Tag: ಶ್ರೀ ಭರತ ಬಾಹುಬಲಿ

  • ಲಾಕ್ ಡೌನ್ ನಿಂದ ಬೇಸರ ಎಂಬುವವರಿಗೆ ‘ಶ್ರೀ ಭರತ ಬಾಹುಬಲಿ’ಯಿಂದ ಮನರಂಜನೆ!

    ಲಾಕ್ ಡೌನ್ ನಿಂದ ಬೇಸರ ಎಂಬುವವರಿಗೆ ‘ಶ್ರೀ ಭರತ ಬಾಹುಬಲಿ’ಯಿಂದ ಮನರಂಜನೆ!

    ಮಂಜು ಮಾಂಡವ್ಯ ನಾಯಕನಾಗಿ ಮೊದಲ ಬಾರಿಗೆ ಎಂಟ್ರಿಕೊಟ್ಟ ಸಿನಿಮಾ ‘ಶ್ರೀ ಭರತ ಬಾಹುಬಲಿ’. ಚಿಕ್ಕಣ್ಣ ಹಾಗೂ ಮಂಜು ಮಾಂಡವ್ಯ ಭರತ-ಬಾಹುಬಲಿಯಾಗಿ ಜನರನ್ನು ಮನರಂಜಿಸಿದ್ದ ಸಿನಿಮಾ. ಅದೆಷ್ಟೋ ಜನ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡಲು ಆಗಲಿಲ್ಲ ಎಂಬ ಬೇಸರವನ್ನು ವ್ಯಕ್ತಪಡಿಸುತ್ತಿದ್ರು. ಇದೀಗ ಆ ಬೇಸರವನ್ನ ಹೋಗಲಾಡಿಸುವಂತ ಸಮಯ ಬಂದಿದೆ. ಹೌದು ಅಮೆಜಾನ್ ಪ್ರೈಮ್ ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ನೋಡುಗರಿಗೆ ಸಿಕ್ತಾ ಇದೆ.

    ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಪ್ರೈಮ್ ನಲ್ಲಿ ನೋಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಚಿತ್ರಮಂದಿರದಲ್ಲಿ ಇಂತ ಒಳ್ಳೆ ಮನರಂಜನೆಯ ಸಿನಿಮಾ ನೋಡುವುದಕ್ಕೆ ಆಗಲಿಲ್ಲವಲ್ಲ ಎಂಬ ಬೇಸರವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ಈ ಕೊರೋನಾ ವೈರಸ್ ನಿಂದಾಗಿ ಎಲ್ಲೆಡೆ ಲಾಕ್ ಡೌನ್ ಮುಂದುವರಿದಿದೆ. ಈಗ ಏನಿದ್ರು ಮನೆಯಲ್ಲಿ ಲಾಕ್ ಆಗಿ ಟೈಮ್ ಪಾಸ್ ಗೆ ಏನಾದ್ರೂ ಮಾಡ್ಬೇಕು ಅಂತ ಹುಡುಕ್ತಾ ಇರ್ತಾರೆ. ಇಷ್ಟು ದಿನ ಮನೆಯಲ್ಲೇ ಲಾಕ್ ಆಗಿ ಬೇಸರವೆನಿಸಿದ ಮನಸ್ಸಿಗೆ ಮುದ ನೀಡಿ, ನಕ್ಕ ನಲಿಸಲು ‘ಶ್ರೀ ಭರತ ಬಾಹುಬಲಿ’ ಸೂಕ್ತವಾದ ಸಿನಿಮಾ. ಮನೆ ಮಂದಿಯೆಲ್ಲಾ ಒಂದೆಡೆ ಕುಳಿತು ನಗು ಬಯಸುವವರಿಗಾಗಿ ‘ಶ್ರೀ ಭರತ ಬಾಹುಬಲಿ’ಯನ್ನು ಪ್ರೈಮ್ ನಲ್ಲಿ ಬಿಡುಗಡೆ ಮಾಡಲಾಗಿದೆ.

