Tag: ಶ್ರೀರಾಮಸೇನಾ

  • ಶಿವಮೊಗ್ಗ ಗಲಭೆ ಹಿಂದೆ ಪಾಕಿಸ್ತಾನ, ರಾಜ್ಯ ಸರ್ಕಾರದ ಕೈವಾಡವಿದೆ: ಸಿದ್ದಲಿಂಗ ಸ್ವಾಮೀಜಿ ಆರೋಪ

    ಶಿವಮೊಗ್ಗ ಗಲಭೆ ಹಿಂದೆ ಪಾಕಿಸ್ತಾನ, ರಾಜ್ಯ ಸರ್ಕಾರದ ಕೈವಾಡವಿದೆ: ಸಿದ್ದಲಿಂಗ ಸ್ವಾಮೀಜಿ ಆರೋಪ

    ಕಲಬುರಗಿ: ಶಿವಮೊಗ್ಗ ರಾಗಿಗುಡ್ಡದಲ್ಲಿ ನಡೆದ ಘಟನೆ (Shivamogga Riots) ಹಿಂದೆ ಪಾಕಿಸ್ತಾನ, ನಿಷೇಧಿತ ಪಿಎಫ್ಐ ಹಾಗೂ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಶ್ರೀರಾಮ ಸೇನೆಯ (Sri Ram Sena) ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

    ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಹಾದಿ ಮನಸ್ಥಿತಿ ಹೊಂದಿರುವ ಮುಸ್ಲಿಮರು (Muslims),  ಹಿಂದೂಗಳ ಮನೆಗಳನ್ನ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ. 2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ಪೂರೈಸುವ ಹೊತ್ತಿಗೆ, ಭಾರತದಲ್ಲಿ ಇಸ್ಲಾಮಿಕ್‌ ರಾಜ್ಯ ಮಾಡಬೇಕೆಂಬ ಉದ್ದೇಶ ಹೊಂದಿದ್ದಾರೆ. ಈ ಕೃತ್ಯಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ (Congress Government) ಕುಮ್ಮಕ್ಕು ನೀಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

    ಗಣೇಶ ಹಬ್ಬಕ್ಕೆ (Ganesha Festival) ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾದರೆ ಹಲವು ಅನುಮತಿಗಳನ್ನು ಪಡೆಯಬೇಕು. ಆದ್ರೆ ಅನ್ಯ ಕೋಮಿನವರಿಗೆ ಎಲ್ಲೆಂದರಲ್ಲಿ ಕಟೌಟ್‌, ಬ್ಯಾನರ್‌ ಹಾಕಲು ಅನುಮತಿ ಬೇಕಾಗಿಲ್ಲ. ಇದು ಯಾವ ನ್ಯಾಯ? ಕೇವಲ ವೋಟ್‌ಬ್ಯಾಂಕ್‌ ರಾಜಕೀಯ ಮಾಡುವುದರಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

    ಶಿವಮೊಗ್ಗದಲ್ಲಿ ನಡೆದ ಘಟನೆ ರಾಜ್ಯದ ಗೃಹ ಸಚಿವರಿಗೆ ಸಣ್ಣ ಘಟನೆ ಎನಿಸಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವ, ಪೊಲೀಸರ ಎದುರೇ ಆವಾಜ್‌ ಹಾಕುವ ಸನ್ನಿವೇಶಗಳು ನಡೆದರೂ ಗೃಹ ಸಚಿವರ ಉಡಾಫೆ ಹೇಳಿಕೆ ನೋಡಿದ್ರೆ ಅನುಮಾನ ಹುಟ್ಟೋದು ಸಹಜ. ಹಾಗಾಗಿ ನಾಲಿಗೆಗೆ ಬಣ್ಣ ಹಚ್ಚಿಕೊಂಡು ಉಡಾಫೆ ಹೇಳಿಕೆ ನೀಡುವುದನ್ನು ತಕ್ಷಣವೇ ನಿಲ್ಲಿಸಿ ಪುಂಡರಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 10 ಜನ ಸೇರಿಕೊಂಡು ಒಬ್ಬನನ್ನು ಹೊಡೆದಿದ್ದಾರೆ ಸರ್‌: ಬಿಜೆಪಿ ನಾಯಕರ ಮುಂದೆ ಸ್ಥಳೀಯರ ಕಣ್ಣೀರು

    ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಮಹೇಶ್ ಗೊಬ್ಬರ, ಶರಣು ಗುತ್ತೇದಾರ್, ಅಂಬಾರಾಯ್, ಬಸವರಾಜ, ಪರಮೇಶ್ವರ್, ಮಲ್ಲು ಹಾಜರಿದ್ದರು. ಇದನ್ನೂ ಓದಿ: ಚುನಾವಣೆ ಬಂದರೆ ಬಿಜೆಪಿಯವರಿಗೆ ಮಸೀದಿ, ಪಾಕಿಸ್ತಾನ ನೆನಪಾಗುತ್ತದೆ: ಶಿವರಾಜ್ ತಂಗಡಗಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿಯಿಂದ ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ಯೋ ಗೊತ್ತಿಲ್ಲ – ಮುತಾಲಿಕ್ ಆತಂಕ

    ಉಡುಪಿಯಿಂದ ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ಯೋ ಗೊತ್ತಿಲ್ಲ – ಮುತಾಲಿಕ್ ಆತಂಕ

    ಮೈಸೂರು: ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ (Udupi College Video Case) ಸಂಬಂಧಿಸಿದಂತೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ (Pakistan) ಹೋಗಿದೆಯೋ ಗೊತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಪ್ರಕರಣದ ಹಿಂದೆ ಇಸ್ಲಾಮಿಕ್ ಸಂಘಟನೆಗಳ ಕೈವಾಡವಿದೆ. ಆದ್ರೆ ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ ಆಗಿತ್ತು ಎಂದು ದೂರಿದ್ದಾರೆ. ಇದನ್ನೂ ಓದಿ: ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಟ್ಟಿಲ್ಲವೆಂದು ವ್ಯಾಪಾರಿ ಮೇಲೆ ಹಲ್ಲೆ- ಮುಖ್ಯಪೇದೆ ಅಮಾನತು

    ಘಟನೆ ನಡೆಯದೇ ಇದ್ದಿದ್ದರೆ ಮಕ್ಕಳಿಂದ ಏಕೆ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡಿದ್ದಾರೆ? ಪತ್ರ ಬರೆದುಕೊಟ್ಟಿದ್ದಾರೆ ಅಂದ ಮೇಲೆ ತಪ್ಪು ಮಾಡಿದ್ದಾರೆ ಅಂತಾ ಅಲ್ವಾ? ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಸಹ ಆ ರೀತಿ ಹೇಳಬಾರದಿತ್ತು. ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದೆಯೋ ಗೊತ್ತಿಲ್ಲ. ಎಲ್ಲವೂ ಸಮಗ್ರವಾಗಿ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಡ್ಡಿಗೆ ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

