ್ರೀಕೃಷ್ಣನ ಆಶೀರ್ವಾದ ಮತ್ತು ಪ್ರೀತಿಯಿಂದ ತುಂಬಿರಲಿ. ಜನ್ಮಾಷ್ಟಮಿಯ ಶುಭಾಶಯಗಳು. ನನ್ನ ಮುದ್ದು ಅಶ್ಮಿತಾ ಶ್ರೀವಾತ್ಸವ್ ಶ್ರೀ ಕೃಷ್ಣ ಮತ್ತು ರಾಧೆಯ ವೇಷದಲ್ಲಿ ಕಾಣಿಸಿಕೊಂಡಿದ್ದಾಳೆ ಎಂದು ಬರೆದು ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

     

    View this post on Instagram

     

    A post shared by Shwetha Srivatsav (@shwethasrivatsav)

    ದೇಶಾದ್ಯಂತ ಇಂದು ಜನರು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬಹಳ ಸಡಗರದಿಂದ ಆಚರಿಸುತ್ತಿದ್ದಾರೆ. ಈ ನಡುವೆ ಸ್ಯಾಂಡಲ್‍ವುಡ್ ತಾರೆಯರು ಅವರ ಮಕ್ಕಳಿಗೆ ಕೃಷ್ಣನ ವೇಷ ತೊಟ್ಟು ಸಂಬ್ರಮಿಸುತ್ತಿದ್ದಾರೆ. ಆದರೆ ಶ್ವೇತಾ ಶ್ರೀವಾತ್ಸವ್ ತಾವು ಮಗಳೊಂದಿಗೆ ವೇಷತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಸಾಮಾನ್ಯವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ದಿನ ಪುಟ್ಟ ಮಕ್ಕಳಿಗೆ ಕೃಷ್ಣನ ವೇಷ ಹಾಕಿಸಿ ಫೋಟೋಶೂಟ್ ಮಾಡಿಸುತ್ತಾರೆ.

  • ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧ

    ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧ

    ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಚರಣೆಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಮಾಡಲಾಗಿದೆ. 2ದಿನ ಸರಳವಾಗಿ ಆಚರಣೆ ನಡೆಯಲಿದೆ.

    ಉಡುಪಿಯಲ್ಲಿ ಅಷ್ಟಮಿ ಆಚರಣೆಗೆ ಕೊರೊನಾ ಈ ಬಾರಿ ಅಡ್ಡಗಾಲು ಹಾಕಿದೆ. ಅಗಸ್ಟ್ 30 ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. ಅಗಸ್ಟ್ 30 ಬೆಳಗ್ಗೆಯಿಂದಲೇ ಶ್ರೀಕೃಷ್ಣ ಭಕ್ತರು ಉಪವಾಸ ಇರುತ್ತಾರೆ. ಅಂದು ರಾತ್ರಿ 12. 17ಕ್ಕೆ ಸರಿಯಾಗಿ ಶ್ರೀಕೃಷ್ಣನಿಗೆ ಅಘ್ರ್ಯ ಪ್ರದಾನವಾಗಲಿದೆ. ಆ ನಂತರ ಲೀಲೋತ್ಸವ ಚಟುವಟಿಕರ ಆರಂಭ ಆಗುತ್ತವೆ. ಇದನ್ನೂ ಓದಿ:  ಪಿ.ವಿ. ಸಿಂಧುಗೆ ಮೆಗಾ ಸ್ಟಾರ್ ಸನ್ಮಾನ

    ಅಗಸ್ಟ್ 31 ರಥಬೀದಿಯಲ್ಲಿ ಶ್ರೀ ಕೃಷ್ಣನ ಲೀಲೋತ್ಸವ ಕಾರ್ಯಕ್ರಮ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದರು, ಆದರೆ ಕೊರೊನಾ ಸಾಂಕ್ರಾಮಿಕ ಇರುವ ಕಾರಣ ಈ ಬಾರಿ ನಿಗದಿತ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರ್ಮಿಕ ವಿಧಿ-ವಿಧಾನಗಳು ಪ್ರತಿವರ್ಷದಂತೆ ನಡೆಯುತ್ತದೆ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ. ಇದನ್ನೂ ಓದಿ:  ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

    ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ. ರಥಬೀದಿಯಲ್ಲಿ ಗುರ್ಜಿಗಳನ್ನು ಹಾಕಲಾಗಿದೆ. ಗೊಲ್ಲ ವೇಷದಾರಿಗಳು ಮಡಕೆ ಒಡೆಯುವ ಸಂಪ್ರದಾಯವನ್ನು ಮಾಡಲಿದ್ದಾರೆ. ಶ್ರೀಕೃಷ್ಣನ ಮಣ್ಣಿನ ಮೂರ್ತಿಯನ್ನು ರಥಬೀದಿಯಲ್ಲಿ ಉತ್ಸವ ಮಾಡಲಾಗುತ್ತದೆ.