    ‘ಮಾಸ್ಟರ್ ಪೀಸ್’ ಅಂತ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕನ ನಟನೆ ಒಂದು ಕಡೆ, ಹಾಸ್ಯದಲ್ಲಿ ಖ್ಯಾತಿ ಪಡೆದಿರುವ ಚಿಕ್ಕಣ್ಣ ಇನ್ನೊಂದು ಕಡೆ. ಸೀರಿಯಸ್ ಮ್ಯಾಟರ್ ಇಟ್ಟುಕೊಂಡು ಕಾಮಿಡಿ ಕಾನ್ಸೆಪ್ಟ್ ನಲ್ಲಿ ಮನರಂಜನೆ ನೀಡಿದ ಸಿನಿಮಾವಿದು. ಮಂಜು ಮಾಂಡವ್ಯ, ಚಿಕ್ಕಣ್ಣ, ಸಾರಾ ಹರೀಶ್, ಶ್ರೇಯಾ ಶೆಟ್ಟಿ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ. ಮಂಜು ಮಾಂಡವ್ಯ ಹೊಸಬರನ್ನೇ ತೆರೆ ಮೇಲೆ ತಂದಿದ್ದರು, ಅವರ ನಟನೆ ಅದ್ಭುತವಾಗಿ ಮೂಡಿ ಬಂದಿದೆ. ಒಟ್ಟಿನಲ್ಲಿ ಈ ಸಿನಿಮಾ ಕಂಪ್ಲೀಟ್ ಮನರಂಜನೆಯ ಜೊತೆಗೆ ಒಂದೊಳ್ಳೆ ಸಿನಿಮಾ ನೋಡಿದ ಖುಷಿ ನೀಡುವುದರಲ್ಲಿ ಅನುಮಾನವಿಲ್ಲ.

  • ನಕ್ಕು ನಗಿಸಲು ಬರ್ತಿದ್ದಾರೆ ಶ್ರೀ ಭರತ ಬಾಹುಬಲಿ

    ನಕ್ಕು ನಗಿಸಲು ಬರ್ತಿದ್ದಾರೆ ಶ್ರೀ ಭರತ ಬಾಹುಬಲಿ

    ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಜುಗಲ್‍ಬಂದಿಯಾಗಿ ನಟಿಸಿರೋ ಶ್ರೀ ಭರತ ಬಾಹುಬಲಿ ಚಿತ್ರ ಜನವರಿ 17ಕ್ಕೆ ರಾಜ್ಯದ್ಯಂತ ತೆರೆ ಕಾಣುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಜನಪ್ರಿಯರಾಗಿದ್ದ ಮಂಜು ಮಾಂಡವ್ಯ ನಟನಾಗಿ ಅಭಿನಯಿಸುತ್ತಿರುವ ಚಿತ್ರವಿದು.

    ನಟನೆ ಜೊತೆಗೆ ಚಿತ್ರಕ್ಕೆ ನಿರ್ದೇಶನ ಕೂಡ ಮಂಜು ಮಾಂಡವ್ಯ ಮಾಡಿದ್ದಾರೆ. ಒಂದೊಳ್ಳೆ ಟೀಂ ಕಟ್ಟಿಕೊಂಡು ರೋಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಇರೋ ಚಿತ್ರವನ್ನು ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದಾರೆ ಮಂಜು ಮಾಂಡವ್ಯ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.

    ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಟ್ರೈಲರ್ ಕೂಡ ಒಳ್ಳೆಯ ಟಾಕ್ ಕ್ರಿಯೇಟ್ ಮಾಡಿದ್ದು ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ. ಮಣಿಕಾಂತ್ ಕದ್ರಿ ಮ್ಯೂಸಿಕ್, ಪರ್ವೇಜ್.ಕೆ ಸಿನಿಮಾಟೋಗ್ರಾಫಿ ಶ್ರೀ ಭರತ ಬಾಹುಬಲಿ ಚಿತ್ರಕ್ಕಿದೆ. ಶ್ರೀನಿವಾಸ್ ಮೂರ್ತಿ, ಪುಷ್ಪಲತಾ, ಕರಿಸುಬ್ಬು, ಶ್ರೇಯಾ ಶೆಟ್ಟಿ, ಅಚ್ಯುತ್ ರಾವ್ ಚಿತ್ರದಲ್ಲಿ ನಟಿಸಿದ್ದಾರೆ. ಜನವರಿ 17ಕ್ಕೆ ಭರತ ಬಾಹುಬಲಿ ಕಥೆ ನೋಡಲು ರೆಡಿಯಾಗಿ.

