Tag: ಶ್ರೀ ಜಯಮೃತ್ಯುಂಜಯ ಸ್ವಾಮೀಜಿ

  • ಪಂಚಮಸಾಲಿ ಮೀಸಲಾತಿ- ಮತ್ತೊಂದು ಹೋರಾಟಕ್ಕೆ ಸಿದ್ಧತೆ

    ಪಂಚಮಸಾಲಿ ಮೀಸಲಾತಿ- ಮತ್ತೊಂದು ಹೋರಾಟಕ್ಕೆ ಸಿದ್ಧತೆ

    – ಪಂಚಮಸಾಲಿ ಸ್ವಾಮೀಜಿಗಳಿಂದ ಪೂರ್ವಭಾವಿ ಸಭೆ

    ಮಡಿಕೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮತ್ತೆ ಹೋರಾಟ ಆರಂಭವಾಗಿದ್ದು, ಕಳೆದ ಮೂರು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಿಂದ ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಇಂದು ಕೊಡಗು ಹಾಗೂ ಹಾಸನ ಜಿಲ್ಲೆಯ ಗಡಿಭಾಗಕ್ಕೆ ತಲುಪಿದೆ.

    ಕೊಡಗಿನ ಕೋಡ್ಲಿಪೇಟೆಯ ಕಲ್ಲು ಮಠಕ್ಕೆ ಅಗಮಿಸಿದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಚಾಲನೆ ನೀಡಿದರು.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ಸಲುವಾಗಿ ಪ್ರತಿಜ್ಞಾ ಪಂಚಾಯತ್ ಅಭಿಯಾನವನ್ನು ಆರಂಭಿಸುತ್ತಿದ್ದು, ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಅನೇಕ ಪಂಚಮಸಾಲಿ ಮುಖಂಡರು ಅಭಿಯಾನದಲ್ಲಿ ಭಾಗಿಯಾಗಿಯಾಗಿದ್ದರು. ಇದನ್ನೂ ಓದಿ: ನಂದಿಬೆಟ್ಟದ ಬಳಿ ಮತ್ತೆ ಭೂಕುಸಿತ – ತಾತ್ಕಾಲಿಕ ರಸ್ತೆಯೂ ಸಂಪೂರ್ಣ ಬಂದ್

    ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಸೆಪ್ಟೆಂಬರ್ 15ರ ವರೆಗೆ ಎಲ್ಲ ಜಿಲ್ಲೆಗಳಲ್ಲಿ ಅಭಿಯಾನ ನಡೆಯಲಿದೆ. ಅಷ್ಟರಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಂಬಿಕೆ ಇದೆ. ಬೇಡಿಕೆ ಈಡೇರದಿದ್ದರೆ 30ರ ಬಳಿಕ ಧರಣಿ ಸತ್ಯಾಗ್ರಹ ಮತ್ತೆ ನಡೆಯಲಿದೆ. ಅಕ್ಟೋಬರ್ 1ರಂದು ಮಾಜಿ ಸಿಎಂ ಜೆ.ಎಚ್.ಪಟೇಲ್ ಅವರ ಜಯಂತಿ ಇರುವುದರಿಂದ ಅದೇ ದಿನ ಜಯಂತಿ ಆಚರಿಸಿ ಅದೇ ವೇದಿಕೆಯಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಅಲ್ಲಿಯವರೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ನೀಡುವುದಿಲ್ಲ ಎಂಬ ನಂಬಿಕೆ ಇದೆ. ಸರ್ಕಾರ ಮತ್ತು ನಮ್ಮ ಹೋರಾಟದ ನಡುವೆ ಸಚಿವ ಸಿ.ಸಿ.ಪಾಟೀಲ್ ಇದ್ದಾರೆ. ಅವರ ಮೂಲಕ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಹೋಗುತ್ತಿದೆ. ಹೀಗಾಗಿ ನಮ್ಮ ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದು ತಿಳಿಸಿದರು.

    ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಮಾತಾನಾಡಿ, ಈಗಾಗಲೇ ರಾಜ್ಯ ಸರ್ಕಾರ ಮೀಸಲಾತಿ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಮೀಸಲಾತಿ ನೀಡುತ್ತಾರೆ ಎನ್ನುವ ಭರವಸೆ ಇದೆ. ಇಲ್ಲದಿದ್ದರೆ ಕಳೆದ ಬಾರಿಯ ಹೋರಾಟದಲ್ಲಿ 10 ಲಕ್ಷ ಜನರು ಭಾಗಿಯಾಗಿದ್ದರು. ಈ ಬಾರಿ 20 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲಿದ್ದಾರೆ. ಅಲ್ಲಿಯವರೆಗೆ ಮುಂದುವರಿಯಲು ರಾಜ್ಯ ಸರ್ಕಾರ ಬೀಡಬರದು ಎಂದು ತಿಳಿಸಿದರು.

