Tag: ಶ್ರೀಗಳು

  • ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ: ಕೋಡಿಮಠದ ಶ್ರೀ ಭವಿಷ್ಯ

    ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ: ಕೋಡಿಮಠದ ಶ್ರೀ ಭವಿಷ್ಯ

    – ಚುನಾವಣೆ, ಸರ್ಕಾರದ ಬಗ್ಗೆ ಶ್ರೀಗಳು ಹೇಳಿದ್ದೇನು..?

    ಧಾರವಾಡ: ಆಶ್ವಿಜ ಕೊನೆಯಿಂದ ಯುಗಾದಿ (Yugadi) ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠ (KodiMutt) ದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು. ಅದು ಸಂರಕ್ಷಣೆಯಾಗುತ್ತದೆ. ಪ್ರಾರಂಭದಲ್ಲೇ ನಾನು ಮಳೆ (Rain), ಗಾಳಿ, ಗುಡುಗು ಇದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು-ನೋವುಗಳಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದು ಹೇಳಿದ್ದೆ. ಅದರಂತೆ ಇನ್ನೂ ಮುಂದೆ ಮಳೆಯಾಗುವ ಲಕ್ಷಣ ಇದೆ ಎಂದರು.

    ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ. ಮಳೆಯಿಂದ, ರೋಗದಿಂದ ಹಾಗೂ ಭೂಮಿಯಿಂದ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಈಗಲೂ ಅಂತಹ ಪರಿಸ್ಥಿತಿದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ ಎಂದು ತಿಳಿಸಿದರು.

    ಈ ಸಂವತ್ಸರದ ಕಡೆವರೆಗೂ ಈ ತೊಂದರೆ ಇದೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದೂ ಆಗುತ್ತದೆ ಕಾದು ನೋಡಿ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದೆ. ಅಪಮೃತ್ಯು ಹೆಚ್ಚಿದೆ. ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಒಂದೆಡೆ ಪ್ರಕೃತಿ ವಿಕೋಪ, ಮತಾಂಧತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ ಎಂದರು. ಇದನ್ನೂ ಓದಿ: ದಸರಾ ಹಬ್ಬಕ್ಕೆ ಬೋನಸ್ ಕೊಡಲಿಲ್ಲವೆಂದು ಗ್ರಾಮ ಪಂಚಾಯತ್ ಕಚೇರಿಗೆ ಚಪ್ಪಲಿ ಹಾರ ಹಾಕಿದ ನೌಕರ

    ಇನ್ನೊಂದು ವರ್ಷದಲ್ಲಿ ಕೊರೊನಾ (Corona Virus) ಹೋಗುತ್ತದೆ. ಬಳ್ಳಾರಿಯಲ್ಲಿ ಈ ಬಗ್ಗೆ ಹೇಳಿದ್ದೆ. ಕೊರೊನಾ ಹೋಗುತ್ತದೆ. ಹೋಗುವಾಗ ಜಗತ್ತಿಗೆ ವಿಪರೀತ ಕ್ಷಾಮ ಕೊಟ್ಟು ಹೋಗುತ್ತದೆ. ದುಃಖ ಕೊಟ್ಟು ಹೋಗುತ್ತದೆ, ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ. ಅಂತಹ ಪ್ರಸಂಗ ಇದೆ. ಕೊರೊನಾ ಈ ವರ್ಷದಲ್ಲಿ ಬಿಡುಗಡೆಯಾಗತ್ತದೆ. ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ. ಆದರೆ ಈ ಕೊರೊನಾ ಮೊದಲು ಬಂದಿದ್ದೇ ದೇವರ ಮೇಲೆ. ಮೊದಲು ಮಠ, ಮಾನ್ಯಗಳ ಮೇಲೆ ಬಂತು ಆ ಮೇಲೆ ಮನುಷ್ಯರ ಮೇಲೆ ಬಂತು. ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ. ಬಹಳ ಕಷ್ಟ ಕೊಟ್ಟು ಹೋಗುತ್ತದೆ ಎಂದು ಸ್ವಾಮೀಜಿ ನುಡಿದರು.