    Gyanvapi mosque, 

    ಇದೇ ವೇಳೆ ಜ್ಞಾನವಾಪಿ ಮಸೀದಿ ವಿಚಾರವಾಗಿ ಮಾತನಾಡಿ, ದೇಶದ ಮುಸ್ಲಿಮರು (Muslims) ಸೌಜನ್ಯದಿಂದ ನಡೆದುಕೊಳ್ಳಬೇಕು. ಉದ್ಧಟತನದ ವರ್ತನೆ ತೋರಬಾರದು. ಕಾಶಿ ವಿಶ್ವನಾಥ ದೇಗುಲವನ್ನ ಹಿಂದೂಗಳಿಗೆ ಬಿಟ್ಟುಕೊಡಬೇಕು. 1992ರ ಡಿಸೆಂಬರ್ 6ರಲ್ಲಿ ನಡೆದ ಘಟನೆ ಮರುಕಳಿಸುವಂತೆ ಮಾಡಬೇಡಿ. ಹಿಂದೂಗಳನ್ನ ಕೆರಳಿಸುವ ಕೆಲಸ ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    ಮುಸ್ಲಿಂ ಸಂಘಟನೆಗಳು ಹದ್ದುಮೀರಿ ವರ್ತಿಸುತ್ತಿವೆ. ದೇಶದ ಮುಸ್ಲಿಮರು ಬಾಬರ್‌ನನ್ನ ಅನುಸರಿಸುತ್ತಿದ್ದಾರೆ. ಪ್ರಪಂಚದಲ್ಲಿ ಎಲ್ಲಾದರೂ ಜ್ಞಾನವಾಪಿ ಹೆಸರಿನ ಮಸೀದಿ ಇದೆಯಾ? ಅದು ದೇವಸ್ಥಾನ ಎನ್ನಲು ಸಾಕಷ್ಟು ದಾಖಲೆಗಳಿವೆ. ಹೀಗಾಗಿ ಮುಸ್ಲಿಮರು ಸೌಜನ್ಯದಿಂದ ಬಿಟ್ಟು ಕೊಡಬೇಕು ಎಂದು ಸಲಹೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್: ಪ್ರಮೋದ್ ಮುತಾಲಿಕ್ ಕಿಡಿ

    ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್: ಪ್ರಮೋದ್ ಮುತಾಲಿಕ್ ಕಿಡಿ

    – ಗೋಮಾಂಸ ಭಕ್ಷಕರು, ದೇವರನ್ನ ನಂಬದವರಿಗೆ ಗುತ್ತಿಗೆ ಹೇಗೆ ಕೊಟ್ರಿ?
    – ಟೆಂಡರ್ ರದ್ದಾಗದಿದ್ರೆ ಆಂದೋಲನ ಮಾಡ್ತೀವಿ ಅಂತ ಕೇಂದ್ರಕ್ಕೆ ಎಚ್ಚರಿಕೆ

    ಬೆಂಗಳೂರು: ಅಯೋಧ್ಯೆ (Ayodhya) ರಾಮಮಂದಿರ (Ram Mandir) ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಸ್ಲಿಮರಿಗೆ ಟೆಂಡರ್ ನೀಡಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದರು.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಆದ್ಯತೆ ನೀಡಲಾಗಿದೆ. ಅಯೋಧ್ಯೆ ರಾಮಮಂದಿರ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಮುಸ್ಲಿಮರಿಗೆ ಟೆಂಡರ್ ನೀಡಲಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಸೌಜನ್ಯ ಕೇಸ್ – ಸುಳ್ಳು ಹೇಳಿಕೆ, ವದಂತಿಗಳಿಗೆ ಗೊಂದಲಕ್ಕೀಡಾಗಬೇಡಿ: ವೀರೇಂದ್ರ ಹೆಗ್ಗಡೆ ಬೇಸರ

    ಅನೇಕ ವರ್ಷಗಳ ಬಳಿಕ ರಾಮಮಂದಿರ ನಿರ್ಮಾಣ ಸಾಧ್ಯವಾಗಿದೆ. ಇದಕ್ಕೆ ತೊಡಕಾಗಿದ್ದು ಮುಸ್ಲಿಮರು. ಕೋರ್ಟ್ ಆದೇಶದ ಬಳಿಕವೂ ನಾವು ಅಲ್ಲೇ ಮಸೀದಿ ನಿರ್ಮಾಣ ಮಾಡ್ತೀವಿ ಅಂತ ಹೇಳ್ತಾರೆ. ಈ ರೀತಿ ಇರಬೇಕಾದ್ರೆ ಮುಸ್ಲಿಮರಿಗೆ ಈಗ ಕಟ್ಟಡ ನಿರ್ಮಾಣದ ಟೆಂಡರ್ ನೀಡಲಾಗಿದೆ. ಕೇಂದ್ರ ಸರ್ಕಾರ ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿದೆ. ಈಗ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್ ನೀಡಿರುವುದು ಖಂಡನೀಯ ಎಂದರು.