  • ಪಂಚಮಸಾಲಿಗೆ ಬರಬೇಕಿದ್ದ ಸಿಎಂ ಸ್ಥಾನವನ್ನು ಯಡಿಯೂರಪ್ಪ ತಪ್ಪಿಸಿದರು: ಜಯಮೃತ್ಯುಂಜಯ ಶ್ರೀ

    ಪಂಚಮಸಾಲಿಗೆ ಬರಬೇಕಿದ್ದ ಸಿಎಂ ಸ್ಥಾನವನ್ನು ಯಡಿಯೂರಪ್ಪ ತಪ್ಪಿಸಿದರು: ಜಯಮೃತ್ಯುಂಜಯ ಶ್ರೀ

    ದಾವಣಗೆರೆ: ಮೀಸಲಾತಿ ಹೋರಾಟದಲ್ಲಿ ನಮ್ಮ ಶಕ್ತಿ ನೋಡಿ ಕೇಂದ್ರದ ವರಿಷ್ಠರು ಮುಖ್ಯಮಂತ್ರಿ ಸ್ಥಾನವನ್ನು ಪಂಚಮಸಾಲಿ ಸಮಾಜಕ್ಕೆ ನೀಡಬೇಕು ಎಂದುಕೊಂಡಿದ್ದರು. ಆದರೆ ಯಡಿಯೂರಪ್ಪನವರು ತಪ್ಪಿಸಿದರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ ಕೆಲವರ ಹೆಸರು ಸಿಎಂ ಹೆಸರಿನಲ್ಲಿ ಓಡ್ತಿತ್ತು. ಕೊನೆಯವರೆಗೂ ಮೂರು ಜನರು ಸಿಎಂ ರೇಸ್ ನಲ್ಲಿ ಇದ್ದರು. ಆದರೆ ಕೊನೆಗೆ ಬೊಮ್ಮಯಿಯವರನ್ನು ಅವರ ಹೈಕಮಾಂಡ್ ಸಿಎಂ ಎಂದು ಘೋಷಣೆ ಮಾಡಿತು. ಇದರಿಂದ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನ ತಪ್ಪಿಸಿದರಾ ಯಡಿಯೂರಪ್ಪನವರು ಎಂಬ ನೋವು ಸಮಾಜಕ್ಕೆ ಕಾಡುತ್ತಿದೆ ಎಂದರು. ಇದನ್ನೂ ಓದಿ: ಅಕ್ಟೋಬರ್ 1ರೊಳಗೆ ಮೀಸಲಾತಿ ಪ್ರಕಟಿಸಿ- ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಂದೇಶ

    ಮಾಜಿ ಸಿಎಂ ಯಡಿಯೂರಪ್ಪನವರನ್ನು ನಂಬಿದ್ದೆವು. ಆದರೆ ಯಡಿಯೂರಪ್ಪನರು ಯಾಕೆ ಹೀಗೆ ಮಾಡಿದರು ಎಂಬ ಕೊರಗು ನಮಗೆ ಕಾಡುತ್ತಿದೆ. ಅವರು ಉತ್ತರ ಕರ್ನಾಟಕ ಭಾಗಕ್ಕೆ ಬಂದ ಮೇಲೆ ಪಂಚಮಸಾಲಿ ಸಮಾಜಕ್ಕೆ ಈ ಬಗ್ಗೆ ಉತ್ತರ ಕೊಡಲಿ ಎಂದು ತಿಳಿಸಿದರು.

  • ಅಕ್ಟೋಬರ್ 1ರೊಳಗೆ ಮೀಸಲಾತಿ ಪ್ರಕಟಿಸಿ- ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಂದೇಶ

    ಅಕ್ಟೋಬರ್ 1ರೊಳಗೆ ಮೀಸಲಾತಿ ಪ್ರಕಟಿಸಿ- ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಂದೇಶ

    – ಆಗಸ್ಟ್ 12ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ದುಂಡುಮೇಜಿನ ಸಭೆ
    – ಸೆಪ್ಟೆಂಬರ್ ಗೆ ಮೀಸಲಾತಿಗೆ ಕೊಟ್ಟ ಸಮಯ ಅಂತ್ಯ

    ದಾವಣಗೆರೆ: ಸೆಪ್ಟೆಂಬರ್ ಗೆ ಸರ್ಕಾರಕ್ಕೆ ನೀಡಿದ್ದ ಕಾಲಾವಧಿ ಮುಗಿಯುತ್ತದೆ. ಅಕ್ಟೋಬರ್ ಒಂದರೊಳಗೆ ಮೀಸಲಾತಿ ಪ್ರಕಟಿಸಿ ಎಂದು ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯ ಮಾಡಿದರು.