    ಕೃಷ್ಣ ಮಠ ಪರ್ಯಾಯ ಅದಮಾರು ಮಠ ಮತ್ತು ಅಷ್ಟ ಮಠಗಳಿಗೆ ಸಂಬಂಧಪಟ್ಟಂತ ಸ್ವಾಮೀಜಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಭಕ್ತರಿಗೆ ಕೃಷ್ಣ ಲೀಲೋತ್ಸವ ಕಾರ್ಯಕ್ರಮಕ್ಕೆ ರಥಬೀದಿಗೆ ಪ್ರವೇಶ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಸೂಚನೆ ಹೊರಡಿಸಿದೆ. ಜನಜಂಗುಳಿ ಸೇರುವ ಅವಕಾಶ ಇಲ್ಲ ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

  • ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

    ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

    ಉಡುಪಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಲಕ್ಷಾಂತರ ರೂಪಾಯಿ ಹಣ ಇರಬೇಕು ಎಂದೇನಿಲ್ಲ. ಒಳ್ಳೆಯ ಮನಸಿದ್ದರೆ ಸಾಕು. ಉಡುಪಿಯ ರವಿ ಕಟಪಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ದಿನ ವೇಷಹಾಕಿ ಕಳೆದ ಆರು ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿದ್ದಾರೆ. ಈ ಬಾರಿ ಹಾಲಿವುಡ್ ಸಿನಿಮಾದ ಡಾರ್ಕ್ ಅಲೈಟ್ ವೇಷದಲ್ಲಿ ರವಿ ಪ್ರತ್ಯಕ್ಷ ಆಗಲಿದ್ದಾರೆ.

    ಸಾಂಕ್ರಾಮಿಕ ಕೊರೊನಾ ನಡುವೆಯೇ ಶ್ರೀಕೃಷ್ಣ ಜನ್ಮಾಷ್ಟಮಿ ಬಂದಿದೆ. ಅದ್ದೂರಿ ಅಷ್ಟಮಿ ಆಚರಣೆಗೆ ಉಡುಪಿ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಅಷ್ಟಮಿ ದಿನ ಸಾವಿರಾರು ಜನ ವೇಷ ಧರಿಸುತ್ತಿದ್ದರು, ಆದರೆ ಈ ಬಾರಿಯೂ ಅದಕ್ಕೆ ಚಾನ್ಸ್ ಇಲ್ಲ. ನಮ್ಮ ಪಬ್ಲಿಕ್ ಹೀರೋ, ಸಮಾಜಸೇವಕ ಉಡುಪಿಯ ರವಿ ಕಟಪಾಡಿಗೆ ಸ್ಪೆಷಲ್ ಅವಕಾಶ ಕೊಡಲಾಗಿದೆ. ಹಾಲಿವುಡ್ ಸಿನಿಮಾದ ಫ್ಯಾಂಟಸಿ ವೇಷ ಡಾರ್ಕ್ ಅಲೈಟ್ ಆಗಿ ಎರಡು ದಿನ ರವಿ ಉಡುಪಿಯಲ್ಲಿ ಓಡಾಡಲಿದ್ದಾರೆ. ಇದನ್ನೂ ಓದಿ: ಬಿಗ್ ಬಿ ಮುಂದೆ ಕರೋಡ್ ಪತಿ ಸೀಟಲ್ಲಿ ಕುಳಿತ ಉಡುಪಿಯ ರವಿ ಕಟಪಾಡಿ!

