Tag: ಶ್ರೀರಾಮ

  • ಪ್ರಾಣಪ್ರತಿಷ್ಠೆ ಸಮಯಕ್ಕೆ ಮೈಸೂರಿನಲ್ಲೂ ವಿಶೇಷ ಪೂಜೆ – ಶ್ರೀರಾಮನಿಗೆ ಸಪ್ತ ನದಿಗಳ ನೀರಿನಿಂದ ಜಲಾಭೀಷೇಕ!

    ಪ್ರಾಣಪ್ರತಿಷ್ಠೆ ಸಮಯಕ್ಕೆ ಮೈಸೂರಿನಲ್ಲೂ ವಿಶೇಷ ಪೂಜೆ – ಶ್ರೀರಾಮನಿಗೆ ಸಪ್ತ ನದಿಗಳ ನೀರಿನಿಂದ ಜಲಾಭೀಷೇಕ!

    – 102 ಬಗೆಯ ವಿಶೇಷ ಆರತಿ, 1,08,000 ತುಳಸಿ ದಳ ರಸದಿಂದಲೂ ಅಭಿಷೇಕ

    ಮೈಸೂರು: ಶ್ರೀರಾಮನ ಮೂರ್ತಿಗೆ ಸಪ್ತ ನದಿಗಳ ನೀರಿನಿಂದ (River water) ಜಲಾಭೀಷೆಕ ನೇರವೇರಿಸಲು ಮೈಸೂರಿನಲ್ಲಿ (Mysuru) ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಮೈಸೂರಿನ ವಾಸವಿ ಟ್ರಸ್ಟ್ ನವರು ಶ್ರೀರಾಮನ ಮೂರ್ತಿಯ ಅಭಿಷೇಕಕ್ಕೆ ಸಪ್ತ ನದಿಗಳ ನೀರನ್ನ ತರಿಸಿದ್ದಾರೆ. ಕಾವೇರಿ, ಕಪಿಲಾ, ನರ್ಮಾದಾ, ಸಿಂಧು, ಗಂಗಾ, ಸರಯೂ, ಯುಮುನಾ ನದಿ ನೀರನ್ನು ತಂದು ಜಲಾಭಿಷೇಕಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಿಎಂ ತವರಲ್ಲಿ ಶ್ರೀರಾಮನ ಹೆಸರಿನ ಲಕ್ಷ ದೀಪೋತ್ಸವಕ್ಕೆ ಅನುಮತಿ ರದ್ದು – ರಾಮಭಕ್ತರಿಂದ ಆಕ್ಷೇಪ

    ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಅದೇ ಸಮಯಕ್ಕೆ ಮೈಸೂರಿನ ದೇವಾಲಯದಲ್ಲೂ ಪ್ರಭು ಶ್ರೀರಾಮನಿಗೆ ಜಲಾಭೀಷೇಕ ನೆರವೇರಿಸಲಾಗುತ್ತದೆ. ಜೊತೆಗೆ ಪಂಚಾಮೃತ ಅಭಿಷೇಕ, 1,08,000 ತುಳಸಿ ದಳದಿಂದ ತೆಗೆದಿರುವ ರಸದಿಂದ ವಿಶೇಷ ಅಭಿಷೇಕವನ್ನೂ ನೆರವೇರಿಸಲಾಗುತ್ತದೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಮತ್ತೊಂದು ದೀಪಾವಳಿ, ಕ್ರಿಶ್ಚಿಯನ್ ಮಹಿಳೆಯಾದ್ರೂ ನಾನು ಆಚರಿಸುತ್ತೇನೆ – ಮೇರಿ ಮಿಲ್ಬೆನ್ ಸಂತಸ

    ಮುಖ್ಯವಾಗಿ ಅಯೋಧ್ಯೆ (Ayodhya) ಮತ್ತು ವಾರಣಾಸಿಯಿಂದ 102 ಬಗೆಯ ಆರತಿಗಳನ್ನ ತರಿಸಲಾಗಿದೆ. ಈ ಆರತಿಯನ್ನ ದೇಶದಲ್ಲಿ ಎಲ್ಲಿಯೂ ಮಾಡುತ್ತಿಲ್ಲ. ಸೋಮವಾರ ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ಮೈಸೂರು ನಗರದ ಆಲಮ್ಮ ಛತ್ರದಲ್ಲಿ 102 ಬಗೆಯ ಆರತಿ ನೆರವೇರಿಸಲಾಗುತ್ತದೆ. ಜೊತೆಗೆ ರಾಜ್ಯದಲ್ಲಿ ಬೆಳೆದಿರುವ ವಿವಿಧ ಬಗೆಯ ಪುಷ್ಪಗಳಿಂದ ರಾಮನ ಮೂರ್ತಿಗೆ ಅಲಂಕಾರ ಮಾಡಲಾಗುತ್ತದೆ. ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುವಂತೆ ಇಲ್ಲಿಯೂ ನೆರವೇರಿಸಲಾಗುತ್ತದೆ ಎಂದು ವಾಸವಿ ಟ್ರಸ್ಟ್‌ ಸಿಬ್ಬಂದಿ ಪಬ್ಲಿಕ್‌ ಟಿವಿಗೆ ತಿಳಿಸಿದ್ದಾರೆ.

  • ಮಂತ್ರಾಕ್ಷತೆ ಬಳಿಕ ಮನೆ ಮನೆಗೂ ಭಗವಾಧ್ವಜ – ಬೀದರ್‌ನ ಮಹಿಳೆಯರ ಅಳಿಲು ಸೇವೆ!

    ಮಂತ್ರಾಕ್ಷತೆ ಬಳಿಕ ಮನೆ ಮನೆಗೂ ಭಗವಾಧ್ವಜ – ಬೀದರ್‌ನ ಮಹಿಳೆಯರ ಅಳಿಲು ಸೇವೆ!

    – ಖುದ್ದು ಮಹಿಳೆಯರೇ ಧ್ವಜ ಹೊಲಿದು ಹಂಚಿಕೆ

    ಬೀದರ್: ಮಂತ್ರಾಕ್ಷತೆ ಬಳಿಕ ಮನೆ ಮನೆಗೆ ಭಗವಾಧ್ವಜ (Bhagwa Dhwaja) ವಿತರಣೆ ಮಾಡಲಾಗುತ್ತಿದೆ. ಬೀದರ್‌ನ ರಾಮಭಕ್ತರು ಈ ಕೆಲಸ ಮಾಡುತ್ತಿದ್ದಾರೆ. ಜನವರಿ 22ರಂದು ಪ್ರತಿ ಮನೆ ಮನೆಯ ಮೇಲೂ ಭಗವಾಧ್ವಜ ಹಾರಾಡುವಂತೆ ಮಾಡುತ್ತಿದ್ದಾರೆ.

