Tag: ಶ್ರೀನಿವಾಸ ಪ್ರಸಾದ್

  • ಸಾಮಾಜಿಕ ನ್ಯಾಯದ ಹರಿಕಾರ ಪ್ರಸಾದ್‌ – ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ

    ಸಾಮಾಜಿಕ ನ್ಯಾಯದ ಹರಿಕಾರ ಪ್ರಸಾದ್‌ – ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ

    ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಪ್ರಧಾನಿ ಮೋದಿ (PM  Modi) ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD Devegowda) ಅವರು ಸಂತಾಪ ಸೂಚಿಸಿದ್ದಾರೆ.

    ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ (Bengaluru Private Hospital) ನಸುಕಿನ ಜಾವ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಮಾಜಿ ಪ್ರಧಾನಿಗಳಿಬ್ಬರೂ ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ.

    ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ (Srinivasa Prasad) ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ತಮ್ಮ ಸಮಾಜ ಸೇವೆಗಳಿಂದಲೇ ಬಹಳ ಜನಪ್ರಿಯರಾಗಿದ್ದರು. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

  • ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ – ಶ್ರೀನಿವಾಸ್ ಪ್ರಸಾದ್ ಲೇವಡಿ

    ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ – ಶ್ರೀನಿವಾಸ್ ಪ್ರಸಾದ್ ಲೇವಡಿ

    ಮೈಸೂರು: ಸಿದ್ದರಾಮಯ್ಯ (Siddaramaiah) ಗುಡುಗಿದ್ರೆ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ (V Srinivas Prasad) ಲೇವಡಿ ಮಾಡಿದ್ದಾರೆ.

    ವರುಣಾ ಕ್ಷೇತ್ರದಲ್ಲಿ (Varuna Constituency) ಸಿದ್ದರಾಮಯ್ಯ ಅಬ್ಬರದ ಪ್ರಚಾರದ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಗುಡುಗಿದ್ರೆ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗುತ್ತೆ. ಲೋಕಸಭೆಯಲ್ಲೂ ರಾಹುಲ್ ಗಾಂಧಿನ (Rahul Gandhi) ನಿಲ್ಲಿಸಿಕೊಂಡು ಗುಡುಗಿದ್ರು, ಮೋದಿ ಮುಳುಗೇಹೋದರು ಅನ್ನೋಹಾಗೇ ಗುಡುಗಿದ್ರು. ಕೊನೆಗೆ ಏನಾಯ್ತು? ರಾಜ್ಯದಲ್ಲಿ ಕೇವಲ 1 ಸೀಟು ಗೆದ್ದರು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಹನಿಮೂನ್‌ಗೆ ವಿದೇಶಕ್ಕೆ ಹಾರಿದ ಸಿಂಹಪ್ರಿಯಾ ಜೋಡಿ

    ಗುಡುಗಿ.. ಗುಡುಗಿ.. 30 ಸಾವಿರ ವೋಟ್‌ನಲ್ಲಿ ಸೋತರು. ವರುಣಾ ಕ್ಷೇತ್ರದಲ್ಲಿ 1 ಲಕ್ಷ ವೋಟ್ ಗೆಲ್ಲೋಕೆ ಸಾಧ್ಯನಾ? ಪ್ರತಿಪಕ್ಷ ನಾಯಕನಾಗಿ ಮಾತನಾಡುವ ಮಾತಾ ಅದು? ಸೋಮಣ್ಣ ಹೊರಗಿನವರು ಅನ್ನೋ ಸಿದ್ದರಾಮಯ್ಯ, ತಾವು ಬಾದಾಮಿಗೆ ಯಾಕೆ ಹೋದ್ರು? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಇದನ್ನೂ ಓದಿ: ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕನಿಗೆ ಚಳಿ ಬಿಡಿಸಿದ ನಟಿ ಊರ್ವಶಿ ರೌಟೇಲಾ

    ಇದೇ ವೇಳೆ ಬಿಜೆಪಿಯಲ್ಲಿ ಲಿಂಗಾಯತ ಮುಖ್ಯಮಂತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಮಿತ್ ಶಾ ಕೂಡ ಈ ಬಗ್ಗೆ ಮಾತನಾಡಬೇಡಿ ಅಂತಾ ಈಗಾಗಲೇ ಹೇಳಿದ್ದಾರೆ. ಮುಖ್ಯಮಂತ್ರಿ ಬಗ್ಗೆ ಫಲಿತಾಂಶದ ನಂತರ ಯೋಚನೆ ಮಾಡೋಣ ಅಂತಾ ಹೇಳಿದ್ದಾರೆ. ಫಲಿತಾಂಶದ ಮೇಲೆ ದಲಿತ ಸಿಎಂ, ಅಥವಾ ಲಿಂಗಾಯತ ಸಿಎಂ ಅನ್ನೋದು ನಿರ್ಧಾರವಾಗುತ್ತೆ. ಪಕ್ಷದ ವರಿಷ್ಠರು ಅದನ್ನ ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

  • ಎಲ್ಲದಕ್ಕೂ ಮೂಹೂರ್ತ ಇಟ್ಟಿದ್ದು ಇಲ್ಲೇ, ಈಗಲೂ ಇಟ್ಟಿದ್ದೇವೆ: ಎಚ್. ವಿಶ್ವನಾಥ್

    ಎಲ್ಲದಕ್ಕೂ ಮೂಹೂರ್ತ ಇಟ್ಟಿದ್ದು ಇಲ್ಲೇ, ಈಗಲೂ ಇಟ್ಟಿದ್ದೇವೆ: ಎಚ್. ವಿಶ್ವನಾಥ್

    ಮೈಸೂರು: ಎಲ್ಲದಕ್ಕೂ ಮುಹೂರ್ತ ಇಟ್ಟಿದ್ದು ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಈಗಲೂ ಮುಹೂರ್ತ ಇಟ್ಟಿದ್ದೇವೆ. ಯಾವುದಕ್ಕೆ ಎಂದು ಹೇಳುವುದಿಲ್ಲ ಎನ್ನುವ ಮೂಲಕ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕುತೂಹಲ ಮೂಡಿಸಿದ್ದಾರೆ.

    ಮೈಸೂರಿನಲ್ಲಿ ಇಂದು ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿದ್ದ ಎಚ್. ವಿಶ್ವನಾಥ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಮೂಹೂರ್ತ ಇಟ್ಟಿದ್ದೇವೆ. ಸಿದ್ದರಾಮಯ್ಯ ಸೋಲಿಗೂ ಇಲ್ಲೇ ಮುಹೂರ್ತ ಇಟ್ಟಿದ್ದು. ಸಮ್ಮಿಶ್ರ ಸರ್ಕಾರ ಪತನಕ್ಕೂ ಇಲ್ಲೇ ಮುಹೂರ್ತ ಇಟ್ಟಿದ್ದು. ಯಡಿಯೂರಪ್ಪ ಸಿಎಂ ಆಗುವುದಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲಿಯೇ. ನಂತರದ ಹಲವು ಬೆಳವಣಿಗೆ ಪ್ರಸಾದ್ ಮನೆ ಸಾಕ್ಷಿ ಆಗಿದೆ. ಈಗಲೂ ಪ್ರಸಾದ್ ಭೇಟಿಯ ಜೊತೆ ರಾಜಕೀಯ ಹಾಗೂ ಜಿಲ್ಲೆಯ ವಿದ್ಯಮಾನದ ಬಗ್ಗೆ ಮಾತನಾಡಿದ್ದೇವೆ ಎಂದರು. ಇದನ್ನೂ ಓದಿ: ಮತ್ತೆ ಡಿಸಿಗೆ ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ – ಇನ್ಮುಂದೆ ಮಾತಾಡಲ್ಲವೆಂದು ಕದನ ವಿರಾಮ ಘೋಷಣೆ!

    ಸದ್ಯಕ್ಕೆ ಯಾವ ವಿಚಾರಕ್ಕೆ ಮುಹೂರ್ತ ಎಂದು ಹೇಳುವುದಿಲ್ಲ. ಕಾದು ನೋಡೋಣ. ಸಿಎಂ ಯಡಿಯೂರಪ್ಪ ಅವರಿಗೆ ಆರೋಗ್ಯ ಸರಿಯಿಲ್ಲ. ಅವರ ಆರೋಗ್ಯ ಸರಿಯಾಗಬೇಕು. ಅದರ ಜೊತೆ ರಾಜ್ಯದ ಆಡಳಿತದ ಆರೋಗ್ಯವು ಸರಿಯಾಗಬೇಕು. ಇದಕ್ಕಾಗಿ ಹೈಕಮಾಂಡ್ ಶೀಘ್ರವೇ ಒಂದು ತೀರ್ಮಾನ ಕೈಗೊಳ್ಳಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆಗೆ ಪುಷ್ಠಿ ಕೊಟ್ಟಂತೆ ಹೇಳಿಕೆ ನೀಡಿದರು.

    ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲ ಇದೆ. ಕೆಲವರು ದೆಹಲಿಗೆ ಹೋಗಿದ್ದಾರೆ. ಇನ್ನು ಕೆಲವರು ಹೇಳಿಕೆ ಕೊಡುತ್ತಿದ್ದಾರೆ. ಈ ಮಧ್ಯೆ ಯಡಿಯೂರಪ್ಪನವರು ಏನೂ ಮಾತನಾಡುತ್ತಿಲ್ಲ. ಯಾರು ಏನೇ ಮಾಡಿದ್ರು ತೀರ್ಮಾನ ಮಾಡೋದು ಹೈಕಮಾಂಡ್. ಹಾಗಾಗಿ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದರು.

  • ಈಶ್ವರಪ್ಪ ಮಾತಿಗೆ ನನ್ನ ವಿರೋಧವಿದೆ ಅಂದ್ರು ಶ್ರೀನಿವಾಸ್ ಪ್ರಸಾದ್!

    ಈಶ್ವರಪ್ಪ ಮಾತಿಗೆ ನನ್ನ ವಿರೋಧವಿದೆ ಅಂದ್ರು ಶ್ರೀನಿವಾಸ್ ಪ್ರಸಾದ್!

    – ಸಿಎಂ ಇಬ್ರಾಹಿಂ ವಿದೂಷಕ

    ಮೈಸೂರು: ಮುಸ್ಲಿಂ ಮತಗಳು ಬೇಡ ಎಂದು ಕೆ.ಎಸ್. ಈಶ್ವರಪ್ಪ ಹೇಳಬಾರದಿತ್ತು. ಅವರ ಮತ ಬೇಡ ಇವರ ಮತ ಬೇಡ ಅನ್ನಬಾರದು ಎಂದು ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಈಶ್ವರಪ್ಪ ಮಾತಿಗೆ ವಿರೋಧ ವ್ಯಕ್ತಪಡಿಸಿದ್ರು.

    ನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೋಸ್ತಿ ವರ್ಸಸ್ ಬಿಜೆಪಿ ಆಗಬೇಕಿತ್ತು. ದೋಸ್ತಿ ವರ್ಸಸ್ ದೋಸ್ತಿ ಆಗಿದೆ ಎಂದು ವ್ಯಂಗ್ಯವಾಡಿದ್ರು.

    ರಾಜ್ಯದಲ್ಲಿ ದೋಸ್ತಿಗಳು ಹೇಗಿದ್ದಾರೆ ಎಂದು ಗೊತ್ತಿದೆ. ಮಂಡ್ಯದಲ್ಲಿ ದೋಸ್ತಿ ವರ್ಸಸ್ ಸುಮಲತಾ ಆಗಿದೆಯಾ ಎಂದು ಪ್ರಶ್ನಿಸಿದ್ರು. ಅಲ್ಲದೆ ಎಂಟು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ನೀವು ಹೇಗೆ ಅಧಿಕಾರ ಮಾಡಿದ್ದೀರಿ ಎಂದು ರಾಜ್ಯದ ಜನತೆಗೆ ತಿಳಿದಿದೆ. ಎಷ್ಟರ ಮಟ್ಟಿಗೆ ನಿಮ್ಮ ನಡುವೆ ಸಮನ್ವಯ ಇದೆ ಎಂಬುದೂ ಗೊತ್ತಿದೆ ಎಂದು ಹೇಳಿದ್ರು.

    ದಾವೂದ್ ಇಬ್ರಾಹಿಂಗೂ ಸಿ.ಎಂ. ಇಬ್ರಾಹಿಂಗೂ ಏನಾದರೂ ವ್ಯತ್ಯಾಸ ಇದೆಯಾ ಎಂದು ಪ್ರಶ್ನಿಸಿದ ಶ್ರೀನಿವಾಸ್ ಪ್ರಸಾದ್, ಇಬ್ರಾಹಿಂ ಒಬ್ಬ ಕ್ರಿಮಿನಲ್ ಪಾಲಿಟಿಷಿಯನ್. ಇಬ್ರಾಹಿಂ ಒಬ್ಬ ವಿದೂಷಕನಾಗಿದ್ದಾರೆ. ದಾವೂದ್ ಇಬ್ರಾಹಿಂ ಅದರೂ ಅಂಡರ್ ವಲ್ರ್ಡ್ ಡಾನ್. ಆದರೆ ಇಬ್ರಾಹಿಂ ಯಾರು ಅಂದ್ರೆ ಸಿದ್ದರಾಮಯ್ಯ ಆಸ್ಥಾನದ ಒಬ್ಬ ವಿದೂಷಕ ಎಂದು ಸಿಎ.ಎಂ ಇಬ್ರಾಹಿಂ ವಿರುದ್ಧ ವಾಗ್ದಾಳಿ ನಡೆಸಿದ್ರು.


    ಅನಂತ್‍ಕುಮಾರ್ ಹೆಗ್ಡೆ ಸಂವಿಧಾನದದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತಾಡಿದ್ದರು. ಆ ಮಾತಿಗೆ ಅವರು ಸಂಸತ್ ನಲ್ಲಿ ಕ್ಷಮೆ ಕೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ರು.

  • ಸಿಎಂ ಸೋಲಿಸಲು ಎಲ್‍ಡಿಎನ್, ಜಿಎಲ್‍ಡಿಎನ್ ತಂತ್ರ ಹೆಣೆದ ಶ್ರೀನಿವಾಸ ಪ್ರಸಾದ್!

    ಸಿಎಂ ಸೋಲಿಸಲು ಎಲ್‍ಡಿಎನ್, ಜಿಎಲ್‍ಡಿಎನ್ ತಂತ್ರ ಹೆಣೆದ ಶ್ರೀನಿವಾಸ ಪ್ರಸಾದ್!

    ಮೈಸೂರು: ನಂಜನಗೂಡು ಉಪಚುನಾವಣೆಯಲ್ಲಿ ಆಗಿರುವ ಸೋಲಿಗೆ ಸಿಎಂ ವಿರುದ್ಧ ಪ್ರತೀಕಾರವನ್ನು ತೀರಿಸಿಕೊಳ್ಳಲು ಮಾಜಿ ಸಚಿವ ಶ್ರೀನಿವಾಸಪ್ರಸಾದ್ ಚಾಮುಂಡೇಶ್ವರಿಯಲ್ಲಿ ಎಲ್‍ಡಿಎನ್ ಮತ್ತು ವರುಣಾ ಕ್ಷೇತ್ರದಲ್ಲಿ ಜಿಎಲ್‍ಡಿಎನ್ ತಂತ್ರವನ್ನು ಹೆಣೆದಿದ್ದಾರೆ.

    ಬಿಜೆಪಿಯ ಗೆಲುವಿಗೆ ವರುಣಾದಲ್ಲಿ ಲಿಂಗಾಯತ, ದಲಿತ, ನಾಯಕ(ಎಲ್‍ಡಿಎನ್) ಮತಗಳನ್ನು ಕ್ರೋಢೀಕರಿಸುವುದು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗ, ಲಿಂಗಾಯತ, ದಲಿತ, ನಾಯಕ(ಜಿಎಲ್‍ಡಿಎನ್) ಮತಗಳನ್ನು ಕ್ರೋಢೀಕರಿಸಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಇದೇ ವಿಚಾರವಾಗಿ ಲಿಂಗಾಯತ ಮತ್ತು ವೀರಶೈವರ ಮತಗಳನ್ನು ಸೆಳೆಯಲು ಸುತ್ತೂರು ಮಠದ ಸ್ವಾಮಿಗಳ ಜೊತೆ ಶ್ರೀನಿವಾಸ್ ಪ್ರಸಾದ್ ನಿನ್ನೆ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆಯನ್ನು ನಡೆಸಿದ್ದಾರೆ.

    ವರುಣಾ ಕ್ಷೇತ್ರದಲ್ಲಿ 60,000 ಲಿಂಗಾಯತರು, 42,000 ಪರಿಶಿಷ್ಠ ಜಾತಿ, 24,000 ಪರಿಶಿಷ್ಠ ಪಂಗಡ, 33,000 ಕುರುಬರು ಹಾಗೂ 13,000 ಒಕ್ಕಲಿಗ ಮತಗಳಿವೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೆಚ್ಚು ಒಕ್ಕಲಿಗರ ಮತಗಳಿದ್ದು ನಂತರದ ಸ್ಥಾನದಲ್ಲಿ ಕುರುಬ, ನಾಯಕ, ಲಿಂಗಾಯತ ಮತ್ತು ದಲಿತ ಮತಗಳಿವೆ.

    2013ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಕೆಜೆಪಿಯ ಕಾಪು ಸಿದ್ದಲಿಂಗಸ್ವಾಮಿ ಅವರನ್ನು 29,641 ಮತಗಳ ಅಂತರದಿಂದ ಸೋಲಿಸಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ ನ ಜಿಟಿ ದೇವೇಗೌಡ ಅವರು ಕಾಂಗ್ರೆಸ್‍ನ ಎಂ ಸತ್ಯನಾರಾಯಣ ಅವರನ್ನು 7,103 ಮತಗಳಿಂದ ಸೋಲಿಸಿದ್ದರು.

  • ಕೇಂದ್ರದ ಅನುದಾನ ಬಳಕೆಯಾಗಿಲ್ಲ- ಅಮಿತ್ ಶಾ ಹೇಳಿಕೆಗೆ ಸಿಎಂ ಟಾಂಗ್

    ಕೇಂದ್ರದ ಅನುದಾನ ಬಳಕೆಯಾಗಿಲ್ಲ- ಅಮಿತ್ ಶಾ ಹೇಳಿಕೆಗೆ ಸಿಎಂ ಟಾಂಗ್

    ಹಾಸನ: ಕೇಂದ್ರದ ಅನುದಾನ ಬಳಕೆಯಾಗಿಲ್ಲ ಅಂತ ಹೇಳುವ ಮೂಲಕ ಬಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

    ಶ್ರವಣಬೆಳಗೊಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರದ್ದು ಒಂದು ರೀತಿಯ ಹಿಟ್ ಆಂಡ್ ರನ್ ಕೇಸ್. ಅವರದು ಒಂದು ರೀತಿಯ ಹಿಟ್ ಅಂಡ್ ಕೇಸ್. ಭಿಕ್ಷೆ ಕೊಟ್ಟವರ ಹಾಗೆ ಮಾತನಾಡಬಾರದು. ಅದು ಕೇಂದ್ರದ ಹಣ ಅಲ್ಲ, ನಮ್ಮ ತೆರಿಗೆ ಹಣ ಅಂತ ಹೇಳಿದ್ರು.

    5 ವರ್ಷದಲ್ಲಿ 1.86 ಸಾವಿರ ಕೋಟಿ ಕೊಡಬೇಕು. 3 ವರ್ಷದಲ್ಲಿ 95 ಸಾವಿರ ಕೋಟಿ ಬರಬೇಕು. ತೆರಿಗೆ ಸಂಗ್ರಹ ಕಡಿಮೆಯಾದ್ರೆ ನಮಗೂ ಕಡಿಮೆ ಮಾಡುತ್ತಾರೆ. ಕೇಂದ್ರದವರು ಎಲ್ಲಾ ತೆರಿಗೆ ಸಂಗ್ರಹ ಮಾಡೋರು. ಅದರಲ್ಲಿ ನಮಗೆ ಪಾಲು ಕೊಡಬೇಕು. ಮೂರು ವರ್ಷಗಳಲ್ಲಿ 11 ಸಾವಿರ ಕೋಟಿ ಕಡಿಮೆಯಾಗಿದೆ. 14 ನೇ ಹಣಕಾಸು ಆಯೋಗ ನಿಗದಿ ಮಾಡೋದು ನಮ್ಮಪಾಲಿನ ಹಣ. ಯಾವ ಅನುದಾನ ಖರ್ಚುಮಾಡಿಲ್ಲ ಎಂಬುದನ್ನು ಹೇಳಲಿ. ಷಾ ಸರಿಯಾಗಿ ತಿಳಿದು ಮಾತಾಡಲಿ ಎಂದು ತಿರುಗೇಟು ನೀಡಿದ್ರು.

    ಇದನ್ನೂ ಓದಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಎರಡೂವರೆ ಲಕ್ಷ ಕೋಟಿ ರೂ. ಅನುದಾನ ಏನಾಯ್ತು: ಸಿದ್ದರಾಮಯ್ಯಗೆ ಅಮಿತ್ ಶಾ ಪ್ರಶ್ನೆ

    ಇದೇ ಸಂದರ್ಭದಲ್ಲಿ ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಕಾಯ್ದೆ ತಿದ್ದುಪಡಿ ಬಗ್ಗೆ ಈಗಾಗಲೇ ಅಧಿವೇಶನದಲ್ಲಿ ಚರ್ಚೆಯಾಗಿದೆ. ಇನ್ನೂ ಕಾನೂನು ಮಾಡಿಲ್ಲ. ಬಡವರಿಗೆ ತೊಂದರೆಯಾಗದಂತೆ ನಿಯಂತ್ರಣ ಮಾಡಲು ನಾವು ಚಿಂತಿಸಿದ್ದೇವೆ. ಮತ್ತೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ಸಹಕಾರ ಬ್ಯಾಂಕ್ ಗಳ ಸಾಲ ಮನ್ನಾ ಒಂದೂವರೆ ಸಾವಿರ ಕೋಟಿ ಅಪೆಕ್ಸ್ ಬ್ಯಾಂಕ್‍ಗೆ ನೀಡಿದ್ದೇವೆ ಅಂದ್ರು.

    ಇದನ್ನೂ ಓದಿ: ಅಮಿತ್ ಶಾ ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದನ್ನು ಹೇಳಿಕೊಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

    ಶ್ರೀನಿವಾಸ್ ಪ್ರಸಾದ್ ಟೀಕೆಗೆ ಉತ್ತರಿಸಿದ ಅವರು, ಅವರ ಆರೋಪದಲ್ಲಿ ಹುರುಳಿಲ್ಲ. ರಾಜ್ಯಾದ್ಯಂತ ಕಾಂಗ್ರೆಸ್ ಜೆಡಿಎಸ್ ವಿರುದ್ಧವೂ ಹೋರಾಡುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪಗೆ ಸಂಸ್ಕೃತಿ ಇಲ್ಲ. ಜೈಲಿಗೆ ಹೋಗಿ ಬಂದಿದ್ದಾರೆ. ಅಧಿಕಾರ ಇಲ್ಲದ ಕಾರಣಕ್ಕೇ ಏನೆನೋ ಮಾತನಾಡುತ್ತಾರೆ ಎಂದು ಸಿಎಂ ಟೀಕೆ ಮಾಡಿದ್ರು.

    ಇದನ್ನೂ ಓದಿ: ಬಿಜೆಪಿ ಪರಿವರ್ತನಾ ರ‍್ಯಾಲಿಗೆ ಗೈರಾಗಿದ್ದ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದ್ದೇನು?

    https://www.youtube.com/watch?v=CTEKv_DPy30

  • ನಂಜನಗೂಡಿನಲ್ಲಿ ಕಾಂಗ್ರೆಸ್‍ಗೆ ‘ಪ್ರಸಾದ’

    ನಂಜನಗೂಡಿನಲ್ಲಿ ಕಾಂಗ್ರೆಸ್‍ಗೆ ‘ಪ್ರಸಾದ’

    ಮೈಸೂರು: ಪ್ರತಿಷ್ಠೆಯ ಕಣವಾಗಿದ್ದ ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್‍ನ ಕಳಲೆ ಕೇಶವಮೂರ್ತಿ 21,334 ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿಜಯದ ನಗೆ ಬೀರಿದ್ದಾರೆ.

    ಕಳಲೆ ಕೇಶವಮೂರ್ತಿ ಅವರಿಗೆ 86,212 ಮತಗಳು ಸಿಕ್ಕಿದ್ದರೆ ಬಿಜೆಪಿಯ ವಿ.ಶ್ರೀನಿವಾಸ್ ಪ್ರಸಾದ್‍ಗೆ 64,878 ಮತಗಳು ಲಭಿಸಿವೆ. 1,665 ನೋಟ ಮತಗಳು ಬಿದ್ದಿವೆ.

    ಆರಂಭಿಕ ಹಂತದಿಂದಲೂ ಮುನ್ನಡೆ ಸಾಧಿಸಿಕೊಂಡು ಬಂದಿದ್ದ ಕಳಲೆ ಕೇಶವಮೂರ್ತಿ ಅಂತಿಮವಾಗಿ 2013ರ ಸೋಲಿಗೆ ಸೇಡು ತೀರಿಸಿಕೊಂಡರು.

    2013 ರ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಶ್ರೀನಿವಾಸ ಪ್ರಸಾದ್ 50, 784 ಮತಗಳನ್ನು ಗಳಿಸಿದ್ದರೆ, ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಕಳಲೆ ಕೇಶವಮೂರ್ತಿ 41,843 ಮತಗಳನ್ನು ಪಡೆದಿದ್ದರು.

    ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಶ್ರೀನಿವಾಸಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಜೆಡಿಎಸ್‍ನಲ್ಲಿದ್ದ ಕಳಲೆ ಕೇಶವಮೂರ್ತಿ ಜೆಡಿಎಸ್‍ಗೆ ರಾಜೀನಾಮೆ ನೀಡಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು. ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ಪರೋಕ್ಷವಾಗಿ ಕಳಲೆ ಗೆಲುವಿಗೆ ಕಾರಣವಾಗಿದೆ.

  • ಮುಗೀತು ಪ್ರತಿಷ್ಠೆಯ ಬೈ ಎಲೆಕ್ಷನ್ : ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

    ಮುಗೀತು ಪ್ರತಿಷ್ಠೆಯ ಬೈ ಎಲೆಕ್ಷನ್ : ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

    – ಏಪ್ರಿಲ್ 13ಕ್ಕೆ ಹೊರ ಬೀಳಲಿದೆ ಫಲಿತಾಂಶ
    – ನಂಜನಗೂಡಿನಲ್ಲಿ ಶಾಂತಯುತ, ಗುಂಡ್ಲುಪೇಟೆಯಲ್ಲಿ ಘರ್ಷಣೆ, ಲಾಠಿಚಾರ್ಜ್

    ಬೆಂಗಳೂರು: ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಖಾರವಾಗಿ ಮತದಾನ ಅಂತ್ಯವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತ ಮಧ್ಯೆ ಘರ್ಷಣೆ, ಪೊಲೀಸರು ಲಾಠಿಚಾರ್ಜ್ ಜೊತೆಗೆ ಗುಡುಗು ಸಹಿತವಾಗಿ ಮಳೆರಾಯನೂ ಬಂದಿದ್ದ. ಇನ್ನು, ಓಟ್ ಮಾಡಿದ ಬಳಿಕ ವೃದ್ಧೆಯೊಬ್ರು ಪ್ರಾಣಬಿಟ್ಟ ಘಟನೆಯೂ ನಡೀತು. ಇದೆಲ್ಲದ ಮಧ್ಯೆ, ಶೇಕಡಾ 78ರಷ್ಟು ಮತದಾನವಾಗಿದೆ.

    ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಕೆಂಡಕಾರಿ ಕಮಲ ಸೇರಿದ್ದ ಶ್ರೀನಿವಾಸ್ ಪ್ರಸಾದ್ ಹಾಗೂ ಸ್ನೇಹಿತನೇ ಸವಾಲು ಹಾಕಿದ ಕಾರಣ ಪ್ರತಿಷ್ಠೆಯಾಗಿ ಸ್ವೀಕರಿಸಿದ ಸಿದ್ದರಾಮಯ್ಯ ಮಧ್ಯೆ ನಂಜನಗೂಡು ಭಾರೀ ಕುತೂಹಲ ಕೆರಳಿಸಿದೆ. ಇವತ್ತಿನ ಚುನಾವಣೆಯೂ ಗಮ್ಯತೆಯನ್ನ ಉಳಿಸಿಕೊಂಡಿದೆ. ಯಾಕಂದ್ರೆ, ಶಾಂತಿಯುತವಾಗಿ ನಡೆದಿರುವ ಮತದಾನದಲ್ಲಿ ಜನ ಉತ್ಸಾಹದಿಂದ ಓಟ್ ಮಾಡಿದ್ದಾರೆ. ನಂಜನಗೂಡಿನಲ್ಲಿ ಶೇ.76ರಷ್ಟು ಮತದಾನವಾಗಿದೆ.

    ಮಾಜಿ ಸಚಿವ ಮಹದೇವ್‍ಪ್ರಸಾದ್ ಅಕಾಲಿಕ ನಿಧನದಿಂದ ತೆರವಾಗಿದ್ದ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶೇ.78ರಷ್ಟು ಮತದಾನವಾಗಿದೆ. ಒಂದಷ್ಟು ಗಲಾಟೆ, ಗೊಂದಲ ಹಾಗೂ ಗುಡುಗು ಸಹಿತ ಮಳೆಯಿಂದ ಕೆಲಹೊತ್ತು ಮತದಾನ ವಿಳಂಬವಾಗಿತ್ತು. ಆದ್ರೆ, ಮತದಾನ ಪ್ರಮಾಣ ಹೆಚ್ಚಾಗಿರೋದ್ರಿಂದ ಸೋಲು ಗೆಲುವಿನ ಲೆಕ್ಕಾಚಾರ ಕೂಡ ಭರ್ಜರಿಯಾಗಿ ನಡೀತಿದೆ. ಕಾಂಗ್ರೆಸ್ ಅನುಕಂಪದ ಆಧಾರದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ರೆ, ಬಿಜೆಪಿನೂ ಗೆಲುವಿನ ಭರವಸೆಯಲ್ಲಿದೆ.

    ಗುಂಡ್ಲುಪೇಟೆಯ ಜನರ ಜೊತೆ ಅಭ್ಯರ್ಥಿಗಳು ಹಾಗೂ ಜನಪ್ರತಿನಿಧಿಗಳು ಸಹ ಹಕ್ಕು ಚಲಾಯಿಸಿದ್ರು. ಹಾಲಹಳ್ಳಿಯಲ್ಲಿ ಪತಿಯ ಸಮಾಧಿಗೆ ಪೂಜೆ ಮಾಡಿದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹ ದೇವಪ್ರಸಾದ್ ಮತದಾನ ಮಾಡಿದ್ರು. ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಕುಟುಂಬ ಸಮೇತ ಚೌಡಳ್ಳಿಯಲ್ಲಿ ಹಕ್ಕು ಚಲಾಯಿಸಿದ್ರು. ಬಳಿಕ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ರು.

    ಕೇತ್ರದ ಬೇಗೂರಿನಲ್ಲಿ ಬೆಳಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೀತು. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕೈ-ಕೈ ಮಿಲಾಯಿಸಿದ್ರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ರು. ಇದ್ರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ರು. ಇದರ ಮಧ್ಯೆ, ಕಂದೇಗಾಲ ಬೂತ್‍ನಲ್ಲಿ ಎರಡು ಗಂಟೆ ಮತದಾನ ಸ್ಥಗಿತಗೊಂಡ್ತು.

    ರಾಘವಪುರ, ಮಡಹಳ್ಳಿ, ತೆಕಣಾಂಬಿ, ಭೀಮನಬೀಡು ಸೇರಿದಂತೆ ಹಲವು ಮತದಾನ ಕೇಂದ್ರದಲ್ಲಿ ಮತಯಂತ್ರಗಳು ಕೈಕೊಟ್ಟಿದ್ವು. ಕೆಲವೆಡೆ ಮತಯಂತ್ರಗಳನ್ನ ಬದಲಿಸಲಾಯ್ತು. ಇನ್ನೊಂದೆಡೆ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಮಹದೇವಪ್ರಸಾದ್ ನಗರದ ಮತದಾರರು ಮತ ಚಲಾವಣೆ ಮಾಡೋಕೆ ಹೆಚ್ಚಾಗಿ ಬರಲೇ ಇಲ್ಲ. ಈ ಮಧ್ಯೆ ಹಂಗಳ ಗ್ರಾಮದಲ್ಲಿ ಮತದಾನ ಮಾಡಿ ಮನೆಗೆ ಹೋದ 80 ವರ್ಷದ ವೃದ್ಧೆ ದೇವಮ್ಮ ಅನ್ನೋರು ಇಹಲೋಕ ತ್ಯಜಿಸಿದ್ದಾರೆ.

    ಅಂತ್ಯವಾಯ್ತು ಪ್ರತಿಷ್ಠೆಯ ಕಣದ ಎಲೆಕ್ಷನ್
    ಇಡೀ ರಾಜ್ಯ ಸರ್ಕಾರವೇ ಅಖಾಡದಲ್ಲಿ ಜಿದ್ದಿಗೆ ಬಿದ್ದಿತ್ತು. ಬಿಜೆಪಿಗೂ ಗೆಲ್ಲಲೇಬೇಕೆಂಬ ಹಠ. ಹೀಗಾಗಿ ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿಂದೆಂದೂ ಕಂಡಿರದ ಪ್ರತಿಷ್ಠೆಯ ಕಣ. ಕೊನೆಗೂ ಎರಡೂ ಕ್ಷೇತ್ರಗಳಲ್ಲಿ ಇಂದು ಮತದಾನ ನಡೀತು. ಅದ್ರಲ್ಲೂ ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಮಧ್ಯೆ ಸ್ವಾಭಿಮಾನದ ಸಂಘರ್ಷ ಏರ್ಪಟ್ಟಿರೋ ನಂಜನಗೂಡಿನಲ್ಲಿ ಶಾಂತಯುತ ಮತದಾನವಾಗಿದೆ.

    ಸುಡು ಬಿಸಿಲನ್ನು ಲೆಕ್ಕಿಸದೇ ಜನರು ಬೆಳಗ್ಗೆ 7ರಿಂದ ಸಂಜೆ 5 ಗಂಟೆ ತನಕ ಹಕ್ಕು ಚಲಾಯಿಸಿದ್ರು. ಜನರ ಜೊತೆ ಸರತಿನಲ್ಲಿ ನಿಂತ ನಂಜನಗೂಡಿನ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಸ್ವಗ್ರಾಮ ಕಳಲೆಯಲ್ಲಿ ಮತ ಹಾಕಿದ್ರು. ಮತದಾನ ಮಾಡುವಾಗ ಪಕ್ಷದ ಚಿಹ್ನೆ ಹಾಕಿಕೊಳ್ಳೋದಕ್ಕೆ ಅವಕಾಶ ಇಲ್ಲದಿದ್ರೂ ಕೇಶವಮೂರ್ತಿ ಕಾಂಗ್ರೆಸ್ ಶಾಲು ಧರಿಸಿದ್ರು.

    ನಂಜನಗೂಡಿನಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿದ್ರೂ ಒಂದಷ್ಟು ಗೊಂದಲ, ಗದ್ದಲ ಗಲಾಟೆನೂ ಇತ್ತು. ಅಶೋಕಪುರದ ಮತಗಟ್ಟೆಯಲ್ಲಿ ಕೈ ಹಾಗೂ ಕಮಲ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೀತು. ಮತಗಟ್ಟೆ 49ರಲ್ಲಿ ಎಡಗೈ ಬದಲಿಗೆ ಬಲಗೈ ತೋರುಬೆರಳಿಗೆ ಶಾಹಿ ಹಾಕಿದ್ದು ವಿವಾದವಾಯ್ತು. ಇನ್ನೊಂದೆಡೆ, ಗೋಳೂರು ಗ್ರಾಮದಲ್ಲಿ ಮತದಾನಕ್ಕೆ ಬಂದಿದ್ದ 84 ವರ್ಷದ ವೃದ್ಧೆ ನಂಜಮ್ಮ ಹೆಸರು ಇಲ್ಲದ ಕಾರಣ ವಾಪಸ್ ಹೋದ್ರು. ಈ ಮಧ್ಯೆ, ಮಹದೇವನಗರದ ನಿವಾಸಿಗಳು ಅವೈಜ್ಞಾನಿಕವಾಗಿ ಚರಂಡಿ ಕಟ್ಟಿದ್ದನ್ನ ವಿರೋಧಿಸಿ ಮತದಾನವನ್ನೇ ಬಹಿಷ್ಕಾರ ಮಾಡಿದ್ದರು.

    ಇನ್ನು, ಸಿಎಂ ಆಪ್ತ ಮರೀಗೌಡ ನಂಜನಗೂಡಿನಲ್ಲಿ ಆಯೋಗದ ಆದೇಶವನ್ನ ಉಲ್ಲಂಘಿಸಿದ್ದಾರೆ. ಮತದಾರರನ್ನ ಹೊರತುಪಡಿಸಿ ಬೇರೆಯವ್ರು ಕ್ಷೇತ್ರ ಬಿಡುವಂತೆ ಆಯೋಗ ಆದೇಶ ಮಾಡಿದ್ದರೂ ಮತದಾರರಲ್ಲದ ಮರೀಗೌಡ ಮಾತ್ರ ಲಿಂಗಣ್ಣ ಸರ್ಕಲ್ ಬಳಿ ಆಪ್ತರ ಜೊತೆ ಸುತ್ತಾಡ್ತಿದ್ರು. ಇದರ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಕೊಟ್ಟಿದೆ.

    110 ವರ್ಷದ ದೇವಮ್ಮ ಅವರು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಮುಕ್ಕದ ಹಳ್ಳಿಯಲ್ಲಿ ಮತದಾನ ಮಾಡಿದರು.

     

     

     

     

    https://www.youtube.com/watch?v=kT2SaM719II

  • ಮೋದಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಗೆ ಶೇವಿಂಗ್ ಕತ್ತಿ ಕೊಟ್ಟಂಗಾಗಿದೆ: ಸಿಎಂ ಇಬ್ರಾಹಿಂ ಲೇವಡಿ

    ಮೋದಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಗೆ ಶೇವಿಂಗ್ ಕತ್ತಿ ಕೊಟ್ಟಂಗಾಗಿದೆ: ಸಿಎಂ ಇಬ್ರಾಹಿಂ ಲೇವಡಿ

    ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಯಲ್ಲಿ ಕತ್ತಿ ಕೊಟ್ಟು ಶೇವಿಂಗ್ ಕೂತಂಗೆ ಆಗಿದೆ. ಮೋದಿ ಕತ್ತಿಯನ್ನು ಕುತ್ತಿಗೆಗೆ ಹಿಡಿತಾನೋ ಅಥವಾ ಗಡ್ಡಕ್ಕೆ ಹಿಡಿಯುತ್ತಾನೋ ಅಂತಾನೇ ಗೊತ್ತಾಗ್ತಾ ಇಲ್ಲ ಅಂತಾ ರಾಜ್ಯ ಯೋಜನಾ ಆಯೋಗದ ಅಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

    ಇಂದು ಗುಂಡ್ಲುಪೇಟೆಯಲ್ಲಿ ನಡೆದ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಇಬ್ರಾಹಿಂ, 500 ರೂ. ಹಾಗೂ 1000ರೂ. ನೋಟುಗಳನ್ನು ತೆಗೆದೇ ಬಿಟ್ಟ. ಜನಕ್ಕೆ ಒಂದು ಖುಷಿ. ಸವತಿ ಗಂಡ ಸತ್ತ ಅಂತಾ ಇವ್ಳು ಖುಷಿಯಾದ್ಳು. ಒರಿಜನಲ್ ಇವನೇ ಸತ್ತಾಂತ ಆಮೇಲೆ ಗೊತ್ತಾಯ್ತು. ಯಾವ ವ್ಯಾಪಾರ ನಡೀತಾ ಇಲ್ಲ. ಜಮೀನು ಖರೀದಿ ಇಲ್ಲ. ಸಬ್ ರಿಜಿಸ್ಟಾರ್ ಆಫೀಸ್‍ಗೆ ಜನಬರುತ್ತಿಲ್ಲ. ಲೇವಾದೇವಿ ಇಲ್ಲ. ದುಡ್ಡಿಲ್ಲದೇ ಜನ ಕಂಗಾಲಾಗಿದ್ರು. ಒಂದೊಂದು ತಿಂಗಳು ಸಾವಿರಾರು ಜನ ಬ್ಯಾಂಕ್ ಎದುರು ಲೈನಾಗಿ ನಿಲ್ತಿದ್ದರು ಅಂತಾ ಮೋದಿ ನೋಟ್ ಬ್ಯಾನ್ ವಿಚಾರದಲ್ಲಿ ವ್ಯಂಗ್ಯವಾಡಿದ್ರು.

    ಮಂತ್ರಿ ಪಟ್ಟ ಕೊಟ್ಟಿಲ್ಲ ಅಂತಾ ರಾಜೀನಾಮೆ ಕೊಟ್ರು. ಇದು ಯಾವ ಪ್ರತಿಷ್ಠೆಗೆ? ಶೂನ್ಯ ಸಿಂಹಾಸನದವನು ನಾನು ಇಲ್ವ. ಹಂಗೆಲ್ಲಾ ನೋಡಕೋದ್ರೆ ನಿಮ್ಮ ಪೋಸ್ಟರ್‍ಗಳಲ್ಲಿ ನಮ್ಮ ಹೆಸರಿಲ್ಲ. ಇದೀಗ ನಾವು ಯಾಕ್ ಬಂದ್ವಿ ಇಲ್ಲಿಗೆ. ಎನಗಿಂತ ಕಿರಿಯನಿಲ್ಲ. ಹಿರಿಯರಿಗಿಂತ ನಾ ಮೇಲಿಲ್ಲ. ಸದಾ ಶರಣರ ಪಾದದ ಧೂಳಾಗಿ ದುಡಿಯಬೇಕು ಕೂಡಲಸಂಗದೇವ ಎಂದು ವಚನವನ್ನು ಉದಾಹರಿಸಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರಿಗೆ ಮಂತ್ರಿಯಾಗೋ ಕನಸು ಕಾಣುವ ಮೊದಲು ಸುತ್ತೂರು ಮಠದಲ್ಲಿ ಒಂದು ವರ್ಷ ಇದ್ದು ತರಬೇತಿ ತಗೋಳ್ತಿದ್ರೆ ಉತ್ತಮವಾಗುತ್ತಿತ್ತು ಅಂತಾ ಹೇಳಿ ಟಾಂಗ್ ನೀಡಿದ್ರು.

    ಉಪಚುನಾವಣೆಗೆ ಪರಿಣಾಮ ಆಗಲ್ಲ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಗೆ ಪಂಚರಾಜ್ಯ ಫಲಿತಾಂಶದ ಪ್ರಭಾವ ಬೀರುವುದಿಲ್ಲ. ಯು.ಪಿಯಲ್ಲಿ ಮಳೆ ಬಂದರೆ ಕರ್ನಾಟಕದಲ್ಲಿ ಛತ್ರಿ ಹಿಡಿದುಕೊಳ್ಳಲು ಸಾಧ್ಯವಿಲ್ಲ. ಇಲ್ಲಿ ಮಳೆ ಬಂದರೆ ಮಾತ್ರ ಛತ್ರಿ ಹಿಡಿದುಕೊಳ್ಳಲು ಸಾಧ್ಯ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಬಿಜೆಪಿ ಅವರು ಬರಿ ಸುಳ್ಳನ್ನೇ ಗುಸು ಗುಸು ಎನ್ನುತ್ತಾರೆ. ಅವರಿಗೆ ಆರ್‍ಎಸ್‍ಎಸ್ ಸುಳ್ಳು ಗುಸುಗುಟ್ಟುವ ಟ್ರೈನಿಂಗ್ ನೀಡಿದೆ. ನಾವು ಏನ್ ಕೆಲಸ ಮಾಡಿದ್ದೀವಿ ಎನ್ನುವುದನ್ನು 15 ರಂದು ಮಂಡಿಸುವ ಬಜೆಟ್ ನಲ್ಲಿ ನೋಡಿ. ಬಿಜೆಪಿ ಅವರು ಬರಿ ಸುಳ್ಳು ಮತ್ತು ಆರೋಪ ಮಾಡುತ್ತಾ ಓಡಾಡ್ತಾ ಇದ್ದಾರೆ. ಯಡಿಯೂರಪ್ಪ ಅಧಿಕಾರದಲ್ಲಿ ಇದ್ದಾಗ ಸಂಧ್ಯಾ ಸುರಕ್ಷಾ, ಸೈಕಲ್ ಕೊಟ್ಟಿದ್ದು ಅದನ್ನು ಬಿಟ್ಟರೆ ಸೀರೆ ವಿತರಣೆ ಮಾಡಿದ್ದು ಬಿಟ್ಟರೆ ಬಿಟ್ಟರೆ ಬೇರೆ ಯಾವ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಅವರು ಮಾಡಿಲ್ಲ ಅಂತಾ ಸಿಎಂ ಬಿಜೆಪಿ ವಿರುದ್ಧ ಕಿಡಿಕಾರಿದ್ರು.

    ಇದನ್ನೂ ಓದಿ:  ರೋಡ್ ಶೋನಲ್ಲಿ ಭಾಗವಹಿಸಲು ಬಂದಿದ್ದ ಕೈ ಕಾರ್ಯಕರ್ತರಿಗೆ ಪೆಟ್ರೋಲ್ ಭಾಗ್ಯ!