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರವಿ ಕಟಪಾಡಿ, ಕಳೆದ ಬಾರಿ ಧನಸಹಾಯ ಮಾಡಲು ಆಗಿರಲಿಲ್ಲ. ಮನಸ್ಸಿಗೆ ಬಹಳ ಬೇಸರವಾಗಿತ್ತು. ಈ ಬಾರಿ ಮತ್ತೆ ಶ್ರೀಕೃಷ್ಣಜನ್ಮಾಷ್ಟಮಿ ಬಂದಿದೆ. ನಾಲ್ಕು ಮಕ್ಕಳಿಗೆ ಸಹಾಯ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆವು. ಆ ನಂತರ ಎರಡು ಕುಟುಂಬಗಳು ನಮ್ಮನ್ನು ಸಂಪರ್ಕ ಮಾಡಿದವು. ಅವರಿಗೂ ಸಹಾಯ ಮಾಡುತ್ತೇವೆ. ಕೊರೊನಾ ಕಾಲದಲ್ಲೂ ನಮಗೆ ಅವಕಾಶ ಕೊಟ್ಟ ಜಿಲ್ಲಾಡಳಿತಕ್ಕೆ ಧನ್ಯವಾದ. ಜನರ ಬಳಿಗೆ ಬರುತ್ತೇವೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ರವಿ ವಿನಂತಿ ಮಾಡಿಕೊಂಡರು.

    ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. ಬಿಗ್ ಬಿ ನಡೆಸುವ ಕರೋಡ್ ಪತಿಯಲ್ಲಿ ಬಂದ ಎಂಟು ಲಕ್ಷ ರೂಪಾಯಿಯನ್ನು ಪೂರ್ತಿಯಾಗಿ ಕಷ್ಟದಲ್ಲಿರುವವರಿಗೆ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ವೆಬ್ ಸೈಟ್ ಗಳಲ್ಲಿ ಬಂದ ಹಣದಲ್ಲಿ ಒಂದು ರೂಪಾಯಿಯನ್ನು ರವಿ ಇಟ್ಟುಕೊಂಡಿಲ್ಲ. ಕಳೆದ ಬಾರಿ ಕೊರೊನಾ ಸಾಂಕ್ರಾಮಿಕ ವಿಪರೀತ ಇದ್ದ ಕಾರಣ ರವಿ ಜನಜಾಗೃತಿಗಾಗಿ ವೇಷ ಹಾಕಿದ್ದರು. ಧನಸಂಗ್ರಹ ಮಾಡಿರಲಿಲ್ಲ. ಈ ಬಾರಿ ಜಿಲ್ಲಾಡಳಿತ ರವಿ ಕಟಪಾಡಿ ಅವರಿಗೆ ಸ್ಪೆಷಲ್ ಪರ್ಮಿಷನ್ ಕೊಟ್ಟಿದೆ. ರವಿ ಫ್ರೆಂಡ್ಸ್ ಕಟಪಾಡಿ ಆರು ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ಮಾಡಿದ್ದಾರೆ.

    ರವಿ ಫ್ರೆಂಡ್ಸ್ ಸದಸ್ಯ ಕಾರ್ತಿಕ್ ಮಾತನಾಡಿ, ಆರು ವರ್ಷದಿಂದ ಈ ಸೇವೆಯನ್ನು ಮಾಡುತ್ತಿದ್ದೇವೆ. ರವಿ ಕಟಪಾಡಿ ಕೂಲಿ ಕೆಲಸ ಮಾಡಿ ಜೀವನ ಮಾಡುವವರು, ಅವರೂ ಕಷ್ಟದಲ್ಲಿದ್ದಾರೆ. ಆದರೆ ಇನ್ನೊಬ್ಬರ ಕಷ್ಟಕ್ಕೆ ಮಾಡುವ ಸಹಾಯದಿಂದ ಅವರು ಸಂತೃಪ್ತಿ ಪಡೆಯುತ್ತಾರೆ. ನಮಗೂ ಅದೇ ಖುಷಿ. ನಾಲ್ಕು ದಿನ ನಿರಂತರ ಶ್ರಮ ಪಡುತ್ತೇವೆ. ರವಿ ಆಹಾರ ಇಲ್ಲದೆ ಎರಡು ದಿನ ಉಪವಾಸವಿದ್ದು ವೇಷ ಹಾಕುತ್ತಾರೆ ಎಂದರು. ಇದನ್ನೂ ಓದಿ: ವರ್ಷಕ್ಕೊಮ್ಮೆ ವೇಷ ಬದಲಿಸೋ ರವಿ ಕಟಪಾಡಿ- ವೇಷ ಹಾಕಿ 35 ಲಕ್ಷ ಸಹಾಯ

    ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ತಂಡದಲ್ಲಿ ಅವಕಾಶ ಕೊಡಲಾಗಿದೆ. ಆಗಸ್ಟ್ 30 ಮತ್ತು 31 ರಂದು ಉಡುಪಿ, ಕಾಪು-ಮಲ್ಪೆ ವ್ಯಾಪ್ತಿಯಲ್ಲಿ ಓಡಾಡಿ ಧನಸಂಗ್ರಹ ಮಾಡಲಿದ್ದಾರೆ. ಸಂಗ್ರಹವಾಗುವ ಒಂದೊಂದು ರೂಪಾಯಿ ಕಷ್ಟದಲ್ಲಿರುವ ಕುಟುಂಬಗಳ ಪಾಲಾಗಲಿದೆ.

  • ದೇವರೂರಿನಲ್ಲಿ ಅಷ್ಟಮಿಯ ಸಂಭ್ರಮ – ಒಂದೂವರೆ ಲಕ್ಷ ಚಕ್ಕುಲಿ, ಲಡ್ಡು ತಯಾರಿ

    ದೇವರೂರಿನಲ್ಲಿ ಅಷ್ಟಮಿಯ ಸಂಭ್ರಮ – ಒಂದೂವರೆ ಲಕ್ಷ ಚಕ್ಕುಲಿ, ಲಡ್ಡು ತಯಾರಿ

    ಉಡುಪಿ: ದೇವರೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೋರಾಗಿದೆ. ಮುಂಜಾನೆಯಿಂದಲೇ ಕೃಷ್ಣ ಭಕ್ತರು ಮಠಕ್ಕೆ ಬಂದು ದೇವರ ದರ್ಶನದಲ್ಲಿ ತೊಡಗಿದ್ದಾರೆ.

    ಶ್ರೀಕೃಷ್ಣ ಪರಮಾತ್ಮ ಇಂದು ರಾತ್ರಿ 12.12ಕ್ಕೆ ಸರಿಯಾಗಿ ಚಂದ್ರೋದಯದ ಕಾಲದಲ್ಲಿ ಜನ್ಮ ಪಡೆಯುತ್ತಾನೆ ಎಂಬ ನಂಬಿಕೆಯಿದೆ. ಇದೇ ಘಳಿಗೆಯಲ್ಲಿ ಮಠದ ಒಳಗೆ ಅರ್ಘ್ಯ ಪ್ರಧಾನ ನಡೆಯಲಿದೆ. ಅಷ್ಟಮಿಯ ಹಿನ್ನೆಲೆಯಲ್ಲಿ ಭಕ್ತರು ದಿನಪೂರ್ತಿ ಉಪವಾಸ ಇರುತ್ತಾರೆ. ದೇವರ ಜನ್ಮಾ ನಂತರ ಉಪವಾಸ ತೊರೆಯುತ್ತಾರೆ.

    ಶ್ರೀಕೃಷ್ಣನ ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಣೆಗೆ ಒಂದೂವರೆ ಲಕ್ಷ ಚಕ್ಕುಲಿ, ಒಂದೂವರೆ ಲಕ್ಷ ಲಡ್ಡು ಸಿದ್ಧವಾಗಿದೆ. ಶನಿವಾರ ವಿಟ್ಲಪಿಂಡಿಯ ದಿನ (ಶ್ರೀಕೃಷ್ಣ ಲೀಲೋತ್ಸವದ ದಿನ) ಸಾವಿರಾರು ಮಂದಿಗೆ ಮಠದಲ್ಲಿ ಸಿಹಿಯೂಟದ ವ್ಯವಸ್ಥೆ, ಉಂಡೆ ಚಕ್ಕುಲಿ ವಿತರಣೆ ನಡೆಯಲಿದೆ. ನೂರಾರು ಬಾಣಸಿಗರು ಉಂಡೆ ಚಕ್ಕುಲಿ ತಯಾರು ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಅಷ್ಟಮಠಗಳ ರಥಬೀದಿಯಲ್ಲಿ ಹೂವು ಹಣ್ಣಿನ ವ್ಯಾಪಾರ ಜೋರಾಗಿದೆ.