Tag: ಶ್ರೀಲಂಕಾ

  • ಕ್ರಿಕೆಟ್‌ ಆಡಬೇಕಂದ್ರೆ ಕೀಳು ಮನಸ್ಥಿತಿಯಿಂದ ಹೊರಬನ್ನಿ – ಶಕೀಬ್‌ ವಿರುದ್ಧ ಮಾಥ್ಯೂಸ್ ಕೆಂಡ

    ಕ್ರಿಕೆಟ್‌ ಆಡಬೇಕಂದ್ರೆ ಕೀಳು ಮನಸ್ಥಿತಿಯಿಂದ ಹೊರಬನ್ನಿ – ಶಕೀಬ್‌ ವಿರುದ್ಧ ಮಾಥ್ಯೂಸ್ ಕೆಂಡ

    ನವದೆಹಲಿ: ಶಕೀಬ್‌ ಅಲ್‌ ಹಸನ್‌ (Shakib Al Hasan) ಮತ್ತು ಬಾಂಗ್ಲಾದೇಶ ತಂಡ ಮಾಡಿದ್ದು ನಿಜಕ್ಕೂ ಅವಮಾನಕರ ಕೃತ್ಯ. ಅವರು ಕ್ರಿಕೆಟ್‌ ಆಡಬೇಕೆಂದು ಬಯಸಿದ್ರೆ. ಇಂತಹ ಕೀಳುಮಟ್ಟದ ಮನಸ್ಥಿತಿಯಿಂದ ಹೊರಬರಬೇಕು ಎಂದು ಏಂಜಲೋ ಮಾಥ್ಯೂಸ್ (Angelo Mathews) ಕಿಡಿ ಕಾರಿದ್ದಾರೆ.

    ಸೋಮವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ (Sri Lanka) ತಂಡವು ಸೋಲನುಭವಿಸಿದ ನಂತರ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದ ನಾಯಕ ಶಕೀಬ್‌ ಅಲ್‌ ಹಸನ್‌ ಅವರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಶಕೀಬ್‌ ಅಲ್‌ ಹಸನ್‌ ಮಾಡಿದ್ದು, ನಿಜಕ್ಕೂ ಅವಮಾನಕರ ಕೃತ್ಯ. ಅವರ ಸಾಮಾನ್ಯ ಜ್ಞಾನ ಎಲ್ಲಿ ಹೋಯ್ತು ಅನ್ನೋದು ನನಗೆ ಗೊತ್ತಾಗಲಿಲ್ಲ. ಅವರು ಕ್ರಿಕೆಟ್‌ ಆಡಬೇಕೆಂದು ಬಯಸಿದ್ರೆ. ಇಂತಹ ಕೀಳುಮಟ್ಟದ ಮನಸ್ಥಿತಿಯಿಂದ ಹೊರಬರಬೇಕು ಎಂದು ಜಾಡಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ `Timed Out’ ಟಾಕ್‌ ವಾರ್‌ ಜೋರು – ವೀಡಿಯೋ ಪ್ರೂಫ್‌ ಕೊಟ್ಟ ಮಾಥ್ಯೂಸ್

    ಯಾವುದೇ ಒಬ್ಬ ಆಟಗಾರ ಔಟಾದ ಬಳಿಕ ಮುಂದಿನ ಆಟಗಾರ 2 ನಿಮಿಷದ ಒಳಗೆ ಕ್ರೀಸ್‌ನಲ್ಲಿ ಇರಬೇಕು ಏಂದು ಐಸಿಸಿ ನಿಯಮ ಹೇಳುತ್ತದೆ. ನಾನೂ ಕೂಡ 2 ನಿಮಿಷದಲ್ಲೇ ಕ್ರೀಸ್‌ನಲ್ಲಿ ಇದ್ದೆ. ಆದ್ರೆ ನನ್ನ ಹೆಲ್ಮೆಟ್‌ ಒಡೆದಿತ್ತು. ಬದಲಿ ಹೆಲ್ಮೆಟ್‌ ಪಡೆದ ನಂತರವೂ ಇನ್ನೂ 5ಕ್ಕೂ ಹೆಚ್ಚು ಸೆಕೆಂಡುಗಳನ್ನು ಹೊಂದಿದ್ದೆ. ಆದರೂ ಔಟ್‌ ನೀಡಿದ್ದು ಅಮಾನವೀಯ ಎಂದು ಕಿಡಿಕಾರಿದರಲ್ಲದೇ ನಾನು ಶಕೀಬ್‌ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ಆದ್ರೆ ಇಂತಹ ಘಟನೆಯ ನಂತರ ಅವರ ಮೇಲೆ ನನಗಿದ್ದ ಮನಸ್ಥಿತಿ ಬದಲಾಗಿದೆ ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸೆಹ್ವಾಗ್ ಶತಕದ ವೇಳೆ ಲಂಕಾ ಕುತಂತ್ರ – ಇದೇನಾ ನಿಮ್ಮ ಕ್ರೀಡಾ ಸ್ಫೂರ್ತಿ?

    ಏನಿದು ವಿವಾದ..?
    ಬಾಂಗ್ಲಾ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ 24.2ನೇ ಓವರ್‌ನಲ್ಲಿ 135 ರನ್‌ಗಳಿಸಿದ್ದಾಗ ಸಮರವಿಕ್ರಮ ಔಟಾದರು. ಈ ವೇಳೆ ಏಂಜಲೋ ಮಾಥ್ಯೂಸ್ ಕ್ರೀಸ್‌ಗೆ ಬಂದರು. ಆದ್ರೆ ಬಾಲ್ ಎದುರಿಸಲು ಮುಂದಾದಾಗ ಹೆಲ್ಮೆಟ್ ಪಟ್ಟಿ ತುಂಡಾಗಿರುವುದು ಗೊತ್ತಾಯಿತು. ಹೀಗಾಗಿ ಬೇರೆ ಹೆಲ್ಮೆಟ್ ತರುವಂತೆ ಮಾಥ್ಯೂಸ್ ತಂಡಕ್ಕೆ ಸೂಚಿಸಿದರು. ಈ ಸಂದರ್ಭದಲ್ಲಿ ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್ ಅಂಪೈರ್ ಜೊತೆ ಬ್ಯಾಟರ್ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿ ಟೈಮ್ಡ್ ಔಟ್‌ಗೆ (Timed Out) ಮನವಿ ಮಾಡಿದರು. ಈ ಮನವಿಯನ್ನು ಅಂಪೈರ್ ಪುರಸ್ಕರಿಸಿದರು. ಈ ವೇಳೆ ಮ್ಯಾಥ್ಯೂಸ್ ಅವರು, ನನ್ನ ಹೆಲ್ಮೆಟ್ ಪಟ್ಟಿ ಮುರಿದು ಹೋಗಿದೆ. ಹೀಗಾಗಿ ಬೇರೆ ಹೆಲ್ಮೆಟ್ ತರುವಂತೆ ಹೇಳಿದ್ದೇನೆ ಎಂದು ಅಂಪೈರ್‌ಗೆ ಸಮಸ್ಯೆಯನ್ನು ವಿವರಿಸಿದರು. ಅಂಪೈರ್ ಮತ್ತು ಬಾಂಗ್ಲಾ ಆಟಗಾರರ ಜೊತೆಗೆ ಹೆಲ್ಮೆಟ್ ದೋಷದ ಬಗ್ಗೆ ಮನವರಿಕೆ ಮಾಡಿದರೂ ಶಕೀಬ್ ಮಾತ್ರ ತಮ್ಮ ಟೈಮ್ಡ್ ಔಟ್ ಮನವಿಯಿಂದ ಹಿಂದಕ್ಕೆ ಸರಿಯಲಿಲ್ಲ. ಕೊನೆಗೆ ಏಂಜಲೋ ಮಾಥ್ಯೂಸ್ ಬಾಂಗ್ಲಾ ವಿರುದ್ಧ ಗೊಣಗುತ್ತಲೇ ಪೆವಿಲಿಯನ್‌ಗೆ ಮರಳಿದರು. ಬೌಂಡರಿ ಗೆರೆ ದಾಟುತ್ತಿದ್ದಂತೆ ಹೆಲ್ಮೆಟ್ ಎಸೆದು ಸಿಟ್ಟು ಹೊರಹಾಕಿದರು.