    ಬೀದರ್‌ನ (Bidar) ಈ ಮಹಿಳಾ ಭಕ್ತರು ಶ್ರೀರಾಮನಿಗಾಗಿ (Sri Ram) ಬರೋಬ್ಬರಿ ಒಂದು ಸಾವಿರ ಭಗವಾಧ್ವಜ ಹಾರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ರಾಮಲಲ್ಲಾ ‘ದಿವ್ಯ ದರ್ಶನ’; ವಿಗ್ರಹದ ಫೋಟೋಗಳು ವೈರಲ್‌ – ಜೈ ಶ್ರೀರಾಮ್‌ ಘೋಷಣೆ

    ಬೀದರ್ ತಾಲೂಕಿನ ಕಾಡವಾದ ಗ್ರಾಮದ ರಾಮನ ಪರಮ ಭಕ್ತೆಯರು ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆ ವಿತರಣೆಯಿಂದ ಪ್ರೇರಣೆಗೊಂಡಿದ್ದಾರೆ. ಈ ಪ್ರೇರಣೆಯಿಂದ ಒಂದು ಸಾವಿರ ಭಗವಾ ಧ್ವಜಗಳನ್ನ ಸ್ವತಃ ತಾವೇ ಹೊಲಿದು ಹಂಚಿಕೆ ಮಾಡುತ್ತಿದ್ದಾರೆ. ಬಾಲ ರಾಮನ ಪ್ರತಿಷ್ಠಾಪನೆಯ ದಿನ ಗ್ರಾಮದ ಎಲ್ಲಾ ಮನೆಗಳ ಮೇಲೂ ಭಗವಾಧ್ವಜ ಹಾರಾಡಬೇಕೆಂದು ಪಣ ತೊಟ್ಟು ಈ ಸಾಹಸಕ್ಕೆ ಕೈ ಹಾಕಿದ್ದಾರೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠೆಗೆ ಆಗಮಿಸುವ ಗಣ್ಯರಿಗೆ ಕ್ಯೂಆರ್ ಕೋಡ್ ಪಾಸ್ ಕಡ್ಡಾಯ- ಸ್ಕ್ಯಾನ್ ಆದ ಬಳಿಕವಷ್ಟೇ ಪ್ರವೇಶ

    ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಈಗಾಗಲೇ ಧ್ವಜದ ಬಟ್ಟೆ ವಿತರಿಸಿದ್ದಾರೆ. 500 ಧ್ವಜ ತಯಾರಿಸಿದ್ದು 1 ಸಾವಿರಕ್ಕೂ ಹೆಚ್ಚು ಭಗವಾಧ್ವಜ ತಯಾರಿಸುವ ಪಣ ತೊಟ್ಟಿದ್ದಾರೆ. ರಾಮನ ಪರಮ ಭಕ್ತೆಯರಾಗಿರುವ ಇಂದುಮತಿ ಮರಕಂದಾ, ಸವಿತಾ ನಿನ್ನಿ, ಶ್ರೀದೇವಿ ಮೀನಕೇರಿ, ಸವಿತಾ ಶೀಲವಂತ, ಪದ್ಮಾವತಿ ಕಾರ್ಕನಳ್ಳಿ, ಅಂಬಿಕಾ ಹೂಗಾರ ಎಂಬುವರು ಧ್ವಜ ತಯಾರಿಕೆಯಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

    ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ದಿನ ಬೀದರ್‌ನ ಈ ಗ್ರಾಮದ ಪ್ರತಿ ಮನೆಗಳ ಮೇಲೆ ಭಗವಾಧ್ವಜ ಹಾರಿಸುವ ಮೂಲಕ ಮಹಿಳೆಯರು ರಾಮನಿಗೆ ತಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos 

  • ರಾಮನನ್ನು ಅವಮಾನಿಸಿಯೂ ಸಮರ್ಥಿಸಿಕೊಂಡ ಸಚಿವ ರಾಜಣ್ಣ

    ರಾಮನನ್ನು ಅವಮಾನಿಸಿಯೂ ಸಮರ್ಥಿಸಿಕೊಂಡ ಸಚಿವ ರಾಜಣ್ಣ

    ತುಮಕೂರು: ಅಯೋಧ್ಯೆಯ (Ayodhya Ram Mandir) ಭಗವಾನ್ ಶ್ರೀ ರಾಮನನ್ನು ಟೂರಿಂಗ್ ಟಾಕೀಸ್ ಗೊಂಬೆ ಎಂದು ಅವಮಾನಿಸಿಯೂ ಸಚಿವ ರಾಜಣ್ಣ (KN Rajanna) ಸಮರ್ಥಿಸಿಕೊಂಡಿದ್ದಾರೆ.

    ತುಮಕೂರಿನ (Tumakuru) ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜಣ್ಣ, ನಾನು ರೈತ. ಈ ಹಿಂದೆ ಹೊಲಕ್ಕೆ ಹೋಗುವಾಗ ಹಸುವಿನ ಸಗಣಿ ತೆಗೆದುಕೊಂಡು ಹೋಗುತ್ತಿದ್ದೆ. ಸಗಣಿಯನ್ನೇ ಒಂದು ಮೂರ್ತಿಯನ್ನಾಗಿ ಮಾಡಿ, ಅದಕ್ಕೆ ಗರಿಕೆ ಹುಲ್ಲು ಹಿಟ್ಟು ಪೂಜೆ ಮಾಡ್ತಿದ್ದೆ. ಹಾಗೆಯೇ ಹೊಲದಲ್ಲಿ ಸಿಕ್ಕ ಬೆಣಚು ಕಲ್ಲಿಗೂ ಪೂಜೆ ಮಾಡ್ತಿದ್ವಿ. ಅದು ನಮ್ಮ ನಂಬಿಕೆ. ಬೊಂಬೆಯನ್ನು ದೇವರು ಅಂತ ಹೇಳಿದರೆ ಏನು ತಪ್ಪು. ಬೊಂಬೆಯಲ್ಲಿ ದೈವತ್ವ ಇರುವುದಿಲ್ಲವಾ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.

    ಬಾಬ್ರಿ ಮಸೀದಿ ಬೀಳಿಸಿದ ಸಂದರ್ಭದಲ್ಲಿ ಟೆಂಟ್ ನಲ್ಲಿ ಎರಡು ಗೊಂಬೆಗಳನ್ನು ಇಟ್ಟು ಇದೇ ಶ್ರೀರಾಮ ಅಂದ್ರು. ಅಲ್ಲಿ ಯಾವುದೇ ಪಾಸಿಟಿವ್ ವೈಬ್ರೇಟ್ ಇರಲಿಲ್ಲ ಅಂತಾ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಯೂ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿಯವರು ನನ್ನನ್ನ ರಾವಣ ಎಂದಿದ್ದಾರೆ. ನನಗೆ ಬೇಜಾರಿಲ್ಲ, ರಾವಣ ಎಂದು ಅನ್ನಿಸಿಕೊಳ್ಳಲು ನಾನು ಸಿದ್ಧನಿದ್ದೇನೆ ರಾವಣನಂತಹ ದೈವ ಭಕ್ತ ಬೇರೆ ಯಾರೂ ಇರಲಿಲ್ ಎಂದರು. ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನ ವಿಗ್ರಹದ ವಿಶೇಷತೆ ಏನು..?