    ಇದೇ ವೇಳೆ ರಾಜಕೀಯ ಭವಿಷ್ಯ ಬಗ್ಗೆ ಮಾತನಾಡಿ, ಎಲ್ಲರಿಗೂ ಒಳ್ಳೆಯದಾಗಲಿ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಹೇಳುತ್ತೇನೆ. ರಾಜಕೀಯ (Politics) ಬದಲಾವಣೆ ಬಗ್ಗೆ ಏನೂ ಹೇಳಲು ಹೋಗೋದಿಲ್ಲ ಎಂದು ಹೇಳಿ ಸ್ವಾಮೀಜಿ ನಸುನಕ್ಕರು. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗೋದಿಲ್ಲ. ಅಶುಭವಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಜಾತ್ಯಾತೀತ ಶಕ್ತಿಗಳು ಒಂದಾದ್ರೆ ಕೋಮುವಾದಿ ಶಕ್ತಿಗಳು ಸೋಲುತ್ತವೆ: ಎಚ್.ಕೆ ಪಾಟೀಲ್

    ಜಾತ್ಯಾತೀತ ಶಕ್ತಿಗಳು ಒಂದಾದ್ರೆ ಕೋಮುವಾದಿ ಶಕ್ತಿಗಳು ಸೋಲುತ್ತವೆ: ಎಚ್.ಕೆ ಪಾಟೀಲ್

    ಗದಗ: ಕೋಮುವಾದಿ ಶಕ್ತಿಗಳನ್ನು ಸೋಲಿಸಬೇಕು ಅನ್ನೋ ತತ್ವ, ಚಿಂತನೆಗೆ ಗೆಲುವಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ ಪಾಟೀಲ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಮಹಾನಗರ ಪಾಲಿಕೆಯೇ ಇರಲಿ, ಮತ್ತೊಂದೇ ಇರಲಿ ಕೋಮುವಾದಿ ಶಕ್ತಿಗಳು ಸೋಲಬೇಕಾದರೆ ಜಾತ್ಯಾತೀತ ಶಕ್ತಿಗಳು ಕಾಂಗ್ರೆಸ್ ಜೊತೆ ಹೊಂದಿಕೊಳ್ಳಬೇಕು, ಹೊಂದಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಬಿಜೆಪಿಗೆ ಬರುವ ಮುನ್ನ ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ್

    ಕೋಡಿಮಠದ ಶ್ರೀಗಳ ಹತ್ತಿರ ಭವಿಷ್ಯ ಕೇಳಲು ಸಿದ್ದರಾಮಯ್ಯ ಭೇಟಿ ಎಂಬ ಸಚಿವ ಗೋವಿಂದ ಕಾರಜೋಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಸ್ವಾಮೀಜಿಗಳನ್ನು ಭೇಟಿ ಮಾಡುತ್ತಿರುವುದು ಹೊಸದೇನಲ್ಲ. ಈ ಹಿಂದೆಯೂ ಅವರು ಅನೇಕ ಸ್ವಾಮೀಜಿಗಳನ್ನು ಭೇಟಿ ಮಾಡಿದ್ದಾರೆ. ಮಠ-ಮಾನ್ಯಗಳಿಗೆ ಹೋಗುತ್ತಾರೆ. ಗದುಗಿನ ಸ್ವಾಮೀಜಿಗಳ ಜೊತೆಯೂ ಸಿದ್ದರಾಮಯ್ಯ ಉತ್ತಮ ಸಂಬಂಧಗಳನ್ನು ಹೊಂದಿದ್ದಾರೆ ಎಂದರು.  ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

    ಕೋಡಿಮಠದ ಶ್ರೀಗಳ ಹತ್ತಿರ ಬರೀ ಭವಿಷ್ಯ ಕೇಳಲು ಹೋಗಬೇಕು ಅಂತೇನಿಲ್ಲ. ಭಕ್ತಿಯಿಂದಲೂ ಹೋಗಬಹುದು. ಶ್ರೀಗಳು ಭವಿಷ್ಯ ಹೇಳುವುದಲ್ಲಿ ಪ್ರಖ್ಯಾತರು. ಸಿದ್ದರಾಮಯ್ಯ ಭವಿಷ್ಯ ಕೇಳಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

     

  • ಸ್ವಚ್ಛತಾ ಕಾರ್ಯ ಮಾಡಿ ಜಾಗೃತಿ ಮೂಡಿಸಿದ ಶ್ರೀಗಳು

    ಸ್ವಚ್ಛತಾ ಕಾರ್ಯ ಮಾಡಿ ಜಾಗೃತಿ ಮೂಡಿಸಿದ ಶ್ರೀಗಳು

    ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರಿನಲ್ಲಿ ಗ್ರಾಮಪಂಚಾಯ್ತಿ ವತಿಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸ್ವಚ್ಛತಾ ಕಾರ್ಯದಲ್ಲಿ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀ, ಮಾಸೂರಿನ ಮಹಾಂತ ಶ್ರೀ ಹಾಗೂ ಕೂಡಲಮಠದ ಶ್ರೀಗಳು ಪೂರಕೆ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