    ರಾಜಸ್ತಾನ ಮೂಲದ ಕಂಪನಿಯ ಇಕ್ಬಾಲ್ ಮಿಸ್ತ್ರಿ ಎಂಬಾತನಿಂದ ಕೆಲಸ ನಡೆಯುತ್ತಿದೆ. ಗರ್ಭಗುಡಿ ನಿರ್ಮಾಣದ ಟೆಂಡರ್ ಈತನಿಗೆ ನೀಡಲಾಗಿದೆ. ಇದರಿಂದ 100 ಕೋಟಿ ಹಿಂದೂಗಳಿಗೆ ಅವಮಾನ ಆಗಿದೆ. ಟ್ರಸ್ಟಿಗಳಲ್ಲಿ ಒಬ್ಬರಾದ ಪೇಜಾವರ ಶ್ರೀಗಳಿಗೆ ಈ ಬಗ್ಗೆ ಮನವಿ ಮಾಡಿದ್ದೇವೆ. ಅಲ್ಲಿರುವಂತಹ ಮುಸ್ಲಿಂ ಕೆಲಸಗಾರರನ್ನು ಹೊರಹಾಕಬೇಕು. ಅಲ್ಲಾ ಒಬ್ಬನೆ ದೇವರು ಅನ್ನುವವನಿಗೆ ರಾಮನ ಗುಡಿ ನಿರ್ಮಾಣಕ್ಕೆ ಅವಕಾಶ ಕೊಟ್ಟಿದ್ದು ಹೇಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹೊಸ ಸರ್ಕಾರದಿಂದ ವರ್ಗಾವಣೆಗೊಂಡಿದ್ದ ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ತಡೆ ಭಾಗ್ಯ

    ಗೋಮಾಂಸ ಭಕ್ಷಕರು, ದೇವರನ್ನ ನಂಬದವರಿಗೆ ಹೇಗೆ ಗುತ್ತಿಗೆ ಕೊಟ್ಟಿದ್ದೀರಿ. ಅವರನ್ನ ಕೂಡಲೇ ವಾಪಸ್ ಕಳಿಸಬೇಕು. ಅವರು ವಾಪಸ್ ಆದ ಬಳಿಕ ನಾವು ಅಲ್ಲಿಗೆ ಹೋಗಿ ಶುದ್ದಿ ಮಾಡ್ತೇವೆ. ಈ ಬಗ್ಗೆ ಶ್ರೀಗಳಿಗೆ ಮನವಿ ಮಾಡಲಾಗಿದೆ. ಕೂಡಲೇ ಅಲ್ಲಿರುವ ಗುತ್ತಿಗೆದಾರ ಮುಸ್ಲಿಮರನ್ನ ಹೊರ ಹಾಕಬೇಕು. ಇದು ಇಡೀ ವಿಶ್ವಕರ್ಮ ಸಮಾಜಕ್ಕೆ ಅಪಮಾನ ಮಾಡಿದ ಹಾಗೆ ಎಂದು ತಿಳಿಸಿದರು.

    ಒಂದು ವೇಳೆ ಟೆಂಡರ್ ರದ್ದಾಗದಿದ್ರೆ ಆದೋಲನ ಶುರುವಾಗುತ್ತೆ. ಈಗಾಗಲೇ ಈ ಬಗ್ಗೆ 12 ರಾಜ್ಯಗಳ ಜೊತೆ ಚರ್ಚಿಸಿದ್ದೇವೆ. 12 ರಾಜ್ಯದವರು ನಮಗೆ ಬೆಂಬಲ ಸೂಚಿಸಿದ್ದಾರೆ. ಟೆಂಡರ್ ರದ್ದು ಮಾಡದಿದ್ರೆ ರಾಮಮಂದಿರ ಉದ್ಘಾಟನೆ ಆಗಲು ಬಿಡಲ್ಲ ಎಚ್ಚರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್

    ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್

    ಚಿಕ್ಕೋಡಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯಕವಾಗಿ ಬೇಕಾಗಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ಕೊಟ್ಟ ಅವರು, ಬುಲ್ಡೋಜರ್ ಬಳಕೆ ಮಾಡಿದ್ರೆ ನಮ್ಮ ಮನೆ ಅಂಗಡಿ ಹೋಗುತ್ತದೆ ಎನ್ನುವ ಭಯ ಬರಬೇಕು. ಉತ್ತರ ಪ್ರದೇಶದಲ್ಲಿ ಈ ಅಸ್ತ್ರ ಪ್ರಯೋಗವಾಗಿದೆ. ಕರ್ನಾಟಕದಲ್ಲಿ ಯಾಕೆ ಮಾಡಬಾರದು? ಮುಸ್ಲಿಮರು ಇರುವ ವಾನಿಪ್ಲಾಟ್ ಮೇಲೆ ಬುಲ್ಡೋಜರ್ ಹಾಕಬೇಕು. ಸರ್ಕಾರದ ಮೇಲೆ ಕಾನೂನುಕ್ರಮ ಆದರೆ ಆಗಲಿ. ಗಲಭೆಕೋರರ ಮನೆ ಮೇಲೆ ಬುಲ್ಡೋಜರ್ ಹಾಕಿ ಮನೆ ಕಿತ್ತು ಬಿಸಾಕಬೇಕು ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಯೂನಿಫಾರ್ಮ್‌ ಹಾಕ್ಕೊಂಡು ಬಿಲ್ಡಪ್‌

    ಲೌಡ್ ಸ್ಪೀಕರ್ ಹೋರಾಟದ ಕುರಿತು ಮಾತನಾಡಿದ ಅವರು, ಶ್ರೀರಾಮಸೇನಾ ಹೋರಾಟದಿಂದ ನಿದ್ದೆ ಮಾಡುವ ನಿರ್ಲಕ್ಷ್ಯ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಲೌಡ್ ಸ್ಪೀಕರ್‌ನಲ್ಲಿ ಕೂಗುವುದಕ್ಕೆ ಸಾಕ್ಷಿ ಕೊಡುತ್ತೇವೆ. ಎಫ್‍ಐಆರ್ ದಾಖಲು ಮಾಡುವ ಜೊತೆಗೆ ಮಸೀದಿಯನ್ನು ಸೀಜ್ ಮಾಡಿ. ಒಂದು ವೇಳೆ ಅದನ್ನು ನಿಲ್ಲಸದೇ ಇದ್ದಲ್ಲಿ, ಮೇ 9ನೇ ತಾರೀಖು ಎಲ್ಲ ದೇವಸ್ಥಾನಗಳಲ್ಲಿ 5 ಗಂಟೆಗೆ ಮೈಕ್ ಹಾಕಿ ಭಜನೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಶ್ರೀರಾಮ ಸೇನೆಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದು ಕುಖ್ಯಾತರಾಗಬೇಡಿ: ಕಟೀಲ್ ವಿರುದ್ಧ ಮುತಾಲಿಕ್ ಕಿಡಿ

    loudspeakers

    ಲವ್ ಕೇಸರಿ ಕ್ರಿಯೆಗೆ ಪ್ರತಿಕ್ರಿಯೆ ನೀಡಿದಂತಾಗುತ್ತದೆ. ರಾಜ್ಯದಲ್ಲಿ ಲವ್ ಕೇಸರಿ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ಲವ್ ಜಿಹಾದ್‍ನಿಂದ ಹಿಂದೂ ಹುಡುಗಿಯರು ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

  • ಪ್ರಿಯಾಂಕ್ ಖರ್ಗೆಯವರ ಏಜೆಂಟ್ ಆಗಿ ನೀವ್ಯಾಕೆ ಮಾತನಾಡಿದ್ದಿರಾ?: ಪ್ರಮೋದ್ ಮುತಾಲಿಕ್

    ಪ್ರಿಯಾಂಕ್ ಖರ್ಗೆಯವರ ಏಜೆಂಟ್ ಆಗಿ ನೀವ್ಯಾಕೆ ಮಾತನಾಡಿದ್ದಿರಾ?: ಪ್ರಮೋದ್ ಮುತಾಲಿಕ್

    ಕಲಬುರಗಿ: ಪ್ರಿಯಾಂಕ್ ಖರ್ಗೆಯವರ ಏಜೆಂಟ್ ಆಗಿ ನೀವ್ಯಾಕೆ ಮಾತನಾಡಿದ್ದಿರಾ? ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

