Tag: ಶ್ರೀನಿವಾಸ್ ಪ್ರಸಾದ್

  • ಸಿದ್ದರಾಮಯ್ಯ ಬಾದಾಮಿ, ಗೋಡಂಬಿಗೆ ಹೋಗಿ ಈಗ ನಾಟಿಕೋಳಿ, ಮುದ್ದೆ ತಿನ್ನಲು ವರುಣಾಗೆ ಬರ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಸಿದ್ದರಾಮಯ್ಯ ಬಾದಾಮಿ, ಗೋಡಂಬಿಗೆ ಹೋಗಿ ಈಗ ನಾಟಿಕೋಳಿ, ಮುದ್ದೆ ತಿನ್ನಲು ವರುಣಾಗೆ ಬರ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಚಾಮರಾಜನಗರ: ಸಿದ್ದರಾಮಯ್ಯ (Siddaramaiah) ಬಾದಾಮಿ, ಗೋಡಂಬಿ ಕ್ಷೇತ್ರಕ್ಕೆ ಹೋಗಿ ಇದೀಗ ನಾಟಿಕೋಳಿ, ರಾಗಿಮುದ್ದೆ ತಿನ್ನಲು ವರುಣಾಗೆ ಬರುತ್ತಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ (Srinivasa Prasad) ವ್ಯಂಗ್ಯವಾಡಿದ್ದಾರೆ.

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವರುಣಾದಲ್ಲಿ ನಿಲ್ಲುವುದಾಗಿ ಇತ್ತೀಚೆಗೆ ಹೇಳಿದ್ದಾರೆ. ಈಗಾಗಲೇ ಒಂದು ಸುತ್ತು ವರುಣಾ ಕ್ಷೇತ್ರಕ್ಕೆ ಹೋಗಿ ಬಂದಿದ್ದಾರೆ. ಅಂತಿಮವಾಗಿ ಬೇರೆಡೆ ಬಿಟ್ಟು ವರುಣಾದಲ್ಲಿ ನಿಲ್ಲುವ ತೀರ್ಮಾನಕ್ಕೆ ಬಂದ ಹಾಗೆ ಕಾಣಿಸುತ್ತಿದೆ. ಅವರನ್ನು ಸೋಲಿಸಲು ನಾವು ಹೋರಾಟ ಮಾಡುತ್ತೇವೆ. ಅವರ ವಿರುದ್ಧ ಅಭ್ಯರ್ಥಿ ಯಾರಾಗ್ತಾರೆ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಮೈಲಿಗಲ್ಲು – ರಾಜ್ಯಾದ್ಯಂತ 114 ಕ್ಲಿನಿಕ್‌ಗೆ ಚಾಲನೆ

    ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಒಂದೇ ಚುನಾವಣೆಗೆ ಹೆದರಿ ಬಾದಾಮಿಗೆ ಓಡಿಹೋದ್ರು. ಇದೀಗ ಬಾದಾಮಿ, ಗೋಡಂಬಿ ಕ್ಷೇತ್ರಕ್ಕೆ ಹೋಗಿ ಮತ್ತೆ ರಾಗಿಮುದ್ದೆ, ನಾಟಿಕೋಳಿಗಾಗಿ ಇಲ್ಲಿಗೆ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಝಿಕಾ ವೈರಸ್‌ಗೆ ಹೆಚ್ಚಿದ ಆತಂಕ – ಮಕ್ಕಳ ಸಣ್ಣ ಜ್ವರಕ್ಕೂ ಹೆದರುತ್ತಿದ್ದಾರೆ ಪೋಷಕರು

    ಹೆಚ್ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ನನಗೂ ಅವರಿಗೂ ಈಗ ಸಂಬಂಧವಿಲ್ಲ. ನಮ್ಮ ಬಳಿ ಅವರು ಮಾತನಾಡಿಲ್ಲ. ಮಾತನಾಡುವುದೂ ಇಲ್ಲ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ನಾನು ನಿನ್ನನ್ನ ಸುಮ್ಮನೆ ಬಿಡಲ್ಲ- ಶ್ರೀನಿವಾಸ್ ಪ್ರಸಾದ್‍ಗೆ ರಮೇಶ್ ತಿರುಗೇಟು

    ನಾನು ನಿನ್ನನ್ನ ಸುಮ್ಮನೆ ಬಿಡಲ್ಲ- ಶ್ರೀನಿವಾಸ್ ಪ್ರಸಾದ್‍ಗೆ ರಮೇಶ್ ತಿರುಗೇಟು

    ಮೈಸೂರು: ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ (C Ramesh) ಹಾಗೂ ಸಂಸದ ಶ್ರೀನಿವಾಸ್ ಪ್ರಸಾದ್ (Srinivas Prasad) ನಡುವೆ ಮಾತಿನ ಚಕಮಕಿ ನಡೆದು ಏಕ ವಚನದಲ್ಲೇ ಪರಸ್ಪರ ವಾಗ್ದಾಳಿ ನಡೆಸಿ ಕೊಂಡಿದ್ದಾರೆ.

    ಮೈಸೂರು ಜಿಲ್ಲೆಯ ಟಿ ನರಸೀಪುರ ಅತಿಥಿ ಗೃಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಸಿ ರಮೇಶ್‍ರನ್ನು ಆಚೆ ಕಳುಹಿಸು ಎಂದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಕಾರ್ಯಕ್ರಮದಲ್ಲಿ ಬರಿ ಕೀಟಲೆ ಮಾಡಲಿಕ್ಕೆ ಬರುತ್ತೀಯಾ? ಎಂದು ಗದುರಿದ್ದಾರೆ. ಇದನ್ನೂ ಓದಿ; ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಪಾಲಿಗೆ ಸತ್ತು ಹೋಗಿವೆ – ರೈತರ ಆಕ್ರೋಶ

    ಇದು ಬಿಜೆಪಿ (BJP) ಸರ್ಕಾರದ ಕಾರ್ಯಕ್ರಮ. ನನ್ನನ್ನ ಅವಮಾನ ಮಾಡಲಿಕ್ಕೆ ಕರೆದೆಯಾ? ಮತ್ತೊಮ್ಮೆ ನನ್ನನ್ನ ಯಾವುದೇ ಕಾರ್ಯಕ್ರಮಕ್ಕೆ ಕರೆಯಬೇಡ. ನಿನ್ನ ಮುಂದೆ ಯಾವುದೇ ಕಾರ್ಯಕ್ರಮಗಳಿಗೆ ನಾನು ಬರುವುದಿಲ್ಲ ನಾನು ನಿನ್ನನ್ನ ಸುಮ್ಮನೆ ಬಿಡಲ್ಲ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಸಿ ರಮೇಶ್ ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ರಾಜಕೀಯ ಬಣ್ಣವಾಗೋದು ಬೇಡ – ಸರ್ಕಾರಕ್ಕೆ ಶ್ರೀನಿವಾಸ್ ಪ್ರಸಾದ್ ಸಲಹೆ

    ಕೇಸರಿ ರಾಜಕೀಯ ಬಣ್ಣವಾಗೋದು ಬೇಡ – ಸರ್ಕಾರಕ್ಕೆ ಶ್ರೀನಿವಾಸ್ ಪ್ರಸಾದ್ ಸಲಹೆ

    ಚಾಮರಾಜನಗರ: ಕೇಸರಿ ಬಣ್ಣ (Saffron Colour) ಬಳಿಯುವ ವಿಚಾರದಲ್ಲಿ ಸರ್ಕಾರಕ್ಕೆ ಸಂಸದ ಶ್ರೀನಿವಾಸ್ ಪ್ರಸಾದ್ (V Shrinivas Prasad) ಸಲಹೆ ನೀಡಿದ್ದಾರೆ.

    ಶಾಲೆಗಳಿಗೆ (Schools) ಕೇಸರಿ ಬಣ್ಣ ಬಳಿಯುವ ಸರ್ಕಾರದ (Government Of Karnataka) ಚಿಂತನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಈಗಾಗಲೇ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರ ಆತುರದ ನಿರ್ಧಾರ ಕೈಗೊಳ್ಳುವ ಅವಶ್ಯಕತೆ ಇರಲಿಲ್ಲ. ಕೇಸರಿ ಬಣ್ಣಕ್ಕೆ ಎಲ್ಲರೂ ಗೌರವ ಕೊಡುತ್ತಾರೆ. ಕೇಸರಿಬಣ್ಣ ತ್ಯಾಗದ ಪ್ರತೀಕವಾಗಿದೆ. ಈ ವಿಚಾರವನ್ನು ರಾಜಕೀಯವಾಗಿ (Politics) ಬಳಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರೋಧ

    ಆಲೋಚನೆ ಮಾಡಲಿ: 
    ಟಿಪ್ಪು ಪ್ರತಿಮೆ (Tippu Statue) ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಟಿಪ್ಪು ಪ್ರತಿಮೆ ಅವರ ಸ್ವಂತಕ್ಕೆ ಮಾಡಿಕೊಳ್ಳಲಿ ಅದರಲ್ಲಿ ತಪ್ಪಿಲ್ಲ, ತೊಂದರೆಯೂ ಇಲ್ಲ. ಟಿಪ್ಪು ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಬಾರದೆಂದು ಈಗಾಗಲೇ ತೀರ್ಮಾನವಾಗಿದೆ. ಮುಸ್ಲಿಂ ಸಮುದಾಯದವವರು (Muslim Community) ಟಿಪ್ಪು ಪ್ರತಿಮೆಯನ್ನಾಗಲಿ ಜಯಂತಿಯನ್ನಾಗಲಿ ಮಾಡಿಕೊಳ್ಳಲು ಯಾರ ಅಭ್ಯಂತರವೂ ಇಲ್ಲ. ಆದರೆ ಮುಸ್ಲಿಮರಲ್ಲಿ ಪ್ರತಿಮೆ ಸ್ಥಾಪಿಸುವ ಸಂಸ್ಕೃತಿ ಇಲ್ಲ, ವಿಗ್ರಹ ಆರಾಧಕರು ಅಲ್ಲ ಅವರು ಇನ್ನೊಮ್ಮೆ ಯೋಚನೆ ಮಾಡಲಿ ಎಂದು ತಿಳಿವಳಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರೋಧ

    ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರೋಧ

    ಚಾಮರಾಜನಗರ: (Chamarajanagara) ಹೊರಗಿನಿಂದ ಬಂದವರಿಗೆ ಟಿಕೆಟ್‌ ನೀಡುವುದಕ್ಕೆ ಬಿಜೆಪಿ (BJP) ಸಂಸದ ಶ್ರೀನಿವಾಸ್‌ ಪ್ರಸಾದ್‌ (Srinivas Prasad) ವಿರೋಧ ವ್ಯಕ್ತಪಡಿಸಿದರು.

    ನಗರದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಿತು. ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಾಕಾರಿಣಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಉದ್ಘಾಟಿಸಿದರು‌. ಇದನ್ನೂ ಓದಿ: ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ

    ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಸಂಸದ ವಿ.ಶ್ರೀನಿವಾಸ ಪ್ರಸಾದ್ ಇದೇ ವೇಳೆ ವಿರೋಧ ವ್ಯಕ್ತಪಡಿಸಿದರು. ನಮ್ಮ ಅಭಿಪ್ರಾಯ ಪರಿಗಣಿಸದಿದ್ದರೆ ಅವರು ಅನುಭವಿಸಬೇಕಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದ ಅವರು, ಕ್ಷೇತ್ರದಲ್ಲಿ ಹಗಲು ರಾತ್ರಿ ಯಾರೂ ಕೆಲಸ ಮಾಡಿದ್ದಾರೆ ಎಂದು ನನಗೆ ಗೊತ್ತಿದೆ. ಯಾರು ಹೋರಾಟ ಮಾಡಿದ್ದಾರೆ, ಯಾರು ಪಕ್ಷ ಸಂಘಟನೆ ಮಾಡಿದ್ದಾರೆ ಅವರನ್ನು ಆಯ್ಕೆ ಮಾಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಬೇಕು ಎಂದು ತಿಳಿಸಿದರು.

    ಸಿದ್ದರಾಮಯ್ಯ (Siddaramaiah) ಸ್ಪರ್ಧೆ ಕುರಿತು ಮಾತನಾಡಿದ ಅವರು, ಕೋಲಾರ ಸೇಫೆಸ್ಟ್‌ ಪ್ಲೇಸ್. ಅಲ್ಲಿ ಆರಾಮಾಗಿ ಗೆದ್ದು ಬರಬಹುದು‌ ಅಂತ ಸಿದ್ದರಾಮಯ್ಯ ಅಲ್ಲಿಗೆ ಹೋಗಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ನಿಂತಾಯ್ತು. ದೇವಸ್ಥಾನ, ಮಸೀದಿ, ಚರ್ಚ್‌ ಎಲ್ಲಾ ಕಡೆ ಹೋಗಿದ್ದಾರೆ. ಸುರಕ್ಷಿತ ಸ್ಥಳ ಹುಡುಕಿ‌, ಹುಡುಕಿ ಕೊನೆಗೆ ಕೋಲಾರಕ್ಕೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯಗೆ ಒಳ್ಳೆಯದಾಗಲ್ಲ: ಸುಧಾಕರ್

    ಸುರಕ್ಷಿತ ಇಲ್ಲದಿದ್ರೆ ಬಾದಾಮಿ, ಚಾಮುಂಡೇಶ್ವರಿಯಲ್ಲಿ ಯಾಕೆ ನಿಲ್ಲಲಿಲ್ಲ? ಚಾಮರಾಜಪೇಟೆಯನ್ನು ನೋಡಿ ಆಗಿದೆ, ಹುಣಸೂರು ಆಯ್ತು, ಚಿಕ್ಕನಾಯಕನಹಳ್ಳಿ ಆಯ್ತು. ಕೊನೆಗೆ ಕೋಲಾರ ಸುರಕ್ಷಿತ ಅಂತ ಹೋಗಿದ್ದಾರೆ. ಕೋಲಾರದಲ್ಲಿ ಕುರುಬರು ಮುಸ್ಲಿಮರ ಮತ ಹೆಚ್ಚಾಗಿವೆ. ಹಾಗಾಗಿ ಸುಲಭವಾಗಿ ಗೆದ್ದು ಸಿಎಂ ಆಗಬಹುದು ಅಂತ ಅಲ್ಲಿಗೆ ಹೋಗಿದ್ದಾರೆ ಎಂದು ಕುಟುಕಿದರು.

    Live Tv
    [brid partner=56869869 player=32851 video=960834 autoplay=true]

  • ಒಂಟಿಕೊಪ್ಪಲ್ ಪಂಚಾಂಗದಲ್ಲಿ ಸಿದ್ದರಾಮೋತ್ಸವ ಸೇರಿಸಲಿ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಒಂಟಿಕೊಪ್ಪಲ್ ಪಂಚಾಂಗದಲ್ಲಿ ಸಿದ್ದರಾಮೋತ್ಸವ ಸೇರಿಸಲಿ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

    ಚಾಮರಾಜನಗರ: ನಾವು ಬೇರೆ ಬೇರೆ ಉತ್ಸವಗಳನ್ನು ಕೇಳಿದ್ದೇವೆ. ಇನ್ನು ಮೇಲೆ ಒಂಟಿಕೊಪ್ಪಲ್ ಪಂಚಾಂಗದಲ್ಲಿ ಸಿದ್ದರಾಮೋತ್ಸವವನ್ನು ಸೇರಿಸಬೇಕು ಎಂದು ಚಾಮರಾಜನಗರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಜಾತಿಯವರು ಶಕ್ತಿ ಪ್ರದರ್ಶನ ಮಾಡಬೇಕು ಎಂದು ಹೊರಟಿದ್ದರು. ಆದರೆ ಅದಕ್ಕೆ ಅವರ ಪಕ್ಷದಲ್ಲಿ ವಿರೋಧ ಬಂತು. ಹೀಗಾಗಿ ಪಕ್ಷದ ವತಿಯಿಂದ ಕಾರ್ಯಕ್ರಮ ಮಾಡಬೇಕು ಎಂದು ದೊಡ್ಡ ಸಮಿತಿ ರಚಿಸಿಕೊಂಡಿದ್ದಾರೆ. ಇವೆಲ್ಲವನ್ನೂ ಪ್ರಚಾರಕ್ಕೋಸ್ಕರ ಮಾಡುತ್ತಿದ್ದಾರೆ. ಇನ್ನು ಏನೇನು ಆಟ ಆಡಬೇಕು ಆಡಲಿ ಎಂದು ಕುಹಕವಾಡಿದರು. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ – ಚಿನ್ನ ಗೆದ್ದು ಭಾರತಕ್ಕೆ ಹೆಮ್ಮೆ ತಂದ 94ರ ಅಜ್ಜಿ

    Siddaramaiah

    ಮೋದಿ ಸರ್ಕಾರ ತೊಲಗಿದರೆ ದೇಶಕ್ಕೆ ಒಳ್ಳೆಯದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶ್ರೀನಿವಾಸ ಪ್ರಸಾದ್, ಮೋದಿ ಜನಾದೇಶದ ಮೇಲೆ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯನನ್ನು ಕೇಳಿಕೊಂಡು ಬಂದಿಲ್ಲ. ಸಿದ್ದರಾಮಯ್ಯ ಪ್ರಚಾರಕ್ಕೋಸ್ಕರ ಕಿರುಚಾಡಿ ಮೈ ಪರಚಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 5 ಎಕ್ರೆ ಜಾಗಕ್ಕೆ ಕಿರಿಕ್ – ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್

    ನಿಮ್ಮ ಸ್ಥಿತಿ ಏನು ಎಂದು ಅರ್ಥ ಮಾಡಿಕೊಂಡು ಮಾತನಾಡಿ. ನೀವು 36 ಸಾವಿರ ಮತಗಳಿಂದ ಸೋತಾಯ್ತು. 17 ಜನರನ್ನು ಕಳುಹಿಸಿ ಸರ್ಕಾರವನ್ನು ಕೆಡವಿದ್ದಾಯ್ತು. 28 ಕ್ಷೇತ್ರಗಳಲ್ಲಿ ಒಂದೇ ಒಂದು ಕ್ಷೇತ್ರ ಗೆದ್ದಿರುವುದು. ಇನ್ನಾದರೂ ಹೀಗೆ ಮಾತನಾಡುವುದನ್ನು ಬಿಡಪ್ಪಾ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿಗೆ ಜೆಡಿಎಸ್‌ ಜೊತೆ ಮೈತ್ರಿ ಅಗತ್ಯವಿಲ್ಲ: ಶ್ರೀನಿವಾಸ್‌ ಪ್ರಸಾದ್‌

    ಬಿಜೆಪಿಗೆ ಜೆಡಿಎಸ್‌ ಜೊತೆ ಮೈತ್ರಿ ಅಗತ್ಯವಿಲ್ಲ: ಶ್ರೀನಿವಾಸ್‌ ಪ್ರಸಾದ್‌

    ಮೈಸೂರು: ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯ ಅಲ್ಲ. ಯಾರ ಮೈತ್ರಿಯೂ ಬೇಕಾಗಿಲ್ಲ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದರು.

    ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್‌ ಬೆಂಬಲ ಕೋರಿರುವ ಕುರಿತು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಗೆದ್ದಿದ್ದು ಎಷ್ಟು ಸ್ಥಾನ ಎಂಬುದು ಗೊತ್ತಿದೆ. ಯಾರ ಮೈತ್ರಿಯೂ ಬಿಜೆಪಿಗೆ ಅಗತ್ಯವಿಲ್ಲ. ಅತಿ ಹೆಚ್ಚು ಸ್ಥಾನ ಗಳಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ದೊಡ್ಡ ಪಕ್ಷ ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಬೇಕಾಗಿಲ್ಲ ಎಂದರು. ಇದನ್ನೂ ಓದಿ: ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ: ಪ್ರಿಯಾಂಕ್ ಖರ್ಗೆ

    ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಟೀಕೆ ಮಾಡುವುದು ಸರಿ. ತಮ್ಮ ಟೀಕೆಗೆ ಆರ್‌ಎಸ್‌ಎಸ್‌ ಅನ್ನು ಬಳಸಿಕೊಳ್ಳುವುದು ಸರಿಯಲ್ಲ. ಆರ್‌ಎಸ್‌ಎಸ್‌ ಒಂದು ರಾಜಕೀಯ ಪಕ್ಷವಲ್ಲ. ಹೀಗಾಗಿ ಅದರ ಮೇಲೆ ರಾಜಕೀಯವಾಗಿ ಟೀಕೆ ಸಲ್ಲದು ಎಂದು ತಿಳಿಸಿದರು.

