Tag: ಶ್ರೀರಾಂಪುರ ಪೊಲೀಸ್ ಠಾಣೆ

  • ಕತ್ತು ಕೊಯ್ದು ಹತ್ಯೆ ಕೇಸ್ – ಮಿಷನ್ ಯಾಮಿನಿ ಪ್ರಿಯಾ ಅಂತ ವಾಟ್ಸಪ್ ಗ್ರೂಪ್ ಮಾಡಿದ್ದ ಕಿಲ್ಲರ್

    ಕತ್ತು ಕೊಯ್ದು ಹತ್ಯೆ ಕೇಸ್ – ಮಿಷನ್ ಯಾಮಿನಿ ಪ್ರಿಯಾ ಅಂತ ವಾಟ್ಸಪ್ ಗ್ರೂಪ್ ಮಾಡಿದ್ದ ಕಿಲ್ಲರ್

    ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ಹತ್ಯೆಗೆ ಸಂಚು ಹಾಕಲು ಮಿಷನ್ ಯಾಮಿನಿ ಪ್ರಿಯಾ ಅಂತ ವಾಟ್ಸಪ್ ಗ್ರೂಪ್ ಮಾಡಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

    ಪ್ರಕರಣ ಸಂಬಂಧ ಶ್ರೀರಾಂಪುರ ಪೊಲೀಸರು (Shrirampur Police) ತನಿಖೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಮಿಷನ್ ಯಾಮಿನಿ ಪ್ರಿಯಾ ಎಂದು ವಾಟ್ಸಪ್ ಗ್ರೂಪ್ ಕ್ರಿಯೆಟ್ ಮಾಡಿ, ಈ ಮೂಲಕ ಹತ್ಯೆಗೆ ಪ್ಲ್ಯಾನ್‌ ಮಾಡಿರುವುದಾಗಿ ಗೊತ್ತಾಗಿದೆ. ಈ ಗ್ರೂಪ್‌ನಲ್ಲಿ ನಾಲ್ಕು ಜನರಿದ್ದು, ತನ್ನ ಪ್ರೇಯಸಿ ಎಲ್ಲಿಗೆ ಹೋಗ್ತಾಳೆ? ಯಾರ ಜೊತೆ ಮಾತನಾಡುತ್ತಾಳೆ? ಎಂದು ಡಿಟೇಲ್ಸ್ ಪಡಯುವ ಸಲುವಾಗಿ ಈ ಗ್ರೂಪ್ ಮಾಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ಪ್ರೇಯಸಿ ಕೊಲೆಗೈದ ಪಾಗಲ್‌ ಪ್ರೇಮಿಗಾಗಿ ಹುಡುಕಾಟ; ತಮಿಳುನಾಡಿಗೆ ಎಸ್ಕೇಪ್‌ ಆಗಿರೋ ಶಂಕೆ

    ಬಲವಂತವಾಗಿ ಮಾಂಗಲ್ಯ ಕಟ್ಟಿದ್ನಂತೆ
    ಮೃತ ಯುವತಿಗೆ ಬಲವಂತವಾಗಿ ಮಾಂಗಲ್ಯ ಕೂಡ ಕಟ್ಟಿದ್ದನಂತೆ. ಈ ವಿಚಾರ ಮನೆಯಲ್ಲಿ ತಿಳಿಸಿದ್ರೆ ಕೊಲೆ ಮಾಡ್ತೇನೆ ಎಂದು ಬೆದರಿಸಿದ್ದನಂತೆ. ಇನ್ನೂ ಇಬ್ಬರು ಒಂದೇ ಏರಿಯಾದವರಾಗಿದ್ದು, ಆಕೆಯ ಪೋಷಕರಿಗೆ ಹೆಣ್ಣು ಕೇಳಿದ್ದನಂತೆ, ಆದರೆ ಅವರು ನಿರಾಕರಿಸಿದ್ದರು. ಬಳಿಕ ಒಂದು ಸಾರಿ ಗಲಾಟೆ ಮಾಡಿದಾಗ ಆತನ ವಿರುದ್ಧ ಯಾಮಿನಿ ಪೋಷಕರು ದೂರು ಕೊಟ್ಟಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

    ಕೊಲೆ ಬಳಿಕ ಆರೋಪಿ ವಿಘ್ನೇಶ್ ತಮಿಳುನಾಡಿಗೆ ಪರಾರಿಯಾಗಿದ್ದ ಎಂದು ಶಂಕೆ ವ್ಯಕ್ತವಾಗಿತ್ತು. ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ ಮಾಡಿ ಹುಡುಕಾಟ ನಡೆಸಿದ್ದು, ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

    ಏನಿದು ಪ್ರಕರಣ?
    ಗುರುವಾರ (ಅ.16) ಮಧ್ಯಾಹ್ನ ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ವಿಘ್ನೇಶ್ ಶ್ರೀರಾಂಪುರ ರೈಲ್ವೇ ನಿಲ್ದಾಣದ ಬಳಿ ಹತ್ಯೆ ಮಾಡಿ ತಾನು ಬಳಸುತ್ತಿದ್ದ ಮೊಬೈಲ್ ಎಸೆದು ಎಸ್ಕೇಪ್ ಆಗಿದ್ದ. ಬಳಿಕ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಬೆಂಗಳೂರಿನ ಎಂಜಿನಿಯರಿಂಗ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿ ಮೇಲೆ ರೇಪ್‌ – ಕೃತ್ಯ ಎಸಗಿ ಮಾತ್ರೆ ಕೊಡ್ಬೇಕಾ ಎಂದಿದ್ದ ಆರೋಪಿ

  • ಪ್ರೇಯಸಿ ಕೊಲೆಗೈದ ಪಾಗಲ್‌ ಪ್ರೇಮಿಗಾಗಿ ಹುಡುಕಾಟ; ತಮಿಳುನಾಡಿಗೆ ಎಸ್ಕೇಪ್‌ ಆಗಿರೋ ಶಂಕೆ

    ಪ್ರೇಯಸಿ ಕೊಲೆಗೈದ ಪಾಗಲ್‌ ಪ್ರೇಮಿಗಾಗಿ ಹುಡುಕಾಟ; ತಮಿಳುನಾಡಿಗೆ ಎಸ್ಕೇಪ್‌ ಆಗಿರೋ ಶಂಕೆ

    ಬೆಂಗಳೂರು: ಪ್ರೇಯಸಿಯನ್ನ‌ ಭೀಕರವಾಗಿ ಹತ್ಯೆ (Lover Killed) ಮಾಡಿ ತಲೆಮರಿಸಿಕೊಂಡಿರೋ ಹಂತಕನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

    ಯುವತಿ ಪ್ರೀತಿ‌ ನಿರಾಕಿಸಿದ್ದಕ್ಕೆ ಆರೋಪಿ ವಿಘ್ನೇಶ್ ಶ್ರೀರಾಂಪುರ ರೈಲ್ವೇ ನಿಲ್ದಾಣದ ಬಳಿ ಹತ್ಯೆ ಮಾಡಿ ತಾನು ಬಳಸುತ್ತಿದ್ದ ಮೊಬೈಲ್ ಎಸೆದು ಎಸ್ಕೇಪ್ ಆಗಿದ್ದಾನೆ. ನೆನ್ನೆ ಮಧ್ಯಾಹ್ನ ನಡೆದ ಕೊಲೆ ಪ್ರಕರಣದ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ (Srirampura Police Station) ಮೊಕದ್ದಮೆ ಸಂಖ್ಯೆ 144/2025, ಕಲಂ 103 ಕ್ಲಾಸ್-1 ಬಿಎನ್‌ಎಸ್‌ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ತನಿಖೆ (Investigation) ಕೈಗೊಂಡಿರುವ ಪೊಲೀಸರು ಆರೋಪಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ. ಇತ್ತ ಮೃತಳ ಶವವು ವಿಕ್ಟೋರಿಯಾ ಆಸ್ಪತ್ರೆಯಲ್ಲಿದೆ. ಇಂದು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಂಬಂಧಿಕರಿಗೆ ಹಸ್ತಾಂತರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

    ತಮಿಳುನಾಡಿಗೆ ಎಸ್ಕೇಪ್‌ ಆಗಿದ್ದಾನಾ ಹಂತಕ?
    ಇನ್ನೂ ತಲೆ ಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ ಮಾಡಿ ಹುಡುಕಾಟ ನಡೆಸಲಾಗುತ್ತಿದೆ. ಆರೋಪಿ ತಮಿಳುನಾಡಿಗೆ ಹೋಗಿ ತಲೆಮರಿಸಿಕೊಂಡಿರೋ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆ ತಮಿಳುನಾಡಿಗೂ ಒಂದು ತಂಡ ತೆರಳಿದ್ದು, ಶೋಧ ನಡೆಸುತ್ತಿದೆ.