Tag: ಶ್ರೀ ದಿಂಗಾಲೇಶ್ವರ ಸ್ವಾಮೀಜಿ

  • ಮೂಜಗಂ-ದಿಂಗಾಲೇಶ್ವರ ಶ್ರೀಗಳು ಪರಸ್ಪರ ಭೇಟಿ- ಕುತೂಹಲ ಮೂಡಿಸಿದ ಸ್ವಾಮೀಜಿಗಳ ಮಾತುಕತೆ

    ಮೂಜಗಂ-ದಿಂಗಾಲೇಶ್ವರ ಶ್ರೀಗಳು ಪರಸ್ಪರ ಭೇಟಿ- ಕುತೂಹಲ ಮೂಡಿಸಿದ ಸ್ವಾಮೀಜಿಗಳ ಮಾತುಕತೆ

    ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಹಾಗೂ ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹಲವು ವರ್ಷದ ನಂತರ ಭಕ್ತರೊಬ್ಬರ ಮನೆಯಲ್ಲಿ ಮುಖಾಮುಖಿಯಾಗಿ ಚರ್ಚಿಸಿರುವುದು ವಿಶೇಷವಾಗಿದೆ. ಇಬ್ಬರು ಶ್ರೀಗಳು ಸುಮಾರು ಹೊತ್ತು ಚರ್ಚೆ ಕೂಡ ನಡೆಸಿದ ಪರಿಣಾಮ ಮತ್ತೆ ಮೂರು ಸಾವಿರ ಮಠದ ಉತ್ತರಾಧಿಕಾರಿ ವಿವಾದ ಮುನ್ನೆಲೆಗೆ ಬಂದಿದೆಯಾ ಎಂಬ ಪ್ರಶ್ನೆ ಮೂಡಿದೆ.

    ಶ್ರೀಮಠದ ಉತ್ತರಾಧಿಕಾರಿ ವಿವಾದ ಹಾಗೂ ಶ್ರೀಮಠದ ಜಮೀನು ಪರಭಾರೆ ವಿರುದ್ಧದ ಹೋರಾಟ ಶುರುವಾದಾಗಿನಿಂದ ಈವರೆಗೆ ಉಭಯ ಶ್ರೀಗಳು ಮುಖಾಮುಖಿ ಆಗಿರಲಿಲ್ಲ. ಒಬ್ಬರಿಗೊಬ್ಬರು ಮಾತನಾಡಿರಲಿಲ್ಲ, ದಿಂಗಾಲೇಶ್ವರ ಶ್ರೀಗಳು ಮಠಕ್ಕೆ ಹೋದರೂ ಗುರುಸಿದ್ಧ ರಾಜಯೋಗಿಂದ್ರರು ಹೊರಬಂದಿರಲಿಲ್ಲ. ಭೇಟಿ ಕೂಡ ಆಗಿರಲಿಲ್ಲ. ಉಭಯ ಶ್ರೀಗಳು ಬಹಿರಂಗವಾಗಿ ಆರೋಪ ಪ್ರತ್ಯಾರೋಪ ಮಾಡಿದ್ದ ಪ್ರಸಂಗಗಳು ನಡೆದಿದ್ದುಂಟು. ಇದೀಗ ಏಕಾಏಕಿ ಇಬ್ಬರು ಶ್ರೀಗಳು ಒಂದೆಡೆ ಕುಳಿತು ಮಾತುಕತೆ ನಡೆಸುವ ಮೂಲಕ ಅಲ್ಲಿ ಸೇರಿದ್ದ ಭಕ್ತ ಸಮೂಹದಲ್ಲಿ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಸದಸ್ಯನಾಗಿದ್ದ ಡಿಕೆಶಿಯವರೇ ಸಿದ್ದರಾಮಯ್ಯನವರ ಮಾತನ್ನು ಒಪ್ಪುತ್ತೀರಾ – ಬಿಜೆಪಿ ಪ್ರಶ್ನೆ

    ಬಿಡ್ನಾಳದ ದಿ.ವೀರಭದ್ರಪ್ಪ ಅಸುಂಡಿ ಅವರ ಪುಣ್ಯಸ್ತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಉಭಯ ಶ್ರೀಗಳು, ಮುಖಾಮುಖಿ ಭೇಟಿಯಾಗಿ ಅಸುಂಡಿ ಅವರ ಮನೆಯಲ್ಲೇ ಒಂದಡೆ ಅಕ್ಕಪಕ್ಕ ಕುಳಿತು ಕೆಲ ಕಾಲ ಮಾತುಕತೆ ನಡೆಸಿದರು. ಅದೇ ಸಮಯಕ್ಕೆ ಶ್ರೀಮಠದ ಉನ್ನತ ಸಮಿತಿ ಸದಸ್ಯ ಸಭಾಪತಿ ಬಸವರಾಜ ಹೊರಟ್ಟಿಯವರು ಆಗಮಿಸಿದರು. ಶ್ರೀಗಳ ನಡುವಿನ ಮಾತುಕತೆಗೆ ಅಡ್ಡಿ ಮಾಡದೇ ಅವರು ಹೊರನಡೆದರು. ಆದರೆ ಶ್ರೀಗಳ ಮಾತುಕತೆ ಸಾಕಷ್ಟು ಕುತೂಹಲ ಮೂಡಿಸಿದೆ.