    ಪ್ರತಾಪ್ ಸಿಂಹ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆಯವರ ಏಜೆಂಟ್ ಆಗಿ ನೀವ್ಯಾಕೆ ಮಾತನಾಡಿದ್ದಿರಾ? ನೀವು ಧಾರ್ಮಿಕ ಮುಖಂಡರಾಗಿ ಜನರ ಬಗ್ಗೆ ಮಾತಾಡಿ. ಕ್ರಿಶ್ಚಿಯನ್ ಮತಾಂತರ, ಹಿಂದೂಗಳ ಮೇಲೆ ದಬ್ಬಾಳಿಕೆ ಈ ವಿಚಾರಗಳ ಬಗ್ಗೆ ಮಾತಾಡಲು ನಿಮಗೆ ಏನಾಗಿದೆ? ಖರ್ಗೆ ಅವರು ನಿಮಗೆ ಈ ರೀತಿ ಮಾತನಾಡಲು ಎಷ್ಟು ದುಡ್ಡು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ವರ ಗೈರು – ಮನೆ ಮುಂದೆ ಧರಣಿ ಕುಳಿತ ವಧು

    ಸುಲಫಲ ಶ್ರೀಗಳ ಹೇಳಿಕೆ ಕುರಿತು ಮಾತನಾಡಿದ ಅವರು, ಮಠಾಧಿಪತಿಗಳು ಮಠ, ಧರ್ಮ, ದೇಶ ಉಳಿಸಲು ಕಾರ್ಯ ಮಾಡಬೇಕು. ಗೋಹತ್ಯೆಗಳು ನಡೆಯುತ್ತಿವೆ. ಗೋಹತ್ಯೆ ತಡೆಯಲು ಮಠಾಧೀಶರು ಮುಂದಾಗಬೇಕು. ಗೋಹತ್ಯೆ ನಿಷೇಧ ಮಾಡಿರುವ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಗೋಹತ್ಯೆ ನಿಷೇಧ ಕಾಯ್ದೆ ಕಾಟಚಾರಕ್ಕೆ ಸೀಮಿತವಾಗಿದೆ ಎಂದು ಕಿಡಿಕಾರಿದರು.

    ಮಸೀದಿಗಳ ಮೇಲೆ ಮೈಕ್ ನಿಷೇಧ ಮಾಡಿ ಹಲವು ದಿನಗಳು ಕಳೆದಿವೆ. ಆದರೆ ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ ಶಬ್ದ ಶುರುವಾಗುತ್ತದೆ. ಇದು ಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆ. ದಿನದಲ್ಲಿ ಐದು ಬಾರಿ ಮಸೀದಿಗಳಲ್ಲಿನ ಪ್ರಾರ್ಥನೆ ಶಬ್ದ ಕಿರಿಕಿರಿಯುಂಟಾಗುತ್ತಿದೆ. ಈ ಬಗ್ಗೆ ಶ್ರೀರಾಮ ಸೇನಾ ಹೋರಾಟ ಶುರು ಮಾಡುತ್ತಿದೆ. ನಮಗೆ ಪ್ರಾರ್ಥನೆ ಮಾಡಲು ಅಭ್ಯಂತರವಿಲ್ಲ. ಆದರೆ ಶಬ್ದಕ್ಕೆ ತಕರಾರು ಇದೆ. ಡಿಸಿ ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕ್ತುವಿ. ಅನೇಕ ಮುಸ್ಲಿಂ ದೇಶಗಳಲ್ಲಿಯೇ ಮಸೀದಿಗಳ ಮೈಕ್ ತೆಗೆಯಲಾಗಿದೆ ಎಂದು ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದರು. ಇದನ್ನೂ ಓದಿ: ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