    ದಾವಣಗೆರೆಯಲ್ಲಿ ಮಾತನಾಡಿದ ಸ್ವಾಮೀಜಿಗಳು, ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿತ್ತು. ಅಕ್ಟೋಬರ್ ಒಂದರೊಳಗಾಗಿ ಆ ಪ್ರಕಾರ ಮೀಸಲಾತಿ ನೀಡಬೇಕು. ವಿಳಂಬವಾದ್ರೆ ಮತ್ತೆ ಪ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲಾಗುವುದು ಎಂದು ಸ್ವಾಮೀಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಕಾಯ್ದೆಯನ್ನು ಮಂಡಿಸಿರುವುದನ್ನು ಸ್ವಾಗತಿಸುತ್ತೇನೆ. ಆಯಾ ರಾಜ್ಯಗಳಿಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೇರಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ಕೊಟ್ಟಿದೆ. ಮುಂದಿನ ತಿಂಗಳು ಸರ್ಕಾರ ನೀಡಿದ್ದ ಕಾಲಮಿತಿ ಮುಕ್ತಾಯಗೊಳ್ಳುತ್ತದೆ ಎಂದರು.

    ನೂತನ ಸಿಎಂ ಬೊಮ್ಮಾಯಿ ರೈಟ್ ಟೈಮ್ ಗೆ ರೈಟ್ ಪರ್ಸನ್ ಮುಖ್ಯಮಂತ್ರಿ. ಬೊಮ್ಮಾಯಿ ನಮ್ಮವರು ಸಿಎಂ ಆಗಿರುವುದಕ್ಕೆ ಅಭಿಮಾನ ಇದೆ. ಮೀಸಲಾತಿ ಚಳುವಳಿಯಲ್ಲಿ ಬೊಮ್ಮಾಯಿ ಅಂದು ಸಂಪೂರ್ಣ ಸಹಕಾರ ಕೊಟ್ಟಿದ್ದರು. ಯಡಿಯೂರಪ್ಪನವರು ಅಂದು ಮೀಸಲಾತಿ ನೀಡುವ ವಿಚಾರವಾಗಿ ವ್ಯಕ್ತಿಯಾಗಿ ಮಾತು ಕೊಟ್ಟಿಲ್ಲ. ಒಂದು ಸರ್ಕಾರದ ಪ್ರತಿನಿಧಿಯಾಗಿ ಮಾತು ಕೊಟ್ಟಿದ್ದರು, ಈಗ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಪಂಚಮಸಾಲಿ ಸಮಾಜದಲ್ಲಿ 80 ಲಕ್ಷ ಜನರಿದ್ದಾರೆ, ಅವರೆಲ್ಲರೂ ನಾಯಕರೇ: ನಿರಾಣಿ

    ಮೀಸಲಾತಿ ನೀಡದಿದ್ದರೆ ಇಡೀ ಪಂಚಮಸಾಲಿ ಸಮಾಜ ಅಕ್ಟೋಬರ್ ಒಂದಕ್ಕೆ ಮಾಜಿ ಮುಖ್ಯಮಂತ್ರಿ ದಿ. ಜೆ.ಹೆಚ್.ಪಟೇಲ್ ರವರ ಜನ್ಮದಿನದಂದು ಸರ್ಕಾರದ ವಿರುದ್ಧ ಹೋರಾಟ ಮಾಡ್ತೀವಿ ಎಂದರು. ಇದಕ್ಕೂ ಮುನ್ನ ನಾವು ರಾಜ್ಯ ಸರ್ಕಾರಕ್ಕೆ ನೆನಪಿಸಲು ಆಗಸ್ಟ್ 12 ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ದುಂಡುಮೇಜಿನ ಸಭೆ ನಡೆಸಲಿದ್ದು, ಈ ದುಂಡುಮೇಜಿನ ಸಭೆಯಲ್ಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರು ಸೇರಿದಂತೆ ರಾಜ್ಯದ ಮೂಲೆ ಮೂಲೆಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಈ ಸಭೆಯಲ್ಲಿ ಮುಂದಿನ ಹೋರಾಟದ ರೂಪುರೇಷೆ ರೂಪಿಸಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪಂಚಮಸಾಲಿ ಮೀಸಲು ಪಾದಯಾತ್ರೆಗೆ ಟ್ವಿಸ್ಟ್ – ವೀರಶೈವ ಲಿಂಗಾಯತ ಶ್ರೀಗಳಿಂದಲೂ ಬೆಂಬಲ