    ಮಾಸೂರಿನ ವರಕವಿ ಸರ್ವಜ್ಞನ ಪ್ರತಿಮೆ ಸುತ್ತಮುತ್ತವಿರುವ ಕಸ ತೆಗೆದು ಸ್ವಚ್ಛಗೊಳಿಸಲಾಯಿತು. ಹುಕ್ಕೇರಿ ಮಠದ ಶ್ರೀಗಳಿಗೆ ತಿಪ್ಪಾಯಿಕೊಪ್ಪದ ಮಹಂತದೇವರು, ಹಾವೇರಿ ಕೂಡಲದ ಗುರುನಂಜೇಶ್ವರ ಮಠದ ಮಹೇಶ್ವರ ಸ್ವಾಮೀಜಿಗಳು ಸ್ವಚ್ಛತಾ ಕಾರ್ಯಕ್ಕೆ ಸಾಥ್ ನೀಡಿದರು. ಅಲ್ಲದೆ ಈ ಕಾರ್ಯದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಗೂ ಕೆಲ ಜನರು ಭಾಗವಹಿಸಿದ್ದು ವಿಶೇಷವಾಗಿತ್ತು.

    ಈ ಸಂದರ್ಭದಲ್ಲಿ ಹುಕ್ಕೇರಿಮಠದ ಸದಾಶಿವಶ್ರೀಗಳು ಮಾತನಾಡಿ, ಪ್ರತಿಯೊಬ್ಬರು ಸ್ವಚ್ಛತಾ ಕಾರ್ಯಕ್ರಮ ನಡೆಸುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಿಸಿಕೊಳ್ಳುವಂತೆ ತಿಳಿಸಿದರು.

  • ಜನಾರ್ದನ ರೆಡ್ಡಿ ನಿವಾಸಕ್ಕೆ ಶ್ರೀಶೈಲ ಜಗದ್ಗುರು – ದಂಪತಿಯಿಂದ ಪಾದಪೂಜೆ

    ಜನಾರ್ದನ ರೆಡ್ಡಿ ನಿವಾಸಕ್ಕೆ ಶ್ರೀಶೈಲ ಜಗದ್ಗುರು – ದಂಪತಿಯಿಂದ ಪಾದಪೂಜೆ

    ಬಳ್ಳಾರಿ: ಮಾಜಿ ಸಚಿವ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಇಂದು ಜಿಲ್ಲೆಗೆ ಆಗಮಿಸಿದ್ದ ಪಂಚಪೀಠಾಧೀಶ್ವರರ ಪಾದಪೂಜೆ ನೆರವೇರಿಸಿದ್ದಾರೆ.

    ಬಳ್ಳಾರಿಯ ಅಹಂಬಾವಿ ಪ್ರದೇಶದಲ್ಲಿರುವ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ ಶ್ರೀಶೈಲ ಜಗದ್ಗುರು ಹಾಗೂ ಕಾಶಿ ಪೀಠದ ಶ್ರೀಗಳಿಂದ ವಿಶೇಷ ಪೂಜೆ ನೆರವೇರಿಸಿದರು. ಪೂಜೆಯಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಹಾಗೂ ಪುತ್ರ ಕಿರಿಟಿ ರೆಡ್ಡಿ ಸೇರಿದಂತೆ ರೆಡ್ಡಿ ಬಂಧು ಮಿತ್ರರು ಪಾಲ್ಗೊಂಡಿದ್ದರು. ಸುಮಾರು 20 ನಿಮಿಷ ಶ್ರೀಗಳ ಪಾದ ಪೂಜೆ ಮಾಡಿದರು. ಕಳೆದ ಹಲವು ವರ್ಷಗಳಿಂದ ಲಿಂಗಧಾರಣೆ ಕೈಗೊಂಡಿರುವ ರೆಡ್ಡಿ ಇಂದು ಕುಟುಂಬ ಸಮೇತರಾಗಿ ಶ್ರೀಗಳ ಪಾದಪೂಜೆ ಮಾಡಿದ್ದರು.