    ಹಿಂದೆ ಅಣ್ಣ ದೊರೈ ಅವರು ರಾಮಾಯಣಕ್ಕೆ ಬದಲಾಗಿ ರಾವಣಾಯಣ ಅಂತ ನಾಟಕ ಆಡಿದ್ರು. ಈ ನಾಟಕದಲ್ಲಿ ರಾವಣ ಸೀತೆಯ ಮೇಲೆ ಬಲತ್ಕಾರ ಮಾಡುವುದಿಲ್ಲ. ಇದು ರಾವಣನ ದೊಡ್ಡ ಗುಣ ಅಲ್ಲವೇ ಎಂದು ಪ್ರಶ್ನೆ ಮಾಡಿದರು. ನಾನು, ಶ್ರೀರಾಮ ಮತ್ತು ರಾವಣ ಇಬ್ಬರ ಪರನೂ ಇದ್ದೇನೆ. ನನ್ನ ಹೇಳಿಕೆಯನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. ಈ ಹೇಳಿಕೆಯಿಂದ ನಾನು ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

  • ಅರುಣ್‌ ಕಣ್ಣು ಕಳೆದುಕೊಳ್ಳೋ ಸ್ಥಿತಿ ಎದುರಾಗಿತ್ತು, 15 ದಿನ ಒಂದೇ ಕಣ್ಣಿನಲ್ಲಿ ನೋಡಿಕೊಂಡು ಶಿಲ್ಪ ಕೆತ್ತನೆ ಮಾಡಿದ್ದಾರೆ: ಅರುಣ್ ಯೋಗಿರಾಜ್ ಪತ್ನಿ

    ಅರುಣ್‌ ಕಣ್ಣು ಕಳೆದುಕೊಳ್ಳೋ ಸ್ಥಿತಿ ಎದುರಾಗಿತ್ತು, 15 ದಿನ ಒಂದೇ ಕಣ್ಣಿನಲ್ಲಿ ನೋಡಿಕೊಂಡು ಶಿಲ್ಪ ಕೆತ್ತನೆ ಮಾಡಿದ್ದಾರೆ: ಅರುಣ್ ಯೋಗಿರಾಜ್ ಪತ್ನಿ

    ಮೈಸೂರು: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ವಿರಾಜಮಾನರಾಗಿರುವ ಭಗವಾನ್‌ ರಾಮಲಲ್ಲಾ‌ ಪ್ರಾಣಪ್ರತಿಷ್ಠೆಗೆ ದಿನಗಣನೆ ಬಾಕಿಯಿದೆ. ಮಂದಸ್ಮಿತವಾಗಿ ಎದ್ದು ಕಾಣುತ್ತಿರುವ ಬಾಲರಾಮನ ಮೂರ್ತಿ ಹೆಸರಿನ ಹಿಂದೆ ಕೇಳಿಬರುತ್ತಿರುವುದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಹೆಸರು. ಅದ್ಭುತವಾಗಿ ಮೂಡಿಬಂದಿರುವ ಶ್ರೀರಾಮನ ಮೂರ್ತಿಕಂಡು ದೇಶಾದ್ಯಂತ ನೆಲೆಸಿರುವ ಶ್ರೀರಾಮನ ಭಕ್ತರು ಶಿಲ್ಪಿಯನ್ನು ಹಾಡಿಹೊಗಳುತ್ತಿದ್ದಾರೆ.

    ಈ ಸಂತಸವನ್ನು ʻಪಬ್ಲಿಕ್‌ ಟಿವಿʼ ಜೊತೆಗೆ ಹಂಚಿಕೊಂಡಿರುವ ಅರುಣ್‌ ಯೋಗಿರಾಜ್‌ ಪತ್ನಿ ವಿಜೇತಾ, ಅಚ್ಚರಿಯ ಸಂಗತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos

    ಹೌದು. ಅರುಣ್‌ ಶಿಲ್ಪ ಕೆತ್ತನೆ ಮಾಡುವಾಗ ಒಂದು ಕಣ್ಣನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಿತ್ತು. ಮೂರ್ತಿ ಕೆತ್ತನೆ ಮಾಡುವಾಗ ಒಂದು ಕಲ್ಲಿನ ಚೂರು ಅರುಣ್ ಯೋಗಿರಾಜ್ ಕಣ್ಣಿನ ಗುಡ್ಡೆಗೆ ಬಡಿದಿತ್ತು. ಕಣ್ಣಿಗೆ ಗಾಯ ಸಹ ಆಗಿತ್ತು. ತಕ್ಷಣ ಅಯೋಧ್ಯೆ ಟ್ರಸ್ಟ್‌ನವರು ಅವರನ್ನ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿಸಿ, ಕಲ್ಲಿನ ಚೂರನ್ನು ಹೊರ ತೆಗೆಸಿದ್ದರು. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್‌

    ಸರಿಸುಮಾರು 15 ದಿನಗಳ ಕಾಲ ಅರುಣ್‌ ಒಂದು ಕಣ್ಣು ಮುಚ್ಚಿಕೊಂಡೇ ಶಿಲ್ಪ ಕೆತ್ತನೆ ಮಾಡಿದ್ದರು. ಈ ಬಗ್ಗೆ ನನಗಾಗಲಿ ನಮ್ಮ, ಕುಟುಂಬಸ್ಥರಿಗಾಗಿ ಹೇಳಿರಲಿಲ್ಲ. ಅಲ್ಲಿ ಕೆಲಸ ಮಾಡುತ್ತಿದ್ದವರು ವಿಷಯ ತಿಳಿಸಿದಾಗ ತುಂಬಾ ಭಯವಾಗಿತ್ತು. ಚಿಕಿತ್ಸೆ ಪಡೆದ ಒಂದೆರಡು ದಿನಗಳಲ್ಲಿ ಅವರೇ ಕರೆ ಮಾಡಿ ವಿಷಯ ತಿಳಿಸಿ, ಆರಾಮಾಗಿದ್ದೇನೆ ಎಂದು ಹೇಳಿದರು. ನಂತರ ನಮಗೆ ಸಮಾಧಾನವಾಯಿತು. ಅಷ್ಟಾದರೂ ವಿಶ್ರಾಂತಿ ತೆಗೆದುಕೊಳ್ಳದೇ ಶಿಲ್ಪ ಕೆತ್ತನೆ ಮಾಡಿದ್ದರು. ಇದೆಲ್ಲವು ಆ ಭಗವಂತನದ್ದೇ ಕೃಪೆ ಎಂದು ಭಾವುಕರಾಗಿದ್ದಾರೆ.

    ಇದೇ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಪೀಠದಲ್ಲಿ ನೆಲೆಸಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೆರವೇರಲಿದೆ. ಇದನ್ನೂ ಓದಿ: Ayodhya Ram Mandir: ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ

  • ಅಯೋಧ್ಯೆಯ ಬಾಲರಾಮನಿಗೆ ಬೆಂಗ್ಳೂರಿನಿಂದ ತುಳಸಿಮಾಲೆಯ ಸೇವೆ!

    ಅಯೋಧ್ಯೆಯ ಬಾಲರಾಮನಿಗೆ ಬೆಂಗ್ಳೂರಿನಿಂದ ತುಳಸಿಮಾಲೆಯ ಸೇವೆ!

    – ಪ್ರಾಣ ಪ್ರತಿಷ್ಠೆಯ ದಿನವೂ ಅರ್ಪಣೆಯಾಗಲಿದೆ ಈ ವಿಶೇಷ ತುಳಸಿ

    ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ರಾಮೋತ್ಸವದ ಸಂಭ್ರಮಕ್ಕೆ ಇಡೀ ಭಾರತವೇ ಸಾಕ್ಷಿಯಾಗಲಿದೆ. ಎಲ್ಲೆಡೆ ರಾಮ.. ಎಲ್ಲರ ರಾಮ ಅನ್ನುವಂತಹ ಉದ್ಘೋಷಗಳು ಕೇಳಿಬರುತ್ತಿವೆ. ಈ ನಡುವೆ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಮಹತ್ಕಾರ್ಯದಲ್ಲಿ ಬೆಂಗಳೂರಿನ (Bengaluru) ಪಾಲೂ ಇದೆ ಅನ್ನೋದು ವಿಶೇಷವಾಗಿದೆ. ಏಕೆಂದರೆ ಬಾಲರಾಮನಿಗೆ ಬೆಂಗಳೂರಿನಿಂದ ತುಳಸಿಮಾಲೆ ಸೇವೆ ಅರ್ಪಣೆಯಾಗಲಿದೆ.

    ಹೌದು.. ಅಯೋಧ್ಯೆಗೆ ತುಳಸಿಮಾಲೆ (Tulsi Mala) ಅರ್ಪಿಸಬೇಕು ಅಂತಾ ಬೆಂಗಳೂರು ಜಯನಗರದ ಶಿವಕುಮಾರ್ ಹಾಗೂ ಸ್ನೇಹಿತರು ಅಂದುಕೊಂಡಿದ್ದರು. ಅದಾದ ಬಳಿಕ ಪೇಜಾವರ ಶ್ರೀಗಳ ಸಹಾಯದೊಂದಿಗೆ ಟ್ರಸ್ಟ್ ಒಪ್ಪಿಗೆ ಪಡೆದುಕೊಂಡು, ಗುಜರಾತ್‌ನ ತುಳಸಿವನದಿಂದ ವಿಶೇಷ ತುಳಸಿಬೀಜವನ್ನು ಪಡೆದುಕೊಂಡರು. ಇದನ್ನೂ ಓದಿ: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ಮೂರ್ತಿ ಇಂದು ರಾಮಮಂದಿರ ಪ್ರವೇಶ – ದೇವಾಲಯದ ಸುತ್ತ ಪ್ರದಕ್ಷಿಣೆ

    ಈ ತುಳಸಿ ಬೆಳೆಯುವುದಕ್ಕಾಗಿಯೇ ಅಯೋಧ್ಯೆಯಿಂದ 60 ಕಿಲೋ ಮೀಟರ್ ದೂರದಲ್ಲಿ 2 ಎಕರೆ ಭೂಮಿ ಖರೀದಿಸಲಾಗಿತ್ತು. ಅಲ್ಲಿಯೇ ತುಳಸಿ ಬೆಳೆದು ಇದೀಗ ರಾಮಮಂದಿರಕ್ಕೆ ಅರ್ಪಣೆ ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಈಗಾಗಲೇ ಮೂರು ಜನ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ನಿರಂತರವಾಗಿ ರಾಮನಿಗೆ ತುಳಸಿಮಾಲೆಯನ್ನು ಸಮರ್ಪಣೆ ಮಾಡಲಿದ್ದಾರೆ. ಪ್ರಾಣ ಪ್ರತಿಷ್ಠಾಪನೆಯ ದಿನವೂ ಇದೇ ತುಳಸಿಮಾಲೆ ಅರ್ಪಣೆಯಾಗಲಿದೆ ಎಂದು ತುಳಸಿಮಾಲೆ ಅರ್ಪಿಸಿದ ಶಿವಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಪ್ರತಿದಿನ ಒಂದೊಂದು ಕೆಜಿ ಮೀಸಲು – ಶ್ರೀರಾಮನ ನೈವೇದ್ಯಕ್ಕೆ 1,265 KG ತೂಕದ ಲಡ್ಡು ಅರ್ಪಿಸಿದ ರಾಮಭಕ್ತ

    ಈ ಕುರಿತು ಮಾತನಾಡಿರುವ ಅವರು, ಕರ್ನಾಟಕ ಶಿಲೆಯಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮನಿಗೆ ಕರ್ನಾಟಕದಿಂದ ತುಳಸಿ ಕಾಣಿಕೆ ನೀಡುತ್ತಿರುವುದು ಮತ್ತಷ್ಟು ವಿಶೇಷ ಅನ್ನಿಸಿದೆ. ಶ್ರೀರಾಮನ ಸೇವೆಯಲ್ಲಿ ನಮ್ಮದೂ ಪಾಲಿದೆ ಅನ್ನುವ ಸಮಾಧಾನವಿದೆ. ಶ್ರೀರಾಮನ ಅನುಗ್ರಹ ಎಲ್ಲರ ಮೇಲೂ ಇರಲಿ ಎಂದು ನೆನೆದಿದ್ದಾರೆ. ಇದನ್ನೂ ಓದಿ: ಭಕ್ತರು ಚಳಿಯಿಂದ ರಕ್ಷಿಸಿಕೊಳ್ಳಲು ಅಯೋಧ್ಯೆಯಲ್ಲಿ ಮಾಡಲಾಗಿದೆ ವಿಶೇಷ ವ್ಯವಸ್ಥೆ