    ಟೈಮ್ಡ್ ಔಟ್ ನಿಯಮ ಏನು ಹೇಳುತ್ತದೆ?
    ವಿಕೆಟ್ ಪತನದ ನಂತರ ಅಥವಾ ಬ್ಯಾಟರ್ ನಿವೃತ್ತಿ ಹೊಂದಿದ ಬಳಿಕ 2 ನಿಮಿಷದ ಒಳಗಡೆ ಮುಂದಿನ ಎಸೆತವನ್ನು ಎದುರಿಸಬೇಕು. ಈ ಅವಧಿಯಲ್ಲಿ ಚೆಂಡು ಸ್ವೀಕರಿಸದೇ ಇದ್ದರೇ ಫೀಲ್ಡಿಂಗ್ ನಡೆಸುವ ತಂಡದ ನಾಯಕ ಟೈಮ್ಡ್ ಔಟ್‌ಗೆ ಮನವಿ ಮಾಡಬಹುದು. ಅಂಪೈರ್ ನೇರವಾಗಿ ಔಟ್ ನೀಡಲು ಬರುವುದಿಲ್ಲ. ಬೌಲಿಂಗ್ ನಡೆಸುವ ತಂಡದ ನಾಯಕ ಮನವಿ ಮಾಡಿದ್ರೆ ಮಾತ್ರ ಟೈಮ್ಡ್ ಔಟ್ ನೀಡಬಹುದು. ಬ್ಯಾಟರ್ ಟೈಮ್ಡ್ ಔಟಾದರೆ ಬೌಲರ್‌ಗೆ ವಿಕೆಟ್ ಸಿಗುವುದಿಲ್ಲ. ಇದನ್ನೂ ಓದಿ: ಒಂದು ಎಸೆತ ಎದುರಿಸದೇ ಏಂಜಲೋ ಮಾಥ್ಯೂಸ್ ಔಟ್‌ – ಏನಿದು ಟೈಮ್ಡ್‌ ಔಟ್‌ ನಿಯಮ?

  • ವಿಶ್ವಕಪ್‌ ಕ್ರಿಕೆಟ್‌ನಿಂದ ಬಾಂಗ್ಲಾ ನಾಯಕ ಶಕೀಬ್‌ ಔಟ್‌

    ವಿಶ್ವಕಪ್‌ ಕ್ರಿಕೆಟ್‌ನಿಂದ ಬಾಂಗ್ಲಾ ನಾಯಕ ಶಕೀಬ್‌ ಔಟ್‌

    ಪುಣೆ: ವಿಶ್ವಕಪ್‌ ಕ್ರಿಕೆಟ್‌ನಿಂದ (World Cup Cricket) ಬಾಂಗ್ಲಾದೇಶದ (Bangladesh) ನಾಯಕ ಶಕೀಬ್‌ ಅಲ್‌ ಹಸನ್‌ (Shakib Al Hasan) ಔಟಾಗಿದ್ದಾರೆ.

    ಸೋಮವಾರ ದೆಹಲಿಯಲ್ಲಿ ಶ್ರೀಲಂಕಾ (Sri Lanka) ವಿರುದ್ಧ ನಡೆದ ಪಂದ್ಯದಲ್ಲಿ ಶಕೀಬ್‌ ಅವರ ಎಡಗೈ ತೋರುಬೆರಳಿಗೆ ಗಾಯವಾಗಿತ್ತು. ಪಂದ್ಯದ ನಂತರ ಎಕ್ಸ್‌ರೇ ತೆಗೆದಾಗ ಮೂಳೆ ಮುರಿತವಾಗಿದ್ದು ದೃಢಪಟ್ಟಿತ್ತು. ಮೊಬೈಲಿನಲ್ಲೇ ಲೇಟೆಸ್ಟ್‌ ಸುದ್ದಿ ಓದಲು ಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲಿಗೆ ಸೇರ್ಪಡೆಯಾಗಿಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲ್‌

    ಗಂಭೀರ ಸ್ವರೂಪದ ಗಾಯವಾದ ಹಿನ್ನೆಲೆಯಲ್ಲಿ ನವೆಂಬರ್‌ 11 ರಂದು ಮುಂಬೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇದನ್ನೂ ಓದಿ: ಟೈಮ್ಡ್‌ ಔಟಾಗಿದ್ದಕ್ಕೆ ಶಕೀಬ್‌ ವಿರುದ್ಧ ಸೇಡು ತೀರಿಸಿಕೊಂಡ ಮ್ಯಾಥ್ಯೂಸ್‌

    ವಿಶ್ವಕಪ್‌ ಸೆಮಿಫೈನಲ್‌ ರೇಸ್‌ನಿಂದ ಔಟಾಗಿರುವ ಬಾಂಗ್ಲಾದೇಶ ಶ್ರೀಲಂಕಾ ವಿರುದ್ಧ 3 ವಿಕೆಟ್‌ಗಳ ಜಯ ಸಾಧಿಸಿತ್ತು. ಇದನ್ನೂ ಓದಿ: ಸೆಹ್ವಾಗ್ ಶತಕದ ವೇಳೆ ಲಂಕಾ ಕುತಂತ್ರ – ಇದೇನಾ ನಿಮ್ಮ ಕ್ರೀಡಾ ಸ್ಫೂರ್ತಿ?

    ಈ ಪಂದ್ಯದಲ್ಲಿ ಶಕೀಬ್‌ 2 ವಿಕೆಟ್‌ ಪಡೆಯುವುದರ ಜೊತೆ 82 ರನ್‌ (65 ಎಸೆತ, 12 ಬೌಂಡರಿ, 2 ಸಿಕ್ಸರ್‌) ಸಿಡಿಸಿದ್ದರು. ಶಕೀಬ್‌ ಮತ್ತು ನಜ್ಮುಲ್‌ ಮೂರನೇ ವಿಕೆಟಿಗೆ 149 ಎಸೆತಗಳಲ್ಲಿ 169 ರನ್ ಜೊತೆಯಾಟವಾಡುವ ಮೂಲಕ ಪಂದ್ಯವನ್ನು ಗೆಲುವಿನ ಕಡೆಗೆ ತಿರುಗಿಸಿದ್ದರು. ಅತ್ಯುತ್ತಮ ಆಟದ ಪ್ರದರ್ಶನಕ್ಕೆ ಶಕೀಬ್‌ ಅವರು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರವಾಗಿದ್ದರು.

  • ವಿಶ್ವಕಪ್‌ನಲ್ಲಿ `Timed Out’ ಟಾಕ್‌ ವಾರ್‌ ಜೋರು – ವೀಡಿಯೋ ಪ್ರೂಫ್‌ ಕೊಟ್ಟ ಮಾಥ್ಯೂಸ್

    ವಿಶ್ವಕಪ್‌ನಲ್ಲಿ `Timed Out’ ಟಾಕ್‌ ವಾರ್‌ ಜೋರು – ವೀಡಿಯೋ ಪ್ರೂಫ್‌ ಕೊಟ್ಟ ಮಾಥ್ಯೂಸ್

    ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶ್ರೀಲಂಕಾದ ಕ್ರಿಕೆಟಿಗ ಏಂಜಲೋ ಮಾಥ್ಯೂಸ್ (Angelo Mathews) ಒಂದೇ ಒಂದು ಎಸೆತ ಎದುರಿಸದೇ ಟೈಮ್ಡ್‌ ಔಟ್‌ಗೆ (Timed Out) ಬಲಿಯಾದ ಘಟನೆ ಬಳಿಕ ಟಾಕ್‌ ವಾರ್‌ ಶುರುವಾಗಿದೆ. ಈ ನಡುವೆ ಮಾಥ್ಯೂಸ್ ತಾವು ಕ್ರೀಸ್‌ಗೆ ಬಂದ ಸಮಯವನ್ನೂ ವೀಡಿಯೋ ಫ್ರೂಫ್‌ ಸಮೇತ ಹಂಚಿಕೊಂಡಿದ್ದಾರೆ.

    ಬಾಂಗ್ಲಾ (Bangladesh) ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಶ್ರೀಲಂಕಾ 24.2ನೇ ಓವರ್‌ನಲ್ಲಿ 135 ರನ್‌ಗಳಿಸಿದ್ದಾಗ ಸದೀರ ಸಮರವಿಕ್ರಮ ಔಟಾದರು. ಈ ವೇಳೆ ಮಾಥ್ಯೂಸ್ ತಾವು 2 ನಿಮಿಷದ ಒಳಗೆಯೇ ಕ್ರೀಗೆ ಬಂದಿರುವುದಾಗಿ ವೀಡಿಯೋ ಸಾಕ್ಷಿಯೊಂದನ್ನ ತಮ್ಮ ಸೋಶಿಯಲ್‌ ಮೀಡಿಯಾ (Social Media) X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಇಲ್ಲಿ 4ನೇ ಅಂಪೈರ್‌ ಇಲ್ಲಿ ತಪ್ಪಾಗಿದೆ. ಹೆಲ್ಮೆಟ್‌ ನೀಡಿದ ನಂತರವೂ ನಾನು ಇನ್ನೂ 5 ಸೆಕೆಂಡ್‌ ಮುಂಚಿತವಾಗಿಯೇ ಕ್ರೀಸ್‌ಗೆ ಬಂದಿದ್ದೇನೆ. ರೆಕಾರ್ಡ್‌ ಆಗಿರುವ ವೀಡಿಯೋ ಸಾಕ್ಷಿಯೇ ಇದನ್ನು ತೋರಿಸುತ್ತದೆ. 4ನೇ ಅಂಪೈರ್‌ ದಯವಿಟ್ಟು ಇದನ್ನು ಸರಿಪಡಿಸಬಹುದೇ? ನನ್ನ ಪ್ರಕಾರ ಹೆಲ್ಮೆಟ್‌ ಸುರಕ್ಷತೆ ಅತಿ ಮುಖ್ಯವಾದದ್ದು. ನಾನು ಹೆಲ್ಮೆಟ್‌ ಇಲ್ಲದೇ ಬೌಲರ್‌ ಅನ್ನು ಎದುರಿಸಲು ಸಾಧ್ಯವಾಗಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.

