Tag: ಶ್ರೀನಿವಾಸ್ ಪ್ರಸಾದ್

  • ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದ ಯಡಿಯೂರಪ್ಪ

    ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದ ಯಡಿಯೂರಪ್ಪ

    – ಸಂಸದ ಶ್ರೀನಿವಾಸ ಪ್ರಸಾದ್‌ರನ್ನು ಸ್ಮರಿಸಿದ ಹಾಲಿ, ಮಾಜಿ ಸಿಎಂಗಳು

    ಮೈಸೂರು: ಸಂಸದ ವಿ.ಶ್ರೀನಿವಾಸ ಪ್ರಸಾದ್ (V.Srinivas Prasad) ಅವರ ಶ್ರದ್ಧಾಂಜಲಿ ಸಭೆಯ ವೇದಿಕೆಯಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದರು. ಸಮಾರಂಭದಲ್ಲಿ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಎಂದು ಬಿ.ಎಸ್.ಯಡಿಯೂರಪ್ಪ (Yediyurappa) ಅವರು ಸಂಬೋಧಿಸಿದರು.

    ಸ್ವಾಭಿಮಾನಿಗೆ ಸಾವಿರದ ನುಡಿನಮನ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಈ ವೇಳೆ ಇಬ್ಬರೂ ಹಿರಿಯ ನಾಯಕರು ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಸಿಎಂ ಸಿದ್ದರಾಮಯ್ಯಗೆ ಯಡಿಯೂರಪ್ಪ ಚೀಟಿ ಕೊಟ್ಟರು. ಜೇಬಿನಿಂದ ಬಿಳಿ ಪೇಪರ್‌ನಲ್ಲಿ ಬರೆದಿದ್ದ ಚೀಟಿಯನ್ನ ಸಿಎಂ ಸಿದ್ದರಾಮಯ್ಯ ನೀಡಿದರು. ನಂತರ ಕೈ ಹಿಡಿದು ಆತ್ಮೀಯವಾಗಿ ಯಡಿಯೂರಪ್ಪನವರ ಜೊತೆ ಕೆಲ ಹೊತ್ತು ಸಿಎಂ ಮಾತನಾಡಿದರು. ಇದನ್ನೂ ಓದಿ: ವಕೀಲ ದೇವರಾಜೇಗೌಡ ಬಂಧನಕ್ಕೆ ಆರ್‌ ಅಶೋಕ್‌ ಖಂಡನೆ

    ಈ ವೇಳೆ ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯರನ್ನು ಜನಪ್ರಿಯ ಮುಖ್ಯಮಂತ್ರಿ ಎಂದು ಸಂಬೋಧಿಸಿದರು. ಮನುಷ್ಯ ಹುಟ್ಟಿದ್ದಾಗ ಉಸಿರು ಇರುತ್ತೆ ಹೆಸರು ಇರಲ್ಲ. ಸತ್ತಾಗ ಉಸಿರು ಇರಲ್ಲ ಹೆಸರು ಇರುತ್ತೆ. ಶ್ರೀನಿವಾಸ ಪ್ರಸಾದ್ ಅವರದು ಸಾರ್ಥಕ ಬದುಕು. ಪ್ರಸಾದ್ ಅವರ ಸಾವು ನನಗೆ ಆಘಾತ ಉಂಟು ಮಾಡಿತ್ತು. ಪ್ರಸಾದ್ ಪಕ್ಷಾಂತರಿ ಆಗಿದ್ದರೂ, ತತ್ವಾಂತರಿ ಆಗಿರಲಿಲ್ಲ. ದಲಿತ ವರ್ಗಕ್ಕೆ ಮಾತ್ರವಲ್ಲ. ಎಲ್ಲಾ ವರ್ಗದ ನಾಯಕರಾಗಿದ್ದರು. ಪ್ರಸಾದ್ ಸಾಮಾಜಿಕ ನ್ಯಾಯದ ಚಾಂಪಿಯನ್ ಆಗಿದ್ದರು ಎಂದು ಸ್ಮರಿಸಿದರು.

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಶ್ರೀನಿವಾಸ ಪ್ರಸಾದ್ ಸ್ವಾಭಿಮಾನಿ, ಸಜ್ಜನ ರಾಜಕಾರಣಿ. ನಾವಿಬ್ಬರು ವಯಸ್ಸಿನಲ್ಲಿ ಹೆಚ್ಚು ಕಡಿಮೆ ಒಂದೇ ಕಾಲದವರು. ನನಗಿಂತಾ ಮುಂಚೆ ಚುನಾವಣಾ ರಾಜಕಾರಣಕ್ಕೆ ಬಂದರು. ಪ್ರಸಾದ್ ಮೊದಲಿಂದ ಕಾಂಗ್ರೆಸ್‌ಗೆ ವಿರುದ್ಧವಾಗಿದ್ದರು. ನಂತರದಲ್ಲಿ ಕೆಲವು ಸ್ನೇಹಿತರ ಸಲಹೆಯಂತೆ ಕಾಂಗ್ರೆಸ್ ಸೇರಿದರು ಅಷ್ಟೆ. ನಾವಿಬ್ಬರು ಪರಸ್ಪರ ಬೇರೆ ಪಕ್ಷದಲ್ಲಿ ಇದ್ದಾಗಲೂ ಇಬ್ಬರ ನಡುವೆ ಒಳ್ಳೆಯ ಸ್ನೇಹವಿತ್ತು. ಮನುಷ್ಯತ್ವದ ಬಗ್ಗೆ ಶ್ರೀನಿವಾಸ ಪ್ರಸಾದ್ ಬಹಳ ಗೌರವ ಇಟ್ಟು ಕೊಂಡಿದ್ದರು. ಮನುಷ್ಯತ್ವ ಧರ್ಮದಿಂದ, ಜಾತಿಯಿಂದ ಬರಲ್ಲ. ರಾಜಕೀಯವಾಗಿ ನಾವು ಟೀಕೆ ಮಾಡ್ತಿದ್ದೆವು. ಆದರೆ ನಮ್ಮ ಅವರ ಸ್ನೇಹಕ್ಕೆ ಯಾವತ್ತೂ ಧಕ್ಕೆ ಬಂದಿರಲಿಲ್ಲ. ನಾನು ಅವರನ್ನು ಭೇಟಿ ಮಾಡೋದೋ ಬೇಡವೋ ಅಂದುಕೊಂಡಿದ್ದೆ. ಮಹಾದೇವಪ್ಪ ಭೇಟಿ ಮಾಡಿ ಅಂದರು. ಅದಕ್ಕೆ ಹೋಗಿ ಭೇಟಿ ಮಾಡಿದೆ. ಅರ್ಧ ಗಂಟೆ ಕಾಲ ಇಬ್ಬರು ಉಭಯ ಕುಶಲೋಪರಿ ಮಾತಾಡಿ ಕೊನೆಗೆ ಕಾಂಗ್ರೆಸ್‌ಗೆ ಬೆಂಬಲ ಕೊಡಿ ಅಂತಾ ಕೇಳಿದ್ದೆ ಎಂದು ಹಿಂದಿನ ದಿನಗಳನ್ನು ನೆನಪಿಸಿಕೊಂಡಿರು. ಇದನ್ನೂ ಓದಿ: ವೀಡಿಯೋ ವೈರಲ್ ಮಾಡಿದವರನ್ನು ಟ್ರೇಸ್ ಮಾಡೋದು ಕಷ್ಟ: ಪ್ರಿಯಾಂಕ್ ಖರ್ಗೆ