  • ಚಿಕ್ಕಣ್ಣ-ಮಂಜು ಮಾಂಡವ್ಯ ಜುಗಲ್‍ಬಂದಿಯ ಚಿತ್ರ ಈ ವಾರ ತೆರೆಗೆ!

    ಚಿಕ್ಕಣ್ಣ-ಮಂಜು ಮಾಂಡವ್ಯ ಜುಗಲ್‍ಬಂದಿಯ ಚಿತ್ರ ಈ ವಾರ ತೆರೆಗೆ!

    ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಈಗ ತಾವೇ ಕ್ಯಾಮೆರಾ ಮುಂದೆ ಬಂದು ಡೈಲಾಗ್ ಹೇಳ್ತಿದ್ದಾರೆ.

    ಹೌದು, ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನಕ್ಕೂ ಸೈ, ನಟನೆಗೂ ಸೈ ಎನ್ನುತ್ತಿದ್ದಾರೆ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ನಟನಾಗಿಯೂ ಛಾಪು ತೋರಿಸಲು ಸಿದ್ದರಾಗಿದ್ದಾರೆ ಮಂಜು ಮಾಂಡವ್ಯ. ನಟನೆ ಜೊತೆಗೆ ಸ್ವತಃ ತಾವೇ ಚಿತ್ರಕ್ಕೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ.

    ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಶ್ರೀ ಭರತ ಬಾಹುಬಲಿ ಟೈಟಲ್ಲೇ ವಿಭಿನ್ನವಾಗಿದ್ದು ರೋಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಚಿತ್ರದಲ್ಲಿದೆಯಂತೆ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.

    ರಾಕಿಂಗ್ ಸ್ಟಾರ್ ಯಶ್ ಗೆಳೆಯನ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದು, ಟ್ರೈಲರ್ ಮೆಚ್ಚುಗೆ ಪಡೆದುಕೊಂಡಿದೆ. ಮಣಿಕಾಂತ್ ಕದ್ರಿ ಸಂಗೀತವಿರುವ ಚಿತ್ರದ ಹಾಡುಗಳು ಕೂಡ ಸಖತ್ ಸೌಂಡ್ ಮಾಡ್ತಿವೆ. ಜನವರಿ 17ಕ್ಕೆ ಶ್ರೀ ಭರತ ಬಾಹುಬಲಿ ಚಿತ್ರ ತೆರೆಗೆ ಬರಲು ರೆಡಿಯಾಗಿದ್ದು, ಟಿ. ಶ್ರೀನಿವಾಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

  • ‘ಭರತ ಬಾಹುಬಲಿ’ಯಲ್ಲಿ ರಿಷಿಗೇನು ಕೆಲಸ?

    ‘ಭರತ ಬಾಹುಬಲಿ’ಯಲ್ಲಿ ರಿಷಿಗೇನು ಕೆಲಸ?

    ‘ಮಾಸ್ಟರ್ ಪೀಸ್’ ಚಿತ್ರದ ಮೂಲಕ ರಾಕಿಂಗ್ ಸ್ಟಾರ್ ಯಶ್ ಗೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಮಂಜು ಮಾಂಡವ್ಯ ನಾಯಕರಾಗಿ ‘ಭರತ ಬಾಹುಬಲಿ’ಯಾಗಿ ತೆರೆಮೇಲೆ ಬರ್ತಿರೋದು ಗೊತ್ತಿರೋ ವಿಚಾರ. ಈಗಾಗಲೇ ಚಿತ್ರವು ಭರ್ಜರಿ ಮೇಕಿಂಗ್ ಸೆಟ್‍ನಿಂದ ಸೆಂಟರ್ ಆಫ್ ಅಟ್ಯ್ರಾಕ್ಷನ್ ಆಗ್ತಿದೆ. ರಿಲೀಸ್ ಆದ ಟ್ರೈಲರ್ ಹಾಗೂ ವೀಡಿಯೋ ಸಾಂಗ್ ನೋಡಿದ ಪ್ರೇಕ್ಷಕ ಸಿನೆಮಾ ನೋಡೋಕೆ ಕಾತುರನಾಗಿದ್ದಾನೆ.

