Tag: ಶ್ರೀ ಕೃಷ್ಣ

  • ಕೃಷ್ಣ ಜನ್ಮಾಷ್ಟಮಿ ಹಬ್ಬದ ಮಹತ್ವವೇನು?

    ಕೃಷ್ಣ ಜನ್ಮಾಷ್ಟಮಿ ಹಬ್ಬದ ಮಹತ್ವವೇನು?

    ಕೃಷ್ಣ ಜನ್ಮಾಷ್ಟಮಿ ದೇಶಾದ್ಯಂತ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಕರೆಯಲಾಗುತ್ತದೆ ಹಾಗೂ ಇದನ್ನು ವೈಭವದಿಂದ ಆಚರಿಸಲಾಗುತ್ತದೆ.

    ಆಚರಣೆ ಎಲ್ಲಿ, ಹೇಗೆ?
    ಈ ದಿನ ಕೃಷ್ಣಜನ್ಮಾಷ್ಟಮಿ ಹಬ್ಬವಾಗಿದ್ದು, ಇದನ್ನು ಎಲ್ಲೆಡೆ ವಿಜ್ರಂಭಣೆಯಿಂದ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಉಡುಪಿಯ ಕೃಷ್ಣ ಮಠದಲ್ಲಿ ಅತ್ಯಂತ ಅದ್ದೂರಿಯಿಂದ ಕೃಷ್ಣನ ಅಷ್ಟಮಿಯನ್ನು ಆಚರಿಸುತ್ತಾರೆ. ಅಷ್ಟೇ ಅಲ್ಲದೆ ಎಲ್ಲಾ ಕೃಷ್ಣನ ಮಂದಿರದಲ್ಲಿ ಕೂಡ ಕೃಷ್ಣನ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಎಲ್ಲಾ ಕಡೆ ಸಾಂಪ್ರದಾಯಿಕ ಆಟಗಳು, ಚಿಕ್ಕ ಮಕ್ಕಳಿಗೆ ರಾಧಾ ಕೃಷ್ಣನ ಅಲಂಕಾರ ಮಾಡಿ ನೋಡುವುದೇ ಈ ಒಂದು ಹಬ್ಬದ ವಿಶೇಷ.

    ಪುರಾಣದಲ್ಲೇನಿದೆ?
    ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.

    ಕೃಷ್ಣ ತ್ಯಾಗಮಯಿ:
    ಶ್ರೀಕೃಷ್ಣನ ಬಗ್ಗೆ ಎಲ್ಲರಿಗೂ ಗೌರವ ಹೆಚ್ಚು ಏಕೆಂದರೆ ಆತನ ತ್ಯಾಗ ಮನೋಭಾವದಿಂದ. ಎಷ್ಟೇ ರಾಜರನ್ನು ಗದ್ದರೂ ಗದ್ದುಗೆ ಏರಲಿಲ್ಲ. ಉದಾ-ಕಂಸನನ್ನು ಕೊಂದು ಅವನ ತಂದೆ ಉಗ್ರಸೇನನಿಗೆ ಮಥುರಾ ಪಟ್ಟ ಕಟ್ಟಿದ. ಜರಾಸಂಧನನ್ನು ಕೊಂದು ಅವನ ಮಗ ಸಾಲ್ವನಿಗೆ ಪಟ್ಟಕಟ್ಟಿದ. ಸತ್ಯ ಧರ್ಮಮೀರಿದವರು ಬಂಧುಗಳಾದರೂ ಶಿಕ್ಷಾರ್ಹರು ಎಂಬ ನೀತಿಯನ್ನು ಮಾವ ಕಂಸ, ಭಾವ ಶಿಶುಪಾಲ, ಅಜ್ಜ ಮಾಗಧ ಮುಂತಾದವರನ್ನು ವಧಿಸುವ ಮೂಲಕ ತೋರಿಸಿದ್ದಾನೆ.

    ಇಷ್ಟೆಲ್ಲಾ ಆದರೂ ಶ್ರೀಕೃಷ್ಣನ ನಯ-ವಿನಯ ಅನುಕರಣೀಯ. ರಾಜ ಯಾಗದಲ್ಲಿ ಆತ ಬ್ರಾಹ್ಮಣರ ಹಾಗೂ ಹಿರಿಯರ ಕಾಲು ತೊಳೆಯುತ್ತಾನೆ. ಇಂತಹ ದೊಡ್ಡ ಗುಣದಿಂದಲೇ ಅವನಿಗೆ ಆ ಯಾಗದ ದೊಡ್ಡ ಸ್ಥಾನವಾದ ‘ಅಗ್ರಪೂಜೆ’ ಲಭಿಸಿತು. ನಂಬಿ ಕರೆದರೆ ‘ಓ’ ಎಂದು ಓಡಿ ಬಂದು ಉದ್ಧರಿಸುವುದು ಅವನ ವೈಶಿಷ್ಟ್ಯ.

    ಸುಧಾಮನ ಪ್ರಸಂಗ, ದೌಪದಿಯ ವಸ್ತ್ರಾಪಹರಣ ಸಂದರ್ಭ, ದೂರ್ವಾಸಾತಿಥ್ಯ ಸನ್ನಿವೇಶ, ಕುಬ್ಜೆಯ ಗೂನು ತಿದ್ದಿ ಮುದ್ದಾಗಿ ಮಾಡಿದ್ದು, ಧೃತರಾಷ್ಟ್ರನಿಗೆ ದಿವ್ಯದೃಷ್ಟಿ ನೀಡಿದ್ದು ಮುಂತಾದ ಸಂದರ್ಭಗಳು ಇದಕ್ಕೆ ಉದಾಹರಣೆಯಾಗಿ ನಿಲ್ಲುತ್ತವೆ.

    ಇಂತಹ ಮಹಾಮಹಿಮನ ಜನ್ಮಸ್ಮರಣೆ ನಿಜಕ್ಕೂ ಅರ್ಥಪೂರ್ಣ. ಶ್ರೀಕೃಷ್ಣನು ನಮ್ಮ ಜೀವನದ ಕಲುಷಿತ ಕಾಳ ರಾತ್ರಿಯಲ್ಲಿ ಜನಿಸಿ ಎಲ್ಲರನ್ನೂ ಪವಿತ್ರಾತ್ಮರನ್ನಾಗಿ ಮಾಡಲಿ ಎಂದು ಪ್ರಾರ್ಥಿಸುವ ಶುಭದಿನ ಇದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವರೇ ನನ್ನ ಗಂಡ ಅಂತಾಳೆ- ಕೃಷ್ಣನನ್ನು ಹುಡುಕುತ್ತಾ ದೆಹಲಿಯಿಂದ ಉಡುಪಿಗೆ ಬಂದ ಮಹಿಳೆ!

    ದೇವರೇ ನನ್ನ ಗಂಡ ಅಂತಾಳೆ- ಕೃಷ್ಣನನ್ನು ಹುಡುಕುತ್ತಾ ದೆಹಲಿಯಿಂದ ಉಡುಪಿಗೆ ಬಂದ ಮಹಿಳೆ!

    ಉಡುಪಿ: ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ ಅನ್ನೋದು ಪ್ರಸಿದ್ಧ ಹಾಡೊಂದರ ಸಾಲುಗಳು. ಇಲ್ಲೊಬ್ಬರು ದೇವರನ್ನು ಹುಡುಕುತ್ತಾ ದೆಹಲಿಯಿಂದ ಬಂದಿದ್ದಾಳೆ. ಉಡುಪಿಗೆ ಬಂದು ಶ್ರೀಕೃಷ್ಣ ನನ್ನ ಗಂಡ ಎಂದಿದ್ದಾಳೆ.

