Tag: ಶ್ರೀರಾಮಲು

  • ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ: ಶ್ರೀರಾಮುಲು

    ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ: ಶ್ರೀರಾಮುಲು

    ಮೈಸೂರು: ಸಿದ್ದರಾಮಯ್ಯ ಮೀರ್ ಸಾಧಿಕ್ ರಾಜಕಾರಣಿ. ಹಿಂದುಳಿದ ವರ್ಗಗಳ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸಚಿವ ಬಿ. ಶ್ರೀರಾಮುಲು (B Sriramulu) ಟೀಕಿಸಿದರು.

    ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಘಟಾನುಘಟಿ ದಲಿತ ನಾಯಕರನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ಮುಗಿಸಿದರು. ಮಲ್ಲಿಕಾರ್ಜುನ ಖರ್ಗೆ, ಶ್ರೀನಿವಾಸ ಪ್ರಸಾದ್, ಪರಮೇಶ್ವರ್ ಹೀಗೆ ಘಟಾನುಘಟಿ ನಾಯಕರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮುಗಿಸಿದರು ಎಂದರು. ಇದನ್ನೂ ಓದಿ: KPCC ಯಲ್ಲಿ ಭಿನ್ನಮತ ಸ್ಫೋಟ – ಪುಷ್ಪಾ ಅಮರನಾಥ್ ವಜಾಕ್ಕೆ ಆಗ್ರಹ

    ಎಸ್ಸಿ-ಎಸ್ಟಿ ಮೀಸಲಾತಿ ಅನುಷ್ಠಾನ ವಿಚಾರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್‌ (JDS) ಕ್ರೆಡಿಟ್ ವಾರ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ಹೆಚ್ಚಳ ಸಂಬಂಧ ಯಾರ ಕಾಲದಲ್ಲೋ ಸಮಿತಿ ರಚನೆ ಆಗಿರಬಹುದು. ಆದರೆ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರುವುದು ನಮ್ಮ ಸರ್ಕಾರ. ಅವರಿಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರಲಿಲ್ಲ. ನಮಗೆ ರಾಜಕೀಯ ಇಚ್ಛಾಶಕ್ತಿ ಇರುವುದರಿಂದ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿದ್ದೇವೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಠಾನಗೊಂಡಿದೆ ಎಂದರು. ಇದನ್ನೂ ಓದಿ: ಭಾರತ್ ಜೋಡೋ ಯಶಸ್ಸಿನ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರಿಂದ ಟ್ರ್ಯಾಕ್ಟರ್ ಯಾತ್ರೆ

    Live Tv
    [brid partner=56869869 player=32851 video=960834 autoplay=true]

  • Union Budget: ದೇಶದ ಅಭಿವೃದ್ಧಿ: ಶ್ರೀರಾಮುಲು

    Union Budget: ದೇಶದ ಅಭಿವೃದ್ಧಿ: ಶ್ರೀರಾಮುಲು

    ಬಳ್ಳಾರಿ: ಕೇಂದ್ರ ಬಜೆಟ್ ಜನಪರ ಬಜೆಟ್ ಹಾಗೂ ದೇಶ ವೇಗವಾಗಿ ಬೆಳೆಯಲು ಅನುಕೂಲವಾಗುವ ಬಜೆಟ್ ಎಂದ ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

    ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಂಮಿಕ ಕಾಲದಲ್ಲೂ ಒಳ್ಳೆ ಬಜೆಟ್ ಮಂಡನೆ ಮಾಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    100 ಕೋಟಿ ಜನರಿಗೆ ಲಸಿಕೆ ಕೊಟ್ಟು ಜನರ ಪ್ರಾಣ ಉಳಿಸಿದ್ದಾರೆ. ಈ ರೀತಿಯ ಕಷ್ಟ ಪರಿಸ್ಥಿತಿಯಲ್ಲಿ ಸಹ ಒಳ್ಳೆಯ ಬಜೆಟ್ ನೀಡಿದ್ದಾರೆ. ಈ ಬಜೆಟ್ ನಲ್ಲಿ ಮಾಹಿತಿ ತಂತ್ರಜ್ಞಾನ, ಐಟಿ ಬಿಟಿಗೆ ಒತ್ತು ಕೊಟ್ಟಿದ್ದಾರೆ ಎಂದರು.