    ಚಿತ್ರದಲ್ಲಿ ಹಲವು ವಿಶೇಷತೆಗಳಿದ್ದು, ‘ಆಪರೇಷನ್ ಅಲಮೇಲಮ್ಮ’ ಹಾಗೂ ಕವಲು ದಾರಿ ಚಿತ್ರ ಖ್ಯಾತಿಯ ರಿಷಿ ಸಹ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಮಂಜು ಮಾಂಡವ್ಯ ಹಾಗೂ ರಿಷಿ ನಡುವಿನ ಫ್ರೆಂಡ್ ಶಿಪ್ ಗಾಗಿ ವಿಶೇಷ ಪಾತ್ರವೊಂದನ್ನ ಮಾಡಿದ್ದಾರಂತೆ. ಇನ್ನುಳಿದಂತೆ ಮಂಜು ಅವರಿಗೆ ಸಾರಾ ಮಹೇಶ್ ನಾಯಕಿಯಾಗಿದ್ದು, ಚಿಕ್ಕಣ್ಣನ ಕಾಮಿಡಿ ತೆರೆಮೇಲೆ ಮೋಡಿ ಮಾಡೋದ್ರ ಜೊತೆ, ಶೃತಿ ಪ್ರಕಾಶ್ ಅವರ ಡ್ಯಾನ್ಸ್ ನಿದ್ದೆಕೆಡಿಸತ್ತೆ.

    ಇನ್ನು ಸದ್ಯ ಬ್ಯುಸಿಯಾಗಿರೋ ರಿಷಿ, ಭರತ ಬಾಹುಬಲಿಯಲ್ಲಿ ಏನ್ ಮಾಡಿದ್ದಾರೆ ಅನ್ನೋ ಪ್ರಶ್ನೆಗೆ 17 ರಂದು ಚಿತ್ರ ರಿಲೀಸ್ ಆದ್ಮೇಲೇನೇ ಉತ್ತರ ಸಿಗಲಿದೆ. ಇದನ್ನು ಓದಿ: ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

  • ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

    ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

    ಮಾಸ್ಟರ್ ಪೀಸ್ ನಂತಹ ಸೂಪರ್ ಹಿಟ್ ಚಿತ್ರ ಕೊಟ್ಟ ಮಂಜು ಮಾಂಡವ್ಯ ನಟನಾಗಿ ಬರ್ತಾ ಇರೋದು ಎಲ್ಲರಿಗೂ ಗೊತ್ತೆ ಇದೆ. ನಿರ್ದೇಶನದಿಂದ ಬಡ್ತಿ ಪಡೆದು ‘ಶ್ರೀ ಭರತ ಬಾಹುಬಲಿ’ಯಾಗಿ ಕಂಗೊಳಿಸಲು ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಗಿದಿದ್ದು, ತೆರೆಗೆ ಬರಲು ಸಿದ್ಧತೆ ನಡೆಸಿದೆ. ಇದೇ ತಿಂಗಳು 17ರಂದು ಚಿತ್ರಮಂದಿರಕ್ಕೆ ‘ಭರತ ಬಾಹುಬಲಿ’ ಅಬ್ಬರಿಸಲಿದ್ದಾನೆ.

    ಸಿನಿಮಾ ಮಾಡೋದು ಎಷ್ಟು ಕಷ್ಟನೋ ಜನರನ್ನು ಚಿತ್ರಮಂದಿರಕ್ಕೆ ಕರೆತರುವುದು ಅಷ್ಟೇ ಕಷ್ಟ. ಹೀಗಾಗಿ ಎಲ್ಲಾ ಸಿನಿಮಾಗಳ ನಡುವೆ ‘ಭರತ ಬಾಹುಬಲಿ’ಯನ್ನು ನೋಡುವಂತೆ ಮಾಡಲು, ಚಿತ್ರತಂಡ ಹೊಸ ಪ್ಲಾನ್ ಒಂದನ್ನು ಹೆಣೆದಿದೆ. ಈ ಸಿನಿಮಾ ನೋಡುಗರಿಗೆ  ಒಂದು ಕೋಟಿ ರೂಪಾಯಿ ಮೊತ್ತದ ಬಹುಮಾನವನ್ನು ಘೋಷಿಸಿದೆ. ಬಹುಮಾನದಲ್ಲಿ 5 ಲಕ್ಷ ಬೆಲೆ ಬಾಳುವ 10 ಕಾರುಗಳು ಹಾಗೂ 5 ಲಕ್ಷ ಬೆಲೆಬಾಳುವ 10 ಚಿನ್ನದ ಆಭರಣಗಳನ್ನು ಚಿತ್ರತಂಡ ಘೋಷಿಸಿದೆ. 20 ಜನ ಅದೃಷ್ಟವಂತ ಪ್ರೇಕ್ಷಕರಿಗೆ ಈ ಬಹುಮಾನ ಸಿಗಲಿದೆ.