  • ಟೂರಿಂಗ್‌ ಟಾಕೀಸ್‌ನಲ್ಲಿ ಗೊಂಬೆ ಇಟ್ಟಿದ್ದಾರೆ ಅನ್ನಿಸ್ತು: ಶ್ರೀರಾಮನ ಕುರಿತು ಸಚಿವ ರಾಜಣ್ಣ ಹೇಳಿಕೆ

    ಟೂರಿಂಗ್‌ ಟಾಕೀಸ್‌ನಲ್ಲಿ ಗೊಂಬೆ ಇಟ್ಟಿದ್ದಾರೆ ಅನ್ನಿಸ್ತು: ಶ್ರೀರಾಮನ ಕುರಿತು ಸಚಿವ ರಾಜಣ್ಣ ಹೇಳಿಕೆ

    – ಬಿಜೆಪಿ ಟೀಕಿಸುವ ಭರದಲ್ಲಿ ಭಗವಾನ್ ರಾಮನ ಅಪಮಾನಿಸುವ‌ ಮಾತು

    ತುಮಕೂರು: ಅಯೋಧ್ಯೆ ರಾಮಮಂದಿರ (Ram Mandir) ವಿಚಾರವಾಗಿ ಬಿಜೆಪಿ ನಡೆಯನ್ನು ಟೀಕಿಸುವ ಭರದಲ್ಲಿ ಭಗವಾನ್‌ ಶ್ರೀರಾಮನನ್ನು (Sri Ram) ಕಾಂಗ್ರೆಸ್‌ ಸಚಿವ ಕೆ.ಎನ್.ರಾಜಣ್ಣ (K.N.Rajanna) ಅವಮಾನಿಸಿದ್ದಾರೆ.

    ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್‌ ಅಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತಾ ಹೇಳ್ತಿದ್ರು. ಟೂರಿಂಗ್ ಟಾಕೀಸ್ ಅಲ್ಲಿ ಗೊಂಬೆ ಇಟ್ಟಿದ್ದಾರೆ ಅನಿಸ್ತು ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂ – ಯತೀಂದ್ರ ಹೊಸ ಬಾಂಬ್!

    ಈಗೆಲ್ಲಾ ಶ್ರೀರಾಮನ ದೇವಸ್ಥಾನ ಕಟ್ಟಿಸ್ತಿದ್ದಾರೆ ಅಲ್ಲಿ. ಇನ್ನೊಂದು ಐದಾರು ತಿಂಗಳು ಕಳೀಲಿ ಏನೇನ್ ಬರ್ತವೆ, ಏನೇನು ಅಂತೇಳಿ. ಯಾವತ್ತೂ ಕೂಡ ಶ್ರೀರಾಮ ಎಲ್ಲಾ ಜನರನ್ನ ಆಶೀರ್ವದಿಸುವ ದೇವರು. ಅದಕ್ಕೋಸ್ಕರ ರಾಮರಾಜ್ಯದ ಕಲ್ಪನೆ ಬಂದಿದ್ದು ಎಂದು ತಿಳಿಸಿದ್ದಾರೆ.

    ಈಗ ಅದು ಬಿಜೆಪಿ ಶ್ರೀರಾಮನೋ, ಮೋದಿ ಶ್ರೀರಾಮನೋ ನೋಡೋಣ. ಅದು ಏನಾಗುತ್ತೆ ಅಂತಾ. ನಮ್ಮೂರಲ್ಲಿ ನೂರಾರು ವರ್ಷ ಇತಿಹಾಸ ಇರುವಂತಹ, ಪಾವಿತ್ರ್ಯವಾಗಿರುವ ಶ್ರೀರಾಮನ ದೇವಸ್ಥಾನಗಳಿವೆ. ಈಗ ಅದನ್ನ ಬಿಟ್ಟು ಇವರು ಚುನಾವಣೆಗೋಸ್ಕರ ದೇವಸ್ಥಾನಗಳನ್ನ ಕಟ್ಟಿ, ಜನರಿಗೆ ಮೋಸ ಮಾಡೋ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಪೂರ್ಣ ತೋಳಿನ ಅಂಗಿ, ಶೂ ಧರಿಸುವುದು ನಿಷೇಧ – PSI ಪರೀಕ್ಷಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ

  • ಬೆಂಗಳೂರಿನ ಮಾಲ್‍ಗಳಲ್ಲಿ ರಂಗೋಲಿಯಲ್ಲಿ ಅರಳಿದ ರಾಮಮಂದಿರ

    ಬೆಂಗಳೂರಿನ ಮಾಲ್‍ಗಳಲ್ಲಿ ರಂಗೋಲಿಯಲ್ಲಿ ಅರಳಿದ ರಾಮಮಂದಿರ

    ಬೆಂಗಳೂರು: ರಾಮನೂರಿನ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದ್ದು, ದೇಶದೆಲ್ಲೆಡೆ ರಾಮನ ಜಪ ಜೋರಾಗಿದೆ. ಹಾಗೆಯೇ ರಾಜಧಾನಿಯ ಮಾಲ್ ಗಳಲ್ಲಿ (Mall) ರಾಮನ ಸ್ಮರಣೆ ಆರಂಭವಾಗಿದೆ.

    ಹೌದು. ಇದೇ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೋಟ್ಯಂತರ ಹಿಂದುಗಳು ತಮ್ಮದೇ ಆದ ರೀತಿಯಲ್ಲಿ ರಾಮನ ಭಕ್ತಿ ಪ್ರದರ್ಶಿಸುತ್ತಿದ್ದಾರೆ. ಅದೇ ರೀತಿ ಸಿಲಿಕಾನ್ ಸಿಟಿ ಬೆಂಗಳೂರಿನ ಜಿಟಿ ಮಾಲ್‍ನಲ್ಲಿ ಅಯೋಧ್ಯೆಯ ರಾಮಮಂದಿರವನ್ನು, ಹಿಂದೆ ರಾಮನೇ ಆಗಸದಲ್ಲಿ ಪ್ರತ್ಯಕ್ಷವಾದ ದೃಶ್ಯವನ್ನು ರಂಗೋಲಿಯಿಂದ (Rangoli) ಸೆರೆಹಿಡಿಯಲಾಗಿದೆ. ಇದು ನೋಡುಗರನ್ನ ಸೆಳೆಯುತ್ತಿದೆ.

    ಈ ರಂಗೋಲಿ 25 ಅಡಿ ಉದ್ದ, 25 ಅಡಿ ಅಗಲದಲ್ಲಿ ರಚನೆಯಾಗಿದೆ. ಚಿತ್ರದ ವಿಶೇಷ ಏನೆಂದರೆ ರಾಮಮಂದಿರವನ್ನ ನಿರ್ಮಿಸಿದ ನಂತರ ರಾಮಮಂದಿರ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದ ಕೂಲಿ- ಕಾರ್ಮಿಕರಿಗೆ ರಾಮ ದರ್ಶನ ನೀಡಿದ ಎನ್ನುವ ಕಾನ್ಸೆಪ್ಟ್ ನಲ್ಲಿ ತ್ರಿಡಿ ಎಫೆಕ್ಟ್ ನಲ್ಲಿ ಈ ಚಿತ್ರವನ್ನ ಬಿಡಿಸಲಾಗಿದೆ ಎಂದು ವಿದ್ಯಾರ್ಥಿ ಅಕ್ಷಯ್ ಜಾಲಿಹಾಳ್ ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಗೆಲ್ಲಲು ಕಾಂಗ್ರೆಸ್‍ಗೆ ಮಹಿಳಾ ಅಭ್ಯರ್ಥಿಗಳೇ ಆಸರೆ- 3 ಕ್ಷೇತ್ರದಲ್ಲಿ ಆಯ್ಕೆ ಫೈನಲ್

    ಈ ರಂಗೋಲಿ ಹೈಪರ್ ರಿಯಲಿಸ್ಟಿಕ್ ರಂಗೋಲಿಯಾಗಿದ್ದು, ಹೈ ಎಂಡ್ ತ್ರಿಡಿ ಎಫೆಕ್ಟ್ ನಲ್ಲಿದೆ. ಈ ರಂಗೋಲಿಗೆ 45-50 ಬಣ್ಣಗಳ ಶೇಡ್ ಬಳಸಲಾಗಿದೆ. ಸಾಂಪ್ರದಾಯಿಕ ಕಲೆಯಾದ ರಂಗೋಲಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ಬರೆಯಲಾಗಿದೆ. ಹಿಂದುಗಳಿಗೆ ಹೆಮ್ಮೆಯಾದ ರಾಮಮಂದಿರವನ್ನು ಅಯೋಧ್ಯೆಗೆ ಹೋಗಿ ನೋಡಿ ಬರಲು ಆಗಲ್ಲ. ಈ ಮೂಲಕವಾದ್ರೂ ರಾಮನನ್ನು ಕಣ್ತುಂಬಿಕೊಳ್ಳುತ್ತೇವೆ ಎಂದು ಸಿಲಿಕಾನ್ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಒಟ್ಟಿನಲ್ಲಿ ರಾಮನ ಜಪ ಬೆಂಗಳೂರಿನೆಲ್ಲೆಡೆ ಮೊಳಗುತ್ತಿದೆ.

  • ನಾವು ಶ್ರೀರಾಮಚಂದ್ರನನ್ನು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ: ಸಿಎಂ

    ನಾವು ಶ್ರೀರಾಮಚಂದ್ರನನ್ನು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ: ಸಿಎಂ

    ಬೆಂಗಳೂರು: ನಾವು ಶ್ರೀರಾಮಚಂದ್ರನ (Sri Ramachandra) ವಿರುದ್ಧ ಇಲ್ಲ. ಬಿಜೆಪಿ (BJP) ಅವರು ರಾಮ ಮಂದಿರವನ್ನು ರಾಜಕೀಯ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ಅದನ್ನು ನಾವು ಖಂಡಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಬೆಂಗಳೂರಲ್ಲಿ ಮಾತನಾಡಿದ ಅವರು, ನಾವು ಶ್ರೀರಾಮಚಂದ್ರನ ಭಕ್ತರು, ನಾವು ಶ್ರೀರಾಮಚಂದ್ರನ ಪೂಜೆ ಮಾಡುತ್ತೇವೆ. ಕೇದ್ರ ಸಚಿವರುಗಳು ರಾಜಕೀಯ ಮಾತನಾಡುತ್ತಿದ್ದಾರೆ ಅಷ್ಟೇ. ರಾಜಕೀಯ ಮಾತನಾಡೋರಿಗೆ ಔಷಧವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ

    ನಾವು ಶ್ರೀರಾಮಚಂದ್ರನ ವಿರುದ್ಧವಿಲ್ಲ. ಶ್ರೀರಾಮಚಂದ್ರನನ್ನ ನಾವು ಗೌರವಿಸುತ್ತೇವೆ, ಪೂಜೆ ಮಾಡುತ್ತೇವೆ. ಭಜನೆ ಮಾಡುತ್ತೇವೆ. ರಾಮಮಂದಿರಕ್ಕೆ ನಮ್ಮದು ವಿರೋಧವಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಯಡಿಯೂರಪ್ಪನವರು ಆರೋಪಕ್ಕೆ ಕಿಡಿಕಾರಿದ ಅವರು, ಈಗ ಯಾಕೆ ಇವರು ಅಯೋಧ್ಯೆಗೆ ಹೋಗುತ್ತಿದ್ದಾರೆ. ಶ್ರೀರಾಮಚಂದ್ರ ಇಲ್ಲಿ ಇಲ್ವಾ? ಇಲ್ಲೂ ಎಲ್ಲಾ ಪೂಜೆ ಮಾಡುತ್ತಿದ್ದಾರೆ. ಅಷ್ಟೇ ಎಂದು ಸಿಎಂ ತಿರುಗೇಟು ಕೊಟ್ಟರು.

    ರಾಜ್ಯ ಸರ್ಕಾರದಿಂದ 22 ರಂದು ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲು ಆದೇಶ ಮಾಡಿರುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಿಎಂ ಹೇಳಿದರು. ಮುಜರಾಯಿ ಇಲಾಖೆಯ ಆದೇಶವೇ ಗೊತ್ತಿಲ್ಲ, ಆ ಹೇಳಿಕೆ ನಾನು ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ಅಯೋಧ್ಯೆ ರಾಮ ಮಂದಿರಕ್ಕೆ ಸಂಬಂಧಿಸಿದ ವಿಶೇಷ ಸುದ್ದಿಗಳನ್ನು ಓದಲು ಕ್ಲಿಕ್‌ ಮಾಡಿ: ರಾಮ ಮಂದಿರ

  • ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!

    ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!

    ಕೊಪ್ಪಳ: ಕೋಟ್ಯಂತರ ರಾಮ ಭಕ್ತರ ಕನಸಿನ ಮಂದಿರ (Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲೂ ಸಾವಿರಾರು ಭಕ್ತರು ರಾಮನೂರಿಗೆ ತೆರಳಲು ಬರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಶ್ರೀರಾಮನ (Shri Rama) ನಂಟಿರುವ ಕರ್ನಾಟಕದ (Karnataka) ವಿವಿಧ ಸ್ಥಳಗಳ ಬಗ್ಗೆ ತಿಳಿಯುವುದೂ ಅಷ್ಟೇ ಅವಶ್ಯಕವಾಗಿದೆ.

    ಹೌದು. ಸೀತೆಯನ್ನ ಹುಡುಕುತ್ತಾ ಹೊರಟ ಶ್ರೀರಾಮನ ಹೆಜ್ಜೆ ಗುರುತುಗಳು ಕರುನಾಡಿನಲ್ಲೂ ಮೂಡಿವೆ ಅನ್ನೋದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ನಮ್ಮ ರಾಜ್ಯದ ಕೊಪ್ಪಳ ಜಿಲ್ಲೆಗೂ ರಾಮಾಯಣಕ್ಕೂ ಅವಿನಾಭಾವ ಸಂಬಂಧವಿದೆ ಅನ್ನೋದಕ್ಕೆ ಅನೇಕ ನಿದರ್ಶನಗಳು ಇಲ್ಲಿವೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?

    ರಾವಣ ಸೀತೆಯನ್ನು ಅಪಹರಿಸಿದಾಗ ವನವಾಸದಲ್ಲಿದ್ದ ಶ್ರೀರಾಮ, ಸೀತೆಯನ್ನು ಹುಡುಕುತ್ತಾ ಹೊರಟಿದ್ದ. ಈ ವೇಳೆ ಶ್ರೀರಾಮನಿಗೆ ಶಕ್ತಿ ತುಂಬಿದ್ದು ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ ಅದುವೆ ಕಿಷ್ಕಿಂದೆ ರಾಜ್ಯ. ವಾನರಸೇನೆ ಹಾಗೂ ಶ್ರೀರಾಮನ ಬಂಟ ಹನುಮ ಸಿಕ್ಕಿದ್ದು ಇದೇ ಕಿಷ್ಕಿಂದೆ ರಾಜ್ಯದಲ್ಲಿ ಅದು ಇಂದಿನ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದಲ್ಲಿ. ಇದನ್ನೂ ಓದಿ: ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?

    ಆನೆಗೊಂದಿ ಸಮೀಪದ ಪಂಪಾಸರೋವರದಲ್ಲಿ ಮೊದಲ ಬಾರಿಗೆ ಶ್ರೀರಾಮನನ್ನ ಆಂಜನೇಯ ಭೇಟಿಯಾಗುತ್ತಾನೆ. ಇದೇ ಸ್ಥಳದಲ್ಲಿ ವಾಲಿ ಸುಗ್ರೀವರ ಕಾಳಗ ಸಹ ನಡೆಯತ್ತೆ. ವಾಲಿ – ಸುಗ್ರೀವರ ಕಾಳಗದಲ್ಲಿ ಶ್ರೀರಾಮ ವಾಲಿವಧೆ ಮಾಡಿ ಸುಗ್ರೀವನಿಗೆ ಕಿಷ್ಕಿಂದೆಯ ಅಧಿಕಾರ ತಂದುಕೊಡುತ್ತಾನೆ. ಇದು ಒಂದು ಕಡೆಯಾದ್ರೆ, ಸೀತಾಮಾತೆಯನ್ನ ಹುಡುಕಿ ಹೊರಟ ಶ್ರೀ ರಾಮನಿಗೆ ಶಬರಿ ಕಾದು ಕುಳಿತಿದ್ದು ಕೂಡಾ ಇದೆ, ಪಂಪಾಸರೋವರದಲ್ಲಿ, ಈ ಪಂಪಾಸರೋವರದಲ್ಲಿ ಶಬರಿಯ ಗುಹೆ ಇಂದಿಗೂ ಇದೆ‌. ಈ ಗುಹೆಯಲ್ಲಿ ಪ್ರಭು ಶ್ರೀರಾಮನ ಪಾದುಕೆಗಳಿವೆ. ರಾಮ ಇಲ್ಲಿಂದ ತೆರಳಿದ ಬಳಿಕ ಶಬರಿ ಈ ಪಾದುಕೆಗಳಿಗೆ ಪೂಜೆ ಸಲ್ಲಿಸುತ್ತಿದ್ದಳು ಅನ್ನೋ ಬಗ್ಗೆ ಪುರಾಣಗಳಲ್ಲಿಯೂ ಉಲ್ಲೆಖವಿದೆ‌‌. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ರಾತ್ರಿಯ ವಿಹಂಗಮ ನೋಟವನ್ನು ಚಿತ್ರಗಳಲ್ಲಿ ನೋಡಿ

    14 ವರ್ಷಗಳ ವನವಾಸದಲ್ಲಿದ್ದ ಶ್ರೀರಾಮ ಸೀತೆಯನ್ನ ಹುಡುಕಿ ಹೊರಟಾಗ ಆತನ ಬಳಿ ಯಾವುದೇ ಸೈನ್ಯವಾಗಲಿ, ಯುದ್ಧ ಸಲಕರಣೆಗಳಾಗಲಿ ಇರಲಿಲ್ಲ. ಅಲ್ಲದೇ ಸಮುದ್ರವನ್ನ ದಾಟಿ ಲಂಕೆಗೆ ಹೋಗಲು ಮುಂದಾಗಿದ್ದಾಗ ಹನುಮ ಹಾಗೂ ಕಿಷ್ಕಿಂದೆಯ ರಾಜ್ಯದ ವಾನರ ಸೇನೆ ರಾಮನನ್ನ ಸೇರಿದ್ದು ಇದೇ ಕಿಷ್ಕಿಂದೆಯಲ್ಲಿ. ಕೊಪ್ಪಳ ಜಿಲ್ಲೆಯ ಸುತ್ತ ಮುತ್ತಲಿನ, ಹೊಸಪೇಟೆ, ಬಳ್ಳಾರಿ ಭಾಗದ ಕಬ್ಬಿಣ ಅಧಿರಿನಿಂದಲೇ ಅಂದು ಯುದ್ಧಕ್ಕೆ ಬೇಕಾದ ಆಯುಧಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಇಲ್ಲಿಯೇ ಸೇನೆಯನ್ನು ಸಿದ್ಧಪಡಿಸಿಕೊಂಡಿದ್ದ ಬಗ್ಗೆಯೂ ಇತಿಹಾಸವಿದೆ.

    ನಂತರ ವಾನರ ಸೇನೆಯ ಸಹಾಯದಿಂದಲೇ ಲಂಕೆಗೆ ಸೇತುವೆ ನಿರ್ಮಿಸಿ ಆಂಜನೇಯನ ಸಹಾಯದಿಂದ ಲಂಕಾ ಪ್ರವೇಶಿಸಿ ರಾವಣನ ಸಂಹಾರ ಮಾಡಲಾಯಿತು. ನಂತರ ಸೀತಾ ಮಾತೆಯನ್ನ ಅಯೋಧ್ಯೆಗೆ ಕರೆತರಲಾಯಿತು. ಈ ಎಲ್ಲ ಮಹತ್ಕಾರ್ಯಕ್ಕೆ ಸಹಾಯಕವಾಗಿದ್ದು ಅಂದಿನ ಕಿಷ್ಕಿಂದೆ ರಾಜ್ಯದ ವಾನರ ಸೇನೆ. ಅದು ಇಂದಿನ ಅಂಜನಾದ್ರಿಯ ಆನೆಗೊಂದಿ ಭಾಗ. ಇದಕ್ಕೆ ಅಂಜನಾದ್ರಿ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಹಲವು ಸಾಕ್ಷಿಗಳು ದೊರೆತಿವೆ‌. ಇದರಿಂದ ರಾಮಾಯಣಕ್ಕೂ ಕೊಪ್ಪಳ ಜಿಲ್ಲೆಯಗೂ ಅವಿನಾಭಾವ ಸಂಬಂಧವಿದೆ ಎನ್ನುತ್ತಾರೆ ಇತಿಹಾಸ ತಜ್ಞರು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

  • Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

    Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

    ಅಯೋಧ್ಯೆ: ರಾಮಮಂದಿರ (Ayodhya Ram Mandir) ಲೋಕಾರ್ಪಣೆಗೆ ಇನ್ನು 18 ದಿನ ಮಾತ್ರ ಉಳಿದಿದೆ. ಇಡೀ ಅಯೋಧ್ಯಾ ನಗರಿ ಸರ್ವಾಂಗ ಸುಂದರವಾಗಿ ರೆಡಿಯಾಗ್ತಿದೆ. ಮಂದಿರದ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಗ್ರೌಂಡ್ ಫ್ಲೋರ್ ಕೆಲಸಗಳು ಈಗಾಗಲೇ ಪೂರ್ಣಗೊಂಡಿದೆ. ಈಗಾಗಲೇ ಮಂದಿರ ರೂಪ ಸಿಕ್ಕಿದೆ. ಈ ಸಂಬಂಧ ಶ್ರೀರಾಮಮಂದಿರ ತೀರ್ಥ ಟ್ರಸ್ಟ್ ಮಂದಿರದ ಪ್ರಮುಖ ವಿಶೇಷಗಳನ್ನು ಹಂಚಿಕೊಂಡಿದೆ.

    ಈ ಸಂಬಂಧ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಎಕ್ಸ್ ಮಾಡಲಾಗಿದೆ. ಈ ಮೂಲಕ ಪ್ರವೇಶ ದ್ವಾರದಲ್ಲಿ ಆನೆ (Elephant), ಸಿಂಹ (Lion), ಹನುಮಾನ್ (hanuman) ಮತ್ತು ಗರುಡ ಮೂರ್ತಿಗಳ (Garuda)  ಫೋಟೋ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಈ ಪ್ರತಿಮೆಗಳನ್ನು ರಾಜಸ್ಥಾನದ ಬನ್ಸಿ ಪಹಾರ್‍ಪುರ ಗ್ರಾಮದ ತಿಳಿ ಗುಲಾಬಿ ಬಣ್ಣದ ಮರಳುಗಲ್ಲಿನಿಂದ ಮಾಡಲಾಗಿದೆ ಎಂದು ಎಕ್ಸ್ ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನದವರೆಗೆ ಯುಪಿ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆ ಪ್ರಸಾರ

    ಪೂರ್ವ ದಿಕ್ಕಿನಲ್ಲಿರುವ ಮಂದಿರದ ಪ್ರಧಾನ ಪ್ರವೇಶದ್ವಾರವಾದ ಸಿಂಹದ್ವಾರವನ್ನು ಅನಾವರಣ ಮಾಡಿದೆ. ಯಾರೇ ಆಗಲಿ ಈ ಸಿಂಹದ್ವಾರದ ಮೂಲಕ ಮಂದಿರ ಪ್ರವೇಶಿಸಬೇಕು. ಇದಕ್ಕೆ 32 ಮೆಟ್ಟಿಲುಗಳಿವೆ. ಮಂದಿರದ ಸನಿಹದಲ್ಲೇ ಇರುವ ಪುರಾತನ ಸೀತಾಬಾವಿಯನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಅಯೋಧ್ಯೆಯಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ಇದ್ದ ಬಾಲರಾಮನ ದರ್ಶನದ ಅವಧಿಯನ್ನು ವಿಸ್ತರಿಸಲು ಟ್ರಸ್ಟ್ ಮುಂದಾಗಿದೆ. ಹೀಗಾಗಿ ತಂಪಾದ ಬೆಳದಿಂಗಳಲ್ಲೂ ರಾಮ್‍ಲಲ್ಲಾ ದರ್ಶನ ಪಡೆಯುವ ಸೌಭಾಗ್ಯ ಭಕ್ತರಿಗೆ ಸಿಗಲಿದೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

    ಜೊತೆಗೆ ಬಾಲರಾಮನಿಗೆ ಮಂಗಳ, ಶಯನ ಆರತಿಗಳನ್ನು ಆರಂಭಿಸಲಾಗುತ್ತದೆ. ಇದೇ ವೇಳೆ ರಾಮಮಂದಿರದ ಭದ್ರತೆಗೆ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಅಳವಡಿಸಲು ತೀರ್ಮಾನಿಸಲಾಗಿದೆ. ಮಂದಿರ ಲೋಕಾರ್ಪಣೆ ದಿನ ಉತ್ತರಪ್ರದೇಶ ಪೊಲೀಸರು, ಪ್ಯಾರಾಮಿಲಿಟರಿ ಸೇರಿ 11ಸಾವಿರ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ. ಜೊತೆಗೆ ಹೆಚ್ಚಿನ ನಿಗಾವಹಿಸಲು, ಪ್ರತಿಯೊಬ್ಬರ ಚಲನವಲನದ ಮೇಲೆ ನಿಗಾ ಇಡಲು ಎಐ ಟೆಕ್ನಾಲಜಿ ಬಳಸಿಕೊಳ್ಳಲಾಗುತ್ತದೆ.

    ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನ ಮಂದಿರಕ್ಕೆ ಬರುವ ಭಕ್ತರಿಗೆ ಏಲಕ್ಕಿ ಮತ್ತು ಸಕ್ಕರೆಯಿಂದ ತಯಾರಿಸಿದ ಪ್ರಸಾದ ವಿತರಿಸಲು ದೇಗುಲದ ಆಡಳಿತ ಮಂಡಳಿ ತೀರ್ಮಾನಿಸಿದೆ. ಇದಕ್ಕಾಗಿ 5 ಲಕ್ಷ ಪ್ರಸಾದ ಪಾಕೆಟ್‍ಗಳನ್ನು ಸಿದ್ದ ಮಾಡಲಾಗುತ್ತಿದೆ.