    ರೈತಪರ ಅನೇಕ ಯೋಜನೆಗಳಿಂದ ರೈತ ಹಿತ ಕಾದಿದ್ದಾರೆ. ಇದರ ಜೊತೆಗೆ ಆರೋಗ್ಯಕ್ಕೆ, ಶಿಕ್ಷಣಕ್ಕೆ, ರಸ್ತೆ, ಸಾರಿಗೆ, ಮೂಲಭೂತ ಸಮಸ್ಯೆಗೆ ಸ್ಪಂದಿಸಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ಬದಲಾವಣೆ ಮಾಡಿದ್ದಾರೆ. ಇನ್ನು 2022ರ 5ಜಿ ತರಲು ಮುಂದಾಗಿದ್ದು, ಬಹುದಿನದ ಕನಸು ನನಸಾಗಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ

    ದೇಶದಲ್ಲಿ ಎಲ್ಲೇ ಇದ್ದರೂ ಭೂಮಿ ಖರಿದಿಸಲು ರಿಜಿಸ್ಟರ್ ಮಾಡಿಸಲು ಅನುಮಾಡಿರೋದು ಒಳ್ಳೆಯದು. ಇದರಿಂದ ದೇಶದ ಬಹುತೇಕ ಜನರಿಗೆ ಅನುಕೂಲ ಆಗಲಿದೆ. ಮಹಿಳೆಯ ಸಬಲಿಕರಣಕ್ಕಾರಿ ಮಿಷನ್ ಶಕ್ತಿ ಜಾರಿಗೆ ತಂದಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಬಸ್ ಉಚಿತ ಕೊಡಲು ಮುಂದಾಗಿರೋದು ಒಳ್ಳೆದು. ನದಿ ಜೋಡಣೆಗೆ ಪೂರಕವಾಗುವ ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ: ಶಶಿ ತರೂರ್‌

  • ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯಲ್ಲೇ ಬಾಣಂತಿಯರ ನರಳಾಟ

    ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯಲ್ಲೇ ಬಾಣಂತಿಯರ ನರಳಾಟ

    – ಬೆಡ್ ಇಲ್ಲದೇ ನೆಲದ ಮೇಲೆ ಮಲಗುವ ಬಾಣಂತಿಯರು

    ಚಿತ್ರದುರ್ಗ: ಗರ್ಭಿಣಿಯರಿಗೆ ಹೆರಿಗೆ ಸಮಯದಲ್ಲಿ ತೊಂದರೆ ಆಗಬಾರದು ಅಂತ 9 ತಿಂಗಳು ಕುಟುಂಬಸ್ಥರು ಮನೆಯಲ್ಲಿ ಎಷ್ಟೇ ಬಡತನವಿದ್ದರೂ ಸುರಕ್ಷಿತವಾಗಿ ನೋಡಿಕೊಂಡಿರುತ್ತಾರೆ. ಆದರೆ ಹೆರಿಗೆಗೆಂದು ಬರುವ ಮಹಿಳೆಯರಿಗೆ ಚಿತ್ರದುರ್ಗದ ಜಿಲ್ಲಾಸ್ಪತ್ರೆಯು ಕೇವಲ ಐದು ದಿನಗಳಲ್ಲೇ ನರಕ ದರ್ಶನವನ್ನು ಮಾಡಿಸುತ್ತದೆ.

    ಜಿಲ್ಲಾಸ್ಪತ್ರೆಗೆ ಹೆರಿಗೆಗೆಂದು ಬರುವ ಗರ್ಭಿಣಿಯರು ಅವರೊಂದಿಗೆ ಪೋಷಕರನ್ನು ಕರೆತರಲೇಬೇಕಾದ ಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಒಂದು ವೇಳೆ ಅನಿವಾರ್ಯವಾಗಿ ಒಬ್ಬರೆ ಬಂದರೆ ಆಸ್ಪತ್ರೆ ಆವರಣದಲ್ಲಿ ಪುಟ್ಟ ಪುಟ್ಟ ಕಂದಮ್ಮಗಳನ್ನು ತಮ್ಮ ತೊಡೆಯ ಮೇಲೆ ಮಲಗಿಸಿಕೊಂಡು ನೆಲದ ಮೇಲೆ ಬಾಣಂತಿಯರು ಕುಳಿತುಕೊಳ್ಳವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಅದರಲ್ಲೂ ರಾತ್ರಿ ಹೆರಿಗೆಯಾದ ಬಾಣಂತಿಯರಿಗೆ ವಾರ್ಡ್ ಮುಂಭಾಗದಲ್ಲಿರುವ ಗ್ರಾನೈಟ್ ಕುರ್ಚಿಗಳ ಮೇಲೆ ಅವರನ್ನು ಮಲಗಿಸಲಾಗುತ್ತದೆ. ಆ ಜಾಗ ಸಿಗದಿದ್ದಾಗ ಸಿಕ್ಕ ಸಿಕ್ಕ ಜಾಗದಲ್ಲೇ ಅಥವಾ ನೆಲದಮೇಲೆ ಬಾಣಂತಿಯರ ನರಳುಡುತ್ತಾ ಮಲಗಬೇಕಾಗುತ್ತದೆ. ಇಷ್ಟೆಲ್ಲಾ ಮನಕಲುಕುವ ದೃಶ್ಯಗಳು ಕಣ್ಣಿಗೆ ಬಿದ್ದರೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಈ ದೃಶ್ಯಗಳು ಸಾಮಾನ್ಯವೆನಿಸಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