    ನನ್ನ ಸ್ವಾಮಿಯನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬಂದಿದ್ದೇನೆ. ನನ್ನ ಬಳಿ ತುಂಬಾ ಫೋಟೋಗಳಿವೆ. ಇವರೆಲ್ಲರೂ ನನ್ನ ಸ್ವಾಮಿಯವರು ಅಂತ ಹೇಳುತ್ತಾ ಉಡುಪಿ ನಗರದಲ್ಲೆಲ್ಲಾ ಈ ಮಹಿಳೆ ಓಡಾಡಿದ್ದಾಳೆ. ಕೃಷ್ಣ ಎಲ್ಲಿ..? ಕೃಷ್ಣ ನನ್ನ ಗಂಡ ಅಂತ ಅಡ್ರೆಸ್ ಕೇಳಿದ್ದಾಳೆ. ಹೀಗಾಗಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪೊಲೀಸರು ಬಂದು ವಿಚಾರಣೆ ಮಾಡಿದಾಗ, ನಾನು ದೇವರ ಪ್ರಿಯತಮೆ ಅಂತ ಹೇಳಿದ್ದಾಳೆ. ಹೆಸರೇನು? ಎಲ್ಲಿಯವಳು? ಎಂದಿದ್ದಕ್ಕೆ ಪಾನ್ ಕಾರ್ಡ್ ಕೊಡುತ್ತಾಳೆ. ಅದರಲ್ಲಿ ನಮೂದಿಸಿದಂತೆ ಈಕೆ ರಿಂಕೂ ದೇವಿ. ಮೂಲತಃ ದೆಹಲಿಯವಳು. ರಾಮ್ ಸುರಿತ್ ಸಿಂಗ್ ಅವರ ಪತ್ನಿ. ನಾನು ದೇವರ ಮಡದಿ. ನನ್ನನ್ನು ದೇವರು ದೂರ ಮಾಡಿ ಇಲ್ಲಿಗೆ ಬಂದಿದ್ದಾರೆ ಎಂದು ಹೇಳಿದ್ದಾಳೆ.

    ಮಾಧ್ಯಮಗಳೆದುರು ಕೂಡಾ ರಿಂಕೂಳದ್ದು ಇದೇ ದೂರು. ನಾನು ದೇವರನ್ನು, ನನ್ನ ಸ್ವಾಮಿಯನ್ನು ಹುಡುಕುತ್ತಾ ಹೊರಟಿದ್ದೇನೆ ಎನ್ನುತ್ತಾಳೆ. ಬಳಿಕ ಉಡುಪಿಯ ಬೈಲೂರಿನಲ್ಲಿರುವ ವೃದ್ಧಾಶ್ರಮಕ್ಕೆ ಈಕೆಯನ್ನು ಕರೆದುಕೊಂಡು ಹೋಗಲಾಗಿದೆ.

    ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ, ತಾರಾನಾಥ ಮೇಸ್ತ ಅವರು ಕೇರಳದ ಮಹಿಳಾ ಆಶ್ರಮವನ್ನು ಸಂಪರ್ಕಿಸಿ ಪರಿಸ್ಥಿತಿ ವಿವರಿಸಿದ್ದಾರೆ. ಆಶ್ರಮದ ಆಡಳಿತ ಮಂಡಳಿಯವರು ಮಹಿಳೆಯನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ. ಸದ್ಯ ದೆಹಲಿಯಿಂದ ಕೃಷ್ಣನನ್ನು ಹುಡುಕಿಕೊಂಡು ಬಂದ ರಿಂಕೂ ದೇವರ ನಾಡು ಕೇರಳವನ್ನು ಸೇರಿದ್ದಾಳೆ.

    ಪೊಲೀಸರ ಸಹಾಯದಿಂದ ಮಂಜೇಶ್ವರಕ್ಕೆ ಕರೆದುಕೊಂಡು ಹೋಗಿ ಬಿಟ್ಟಿದ್ದೇವೆ. ರಸ್ತೆಯಲ್ಲಿ ಓಡಾಡುವ ಮಹಿಳೆಗೆ ಸಾರ್ವಜನಿಕರಿಂದ ಸಮಸ್ಯೆಯಾಗಬಹುದು. ದುರುಪಯೋಗ ಆಗುವ ಸಾಧ್ಯತೆಯೂ ಇದೆ. ಮಹಿಳೆ ಮಾನಸಿಕವಾಗಿ ನೊಂದವಳಂತೆ ಕಾಣುತ್ತಾಳೆ. ದೇವರ ನಂಬಿಕೆಯ ಬಗ್ಗೆ ಬಹಳವಾಗಿ ಆಳಕ್ಕೆ ಹೋಗುತ್ತಾಳೆ. ದೇವರ ಬಗ್ಗೆ ಮಾತ್ರ ಮಾತನಾಡುತ್ತಾಳೆ. ಮನನೊಂದು ದೈವತ್ವದ ಕಡೆ ವಾಲಿರುವ ಸಾಧ್ಯತೆಯೂ ಇದೆ. ರಿಂಕೂ ದೇವಿಗೆ ಮಾನಸಿಕ ತಜ್ಞರಿಂದ ಚಿಕಿತ್ಸೆ ಕೊಡಿಸಿದರೆ ಒಳ್ಳೆಯದು ಅಂತ ವಿಶು ಶೆಟ್ಟಿ ಹೇಳಿದ್ದಾರೆ.