    ಇನ್ನೂ ಶ್ರೀಲಂಕಾದ ಮಾಜಿ ಕ್ರಿಕೆಟಿಗ ರಸ್ಸೆಲ್ ಅರ್ನಾಲ್ಡ್, ಐಸಿಸಿ ಆಟದ ಪರಿಸ್ಥಿತಿಗಳನ್ನು ಹೈಲೈಟ್‌ ಮಾಡಿದಾಗ, ಮುಂದಿನ ಬ್ಯಾಟರ್‌ 2 ನಿಮಿಷಗಳಲ್ಲಿ ಕ್ರೀಸ್‌ಗೆ ಬಂದು ಬೌಲರ್‌ ಎದುರಿಸಲು ಸಿದ್ಧವಾಗಬೇಕು ಎಂದು ಐಸಿಸಿ ನಿಯಮವನ್ನು ನೆನಪಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿರುವ ಮಾಥ್ಯೂಸ್ ಹೌದು, ನಾನು ಹೆಲ್ಮೆಟ್‌ ಇಲ್ಲದೇ ಬೌಲಿಂಗ್‌ ಎದುರಿಸಲು ಸಾಧ್ಯವಾಗಿರಲಿಲ್ಲ. ಆದ್ರೆ 2 ನಿಮಿಷಗಳಲ್ಲೇ ನಾನು ಮತ್ತೆ ಕ್ರೀಸ್‌ನಲ್ಲಿ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಎಸೆತ ಎದುರಿಸದೇ ಏಂಜಲೋ ಮಾಥ್ಯೂಸ್ ಔಟ್‌ – ಏನಿದು ಟೈಮ್ಡ್‌ ಔಟ್‌ ನಿಯಮ?

    ಏನಿದು ವಿವಾದ..?
    ಬಾಂಗ್ಲಾ (Bangladesh) ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಶ್ರೀಲಂಕಾ 24.2ನೇ ಓವರ್‌ನಲ್ಲಿ 135 ರನ್‌ಗಳಿಸಿದ್ದಾಗ ಸಮರವಿಕ್ರಮ ಔಟಾದರು. ಈ ವೇಳೆ ಏಂಜಲೋ ಮಾಥ್ಯೂಸ್ ಕ್ರೀಸ್‌ಗೆ ಬಂದರು. ಆದ್ರೆ ಬಾಲ್‌ ಎದುರಿಸಲು ಮುಂದಾದಾಗ ಹೆಲ್ಮೆಟ್‌ ಪಟ್ಟಿ ತುಂಡಾಗಿರುವುದು ಗೊತ್ತಾಯಿತು. ಹೀಗಾಗಿ ಬೇರೆ ಹೆಲ್ಮೆಟ್‌ ತರುವಂತೆ ಮಾಥ್ಯೂಸ್ ತಂಡಕ್ಕೆ ಸೂಚಿಸಿದರು. ಈ ಸಂದರ್ಭದಲ್ಲಿ ಬಾಂಗ್ಲಾ ನಾಯಕ ಶಕೀಬ್‌ ಅಲ್‌ ಹಸನ್‌ ಅಂಪೈರ್‌ ಜೊತೆ ಬ್ಯಾಟರ್‌ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿ ಟೈಮ್ಡ್‌ ಔಟ್‌ಗೆ ಮನವಿ ಮಾಡಿದರು. ಈ ಮನವಿಯನ್ನು ಅಂಪೈರ್‌ ಪುರಸ್ಕರಿಸಿದರು. ಈ ವೇಳೆ ಮ್ಯಾಥ್ಯೂಸ್‌ ಅವರು, ನನ್ನ ಹೆಲ್ಮೆಟ್‌ ಪಟ್ಟಿ ಮುರಿದು ಹೋಗಿದೆ. ಹೀಗಾಗಿ ಬೇರೆ ಹೆಲ್ಮೆಟ್‌ ತರುವಂತೆ ಹೇಳಿದ್ದೇನೆ ಎಂದು ಅಂಪೈರ್‌ಗೆ ಸಮಸ್ಯೆಯನ್ನು ವಿವರಿಸಿದರು. ಅಂಪೈರ್‌ ಮತ್ತು ಬಾಂಗ್ಲಾ ಆಟಗಾರರ ಜೊತೆಗೆ ಹೆಲ್ಮೆಟ್‌ ದೋಷದ ಬಗ್ಗೆ ಮನವರಿಕೆ ಮಾಡಿದರೂ ಶಕೀಬ್‌ ಮಾತ್ರ ತಮ್ಮ ಟೈಮ್ಡ್‌ ಔಟ್‌ ಮನವಿಯಿಂದ ಹಿಂದಕ್ಕೆ ಸರಿಯಲಿಲ್ಲ. ಕೊನೆಗೆ ಏಂಜಲೋ ಮಾಥ್ಯೂಸ್ ಬಾಂಗ್ಲಾ ವಿರುದ್ಧ ಗೊಣಗುತ್ತಲೇ ಪೆವಿಲಿಯನ್‌ಗೆ ಮರಳಿದರು. ಬೌಂಡರಿ ಗೆರೆ ದಾಟುತ್ತಿದ್ದಂತೆ ಹೆಲ್ಮೆಟ್‌ ಎಸೆದು ಸಿಟ್ಟು ಹೊರಹಾಕಿದರು.

    ಟೈಮ್ಡ್‌ ಔಟ್‌ ನಿಯಮ ಏನು ಹೇಳುತ್ತದೆ?
    ವಿಕೆಟ್‌ ಪತನದ ನಂತರ ಅಥವಾ ಬ್ಯಾಟರ್‌ ನಿವೃತ್ತಿ ಹೊಂದಿದ ಬಳಿಕ 2 ನಿಮಿಷದ ಒಳಗಡೆ ಮುಂದಿನ ಎಸೆತವನ್ನು ಎದುರಿಸಬೇಕು. ಈ ಅವಧಿಯಲ್ಲಿ ಚೆಂಡು ಸ್ವೀಕರಿಸದೇ ಇದ್ದರೇ ಫೀಲ್ಡಿಂಗ್‌ ನಡೆಸುವ ತಂಡದ ನಾಯಕ ಟೈಮ್ಡ್‌ ಔಟ್‌ಗೆ ಮನವಿ ಮಾಡಬಹುದು. ಅಂಪೈರ್‌ ನೇರವಾಗಿ ಔಟ್‌ ನೀಡಲು ಬರುವುದಿಲ್ಲ. ಬೌಲಿಂಗ್‌ ನಡೆಸುವ ತಂಡದ ನಾಯಕ ಮನವಿ ಮಾಡಿದ್ರೆ ಮಾತ್ರ ಟೈಮ್ಡ್‌ ಔಟ್‌ ನೀಡಬಹುದು. ಬ್ಯಾಟರ್‌ ಟೈಮ್ಡ್‌ ಔಟಾದರೆ ಬೌಲರ್‌ಗೆ ವಿಕೆಟ್‌ ಸಿಗುವುದಿಲ್ಲ. ಇದನ್ನೂ ಓದಿ: ಬಾಂಗ್ಲಾಗೆ 3 ವಿಕೆಟ್‌ ಜಯ – ಟೈಮ್ಡ್‌ ಔಟಾಗಿದ್ದಕ್ಕೆ ಶಕೀಬ್‌ ವಿರುದ್ಧ ಸೇಡು ತೀರಿಸಿಕೊಂಡ ಮ್ಯಾಥ್ಯೂಸ್‌

  • ಸೆಹ್ವಾಗ್ ಶತಕದ ವೇಳೆ ಲಂಕಾ ಕುತಂತ್ರ – ಇದೇನಾ ನಿಮ್ಮ ಕ್ರೀಡಾ ಸ್ಫೂರ್ತಿ?

    ಸೆಹ್ವಾಗ್ ಶತಕದ ವೇಳೆ ಲಂಕಾ ಕುತಂತ್ರ – ಇದೇನಾ ನಿಮ್ಮ ಕ್ರೀಡಾ ಸ್ಫೂರ್ತಿ?

    ಬೆಂಗಳೂರು: ಶ್ರೀಲಂಕಾದ ಏಂಜಲೋ ಮಾಥ್ಯೂಸ್ (Angelo Mathews) ಮತ್ತು ಬಾಂಗ್ಲಾದೇಶ ಶಕಿಬ್ ಉಲ್ ಹಸನ್ (Shakib Al Hasan) ಕಿತ್ತಾಟದ ಮಧ್ಯೆ ವೀರೇಂದ್ರ ಸೆಹ್ವಾಗ್ ಸುದ್ದಿಯಾಗುತ್ತಿದ್ದಾರೆ.

    ದೆಹಲಿಯಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಏಂಜಲೋ ಮಾಥ್ಯೂಸ್ ಒಂದು ಎಸೆತ ಎದುರಿಸದೇ ಟೈಮ್ಡ್ ಔಟ್‌ಗೆ (timed out) ಬಲಿಯಾಗಿದ್ದರು. ಈ ಮೂಲಕ ಟೈಮ್ಡ್ ಔಟ್‌ಗೆ ಬಲಿಯಾದ ವಿಶ್ವದ ಮೊದಲ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದಾರೆ.