    ಈ ಸಮಸ್ಯೆ ತಲೆದೂರಿರೋದು ಕೂಡ ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆಯಾದ ಚಿತ್ರದುರ್ಗದ ಸರ್ಕಾರಿ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡನಲ್ಲಿ ಎನ್ನುವುದು ಕೂಡ ವಿಪರ್ಯಾಸವೇ ಸರಿ. ನೋಡುವುದಕ್ಕೆ ಅಷ್ಟೇ ಇದು ಚಿತ್ರದುರ್ಗ ಜಿಲ್ಲಾಸ್ಪತ್ರೆ. ಆದರೆ ಯಾವುದೇ ಮೂಲ ಸೌಕರ್ಯಗಳು ಈ ಆಸ್ಪತ್ರೆಯಲ್ಲಿಲ್ಲ. ಒಂದು ವಾರ ಬಾಣಂತಿಯರು ಕಂದಮ್ಮಗಳ ಜೊತೆಗೆ ನೆಲದ ಮೇಲೆ ಮಲಗುವ ಪರಿಸ್ಥಿತಿ ಇಲ್ಲಿದೆ. ಯಾವಾಗಲೂ ಫುಲ್ ಆಗಿರುವ ಆಸ್ಪತ್ರೆಯಲ್ಲಿ ಕೆಲ ಹಾಸಿಗೆಗಳು ರಾಜಕಾರಣಿಗಳ ಬೆಂಬಲಿಗರ ಕಡೆಯವರಿಗೆ ಮಾತ್ರ ಮೀಸಲಾಗಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ಬಡವರು, ನಿರ್ಗತಿಕ ಬಾಣಂತಿಯರು ಹೆರಿಗೆಯಾದಾಗ ಬೆಡ್ ಕೇಳಿದರೆ ಇಲ್ಲಿ ಬೆಡ್ ಖಾಲಿ ಇಲ್ಲ. ಚಿಕಿತ್ಸೆ ಬೇಕಂದ್ರೆ ನೆಲದ ಮೇಲೆ ವಾಸ್ತವ್ಯ ಹೂಡಿ ಅಂತ ಸಿಬ್ಬಂದಿ ದಬಾಯಿಸುತ್ತಾರೆ. ಅಷ್ಟೇ ಅಲ್ಲದೆ ಸಿಜೇರಿಯನ್ ಆಗಿ ಹೆರಿಗೆಯಾದ ತಾಯಿಯೇ ಒಂದು ಕಡೆ ಇದ್ದರೆ, ಗಂಭೀರ ಸ್ಥಿತಿಯಲ್ಲಿರುವ ಶಿಶು ಒಂದು ಕಡೆ ಇರುವ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಕೆಲವು ಸಂದರ್ಭದಲ್ಲಿ ಮಗು ಕೂಡ ಅದಲು ಬದಲಾಗುವ ಆತಂಕ ಸಹ ಬಾಣಂತಿಯರನ್ನು ಕಾಡುತ್ತಿದೆ. ಹೀಗಾಗಿ ಸಮೀಪದಲ್ಲೇ ಇರುವ ವಾರ್ಡ್ ನಲ್ಲಿ ಅವಕಾಶ ಕೇಳಿದರೆ ಸಿಬ್ಬಂದಿ ಸ್ಪಂದಿಸುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

    ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರು ಗೆದ್ದಂತಹ ಜಿಲ್ಲೆಯಲ್ಲೇ ಇಂತಹ ದುಸ್ಥಿತಿ ಇದ್ದರೆ ಬೇರೆ ಜಿಲ್ಲಾಸ್ಪತ್ರೆಗಳ ಪಾಡೇನು ಎಂಬ ಪ್ರಶ್ನೆ ನಮಗೆ ಮೂಡುತ್ತಿದೆ ಎಂದು ಸಾರ್ವಜನರಿಕರು ಅಸಮಾಧಾನ ಹೊರಹಾಕಿದ್ದಾರೆ. ಈ ಪರಿಸ್ಥಿತಿಯ ಬಗ್ಗೆ ಜಿಲ್ಲಾಸ್ಪತ್ರೆಯ ಆರೋಗ್ಯಾಧಿಕಾರಿ ಬಸವರಾಜ್ ಪ್ರತಿಕ್ರಿಯಿಸಿದ್ದು, ಆಸ್ಪತ್ರೆಯಲ್ಲಿ ಕೇವಲ 50 ಬೆಡ್‍ಗಳ ವ್ಯವಸ್ಥೆಯಿಂದೆ. ಆದರೆ ಇಲ್ಲಿ ಒಂದು ದಿನಕ್ಕೆ 30ರಿಂದ 40 ಮಹಿಳೆಯರಿಗೆ ಹೆರಿಗೆ ಮಾಡಿಸಲಾಗುತ್ತದೆ. ಆದ್ದರಿಂದ ಈ ರೀತಿಯ ಸಮಸ್ಯೆ ಉಂಟಾಗುವುದು ಸಹಜ. ಹೀಗಾಗಿ ಹೆಚ್ಚಿನ ಬೆಡ್‍ಗಳ ಆಸ್ಪತ್ರೆ ಜಿಲ್ಲೆಗೆ ಅಗತ್ಯವಿದೆ. ಈಗಾಗಲೇ ನೂತನ ಕಟ್ಟಡಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅತಿ ಶೀಘ್ರದಲ್ಲೇ ಈ ಸಮಸ್ಯೆ ಬಗೆಹರೆಯಲಿದೆ ಎಂದು ಹೇಳಿದ್ದಾರೆ.

  • ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

    ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

    ಬಳ್ಳಾರಿ: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಅಶ್ವಾಸನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಿ. ಯಾವುದೇ ಪ್ರತಿಭಟನೆ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ. ಪಕ್ಷಕ್ಕಾಗಿ ಎಲ್ಲರೂ ಸೇರಿ ದುಡಿಯೋಣ ಎಂದು ರಾಜ್ಯದ ಜನರಲ್ಲಿ ವಿನಂತಿ ಮಾಡಿಕೊಂಡರು.

    ಎಲ್ಲಾ ಜನರಿಗೆ ನ್ಯಾಯಕೊಡಿಸೋ ಕೆಲಸ ಬಿಜೆಪಿ ಪಕ್ಷ ಸೇರಿದಂತೆ ನಾನು ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ನೀಡುವ ಕೆಲಸವಾಗಬೇಕಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಅಶ್ವಾಸನೆ ನೀಡಿದ್ದಾರೆ. ಅದು ಸಿಕ್ಕರೆ ವಾಲ್ಮೀಕಿ ಸಮುದಾಯದಕ್ಕೆ ಎಲ್ಲಾ ಸಿಕ್ಕಂತೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ, ಶಿವನಗೌಡ ಮತ್ತು ರಾಜುಗೌಡ ಎಲ್ಲಾರು ಒಂದಾಗಿದ್ದೇವೆ ಎಂದು ತಿಳಿಸಿದರು.

    ಈ ವೇಳೆ ಜಿಲ್ಲಾ ಉಸ್ತುವಾರಿ ವಿಚಾರವಾಗಿ ಮಾತನಾಡಿದ ಅವರು, ನಾನು ಈ ವಿಷಯಕ್ಕೆ ಯಾವುದೇ ಬೇಡಿಕೆ ಇಟ್ಟಿಲ್ಲ. ಸದ್ಯ ನಾನು ನೆರೆ ಪೀಡಿತ ಪ್ರದೇಶಾಭಿವೃದ್ಧಿಗೆ ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿಯಾಗಿದ್ದೇನೆ. ನನಗೆ ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟನೆ ನೀಡಿದರು.

  • ಸಾಥ್ ನೀಡದ ಕಮಲ ಪಾಳಯದ ನಾಯಕರು-ಒಂಟಿಯಾಗಿ ಕ್ಷೇತ್ರದೆಲ್ಲೆಡೆ ಶ್ರೀರಾಮುಲು ಪ್ರಚಾರ

    ಸಾಥ್ ನೀಡದ ಕಮಲ ಪಾಳಯದ ನಾಯಕರು-ಒಂಟಿಯಾಗಿ ಕ್ಷೇತ್ರದೆಲ್ಲೆಡೆ ಶ್ರೀರಾಮುಲು ಪ್ರಚಾರ

    ಬಳ್ಳಾರಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಕಾಂಗ್ರೆಸ್ ಅಬ್ಬರದ ಪ್ರಚಾರ ನಡೆಸುತ್ತಿದೆ. ಆದರೆ ಬಿಜೆಪಿ ಅಭ್ಯರ್ಥಿ ಜೆ.ಶಾಂತ ಪರ ಶಾಸಕ ಶ್ರೀರಾಮುಲುರನ್ನು ಹೊರತು ಪಡಿಸಿ, ಯಾವುದೇ ಕಮಲ ಪಾಳಯದ ನಾಯಕರು ಹಾಜರಾಗದೇ ಇರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

    ಹೌದು, ಇತಂಹದ್ದೊಂದು ಪ್ರಶ್ನೆ ಇದೀಗ ಬಳ್ಳಾರಿ ಬಿಜೆಪಿ ಕಾರ್ಯಕರ್ತರನ್ನು ಕಾಡುತ್ತಿದೆ. ಯಾಕೆಂದರೆ ಬಳ್ಳಾರಿ ಲೋಕಸಭಾ ಉಪಚುನಾವಣೆಯ ದಿನಾಂಕ ಷೋಷಣೆಯಾಗಿ ಅಭ್ಯರ್ಥಿ ಆಯ್ಕೆ ಆದ ನಂತರವೂ, ಬಿಜೆಪಿ ಪಾಳಯದಲ್ಲಿ ಚುನಾವಣಾ ಕಾವು ಮಾತ್ರ ಕಂಡು ಬರುತ್ತಿಲ್ಲ. ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಂಸದೆ ಜೆ ಶಾಂತಾ ನಾಮಪತ್ರ ಸಲ್ಲಿಸಿ, ಕ್ಷೇತ್ರದೆಲ್ಲೆಡೆ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಶಾಂತಾ ಮತ್ತು ಶಾಸಕ ಶ್ರೀರಾಮುಲುಗೆ ಬಿಜೆಪಿ ರಾಜ್ಯ ಮತ್ತು ಕೇಂದ್ರ ನಾಯಕರು ಸಾಥ್ ನೀಡದಿರುವುದು ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

    ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರವಾಗಿ 6 ಸಚಿವರು, 10 ಸಂಸದರು ಸೇರಿದಂತೆ ಹಲವು ಶಾಸಕರ 51 ಜನರ ತಂಡವೇ ಬಳ್ಳಾರಿಯಲ್ಲಿ ಬಿಡುಬಿಟ್ಟು, ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಪರವಾಗಿ ಕೇವಲ ಶ್ರೀರಾಮುಲು ಮಾತ್ರ ಪ್ರಚಾರ ನಡೆಸುತ್ತಿದ್ದು, ಶಾಸಕ ಶ್ರೀರಾಮುಲುಗೆ ಬಿಜೆಪಿ ನಾಯಕರ ಸಾಥ್ ಇಲ್ಲದಿರುವುದು ಈಗ ಚರ್ಚೆಗೆ ಎಡೆಮಾಡಿಕೊಟ್ಟಿದೆ.

    ಶಾಸಕ ಶ್ರೀರಾಮುಲು, ಶಾಂತಾ ಒಂಟಿಯಾಗಿ ಪ್ರಚಾರ ನಡೆಸುತ್ತಿರುವುದು ಬಿಜೆಪಿ ಪಾಳಯದ ಉತ್ಸಾಹವನ್ನೆ ಅಡಗಿಸಿದಂತಾಗಿದೆ ಎನ್ನುವ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇವ್ರಾಣೆಗೂ ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ: ಶ್ರೀರಾಮುಲು

    ದೇವ್ರಾಣೆಗೂ ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ: ಶ್ರೀರಾಮುಲು

    ಬೆಂಗಳೂರು: ದೇವರ ಆಣೆಗೂ ಸಹ ಬಿಜೆಪಿಯು ಯಾವುದೇ ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲವೆಂದು ಶಾಸಕ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಸಭೆಗೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಬೀಳಿಸುವುದಕ್ಕೆ ಹೋಗಿಲ್ಲ. ದೇವರ ಆಣೆಗೂ ಸಹ ನಾವು ಯಾವುದೇ ಶಾಸಕರನ್ನು ಸಂಪರ್ಕ ಮಾಡಿಲ್ಲ. ಅವರಲ್ಲೇ ವರ್ಗಾವಣೆ ದಂಧೆ ಹಾಗೂ ಹಣದ ವಿಚಾರಕ್ಕಾಗಿ ಅಸಮಾಧಾನ ಉಂಟಾಗಿ ಬಿಜೆಪಿಯ ಮೇಲೆ ಆಪಾದನೆ ಹೊರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಕೈ ನಾಯಕರು ದೆಹಲಿಗೆ ತೆರಳಿದ್ದಕ್ಕೆ ಪ್ರತಿಕ್ರಿಯಿಸಿ, ಅವರು ದೇಹಲಿಗಾದರೂ ಹೋಗಲಿ, ಇಲ್ಲ ಹಾಳಾಗಿ ಹೋದ್ರು ನಮಗೇನು ಆಗಬೇಕು? ಕಾಂಗ್ರೆಸ್ ನಾಯಕರೇ ಇಂದು ಗುಂಪು ಮಾಡಿಕೊಂಡು ಕಚ್ಚಾಟ ಮಾಡುತ್ತಿದ್ದಾರೆ. ಅವರು ಕಚ್ಚಾಡಿಕೊಂಡು ಅದನ್ನು ಬಿಜೆಪಿ ಮೇಲೆ ಹಾಕುತ್ತಿದ್ದಾರೆ. ಇದೆಲ್ಲಾ ಜನರ ದಿಕ್ಕು ತಪ್ಪಿಸುವ ತಂತ್ರ ಅಷ್ಟೇ. ಈ ಸಮ್ಮಿಶ್ರ ಸರ್ಕಾರದ ಮೇಲೆ ಜನರಿಗೆ ರಾಗಿ ಕಾಳಿನಷ್ಟು ನಂಬಿಕೆಯಿಲ್ಲ ಎಂದು ಹೇಳಿದರು.

    ಸಿಎಂ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದೆ. ಹೀಗಾಗಿ ಕಾಂಗ್ರೆಸ್ಸಿನ ಯಾವುದೇ ಶಾಸಕರು ಹಾಗೂ ಸಚಿವರ ಮಾತನ್ನು ಅವರು ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಅವರ ನಡುವೆ ಕಿತ್ತಾಟ ಏರ್ಪಟ್ಟಿದೆ. ತಮ್ಮಲ್ಲಿಯೇ ಕಚ್ಚಾಟ ಮಾಡಿಕೊಂಡು ಅದನ್ನು ಬಿಜೆಪಿಗೆ ಕಟ್ಟುತ್ತಿದ್ದಾರೆ. ಹೀಗೆ ಮುಂದುವರಿದು ಸರ್ಕಾರ ಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್‍ನವರು ಕಿತ್ತಾಡಿಕೊಂಡು ಏನಾದರೂ ಮಾಡಿಕೊಳ್ಳಲಿ. ಅವರಿಗೆ ನಮಗೂ ಯಾವುದೇ ಸಂಬಂಧವಿಲ್ಲ. ಸರ್ಕಾರ ಬಿದ್ದರೆ ನಾವು ಖಂಡಿತವಾಗಿಯೂ ಸರ್ಕಾರವನ್ನು ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸುವವರು ಸ್ವಾರ್ಥಿಗಳು: ಮಾಜಿ ಸಿಎಂ

    ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸುವವರು ಸ್ವಾರ್ಥಿಗಳು: ಮಾಜಿ ಸಿಎಂ

    ಮೈಸೂರು: ಅಖಂಡ ಕರ್ನಾಟಕದ ಹಿನ್ನೆಲೆ ತಿಳಿಯದೇ, ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸುತ್ತಿರುವವರು ಸ್ವಾರ್ಥಿಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

    ಇಂದು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಅಂತಾ ಏನಿಲ್ಲ. ನಮ್ಮದು ಅಖಂಡ ಕರ್ನಾಟಕ. ಏಕೀಕರಣ ಮಹತ್ವ ತಿಳಿದಿಲ್ಲದವರು ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸುತ್ತಿರುವ ಸ್ವಾರ್ಥಿಗಳು. ಕರ್ನಾಟಕ ಏಕೀಕರಣ ಏಕಾಯಿತು ಎಂಬುದು ತಿಳಿದಿಲ್ಲ. ಭಾಷಾವಾರು ಪ್ರಾಂತ್ಯ ಏಕಾಯಿತು ಎಂಬುದರ ಮಾಹಿತಿಯಿಲ್ಲದೇ ಹೇಳಿಕೆ ನೀಡುತ್ತಿರುವುದು ಬಾಲಿಶ ವಾದ ಎಂದು ಕಿಡಿಕಾರಿದರು.

    ನಾನೂ ಸಹ ಉತ್ತರ ಕರ್ನಾಟಕದ ಶಾಸಕನೇ, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅಭಿವೃದ್ಧಿಯ ವಿಚಾರವನ್ನು ನಾನು ಒಪ್ಪುತ್ತೇನೆ. ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಹಣ ನೀಡಿದ್ದೇನೆ. ಅಲ್ಲದೇ ಪ್ರತ್ಯೇಕ ರಾಜ್ಯದ ಮಾತನಾಡುತ್ತಿರುವ ಶ್ರೀರಾಮುಲು, ಉಮೇಶ್ ಕತ್ತಿಯವರು ಉತ್ತರ ಕರ್ನಾಟಕ ಭಾಗಕ್ಕೆ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದ ಅವರು ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶೂನ್ಯ ಕೊಡುಗೆ ನೀಡಿದೆ ಎಂದು ಆರೋಪಿಸಿದರು.

  • ಕಾಂಗ್ರೆಸ್‍ನವರನ್ನು ನಾವು ನಿದ್ದೆ ಮಾಡೋಕೆ ಬಿಡಲ್ಲ: ಶ್ರೀರಾಮಲು

    ಕಾಂಗ್ರೆಸ್‍ನವರನ್ನು ನಾವು ನಿದ್ದೆ ಮಾಡೋಕೆ ಬಿಡಲ್ಲ: ಶ್ರೀರಾಮಲು

    ಬಳ್ಳಾರಿ: ಬಿಜೆಪಿಯನ್ನು ಸೋಲಿಸಿದ್ದೇವೆ ಎಂದು ಕಾಂಗ್ರೆಸ್ ಜೆಡಿಎಸ್ ಅಂದುಕೊಂಡಿರಬಹುದು. ಆದರೆ ಕಾಂಗ್ರೆಸ್‍ನವರನ್ನು ನಾವೂ ನಿದ್ದೆ ಮಾಡೋಕೆ ಬಿಡೋದಿಲ್ಲ, ಕಾಂಗ್ರೆಸ್ ಅಕ್ರಮ ಅವ್ಯವಹಾರಗಳನ್ನು ಜನರ ಮುಂದಿಡುತ್ತೇವೆ. ಕಾಂಗ್ರೆಸ್ ನವರನ್ನು ದಿನದ 24 ಗಂಟೆ ಕಾಲ ಕಾಯುತ್ತೇವೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.

    ಬಳ್ಳಾರಿಯಲ್ಲಿಂದು ಮಾತನಾಡಿದ ಶ್ರೀರಾಮುಲು, ಬಿಜೆಪಿಗೆ 104 ಸ್ಥಾನ ಸಿಕ್ಕಿದ್ದರೂ ಸದನದಲ್ಲಿ ಬಹುಮತ ಸಾಬೀತು ಪಡಿಸುವಲ್ಲಿ ನಾವು ಸೋತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನಾವೆಲ್ಲಾ ಜೈಲಿಗೆ ಹೋಗುತ್ತೇವೆ ಎಂಬ ಕಾರಣಕ್ಕೆ ಕಾಂಗ್ರೆಸ್ಸಿನವರು ಜೆಡಿಎಸ್ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

    ನಾವು ಕಾಂಗ್ರೆಸ್‍ನವರನ್ನು ಮಲಗೋಕೆ ಬಿಡಲ್ಲ. ಲೋಕಾಯುಕ್ತ ಹಲ್ಲು ಮುರಿದಿದ್ದು, ಅಕ್ರಮಗಳನ್ನು ಎತ್ತಿ ಹಿಡಿಯುತ್ತೇವೆ. ದಿನದ 24 ತಾಸು ಅವರನ್ನು ಕಾಯುತ್ತೇವೆ. ಈಗಾಗಲೇ ಮಂತ್ರಿಗಿರಿಗಾಗಿ ಒಳ ಜಗಳ ಅವರಲ್ಲಿ ಪ್ರಾರಂಭವಾಗಿದೆ ಎಂದರು.

    ಎಚ್‍ಡಿ ಕುಮಾರಸ್ವಾಮಿ ಅವರನ್ನು ಬೇಷರತ್ ಆಗಿ ಸಿಎಂ ಮಾಡಲು ಒಪ್ಪಿದ್ದಾರೆ. ಅವರ ಭ್ರಷ್ಟಾಚಾರ ಮುಚ್ಚಿ ಹಾಕಲು ಪ್ರಯತ್ನ ನಡೆಯುತ್ತಿದೆ. ಅವರ ಅನಾಚಾರ, ಭ್ರಷ್ಟಾಚಾರ ಜನರ ಮುಂದೆ ಇಡುತ್ತೇವೆ. ದಿನದ 24 ತಾಸು ನಾವು ಅವರನ್ನು ನಿದ್ದೆ ಮಾಡದ ಹಾಗೇ ಕಾಯುತ್ತೇವೆ ಎಂದು ಬಿ ಶ್ರೀರಾಮುಲು ಹೇಳಿದರು.

  • ನಟ ಸುದೀಪ್ ರೋಡ್ ಶೋ ರದ್ದು

    ನಟ ಸುದೀಪ್ ರೋಡ್ ಶೋ ರದ್ದು

    ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಟಾರ್ ಗಳ ದಂಡೇ ಪ್ರಚಾರವನ್ನು ಮಾಡುತ್ತಿದ್ದು, ಇಂದು ನಟ ಸುದೀಪ್ ಬಳ್ಳಾರಿಯ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಪರ ಮೊಳಕಾಲ್ಮೂರಿನಲ್ಲಿ ಪ್ರಚಾರ ಮಾಡಿದ್ದಾರೆ.

    ಚುನಾವಣಾ ಅಧಿಕಾರಿಗಳು ನಟ ಸುದೀಪ್ ರೋಡ್ ಶೋವನ್ನು ರದ್ದು ಮಾಡಿದ್ದಾರೆ. ಚುನಾವಣಾ ಅಧಿಕಾರಿಗಳ ಅನುಮತಿ ಸಿಗದ ಹಿನ್ನೆಲೆಯಲ್ಲಿ ನಟ ಸುದೀಪ್ ನ ನಾಯಕನಟ್ಟಿ ಪ್ರಚಾರ ಸಭೆಯನ್ನು ರದ್ದು ಮಾಡಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ ತಿಂಡಿ ತಿಂದು ಮಾಲಕಿಗೆ 10 ಸಾವಿರ ರೂ. ಕೊಟ್ಟ ಸುದೀಪ್!

    ಸುದೀಪ್ ನಾಯಕನಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದು ನಂತರ ಕೊಂಡ್ಲಹಳ್ಳಿಯಲ್ಲಿ ಪ್ರಚಾರಕ್ಕೆ ತೆರಳಬೇಕಿತ್ತು. ಆದರೆ ದೇಗುಲದ ಆವರಣದಲ್ಲಿ ಚುನಾವಣಾ ಅಧಿಕಾರಿಗಳು ಅನುಮತಿ ನೀಡದ ಕಾರಣ ನಾಯಕನಟ್ಟಿಯಲ್ಲಿ ರೋಡ್ ಶೋ ರದ್ದು ಮಾಡಿದ್ದಾರೆ. ಆದರೆ ಕಾಲೇಜು ಆವರಣದಲ್ಲಿ ಸಭೆಗೆ ಮಾತ್ರ ಅನುಮತಿ ನೀಡಿದ್ದಾರೆ.

    ಚುನಾವಣಾ ಅಧಿಕಾರಿಗಳಿಂದ ಸುದೀಪ್ ವೀಕ್ಷಿಸಲು ಬೆಳಿಗ್ಗೆಯಿಂದ ಬಿಸಿಲಲ್ಲಿ ಕಾದಿದ್ದ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಿಗೆ ನಿರಾಸೆ ಆಗಿದೆ. ದೇಗುಲದ ಆವರಣದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ತಿಪ್ಪೇಸ್ವಾಮಿ ಪ್ರಚಾರದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಸುದೀಪ್ ರೋಡ್ ಶೋಗೆ ಅನುಮತಿ ನೀಡಲಿಲ್ಲ.

  • ಶ್ರೀರಾಮಲು ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಕಿಚ್ಚ ಸುದೀಪ್!

    ಶ್ರೀರಾಮಲು ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಕಿಚ್ಚ ಸುದೀಪ್!

    ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರಕ್ಕೆ ಇತ್ತೀಚೆಗೆ ಚಿತ್ರನಟರ ದಂಡೇ ಹರಿದು ಬರ್ತಿದೆ. ಈಗಾಗಲೇ ನಟ ಯಶ್ ಭರ್ಜರಿ ರೋಡ್ ಶೋ ನಡೆಸಿದ್ದು, ಇದೀಗ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಚಿತ್ರನಟ ಸುದೀಪ್ ಕೂಡ ಬಹಿರಂಗ ಸಭೆ ನಡೆಸಲಿದ್ದಾರೆ.

    ನಾಯಕನಟ್ಟಿಯ ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಬೆಳಗ್ಗೆ 10 ಗಂಟೆಗೆ ಪೂಜೆ ಸಲ್ಲಿಸಿ ರೋಡ್ ಶೋ ಆರಂಭಿಸಲಿರೋ ಸುದೀಪ್, 11 ಗಂಟೆಗೆ ಕೊಂಡ್ಲಹಳ್ಳಿ, 12 ಗಂಟೆಗೆ ಮೊಳಕಾಲ್ಮೂರು, ನಂತರ 12.45 ಕ್ಕೆ ರಾಂಪುರದಲ್ಲಿ ಬಹಿರಂಗ ಪ್ರಚಾರ ಸಭೆ ನಡೆಸಲಿದ್ದಾರೆ.

    ಸುದೀಪ್‍ಗೆ ಮಾಜಿ ಸಂಸದೆ ಜೆ. ಶಾಂತ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಸಾಥ್ ನೀಡಲಿದ್ದು, ನಾಯಕ ಸಮುದಾಯ ಹೆಚ್ಚಾಗಿರೋ ಮೊಳಕಾಲ್ಮೂರು ಕ್ಷೇತ್ರದಲ್ಲಿ ನೆಚ್ಚಿನ ನಟ ಸುದೀಪ್ ವೀಕ್ಷಣೆಗೆ ಅಪಾರ ಜನಸ್ತೋಮ ಸೇರುವ ಸಾಧ್ಯತೆ ಇದೆ.

    ಮುಂಜಾನೆ ಬಳ್ಳಾರಿಯ ಸಂಡೂರಿನ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರವಾಗಿ ಸಂಡೂರು, ತಾರಾನಗರದಲ್ಲಿ ಪ್ರಚಾರ ನಡೆಸೋ ಸುದೀಪ್ ನಂತರ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ, ಕೊಂಡ್ಲಹಳ್ಳಿ, ಮೊಳಕಾಲ್ಮೂರು ಹಾಗೂ ರಾಂಪುರ ಕ್ಷೇತ್ರಗಳಲ್ಲಿ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ಶ್ರೀರಾಮುಲು ಪರವಾಗಿ ಪ್ರಚಾರ ನಡೆಸಲಿದ್ದಾರೆ.

    ಮಧ್ಯಾಹ್ನ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಸಣ್ಣಫಕೀರಪ್ಪ ಪರವಾಗಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಮೋಕಾ ಸಂಗನಕಲ್ ಕೊಳ್ಳಗಲ್ ಗ್ರಾಮದಲ್ಲಿ ಸುದೀಪ್ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ಸಂಜೆ ಬಿಜೆಪಿ ಅಭ್ಯರ್ಥಿ ಸೋಮಶೇಖರ್ ರೆಡ್ಡಿ ಪರವಾಗಿ ಬಳ್ಳಾರಿ ನಗರದ ವಿವಿಧೆಡೆ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.