    ಈ ವೇಳೆ ಮಾತನಾಡಿದ ಶ್ರೀಶೈಲ ಪೀಠದ ಶ್ರೀಗಳು, ಕಾಶಿ ಪೀಠದಲ್ಲಿ ರೆಡ್ಡಿ ಅವರು ಲಿಂಗಧಾರಣೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಲಿಂಗಪೂಜೆ, ಪಾದ ಪೂಜೆ ಆಗಿದೆ. ಮನೆಯಲ್ಲಿ ಸಂಸ್ಕೃತಿಯ ವಾತಾವರಣ ಸೃಷ್ಟಿಯಾಗಿದೆ. ರೆಡ್ಡಿಯವರು ಕಳೆದ ಹಲವು ವರ್ಷಗಳಿಂದ ಹಲವು ಸಮಸ್ಯೆಗಳಲ್ಲಿ ಸಿಲುಕಿದ್ದಾರೆ. ಆ ಸಮಸ್ಯೆಗಳಿಂದ ಮುಕ್ತಿ ಹೊಂದಲಿದ್ದಾರೆ. ಅವರ ಗತವೈಭವ ಮರುಕಳಿಸಲಿ ಎಂದು ಹಾರೈಸುತ್ತೇವೆ ಎಂದು ಹೇಳಿದ್ದಾರೆ.

    ಕಾಶಿ ಪೀಠದ ಸ್ವಾಮೀಜಿಗಳು, ಬಳ್ಳಾರಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಿಮಿತ್ತ ಬಳ್ಳಾರಿಗೆ ಬಂದಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ರೆಡ್ಡಿ ನಿವಾಸಕ್ಕೆ ಬಂದು ಪಾದ ಪೂಜೆ ಸ್ವೀಕರಿಸಿದೆವು. ರೆಡ್ಡಿಯವರು ಕಾಶಿ ಪೀಠದಲ್ಲಿ ಲಿಂಗಧಾರಣೆ ಮಾಡಿಕೊಂಡಿದ್ದರು. ಅಂದಿನಿಂದ ನಿಷ್ಠೆ ಭಕ್ತಿಯಿಂದ ಲಿಂಗ ಪೂಜೆ ಮಾಡುತ್ತಿದ್ದಾರೆ. ಅವರಿಗೆ ಅವರ ಕುಟುಂಬಕ್ಕೆ ಸನ್ಮಂಗಳವಾಗಲಿ ಎಂದು ಇಂದು ಪಾದ ಪೂಜೆ ಸ್ವೀಕರಿಸಿದ್ದೇವೆ ಎಂದಿದ್ದಾರೆ.

    ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ಇಂದು ನಮ್ಮ ಬಳ್ಳಾರಿಗೆ ಕಾರ್ಯಕ್ರಮದ ನಿಮಿತ್ತ ಉಜ್ಜಿಯಿನಿ ಜಗದ್ಗುರು, ರಂಭಾಪುರಿ ಪೀಠದ ಜಗದ್ಗುರು ಮತ್ತು ಕಾಶಿ ಪೀಠದ ಜಗದ್ಗುರುಗಳು ಆಗಮಿಸಿದ್ದರು. ಜಗದ್ಗುರುಗಳ ಸಮ್ಮುಖದಲ್ಲಿ ಲಿಂಗ ಪೂಜೆ ಮಾಡಿದ್ದು ವಿಶೇಷವಾಗಿತ್ತು. ಕಳೆದ ಕೆಲ ವರ್ಷಗಳ ಹಿಂದೆ ನಾನು ಲಿಂಗಧಾರಣೆ ಮಾಡಿದ್ದು, ಅಂದಿನಿಂದ ಪ್ರತಿನಿತ್ಯ ಲಿಂಗ ಪೂಜೆ ಮಾಡುತ್ತಿದ್ದೇನೆ ಎಂದರು.

    ನಾನು ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವೆ. ನನ್ನ ಮನಸ್ಸಾಕ್ಷಿಯಾಗಿ ನಾವು ಯಾವ ತಪ್ಪೂ ಮಾಡಿಲ್ಲ. ನಾವು ಪ್ರಾಮಾಣಿಕವಾಗಿ ಇದ್ದರೆ ದೇವರ ಆಶೀರ್ವಾದವಿರುತ್ತದೆ. ಅದರಂತೆಯೇ ಶ್ರೀಗಳ ಆಶೀರ್ವಾದದಂತೆ ಆದಷ್ಟು ಬೇಗ ಎಲ್ಲ ಸಮಸ್ಯೆ ಹಾಗೂ ಆರೋಪಗಳಿಂದ ಮುಕ್ತನಾಗುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸಿದ್ದಗಂಗಾ ಮಠದ ಶಾಲಾ-ಕಾಲೇಜುಗಳಿಗೆ ರಜೆ

    ಸಿದ್ದಗಂಗಾ ಮಠದ ಶಾಲಾ-ಕಾಲೇಜುಗಳಿಗೆ ರಜೆ

    ತುಮಕೂರು: ಶ್ರೀಗಳ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಶಾಲಾ-ಕಾಲೇಜುಗಳಿಗೆ ರಜೆ ಫೋಷಣೆ ಮಾಡಲಾಗಿದೆ.

    ಈಗಾಗಲೇ ವೈದ್ಯರು ಶ್ರೀಗಳ ಆರೋಗ್ಯವನ್ನು ಪರಿಶೀಲನೆ ನಡೆಸಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮಕ್ಕಳು ಮತ್ತು ಭಕ್ತರು ಮಠಕ್ಕೆ ಬಂದಿದ್ದಾರೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಮಠದ ಶಾಲಾ-ಕಾಲೇಜುಗಳಿಗೆ ರಜೆ ಫೋಷಣೆ ಮಾಡಿದ್ದಾರೆ. ತಮ್ಮ ಮುಂದಿನ ಆದೇಶವರೆಗೂ ಈ ಫೋಷಣೆ ಮುಂದುವರಿಯುತ್ತದೆ ಎಂದು ಮಠದ ಅಧಿಕಾರಿ ಹೇಳಿದ್ದಾರೆ.

    ಇತ್ತ ಸ್ವಯಂ ಪ್ರೇರಿತರಾಗಿ ಅಂಗಡಿ ಬಾಗಿಲು ಹಾಕುತ್ತಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಬರುವ ಕೆಲವೊಂದು ಅಂಗಡಿಗಳನ್ನು ಮಾಲೀಕರು ಸ್ವಯಂ ಬಂದ್ ಮಾಡಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಶ್ರೀಗಳ ಆರೋಗ್ಯದಲ್ಲಿ ಏರುಪೇರು ಎಂಬ ವಿಷಯ ತಿಳಿದ ತಕ್ಷಣ ಗಣ್ಯಾತೀಗಣ್ಯರು ಸಿದ್ದಗಂಗಾ ಮಠಕ್ಕೆ ಬಂದಿದ್ದರು. ಈಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಂದಿದ್ದು, ಎಲ್ಲರೂ ಸೇರಿ ತುರ್ತು ಸಭೆ ನಡೆಸುತ್ತಿದ್ದಾರೆ.

    ಇನ್ನೂ ಮಠದ ಸುತ್ತಮುತ್ತ ಸರ್ಪಗಾವಲಿನಲ್ಲಿ ಪೊಲೀಸರು ಭದ್ರತೆಯನ್ನು ಆಯೋಜನೆ ಮಾಡಿದ್ದಾರೆ. ಸದ್ಯಕ್ಕೆ ಕಿರಿಯ ಸ್ವಾಮೀಜಿ, ಮಠದ ಅಧಿಕಾರಿಗಳು, ವೈದ್ಯರು ಮತ್ತು ಗಣ್ಯರು ಸೇರಿದಂತೆ ಸಿಎಂ ಕುಮಾರಸ್ವಾಮಿ ಜೊತೆ ತುರ್ತು ಸಭೆ ನಡೆಸುತ್ತಿದ್ದಾರೆ. ಬಳಿಕ ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ತಿಳಿಸುವ ಸಾಧ್ಯತೆ ಇದೆ. ವೈದ್ಯರು ಕೂಡ ಮಧ್ಯಾಹ್ನ 2 ಗಂಟೆ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆಲಿಕಾಪ್ಟರ್ ನಲ್ಲಿ ತುರ್ತಾಗಿ ತುಮಕೂರಿನತ್ತ ಸಿಎಂ – ರಾಜ್ಯಾದ್ಯಂತ ಪೊಲೀಸ್ ಹೈ ಅಲರ್ಟ್

    ಹೆಲಿಕಾಪ್ಟರ್ ನಲ್ಲಿ ತುರ್ತಾಗಿ ತುಮಕೂರಿನತ್ತ ಸಿಎಂ – ರಾಜ್ಯಾದ್ಯಂತ ಪೊಲೀಸ್ ಹೈ ಅಲರ್ಟ್

    ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೆಲಿಕಾಪ್ಟರ್ ನಲ್ಲಿ ತುರ್ತಾಗಿ ತುಮಕೂರಿನತ್ತ ತೆರಳಿದ್ದಾರೆ. ಇತ್ತ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಪೊಲೀಸ್ ಹೈ ಅಲರ್ಟ್ ಮಾಡಲಾಗಿದೆ.

    ಇಂದು ಸಿಎಂ ಕುಮಾರಸ್ವಾಮಿ ಹಿರೇಕೆರೂರು ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಆದರೆ ಶ್ರೀಗಳ ಆರೋಗ್ಯ ಏರುಪೇರಿನ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದು ಮಾಡಿ ಶ್ರೀಗಳ ದರ್ಶನಕ್ಕಾಗಿ ಹೆಲಿಕಾಪ್ಟರ್ ಮೂಲಕ ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೊರಟಿದ್ದಾರೆ. ಶ್ರೀಗಳ ಆರೋಗ್ಯದಲ್ಲಿ ಏರುಪೇರು ಸುದ್ದಿ ತಿಳಿದ ಕೂಡಲೇ ಸಿಎಂ ಕುಮಾರಸ್ವಾಮಿ ಅವರು ಮಠದ ಕಿರಿಯ ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿದ್ದು, ಶ್ರೀಗಳ ಆರೋಗ್ಯ ಯಥಾಸ್ಥಿತಿ ಇದೆ. ಸದ್ಯಕ್ಕೆ ಆಂತಕಪಡುವ ಅಗತ್ಯವಿಲ್ಲ ಎಂದು ಕಿರಿಯ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


    ಅಷ್ಟೇ ಅಲ್ಲದೇ ಶ್ರೀಗಳ ಆರೋಗ್ಯ ವಿಚಾರಕ್ಕಾಗಿ ಸಿದ್ದಗಂಗಾ ಮಠದೊಂದಿಗೆ ದೂರವಾಣಿ ಮೂಲಕ ನಿರಂತರ ಸಂಪರ್ಕದಲ್ಲಿದ್ದು, ಪ್ರತಿ ಗಂಟೆಗೊಮ್ಮೆ ಮಠದಿಂದ ಮಾಹಿತಿ ಪಡೆಯುತ್ತಿದ್ದಾರೆ. ಇತ್ತ ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದಶ್ರೀ ತುಮಕೂರಿಗೆ ಹೊರಟಿದ್ದಾರೆ. ಇಂದು ಬೆಂಗಳೂರಿನ ವಿಜಯನಗರ ಶಾಖಾ ಮಠದಲ್ಲಿ ಹುಣ್ಣಿಮೆ ಹಿನ್ನೆಲೆಯಲ್ಲಿ ಪೂಜೆಗೆ ಭಾಗಿಯಾಗಿದ್ದರು. ಆದರೆ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ವಿಚಾರಿಸಲು ತುಮಕೂರಿಗೆ ತೆರಳುತ್ತಿದ್ದಾರೆ.

    ಪೊಲೀಸ್ ಭದ್ರತೆ:
    ತುಮಕೂರು, ಬೆಂಗಳೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಾ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಭದ್ರತೆಗೆ ಕೇಂದ್ರ ವಲಯದ 8 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

    ಸದ್ಯಕ್ಕೆ ಸಿದ್ದಗಂಗಾ ಮಠಕ್ಕೆ ಕೇಂದ್ರ ವಲಯದ ಪೊಲೀಸರು ತೆರಳುತ್ತಿದ್ದು, ತುಮಕೂರು ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗದಲ್ಲೂ ಬದಲಾವಣೆ ಮಾಡಲಾಗಿದೆ. ದಾಬಸ್‍ಪೇಟೆ, ಶಿರಾ ಕುಣಿಗಲ್ ಹೀಗೆ ಸಿದ್ದಗಂಗಾ ಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗದಲ್ಲಿ ಬದಲಾವಣೆ ಮಾಡಿದೆ. ಸದ್ಯಕ್ಕೆ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಲಯದ ಪೊಲೀಸರು ಎಲ್ಲಾ ಸಿಎಆರ್ ಮತ್ತು ಕೆಎಸ್‍ಆರ್ ಪಿಗೂ ಮಾಹಿತಿ ಕೊಟ್ಟಿದ್ದಾರೆ.

    ಇತ್ತ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವ ವಾಹನಗಳ ರಸ್ತೆಯನ್ನ ಬದಲಾವಣೆ ಮಾಡಲಾಗಿದ್ದು, ಚಿತ್ರದುರ್ಗ, ದಾವಣಗೆರೆಯಿಂದ ಶಿರಾ ಮೂಲಕ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಿದೆ. ಕೇಂದ್ರ ವಲಯದ ಎಲ್ಲಾ ಪೊಲೀಸ್ ಸಿಬ್ಬಂದಿ ಆಯಾ ಠಾಣೆಗೆ ಬರುವಂತೆ ಸೂಚನೆ ನೀಡಲಾಗಿದೆ. ನಂತರದಲ್ಲಿ ಬೆಳವಣಿಗೆ ಸಾಧ್ಯತೆ ಇದೆ. ಸದ್ಯಕ್ಕೆ ಕೇಂದ್ರ ವಲಯ ಐಜಿ ದಯಾನಂದ ಅವರಿಂದ ಮಠದ ಆವರಣದ ಪರಿಶೀಲನೆ ನಡೆಯುತ್ತಿದೆ.

    ಮಠದ ಆವರಣದಲ್ಲೇ ಸಂಸ್ಕೃತ ಕಾಲೇಜಿನ 2ನೇ ಮಹಡಿಯಲ್ಲಿ ಪೊಲೀಸ್ ಕಂಟ್ರೋಲ್ ಗೆ ವ್ಯವಸ್ಥೆ ಮಾಡಲಾಗಿದ್ದು, ಕಂಟ್ರೋಲ್ ರೂಮ್‍ಗೆ ಐಜಿಪಿ ದಯಾನಂದ್, ಎಸ್‍ಪಿ ಕೋನವಂಶಿ ಕೃಷ್ಣ, ಎಎಸ್‍ಪಿ ಡಾ.ಶೋಭರಾಣ ಮತ್ತು ಡಿವೈಎಸ್ಪಿ ತಿಪ್ಪೇಸ್ವಾಮಿ ತೆರಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರು – ಮಠಕ್ಕೆ ಪೊಲೀಸ್ ಭದ್ರತೆ ಹೆಚ್ಚಳ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರು – ಮಠಕ್ಕೆ ಪೊಲೀಸ್ ಭದ್ರತೆ ಹೆಚ್ಚಳ

    ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ.

    ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಶ್ರೀಗಳು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ವಿಷಯ ತಿಳಿದು ಮಠಕ್ಕೆ ದೊಡ್ಡ ಪ್ರಮಾಣದ ಭಕ್ತರು ಮತ್ತು ಮಕ್ಕಳು ಆಗಮಿಸುತ್ತಿದ್ದಾರೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಸಿದ್ದಗಂಗಾ ಮಠಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಭಕ್ತರು ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು. ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ. ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.

    ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

    ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

    ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ.

    ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ಆದ್ದರಿಂದ ಬೆಳಗಿನ ಜಾವ ಈ ರೀತಿ ನಿರ್ಧಾರ ತೆಗೆದುಕೊಂಡು ಶಿಫ್ಟ್ ಮಾಡಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

    ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಹೋಗುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆ ಮಠದಲ್ಲೇ ಮುಂದುವರಿಸಿದ್ದೇವೆ. ನಿಶ್ಯಕ್ತಿ ಮತ್ತು ಉಸಿರಾಟದ ತೊಂದರೆ ಹೊರತುಪಡಿಸಿದರೆ ಬೇರೆ ಎಲ್ಲಾ ಪ್ಯಾರಾಮೀಟರ್ಸ್ ಸರಿಯಾಗಿದೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ. ಆಪರೇಷನ್ ಮಾಡಿದ ಗಾಯ ವಾಸಿಯಾಗಿದೆ. ಭಕ್ತಾದಿಗಳು ಆತಂಕಪಡುವ ಅವಶ್ಯ ಇಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಇತ್ತ ಶ್ರೀಮಠದಲ್ಲಿ ವಿದ್ಯಾರ್ಥಿಗಳು ಜಮಾವಣೆಯಾಗಿದ್ದು, ಶ್ರೀಗಳ ದರ್ಶನ ಪಡೆಯುವ ಕಾತರ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಂಎಲ್‍ಸಿ ರಘು ಆಚಾರ್ ಗೆ ಆವಾಜ್ ಹಾಕಿದ ತರಳುಬಾಳು ಗುರುಪೀಠದ ಭಕ್ತ

    ಎಂಎಲ್‍ಸಿ ರಘು ಆಚಾರ್ ಗೆ ಆವಾಜ್ ಹಾಕಿದ ತರಳುಬಾಳು ಗುರುಪೀಠದ ಭಕ್ತ

    ಚಿತ್ರದುರ್ಗ: ತರಳುಬಾಳು ಗುರುಪೀಠದ ಸಾಣೇಹಳ್ಳಿ ಶಾಖಾ ಮಠದ ಶ್ರೀಗಳ ವಿರುದ್ಧ ಎಂಎಲ್‍ಸಿ ರಘು ಆಚಾರ್ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಮಠದ ಭಕ್ತ ರಘು ಆಚಾರ್ ಅವರಿಗೆ ಕರೆ ಮಾಡಿ ಆವಾಜ್ ಹಾಕಿದ್ದಾರೆ.

    `ನಾ ರಾಜಕೀಯ ಬಿಡ್ತೀನಿ ಶ್ರೀಗಳೇ ನೀವು ಮಠ ಬಿಟ್ಟು ಹೊರ ಬನ್ನಿ’ ಎಂದು ಎಂಎಲ್‍ಸಿ ರಘು ಆಚಾರ್ ಶ್ರೀಗಳ ಬಗ್ಗೆ ಹಗರುವಾಗಿ ಮಾತನಾಡಿದ್ದರು. ಇದರಿಂದ ಆಕ್ರೋಶಗೊಂಡ ತರಳುಬಾಳು ಮಠದ ಭಕ್ತ ಲೋಕೇಶ್ ಎಂಬವರು ರಘು ಆಚಾರ್ ಅವರಿಗೆ ಕರೆ ಮಾಡಿ ಆವಾಜ್ ಹಾಕಿದ್ದಾರೆ.

    ಒಬ್ಬರ ಬಗ್ಗೆ ಮಾತನಾಡುವಾಗ ಹುಷಾರ್ ಆಗಿ ಮಾತಾಡು, ಸಾಣೇಹಳ್ಳಿಗೆ ಎಷ್ಟು ಜನ ಕರ್ಕೊಂಡು ಬರ್ತಿಯಾ ಬಾ. ಧಮ್ ಇದ್ರೆ ಹೊಸದುರ್ಗ ಗಡಿಯೊಳಗೆ ಕಾಲಿಡು ನೋಡ್ತಿವಿ. ಪಂಡಿತಾರಾಧ್ಯ ಸ್ವಾಮಿಜಿ ಬಗ್ಗೆ ಹೇಗೆ ನೀವು ಹಗುರವಾಗಿ ಮಾತಾನಾಡಿದ್ರಿ? ಸ್ವಾಮಿಗಳ ಬಳಿ ಕ್ಷಮೆಯಾಚಿಸಬೇಕು. ಮೂಲಭೂತವಾದಿ ಪದದ ಅರ್ಥ ಗೊತ್ತಿಲ್ಲ ಅಂದ್ಮೇಲೆ ಹೇಗೆ ಸ್ವಾಮಿಜೀಗಳ ಬಗ್ಗೆ ಮಾತಾನಾಡಿದ್ರಿ. ಕೋಟ್ಯಾಂತರ ಜನ ಭಕ್ತರು ಸೇರಿ ಅವರನ್ನ ಸ್ವಾಮಿಜಿಗಳನ್ನಾಗಿ ಮಾಡಿದ್ದಾರೆ. ನೀವು ಮಠದ ಭಕ್ತರಲ್ಲವೇ, ಈ ಹಿಂದೆ ಎಷ್ಟು ಸಾರಿ ಮಠಕ್ಕೆ ಭೇಟಿ ನೀಡಿದ್ದಿರಾ ಎಂದು ರಘು ಆಚಾರ್‍ಗೆ ಭಕ್ತರು ಪ್ರಶ್ನಿಸಿದ್ದಾರೆ.

    ಅಷ್ಟೆ ಅಲ್ಲದೆ ನೀವು 11 ತಾಲೂಕುಗಳಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದೀರಿ. ಹೊಸದುರ್ಗ ಗಡಿ ಎಂಟ್ರಿ ಆಗ್ತೀರಾ ಇಲ್ಲಾ ನಾವೇ ನೀವಿದ್ದಲ್ಲಿ ಬರುತೀವಿ. ಮೈಸೂರು, ಬೆಂಗಳೂರು ಎಲ್ಲಿಗೆ ಬರಬೇಕು ನೀವೇ ಹೇಳಿ, ಅಲ್ಲಿಗೆ ಬರುತ್ತೇವೆ ಅಂತ ತರಳುಬಾಳು ಮಠದ ಭಕ್ತರು ಆವಾಜ್ ಹಾಕಿದ್ದಾರೆ. ರಘು ಆಚಾರ್ ಅವರು ತಮ್ಮ ತಪ್ಪಿಗೆ ಮಾಧ್ಯಮ ಮೂಲಕ ಕ್ಷಮೆ ಕೇಳಬೇಕು, ಇಲ್ಲ ಅಂದರೆ ಪರಿಣಾಮ ಸರಿ ಇರಲ್ಲ ಎಂದ ಭಕ್ತರು ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿದ ರಘು ಆಚಾರ್, ನಾನು ಯಾವುದೇ ತಪ್ಪು ಮಾಡಿಲ್ಲ ನನ್ನ ಬಗ್ಗೆ ಮಾತಾಡುವಾಗ ಯೋಚಿಸಿ ಮಾತಾನಾಡಿ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv