Tag: ಶ್ರೀನಿವಾಸ್

  • ನನಗೂ ದರ್ಶನ್‍ಗೂ ಮನಸ್ತಾಪವಾಗಿ ಕೆಲಸ ಬಿಟ್ಟಿರುವುದು ನಿಜ – ಶ್ರೀನಿವಾಸ್

    ನನಗೂ ದರ್ಶನ್‍ಗೂ ಮನಸ್ತಾಪವಾಗಿ ಕೆಲಸ ಬಿಟ್ಟಿರುವುದು ನಿಜ – ಶ್ರೀನಿವಾಸ್

    ಬೆಂಗಳೂರು: ನನಗೂ ನಟ ದರ್ಶನ್ ತೂಗುದೀಪ ಅವರಿಗೂ ಕೆಲಸದ ವಿಷಯದಲ್ಲಿ ಮನಸ್ತಾಪವಿರುವುದು ನಿಜ, ಹೀಗಾಗಿ ಕೆಲಸ ಬಿಟ್ಟಿದ್ದೇನೆ ಎಂದು ನಟ ದರ್ಶನ್ ಮ್ಯಾನೇಜರ್ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, ದರ್ಶನ್ ತೂಗುದೀಪ ಅಭಿಮಾನಿಗಳು ಮತ್ತು ಮಾಧ್ಯಮಗಳಿಗೂ ನನ್ನ ನಮಸ್ಕಾರಗಳು. ನನಗೂ ಮತ್ತು ನಟ ದರ್ಶನ್ ತೂಗುದೀಪರವರಿಗೂ ಕೆಲಸದ ವಿಷಯವಾಗಿ ಮನಸ್ತಾಪ ಬಂದಿರುವುದು ನಿಜ. ಆದ ಕಾರಣ ನಾನು ಸೆಪ್ಟೆಂಬರ್ 18 ರಿಂದ ದರ್ಶನ್ ಬಳಿ ಕೆಲಸ ಬಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

    ಕೆಲಸ ಬಿಟ್ಟಿದ್ದರಿಂದ ನನ್ನ ಮೇಲೆ ಯಾರೂ ಸಹ ಇಲ್ಲಸಲ್ಲದ ಆರೋಪ ಹೊರಿಸಬೇಡಿ. ನನಗೂ ಕುಟುಂಬ ಇದೆ, ನಾನು ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಿಲ್ಲ. ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದೇನೆ. ಹೀಗಾಗಿ ಯಾರೂ ಈ ಕುರಿತು ಅಪಪ್ರಚಾರ ಮಾಡಬೇಡಿ ಎಂದು ಶ್ರೀನಿವಾಸ್ ಮನವಿ ಮಾಡಿದ್ದಾರೆ.

    ಡಿ ಕಂಪನಿ ಹೇಳಿದ್ದೇನು?
    ನಟ ದರ್ಶನ್ ತೂಗುದೀಪ್ ಬಳಗದಿಂದ ಮತ್ತೊಬ್ಬ ವ್ಯಕ್ತಿ ಹೊರ ಬಿದ್ದಿರುವ ಕುರಿತು ಡಿ ಕಂಪನಿ ಫೇಸ್‍ಬುಕ್ ಮತ್ತು ಟ್ವಿಟ್ಟರ್‍ನಲ್ಲಿ ತಿಳಿಸಿದೆ. ನಮ್ಮ ಡಿ ಬಾಸ್ ಬಳಿ ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸ್ (ಸೀನ) ರವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘದ ವ್ಯಾವಹಾರಿಕ ಚಟುವಟಿಕೆಗಳಿಂದ ದೂರ ಸರಿಸಲಾಗಿದೆ. ಅವರ ಜೊತೆ ಡಿಬಾಸ್ ರವರ ಹೆಸರಲ್ಲಿ ಯಾವುದೇ ವ್ಯವಹಾರ ಮಾಡದಿರಿ ಎಂದು ಡಿ ಕಂಪನಿ ಹೇಳಿದೆ.

    ಇನ್ನು ಮುಂದೆ ದರ್ಶನ್ ಮತ್ತು ತೂಗುದೀಪ ಕಂಪನಿ ವ್ಯವಹಾರಗಳಿಗೂ ಶ್ರೀನಿವಾಸ್‍ಗೂ ಯಾವುದೇ ಸಂಬಂಧ ಇಲ್ಲ. ಯಾವುದೇ ಕಾರಣಕ್ಕೂ ದರ್ಶನ್ ವ್ಯವಹಾರಗಳಿಗೆ ಸಂಬಂಧಿಸಿದಂತೆ ಶ್ರೀನಿವಾಸ್ ಅವರನ್ನು ಸಂಪರ್ಕಿಸಬಾರದು ಎಂದು ಪೇಜ್‍ನಲ್ಲಿ ತಿಳಿಸಲಾಗಿದೆ.

    ಇದಕ್ಕೆ ಅಭಿಮಾನಿಗಳು ಯಾವ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದ ಕಮೆಂಟ್ ಮಾಡಿ ಪ್ರಶ್ನಿಸುತ್ತಿದ್ದಾರೆ. ಇತ್ತೀಚೆಗೆ ಶ್ರೀನಿವಾಸ್ ಒಂದು ಹೋಟೆಲ್ ಆರಂಭಿಸಿದ್ದರು. ಅಷ್ಟು ಬಿಟ್ಟರೆ ಯಾವ ಕಾರಣಕ್ಕೆ ಶ್ರೀನಿವಾಸ್ ವಿರುದ್ಧ ಈ ನಿರ್ಧಾರ ಕೈಗೊಳ್ಳಲಾಗಿದೆ ತಿಳಿದು ಬಂದಿಲ್ಲ. ಕಳೆದ ವರ್ಷ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಕೂಡ ಹಣಕಾಸು ವ್ಯವಹಾರದ ವಿಚಾರವಾಗಿ ದಚ್ಚು ಕ್ಯಾಂಪ್‍ನಿಂದ ಹೊರ ಬಿದ್ದಿದ್ದರು.

    ಈ ಕುರಿತು ಕೇವಲ ಡಿ ಕಂಪನಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ತಿಳಿಸಿದೆ. ನಟ ದರ್ಶನ್ ತೂಗುದೀಪ್ ಆಗಲಿ ಅಥವಾ ಅವರ ಸಹೋದರ ದಿನಕರ್ ತೂಗುದೀಪ್ ಆಗಲಿ ಈ ಕುರಿತು ಅಧಿಕೃತವಾಗಿ ಸ್ಪಷ್ಟಪಡಿಸಿಲ್ಲ.

  • ಶ್ರೀನಿವಾಸ್‍ಗೂ ದರ್ಶನ್‍ಗೂ ಯಾವುದೇ ಸಂಬಂಧವಿಲ್ಲ, ವ್ಯವಹಾರ ಮಾಡದಿರಿ – ಡಿ ಕಂಪನಿ

    ಶ್ರೀನಿವಾಸ್‍ಗೂ ದರ್ಶನ್‍ಗೂ ಯಾವುದೇ ಸಂಬಂಧವಿಲ್ಲ, ವ್ಯವಹಾರ ಮಾಡದಿರಿ – ಡಿ ಕಂಪನಿ

    ಬೆಂಗಳೂರು: ದರ್ಶನ್ ತೂಗುದೀಪ್ ಬಳಗದಿಂದ ಮತ್ತೊಬ್ಬ ವ್ಯಕ್ತಿ ಹೊರ ಬಿದ್ದಿದ್ದು, ಈ ಕುರಿತು ಡಿ ಕಂಪನಿ ಫೇಸ್‍ಬುಕ್ ಮತ್ತು ಟ್ವಿಟ್ಟರ್‍ನಲ್ಲಿ ತಿಳಿಸಿದೆ.

    ನಮ್ಮ ಡಿ ಬಾಸ್ ಬಳಿ ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸ್ (ಸೀನ) ರವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘದ ವ್ಯಾವಹಾರಿಕ ಚಟುವಟಿಕೆಗಳಿಂದ ದೂರ ಸರಿಸಲಾಗಿದೆ. ಅವರ ಜೊತೆ ಡಿ ಬಾಸ್ ರವರ ಹೆಸರಲ್ಲಿ ಯಾವುದೇ ವ್ಯವಹಾರ ಮಾಡದಿರಿ ಎಂದು ಡಿ ಕಂಪನಿ ಹೇಳಿದೆ.

    ಇನ್ನು ಮುಂದೆ ದರ್ಶನ್ ಮತ್ತು ತೂಗುದೀಪ ಕಂಪನಿ ವ್ಯವಹಾರಗಳಿಗೂ ಶ್ರೀನಿವಾಸ್‍ಗೂ ಯಾವುದೇ ಸಂಬಂಧ ಇಲ್ಲ. ಯಾವುದೇ ಕಾರಣಕ್ಕೂ ದರ್ಶನ್ ವ್ಯವಹಾರಗಳಿಗೆ ಸಂಬಂಧಿಸಿದಂತೆ ಶ್ರೀನಿವಾಸ್ ಅವರನ್ನು ಸಂಪರ್ಕಿಸಬಾರದು ಎಂದು ಪೇಜ್‍ನಲ್ಲಿ ತಿಳಿಸಲಾಗಿದೆ.

    ಅಭಿಮಾನಿಗಳು ಯಾವ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದ ಕಮೆಂಟ್ ಮಾಡಿ ಪ್ರಶ್ನಿಸುತ್ತಿದ್ದಾರೆ. ಇತ್ತೀಚೆಗೆ ಶ್ರೀನಿವಾಸ್ ಒಂದು ಹೋಟೆಲ್ ಆರಂಭಿಸಿದ್ದರು. ಅಷ್ಟು ಬಿಟ್ಟರೆ ಯಾವ ಕಾರಣಕ್ಕೆ ಶ್ರೀನಿವಾಸ್ ವಿರುದ್ಧ ಈ ನಿರ್ಧಾರ ಕೈಗೊಳ್ಳಲಾಗಿದೆ ತಿಳಿದು ಬಂದಿಲ್ಲ. ಕಳೆದ ವರ್ಷ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಕೂಡ ಹಣಕಾಸು ವ್ಯವಹಾರದ ವಿಚಾರವಾಗಿ ದಚ್ಚು ಕ್ಯಾಂಪ್‍ನಿಂದ ಹೊರ ಬಿದ್ದಿದ್ದರು.

    ಈ ಕುರಿತು ಕೇವಲ ಡಿ ಕಂಪನಿಯೂ ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ತಿಳಿಸಿದ್ದು, ನಟ ದರ್ಶನ್ ತೂಗುದೀಪ್ ಆಗಲಿ ಅಥವಾ ಅವರ ಸಹೋದರ ದಿನಕರ್ ತೂಗುದೀಪ್ ಆಗಲಿ ಈ ಕುರಿತು ಅಧಿಕೃತವಾಗಿ ಸ್ಪಷ್ಟಪಡಿಸಿಲ್ಲ.

  • ಕಾಂಗ್ರೆಸ್ಸಿಗರಿಗೆ ಮಾನಸಿಕ ತೊಂದರೆಯಾಗಿ ಮೆಂಟಲ್ ಅಪ್ಸೆಟ್ ಆಗಿದೆ: ಜಿಎಸ್ ಬಸವರಾಜು

    ಕಾಂಗ್ರೆಸ್ಸಿಗರಿಗೆ ಮಾನಸಿಕ ತೊಂದರೆಯಾಗಿ ಮೆಂಟಲ್ ಅಪ್ಸೆಟ್ ಆಗಿದೆ: ಜಿಎಸ್ ಬಸವರಾಜು

    – ಶ್ರೀನಿವಾಸ್ ನನ್ನ ಮುಂದೆ ಬಚ್ಚ

    ತುಮಕೂರು: ಕಾಂಗ್ರೆಸ್ಸಿಗರಿಗೆ ಮಾನಸಿಕ ತೊಂದರೆಯಾಗಿ ಮೆಂಟಲ್ ಅಪ್ಸೆಟ್ ಆಗಿದೆ. ಕಾಂಗ್ರೆಸ್‍ನ ಎಲ್ಲರೂ ಮಾನಸಿಕ ರೋಗಿಗಳಾಗಿದ್ದಾರೆ ಎಂದು ಸಂಸದ ಜಿ.ಎಸ್ ಬಸವರಾಜು ವ್ಯಂಗ್ಯವಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್‍ನವರ ಎಲ್ಲ ಪ್ರಶ್ನೆಗಳಿಗೂ ಉತ್ತರ ಹೇಳೋಕಾಗಲ್ಲ. ಅವರು ಇವತ್ತೇ ಎಲೆಕ್ಷನ್ ನಡೆಯುತ್ತೆ ಅಂತಾರೆ. ಕಾಂಗ್ರೆಸ್‍ನ ಎಲ್ಲರೂ ಮಾನಸಿಕ ರೋಗಿಗಳಾಗಿದ್ದಾರೆ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಬಿಜೆಪಿ ಪಕ್ಷದಲ್ಲಿ ಒಬ್ಬರು ಚಂಗಲು ಬಿದ್ದು ಆಟಾ ಆಡಿದ್ದಾರಾ? ಒಬ್ಬ ಬಿಜೆಪಿ ಎಂಎಲ್‍ಎ ಏನಾದರೂ ಈ ವಿಚಾರದ ಬಗ್ಗೆ ಅಪ್ಪಿತಪ್ಪಿ ಮಾತನಾಡಿದ್ದಾರಾ ಎಂದು ಪ್ರಶ್ನಿಸಿದರು.

    ಜಿಎಸ್ ಬಸವರಾಜು ಅತಿ ದೊಡ್ಡ ಸುಳ್ಳುಗಾರ ಎಂಬ ಎಸ್.ಅರ್ ಶ್ರೀನಿವಾಸ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಸ್.ಆರ್ ಶ್ರೀನಿವಾಸ್ ಗೆ ಚೆಡ್ಡಿ ಹಾಕುವುದಕ್ಕೆ ಕಾಸ್ ಇರಲಿಲ್ಲ. ಹೆಂಡದಂಗಡಿ ಮಾಡಿಸಿಕೊಟ್ಟೆ. ಚೆನ್ನಾಗಿ ದುಡ್ಡಾಗಿದೆ ನನ್ನನ್ನ ಬೈಬೇಕು ಅಂತಾನೇ ಬೈತಾನೆ. ನಾನು ಯಾಕೆ ಉತ್ತರ ಕೊಡಲಿ. ಅವರಪ್ಪನ ಕೇಳಿದರೆ ಅವನಿಗೆ ಗೊತ್ತಾಗುತ್ತೆ ನಮ್ಮಿಂದ ಏನಾಗಿದೆ ಎಂದು. ಅವರಪ್ಪ ಬಸವರಾಜು ಭ್ರಷ್ಟ ಎಂದು ಹೇಳಿದರೆ ಆಗ ನಾನು ಒಪ್ಪಿಕೊಳ್ಳುತ್ತೇನೆ. ಶ್ರೀನಿವಾಸ್ ನನ್ನ ಮುಂದೆ ಬಚ್ಚ. ಬಾಯಿಗ್ ಬಂದಂತೆ ಮಾತನಾಡುತ್ತಾನೆ. ಗುಬ್ಬಿ ತಾಲೂಕಿಗೆ ಅವನ ಕೊಡುಗೆ ಏನು? ರೈಲನ್ನೂ ನಾನೇ ಬಿಟ್ಟೆ ಅಂತಾನೆ ಎಂದು ವಾಗ್ದಾಳಿ ಮಾಡಿದರು.

    ಬಸವರಾಜು ಕಾರನ್ನು ನಾನೇ ಡ್ರೈವ್ ಮಾಡುತ್ತಿದ್ದೆ ಅವನ ಬಗ್ಗೆ ಚೆನ್ನಾಗಿ ಗೊತ್ತು ಎಂಬ ಶ್ರೀನಿವಾಸ್ ಹೇಳಿಕೆ ವಿಚಾರವಾಗಿ ಮಾತನಾಡಿ, ಅವರಪ್ಪ ನನ್ನ ಜೊತೆ ಇರೋನು. ಆಗ ಇವನು ಬರೋನು ಡ್ರೈವರ್ ಕೆಲಸ ಮಾಡಿಕೊಂಡು ಹೋಗೋನು ನನ್ನ ಕೆಲಸ ಏನು ಮಾಡಿಲ್ಲ. ಹೆಂಡದಂಗಡಿಳನ್ನು ಮಂಜೂರು ಮಾಡಿಸಿಕೊಳ್ಳಲು ಕರೆದುಕೊಂಡು ಹೋಗೋನು ಎಂದು ಶ್ರೀನಿವಾಸ್‍ಗೆ ಏಕವಚನದಲ್ಲೇ ಬಸವರಾಜು ಕಿಡಿಕಾರಿದ್ದಾರೆ.

  • ಏನೋ ಹೇಳ ಹೊರಟಿದ್ದಾರೆ ಖನನ ಹೀರೋ!

    ಏನೋ ಹೇಳ ಹೊರಟಿದ್ದಾರೆ ಖನನ ಹೀರೋ!

    ಬೆಂಗಳೂರು: ಇದೀಗ ಖನನ ಎಂಬ ವಿಶಿಷ್ಟವಾದ ಟೈಟಲ್ ಹೊಂದಿರೋ ಚಿತ್ರವೊಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಹೆಸರು ಕೇಳಿದಾಕ್ಷಣವೇ ಇದು ಯಾವ ಬಗೆಯ ಚಿತ್ರ, ಆರ್ಟ್ ಮೂವಿಯಾ ಅಂತೆಲ್ಲ ನಾನಾ ಪ್ರಶ್ನೆಗಳಿಗೆ ಕಾರಣವಾಗೋ ಖನನ ಅಪ್ಪಟ ಕಮರ್ಶಿಯಲ್ ಸೂತ್ರಗಳೊಂದಿಗೆ ಬಿಡುಗಡೆಗೆ ಸಜ್ಜಾಗಿರೋ ಚಿತ್ರ. ಇದೇ ಮೇ ತಿಂಗಳಲ್ಲಿ ರಿಲೀಸ್ ಆಗಲಿರುವ ಖನನ ತನ್ನೊಳಗೆ ಅನೇಕ ನಿಗೂಢಗಳನ್ನು ಬಚ್ಚಿಟ್ಟುಕೊಂಡಿದೆ.

    ರಾಧಾ ನಿರ್ದೇಶನ ಮಾಡಿರೋ ಖನನ ಮೂಲಕ ಹೀರೋ ಆಗಿ ಎಂಟ್ರಿ ಕೊಡಲು ಆರ್ಯವರ್ಧನ್ ಸಜ್ಜಾಗಿದ್ದಾರೆ. ಈಗಾಗಲೇ ಮಾರ್ಚ್ 22 ಚಿತ್ರದ ಸಲ್ಮಾನ್ ಎಂಬ ಪಾತ್ರದ ಮೂಲಕ ಪ್ರತಿಭಾವಂತ ನಟನಾಗಿ ಗುರುತಿಸಿಕೊಂಡಿರೋ ಆರ್ಯವರ್ಧನ್ ಪಾಲಿಗೆ ಹೀರೋ ಆಗಿ ಇದು ಮೊದಲ ಚಿತ್ರ. ತಾನು ಹೀರೋ ಆಗಿ ಲಾಂಚ್ ಆಗೋ ಚಿತ್ರ ವಿಶೇಷ ಕಥೆ ಹೊಂದಿರಬೇಕು ಮತ್ತು ಅದು ಸಂದೇಶವನ್ನೂ ಕೂಡಾ ರವಾನಿಸುವಂತಿರಬೇಕು ಅನ್ನೋದು ಆರ್ಯವರ್ಧನ್ ಅವರ ಆಳದ ಕನಸು. ಅದಕ್ಕೆ ತಕ್ಕುದಾದ ಕಥೆಯನ್ನು ಖನನ ಒಳಗೊಂಡಿದೆಯಂತೆ.

    ಇದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ನೋಡಿದವರನ್ನೆಲ್ಲ ಅಚ್ಚರಿಗೀಡು ಮಾಡಲಿರೋ ಇದರಲ್ಲಿ ಆರ್ಯವರ್ಧನ್ ಹಲವಾರು ಶೇಡುಗಳಿರೋ ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರವೇ ಎಲ್ಲರಿಗೂ ಬದುಕಿನ ಕೆಲ ಗುಟ್ಟುಗಳನ್ನು ಹೇಳುವಂತಿದೆ. ಪ್ರತಿಕ್ಷಣವೂ ಕುತೂಹಲ ಆಚೀಚೆ ಆಗದಂತೆ ಬಿಚ್ಚಿಕೊಳ್ಳುತ್ತಾ ಸಾಗಲಿರೋ ಈ ಚಿತ್ರದಲ್ಲಿ ಹೀರೋ ಪ್ರೇಕ್ಷಕರೊಂದಿಗೆ ನೇರಾ ನೇರ ಕನೆಕ್ಟ್ ಆಗುತ್ತಾನೆ. ಅದೇ ಹೊತ್ತಲ್ಲಿ ಪ್ರೇಕ್ಷಕರಿಗೇನೋ ಹೇಳಲಿದ್ದಾನೆ. ಆ ರೋಚಕ ವಿಚಾರವೇನು ಅನ್ನೋದು ಇದೇ ಮೇ 10ರಂದು ಜಾಹೀರಾಗಲಿದೆ.

  • ಮೂರು ಭಾಷೆಗಳಲ್ಲಿ ಅಬ್ಬರಿಸಲು ಅಣಿಯಾಯ್ತು ಕನ್ನಡದ ಖನನ!

    ಮೂರು ಭಾಷೆಗಳಲ್ಲಿ ಅಬ್ಬರಿಸಲು ಅಣಿಯಾಯ್ತು ಕನ್ನಡದ ಖನನ!

    ಬೆಂಗಳೂರು: ಹೊಸಬರ ಚಿತ್ರ ಎಂದರೆ ಒಂದು ಭಾಷೆಯಲ್ಲಿ ತೆರೆ ಕಾಣಲು ಹತ್ತಾರು ಸವಾಲುಗಳೆದುರಾಗುತ್ತವೆ. ಅಂಥಾದ್ದರಲ್ಲಿ ಹೊಸಾ ಹೀರೋ ಎಂಟ್ರಿ ಕೊಡುತ್ತಿರೋ ಚಿತ್ರವೊಂದು ಏಕಕಾಲದಲ್ಲಿಯೇ ಮೂರು ಭಾಷೆಗಳಲ್ಲಿ ತಯಾರಾಗಿದೆ ಅಂದರೆ ಅಚ್ಚರಿಯಾಗದಿರಲು ಸಾಧ್ಯವೇ ಇಲ್ಲ. ಸದ್ಯ ಬಿಡುಗಡೆಗೆ ತಯಾರಾಗಿರುವ ಖನನ ಚಿತ್ರವೂ ಅದೇ ಥರದ ಅಚ್ಚರಿಗೆ ಕಾರಣವಾಗಿದೆ.

    ಶ್ರೀನಿವಾಸ್ ನಿರ್ಮಾಣ ಮಾಡಿರುವ ಖನನ ಚಿತ್ರದ ಮೂಲಕ ಆರ್ಯವರ್ಧನ್ ನಾಯಕ ನಟನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ಬಗ್ಗೆ ಎಲ್ಲೆಡೆ ಪಾಸಿಟಿವ್ ಟಾಕ್‍ಗಳೇ ಕೇಳಿ ಬರಲಾರಂಭಿದೆ. ಚಿತ್ರರಂಗ ಪಾಲಿಗೆ ತೀರಾ ಹೊಸತಾದ ಕಥೆಯೂ ಸೇರಿದಂತೆ ಖನನ ಪ್ರೇಕ್ಷಕರಿಗೆ ಹತ್ತಿರಾಗಿರೋದರ ಹಿಂದೆ ನಾನಾ ಕಾರಣಗಳಿವೆ. ಅದರಲ್ಲಿ ಈ ಚಿತ್ರ ರೂಪುಗೊಂಡಿರೋ ಅದ್ದೂರಿತನದ್ದು ಪ್ರಧಾನ ಪಾತ್ರ.

    ರಾಧಾ ನಿರ್ದೇಶನ ಮಾಡಿರುವ ಈ ಚಿತ್ರ ಏಕ ಕಾಲದಲ್ಲಿಯೇ ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ತಯಾರಾಗಿದೆ. ಹೊಸ ಹೀರೋ ಎಂಟ್ರಿ ಕೊಡುತ್ತಿರೋ ಚಿತ್ರವೊಂದನ್ನು ಈ ರೀತಿ ಮೂರು ಭಾಷೆಗಳಲ್ಲಿ ನಿರ್ಮಾಣ ಮಾಡಲು ಧೈರ್ಯ ಬೇಕಾಗುತ್ತದೆ. ಆದರೆ ನಿರ್ಮಾಪಕರು ಈ ಕಥೆಯನ್ನು ಮೆಚ್ಚಿಕೊಂಡು ಅಂಥಾದ್ದೊಂದು ಧೈರ್ಯ ಮಾಡಿದ್ದಾರೆ.

    ಖನನ ಮೂಲಕ ಹೀರೋ ಆಗುತ್ತಿರುವ ಆರ್ಯವರ್ಧನ್ ನಿರ್ಮಾಪಕರ ಪುತ್ರ. ಆದ್ದರಿಂದಲೇ ತಮ್ಮ ಪುತ್ರನನ್ನು ಮೂರು ಭಾಷೆಗಳಲ್ಲಿ ಭರ್ಜರಿಯಾಗಿಯೇ ಲಾಂಚ್ ಮಾಡಲು ನಿರ್ಮಾಪಕ ಶ್ರೀನಿವಾಸ್ ಅವರು ಮುಂದಾಗಿದ್ದಾರೆ.

    ಕನ್ನಡದ ಮಟ್ಟಿಗೆ ಹೊಸಾ ಹೀರೋ ಎಂಟ್ರಿ ಕೊಡುವ ಚಿತ್ರವೊಂದು ಈ ಪಾಟಿ ದೊಡ್ಡ ಮೊತ್ತದ ಬಜೆಟ್ಟಿನಲ್ಲಿ ನಿರ್ಮಾಣಗೊಂಡಿದ್ದು ಅಪರೂಪ. ನುರಿತ, ಕ್ರಿಯಾಶೀಲ ತಾಂತ್ರಿಕ ವರ್ಗ, ಎಲ್ಲದರಲ್ಲಿಯೂ ಅಚ್ಚುಕಟ್ಟುತನ ಹೊಂದಿರೋ ಈ ಚಿತ್ರ ತುಸು ತಡವಾದರೂ ಅದ್ಧೂರಿಯಾಗಿಯೇ ರೆಡಿಯಾಗಿ ಬಿಡುಗಡೆಗೆ ತಯಾರಾಗಿದೆ. ಖನನ ಇದೇ ಮೇ ತಿಂಗಳಲ್ಲಿ ಬಿಡುಗಡೆಯಾಗಲಿದೆ.

  • ಮೋದಿ ಒಬ್ಬ ಮನೆಹಾಳ, ಅವರ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು: ಸಚಿವ ಶ್ರೀನಿವಾಸ್ ವಾಗ್ದಾಳಿ

    ಮೋದಿ ಒಬ್ಬ ಮನೆಹಾಳ, ಅವರ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು: ಸಚಿವ ಶ್ರೀನಿವಾಸ್ ವಾಗ್ದಾಳಿ

    ತುಮಕೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ಮನೆಹಾಳ. ಮೋದಿ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು. ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ಕೊಡ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಗೂಳೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡ್ತಿನಿ ಅಂದಿದ್ದ ಮೋದಿ ಹೇಳಿದಂತೆ ನಡೆದುಕೊಂಡಿದ್ದಾನಾ? ರೈತರ ಸಾಲ ಮನ್ನಾ ಮಾಡಿದ್ದಾನಾ? ಮೋದಿ ಅಣ್ಣಾನೇ ಬಂದು ತುಮಕೂರಿನ ಫುಡ್ ಪಾರ್ಕ್ ಉದ್ಘಾಟನೆ ಮಾಡಿಹೋದ. ಈಗ ಅಲ್ಲಿ ಏನಾಗ್ತಿದೆ ಅಂತ ಅವರಿಗೆ ಗೊತ್ತಾ? ಮೋದಿ ಒಬ್ಬ ಮನೆಹಾಳ, ಅವನ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು. ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ಕೊಡ್ತಾರೆ. ಸಂವಿಧಾನ ಬದಲಿಸುತ್ತೇನೆ ಎಂದು ಹೇಳುವ ತಿಕ್ಕಲರು ಅವರೆಲ್ಲ ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದರು.

    ಬಳಿಕ ತುಮಕೂರು ಕ್ಷೇತ್ರದಿಂದ ದೇವೇಗೌಡರ ವಿರುದ್ಧ ಕಣಕ್ಕಿಳಿದಿರುವ ಪಾಪಿಗೆ ವೋಟು ಹಾಕುವ ನೀಚ ಕೆಲಸ ಮಾಡಬೇಡಿ ಎಂದು ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರನ್ನು ಟೀಕಿಸಿದರು. ದೇವೇಗೌಡರ ಬಗ್ಗೆ ಮಾತನಾಡೋ ಬಸವರಾಜು ಒಬ್ಬ ಭಸ್ಮಾಸುರ. ಅವನು ಕಾಲು ಇಟ್ಟಲ್ಲೆಲ್ಲಾ ಜನರು ಭಸ್ಮವಾಗುತ್ತಿದ್ದಾರೆ. ಬಸವರಾಜು ಸೊಗಡು ಶಿವಣ್ಣರನ್ನ ಮೂಲೆ ಗುಂಪು ಮಾಡಿದ್ದಾರೆ. ಅಂಥವನು ದೇವೇಗೌಡರ ಮೇಲೆ ಆರೋಪ ಮಾಡುತ್ತಾನೆ. ಮಾನ ಮರ್ಯಾದೆ ಇದ್ದರೆ ಬಸವರಾಜು ಚುನಾವಣೆಗೆ ನಿಲ್ಲುತ್ತಿರಲಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

  • ಹಣಕ್ಕಾಗಿ ಪ್ರೇಮ್ ನಿವಾಸದ ಮುಂದೆ ನಿರ್ಮಾಪಕ ಶ್ರೀನಿವಾಸ್ ಪ್ರತಿಭಟನೆ

    ಹಣಕ್ಕಾಗಿ ಪ್ರೇಮ್ ನಿವಾಸದ ಮುಂದೆ ನಿರ್ಮಾಪಕ ಶ್ರೀನಿವಾಸ್ ಪ್ರತಿಭಟನೆ

    ಬೆಂಗಳೂರು: ಸಿನಿಮಾ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ ನಿರ್ಮಾಪಕರಿಂದ ಹಣ ಪಡೆದು, ಚಿತ್ರವನ್ನು ಮಾಡದೇ ಹಣವನ್ನು ಹಿಂದಿರುಗಿಸದೇ ನಿರ್ದೇಶಕ ಪ್ರೇಮ್ ಸತಾಯಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಕನಕಪುರ ಶ್ರೀನಿವಾಸ್ ಅವರು ಹಣವನ್ನು ವಾಪಸ್ ನೀಡುವಂತೆ ನಿರ್ದೇಶಕ ಪ್ರೇಮ್ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಹಣವನ್ನು ಮರಳಿ ನೀಡುವವರೆಗೂ ಜಾಗ ಬಿಟ್ಟು ಕದಲುವುದಿಲ್ಲವೆಂದು ಪಟ್ಟುಹಿಡಿದು ಕುಳಿತಿದ್ದಾರೆ.

    ಏನಿದು ಆರೋಪ?
    ಹ್ಯಾಟ್ರಿಕ್ ಹಿರೋ ಶಿವರಾಜ್‍ಕುಮಾರ್ ಅಭಿನಯದ ಬಿಗ್ ಹಿಟ್ ಜೋಗಿ ಚಲನಚಿತ್ರ ನಿರ್ಮಾಣದ ಬಳಿಕ ನಿರ್ದೇಶಕ ಪ್ರೇಮ್ ಅವರಿಗೆ ಸಿನಿಮಾ ಮಾಡಿಕೊಂಡುವಂತೆ ಶ್ರೀನಿವಾಸ್ 10 ಲಕ್ಷ ರೂಪಾಯಿ ಮುಂಗಡ ಹಣವನ್ನು ಕೊಟ್ಟಿದ್ದರು. ಆದರೆ ಹಣ ಪಡೆದ ಬಳಿಕ ಪ್ರೇಮ್ ಇಲ್ಲಿಯವರೆಗೂ ಯಾವುದೇ ಸಿನೆಮಾವನ್ನು ಮಾಡಿಕೊಟ್ಟಿಲ್ಲ.

    ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, ಪ್ರೇಮ್ ನನ್ನ ಬಳಿ ಸಿನಿಮಾ ಮಾಡೋದಾಗಿ ಹೇಳಿ 10 ಲಕ್ಷ ರೂಪಾಯಿ ತೆಗೆದುಕೊಂಡಿದ್ದರು. ಆದರೆ ಇದೂವರೆಗೂ ಸಿನೆಮಾ ಮಾಡಿಕೊಟ್ಟಿಲ್ಲ. ಅಲ್ಲದೇ ಇಲ್ಲಿಯ ತನಕ 5 ಲಕ್ಷ ರೂಪಾಯಿ ಮಾತ್ರ ಕೊಟ್ಟಿದ್ದಾರೆ. ಆದರೆ ಉಳಿದ ಹಣವನ್ನು ನೀಡಲು ಸತಾಯಿಸುತ್ತಿದ್ದಾರೆ. ನಮ್ಮಂತಹ ಸಣ್ಣ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ಬೆಳಗ್ಗೆಯಿಂದಲೂ ನಾನು ಊಟ-ತಿಂಡಿ ಮಾಡದೇ ಕಾಯುತ್ತಿದ್ದೇನೆ. ನನ್ನ ಡ್ರೈವರ್ ರನ್ನು ಕಳುಹಿಸಿದರೆ ಧಮ್ಕಿ ಹಾಕಿ ಕಳುಹಿಸಿದ್ದಾರೆ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

    ಒಂದೂವರೆ ವರ್ಷದ ಹಿಂದೆ ನಾನು ಈ ವಿಚಾರದ ಬಗ್ಗೆ ಚಲನಚಿತ್ರ ಮಂಡಳಿಗೂ ದೂರನ್ನು ನೀಡಿದ್ದೆ. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ದುಡ್ಡು ಕೊಡುವ ತನಕ ನಾನು ಇಲ್ಲಿಂದ ಕದಲುವುದಿಲ್ಲ. ನನ್ನ ಮನೆಯವರು ಸಹ ಇಲ್ಲಿಗೆ ಬರುತ್ತಿದ್ದಾರೆ. ಎಲ್ಲರೂ ಸೇರಿ ಪ್ರೇಮ್ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ನಾವು ಬಿಕಾರಿಯಾಗಿ ಆಟೋದಲ್ಲಿ ಓಡಾಡುತ್ತಿದ್ದೇನೆ. ಪ್ರೇಮ್ ಮಾತ್ರ ಕೋಟಿ ಬೆಲೆಯ ಕಾರಿನಲ್ಲಿ ಓಡಾಡುತ್ತಿದ್ದಾರೆಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊಹ್ಲಿ ಆಯ್ಕೆ ಮಾಡಿದ್ದಕ್ಕೆ ನನ್ನ ಉದ್ಯೋಗ ಹೋಯ್ತು: ವೆಂಗ್‍ಸರ್ಕರ್

    ಕೊಹ್ಲಿ ಆಯ್ಕೆ ಮಾಡಿದ್ದಕ್ಕೆ ನನ್ನ ಉದ್ಯೋಗ ಹೋಯ್ತು: ವೆಂಗ್‍ಸರ್ಕರ್

    ನವದೆಹಲಿ: ಎಸ್ ಬದರಿನಾಥ್ ಬದಲು ವಿರಾಟ್ ಕೊಹ್ಲಿ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿ ನಾನು ವೃತ್ತಿಜೀವನನ್ನು ತ್ಯಾಗ ಮಾಡಬೇಕಾಯಿತು ಎಂಬ ಸ್ಫೋಟಕ ಮಾಹಿತಿಯನ್ನು ಟೀಂ ಇಂಡಿಯಾ ಮಾಜಿ ನಾಯಕ, ಮಾಜಿ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ದಿಲೀಪ್ ವೆಂಗ್ ಸರ್ಕರ್ ಬಿಚ್ಚಿಟ್ಟಿದ್ದಾರೆ.

    ಮುಂಬೈ ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿದ ಅವರು, 2008 ರಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದ ವೇಳೆ ವಿರಾಟ್ ಕೊಹ್ಲಿ ರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿದೆ. ಆದರೆ ಈ ವೇಳೆ ಬಿಸಿಸಿಐ ಖಜಾಂಚಿಯಾಗಿದ್ದ ಶ್ರೀನಿವಾಸ್ ಅವರು ತಮ್ಮ ಮಾಲೀಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ತಮಿಳುನಾಡು ಆಟಗಾರರ ಎಸ್ ಬದರಿನಾಥ್ ಅವರನ್ನು ಆಯ್ಕೆ ಮಾಡಲು ಮನಸ್ಸು ಮಾಡಿದ್ದರು ಎಂದು ಹೇಳಿದ್ದಾರೆ.

    2008 ಅಂಡರ್ 19 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಆಯೋಜನೆಯಾಗಿತ್ತು. ಈ ಸರಣಿಗೆ ಶ್ರೀನಿವಾಸ್ ಅವರು 29 ವರ್ಷದ ಬದರಿನಾಥ್ ಅವರನ್ನು ಆಯ್ಕೆ ಮಾಡಲು ಇಚ್ಛಿಸಿದ್ದರು. ಆದರೆ ನಾನು 19 ವರ್ಷದ ಕೊಹ್ಲಿ ರನ್ನು ಆಯ್ಕೆ ಮಾಡಿದೆ. ಬಳಿಕ ನನಗೆ ಕರೆ ಮಾಡಿದ್ದ ಶ್ರೀನಿವಾಸ್ ಅವರು ಈ ಆಯ್ಕೆ ಕುರಿತು ಅಸಮಾಧಾನವನ್ನು ಹೊರಹಾಕಿದ್ದರು. ಇದಾದ ಬಳಿಕ ನಾನು ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನ ಕಳೆದು ಕೊಳ್ಳಬೇಕಾಯಿತು ಎಂದು ಅಂದಿನ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

    ಅಂದು ನಾನು ಕೊಹ್ಲಿ ಅವರಿಗೆ ಅವಕಾಶ ನೀಡದೆ ಹೋಗಿದ್ದರೆ ಮತ್ತೆ ಅವರಿಗೆ ಅವಕಾಶ ಸಿಗುತಿತ್ತೋ ಗೊತ್ತಿಲ್ಲ. ಆದರೆ ಅಂದು ನಾನು ಕೊಹ್ಲಿ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದೆ. ನನ್ನ ನಿರ್ಧಾರ ಅಂದು ಟೀಂ ಇಂಡಿಯಾ ನಾಯಕರಾಗಿದ್ದ ಧೋನಿ ಹಾಗೂ ಕೋಚ್ ಆಗಿದ್ದ ಗ್ಯಾರಿ ಕಸ್ಟರ್ನ್ ಅವರಿಗೂ ಸಹಮತವಿರಲಿಲ್ಲ. ಆದರೆ ನನ್ನ ಅಭಿಪ್ರಾಯಕ್ಕೆ ಆಯ್ಕೆ ಸಮಿತಿಯ ಸಹಮತವಿತ್ತು. ಆದರೆ ಮರುದಿನ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನದಿಂದ ನನ್ನನ್ನು ಕೈ ಬಿಟ್ಟು ಶ್ರೀಕಾಂತ್ ರನ್ನು ನೇಮಕ ಮಾಡಿದ್ದರು ಎಂದು ಹೇಳಿದರು.  ಇದನ್ನೂ ಓದಿ:  ಧೋನಿಗಿಂತಲೂ ಹೆಚ್ಚು ಸಂಬಳ ಪಡೆಯಲಿದ್ದಾರೆ ಭುವಿ! ಯಾರಿಗೆ ಎಷ್ಟು ಸಂಬಳ? ಇಲ್ಲಿದೆ ಪೂರ್ಣ ಪಟ್ಟಿ

    61 ವರ್ಷದ ವೆಂಗ್ ಸರ್ಕರ್ ಟೀಂ ಇಂಡಿಯಾ ಪರ 116 ಟೆಸ್ಟ್, 129 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೇ 1983ರ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದರು. 2006 ರಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥರಾಗಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