    ಟೈಮ್ಡ್ ಔಟ್ ಮನವಿ ಮಾಡಿದ್ದಕ್ಕೆ ಶಕಿಬ್ ಉಲ್ ಹಸನ್ ಸೇರಿದಂತೆ ಬಾಂಗ್ಲಾ (Bangladesh) ತಂಡದ ಕ್ರೀಡಾ ಸ್ಪೂರ್ತಿಯ ಬಗ್ಗೆ ಹಲವು ಮಂದಿ ಪ್ರಶ್ನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಭಾರತ ಕ್ರಿಕೆಟ್ (Team India) ಅಭಿಮಾನಿಗಳು 2010 ಪಂದ್ಯದಲ್ಲಿ ಸೆಹ್ವಾಗ್ (Virender sehwag) ಅವರ ಉದಾಹರಣೆ ನೀಡಿ ಶ್ರೀಲಂಕಾ ತಂಡದ ಕ್ರೀಡಾ ಸ್ಪೂರ್ತಿಯ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ.

    2010ರಲ್ಲಿ ಏನಾಗಿತ್ತು?
    ಶ್ರೀಲಂಕಾ, ಭಾರತ, ನ್ಯೂಜಿಲೆಂಡ್ ಮಧ್ಯೆ ಶ್ರೀಲಂಕಾದಲ್ಲಿ ತ್ರಿಕೋನ ಏಕದಿನ ಸರಣಿ ಆಯೋಜನೆಗೊಂಡಿತ್ತು. ಸರಣಿಯ ಮೂರನೇ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ್ದ ಶ್ರೀಲಂಕಾ 170 ರನ್‌ಗಳಿಗೆ ಆಲೌಟ್ ಆಗಿತ್ತು.  ಇದನ್ನೂ ಓದಿ: ಬಾಂಗ್ಲಾಗೆ 3 ವಿಕೆಟ್‌ ಜಯ – ಟೈಮ್ಡ್‌ ಔಟಾಗಿದ್ದಕ್ಕೆ ಶಕೀಬ್‌ ವಿರುದ್ಧ ಸೇಡು ತೀರಿಸಿಕೊಂಡ ಮ್ಯಾಥ್ಯೂಸ್‌

    ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ 34 ಓವರ್‌ಗಳಲ್ಲಿ 166 ರನ್‌ಗಳಿಸಿತ್ತು. ಸೆಹ್ವಾಗ್ 99 ರನ್‌ಗಳಿಸಿದ್ದರೆ ಧೋನಿ 23 ರನ್‌ಗಳಿಸಿ ಕ್ರೀಸ್‌ನಲ್ಲಿದ್ದರು. ಭಾರತದ ಗೆಲುವಿಗೆ ಕೇವಲ 5 ರನ್ ಬೇಕಿತ್ತು.

    ರಂದೀವ್ 35ನೇ ಓವರ್ ಎಸೆಯಲು ಬಂದಾಗ ಸೆಹ್ವಾಗ್ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತವನ್ನು ಸೆಹ್ವಾಗ್ ಬ್ಯಾಟಿನಿಂದ ತಡೆಯಲು ಯತ್ನಿಸಿದರು. ಆದರೆ ಬಾಲ್ ಬ್ಯಾಟಿಗೆ ಸಿಗಲಿಲ್ಲ. ಈ ಚೆಂಡನ್ನು ನಾಯಕನಾಗಿದ್ದ ಕುಮಾರ ಸಂಗಕ್ಕಾರ ಸಹ ಹಿಡಿಯದ ಕಾರಣ ಬೌಂಡರಿಗೆ ಹೋಗಿತ್ತು. ಬೈ ಮೂಲಕ ಇತರೇ 4 ರನ್ ಸೇರ್ಪಡೆಯಾದ ಕಾರಣ ಸ್ಕೋರ್ ಸಮವಾಗಿತ್ತು. ಹೀಗಿದ್ದರೂ ಸೆಹ್ವಾಗ್ 1 ರನ್ ಗಳಿಸಿ ಶತಕ ಹೊಡೆಯಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ನಂತರ ಎರಡು ಎಸೆತದಲ್ಲಿ ಯಾವುದೇ ರನ್ ಬಂದಿರಲಿಲ್ಲ. 4ನೇ ಎಸೆತವನ್ನು ಸೆಹ್ವಾಗ್ ಲಾಂಗ್ ಅಫ್‌ನಲ್ಲಿ ಸಿಕ್ಸರ್‌ಗೆ ಅಟ್ಟಿದ್ದರು.

    ಸೆಹ್ವಾಗ್ ಸಿಕ್ಸ್ ಸಿಡಿಸಿದ್ದರೂ ಶತಕ ಪೂರ್ಣಗೊಂಡಿರಲಿಲ್ಲ. ಯಾಕೆಂದರೆ ರಂದೀವ್ ನೋಬಾಲ್ ಎಸೆದಿದ್ದರು. ನೋಬಾಲ್‌ನಲ್ಲಿ ಗೇಮ್ ಕೊನೆಯಾದರೆ ಕೇವಲ ಒಂದು ರನ್ ಸಿಗುತ್ತದೆ ಹೊರತು ಬ್ಯಾಟರ್ ಖಾತೆಗೆ ಆ ರನ್ ಸೇರ್ಪಡೆಯಾಗುವುದಿಲ್ಲ. ಐಸಿಸಿಯ ಈ ನಿಯಮದಿಂದಾಗಿ ಸೆಹ್ವಾಗ್ ಶತಕ ಪೂರ್ಣಗೊಂಡಿರಲಿಲ್ಲ.

    ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಪ್ರತಿಕ್ರಿಯಿಸಿದ ಸೆಹ್ವಾಗ್, ಒಬ್ಬ ಬ್ಯಾಟ್ಸ್‌ಮನ್‌ 99 ರನ್‌ ಗಳಿಸಿದ್ದಾಗ ಮತ್ತು ಸ್ಕೋರ್‌ಗಳು ಸಮವಾಗಿದ್ದಾಗ ಬೌಲರ್‌ಗಳು ನೋ-ಬಾಲ್‌ಗಳು ಮತ್ತು ವೈಡ್‌ಗಳನ್ನು ಎಸೆಯುವುದು ಸಾಮಾನ್ಯ ಎಂದು ಹೇಳಿ ಲಂಕಾ ತಂಡದ ಕ್ರೀಡಾ ಸ್ಫೂರ್ತಿಯ ಬಗ್ಗೆ ಮಾತನಾಡಿದ್ದರು.

     

    ಈ ವಿಚಾರವನ್ನು ಮುಂದಿಟ್ಟುಕೊಂಡು ಟೀಂ ಇಂಡಿಯಾ ಅಭಿಮಾನಿಗಳು ಈಗ ಶ್ರೀಲಂಕಾ ತಂಡವನ್ನು ಪ್ರಶ್ನಿಸುತ್ತಿದ್ದಾರೆ. ಈಗ ನೀವು ಬಾಂಗ್ಲಾ ತಂಡದ ಕ್ರೀಡಾ ಸ್ಪೂರ್ತಿಯ ಬಗ್ಗೆ ಮಾತನಾಡುತ್ತಿದ್ದೀರಿ. ಆದರೆ ಅಂದು ಕುಮಾರ ಸಂಗಕ್ಕಾರ ಹಿಡಿಯಬಹುದಾದ ಚೆಂಡನ್ನು ಹಿಡಿಯದ ಕಾರಣ ಅದು ಬೌಂಡರಿಗೆ ಹೋಗಿತ್ತು. ಕೊನೆಗೆ ರಂದೀವ್ ಉದ್ದೇಶಪೂರ್ವಕವಾಗಿ ನೋಬಾಲ್ ಎಸೆದು ಸೆಹ್ವಾಗ್ ಶತಕವನ್ನು ತಡೆದಿದದ್ದು ಸರಿಯೇ ಎಂದು ಖಾರವಾಗಿ ಪ್ರಶ್ನಿಸಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

  • ಬಾಂಗ್ಲಾಗೆ 3 ವಿಕೆಟ್‌ ಜಯ – ಟೈಮ್ಡ್‌ ಔಟಾಗಿದ್ದಕ್ಕೆ ಶಕೀಬ್‌ ವಿರುದ್ಧ ಸೇಡು ತೀರಿಸಿಕೊಂಡ ಮ್ಯಾಥ್ಯೂಸ್‌

    ಬಾಂಗ್ಲಾಗೆ 3 ವಿಕೆಟ್‌ ಜಯ – ಟೈಮ್ಡ್‌ ಔಟಾಗಿದ್ದಕ್ಕೆ ಶಕೀಬ್‌ ವಿರುದ್ಧ ಸೇಡು ತೀರಿಸಿಕೊಂಡ ಮ್ಯಾಥ್ಯೂಸ್‌

    ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಶ್ರೀಲಂಕಾ (Srilanka) ವಿರುದ್ಧ ಬಾಂಗ್ಲಾದೇಶ (Bangladesh) 3 ವಿಕೆಟ್‌ ಜಯ ಸಾಧಿಸಿದೆ.