  • ರಾಜಕಾರಣಿಗಳು ಮಠ ಪ್ರವೇಶಿಸಿದರೆ ಅಶಾಂತಿ: ದಿಂಗಾಲೇಶ್ವರ ಶ್ರೀ

    ರಾಜಕಾರಣಿಗಳು ಮಠ ಪ್ರವೇಶಿಸಿದರೆ ಅಶಾಂತಿ: ದಿಂಗಾಲೇಶ್ವರ ಶ್ರೀ

    ಧಾರವಾಡ: ಮಠಗಳಲ್ಲಿ ಭಕ್ತರು ಹೊರ ಹೋಗಿ, ರಾಜಕಾರಣಿಗಳು ಒಳ ಹೋದರೆ ಅಲ್ಲಿ ಅಶಾಂತಿ ಗ್ಯಾರಂಟಿ ಎಂದು ಬಾಲೇಹೊಸೂರು ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಮೂರು ಸಾವಿರ ಮಠದ ಆಸ್ತಿಯನ್ನು ಕೆಲವರಿಗೆ ದಾನವಾಗಿ, ಇನ್ನೂ ಕೆಲವರಿಗೆ ಕರೆದು ಕೊಡಲಾಗಿದೆ. ಅಲ್ಲದೆ ಹಲವರಿಗೆ ಕೆಲವು ಅಗ್ರಿಮೆಂಟ್ ಮೇಲೆ ಜಮೀನು ಕೊಡಲಾಗಿದೆ. ಈ ಎಲ್ಲ ಆಸ್ತಿ ಮಠಕ್ಕೆ ಉಳಿಯಬೇಕು, ಅದಕ್ಕೆ ನಾವು ಎಲ್ಲ ಕಡೆ ಜನಜಾಗೃತಿ ಮಾಡುತಿದ್ದೇವೆ ಎಂದು ತಿಳಿಸಿದರು.

    ನಮ್ಮ ಹೋರಾಟ ತೀವ್ರಗೊಳ್ಳುವ ಮೊದಲು ಯಾರು ಮಠದ ಭೂಮಿ ತೆಗೆದುಕೊಂಡಿದ್ದಾರೆ ಅವರೇ ಸ್ವ ಇಚ್ಛೆಯಿಂದ ವಾಪಸ್ ಮಾಡುತ್ತೇವೆ ಎಂದು ಘೋಷಣೆ ಮಾಡಬೇಕು. ಮಠದ ಆಸ್ತಿ ವಾಪಸ್ ಬರುವವರೆಗೆ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

    ಯಾವಾಗ ಮಠಗಳಲ್ಲಿ ಭಕ್ತರು ಹೊರ ಹೋಗಿ, ರಾಜಕಾರಣಿಗಳು ಒಳ ಹೋಗುತ್ತಾರೋ ಅಲ್ಲಿ ಅಶಾಂತಿ ಗ್ಯಾರಂಟಿ ಎಂದು ರಾಜಕಾರಣಿಗಳ ಮೇಲೆ ಹರಿಹಾಯ್ದರು. ರಾಜಕಾರಣಿಗಳು ಇರುವ ಜಾಗ ವಿಧಾನಸೌಧವೇ ಹೊರತು ಮಠ ಅಲ್ಲ. ಮಠದಲ್ಲಿ ಸ್ವಾಮಿಗಳು ಇರಬೇಕು, ವಿಧಾನಸೌಧದಲ್ಲಿ ರಾಜಕಾರಣಿಗಳು ಇರಬೇಕು. ಬಹಳಷ್ಟು ಮಠಗಳಲ್ಲಿ ರಾಜಕಾರಣಿಗಳ ಪ್ರವೇಶ ಆಗಿ, ಇಡೀ ಮಠದ ಆಸ್ತಿ ಕಬಳಿಸುವ ಹಾಗೂ ಮಠದ ಆಸ್ತಿ ನಾಶ ಮಾಡುವ ಪ್ರಯತ್ನ ನಡೆದಿದೆ. ಇದು ಒಳ್ಳೆಯದಲ್ಲ ಎಂದು ಶ್ರೀಗಳು ಹೇಳಿದರು.

  • ಮತ್ತೆ ಚರ್ಚೆಗೆ ಗ್ರಾಸವಾದ ಮೂರುಸಾವಿರ ಮಠದ ಉತ್ತರಾಧಿಕಾರಿ ನೇಮಕ

    ಮತ್ತೆ ಚರ್ಚೆಗೆ ಗ್ರಾಸವಾದ ಮೂರುಸಾವಿರ ಮಠದ ಉತ್ತರಾಧಿಕಾರಿ ನೇಮಕ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮೂರುಸಾವಿರ ಮಠ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಮಠದ ಉತ್ತರಾಧಿಕಾರಿ ವಿಷಯ ಮತ್ತೀಗ ಮುನ್ನೆಲೆಗೆ ಬಂದಿದೆ. ರಾಜಕಾರಣಿಗಳು ತಮ್ಮ ಗೊಂದಲವನ್ನ ಮುಂದುವರಿಸುತ್ತಿದ್ದು ಉತ್ತರಾಧಿಕಾರಿ ವಿಷಯಕ್ಕೆ ಉತ್ತರವೇ ಸಿಗದಾಗಿದೆ.

    ಸದ್ಯ ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳಿದ್ದಾರೆ. ಇವರೇ ಮನಸ್ಸು ಮಾಡಿ ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳನ್ನ ಉತ್ತರಾಧಿಕಾರಿ ಎಂದು ನೇಮಕ ಮಾಡಿಕೊಂಡಿದ್ದರು. ಈ ಮೊದಲು 2014ರಲ್ಲಿ ಇದಕ್ಕೆ ಕೆಲವರು ವಿರೋಧ ಮಾಡಿ ಗೊಂದಲ ಸೃಷ್ಟಿ ಮಾಡಿದ್ದರು. ಅಂದಿನಿಂದಲೇ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.

    ಇತ್ತೀಚೆಗೆ ಕೆಲವು ಸ್ವಾಮೀಜಿಗಳು ಸಿಎಂ ಅವರನ್ನು ಭೇಟಿ ಮಾಡಿ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಸ್ವಾಮೀಜಿಯವರನ್ನ ನೇಮಕ ಮಾಡುವಂತೆ ಚರ್ಚೆ ಮಾಡಿದ್ದಾರೆ. ಆದರೆ ಸದ್ಯಕ್ಕೆ ಉತ್ತರಾಧಿಕಾರಿ ನೇಮಕ ವಿಚಾರ ಉನ್ನತ ಸಮಿತಿ ಮುಂದೆ ಬಂದಿಲ್ಲವೆಂದು ಮಠದ ಉನ್ನತ ಸಮಿತಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆ ನೀಡಿರುವುದು ಮತ್ತೆ ಉತ್ತರಾಧಿಕಾರಿ ವಿಷಯ ಮುನ್ನೆಲೆಗೆ ಬಂದಿದೆ.

    ಮಠದ ಉತ್ತರಾಧಿಕಾರಿ ವಿಷಯವೇ ಇಂದು ಅಪ್ರಸ್ತುತ. ಈ ವಿಷಯದಲ್ಲಿ ನನ್ನ ಹೆಸರನ್ನು ಸುಖಾಸುಮ್ಮನೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈಗಿರುವ ಸ್ವಾಮೀಜಿಗಳು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಅವರಿಗೆ ಸಹಕಾರ ಕೊಡುತ್ತ ನಾವು ಭಕ್ತರಾಗಿ ಮುಂದುವರಿಯುತ್ತೇವೆ. ಅಲ್ಲದೇ ಉತ್ತರಾಧಿಕಾರಿ ಬದಲಾವಣೆ ವಿಚಾರದಲ್ಲಿ ನನ್ನ ಹೆಸರು ತರುತ್ತಿರುವುದು ಸರಿಯಲ್ಲವೆಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

    ಮೂರುಸಾವಿರ ಮಠದ ಹಾಲಿ ಶ್ರೀಗಳ ಅಭಿಲಾಷೆಯನ್ನ ಈಡೇರಿಸಲು ಈಗಲೂ ಹಿಂದೇಟು ಹಾಕಲಾಗುತ್ತಿದೆ. ಶ್ರೀ ದಿಂಗಾಲೇಶ್ವರ ಶ್ರೀಗಳನ್ನ ಕೆಲವರು ಮೊದಲಿಂದಲೂ ವಿರೋಧ ಮಾಡುತ್ತ ಬರುತ್ತಿರುವುದೇ ಇದಕ್ಕೆ ಕಾರಣವಾಗಿದೆ. ಪುರಾತನ ಇತಿಹಾಸ ಹೊಂದಿರುವ ಶ್ರೀ ಮಠಕ್ಕೆ ಬಾಲೆಹೊಸೂರಿನ ಶ್ರೀಗಳು ಬರುವುದನ್ನೇ ಕಾಯುತ್ತಿರುವ ಹಾಲಿ ಶ್ರೀಗಳ ಬಯಕೆ ಯಾವಾಗ ಈಡೇರತ್ತೋ ಕಾದು ನೋಡಬೇಕಿದೆ.