    ನಮ್ಮ ಸ್ನೇಹ ಕೆಟ್ಟು ಹೋಗಿದ್ದರೆ ನಾನು ಭೇಟಿ ಮಾಡಿದ್ದಾಗ ಮುಖ ಕೊಟ್ಟು ಮಾತಾಡ್ತಾ ಇರಲಿಲ್ಲ. ಆದರೆ ಬಹಳ ಪ್ರೀತಿಯಿಂದ ಅವರು ಮಾತಾಡಿದ್ರು. ಕೊನೆಯಲ್ಲಿ ಅವರಿಗೆ ಸ್ವಾಭಿಮಾನಕ್ಕೆ ಧಕ್ಕೆ ಬಂದ ರೀತಿಯಲ್ಲಿ ಮಾತಾಡ್ತಿದ್ದರು. ಶ್ರೀನಿವಾಸ ಪ್ರಸಾದ್‌ಗೆ ಗುಲಾಮಗಿರಿ ಕೀಳರಿಮೆ ಇರಲಿಲ್ಲ. ಒಬ್ಬ ಸಜ್ಜನ, ಮನುಷ್ಯತ್ವ ಜೀವಿ. ಹಳೆ ತಲೆಮಾರಿನ ಕೊಂಡಿ ಕಳಚಿದೆ. ನಾವು ಎಷ್ಟು ವರ್ಷ ಬದುಕಿದ್ದೆವು ಎಂಬುದು ಮುಖ್ಯವಲ್ಲ. ನಾವು ಎಷ್ಟು ಸಾರ್ಥಕವಾಗಿ ಬದುಕಿದ್ದೆವು ಎಂಬುದು ಮುಖ್ಯ. ಶ್ರೀನಿವಾಸ ಪ್ರಸಾದ್ ಅವರದು ಸಾರ್ಥಕ ಬದುಕು ಎಂದರು.

    ಶ್ರೀನಿವಾಸ ಪ್ರಸಾದ್ ಪತ್ನಿ ಭಾಗ್ಯಲಕ್ಷ್ಮಿ ಶ್ರೀನಿವಾಸ ಪ್ರಸಾದ್ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಹರೀಶ್‌ಗೌಡ, ಟಿ.ಎಸ್.ಶ್ರೀವತ್ಸ, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಪಿ.ಜಿ.ಆರ್.ಸಿಂಧ್ಯಾ, ಚಿಂತಕ ಡಾ.ದ್ವಾರಕಾನಾಥ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

  • ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    – ಮಂಗಳವಾರ ಬೌದ್ಧ ಧರ್ಮದ ಪ್ರಕಾರ ಶ್ರೀನಿವಾಸ್ ಅಂತ್ಯಕ್ರಿಯೆ

    ಮೈಸೂರು: ಹಳೆ ಮೈಸೂರು ಭಾಗದ ಪ್ರಭಾವಿ ದಲಿತ ಮುಖಂಡ, ಸ್ವಾಭಿಮಾನಿ ರಾಜಕಾರಣಿ, ದಲಿತ ಸಮುದಾಯದ ಬಹುದೊಡ್ಡ ಧ್ವನಿ, ನಿಷ್ಕಳಂಕ ರಾಜಕೀಯ ಜೀವನ ಪೂರೈಸಿದ್ದ ವಿ. ಶ್ರೀನಿವಾಸ್ ಪ್ರಸಾದ್ (V Srinivasa Prasad) ಅಸ್ತಂಗತರಾಗಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದ ಮಹಾನ್ ಕೊಂಡಿ ಕಳಚಿದಂತಾಗಿದೆ.

    ಮೈಸೂರಿನ (Mysuru) ಅಶೋಕಪುರಂನ ಶ್ರೀನಿವಾಸ ಪ್ರಸಾದ್ ಚಾಮರಾಜನಗರ (Chamarajanagar) ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಕೇಂದ್ರ ಮತ್ತು ರಾಜ್ಯದಲ್ಲಿ ಒಮ್ಮೆ ಸಚಿವರಾಗಿ ಕೆಲಸ ಮಾಡಿ ಕಳೆದ ತಿಂಗಳು ರಾಜಕೀಯ ನಿವೃತ್ತಿ ಪಡೆದು ವಿಶ್ರಾಂತಿ ಜೀವನ ಆರಂಭಿಸಿದ್ದರು. ಶ್ರೀನಿವಾಸ್ ಪ್ರಸಾದ್ ಅವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ – ಊಟಿ, ಕೊಡೈಕೆನಾಲ್‌ಗೆ ಹೋಗಬೇಕಾದ್ರೆ ಇ-ಪಾಸ್‌ ಕಡ್ಡಾಯ

    ರಾಜ್ಯಶಾಸ್ತ್ರದಲ್ಲಿ ಎಂ.ಎ ಮಾಡಿದ್ದ ಶ್ರೀನಿವಾಸ್ ಪ್ರಸಾದ್ 1974ರಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯ ಪ್ರವೇಶಿಸಿದ್ದರು. ಮೊದಲ ಚುನಾವಣೆಯಲ್ಲಿ ಸೋತಿದ್ದರು. 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದು ನಾಲ್ಕು ಬಾರಿ ಗೆದ್ದರು. ಒಮ್ಮೆ ಜೆಡಿಯು ಅಭ್ಯರ್ಥಿಯಾಗಿ ಗೆದ್ದು ಕೇಂದ್ರದ ಮಂತ್ರಿಯಾಗಿದ್ದರು. 2019ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದನಾಗಿ ಆಯ್ಕೆ ಆಗಿದ್ದರು. ಅಲ್ಲದೆ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ 2008 ಹಾಗೂ 2013 ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದ್ದರು. ಇದನ್ನೂ ಓದಿ: ಬೈರತಿ ಬಸವರಾಜ್ ಕಾರು ಪಲ್ಟಿ – ಚಾಲಕ, ಗನ್ ಮ್ಯಾನ್‍ಗೆ ಗಾಯ

    ತಮ್ಮ ಸಂಪುಟದಿಂದ ಕೈ ಬಿಟ್ಟ ಕಾರಣ ಕೋಪಗೊಂಡಿದ್ದ ಶ್ರೀನಿವಾಸ್ ಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾದರು. ಬಳಿಕ 2018ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗೆ ಮೇ 27ರವರೆಗೆ ನ್ಯಾಯಾಂಗ ಬಂಧನ

    ಆರು ಬಾರಿ ಸಂಸದರು ಹಾಗೂ ಎರಡು ಬಾರಿ ಶಾಸಕರಾಗಿ 40 ವರ್ಷಗಳ ಕಾಲ ಅಧಿಕಾರ ಇದ್ದರೂ ಕೂಡ ಎಂದಿಗೂ ಹೆಸರು ಕೆಡಿಸಿಕೊಳ್ಳದೇ ಕಳಂಕರಹಿತ ರಾಜಕೀಯ ಮಾಡಿದ್ದ ಖ್ಯಾತಿ ಶ್ರೀನಿವಾಸ್ ಪ್ರಸಾದ್ ಅವರಿಗಿದೆ. ದೀರ್ಘಕಾಲ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಇತ್ತೀಚಿಗೆ ಸಂಪೂರ್ಣ ವಿಶ್ರಾಂತಿಗೆ ಮೊರೆ ಹೋಗಿದ್ದರು. ಮೂತ್ರಪಿಂಡ ಕಾಯಿಲೆ ಉಲ್ಪಣಗೊಂಡು ಕೆಲ ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ಫೇಕ್‌ ವಿಡಿಯೋ ಕೇಸ್‌ – ರೇವಂತ್‌ ರೆಡ್ಡಿಗೆ ಸಮನ್ಸ್‌, ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ಸುತ್ತೂರು ಶ್ರೀಗಳು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಶ್ರೀನಿವಾಸ್ ಪ್ರಸಾದ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ನಾಳೆ (ಮಂಗಳವಾರ) ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬದ ಟ್ರಸ್ಟ್ ಜಾಗದಲ್ಲಿ ಬೌದ್ಧ ಧರ್ಮದ ಪ್ರಕಾರ ಅಂತಿಮ ಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬಾಲಾಕೋಟ್ ಏರ್‌ಸ್ಟ್ರೈಕ್‌ ರಹಸ್ಯ ರಿವೀಲ್‌ ಮಾಡಿದ ಮೋದಿ

  • ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕ ಅತ್ಯಂತ ಸುರಕ್ಷಿತವಾಗಿದೆ: ಮೋದಿ ಆರೋಪಕ್ಕೆ ಡಿಕೆಶಿ ತಿರುಗೇಟು

    ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕ ಅತ್ಯಂತ ಸುರಕ್ಷಿತವಾಗಿದೆ: ಮೋದಿ ಆರೋಪಕ್ಕೆ ಡಿಕೆಶಿ ತಿರುಗೇಟು

    ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರಧಾನಿ (Narendra Modi) ಆರೋಪಕ್ಕೆ ಯಾವ ಕಾನೂನು ಹದಗೆಟ್ಟಿದೆ ಎಂದು ಅವರೇ ಹೇಳಬೇಕು. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯ ಅತ್ಯಂತ ಸುರಕ್ಷಿತವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಬೆಂಗಳೂರು (Bengaluru) ಬಗ್ಗೆ ಹೇಳಿದರು. ವಿಶ್ವದ ನಾಯಕರು ಬೆಂಗಳೂರಿಗೆ ಬಂದು ದೆಹಲಿಗೆ ಹೋಗುತ್ತಾರೆ. ಅವರಿಗೆ ನಮ್ಮ ರಾಜ್ಯದಲ್ಲಿ ಮತ ಬರಲಿಲ್ಲ ಎಂದು ಈ ರೀತಿ ಮಾತನಾಡಿದ್ದಾರೆ. ಪ್ರಧಾನಿ ಆರೋಪ ಸರಿಯಿಲ್ಲ. ಉತ್ತಮ ಆಡಳಿತ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ

    ಪ್ರಜ್ವಲ್ ಪೆನ್‌ಡ್ರೈವ್‌ ತನಿಖೆ ಬಗ್ಗೆ ಹೆಚ್‌ಡಿಕೆ ಸ್ವಾಗತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ನನ್ನ ವಶದಲ್ಲಿ ಇಲ್ಲ. ಈಗೇನಿದ್ದರೂ ತನಿಖಾಧಿಕಾರಿಗಳು ನೋಡಿಕೊಳ್ಳುತ್ತಾರೆ. ಅಶೋಕ್, ವಿಜಯೇಂದ್ರ ನುಣುಚಿಕೊಳ್ಳುವ ಕೆಲಸ ಮಾಡಿದ್ದಾರೆ. ಬಿಜೆಪಿಯ (BJP) ನಿಲುವು ಏನು ಎಂಬುದು ನನ್ನ ಪ್ರಶ್ನೆಯಾಗಿದೆ. ಕುಮಾರಸ್ವಾಮಿ ಕುಟುಂಬ, ಪಕ್ಷದ ಬಗ್ಗೆ ಏನು ಬೇಕಾದರೂ ಹೇಳಲಿ. ಬಿಜೆಪಿಯ ನಿಲುವು ಏನು ಎಂಬುದು ನಮ್ಮ ಪ್ರಶ್ನೆಯಾಗಿದೆ. ಶೆಟ್ಟರ್, ಮಂಗಳಾ ಅಂಗಡಿ ಬಗ್ಗೆ ಬಿಜೆಪಿ ನಾಯಕರಿಗೆ ಕೇಳಿ. ನಿಮ್ಮ ನಿಲುವು ಏನು ಎಂದು ಪ್ರಶ್ನೆ ಮಾಡಬೇಕು. ಜೆಡಿಎಸ್ ಶಾಸಕ ಪತ್ರದ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಬಿಜೆಪಿ ಮೈತ್ರಿಯ ನಿಲುವು ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನಕ್ಕೆ ನೀರಸ ಪ್ರತಿಕ್ರಿಯೆ- ಗ್ರಾಮ ಖಾಲಿ ಖಾಲಿ

    ಇನ್ನೂ ಶ್ರೀನಿವಾಸ್ ಪ್ರಸಾದ್ (Srinivasa Prasad) ನಿಧನದ ಕುರಿತು ಮಾತನಾಡಿ, ವಿಚಾರ ತಿಳಿದ ಬಳಿಕ ದು:ಖ ಆಗಿದೆ. ನಾನು ಅವರ ಕೈ ಕೆಳಗೆ ಕೆಲಸ ಮಾಡಿದ್ದೆ. ರಾಜೀವ್ ಗಾಂಧಿ ಕಾಲದಲ್ಲಿ ನನಗೆ ಸಹಾಯ ಮಾಡಿದ್ದರು. ನಾವೆಲ್ಲ ಜೊತೆಗೆ ಒಂದೇ ಹಾಸ್ಟೆಲ್‌ನಲ್ಲಿ ಇದ್ದೆವು. ಅನೇಕ ವರ್ಷಗಳ ಕಾಲ ಒಟ್ಟಿಗೆ ರಾಜಕೀಯ ಮಾಡಿಕೊಂಡು ಬಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? – ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್

    ಶ್ರೀನಿವಾಸ್ ಪ್ರಸಾದ್ ಭಿನ್ನಾಭಿಪ್ರಾಯದಿಂದ ಬೇರೆ ಪಕ್ಷಕ್ಕೂ ಹೋಗಿದ್ದರು. ಬಳಿಕ ಜೊತೆಗೆ ಸಂಪುಟದಲ್ಲಿ ಕೆಲಸ ಮಾಡಿದ್ದೇವೆ. ಓರ್ವ ಧೀಮಂತ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ. ನಮ್ಮ ಕಷ್ಟ ಕಾಲದಲ್ಲಿ ಜೊತೆಗೆ ಇದ್ದ ವ್ಯಕ್ತಿಯಾಗಿದ್ದರು. ಮೈಸೂರು ಭಾಗದಲ್ಲಿ ಪ್ರಭಾವಿ ಆಗಿದ್ದರು. ಬಳ್ಳಾರಿ ಸಮಾವೇಶದ ಬಳಿಕ ನಾನು ಅಂತ್ಯಕ್ರಿಯೆಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಮೋದಿ

  • ಮಂಗಳವಾರ ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

    ಮಂಗಳವಾರ ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

    ಮೈಸೂರು: ಇಂದು ವಿಧಿವಶರಾಗಿರುವ ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ಮಂಗಳವಾರ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಂದು ಮಧ್ಯಾಹ್ನ 1 ಗಂಟೆ ತನಕ ಮನೆಯಲ್ಲಿ ಅಂತಿಮ ನಮನ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ನಂತರ ಅಶೋಕಪುರಂನ ಎನ್ ಟಿ ಎಂ ಶಾಲೆ ಆವರಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.

    ಇಂದು ರಾತ್ರಿ ಇಡೀ ಅಂತಿಮ ನಮನಕ್ಕೆ ಅವಕಾಶ ನೀಡಲಾಗುತ್ತದೆ. ನಾಳೆ ಬೆಳಗ್ಗೆ 10 ಗಂಟೆಗೆ ಅಶೋಕಪುರಂ ನಲ್ಲಿ ಮೆರವಣಿಗೆಯ ಬಳಿಕ ಮಧ್ಯಾಹ್ನ 1 ಗಂಟೆ ಗೆ ಅಂತ್ಯಕ್ರಿಯೆ ನಡೆಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಮಾಜಿಕ ನ್ಯಾಯದ ಹರಿಕಾರ ಪ್ರಸಾದ್‌ – ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ

  • ಕಾಫಿ ಅಂತಾ ಬರೆದುಕೊಟ್ಟು 2 ಗುಟುಕು ಕುಡಿದಿದ್ದ ಸಂಸದರು!

    ಕಾಫಿ ಅಂತಾ ಬರೆದುಕೊಟ್ಟು 2 ಗುಟುಕು ಕುಡಿದಿದ್ದ ಸಂಸದರು!

    ಬೆಂಗಳೂರು: ಹಿರಿಯ ರಾಜಕಾರಣಿ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (V. Srinivas Prasad) ಇಂದು ವಿಧಿವಶರಾಗಿದ್ದಾರೆ. ನಿನ್ನೆಯಷ್ಟೇ ಸಂಸದರು ಕಾಫಿ ಕೇಳಿ ಕುಡಿದಿದ್ದರು.

    ಹೌದು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಸದರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದರು. ದರೆ ಭಾನುವಾರದಿಂದ ಮಾತನಾಡಲು ಆಗುತ್ತಿರಲಿಲ್ಲ. ಹೀಗಾಗಿ ನಿನ್ನೆ ಕುಟುಂಬಸ್ಥರು ಪೆನ್ನು ಹಾಗೂ ಪೇಪರ್ ಕೊಟ್ಟಿದ್ದರು. ಆಗ ಪೇಪರ್ ನಲ್ಲಿ ಕಾಫಿ ಅಂತ ಬರೆದಿದ್ದರು. ಈ ವೇಳೆ ಕಾಫಿ ತಂದು ಕೊಟ್ಟಿದ್ದರು. ಅಂತೆಯೇ ಎರಡು ಗುಟುಕು ಕಾಫಿ ಕುಡಿದಿದ್ದರು ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಸಾದ್ ಅವರು ಕೆಲ ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ನಸುಕಿನ ಜಾವ 1:27ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸದ್ಯ ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿತ್ತು. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕುಟುಂಬಸ್ಥರು ಹಾಗೂ ಗಣ್ಯರು ಬಂದು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

  • ಸಾವಾದ್ರೂ ನಗುನಗುತ್ತಾ ಬೀಳ್ಕೊಡಿ ಅಂತಾ ತಂದೆ ಯಾವಾಗ್ಲೂ ಹೇಳ್ತಾ ಇದ್ರು: ಶ್ರೀನಿವಾಸ್ ಪ್ರಸಾದ್ ಮಗಳು

    ಸಾವಾದ್ರೂ ನಗುನಗುತ್ತಾ ಬೀಳ್ಕೊಡಿ ಅಂತಾ ತಂದೆ ಯಾವಾಗ್ಲೂ ಹೇಳ್ತಾ ಇದ್ರು: ಶ್ರೀನಿವಾಸ್ ಪ್ರಸಾದ್ ಮಗಳು

    – ಮೈಸೂರಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಂಗಳೂರು: ನಮ್ಮ ತಂದೆ ಯಾವಾಗಲೂ ಸಂತೋಷವಾಗಿದ್ರು. ಅವರು ಸಾವಾದ್ರೂ ನಗುನಗುತ್ತಲೇ ಕಳಿಸಿಕೊಡಿ ಅಂತಾ ಹೇಳಿದ್ರು. ಅದೇ ರೀತಿ ಯಾವುದೇ ಅಹಿತಕರ ಘಟನೆಗಳು ಆಗದಂತೆ ನಮ್ಮ ತಂದೆಯನ್ನ ಸಂತೋಷದಿಂದ ಬಿಳ್ಕೋಡೋಣ ಎಂದು ಶ್ರೀನಿವಾಸ್ ಪ್ರಸಾದ್ (V Srinivas Prasad) ಪುತ್ರಿ ಪ್ರತಿಮಾ ಪ್ರಸಾದ್ (Prathima Prasad) ಮನವಿ ಮಾಡಿಕೊಂಡರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಎಲ್ಲಾ ವೈದ್ಯರು ಅವರನ್ನ ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಇವತ್ತು ಪ್ರಯತ್ನ ಕೈಗೂಡದೆ ನಮ್ಮನ್ನು ಅಗಲಿದ್ದಾರೆ. ಇವತ್ತು ಮೈಸೂರಿನ ಜಯಲಕ್ಷ್ಮಿಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುತ್ತೆ. ಇಡೀ ದಿನ ಅಂತಿಮ ದರ್ಶನ ಮನೆಯಲ್ಲೆ ಇರುವುದಿಲ್ಲ. ಒಂದು ಸಾರ್ವತ್ರಿಕ ಜಾಗ ನಿರ್ಧಾರ ಮಾಡಿ ಅಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತೆ ಎಂದರು.

    ಇಂದು ನುಕಿನ ಜಾವ 1:20 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಸೋಮವಾರ ಆರೋಗ್ಯ ಏರುಪೇರಾಗಿತ್ತು. ಹಾಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ವಿ. ಆರೋಗ್ಯ ಸುಧಾರಿಸಿದ್ದರಿಂದ ಡಿಸ್ಚಾರ್ಜ್ ಮಾಡಿಸಿದ್ವಿ. ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕರೆದುಕೊಂಡು ಬಂದ್ವಿ. ಅವರಿಗೆ ಹೈಲಿ ಡಯಾಬಿಟಿಸ್ ಸಮಸ್ಯೆ ಇತ್ತು. 11 ವರ್ಷದ ಹಿಂದೆ ಅವರಿಗೆ ರಿನಲ್ ಟ್ರಾನ್ಸ್ ಪ್ಲಾಂಟ್ ಆಗಿತ್ತು. ಅದನ್ನೂ ಫೈಟ್ ಮಾಡಿದ್ದರು. ಆದರೆ ಇಂದು ಅವರನ್ನು ಉಳಿಸಿಕೊಳ್ಳೋದಕ್ಕೆ ಬಹಳ ಪ್ರಯತ್ನವನ್ನ ವೈದ್ಯರು ಮಾಡಿದ್ರು. ಆದರೆ ವಿಧಿ ಹೀಗೆ ಮಾಡಿದೆ ಎಂದು ಹೇಳಿದರು.

    2000 ಇಸವಿಯಿಂದ ಅವರು ಮಣಿಪಾಲ್ ಆಸ್ಪತ್ರೆಯಲ್ಲೇ ಏನೇ ಅದ್ರೂ ಚಿಕಿತ್ಸೆ ಪಡೆಯುತ್ತಿದ್ರು. ಆಗಿನಿಂದ ಈ ಆಸ್ಪತ್ರೆ ಮೇಲೆ ಅವ್ರಿಗೆ ಬಹಳ ನಂಬಿಕೆ ಇತ್ತು ಎಂದ ಅವರು, ಆಸ್ಪತ್ರೆಯ ಎಲ್ಲ ವೈದ್ಯರಿಗೂ ಧನ್ಯವಾದಗಳನ್ನು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

    ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ರು. ಆದ್ರೆ ತಮ್ಮ ಜರ್ನಿಯಿಂದಲೇ ನಿವೃತ್ತಿ ತೆಗೆದುಕೊಳ್ಳುತ್ತಾರೆ ಅಂದುಕೊಂಡಿರಲಿಲ್ಲ. ಇದು ಬಹಳ ದುಃಖಕರವಾದ ವಿಷಯ, ಇದು ಕರ್ನಾಟಕ ಜನತೆಗೆ ಬಿಗ್ ಲಾಸ್. ಎಲ್ಲಾ ಜನಾಂಗದ ನಾಯಕರಾಗಿದ್ರು ಎಂದು ತಿಳಿಸಿದರು.

  • ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

    ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

    ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ.

    ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಾ.‌ಸುದರ್ಶನ್ ಬಲ್ಲಾಳ್ ರಿಂದ  ಚಿಕಿತ್ಸೆ ನೀಡಲಾಗ್ತಾ ಇತ್ತು. ಆದರೆ ಇಂದು ನಸುಕಿನ ಜಾವ 1.27ರ ಸುಮಾರಿಗೆ  ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್‌ ಅವರು ಕಳೆದ  ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.

    ಪ್ರಸಾದ್ ಅವರಿಗೆ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್ ಮತ್ತು ಪೂನಂ ಪ್ರಸಾದ್ ಎಂಬ ಮೂರು ಜನ ಹೆಣ್ಣು ಮಕ್ಕಳು  ಇದ್ದಾರೆ.  

  • ಮೋದಿ ಸಮಾವೇಶಕ್ಕೆ ಬರಲ್ಲ: ಸಿಎಂ ಭೇಟಿ ಬೆನ್ನಲ್ಲೇ ಬಿಜೆಪಿಗೆ ಶಾಕ್‌ ಕೊಟ್ಟ ಶ್ರೀನಿವಾಸ್ ಪ್ರಸಾದ್‌

    ಮೋದಿ ಸಮಾವೇಶಕ್ಕೆ ಬರಲ್ಲ: ಸಿಎಂ ಭೇಟಿ ಬೆನ್ನಲ್ಲೇ ಬಿಜೆಪಿಗೆ ಶಾಕ್‌ ಕೊಟ್ಟ ಶ್ರೀನಿವಾಸ್ ಪ್ರಸಾದ್‌

    ಬೆಂಗಳೂರು/ಮೈಸೂರು: ಪ್ರಧಾನಿ ಮೋದಿ (Narendra Modi) ಆಗಮನ ಹೊತ್ತಲ್ಲೇ ಮೈಸೂರಿನಲ್ಲಿ(Mysuru) ಭಾರೀ ಬೆಳವಣಿಗೆಯಾಗಿದೆ. ಆರು ವರ್ಷಗಳ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಹಳೆಯ ಮಿತ್ರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (Srinivasa Prasad) ನಿವಾಸಕ್ಕೆ ಭೇಟಿ ಕೊಟ್ಟು ಚರ್ಚೆ ನಡೆಸಿದ್ದಾರೆ.

    ಈ ಬೆನ್ನಲ್ಲೇ ಭಾನುವಾರದ ಮೋದಿ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇಲ್ಲ. ಅದಕ್ಕಾಗಿ ಮೋದಿ ಸಮಾವೇಶದಿಂದ ದೂರ ಉಳಿಯುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ಕಡ್ಡಿ ಮುರಿದಂತೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣವಿದೆ ಎನ್ನುವ ಮೂಲಕ ಬಿಜೆಪಿಗೆ (BJP) ಶಾಕ್ ಕೊಟ್ಟಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್‌

    ಸಿಎಂ ಮಾತನಾಡಿ, ಕಾಂಗ್ರೆಸ್ ಬಗ್ಗೆ ಕನಿಕರ ಇರಲಿ ಎಂದಿದ್ದೇನೆ ಅಷ್ಟೇ. ಅವರ ಬಳಿ ರಾಜಕೀಯ ಚರ್ಚಿಸಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್‌ ಜನ್ಮದಿನದಂದೇ ಸಂಕಲ್ಪ ಪತ್ರ – ಭಾನುವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ

    ಇದರ ಮಧ್ಯೆ ಎಚ್ಚೆತ್ತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಭಾನುವಾರ ಶ್ರೀನಿವಾಸ್ ಪ್ರಸಾದ್‌ರನ್ನು ಭೇಟಿ ಮಾಡುತ್ತೇನೆ. ಅವರು ಮೋದಿ ಕಾರ್ಯಕ್ರಮಕ್ಕೆ ಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • 15 ದಿನಗಳಿಂದ ಮಾಗಡಿ ತಹಶೀಲ್ದಾರ್ ನಾಪತ್ತೆ‌

    15 ದಿನಗಳಿಂದ ಮಾಗಡಿ ತಹಶೀಲ್ದಾರ್ ನಾಪತ್ತೆ‌

    ರಾಮನಗರ: ಲಂಚ ಪ್ರಕರಣದ (Corruption Case) ಆರೋಪ ಹೊತ್ತಿರುವ ಮಾಗಡಿ (Magadi) ತಹಶೀಲ್ದಾರ್ (Tahsildar) ಶ್ರೀನಿವಾಸ್ ಪ್ರಸಾದ್ (Srinivasa Prasad) ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ.

    ಮೊಬೈಲ್‌ ಸ್ವಿಚ್ ಆಫ್ ಆಗಿದ್ದು, ವಾಟ್ಸಪ್‌ನಿಂದಲೂ ಕಣ್ಮರೆಯಾಗಿದ್ದಾರೆ. ಜನವರಿ 3 ರಂದು ಮಾಗಡಿಯ ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಯಾಗಿದ್ದ ಮಂಜುನಾಥ್ ಎಂಬಾತ ಸಾರ್ವಜನಿಕರೊಬ್ಬರಿಂದ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 20 ಸಾವಿರ ಹಣವನ್ನು ಪಡೆದುಕೊಂಡಿದ್ದ. ಉಳಿದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಕೆಳ ಮನೆಯಲ್ಲಿದ್ದ ವಿವಾಹಿತೆ, ಮೇಲಿನ ಮನೆಯಲ್ಲಿದ್ದ ವಿವಾಹಿತನ ಜೊತೆಗೆ ಎಸ್ಕೇಪ್!

    ತಾಲೂಕು ಕಚೇರಿ ಆವರಣದಲ್ಲಿಯೇ ಈ ಘಟನೆ ನಡೆದಿತ್ತು. ಹೀಗಾಗಿ ಅಂದೇ ತಹಶೀಲ್ದಾರ್ ಹೇಳಿಕೆಯನ್ನು ಪಡೆದು, ದೂರವಾಣಿ ಮೂಲಕ ಮಾತನಾಡಿದ್ದರು. ಅಂದಿನಿಂದ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವ ತಹಶೀಲ್ದಾರ್ ಈವರೆಗೂ ಪತ್ತೆಯಾಗಿಲ್ಲ. ತಹಸೀಲ್ದಾರ್‌ರನ್ನು ಎ2 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ.

    ಜ.3ರ ಸಂಜೆ ವಾಟ್ಸಪ್‌ ಮೂಲಕ ರಾಮನಗರ ಜಿಲ್ಲಾಕಾರಿಗಳಿಗೆ ರಜೆ ಬೇಕು ಎಂದು ಮೆಸೇಜ್‌ ಮಾಡಿದ್ದಾರೆ. ಆದರೆ ತಹಶೀಲ್ದಾರ್‌ಗೆ ರಜೆ ಮಂಜೂರಾಗಿಲ್ಲ. ಅನೇಕ ಬಾರಿ ಅಧಿಕಾರಿಗಳು ಕರೆಗೆ ಪ್ರಯತ್ನಿಸಿದರೂ ತಹಶೀಲ್ದಾರ್‌ ಸಂಪರ್ಕಕ್ಕೆ ಸಿಕ್ಕಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಎಸ್‌ವೈ, ವಿಜಯೇಂದ್ರ, ಶ್ರೀನಿವಾಸ್‌ ಪ್ರಸಾದ್‌ ನನಗೆ ಹಣ ಕೊಡಲು ಬಂದಿದ್ರು – ಹೆಚ್‌.ವಿಶ್ವನಾಥ್‌ ಹೊಸ ಬಾಂಬ್‌

    ಬಿಎಸ್‌ವೈ, ವಿಜಯೇಂದ್ರ, ಶ್ರೀನಿವಾಸ್‌ ಪ್ರಸಾದ್‌ ನನಗೆ ಹಣ ಕೊಡಲು ಬಂದಿದ್ರು – ಹೆಚ್‌.ವಿಶ್ವನಾಥ್‌ ಹೊಸ ಬಾಂಬ್‌

    ಮೈಸೂರು: ಜೆಡಿಎಸ್‌ (JDS) ತೊರೆದು ಬಿಜೆಪಿ (BJP) ಸೇರಲು ನನಗೆ ಹಣದ ಆಮಿಷ ಒಡ್ಡಿದ್ದರು. ಯಡಿಯೂರಪ್ಪ (Yediyurappa), ಅವರ ಮಗ ವಿಜಯೇಂದ್ರ (Vijayendra) ಹಾಗೂ ಶ್ರೀನಿವಾಸ್‌ ಪ್ರಸಾದ್‌ (Srinivas Prasad) ನನಗೆ ಹಣ ಕೊಡಲು ಬಂದಿದ್ದರು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ (Vishwanath) ಹೊಸ ಬಾಂಬ್‌ ಸಿಡಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದರ ಬಗ್ಗೆ ತಿಳಿಯಲು ಬಾಂಬೆ ಡೈರೀಸ್ ಓದಿ. ಬಾಂಬೆ ಡೈರೀಸ್‌ನ ಮೊದಲ ಅಧ್ಯಾಯದಲ್ಲೇ ಈ ವಿಚಾರವಿದೆ ಎಂದು ವಿಶ್ವನಾಥ್‌ ತಿಳಿಸಿದ್ದಾರೆ. ಆದರೆ ಎಷ್ಟು ಹಣ ಕೊಡಲು ಬಂದಿದ್ದರು? ನೀವು ಹಣ ಪಡೆದುಕೊಂಡಿರಾ ಎಂಬ ಪ್ರಶ್ನೆಗೆ ಉತ್ತರ ನೀಡಲಿಲ್ಲ. ಇದನ್ನೂ ಓದಿ: ಮಂಡ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್‌

    ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ವಿರುದ್ಧ ಕಿಡಿಕಾರಿದ ವಿಶ್ವನಾಥ್‌, ನಾನು ಅಲೆಮಾರಿ, ನೀವೂ ಅಲೆಮಾರಿಗಳ ರಾಜ. 40 ವರ್ಷಗಳಲ್ಲಿ ಎಷ್ಟು ಕಡೆ ಹೋಗಿಬಂದಿದ್ದೀರಿ ಗೊತ್ತಾ? ಒಂದೊಂದು ಪಕ್ಷಕ್ಕೆ ಎರಡೆರಡು ಬಾರಿ ಹೋಗಿ ಬಂದಿದ್ದೀರಿ. ಯಾರ ಪರವೂ ಧ್ವನಿ ಎತ್ತದ ನೀವೂ ಏಕಾಏಕಿ ನನ್ನ ಮೇಲೆ ಸೊಲ್ಲೆತ್ತಲು ಕಾರಣ ಏನು? ಯಾರನ್ನ ಮೆಚ್ಚಿಸಲು ಹೋಗುತ್ತಿದ್ದೀರಾ? ಈಗ ಬಿಜೆಪಿ ಸರ್ಕಾರ ವಿಸ್ತರಣೆ ಆಗತ್ತಿದೆ. ಇಲ್ಲಿ ಏನಾದರು ಪಡೆಯಲು ಈ ರೀತಿ ಮಾಡುತ್ತಿದ್ದೀರಾ? ನಿಮ್ಮ ಸ್ವಾರ್ಥಕ್ಕಾಗಿ ಹೀಗೆಲ್ಲ ಮಾತಾಡಬಾರದು. ನಾನು, ನೀವೂ ಹಳೆಯ ಸ್ನೇಹಿತರು. ನಿಮ್ಮ ಮಾತನ್ನು ಎಂದೂ ನಾನು ಹಿಂತೆಗೆದಿಲ್ಲ. ಅಳಿಯನಿಗೆ ನಂಜನಗೂಡು, ನರಸೀಪುರ ಮಗಳಿಗೆ ಕೊಡಿಸ್ಬೇಕು ಅಂತನಾ ಎಂದು ಖಾರವಾಗಿ ಪ್ರಶ್ನಿಸಿದರು.

    ವಿಜಯೇಂದ್ರ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದ್ದೇನು ಪ್ರಸಾದ್? ನಾನು ಇದನ್ನು ಹೇಳಬಾರದು ಅಂತ ಇದ್ದೆ. ಅವತ್ತು ನನ್ನ ಕೈಹಿಡಿದು ಕರ್ಕೊಂಡು ಬಂದ್ರಿ. ನಿಮ್ಮ ಮಾತಿಗೆ, ನಿಮ್ಮ ಸ್ನೇಹಕ್ಕೆ ನಾನು ಕಟ್ಟು ಬಿದ್ದೆ. ನಾನು, ನೀವೂ, ದಿ.ಪತ್ರಕರ್ತ ಮಹದೇವ ಪ್ರಕಾಶ್, ರಮೇಶ್ ನಾವು ನಾಲ್ಕೇ ಜನ ಇದ್ದದ್ದು. ಆದ್ರೆ ನೀವೂ ನಾನು ಸಿದ್ದರಾಮಯ್ಯ, ಖರ್ಗೆ ಅವರನ್ನ ಭೇಟಿ ಆಗಿದ್ದಕ್ಕೆ ಅಲೆಮಾರಿ ಅಂತೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿದ್ದರಾಮಯ್ಯನಂಥ ದ್ರೋಹಿಯನ್ನು ನಾನು ಎಂದೂ ನೋಡಿಲ್ಲ: ಈಶ್ವರಪ್ಪ

    ಅವತ್ತು ನಾನು ಬಿಜೆಪಿಗೆ ಏನೆಲ್ಲ ಮಾಡಿದೆ. ಆದರೆ ನನಗೆ ಏನು ಕೊಡಲಿಲ್ಲ, ಏನೂ ಆಗಲಿಲ್ಲ. ಆದರೆ ಮುಕುಂದ್ ರಾವ್ ನನಗೆ ಎಂಎಲ್‌ಸಿ ಕೊಡಿಸಿದ್ರು. ಅವರಿಲ್ಲ ಅಂದಿದ್ರೆ ನನಗೆ ಏನು ಸಿಗ್ತಿರ್ಲಿಲ್ಲ. ಬಿಜೆಪಿ ಮೇಲೆ ನಂಬಿಕೆ ಹಾಳಗಬಾರದು ಅಂತ ಮಾತಾಡಿದ್ರು. ಅದರಿಂದ ನನಗೆ ಎಂಎಲ್‌ಸಿ ಸ್ಥಾನ ಸಿಕ್ತು. ಆದರೆ ಪ್ರಸಾದ್ ಸಾಹೆಬ್ರೆ ನಿಮಗೆ ನೈತಿಕತೆ ಇದೆ, ಅದನ್ನ ಕಳೆದುಕೊಳ್ಳಬೇಡಿ. ನಾನು ಅವಕಾಶವಾದಿ ರಾಜಕಾರಣಿ ಅಲ್ಲ. ಆದರೆ ನೀವೂ ಎಷ್ಟೋ ಬಾರಿ ಅವಕಾಶಕ್ಕಾಗಿ ಹೋಗಿದ್ದೀರಿ. ನಾನು ಇರುವುದರಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದ್ದೀನಿ ಎಂದು ತರಾಟೆಗೆ ತೆಗೆದುಕೊಂಡರು.

    Live Tv
    [brid partner=56869869 player=32851 video=960834 autoplay=true]