    ಗೆಲ್ಲಲು 280 ರನ್‌ಗಳ ಗುರಿಯನ್ನು ಪಡೆದ ಬಾಂಗ್ಲಾದೇಶ ಇನ್ನೂ 53 ಎಸೆತ ಬಾಕಿ ಇರುವಂತೆಯೇ 7 ವಿಕೆಟ್‌ ಕಳೆದುಕೊಂಡು 283 ರನ್‌ ಹೊಡೆಯುವ ಮೂಲಕ ಗುರಿಯನ್ನು ತಲುಪಿತು.

    ಈ ಮೂಲಕ ಟೂರ್ನಿಯಲ್ಲಿ ಬಾಂಗ್ಲಾ ಎರಡನೇ ಗೆಲುವು ಸಾಧಿಸಿದರೆ, ಶ್ರೀಲಂಕಾ 6 ಬಾರಿ ಸೋಲು ಕಂಡಿತು. ಬಾಂಗ್ಲಾ ಪರ ನಜ್ಮುಲ್ ಹೊಸೈನ್ ಮತ್ತು ನಾಯಕ ಶಕೀಬ್‌ ಅಲ್‌ ಹಸನ್‌ (Shakib Al Hasan) ಅವರು ಮೂರನೇ ವಿಕೆಟಿಗೆ 149 ಎಸೆತಗಳಲ್ಲಿ 169 ರನ್‌ ಜೊತೆಯಾಟವಾಡುವಾಗಲೇ ಬಾಂಗ್ಲಾದ ಗೆಲುವು ಖಚಿತವಾಗಿತ್ತು.

     

    View this post on Instagram

     

    A post shared by ICC (@icc)

    ನಜ್ಮುಲ್ ಹೊಸೈನ್ 90 ರನ್‌ (101 ಎಸೆತ, 12 ಬೌಂಡರಿ) ಶಕೀಬ್‌ ಉಲ್‌ ಹಸನ್‌ 82 ರನ್‌ (65 ಎಸೆತ, 12 ಬೌಂಡರಿ) ಗಳಿಸಿ ಔಟಾದರು.

    ಲಂಕಾ ಪರ ಚರಿತ ಅಸಲಂಕ 108 ರನ್‌ (105 ಎಸೆತ, 6 ಬೌಂಡರಿ, 5 ಸಿಕ್ಸರ್‌) ಧನಂಜಯ ಡಿಸಿಲ್ವಾ 34 ರನ್‌ (36 ಎಸೆತ, 4 ಬೌಂಡರಿ, 1 ಸಿಕ್ಸರ್)‌ ಹೊಡೆದು ಔಟಾದರು.

    ಶಕಿಬ್‌ಗೆ ತಿರುಗೇಟು:
    ಇಂದಿನ ಪಂದ್ಯದಲ್ಲಿ ಏಂಜಲೋ ಮಾಥ್ಯೂಸ್‌ (Angelo Mathews) ಟೈಮ್ಡ್‌ ಔಟಾಗಿದ್ದರು. ಟೈಮ್ಡ್‌ ಔಟ್‌ ವಿಚಾರಕ್ಕೆ ಶಕೀಬ್‌ ಜೊತೆ ಮಾಥ್ಯೂಸ್‌ ಮೈದಾನದಲ್ಲೇ ವಾದ ಮಾಡಿದ್ದರು.  ಇದನ್ನೂ ಓದಿ: ಒಂದು ಎಸೆತ ಎದುರಿಸದೇ ಏಂಜಲೋ ಮಾಥ್ಯೂಸ್ ಔಟ್‌ – ಏನಿದು ಟೈಮ್ಡ್‌ ಔಟ್‌ ನಿಯಮ?

    82 ರನ್‌ಗಳಿಸಿದ್ದಾಗ ಶಕೀಬ್‌ ಮಾಥ್ಯೂಸ್‌ ಬೌಲಿಂಗ್‌ನಲ್ಲಿ ಅಸಲಂಕಾಗೆ ಕ್ಯಾಚ್‌ ನೀಡಿ ಔಟಾಗಿದ್ದರು. ಈ ವೇಳೆ ಮಾಥ್ಯೂಸ್‌ ಎಡಕೈಯಲ್ಲಿ ವಾಚ್‌ ಕಟ್ಟುವ ಜಾಗವನ್ನು ತೋರಿಸಿ ಟ್ರೋಲ್‌ ಮಾಡುವ ಮೂಲಕ ಸೇಡು ತೀರಿಸಿಕೊಂಡರು. 7.1 ಓವರ್‌ ಎಸೆದ ಮ್ಯಾಥ್ಯೂಸ್‌ 1 ಓವರ್‌ ಮೇಡನ್‌ ಮಾಡಿ 35 ರನ್‌ ನೀಡಿ 2 ವಿಕೆಟ್‌ ಪಡೆದರು.

  • ಒಂದು ಎಸೆತ ಎದುರಿಸದೇ ಏಂಜಲೋ ಮಾಥ್ಯೂಸ್ ಔಟ್‌ – ಏನಿದು ಟೈಮ್ಡ್‌ ಔಟ್‌ ನಿಯಮ?

    ಒಂದು ಎಸೆತ ಎದುರಿಸದೇ ಏಂಜಲೋ ಮಾಥ್ಯೂಸ್ ಔಟ್‌ – ಏನಿದು ಟೈಮ್ಡ್‌ ಔಟ್‌ ನಿಯಮ?

    ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಶ್ರೀಲಂಕಾದ (Sri Lanka) ಏಂಜಲೋ ಮಾಥ್ಯೂಸ್ (Angelo Mathews) ಒಂದು ಎಸೆತ ಎದುರಿಸದೇ ಟೈಮ್ಡ್‌ ಔಟ್‌ಗೆ (timed out) ಬಲಿಯಾದ ವಿಶ್ವದ ಮೊದಲ ಬ್ಯಾಟರ್‌ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದಾರೆ.

    ಬಾಂಗ್ಲಾ (Bangladesh) ವಿರುದ್ಧ ಟಾಸ್‌ ಸೋತು ಬ್ಯಾಟ್‌ ಆರಂಭಿಸಿದ ಶ್ರೀಲಂಕಾ 24.2ನೇ ಓವರ್‌ನಲ್ಲಿ 135 ರನ್‌ಗಳಿಸಿದ್ದಾಗ ಸಮರವಿಕ್ರಮ ಔಟಾದರು. ಈ ವೇಳೆ  ಏಂಜಲೋ ಮಾಥ್ಯೂಸ್ ಕ್ರೀಸ್‌ಗೆ ಆಗಮಿಸಿದರು. ಕ್ರೀಸ್‌ಗೆ ಆಗಮಿಸಿ ಬಾಲ್‌ ಎದುರಿಸಲು ಬ್ಯಾಟ್‌ ಹಿಡಿದಾಗ ಹೆಲ್ಮೆಟ್‌ ಪಟ್ಟಿ ತುಂಡಾಗಿರುವುದು ಗೊತ್ತಾಯಿತು. ಹೀಗಾಗಿ ಬೇರೆ ಹೆಲ್ಮೆಟ್‌ ತರುವಂತೆ ಮಾಥ್ಯೂಸ್ ತಂಡಕ್ಕೆ ಸೂಚಿಸಿದರು.

    https://twitter.com/aankjain/status/1721480014154096809

    ಈ ಸಂದರ್ಭದಲ್ಲಿ ಬಾಂಗ್ಲಾ ನಾಯಕ ಶಕೀಬ್‌ ಉಲ್‌ ಹಸನ್‌ ಅಂಪೈರ್‌ ಜೊತೆ ಬ್ಯಾಟರ್‌ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿ ಟೈಮ್ಡ್‌ ಔಟ್‌ಗೆ ಮನವಿ ಮಾಡಿದರು. ಈ ಮನವಿಯನ್ನು ಅಂಪೈರ್‌ ಪುರಸ್ಕರಿಸಿದರು. ಈ ವೇಳೆ ಮ್ಯಾಥ್ಯೂಸ್‌ ಅವರು, ನನ್ನ ಹೆಲ್ಮೆಟ್‌ ಪಟ್ಟಿ ಮುರಿದು ಹೋಗಿದೆ. ಹೀಗಾಗಿ ಬೇರೆ ಹೆಲ್ಮೆಟ್‌ ತರುವಂತೆ ಹೇಳಿದ್ದೇನೆ ಎಂದು ಅಂಪೈರ್‌ಗೆ ಸಮಸ್ಯೆಯನ್ನು ವಿವರಿಸಿದರು.
    ಇದನ್ನೂ ಓದಿ: ಭಾರತದ ವಿರುದ್ಧ ಹೀನಾಯ ಸೋಲು – ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನೇ ವಜಾಗೊಳಿಸಿದ ಸಚಿವ

    ಅಂಪೈರ್‌ ಮತ್ತು ಬಾಂಗ್ಲಾ ಆಟಗಾರರ ಜೊತೆ ಹೆಲ್ಮೆಟ್‌ ದೋಷದ ಬಗ್ಗೆ ಮನವರಿಕೆ ಮಾಡಿದರೂ ಶಕೀಬ್‌ ಮಾತ್ರ ತಮ್ಮ ಟೈಮ್ಡ್‌ ಔಟ್‌ ಮನವಿಯಿಂದ ಹಿಂದಕ್ಕೆ ಸರಿಯಲಿಲ್ಲ. ಕೊನೆಗೆ ಏಂಜಲೋ ಮಾಥ್ಯೂಸ್ ಬಾಂಗ್ಲಾ ವಿರುದ್ಧ ಗೊಣಗುತ್ತಲೇ ಪೆವಿಲಿಯನ್‌ ಕಡೆಗೆ ಹೆಜ್ಜೆ ಹಾಕಿದರು. ಬೌಂಡರಿ ಗೆರೆ ದಾಟುತ್ತಿದ್ದಂತೆ ಹೆಲ್ಮೆಟ್‌ ಎಸೆದು ಸಿಟ್ಟು ಹೊರಹಾಕಿದರು.

     

    View this post on Instagram

     

    A post shared by ICC (@icc)

    ನಿಯಮ ಏನು ಹೇಳುತ್ತದೆ?
    ವಿಕೆಟ್‌ ಪತನದ ನಂತರ ಅಥವಾ ಬ್ಯಾಟರ್‌ ನಿವೃತ್ತಿ ಹೊಂದಿದ ಬಳಿಕ 2 ನಿಮಿಷದ ಒಳಗಡೆ ಮುಂದಿನ ಎಸೆತವನ್ನು ಎದುರಿಸಬೇಕು. ಈ ಅವಧಿಯಲ್ಲಿ ಚೆಂಡು ಸ್ವೀಕರಿಸದೇ ಇದ್ದರೆ ಫೀಲ್ಡಿಂಗ್‌ ನಡೆಸುವ ತಂಡ ಟೈಮ್ಡ್‌ ಔಟ್‌ಗೆ ಮನವಿ ಮಾಡಬಹುದು. ಅಂಪೈರ್‌ ನೇರವಾಗಿ ಔಟ್‌ ನೀಡಲು ಬರುವುದಿಲ್ಲ.  ಬೌಲಿಂಗ್‌ ನಡೆಸುವ ತಂಡದ ನಾಯಕ ಮನವಿ ಮಾಡಿದರೆ ಮಾತ್ರ ಟೈಮ್ಡ್‌ ಔಟ್‌ ನೀಡಬಹುದು.

    ವಿಕೆಟ್‌ ಸಿಗುತ್ತಾ?
    ಬ್ಯಾಟರ್‌ ಟೈಮ್ಡ್‌ ಔಟಾದರೆ ಬೌಲರ್‌ಗೆ ವಿಕೆಟ್‌ ಸಿಗುವುದಿಲ್ಲ.

    ಮನವಿ ಮಾಡುವುದು ಸರಿಯೇ?
    ಏಕದಿನ, ಟೆಸ್ಟ್‌, ಟಿ20 ಪಂದ್ಯಗಳಿಗೆ ಸಮಯ ನಿಗದಿಯಾಗಿರುತ್ತದೆ. ಒಂದು ವೇಳೆ ಸಮಯ ಮೀರಿಯೂ ಬೌಲಿಂಗ್‌ ಮಾಡಿದರೆ ನಾಯಕನಿಗೆ ದಂಡ ವಿಧಿಸಲಾಗುತ್ತದೆ. ಏಕದಿನ ಕ್ರಿಕೆಟ್‌ನಲ್ಲಿ ಬೌಲಿಂಗ್‌ ತಂಡ 50 ಓವರ್‌ಗಳನ್ನು 3 ಗಂಟೆ 50 ನಿಮಿಷದಲ್ಲಿ ಎಸೆಯಬೇಕಾಗುತ್ತದೆ. ಟಿ20ಯಲ್ಲಿ ಬೌಲಿಂಗ್‌ ತಂಡ 20 ಓವರ್‌ಗಳನ್ನು 1 ಗಂಟೆ 25 ನಿಮಿಷದಲ್ಲಿ 20 ಓವರ್‌ ಎಸೆಯಬೇಕಾಗುತ್ತದೆ. ಈ ಕಾರಣಕ್ಕೆ ಬ್ಯಾಟರ್‌ಗಳು  ಸಮಯ ತೆಗೆದುಕೊಂಡರೆ ಬೌಲಿಂಗ್‌ ನಡೆಸುವ ತಂಡ ಅಂಪೈರ್‌ ಜೊತೆ ಟೈಮ್ಡ್‌ ಔಟ್‌ ಮನವಿ ಮಾಡಲು ಅವಕಾಶ ಸಿಗುತ್ತದೆ.

     

  • World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    ಮುಂಬೈ: ಶ್ರೀಲಂಕಾ (Sri Lanka) ವಿರುದ್ಧ ಗುರುವಾರ ನಡೆದ ವಿಶ್ವಕಪ್‌ ಪಂದ್ಯದಲ್ಲಿ 49ನೇ ಶತಕ ಸಿಡಿಸಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ (Sachin Tendulkar) ದಾಖಲೆ ಸರಿಗಟ್ಟುವ ಸನಿಹದಲ್ಲಿದ್ದ ಕಿಂಗ್‌ ಕೊಹ್ಲಿ (Virat Kohli) ಮತ್ತೆ ಎಡವಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ರು. ಆದ್ರೂ ಕೂಡ ಕ್ರಿಕೆಟ್‌ ದೇವರ ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಮುರಿದು ಗಮನ ಸೆಳೆದಿದ್ದಾರೆ.

    ಶ್ರೀಲಂಕಾ ವಿರುದ್ಧ 88 ರನ್‌ ಬಾರಿಸಿದ್ದ ಕೊಹ್ಲಿ 32ನೇ ಓವರ್‌ನಲ್ಲಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದ್ರು. ಶತಕ ಸಿಡಿಸಿ ದಾಖಲೆ ಬರೆಯುವ ಸನಿಹದಲ್ಲಿದ್ದ ಕೊಹ್ಲಿ ಔಟಾಗುತ್ತಿದ್ದಂತೆ ಹತಾಷಾ ಭಾವದಿಂದ ಹೊರನಡೆದ್ರು. ಈ ವೇಳೆ ಅಭಿಮಾನಿಗಳೂ ಕೊಹ್ಲಿ (Kohli Fans) ಬೇಸರದಿಂದ ನಡೆದು ಹೋಗುತ್ತಿದ್ದ ದೃಶ್ಯವನ್ನ ಮೊಬೈಲ್‌ಗಳಲ್ಲಿ ಸೆರೆಹಿಡಿದ್ರು. ನಂತರ ಕ್ಯಾಬಿನ್‌ನಲ್ಲಿ ಕುಳಿತ ಕೊಹ್ಲಿ ಕಣ್ಣಲ್ಲಿ ಇದ್ದಕ್ಕಿದ್ದಂತೆ ನೀರು ಕಚ್ಚಿತು. ಅಭಿಮಾನಿಗಳನ್ನು ಕಂಡಾಗ ನಗುಮುಖದಿಂದಲೇ ಕೈಸನ್ನೆ ಮಾಡಿದ ಕೊಹ್ಲಿ ಬಳಿಕ ಕ್ಯಾಬಿನ್‌ನಲ್ಲಿ ಕುಳಿತು ಬಿಕ್ಕಿ-ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಭಿಮಾನಿಗಳಿಗೂ ಬೇಸರವುಂಟುಮಾಡಿದೆ. ಇದನ್ನೂ ಓದಿ: 48 ವರ್ಷಗಳಲ್ಲೇ ಮೊದಲು! ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

    ಗುರುವಾರ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್‌ ಆರಂಭದ 2ನೇ ಎಸೆತದಲ್ಲೇ ವಿಕೆಟ್‌ ಕೈಚೆಲ್ಲಿದರು. ಆದ್ರೆ 2ನೇ ವಿಕೆಟ್‌ಗೆ ಶುಭಮನ್ ಗಿಲ್, ಜೊತೆಗೂಡಿದ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ, ಶ್ರೀಲಂಕಾ ಬೌಲರ್‌ಗಳನ್ನ ಬೆಂಡೆತ್ತಿದರು. 2ನೇ ವಿಕೆಟ್‌ಗೆ ಈ ಜೋಡಿ 179 ಎಸೆತಗಳಲ್ಲಿ 189 ರನ್‌ ಬಾರಿಸಿತ್ತು. ಇದನ್ನೂ ಓದಿ: ಶಮಿ ದಾಳಿಗೆ ಲಂಕಾ ಭಸ್ಮ – 302 ರನ್‌ಗಳ ಭರ್ಜರಿ ಜಯ, ಸೆಮಿಗೆ ಟೀಂ ಇಂಡಿಯಾ

    ಪಂದ್ಯದ ಆರಂಭದಲ್ಲೇ ಶ್ರೀಲಂಕಾದ ಕ್ಷೇತ್ರ ರಕ್ಷಕರು ತೋರಿದ ಕಳಪೆ ಪ್ರದರ್ಶನದಿಂದ ಹಲವು ಬಾರಿ ಜೀವದಾನ ಪಡೆದಿದ್ದ ವಿರಾಟ್ ಕೊಹ್ಲಿ, ನಂತರ ಸಿಡಿಲಬ್ಬರದ ಆಟಕ್ಕೆ ಮುಂದಾಗಿದ್ದರು. ಒಂದೂ ಸಿಕ್ಸರ್‌ ಸಿಡಿಸದಿದ್ದರೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟುವ ಭರವಸೆ ಮೂಡಿಸಿದ್ದರು. ಆದ್ರೆ ಶ್ರೀಲಂಕಾದ ದಿಲ್ಷಾನ್ ಮಧುಶಂಕ ಬೌಲಿಂಗ್ ನಲ್ಲಿ ನಿಸ್ಸಾಂಕಗೆ ಕ್ಯಾಚ್ ನೀಡಿ ಮೈದಾನ ತೊರೆದರು.‌ ಗಾಡ್ ಆಫ್ ಕ್ರಿಕೆಟ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಏಷ್ಯನ್ ಕಂಡೀಷನ್ಸ್ ಗಳಲ್ಲಿ ಆಡಿದ್ದ 188 ಇನಿಂಗ್ಸ್‌ನಲ್ಲಿ 8 ಸಾವಿರ ರನ್ ಗಡಿ ಮುಟ್ಟಿದ್ದರೆ, ವಿರಾಟ್ ಕೊಹ್ಲಿ 159 ಇನಿಂಗ್ಸ್ ನಲ್ಲೇ ಆ ದಾಖಲೆ ಮುರಿದಿದ್ದಾರೆ. ಇಷ್ಟಾದರೂ ಕೊಹ್ಲಿಗೆ ಸಮಾಧಾನ ತರಿಸದೇ ಕ್ಯಾಬಿನ್‌ನಲ್ಲಿ ಕಣ್ಣೀರಿಟ್ಟರು.

    ಒಟ್ಟಿನಲ್ಲಿ ಇನ್ನೆರಡು ಲೀಗ್‌ ಪಂದ್ಯಗಳಿದ್ದು, ಉಳಿದ ಪಂದ್ಯಗಳಲ್ಲಾದರೂ ಕೊಹ್ಲಿ ಶತಕ ಪೂರೈಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.  ಇದನ್ನೂ ಓದಿ: ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿದಿ – ಟಾಪ್ 10 ರಲ್ಲಿ ಇಬ್ಬರು ಟೀಂ ಇಂಡಿಯಾ ಆಟಗಾರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಲಂಕಾಗೆ ಬೆಂಕಿ ಹಚ್ಚಿ ನಂ.1 ಪಟ್ಟಕ್ಕೇರಿದ ಶಮಿ

    World Cup 2023: ಲಂಕಾಗೆ ಬೆಂಕಿ ಹಚ್ಚಿ ನಂ.1 ಪಟ್ಟಕ್ಕೇರಿದ ಶಮಿ

    ಮುಂಬೈ: 2023ರ ಐಸಿಸಿ ಏಕದಿನ ವಿಶ್ವಕಪ್‌ (World Cup 2023) ಟೂರ್ನಿಯಲ್ಲಿ ಮೊದಲ ತಂಡವಾಗಿ ಟೀಂ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಕೇವಲ 55 ರನ್‌ಗಳಿಗೆ ಶ್ರೀಲಂಕಾ ತಂಡವನ್ನು ಧೂಳಿಪಟ ಮಾಡಿದ ಭಾರತ, 302 ರನ್​​ಗಳ ವಿಶ್ವದಾಖಲೆಯ ಜಯ ಸಾಧಿಸಿತು. ಅದರಲ್ಲೂ ಲಂಕಾ ವಿರುದ್ಧ ಬೆಂಕಿ ಬೌಲಿಂಗ್‌ ದಾಳಿ ಮಾಡಿದ ಮೊಹಮ್ಮದ್ ಶಮಿ (Mohammed Shami) 5 ವಿಕೆಟ್ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರೊಂದಿಗೆ ವಿಶ್ವಕಪ್​​ನಲ್ಲಿ ದಾಖಲೆಯೊಂದನ್ನು ನಿರ್ಮಿಸಿದರು.

    ಲಂಕಾ (Sri Lanka) ವಿರುದ್ಧ ಕೇವಲ 5 ಓವರ್‌ ಬೌಲಿಂಗ್‌ ಮಾಡಿದ ಶಮಿ, 18 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಕಿತ್ತರು. ಇದರೊಂದಿಗೆ ಟೀಂ ಇಂಡಿಯಾ ಪರ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್​ ಕಿತ್ತ ಮೊದಲ ಬೌಲರ್​ ಎಂಬ ಖ್ಯಾತಿ ಗಳಿಸಿದ್ರು. ಪ್ರಸ್ತುತ ಟೂರ್ನಿಯಲ್ಲಿ ತಾನು ಆಡಿದ ಮೂರೇ ಪಂದ್ಯಗಳಲ್ಲಿ 14 ವಿಕೆಟ್ ಪಡೆದ ಶಮಿ, ಆ ಮೂಲಕ ವಿಶ್ವಕಪ್​​ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಅತಿಹೆಚ್ಚು ವಿಕೆಟ್​ ಪಡೆದ ಜಹೀರ್​ ಖಾನ್ ಮತ್ತು ಜಾವಗಲ್ ಶ್ರೀನಾಥ್ (Zaheer Khan And Javagal Srinath) ಅವರ 44 ವಿಕೆಟ್​ಗಳ ಜಂಟಿ ದಾಖಲೆಯನ್ನ ನುಚ್ಚು ನೂರು ಮಾಡಿದ್ರು. ಇದನ್ನೂ ಓದಿ: World Cup 2023: ಗಿಲ್‌ ಕೈ ತಪ್ಪಿದ ಶತಕ – ಸಾರಾಗೆ ಬೇಸರ 

    ಸದ್ಯ 14 ವಿಶ್ವಕಪ್​ ಪಂದ್ಯಗಳನ್ನಾಡಿರುವ ಶಮಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಒಟ್ಟು 45 ವಿಕೆಟ್‌ ಪಡೆದು ನಂ.1 ಸ್ಥಾನದಲ್ಲಿದ್ದರೆ, 44 ವಿಕೆಟ್​ ಪಡೆದ ಜಹೀರ್ ಖಾನ್, ಜಾವಗಲ್ ಶ್ರೀನಾಥ್ ಕ್ರಮವಾಗಿ 2-3ನೇ ಸ್ಥಾನದಲ್ಲಿದ್ದಾರೆ. 33 ವಿಕೆಟ್​ ಜಸ್ಪ್ರೀತ್ ಬುಮ್ರಾ 4ನೇ ಸ್ಥಾನ ಮತ್ತು 31 ವಿಕೆಟ್​ ಪಡೆದಿರುವ ಅನಿಲ್ ಕುಂಬ್ಳೆ 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: 48 ವರ್ಷಗಳಲ್ಲೇ ಮೊದಲು! ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

    ಇದೇ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್, ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಉಡೀಸ್‌ ಮಾಡಿದ್ದ ಶಮಿ ಶ್ರೀಲಂಕಾ ವಿರುದ್ಧವೂ ಪ್ರಮುಖ 5 ವಿಕೆಟ್‌ಗಳನ್ನ ಪಡೆಯುವ ಮೂಲಕ ಲಂಕಾ ದಹನಕ್ಕೆ ಕಾರಣವಾದರು. ಇದರೊಂದಿಗೆ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 45 ವಿಕೆಟ್​​ ಪಡೆದ ಸಾಧನೆ ಮಾಡಿದರು. ಜೊತೆಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಸತತ 2 ಬಾರಿ 4ಕ್ಕೂ ಹೆಚ್ಚು ವಿಕೆಟ್‌ ಪಡೆದ ವಿಶ್ವದ 2ನೇ ಬೌಲರ್ ಎಂಬ ವಿಶೇಷ ಸಾಧನೆಗೂ ಪಾತ್ರರಾದರು. ಇದನ್ನೂ ಓದಿ: ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿದಿ – ಟಾಪ್ 10 ರಲ್ಲಿ ಇಬ್ಬರು ಟೀಂ ಇಂಡಿಯಾ ಆಟಗಾರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಗಿಲ್‌ ಕೈ ತಪ್ಪಿದ ಶತಕ – ಸಾರಾಗೆ ಬೇಸರ

    World Cup 2023: ಗಿಲ್‌ ಕೈ ತಪ್ಪಿದ ಶತಕ – ಸಾರಾಗೆ ಬೇಸರ

    ಮುಂಬೈ: ಟೀಂ ಇಂಡಿಯಾದ (Team India) ಆರಂಭಿಕ ಬ್ಯಾಟರ್‌ ಶುಭಮನ್‌ ಗಿಲ್‌ (Shubman Gill), ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 8 ರನ್‌ ಅಂತರದಲ್ಲಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ತಮ್ಮ ಚೊಚ್ಚಲ ಶತಕದಿಂದ ವಂಚಿತರಾದರು. ಇದು ಗಿಲ್‌ ಅಭಿಮಾನಿಗಳಲ್ಲೂ ನಿರಾಸೆ ಮೂಡಿಸಿತು.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಶುಭಮನ್‌ ಗಿಲ್‌ ಕೊಹ್ಲಿ ಜೊತೆಗೂಡಿ ಭರ್ಜರಿ ಆಟವಾಡಿದರು. 92 ಎಸೆತಗಳಲ್ಲಿ 11 ಫೋರ್‌ ಮತ್ತು 2 ಸಿಕ್ಸರ್‌ಗಳೊಂದಿಗೆ ಶತಕದತ್ತ ದಾಪುಗಾಲಿಟ್ಟಿದ್ದ ಗಿಲ್‌, ಸ್ಲೋ ಬೌನ್ಸರ್ ಎದುರು ಅಪ್ಪರ್‌ ಕಟ್‌ ಆಡುವ ಪ್ರಯತ್ನದಲ್ಲಿ 92 ರನ್‌ಗೆ ವಿಕೆಟ್‌ ಕೈಚೆಲ್ಲಿದರು. ಇದನ್ನೂ ಓದಿ: ಆಪ್‌ಗೆ ಮತ್ತೊಂದು ಶಾಕ್ – ಸಚಿವ ರಾಜ್ ಕುಮಾರ್ ಆನಂದ್ ನಿವಾಸದ ಮೇಲೆ ಇಡಿ ದಾಳಿ

    ಈ ವೇಳೆ ವಾಂಖೆಡೆ ಕ್ರೀಡಾಂಗಣದ ಗ್ಯಾಲರಿಯಲ್ಲಿ ಕುಳಿತಿದ್ದ ಶುಭಮನ್ ಗಿಲ್‌ ಅವರ ಪ್ರೇಯಸಿ ಎಂದೇ ಗುರುತಿಸಿಕೊಂಡಿರುವ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರಿ ಸಾರಾ ತೆಂಡೂಲ್ಕರ್‌ (Sara Tendulkar) ಬೇಸರಗೊಂಡರು. ಆದಾಗ್ಯೂ ಟೀಂ ಇಂಡಿಯಾದ ಪ್ರಿನ್ಸ್‌ ಖ್ಯಾತಿಯ ಆಟಗಾರನಿಗೆ ಸ್ಟ್ಯಾಂಡಿಂಗ್ ಓವೇಷನ್‌ ಕೊಟ್ಟರು.

    ಈ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ: ನಿತೀಶ್‌ ಕುಮಾರ್‌ ಬೇಸರ

    ಈಗಾಗಲೇ ಗಿಲ್‌ ಮತ್ತು ಸಾರಾ ನಡುವಣ ಪ್ರೇಮ ಪುರಾಣ ಸುದ್ದಿ ಜಾಲತಾಣದಲ್ಲಿ ಆಗಾಗ್ಗೆ ಸದ್ದು ಮಾಡುತ್ತಿದ್ದು, ಇವರಿಬ್ಬರ ಪ್ರೇಮ ಪುರಾಣಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಇಬ್ಬರೂ ಕದ್ದು ಮುಚ್ಚಿ ಡೇಟಿಂಗ್‌ ಮಾಡುತ್ತಿರುವುದು ಹಲವು ಬಾರಿ ಬೆಳಕಿಗೆ ಬಂದಿದೆ. ಆದ್ರೆ, ಎಲ್ಲಿಯೂ ಕೂಡ ಇಬ್ಬರಿಂದ ಅಧಿಕೃತ ಮಾಹಿತಿ ಹೊರಬಂದಿಲ್ಲ. ಇದನ್ನೂ ಓದಿ: Breaking: ಲಂಚ ಪಡೆಯುವಾಗಲೇ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ED ಅಧಿಕಾರಿಗಳು ಅರೆಸ್ಟ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಮಿ ದಾಳಿಗೆ ಲಂಕಾ ಭಸ್ಮ – 302 ರನ್‌ಗಳ ಭರ್ಜರಿ ಜಯ, ಸೆಮಿಗೆ ಟೀಂ ಇಂಡಿಯಾ

    ಶಮಿ ದಾಳಿಗೆ ಲಂಕಾ ಭಸ್ಮ – 302 ರನ್‌ಗಳ ಭರ್ಜರಿ ಜಯ, ಸೆಮಿಗೆ ಟೀಂ ಇಂಡಿಯಾ

    ಮುಂಬೈ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (Word Cup Cricket) ಭಾರತದ (Team India) ಅಜೇಯ ಓಟ ಮುಂದುವರಿದಿದ್ದು ಸೆಮಿಫೈನಲ್‌ ಪ್ರವೇಶಿಸಿದೆ. ಶ್ರೀಲಂಕಾ (Sri Lanka) ವಿರುದ್ಧ ಭರ್ಜರಿ 302 ರನ್‌ಗಳಿಂದ ಜಯಗಳಿಸಿದ ಭಾರತ ಸೆಮಿಫೈನಲ್‌ (Semi Final) ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಟಾಸ್‌ ಸೋತು ಬ್ಯಾಟ್‌ ಮಾಡಿದ ಭಾರತ ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌ ಅವರ ಅರ್ಧಶತಕದ ಆಟದಿಂದ 8 ವಿಕೆಟ್‌ ನಷ್ಟಕ್ಕೆ 357 ರನ್‌ ಗಳಿಸಿತು. ಭಾರೀ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಲಂಕಾ ಆರಂಭದಿಂದಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿ ಅಂತಿಮವಾಗಿ 19.4 ಓವರ್‌ಗಳಲ್ಲಿ 55 ರನ್‌ಗಳಿಗೆ ಸರ್ವಪತನ ಕಂಡಿತು.   ಇದನ್ನೂ ಓದಿ: ಶತಕ ಮಿಸ್‌ ಆದ್ರೂ ಸಚಿನ್‌ ದಾಖಲೆ ಮುರಿದ ಕಿಂಗ್‌ ಕೊಹ್ಲಿ

    ಶ್ರೀಲಂಕಾ 3 ರನ್‌ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು. ತಂಡದ 4 ಮಂದಿ ಆಟಗಾರರು 0 ಸುತ್ತಿದ್ದರು. ಇತರ ರೂಪದಲ್ಲಿ 10 ರನ್‌( 5 ಬೈ, 1 ಲೆಗ್‌ಬೈ, 4 ವೈಡ್‌) ಬಂದ ಕಾರಣ ಲಂಕಾದ ಸ್ಕೋರ್‌ 50 ರನ್‌ ಗಡಿ ದಾಟಿತ್ತು.

    ಶಮಿ (Mohammed Shami) ಮಾರಕ ಬೌಲಿಂಗ್‌ ಮಾಡಿ 5 ವಿಕೆಟ್‌ ಕಿತ್ತರೆ ಸಿರಾಜ್‌ 3 ವಿಕೆಟ್‌ ಪಡೆದರು. ಬುಮ್ರಾ ಮತ್ತು ಜಡೇಜಾ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಕಳಪೆ ಫೀಲ್ಡಿಂಗ್‌:
    ಭಾರತ 300 ರನ್‌ ಗಳಿಸಲು ಶ್ರೀಲಂಕಾ ತಂಡದ ಆಟಗಾರರೇ ಕಾರಣ. ಸುಲಭದ ಕ್ಯಾಚ್‌ಗಳನ್ನು ಕೈ ಚೆಲ್ಲಿದ್ದರು. ಇದರ ಸಂಪೂರ್ಣ ಲಾಭವನ್ನು ಭಾರತದ ಬ್ಯಾಟರ್‌ಗಳು ಪಡೆದುಕೊಂಡರು.

    ರೋಹಿತ್‌ ಶರ್ಮಾ 4 ರನ್‌ ಗಳಿಸಿ ಔಟಾದರೂ ಎರಡನೇ ವಿಕೆಟಿಗೆ ಶುಭಮನ್‌ ಗಿಲ್‌ ಮತ್ತು ವಿರಾಟ್‌ ಕೊಹ್ಲಿ 179 ಎಸೆತಗಳಲ್ಲಿ 189 ರನ್‌ ಜೊತೆಯಾಟವಾಡಿ ಭದ್ರವಾದ ಇನ್ನಿಂಗ್ಸ್‌ ಕಟ್ಟಿದರು.  ಶುಭಮನ್‌ ಗಿಲ್‌ 92 ರನ್‌ ( 92 ಎಸೆತ, 11 ಬೌಂಡರಿ, 2 ಸಿಕ್ಸರ್‌), ವಿರಾಟ್‌ ಕೊಹ್ಲಿ 88 ರನ್‌ ( 94 ಎಸೆತ, 11 ಬೌಂಡರಿ) ಶ್ರೇಯಸ್‌ ಅಯ್ಯರ್‌ 82 ರನ್‌ (56 ಎಸೆತ, 3 ಬೌಂಡರಿ, 6 ಸಿಕ್ಸರ್‌) ರವೀಂದ್ರ ಜಡೇಜಾ 35 ರನ್‌ ( 24 ಎಸೆತ, 1 ಬೌಂಡರಿ, 1 ಸಿಕ್ಸರ್‌) ಸಿಡಿಸಿ ಔಟಾದರು.

    ಭಾರತದ ರನ್‌ ಏರಿದ್ದು ಹೇಗೆ?
    50 ರನ್‌ – 49 ಎಸೆತ
    100 ರನ್‌ – 98 ಎಸೆತ
    150 ರನ್‌ – 150 ಎಸೆತ
    200 ರನ್‌ – 198 ಎಸೆತ
    250 ರನ್‌ – 231 ಎಸೆತ
    300 ರನ್‌ – 270 ಎಸೆತ
    350 ರನ್‌ – 293 ಎಸೆತ
    357 ರನ್‌ – 300 ರನ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]