    ಬಹುಮಾನ ಗೆಲ್ಲಬೇಕೆಂಬ ಪ್ರೇಕ್ಷಕರು ಮಾಡಬೇಕಾಗಿರುವುದು ಇಷ್ಟೇ, ಕರ್ನಾಟಕದ ಯಾವುದೇ ಚಿತ್ರಮಂದಿರದಲ್ಲಾದರೂ ‘ಭರತ ಬಾಹುಬಲಿ’ ಚಿತ್ರವನ್ನು ನೋಡಿ. ಈ ವೇಳೆ ಚಿತ್ರತಂಡ ಸಿನಿಮಾ ಟಿಕೆಟ್ ಜೊತೆಗೆ ನೀಡಲಾಗುವ ಕೂಪನ್ ಜೊತೆಗಿಟ್ಟುಕೊಂಡರೆ ಸಾಕು. ಚಿತ್ರ ತಂಡವು ಲಕ್ಕಿ ಪಿಕ್ ನಲ್ಲಿ 20 ಜನ ಅದೃಷ್ಟವಂತರನ್ನು ಆಯ್ಕೆ ಮಾಡಿ ನಂಬರ್ ಘೋಷಿಸುತ್ತದೆ. ಬಳಿಕ ಕಾರು ಹಾಗೂ ಆಭರಣಗಳನ್ನು ಅದೃಷ್ಟವಂತ ಪ್ರೇಕ್ಷಕರಿಗೆ ನೀಡಲಾಗುತ್ತದೆ.

    ಭರತ ಬಾಹುಬಲಿಗಾಗಿ ಈಗಾಗಲೇ ಕೋಟಿ ಕೋಟಿ ಹಣ ಖರ್ಚಾಗಿದೆ. ಪ್ರೇಕ್ಷಕರನ್ನು ಕರೆತರಲು ಮತ್ತೆ ನಿರ್ಮಾಪಕರಾದ ಟಿ. ಶಿವಪ್ರಕಾಶ್ ಕೋಟಿ ಹಣ ಖರ್ಚು ಮಾಡಲು ಮುಂದಾಗಿದ್ದಾರೆ. ಸಿನಿಮಾ ಅದ್ಭುತವಾಗಿ ಮೂಡಿ ಬಂದಿದ್ದು, ಇಂತದ್ದೊಂದು ಸಿನಿಮಾವನ್ನು ಚಿತ್ರಮಂದಿರದಲ್ಲೇ ನೋಡಿ, ಖುಷಿ ಪಡಲಿ ಅನ್ನೋದು ನನ್ನ ಉದ್ದೇಶ. ಒಳ್ಳೆ ಸಿನಿಮಾವನ್ನ ಜನ ಮಿಸ್ ಮಾಡಿಕೊಳ್ಳಬಾರದಲ್ವಾ ಅನ್ನೋದು ನಿರ್ಮಾಪಕರ ಮಾತು

    ಈಗಾಗಲೇ ಸಿನಿಮಾ ಸಾಕಷ್ಟು ವಿಚಾರಗಳಿಗೆ ಸದ್ದು ಮಾಡುತ್ತಿದೆ. ಬಿಡುಗಡೆಯಾಗಿರುವ ಹಾಡು, ಟ್ರೈಲರ್ ನೋಡಿದ್ರೇನೆ ಸಿನಿಮಾದ ಕ್ವಾಲಿಟಿ ಗೊತ್ತಾಗುತ್ತೆ. ಟ್ರೈಲರ್ ನೋಡಿದರವರಿಗೆ ಸಿನಿಮಾದ ಮೇಲೆ ಮತ್ತಷ್ಟು ಭರವಸೆ ಹೆಚ್ಚಾಗಿದೆ. ಜನವರಿ 17ರಂದು ಎಲ್ಲಾ ಥಿಯೇಟರ್ ಗೆ ಲಗ್ಗೆ ಇಡ್ತಾ ಇದೆ. ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ, ನೀವೂ ಆ ಅದೃಷ್ಟವಂತರಲ್ಲಿ ಒಬ್ಬರಾದ್ರೂ ಆಗಬಹುದು.

  • ವರ್ಷಾಂತ್ಯಕ್ಕೆ ಭರತ ಬಾಹುಬಲಿಯ ಮಸ್ತ್ ಹಾಡಿನ ಕೊಡುಗೆ

    ವರ್ಷಾಂತ್ಯಕ್ಕೆ ಭರತ ಬಾಹುಬಲಿಯ ಮಸ್ತ್ ಹಾಡಿನ ಕೊಡುಗೆ

    ಮಾಸ್ಟರ್ ಫೀಸ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ ನಿರ್ದೇಶಕ ಮಂಜು ಮಾಂಡವ್ಯ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ಡೈರೆಕ್ಷನ್ ಕ್ಯಾಪ್ ಜೊತೆ ನಟನಾಗಿ ಬೆಳ್ಳಿತೆರೆಯಲ್ಲಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ. ಮಂಜು ಮಾಂಡವ್ಯ, ಚಿಕ್ಕಣ್ಣ ಮುಖ್ಯ ಭೂಮಿಕೆಯ ಈ ಚಿತ್ರದ ಟಪ್ಪಾಂಗೋಚಿ ಸಾಂಗ್ ರಿಲೀಸ್ ಆಗಿದೆ. ಕ್ಯಾಚಿ ಲಿರಿಕ್ಸ್ ಇರೋ ಈ ಸಾಂಗ್ ಎಲ್ಲರನ್ನೂ ರಂಜಿಸುತ್ತಿದೆ. ಈ ಹಾಡಿಗೆ ಮಂಜು ಮಾಂಡವ್ಯ ಲಿರಿಕ್ಸ್ ಬರೆಯೋದರ ಜೊತೆ ಹಾಡು ಹಾಡಿ ಸ್ಟೆಪ್ಪು ಹಾಕಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಟಪ್ಪಾಂಗೋಚಿ ಸಾಂಗ್‍ಗೆ ಮಸ್ತ್ ಸ್ಟೆಪ್ ಹಾಕಿದ್ದು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

    ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಹಾಕಿರೋ ಸೆಟ್‍ನಲ್ಲಿ ಕಲರ್ ಫುಲ್ ಆಗಿ ಮೂಡಿಬಂದಿರೋ ಈ ಹಾಡಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರದ ಮೆಲೋಡಿ ಸಾಂಗ್ ರಿಲೀಸ್ ಆಗಿ ಎಲ್ಲರ ಗಮನ ಸೆಳೆದಿದೆ. ವರ್ಷಾಂತ್ಯಕ್ಕೆ ರಿಲೀಸ್ ಆಗಿರೋ ಈ ಹಾಡು ಇಯರ್ ಎಂಡ್ ಸೆಲೆಬ್ರೇಷನ್‍ಗೆ ಹೇಳಿ ಮಾಡಿಸಿದಂತಿದೆ.

    ಜನವರಿ ಹದಿನೇಳಕ್ಕೆ ಶ್ರೀ ಭರತ ಬಾಹುಬಲಿ ಚಿತ್ರ ರಿಲೀಸ್ ಮಾಡಲು ಚಿತ್ರತಂಡ ಸಿದ್ಧವಾಗಿದೆ. ನಿರ್ದೇಶನ, ನಟನೆ, ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿರೋ ನಿರ್ದೇಶಕ ಮಂಜು ಮಾಂಡವ್ಯ ಈಗ ಹಾಡುಗಾರರಾಗಿಯೂ ಬಡ್ತಿ ಪಡೆದಿರೋದು ವಿಶೇಷ ಸಂಗತಿ.