Tag: ಶ್ರೀಧರನ್

  • ಕೇರಳದಲ್ಲಿ ಮತ್ತೊಮ್ಮೆ ಎಲ್‍ಡಿಎಫ್ – ಶೂನ್ಯ ಸುತ್ತಿದ ಬಿಜೆಪಿ

    ಕೇರಳದಲ್ಲಿ ಮತ್ತೊಮ್ಮೆ ಎಲ್‍ಡಿಎಫ್ – ಶೂನ್ಯ ಸುತ್ತಿದ ಬಿಜೆಪಿ

    ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪಿಣರಾಯ್ ವಿಜಯನ್ ಅಧಿಕಾರಕ್ಕೆ ಏರಿದ್ದಾರೆ. ಆರಂಭದಿಂದಲೇ ಮುನ್ನಡೆ ಸಾಧಿಸಿದ್ದ ಎಲ್‍ಡಿಎಫ್ ಮೈತ್ರಿಕೂಟ ಭಾರೀ ಮುನ್ನಡೆಯನ್ನು ಪಡೆಯುವ ಮೂಲಕ ಸತತ ಎರಡನೇ ಬಾರಿ ಗದ್ದುಗೆ ಹಿಡಿದಿದೆ.

    ಒಟ್ಟು 140 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್‍ಡಿಫ್ 93ರಲ್ಲಿ ಮುನ್ನಡೆ ಸಾಧಿಸಿದರೆ ಯುಡಿಎಫ್ 43 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು 4 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ ಈ ಬಾರಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

    ಆರಂಭದಲ್ಲಿ ಬಿಜೆಪಿ ಕೋಯಿಕ್ಕೋಡ್ ದಕ್ಷಿಣ, ಕಾಸರಗೋಡು, ಪಾಲಕ್ಕಾಡ್, ತ್ರಿಶ್ಯೂರ್, ನೇಮಂನಲ್ಲಿ ಮುನ್ನಡೆಯಲ್ಲಿತ್ತು. ನಂತರ ಈ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿತು.

    ಆರಂಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರು ಪಾಲಕ್ಕಾಡ್‍ನಲ್ಲಿ ಮುನ್ನಡೆ ಸಾಧಿಸಿದ್ದರು. ಕೊನೆಯ ಸುತ್ತುಗಳಲ್ಲಿ ಕಾಂಗ್ರೆಸ್ ಶಫಿ ಪರಂಬಿಗೆ ಮುನ್ನಡೆ ಸಿಕ್ಕಿದ್ದರಿಂದ ಶ್ರೀಧರನ್ ಅವರಿಗೆ ಸೋಲಾಗಿದೆ.

    ಕಳೆದ ಚುನಾವಣೆ ನೇಮಂ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಮಾಜಿ ಕೇಂದ್ರ ಸಚಿವ ಒ ರಾಜಗೋಪಾಲ್ ಇಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಇಲ್ಲಿ ಗೆಲುವು ಸಾಧಿಸಲು ಮಿಜೋರಾಂ ರಾಜ್ಯಪಾಲರಾಗಿದ್ದ ಕುಮ್ಮನಂ ರಾಜಶೇಖರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿತ್ತು.

    ಈ ಬಾರಿ ಕನಿಷ್ಠ 5 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲೇಬೇಕೆಂದು ಪಣ ತೊಟ್ಟಿತ್ತು. ಈ ನಿಟ್ಟಿನಲ್ಲಿ ಕರ್ನಾಟಕದ ಡಿಸಿಎಂ ಅಶ್ವತ್ಥ ನಾರಾಯಣ, ದಕ್ಷಿಣ ಕನ್ನಡ ಶಾಸಕರು ಸಹ ಕೇರಳದಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು.

  • ಕೇರಳದಲ್ಲಿ ಮತ್ತೆ ಅಧಿಕಾರದತ್ತ ಎಲ್‍ಡಿಎಫ್ – 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

    ಕೇರಳದಲ್ಲಿ ಮತ್ತೆ ಅಧಿಕಾರದತ್ತ ಎಲ್‍ಡಿಎಫ್ – 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

    ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪಿಣರಾಯ್ ವಿಜಯನ್ ಅಧಿಕಾರಕ್ಕೆ ಏರುವ ಸಾಧ್ಯತೆ ಹೆಚ್ಚಿದೆ.ಆರಂಭಿಕ ಎಣಿಕೆಗಳಲ್ಲಿ ಎಲ್‍ಡಿಎಫ್ ಮೈತ್ರಿಕೂಟ ಮುನ್ನಡೆಯಲ್ಲಿದೆ.