    ಸಿದ್ದು ಮತ್ತು ಜಿಟಿಡಿ ಮೈತ್ರಿ ಕುರಿತು ಮಾತನಾಡಿ, ಸಿದ್ದರಾಮಯ್ಯ ಬದಾಮಿಗೆ ಹೋಗಿ ಚುನಾವಣೆಗೆ ನಿಂತಿದ್ದೆ ಅವರ ಅಸಹಾಯಕತೆಯನ್ನು ತೋರಿಸುತ್ತದೆ. ಒಂದು ಚುನಾವಣೆಯಲ್ಲಿ ಸೋತ ತಕ್ಷಣ ಕ್ಷೇತ್ರದಿಂದ ಓಡಿ ಹೋಗುವ ಮಾತಾಡುತ್ತಿದ್ದಾರೆ. ಇದು ಮೈಸೂರೇ ತಲೆ ತಗ್ಗಿಸುವ ವಿಚಾರ ಎಂದು ಕುಟುಕಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಗೌರವವಿತ್ತು, ಆದ್ರೆ ಇತ್ತೀಚಿನ ಹೇಳಿಕೆ ನಿರಾಸೆ ತಂದಿದೆ: ಬೊಮ್ಮಾಯಿ

    ಜಿ.ಟಿ.ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪರ್ವ ಮಾಡಿದ್ದರು. ಜನತಾ ಪರಿವಾರ ಕಟ್ಟುತ್ತೇನೆ ಅಂತ ಓಡಾಡಿದ್ದರು. ಆಗ ಇದೇ ಸಿದ್ದರಾಮಯ್ಯ ರಾತ್ರೋರಾತ್ರಿ ಊರು ಬಿಟ್ಟು ಬದಾಮಿಗೆ ಹೋಗಿ ನಿಂತರು. 35 ಸಾವಿರ ಮತಗಳಿಂದ ಸೋತಿದ್ದರೂ ಸಿದ್ದರಾಮಯ್ಯಗೆ ಬುದ್ದಿ ಬಂದಿಲ್ಲ. ಸಿಎಂ ಆಗಿ ನೀವೆ ಹೆದರಿಕೊಂಡು ಓಡಿಹೋದರೆ ಹೇಗೆ? ವೀರಾವೇಷದ ಮಾತುಗಳನ್ನು ಆಡುತ್ತೀರಾ. ಆದರೆ ಹೆದರಿ ಬದಾಮಿಗೆ ಹೋದಿರಿ. ಏನೋ ಚುನಾವಣೆಯಲ್ಲಿ ಗೆದ್ದು ಬಂದಿದ್ದೀರಾ. ಮೊದಲು ಅದನ್ನು ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ. ಚಿಮ್ಮನಕಟ್ಟಿ ಆಗಲೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

  • ಸಿದ್ದರಾಮಯ್ಯರನ್ನು ತಾಲಿಬಾನಿಗೆ ಕಳಿಸಬೇಕು: ಶ್ರೀನಿವಾಸ್ ಪ್ರಸಾದ್

    ಸಿದ್ದರಾಮಯ್ಯರನ್ನು ತಾಲಿಬಾನಿಗೆ ಕಳಿಸಬೇಕು: ಶ್ರೀನಿವಾಸ್ ಪ್ರಸಾದ್

    ಮೈಸೂರು: ಸಿದ್ದರಾಮಯ್ಯ ಮಾತಾನಾಡುವುದನ್ನು ನೋಡಿದರೆ ಅಸಹ್ಯವಾಗುತ್ತದೆ. ಇವರನ್ನು ಒಂದು ತಿಂಗಳು ತಾಲಿಬಾನಿಗೆ ಕಳಿಸಬೇಕು ಎಂದು ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಕಿಡಿಕಾರಿದ್ದಾರೆ.

    ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಜನಗೂಡಿನ ಉಪಚುನಾವಣೆ ನನ್ನ ಸದಾ ಚುಚ್ಚುತ್ತಿರುತ್ತದೆ. ಹಾನಗಲ್, ಸಿಂದಗಿ ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ. ಆದರೆ ನಂಜನಗೂಡು ಉಪಚುನಾವಣೆ ವೇಳೆ ಸಿದ್ದರಾಮಯ್ಯ ಎಷ್ಟು ಅಧಿಕಾರ ದುರುಪಯೋಗ ಮಾಡಿಕೊಂಡರು. ಆಗ ನನ್ನ ಬಳಿ ಹಣ ಇರಲಿಲ್ಲ. ಪೊಲೀಸರ ಎದುರೇ ಕಾಂಗ್ರೆಸ್‍ನವರು ಅವತ್ತು ಹಣ ಹಂಚಿದರು. ಆ ಚುನಾವಣೆಯಲ್ಲಿ ಕಾಂಗ್ರೆಸ್‍ನವರು ನನಗೆ ತುಂಬಾ ನೋವು ಕೊಟ್ಟರು. ಇಂತಹವರು ಈಗ ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂದು ಆರೋಪಿಸುತ್ತಾರೆ. ಅವರಿಗೆ ನಾಚಿಕೆ ಆಗಬೇಕು ಎಂದಿದ್ದಾರೆ. ಇದನ್ನೂ ಓದಿ: ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ

    ಸಿದ್ದರಾಮಯ್ಯ ಎರಡು ಕಡೆ ಚುನಾವಣೆಗೆ ನಿಲ್ಲದೇ ಇದ್ದಿದ್ದರೆ ಕಾಟೂರು ತೋಟದ ಮನೆ ಸೇರಿ ಕೊಳ್ಳಬೇಕಿತ್ತು. ಇದನ್ನೆಲ್ಲಾ ಮರೆತು ಸಿದ್ದರಾಮಯ್ಯ ಇವತ್ತು ಬಾಯಿಗೆ ಬಂದ ರೀತಿ ಮಾತಾಡುವುದನ್ನು ಕಲಿತಿದ್ದಾರೆ. ಸಿದ್ದರಾಮಯ್ಯ ಮಾತಾಡುವುದನ್ನು ನೋಡಿದರೆ ಅಸಹ್ಯವಾಗುತ್ತದೆ. ಇವರನ್ನು ಒಂದು ತಿಂಗಳು ತಾಲಿಬಾನಿಗೆ ಕಳಿಸಬೇಕು. ಪ್ರಧಾನಿ ಬಗ್ಗೆ ಬಾಯಿಗೆ ಬಂದಂತೆ ಮಾತಾಡುವುದನ್ನು ಮೊದಲು ನಿಲ್ಲಿಸಲಿ. ಲೋಕಸಭಾ ಚುನಾವಣೆಯಲ್ಲಿ ಏನೇನಾಯ್ತು ಗೊತ್ತಿಲ್ವಾ? ಒಂದು ಸೀಟ್ ಗೆದ್ದು ಉಳಿದ ಕಡೆ ನೆಗೆದು ಬಿದ್ದು ಹೋದ್ರಿ. ಇದೆಲ್ಲಾ ಮರೆತು ಹೋಯ್ತಾ ಸಿದ್ದರಾಮಯ್ಯ ಅವರೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸೋದೇ ಸಿದ್ದು & ಟೀಂನ ಉದ್ದೇಶ: ಹೆಚ್‍ಡಿಕೆ ಕಿಡಿ

    ಇನ್ನೂ ಜೆಡಿಎಸ್ ಪಾರ್ಟಿಯಲ್ಲ. ಅದೊಂದು ಕಂಪನಿಯಷ್ಟೇ ಬೆಂಕಿ ಹಾಕಿದ ಕಡೆ ಕೈ ಕಾಯಿಸಿಕೊಳ್ಳಿ ಅಷ್ಟೇ. ಯಾರಿಗೂ ಬಹುಮತ ಬಾರದೇ ಇದ್ದರೆ ಸಾಕು ಎನ್ನುವುದೇ ನಿಮ್ಮ ಲೆಕ್ಕಾಚಾರ. ನಿಮ್ಮ ಇತಿಮಿತಿ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.

  • ಸಿದ್ದರಾಮಯ್ಯನನ್ನು ಒಂದು ತಿಂಗಳು ತಾಲಿಬಾನ್ ಪ್ರದೇಶಕ್ಕೆ ಕಳುಹಿಸಬೇಕು: ಶ್ರೀನಿವಾಸ್ ಪ್ರಸಾದ್

    ಸಿದ್ದರಾಮಯ್ಯನನ್ನು ಒಂದು ತಿಂಗಳು ತಾಲಿಬಾನ್ ಪ್ರದೇಶಕ್ಕೆ ಕಳುಹಿಸಬೇಕು: ಶ್ರೀನಿವಾಸ್ ಪ್ರಸಾದ್

    ಮೈಸೂರು: ಪತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಒಂದು ತಿಂಗಳು ಅಫ್ಘಾನಿಸ್ತಾನದ ತಾಲಿಬಾನ್ ಪ್ರದೇಶಕ್ಕೆ ಕಳುಹಿಸಬೇಕೆಂದು ಮೈಸೂರು ಸಂಸದ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ರಾಜ್ಯ ನಾಯಕರ ಮಾತು ಮಿತಿ ಮೀರಿದೆ. ನಾನು ಕೂಡ ಮಾಧ್ಯಮಗಳಲ್ಲಿ ಅವರ ಹೇಳಿಕೆ ನೋಡಿದ್ದೇನೆ. ಚುನಾವಣೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಮಾತು ಮಿತಿ ಮೀರಿದೆ. ಆಡಳಿತ ಪಕ್ಷಕ್ಕೂ ಜವಾಬ್ದಾರಿ ಇದೆ, ಪ್ರತಿ ಪಕ್ಷಕ್ಕೂ ಒಂದು ಜವಾಬ್ದಾರಿ ಇದೆ. ಪ್ರತಿಪಕ್ಷದ ನಾಯರ ಮಾತು ಮಿತಿ ಮೀರಿದೆ. ವಿರೋಧ ಪಕ್ಷದ ನಾಯಕ ಅವರ ಜವಾಬ್ದಾರಿ ಮರೆಯಬಾರದು ಎಂದು ವಾಗ್ದಾಳಿ ನಡೆಸಿದರು.

    ಪ್ರಧಾನ ಮಂತ್ರಿಗಳಿಗೆ ಒಂದು ಗೌರವ ಇದೆ. ಅವರ ಬಗ್ಗೆ ಈ ರೀತಿಯಲ್ಲಿ ಅವಹೇಳನ ಮಾಡಬಾರದು. ಒಂದು ತಿಂಗಳು ತಾಲಿಬಾನ್‍ಗಳ ಜೊತೆಗೆ ಸಿದ್ದರಾಮಯ್ಯನನ್ನು ಕಳುಹಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಈ ರೀತಿಯ ಹೇಳಿಕೆಗಳಿಂದ ಬಹಳ ನೋವಾಗಿದೆ. ಬೇರೆ ಸಮಯದಲ್ಲಿ ಈ ವಿಚಾರದ ಬಗ್ಗೆ ಮಾತನಾಡುತ್ತೇನೆ. ನಾನು ಚುನಾವಣಾ ಕ್ಷೇತ್ರಗಳಿಗೆ ಹೋಗಿಲ್ಲ. ಆದರೆ ಚುನಾವಣೆಯಲ್ಲಿ ನಾವು ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಈ ಶತಮಾನದ ರಾಕ್ಷಸಿ ಕೃತ್ಯ ಎಸಗಿರೋ ತಾಲಿಬಾನ್ ಜೊತೆ  RSS ಹೋಲಿಕೆ ಸರಿಯಲ್ಲ: ಶ್ರೀನಿವಾಸ್ ಪ್ರಸಾದ್

    ಈ ಶತಮಾನದ ರಾಕ್ಷಸಿ ಕೃತ್ಯ ಎಸಗಿರೋ ತಾಲಿಬಾನ್ ಜೊತೆ RSS ಹೋಲಿಕೆ ಸರಿಯಲ್ಲ: ಶ್ರೀನಿವಾಸ್ ಪ್ರಸಾದ್

    ಚಾಮರಾಜನಗರ: ಈ ಶತಮಾನದ ರಾಕ್ಷಸಿ ಕೃತ್ಯ ಎಸಗಿದವರು ತಾಲಿಬಾನ್ ಗಳು. ಹೀಗಾಗಿ ಈ ತಾಲಿಬಾನ್ ಜೊತೆ ಆರ್.ಎಸ್.ಎಸ್ ಹೋಲಿಕೆ ಸರಿಯಲ್ಲ ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿಯನ್ನು ತಾಲಿಬಾನ್ ಗೆ ಹೋಲಿಸಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಿಡಿಕಾರಿರುವ ಸಂಸದರು, ಪ್ರತಿ ಪಕ್ಷದ ನಾಯಕನ ಗಾಡಿ ಮಗುಚಿಕೊಳ್ಳುತ್ತಿದೆ. ಆವೇಷಭರಿತವಾಗಿ ಬಿಜೆಪಿಯನ್ನ ತಾಲಿಬಾನ್ ಹೋಲಿಸುತ್ತಿದ್ದಾರೆ. ಈ ಶತಮಾನದ ರಾಕ್ಷಿಸಿ ಕೃತ್ಯ ಎಸಗಿರುವವರು ತಾಲಿಬಾನಿಗಳು. ರಕ್ತದ ಕೋಡಿ ಹರಿಸಿದ್ದಾರೆ. ತಾಲಿಬಾನಿಗಳು ರಾಕ್ಷಸರ ರೀತಿ ವರ್ತಿಸುತ್ತಿದ್ದಾರೆ. ಅಂತಹವರೊಂದಿಗೆ ಬಿಜೆಪಿ ಹೋಲಿಸುತ್ತೀರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಾಕತ್ತಿದ್ರೆ ಮೈಸೂರಿಗೆ ಬಂದು ಪಕ್ಷ ಸಂಘಟನೆ ಮಾಡಿ ಗೆಲ್ಲಿ- ಸಿದ್ದುಗೆ ಶ್ರೀನಿವಾಸ್ ಪ್ರಸಾದ್ ಚಾಲೆಂಜ್

    ಸಿದ್ದರಾಮಯ್ಯ ನೀವು ಈ ದೇಶದ ಪ್ರಜೆ, ಅತ್ಯಂತ ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ದೇಶದ ಯಾವುದನ್ನ ಸಹ ತಾಲಿಬಾನ್ ಗೆ ಹೋಲಿಸಬಾರದು. ಸಿದ್ದರಾಮಯ್ಯಗೆ ಬುದ್ಧಿ ಸ್ಥಿಮಿತ ಇಲ್ಲಾ. ಅವರ ಹೇಳಿಕೆಯಿಂದ ನನ್ನ ಮನಸಿಗೆ ಬಹಳ ನೋವಾಗಿದೆ ಎಂದರು. ಇದನ್ನೂ ಓದಿ: RSS ಅನ್ನು ತಾಲಿಬಾನ್‍ಗೆ ಹೋಲಿಕೆ ಮಾಡಿದ್ರೆ ಕಾಂಗ್ರೆಸ್ ಐತಿಹಾಸವನ್ನು ತೆಗೆಯಬೇಕಾಗುತ್ತೆ: ಮುತಾಲಿಕ್

    ಪ್ರತಿಪಕ್ಷದ ನಾಯಕ ಹಾಗೂ ಅಧ್ಯಕ್ಷರ ಬಗ್ಗೆ ನಾನು ಮಾತನಾಡುವುದೇ ಬೇಡ. ಎಂದು ವ್ಯಂಗ್ಯವಾಡಿದ ಶ್ರೀನಿವಾಸಪ್ರಸಾದ್, ನೀವು ಮತ್ತು ನಿಮ್ಮ ಅಧ್ಯಕ್ಷರು ಬನ್ನಿ ಚರ್ಚೆಗೆ. ನಮ್ಮ ಪಕ್ಷದಿಂದ ಕಟೀಲ್ ಮತ್ತು ಬೊಮ್ಮಾಯಿ ಬರುತ್ತಾರೆ ಎಂದು ಸವಾಲು ಹಾಕಿದರು.

