Tag: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತನ್ನಿ: ಪೇಜಾವರ ಶ್ರೀ ಒತ್ತಾಯ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತನ್ನಿ: ಪೇಜಾವರ ಶ್ರೀ ಒತ್ತಾಯ

    ಉಡುಪಿ: ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು. ಒಂದು ಕಡೆ ಆಮೀಷವೊಡ್ಡಿ ಬಲವಂತವಾಗಿ ಮತಾಂತರ ಮಾಡುತ್ತಿಲ್ಲ ಅಂತಾರೆ. ಮತ್ತೊಂದು ಕಡೆ ಮತಾಂತರ ಮಾಡುತ್ತಿದ್ದ ಮಿಷನರಿ ಅವರನ್ನು ಬಂಧಿಸಿದ್ದಾರೆ ಎನ್ನುವ ಸುದ್ದಿಗಳು ವರದಿಯಾಗಿವೆ ಎಂದರು. ಇದನ್ನೂ ಓದಿ: ಅ.2ರಂದು ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ಪಾದಾಯಾತ್ರೆ- ಎಸ್‍ಆರ್ ಪಾಟೀಲ್

    ಮತಾಂತರ ಮುಂದುವರಿದರೆ ಸಮಾಜದಲ್ಲಿ ದೊಡ್ಡ ಅಶಾಂತಿ, ಗೊಂದಲ ಉಂಟಾಗಬಹುದು. ಸರ್ಕಾರ ಬಲವಾದ ಕಾನೂನು ಜಾರಿಗೆ ತರುವ ಮೂಲಕ ಮತಾಂತರ ನಿರ್ಬಂಧ ಮಾಡಬೇಕು. ರಾಜ್ಯ ಸರ್ಕಾರ ಈ ವಿಷಯದ ಕುರಿತಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.

    ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳು ಹಿಂದೂ ಧರ್ಮವನ್ನು ಗುರಿಯಾಗಿಸಿ ಮತಾಂತರ ಮಾಡುತ್ತಿವೆ. ನಾವು ಒತ್ತಾಯದ ಮತಾಂತರ ಮಾಡುವುದಿಲ್ಲ ಎಂದರೂ ಮತಾಂತರ ಪ್ರಕ್ರಿಯೆ ನಿರಂತರವಾಗಿ ಎಗ್ಗಿಲ್ಲದೆ ರಾಜ್ಯದ ಎಲ್ಲ ಕಡೆ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಒತ್ತಾಯ ಕೇಳಿಬರುತ್ತಿದೆ.

    ಆರ್ಥಿಕ ಪರಿಸ್ಥಿತಿ, ಅನಾರೋಗ್ಯ ಮತ್ತು ಮಾನಸಿಕ ಸಮಸ್ಯೆಯನ್ನು ಇಟ್ಟುಕೊಂಡು ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ಮತಾಂತರದ ದಾಳ ಹೂಡುತ್ತಿವೆ. ಕಳೆದ ಒಂದು ತಿಂಗಳಿಂದ ರಾಜ್ಯದ ಎಲ್ಲ ಕಡೆ ಮತಾಂತರ ಕೇಂದ್ರ, ಪ್ರಾರ್ಥನಾ ಮಂದಿರದ ಮೇಲೆ ಹಿಂದೂ ಸಂಘಟನೆಗಳು ದಾಳಿ ಮಾಡುತ್ತಿವೆ.

  • ನಾಯಕತ್ವ ಬದಲಾವಣೆಗೆ ಕಾಲ ಸೂಕ್ತವಾಗಿಲ್ಲ: ಪೇಜಾವರ ಶ್ರೀ

    ನಾಯಕತ್ವ ಬದಲಾವಣೆಗೆ ಕಾಲ ಸೂಕ್ತವಾಗಿಲ್ಲ: ಪೇಜಾವರ ಶ್ರೀ

    ಉಡುಪಿ: ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು.

    ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು ಚರ್ಚೆಯಾಗಿದೆ ಎಂದು ನನಗೆ ಮಾಹಿತಿ ಇಲ್ಲ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ಈ ಹಂತದಲ್ಲಿ ಸ್ಥಾನ ಬದಲಾವಣೆ ಸೂಕ್ತವಲ್ಲ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ರಾಜ್ಯದಲ್ಲಿ ಪಕ್ಷ ಕಟ್ಟಿದ ರೀತಿ. ನಂತರ ಅವರ ಓಡಾಟ, ಎಲ್ಲವನ್ನೂ ಗಮನಿಸಿ ಈ ಹೇಳಿಕೆ ನೀಡುತ್ತಿದ್ದೇನೆ ಎಂದು ಪಬ್ಲಿಕ್ ಟಿವಿಗೆ ಪೇಜಾವರ ಶ್ರೀ ಹೇಳಿದ್ದಾರೆ.

  • ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಉಡುಪಿ: ಜಿಲ್ಲೆಗೊಂದು ಗೋಶಾಲೆ ಘೋಷಣೆ ಆಗಿರುವುದು ಸಂತಸ ತಂದಿದೆ. ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಲು ಇದು ಅನುಕೂಲ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರಾಜ್ಯ ಬಜೆಟ್ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸಿದ ಬಗ್ಗೆ ಅಭಿಪ್ರಾಯ ತಿಳಿಸಿರುವ ಅವರು, ಸಿಎಂಗೆ ಧನ್ಯವಾದ, ಜಿಲ್ಲೆಗೊಂದು ಗೋಶಾಲೆ ಘೋಷಣೆ ಆಗಿರುವುದು ಸಂತಸವಾಗಿದೆ. ಇದರಿಂದ ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಲು ಅನುಕೂಲವಾಗಲಿದೆ. ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ನೆನಪಿನಲ್ಲಿ ಸ್ಮೃತಿ ವನ ಘೋಷಣೆಯಾಗಿರುವುದು ಸಹ ಬಹಳ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

    ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ 10 ಕೋಟಿ ರೂ. ಅನುದಾನ ಮೀಸಲಿರಿಸಿರುವುದು ಉತ್ತಮ ನಿರ್ಧಾರ. ಕರ್ನಾಟಕದ ಯಾತ್ರಿಕರಿಗೆ ಭವನದಿಂದ ಬಹಳ ಉಪಯೋಗವಾಗಲಿದೆ. ಬಜೆಟ್‍ನಲ್ಲಿ ಘೋಷಣೆ ಆಗಿದ್ದೆಲ್ಲಾ ಕಾರ್ಯಗತವಾಗಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.