    ಎಲ್‍ಡಿಎಫ್ ಮೈತ್ರಿಕೂಟ 78 ರಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ 57 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    ಆರಂಭದಲ್ಲಿ ಬಿಜೆಪಿ ಕೋಯಿಕ್ಕೋಡ್ ದಕ್ಷಿಣ ಮತ್ತು ಕಾಸರಗೋಡಿನಲ್ಲಿ ಮುನ್ನಡೆ ಸಾಧಿಸಿತ್ತು. ಸದ್ಯ ಬಿಜೆಪಿಯಿಂದ ಸ್ಪರ್ಧಿಸಿರುವ ಮೆಟ್ರೋ ಮ್ಯಾನ್ ಶ್ರೀಧರನ್ ಅವರು ಪಾಲಕ್ಕಾಡ್‍ನಲ್ಲಿ ಮುನ್ನಡೆ ಸಾಧಿಸಿದ್ದಾರೆ. ತ್ರಿಶ್ಯೂರಿನಲ್ಲಿ ಸುರೇಶ್ ಗೋಪಿ ಮುನ್ನಡೆಯಲ್ಲಿದ್ದಾರೆ.

    ನೇಮಂನಲ್ಲಿ ಕುಮ್ಮನಂ ರಾಜಶೇಖರ್ ಮುನ್ನಡೆಯಲ್ಲಿದ್ದಾರೆ. 2016ರ ಚುನಾವಣೆಯಲ್ಲಿ ಮೊದಲ ಬಾರಿಗೆ ಇಲ್ಲಿ ಕಮಲ ಅರಳಿತ್ತು. ಮಾಜಿ ಕೇಂದ್ರ ಸಚಿವ ಒ ರಾಜಗೋಪಾಲ್ ಇಲ್ಲಿ ಗೆಲುವು ಸಾಧಿಸಿದ್ದರು.

  • ಕೇರಳದಲ್ಲಿ ಬಿಜೆಪಿಗೆ ಬಹುಮತ ಪಕ್ಕಾ: ಶ್ರೀಧರನ್

    ಕೇರಳದಲ್ಲಿ ಬಿಜೆಪಿಗೆ ಬಹುಮತ ಪಕ್ಕಾ: ಶ್ರೀಧರನ್

    ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಬಹುಮತಗಳಿಂದ ಗೆಲುವು ಸಾಧಿಸಲಿದೆ ಎಂದು ಮೆಟ್ರೋಮ್ಯಾನ್ ಶ್ರೀಧರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಪಾಲಕ್ಕಾಡ್ ನಲ್ಲಿ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋನಲ್ಲಿ ಭಾಗಿಯಾಗಿ ಮಾತನಾಡಿದರು. ನನ್ನ ಪ್ರಕಾರ ಕೇರಳದಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ. ಕಿಂಗ್ ಮೇಕರ್ ಆಗಲು ಬೇಕಾದ ಸ್ಥಾನಗಳು ಬಿಜೆಪಿಗೆ ಸಿಗಲಿದೆ ಎಂದು ಶ್ರೀಧರನ್ ಹೇಳಿದರು.

    ಕೇರಳದಲ್ಲಿ ಯಾವುದೇ ಕೈಗಾರಿಕೆಗಳಿಲ್ಲ. ಕೈಗಾರಿಕೆಗಳಿಂದ ಮಾತ್ರ ರಾಜ್ಯಕ್ಕೆ ಸಂಪತ್ತು ತರಬಹುದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೇರಳಕ್ಕೆ ಕೈಗಾರಿಕೆಯನ್ನು ತರುತ್ತೇನೆ ಎಂದು ಭರವಸೆ ನೀಡಿದರು.

    ನಿರುದ್ಯೋಗ ಕೂಡ ಕೇರಳದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಠಿಸುವ ಅಗತ್ಯತೆ ಇದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಹೆಚ್ಚಿಸುವ ಬಗ್ಗೆಯೂ ಪ್ರಯತ್ನಿಸುತ್ತೇನೆ. ಒಟ್ಟಿನಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ನಡೆಸುವುದೇ ನನ್ನ ಗುರಿಯಾಗಿದೆ ಎಂದರು.

    ಹಿರಿಯರ ಕಾಲು ತೊಳೆಯುವುದು ನಮ್ಮ ಸಂಸ್ಕೃತಿಯಾಗಿದೆ. ಆದರೆ ಇದರ ಮಹತ್ವ ಎಡಪಕ್ಷಗಳಿಗೆ ತಿಳಿದಿಲ್ಲ. ಕಾಲು ತೊಳೆಯುವ ಮೂಲಕ ನಮ್ಮ ಹಿರಿಯರಿಗೆ ಗೌರವ ತೋರುವುದು ನಮ್ಮ ನಾಡಿನ ಸಂಸ್ಕೃತಿ . ಇದನ್ನು ಎಲ್ಲರೂ ಮಾಡುತ್ತಾರೆ. ನನ್ನ ಮಕ್ಕಳು ಕೂಡ ಹಿರಿಯರ ಕಾಲು ತೊಳೆಯುತ್ತಾರೆ. ಇದನ್ನು ಎಡಪಕ್ಷಗಳು ಟೀಕಿಸುವುದು ಸರಿಯಲ್ಲ. ಇದು ಸಂಪ್ರದಾಯದ ಬಗ್ಗೆ ಗೌರವ ಇಲ್ಲದಿರುವುದನ್ನು ಬಿಂಬಿಸುತ್ತದೆ ಎಂದು ಶ್ರೀಧರನ್ ಕಿಡಿಕಾರಿದ್ದಾರೆ.

    ಏಪ್ರಿಲ್ 6 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

  • ಬಿಜೆಪಿ ಗೆದ್ದರೆ ಸಿಎಂ ಸ್ಥಾನ ಅಲಂಕರಿಸಲು ಸಿದ್ಧ: ಮೆಟ್ರೋಮ್ಯಾನ್ ಶ್ರೀಧರನ್

    ಬಿಜೆಪಿ ಗೆದ್ದರೆ ಸಿಎಂ ಸ್ಥಾನ ಅಲಂಕರಿಸಲು ಸಿದ್ಧ: ಮೆಟ್ರೋಮ್ಯಾನ್ ಶ್ರೀಧರನ್

    ತಿರುವನಂತಪುರಂ: ಕೊಂಕಣ ರೈಲಿನ ಸೂತ್ರಧಾರನಾಗಿ ದೇಶಕ್ಕೆ ಪರಿಚಯವಾದ ಮೆಟ್ರೋ ಮ್ಯಾನ್ ಖ್ಯಾತಿಯ ಇ ಶ್ರೀಧರನ್ ಬಿಜೆಪಿ ಪಕ್ಷಕ್ಕೆ ಸೇರಲು ಸಿದ್ಧವಾಗಿದ್ದು. ಇದೀಗ ಸೇರ್ಪಡೆಯಾಗುವ ಮುನ್ನವೇ ತಾನು ಸಿಎಂ ಸ್ಥಾನ ಅಲಂಕರಿಸಲು ಸಿದ್ಧವಿರುವ ಇಂಗಿತ ವ್ಯಕ್ತಪಡಿಸಿದ್ದಾರೆ.

    ಶ್ರೀಧರನ್ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಫೆ. 21ರಂದು ಕಾಸರಗೋಡಿನಲ್ಲಿ ನಡೆಯುವ ‘ವಿಜಯ ಯಾತ್ರೆ’ ಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕೇರಳದಲ್ಲಿ ಏಪ್ರಿಲ್-ಮೇನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ನಾನೂ ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯಾಗಲು ಸಿದ್ಧವಾಗಿರುವುದಾಗಿ ಮನದಾಸೆ ಬಿಚ್ಚಿಟ್ಟಿದ್ದಾರೆ.

    ಕೇರಳ ರಾಜ್ಯದ ಸಮಸ್ತ ಅಭಿವೃದ್ಧಿ ಕಾರ್ಯಗಳಿಗಾಗಿ ನನ್ನ ಬಳಿ ಹಲವು ಯೋಜನೆಗಳಿದ್ದು, ಕೈಗಾರಿಕೆ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಶ್ರಮಿಸುದಾಗಿ ಆಶ್ವಾಸನೆ ನೀಡಿದ್ದಾರೆ.

    ಕೊಂಕಣ ರೈಲ್ವೆ ಮತ್ತು ದಿಲ್ಲಿ ಮೆಟ್ರೋವನ್ನು ನಿರ್ಮಿಸಿದ ನಂತರ ಭಾರತದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬದಲಾಯಿಸಿದ ಕೀರ್ತಿ ಹೊಂದಿರುವ ಶ್ರೀಧರನ್ ಇದೀಗ ಕೇರಳ ರಾಜ್ಯದ ಮೊದಲ ಪ್ರಜೆಯಾಗಿ ಗುರುತಿಸಿಕೊಳ್ಳಲು ಸಿದ್ಧ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.