    ಒಬ್ಬ ಸಂಭವೀತ ವ್ಯಕ್ತಿ ಮುಖ್ಯಮಂತ್ರಿಯಾಗಿದ್ದಾರೆ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಅತ್ಯತ್ತುಮವಾದ ಆಡಳಿತ ಕೊಡುತ್ತಿದ್ದಾರೆ. ಈಗಾಗಲೇ ವರಿಷ್ಟರು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತಾಲಿಬಾನ್‍ಗೂ, RSSಗೂ ವ್ಯತ್ಯಾಸ ಇದೆ: ಸಿದ್ದರಾಮಯ್ಯಗೆ ಆರಗ ಜ್ಞಾನೇಂದ್ರ ತಿರುಗೇಟು

  • ತಾಕತ್ತಿದ್ರೆ ಮೈಸೂರಿಗೆ ಬಂದು ಪಕ್ಷ ಸಂಘಟನೆ ಮಾಡಿ ಗೆಲ್ಲಿ- ಸಿದ್ದುಗೆ ಶ್ರೀನಿವಾಸ್ ಪ್ರಸಾದ್ ಚಾಲೆಂಜ್

    ತಾಕತ್ತಿದ್ರೆ ಮೈಸೂರಿಗೆ ಬಂದು ಪಕ್ಷ ಸಂಘಟನೆ ಮಾಡಿ ಗೆಲ್ಲಿ- ಸಿದ್ದುಗೆ ಶ್ರೀನಿವಾಸ್ ಪ್ರಸಾದ್ ಚಾಲೆಂಜ್

    ಚಾಮರಾಜನಗರ: ತಾಕತ್ತಿದ್ರೆ ಮೈಸೂರಿನಲ್ಲಿ ಚುನಾವಣೆಗೆ ಬನ್ನಿ, ಪಕ್ಷ ಸಂಘಟನೆ ಮಾಡಿ ಗೆಲ್ಲಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಸದ ಶ್ರೀನಿವಾಸ್ ಪ್ರಸಾದ್ ಬಹಿರಂಗ ಸವಾಲು ಹಾಕಿದ್ದಾರೆ.

    ಚಾಮರಾಜನಗರದ ನಂದಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಅಲೆಯುತ್ತಿದ್ದು ಜಮೀರ್ ಕಾಲಿಡಿದುಕೊಂಡು ಚಾಮರಾಜಪೇಟೆಗೆ ಹೋಗುತ್ತಿದ್ದಾರೆ. ನಿಮಗೆ ಧೈರ್ಯ ಇದ್ದರೆ ಮೈಸೂರಿಗೆ ಬಂದು ಪಕ್ಷವನ್ನ ಸಂಘಟನೆ ಮಾಡಿ ಚುನಾವಣೆ ಗೆಲ್ಲಿ. ಮೊದಲು ಮುಖ್ಯಮಂತ್ರಿಗಳಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಾಗ್ದಾಳಿ ನಡೆಸಿದ್ದಾರೆ.

    ನೀವು ಮುಖ್ಯಮಂತ್ರಿಯಾಗಿ ಎರಡೆರಡು ಕ್ಷೇತ್ರದಲ್ಲಿ ಚುನಾವಣೆ ನಿಲ್ಲುತ್ತೀರಾ ಎಂದು ಗುಡುಗಿದ ಸಂಸದರು, ಬಿಜೆಪಿಯನ್ನ ಎದುರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಅಮೇಥಿ ಕ್ಷೇತ್ರದಲ್ಲಿ ಸೋತು ಸುಣ್ಣವಾಗಿದ್ದಾರೆ. ಕೇವಲ ಸೋನಿಯಾ ಗಾಂಧಿ ಮಾತ್ರ ಉತ್ತರ ಪ್ರದೇಶದಲ್ಲಿ ಗೆದ್ದಿದ್ದಾರೆ ಎಂದರು. ಇದನ್ನೂ ಓದಿ: ಅನುಭವಿ, ಹಿರಿಯ ನಾಯಕ ಶ್ರೀನಿವಾಸಗೌಡ ಕಾಂಗ್ರೆಸ್ಸಿಗೆ ಬಂದ್ರೆ ಒಳ್ಳೆಯದು: ರಮೇಶ್ ಕುಮಾರ್

    ರಾಹುಲ್ ಗಾಂಧಿ ಕೇರಳಕ್ಕೆ ಪಲಾಯನ ಮಾಡಿದ್ದು, ದೇಶದಲ್ಲಿ ನೆಲೆ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ನಿಮ್ಮ ಪಾರ್ಟಿಯನ್ನ ಬಲಪಡಿಸಿ, ಕೇರಳದಲ್ಲಿ ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ನಾಯಕರಿಗೆ ಸಂಸದ ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದರು.