Tag: ಶ್ರೀ ಶಿವಕುಮಾರ ಸ್ವಾಮೀಜಿ

  • ತುಮಕೂರಿಗೆ ಮೋದಿ – ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನಕ್ಕೆ ವಿವಿಧ ಸಂಘಟನೆಗಳ ಆಗ್ರಹ

    ತುಮಕೂರಿಗೆ ಮೋದಿ – ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನಕ್ಕೆ ವಿವಿಧ ಸಂಘಟನೆಗಳ ಆಗ್ರಹ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನವರಿ 2ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ. ನಗರದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 2ನೇ ಹಂತದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

    ಮೋದಿ ಆಗಮನ ಬೆನ್ನಲ್ಲೆ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಒತ್ತಾಯಿಸಲು ತೀರ್ಮಾನಿಸಲಾಗಿದೆ.

    ನರೇಂದ್ರ ಮೋದಿಯ ತುಮಕೂರಿಗೆ ಆಗಮಿಸುತ್ತಿದ್ದಂತೆ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿಲಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿ, ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ಈ ವೇಳೆ ವೀರಶೈವ ಲಿಂಗಾಯುತ ಯುವ ವೇದಿಕೆ ಪ್ರಧಾನಿ ಮೋದಿಯವರನ್ನು ಸ್ವಾಗತ ಕೋರುವುದರ ಜೊತೆಗೆ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಘೋಷಿಸಬೇಕೆಂದು ಒತ್ತಾಯಿಸಿದೆ.

    ತ್ರಿವಿಧ ದಾಸೋಹದ ಮೂಲಕ ನಾಡಿನ ಮನೆ ಮಾತಾಗಿದ್ದ ಶತಾಯುಷಿ ಶ್ರೀಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ನೀಡಬೇಕೆಂಬುದು ಕನ್ನಡಿಗರ ಹಲವು ವರ್ಷಗಳ ಆಸೆಯಾಗಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಈ ಹಿಂದೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಆದರೆ ನೀಡಿರಲಿಲ್ಲ, ಇದೀಗ ಮರಣೋತ್ತರವಾಗಿಯಾದರೂ ಭಾರತ ರತ್ನ ನೀಡಬೇಕೆಂಬುದು ಆಗ್ರಹ ಕೇಳಿಬಂದಿದೆ.

  • ಗೊರಗುಂಟೆಪಾಳ್ಯ ಮೇಲ್ಸೇತುವೆಗೆ ಸಿದ್ದಗಂಗಾ ಶ್ರೀಗಳ ಹೆಸರು ನಾಮಕರಣ

    ಗೊರಗುಂಟೆಪಾಳ್ಯ ಮೇಲ್ಸೇತುವೆಗೆ ಸಿದ್ದಗಂಗಾ ಶ್ರೀಗಳ ಹೆಸರು ನಾಮಕರಣ

    ಬೆಂಗಳೂರು: ತುಮಕೂರು ರಸ್ತೆಯ ಗೊರಗುಂಟೆಪಾಳ್ಯದ ಮೇಲ್ಸೇತುವೆಗೆ ಸಿದ್ದಗಂಗಾ ಮಠದ ದಿ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಲಾಗಿದೆ.

    ಇಂದು ಗೊರಗುಂಟೆ ಪಾಳ್ಯದ ಮೇಲ್ಸೇತುವೆ ಬಳಿ ನಡೆದ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಮಹಾಲಿಂಗ ಸ್ವಾಮೀಜಿಯವರೇ ಮೇಲ್ಸೇತುವೆಗೆ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಿದರು. ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ ಹಾಗೂ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಉಪಸ್ಥಿತರಿದ್ದರು.

    ಈ ಹಿಂದಯೇ ಬಜೆಟ್‍ನಲ್ಲಿ ಗೊರಗುಂಟೆಪಾಳ್ಯದ ಮೇಲ್ಸೇತುವೆಗೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಘೋಷಿಸಲಾಗಿತ್ತು. ಇದೀಗ ಕಾರ್ಯಕ್ರಮ ನಡೆಸಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ಇಡಲಾಯಿತು. ಈ ಮೇಲ್ಸೇತುವೆ ಬೆಂಗಳೂರು ತುಮಕೂರು ಮಾರ್ಗ ಎನ್‍ಎಚ್-4ನಲ್ಲಿದ್ದು, ಗೊರಗುಂಟೆಪಾಳ್ಯದಿಂದ ನೆಲಮಂಗಲದ ಪಾರ್ಲೆ ಕಾರ್ಖಾನೆಯವರೆಗೆ ಇದೆ.

    ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಮಹಾಲಿಂಗ ಸ್ವಾಮೀಜಿ ಮಾತನಾಡಿ, ಪರಮ ಪೂಜ್ಯರ ಹೆಸರನ್ನು ಮೇಲ್ಸೇತುವೆಗೆ ನಾಮಕರಣ ಮಾಡಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಮೇಲ್ಸೇತುವೆ ಮತ್ತು ತುಮಕೂರು ರಸ್ತೆಗೆ ಪೂಜ್ಯರ ಹೆಸರನ್ನು ಇಟ್ಟು ಅಭಿಮಾನವನ್ನು ಮೆರೆದಿದ್ದಾರೆ. ಮಳೆ ಮಧ್ಯೆಯೂ ನಾಮಕರಣ ಕಾರ್ಯಕ್ರಮ ನೆರವೇರಿದೆ. ಮಳೆ ಬಂದಿರುವುದು ಶುಭ ಸೂಚಕ. ಈ ಮೇಲ್ಸೇತುವೆಗೆ ಪೂಜ್ಯರ ಹೆಸರನ್ನು ನಾಮಕರಣ ಮಾಡಲು ಶ್ರಮಿಸಿದ ಸರ್ಕಾರಕ್ಕೆ, ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ ಅವರಿಗೆ ಮತ್ತು ಬಿಬಿಎಂಪಿ ಸದಸ್ಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

  • ಸಿದ್ದಗಂಗಾ ಶ್ರೀಗಳಿಂದ್ಲೇ ನಾಮಕರಣ ಮಾಡಿಸ್ಬೇಕೆಂದು 4 ವರ್ಷದಿಂದ ಕಾದ ದಂಪತಿ!

    ಸಿದ್ದಗಂಗಾ ಶ್ರೀಗಳಿಂದ್ಲೇ ನಾಮಕರಣ ಮಾಡಿಸ್ಬೇಕೆಂದು 4 ವರ್ಷದಿಂದ ಕಾದ ದಂಪತಿ!

    – ಇಂದು ಶ್ರೀಗಳನ್ನು ನೆನೆದು ಭಾವುಕರಾದ್ರು ಭಕ್ತರು

    ತುಮಕೂರು: ಬಳ್ಳಾರಿ ಜಿಲ್ಲೆಯ ಭಕ್ತರೊಬ್ಬರು ಮೂರು ಬಾರಿ ಸಿದ್ದಗಂಗಾ ಮಠಕ್ಕೆ ಬಂದು ಶ್ರೀ ಶಿವಕುಮಾರ ಸ್ವಾಮೀಜಿ ಬಳಿಯೇ ತಮ್ಮ ಮಗುವಿನ ನಾಮಕರಣ ಮಾಡಿಸಬೇಕು ಎಂದು ನಾಲ್ಕು ವರ್ಷದಿಂದ ಕಾದು ಕುಳಿತಿದ್ದರು ಅಲ್ಲದೆ ತನ್ನ ಮಗಳಿಗೆ ನಾಮಕರಣ ಮಾಡಿರಿಲಿಲ್ಲ.

    ಹೌದು, ಸಿದ್ದಗಂಗಾ ಶ್ರೀಗಳ ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ಬಳ್ಳಾರಿಯ ದಂಪತಿ, ಮೂರು ಬಾರಿ ಸಿದ್ದಗಂಗಾ ಮಠಕ್ಕೆ ಬಂದರೂ ಶ್ರೀಗಳಿಂದ ತಮ್ಮ ಮಗುವಿಗೆ ನಾಮಕರಣ ಮಾಡಿಸಲು ಸಾಧ್ಯವಾಗಿರಲಿಲ್ಲ. ಆಗ ಮಠದ ಕಿರಿಯ ಶ್ರೀಗಳು ಶಿವಕುಮಾರ ಸ್ವಾಮೀಜಿಗಳು ಗುಣಮುಖರಾದ ಮೇಲೆ ನಾವೇ ನಿಮ್ಮನ್ನು ಕರೆಸಿಕೊಂಡು ನಾಮಕರಣ ಕಾರ್ಯ ಮಾಡಿಸಿಕೊಡುತ್ತೇವೆ ಎಂದು ತಿಳಿಸಿದ್ದರು. ಆದ್ರೆ ಸಿದ್ದಗಂಗಾ ಸ್ವಾಮೀಜಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮನಸ್ಸಿಗೆ ತುಂಬಾ ನೋವಾಯ್ತು. ಬಳಿಕ ಮಗಳಿಗೆ `ಶಿವಾನಿ’ ಎಂದು ನಾವೇ ಹೆಸರಿಟ್ಟೆವು ಎಂದು ದಂಪತಿ ಸ್ವಾಮೀಜಿಯನ್ನ ನೆನೆದು ಭಾವುಕರಾದರು. ಇದನ್ನೂ ಓದಿ:ಶಿವಕುಮಾರ ಶ್ರೀಗಳ 112ನೇ ಜಯಂತಿ-ಸಂತನಿಲ್ಲದ ಸಿದ್ದಗಂಗೆಯಲ್ಲಿ ಶಿವಯೋಗಿ ಸ್ಮರಣೆ

    ಶ್ರೀ ಸಿದ್ದಗಂಗಾ ಸ್ವಾಮೀಜಿಗಳ 112 ನೇ ಜಯಂತಿ ಹಿನ್ನೆಲೆಯಲ್ಲಿ ಇಂದು ಸಿದ್ದಗಂಗಾ ಮಠದಲ್ಲಿ 112 ಮಕ್ಕಳಿಗೆ ಶ್ರೀಗಳ ಹೆಸರಿಟ್ಟು ನಾಮಕರಣ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ಶ್ರೀಗಳ ಹೆಸರನ್ನು ನಾಮಕರಣ ಮಾಡಲು ಭಕ್ತಾಧಿಗಳು ತಮ್ಮ ಮಕ್ಕಳನ್ನು ಮಠಕ್ಕೆ ಕರೆತಂದಿದ್ದಾರೆ. ಹೈಕೋರ್ಟ್ ಲಾಯರ್ ಅಸೋಸಿಯೇಷನ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿದ್ದಲಿಂಗ ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ.

    ಕೇವಲ ನಾಮಕರಣ ಮಾತ್ರವಲ್ಲದೆ, ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಕ್ಕಳಿಗೆ ನಾಮಕರಣಕ್ಕೆ ಬೇಕಾದ ತೊಟ್ಟಿಲು ಹಾಗೂ ಇತರೆ ವಸ್ತುಗಳು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

  • ದೇವರಿದ್ದಾಗ ಬಂದಿದ್ದೆ, ಈಗ ಅವರ ಆತ್ಮವಿದ್ದಾಗ ಬಂದಿದ್ದೇನೆ: ನಟ ಉಪೇಂದ್ರ

    ದೇವರಿದ್ದಾಗ ಬಂದಿದ್ದೆ, ಈಗ ಅವರ ಆತ್ಮವಿದ್ದಾಗ ಬಂದಿದ್ದೇನೆ: ನಟ ಉಪೇಂದ್ರ

    ತುಮಕೂರು: ನಟ ಉಪೇಂದ್ರ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದು, ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೋಗಿ ದರ್ಶನ ಪಡೆದಿದ್ದಾರೆ.

    ನಟ ಉಪೇಂದ್ರ ಅವರು ಮೊದಲಿಗೆ ಗದ್ದುಗೆಗೆ ಹೋಗಿ ಅಲ್ಲಿ ಶ್ರೀಗಳಿಗೆ ಪೂಜೆ ಸಲ್ಲಿಸಿ ನಮಸ್ಕರಿಸಿದ್ದಾರೆ. ಬಳಿಕ ಕೆಲ ಕಾಲ ಸಿದ್ದಲಿಂಗಸ್ವಾಮಿಗಳ ಜೊತೆ ಕುಳಿತು ಉಭಯಕುಶಲೋಪರಿ ನಡೆಸಿದ್ದಾರೆ. ತದನಂತರ ಮಾಧ್ಯಮಗಳ ಜೊತೆ ಮಾತನಾಡಿದ ಉಪೇಂದ್ರ ಅವರು, ಇಂದು ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್ ಮೀಟ್ ಇದೆ, ಅದಕ್ಕೆ ಹೊರಟ್ಟಿದ್ದೆ. ಈ ಕಡೆಯಿಂದ ಹೋಗಬೇಕಾದರೆ ಇಲ್ಲಿಗೆ ಬಂದು ಭೇಟಿ ಕೊಟ್ಟು ಹೋಗುವುದು ಒಂದು ಸಂಪ್ರದಾಯವಾಗಿದೆ ಎಂದು ಹೇಳಿದ್ದಾರೆ.

    ಈ ಹಿಂದೆ ದೇವರಿದ್ದಾಗ ಮಠಕ್ಕೆ ಬಂದಿದ್ದೆ, ಈಗ ಅವರ ಆತ್ಮವಿದ್ದಾಗ ಬಂದಿದ್ದೇನೆ. ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಾಗಲೆಲ್ಲಾ ಸಂತೋಷವಾಗುತ್ತದೆ. ಯಾಕೆಂದರೆ ಆನಂದ, ಅನುಭೂತಿ ದೊರೆಯುತ್ತದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

    ಪ್ರಜಾಕೀಯದ ಕಾನ್ಫರೆನ್ಸ್ ಗಾಗಿ ಹೋಗುತ್ತಿದ್ದೇನೆ. ಎಂಪಿ ಚುನಾವಣೆಗೆ 28 ಕ್ಷೇತ್ರದಿಂದ ನಿಲ್ಲಿಸಬೇಕು ಅಂದುಕೊಂಡಿದ್ದೇನೆ. ಹಾಗಾಗಿ ಹುಬ್ಬಳ್ಳಿ, ದಾವಣಗೆರೆಯಲ್ಲಿ ಪ್ರೆಸ್ ಮೀಟ್ ಇದೆ ಹೋಗುತ್ತಿದ್ದೇನೆ. ನಿಮಗೆ ಸರಿ ಅನ್ನಿಸಿದರೆ ಬೆಂಬಲ ಕೊಡಿ. ಸ್ವಾಮೀಜಿ ಬಳಿ ಕೂಡ ಮಾತನಾಡಿದೆ, ಅವರು ಇಂದು ತುಂಬಾ ಜನರಿದ್ದಾರೆ ಇನ್ನೊಂದು ದಿನ ಬನ್ನಿ ಮಾತನಾಡೋಣ ಅಂತ ಹೇಳಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಅಭಿಮಾನಿಗಳು ನಟ ಉಪೇಂದ್ರ ಅವರ ಜೊತೆ ಸೆಲ್ಫಿಗಾಗಿ ಮುಗಿಬಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ನಡೆದಾಡೋ ದೇವರು ಶಿವೈಕ್ಯರಾಗಿ ಇಂದಿಗೆ 11 ದಿನ- ಮಠದಲ್ಲಿಂದು ಶ್ರೀಗಳ ಪುಣ್ಯಾರಾಧನೆ

    ನಡೆದಾಡೋ ದೇವರು ಶಿವೈಕ್ಯರಾಗಿ ಇಂದಿಗೆ 11 ದಿನ- ಮಠದಲ್ಲಿಂದು ಶ್ರೀಗಳ ಪುಣ್ಯಾರಾಧನೆ

    -ಫಳ ಫಳ ಅಂತಿದೆ 300 ಕೆ.ಜಿ ತೂಕದ ಕಂಚಿನ ವಿಗ್ರಹ

    ತುಮಕೂರು: ನಡೆದಾಡುವ ದೇವರು, ಕೋಟಿ ಕೋಟಿ ಭಕ್ತರ ಪ್ರತ್ಯಕ್ಷ ದೇವರಾಗಿದ್ದ, ಲಕ್ಷ ಲಕ್ಷ ಮಂದಿಗೆ ಬದುಕು ಕಟ್ಟಿಕೊಟ್ಟಿದ್ದ ಶ್ರೀಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿವೈಕ್ಯರಾಗಿ ಇಂದಿಗೆ 11 ದಿನವಾಗಿದೆ. ಹೀಗಾಗಿ ಇಂದು ಶ್ರೀಗಳ ಪುಣ್ಯಾರಾಧನೆ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ.

    ತಳಿರು ತೋರಣ, ಬಣ್ಣ ಬಣ್ಣದ ಹೂಗಳಿಂದ ಪರಮಪೂಜ್ಯರ ಮಠ ಅಲಂಕೃತಗೊಂಡಿದೆ. ಇಂದಿನ ಪುಣ್ಯಾರಾಧನೆಯಲ್ಲಿ ಬರೋಬ್ಬರಿ 5 ಲಕ್ಷ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ. ದೇಶದ ಮೂಲೆ ಮೂಲೆಗಳಿಂದ ಶ್ರೀಗಳ ಭಕ್ತರು ಶ್ರೀ ಮಠಕ್ಕೆ ಆಗಮಿಸ್ತಿದ್ದಾರೆ. ಕಳೆದ ರಾತ್ರಿಯೇ ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ಕೆಲವರು ರಾತ್ರಿಯಿಡಿ ಭಜನೆಯಲ್ಲಿ ತೊಡಗಿದ್ದರೆ, ಇನ್ನೂ ಕೆಲವರು ಆವರಣದಲ್ಲೇ ನಿದ್ದೆಗೆ ಜಾರಿದ್ದರು.

    ಸ್ವಾಮೀಜಿಯವರ 11ನೇ ದಿನದ ವಿಧಿವಿಧಾನಗಳು ಗದ್ದುಗೆಯಲ್ಲಿ ಇಂದು ನಸುಕಿನ ಜಾವದಿಂದಲೇ ನೆರವೇರುತ್ತಿವೆ. ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರುತ್ತಿವೆ. ಶ್ರೀಗಳ ಕ್ರಿಯಾ ಸಮಾಧಿ ನಡೆದ ಗದ್ದುಗೆಯನ್ನು ಈಗಾಗಲೇ ಬಣ್ಣ-ಬಣ್ಣದ ಹೂಗಳಿಂದ ಅಲಂಕರಿಸಲಾಗಿದೆ. ಭಕ್ತರು ನಿರಂತರವಾಗಿ ಆಗಮಿಸಿ, ಗದ್ದುಗೆಗೆ ಪೂಜೆ ಸಲ್ಲಿಸುತ್ತಾ ಇದ್ದಾರೆ. ಶ್ರೀಗಳ ಭಾವಚಿತ್ರವನ್ನು ಮಠದಲ್ಲಿ ಮೆರವಣಿಗೆ ಮಾಡಲಿದ್ದು, ಇದಕ್ಕಾಗಿ ಬೆಳ್ಳಿರಥವನ್ನು ಶುಚಿಗೊಳಿಸಲಾಗಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

    ಪುಣ್ಯಾರಾಧನೆಗೆ ಆಗಮಿಸುವ 5 ಲಕ್ಷ ಭಕ್ತರಿಗಾಗಿ ನಿರಂತರವಾಗಿ ವಿವಿಧ ರೀತಿಯ ಪ್ರಸಾದವನ್ನು ತಯಾರಿಸಲಾಗುತ್ತಿದೆ. ಮಠದ ಅವರಣದಲ್ಲಿ ವಿವಿಧ ರೀತಿಯ ಪ್ರಸಾದವನ್ನು ಸಿದ್ಧ ಮಾಡುತ್ತಿದ್ದಾರೆ. ನೂರಾರು ಭಕ್ತರು ಸ್ವಯಂ ಪ್ರೇತಿತವಾಗಿ ದಾಸೋಹದ ಸಿದ್ಧತಾ ಕಾರ್ಯದಲ್ಲಿ ರಾತ್ರಿಯಿಡಿ ತೊಡಗಿಕೊಂಡಿದ್ದರು. ಈಗಾಗಲೇ 69 ಕ್ವಿಂಟಾಲ್ ಸಿಹಿ ಬೂಂದಿ ತಯಾರಿಸಲಾಗಿದೆ.

    ಕಾರ್ಯಕ್ರಮ:
    ತ್ರಿವಿಧ ದಾಸೋಹಿಯ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ಬೆಳಗ್ಗೆ 10.30ಕ್ಕೆ ಚಾಲನೆ ಸಿಗಲಿದ್ದು, ಶ್ರೀಗಳ ಲಿಂಗ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿದ್ದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿಯೇ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಇಂದಿನ ಪುಣ್ಯಾರಾಧನೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಸುತ್ತೂರು ಶ್ರೀಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ವೇದಿಕೆ ಮುಂಭಾಗ ಸುಮಾರು 10 ಸಾವಿರ ಭಕ್ತರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಇನ್ನು ಮಠದ ವಿದ್ಯಾರ್ಥಿಗಳಿಗೆ ಶ್ರೀಗಳ ಭಾವಚಿತ್ರವಿರುವ ಟಿ ಶರ್ಟ್ ಹಾಗೂ ಪಂಚೆ ನೀಡಲಾಗಿದೆ.

    ಶ್ರೀಗಳ ಪ್ರತಿಮೆ:
    ಶ್ರೀಗಳ ಕಂಚಿಮೆ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ಮೊನ್ನೆಯವರೆಗೂ ಗೊಂದಲ ಇತ್ತು. ಆದರೆ ಬುಧವಾರ ಎಲ್ಲಾ ಗೊಂದಲ ಪರಿಹಾರವಾಗಿದೆ. ಶ್ರೀ ಮಠದ ಪಾರ್ಕ್ ನಲ್ಲಿ ಆಳೇತ್ತರದಲ್ಲಿ ಶ್ರೀಗಳ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ನಿರ್ಧಾರ ಮಾಡಲಾಗಿದೆ. 10 ವರ್ಷಗಳ ಹಿಂದೆಯೇ ನಿರ್ಮಾಣವಾಗಿದ್ದ ಬರೋಬ್ಬರಿ 300 ಕೆಜಿ ತೂಕದ, 5.6 ಅಡಿ ಎತ್ತರ ಶ್ರೀಗಳ ಕಂಚಿನ ಪ್ರತಿಮೆಯನ್ನು ಇದೀಗ ಗೋಸಲ ಸಿದ್ದೇಶ್ವರ ವೇದಿಕೆಗೆ ತಂದು ಇರಿಸಲಾಗಿದ್ದು, ಪುಣ್ಯಾರಾಧನೆ ವೇಳೆ ಇಂದು ಲೋಕಾರ್ಪಣೆಗೊಳ್ಳಲಿದೆ. ಪಾರ್ಕ್ ನ ಮಂಟಪದಲ್ಲಿ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಅಂದ ಹಾಗೇ, ಇದನ್ನು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಈ ಕಂಚಿನ ಪ್ರತಿಮೆಯನ್ನು 10 ವರ್ಷಗಳ ಹಿಂದೆಯೇ ರೆಡಿ ಮಾಡಿಸಿದ್ದರು. ಆದರೆ ಪ್ರತಿಮೆ ಸ್ಥಾಪಿಸಲು ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದ ಕಾರಣದಿಂದ ಅದನ್ನು ಎಸ್‍ಐಟಿ ಕಾಲೇಜಿನ ಗೋಡಾನ್‍ನಲ್ಲಿ ಇರಿಸಲಾಗಿತ್ತು. ಇದೀಗ ಅದನ್ನು ಮಠಕ್ಕೆ ತರಲಾಗಿದೆ.

    ಭದ್ರತೆ:
    ಪುಣ್ಯಾರಾಧನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬುಧವಾರವೇ ಮಠಕ್ಕೆ ಬಂದಿರುವ ದಕ್ಷಿಣ ವಲಯ ಐಜಿಪಿ ದಯಾನಂದ್, ಭದ್ರತೆಯ ಉಸ್ತುವಾರಿ ವಹಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಲಕ್ಷ ಲಕ್ಷ ಭಕ್ತರು ಮಠಕ್ಕೆ ಧಾವಿಸಲಿರುವ ಹಿನ್ನೆಲೆಯಲ್ಲಿ ಕೆಲ ಮಾರ್ಗ ಬದಲಾವಣೆಯನ್ನು ಪೊಲೀಸ್ ಮಾಡಿದೆ. ಎನ್‍ಹೆಚ್ 4ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ಗೂಡ್ಸ್ ವಾಹನಗಳ ಸಂಚಾರ ನಿರ್ಬಂಧಿಸಲಾಗುತ್ತದೆ.

    ದಾವಣಗೆರೆ ಚಿತ್ರದುರ್ಗದ ಕಡೆಯಿಂದ ಬರುವ ಗೂಡ್ಸ್ ವಾಹನಗಳಿಗೆ ಶಿರಾ, ಮಧುಗಿರಿ ಕೊರಟಗೆರೆ, ದಾಬಸ್ ಪೇಟೆ ಮೂಲಕ ಬೆಂಗಳೂರಿಗೆ ತೆರಳಲು ಸಂಪರ್ಕ ಕಲ್ಪಿಸಲಾಗಿದೆ. ಇನ್ನು ಬೆಂಗಳೂರಿನಿಂದ ದಾವಣಗೆರೆಯತ್ತ ಹೋಗುವ ಗೂಡ್ಸ್ ವಾಹನಗಳಿಗೆ ದಾಬಸ್‍ಪೇಟೆ, ಕೊರಟಗೆರೆ, ಮಧುಗಿರಿ ಮೂಲಕ ಶಿರಾಗೆ ಸಂಪರ್ಕ ಕಲ್ಪಿಸಲಾಗಿದೆ. ಉಳಿದಂತೆ ಬಸ್, ಕಾರುಗಳಿಗೆ ಸಂಚಾರಕ್ಕೆ ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

    ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

    ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆಗೆ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ 25 ಟನ್ ಹಣ್ಣು ಮತ್ತು ತರಕಾರಿಗಳನ್ನು ಕಳುಹಿಸಿಕೊಡಲಾಯಿತು.

    ನಾಳೆ ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತಾಧಿಗಳು ಸೇರುವುದರಿಂದ ಮಠದಲ್ಲಿ ಅನ್ನ ದಾಸೋಹ ಮಾಡುವುದಕ್ಕೆ ಉಪಯುಕ್ತವಾಗಲೆಂದು ಹಣ್ಣು ತರಕಾರಿಗಳನ್ನ ಕಳುಹಿಸಿಕೊಡಲಾಯಿತು. ಕೋಲಾರದ ಎಪಿಎಂಸಿ ಮಾರುಕಟ್ಟೆಯ ತರಕಾರಿ ದಲ್ಲಾಳಿಗಳು, ವರ್ತಕರು, ರೈತರು ಸೇರಿ 10 ಟನ್ ಟೊಮ್ಯಾಟೊ, 15 ಟನ್ ವಿವಿಧ ಬಗೆಬಗೆಯ ತರಕಾರಿಗಳಾದ ಮೂಲಂಗಿ, ಬೀನ್ಸ್, ಹೂಕೋಸು, ಕ್ಯಾರೆಟ್ ಹಾಗೂ ಅಕ್ಕಿ ಮುಂತಾದವುಗಳನ್ನು 2 ಗೂಡ್ಸ್ ಲಾರಿಗಳ ಮೂಲಕ ಸಿದ್ಧಗಂಗಾ ಮಠಕ್ಕೆ ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಶ್ರೀ ಶಿವಕುಮಾರ ಶ್ರೀಗಳು ಮಠಕ್ಕೆ ಬರುವ ಭಕ್ತರು ಹಸಿದು ವಾಪಸ್ ಹೋಗಬಾರದೆಂದು ಅನ್ನ ದಾಸೋಹವನ್ನು ಮಾಡಿಸುತ್ತಿದ್ದರು. ಅಲ್ಲದೆ ಮಠಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ, ವಿದ್ಯೆ, ಆಶ್ರಯ ನೀಡಿ ತ್ರಿವಿಧ ದಾಸೋಹಿ ಎಂದು ಖ್ಯಾತಿ ಪಡೆದಿದ್ದಾರೆ. ಹಾಗಾಗಿ ಸ್ವಾಮೀಜಿಗಳ ಸೇವೆ ಹೀಗೆಯೇ ಮುಂದುವರಿಯಬೇಕೆಂದು, ಅವರು ಅಗಲಿದ ನಂತರವೂ ಮಠದಲ್ಲಿ ದಾಸೋಹಕ್ಕೆ ಯಾವುದೇ ತೊಂದರೆಯಾಗಬಾರದೆಂದು ಕೋಲಾರದ ಮಾರುಕಟ್ಟೆ ವತಿಯಿಂದ ಈ ಸಹಾಯವನ್ನು ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

    ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು ಬಿಟ್ಟರೆ ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ಅವರೇ ದಿ ಬೆಸ್ಟ್ ಸಿಎಂ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಿವಾರ್ಯತೆಯಿಂದ ಜೆಡಿಎಸ್‍ಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿದೆ. ನಮ್ಮ ಪಕ್ಷದ ಔದಾರ್ಯವನ್ನ ಸಿಎಂ ಕುಮಾರಸ್ವಾಮಿಯವರು ಅರ್ಥ ಮಾಡಿಕೊಳ್ಳಬೇಕು. ಚಿಕ್ಕಪುಟ್ಟ ವಿಷಯಗಳಿಗೆ ರಾಜೀನಾಮೆ ನೀಡುತ್ತೇನೆ ಅನ್ನೋದು ತಪ್ಪು. ಕಾಂಗ್ರೆಸ್ ಶಾಸಕರನ್ನ ಕಂಟ್ರೋಲ್ ಮಾಡಿ ಅಂತ ಹೇಳಿದ್ದು ಸರಿಯಲ್ಲ. ಸಿದ್ದರಾಮಯ್ಯ ಅವರನ್ನ ಹೊಗಳಿದರೆ ತಪ್ಪೇನು? ಸಮ್ಮಿಶ್ರ ಸರ್ಕಾರಕ್ಕಾಗಿ ಸಿದ್ದರಾಮಯ್ಯ ಅವರು ತ್ಯಾಗ ಮಾಡಿದ್ದಾರೆ. ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ದಿ ಬೆಸ್ಟ್ ಸಿಎಂ. ಕುಮಾರಸ್ವಾಮಿ ಅವರಿಗೆ ಇನ್ನಷ್ಟು ಮೆಚ್ಯೂರಿಟಿ ಬರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:ಕೈ ಶಾಸಕರು ಸಿದ್ದರಾಮಯ್ಯನವರನ್ನು ಹೊಗಳಿದರೆ ತಪ್ಪೇನು: ಪರಮೇಶ್ವರ್ ಪ್ರಶ್ನೆ

    ಸಿದ್ದರಾಮಯ್ಯ ಒಬ್ಬ ಪ್ರಶ್ನಾತೀತ, ವರ್ಣರಂಜಿತ ಸಿಎಂ. ಅವರೇ ಮತ್ತೆ ಸಿಎಂ ಆಗಲಿ ಅಂತ ನಾನು ಕೂಡ ಬಯಸುತ್ತೇನೆ. ನಾನು ನೋಡಿರುವ ಪ್ರಕಾರ ದೇವೇಗೌಡರನ್ನ ಬಿಟ್ಟರೆ ಸಿದ್ದರಾಮಯ್ಯ ಅವರೇ ಬೆಸ್ಟ್ ಸಿಎಂ. ಅನಿವಾರ್ಯವಾಗಿ ನಾವು ಜೆಡಿಎಸ್‍ಗೆ ಶರಣಾಗಿದ್ದೇವೆ ಎಂದು ಬಸವರಾಜ ರಾಯರೆಡ್ಡಿ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಸಿಎಂ ರಾಜೀನಾಮೆ ಹೇಳಿಕೆಗೆ ಕಾರಣವಾದ ಸಿದ್ದು ಶಿಷ್ಯರು ಹೇಳಿದ 5 ಹೇಳಿಕೆಗಳು – ವಿಡಿಯೋ ನೋಡಿ

    ಕೇಂದ್ರ ಸರ್ಕಾರ ಆರ್‍ಎಸ್‍ಎಸ್ ಹಾಗೂ ಬಿಜೆಪಿಯ ನಾಯಕರಿಗೆ ಮಾತ್ರ ಭಾರತ ರತ್ನ ನೀಡಿದೆ. ಸಚಿನ್ ತೆಂಡೂಲ್ಕರ್ ಹಾಗೂ ಪ್ರಣಬ್ ಮುಖರ್ಜಿ ಬಿಟ್ಟರೆ ಎಲ್ಲರೂ ಆರ್‍ಎಸ್‍ಎಸ್ ಗೆ ಸೇರಿದವರು. ಮೇಲ್ವರ್ಗದ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕವಾರು ತಾರತಮ್ಯ ಮಾಡಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ನಾಲ್ಕನೇ ಭಾರತರತ್ನ ಪ್ರಶಸ್ತಿಯನ್ನು ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ನೀಡಬೇಕು. ಮೋದಿ ಅವರು ಶ್ರೀಗಳನ್ನು ಹೊಗಳಿದ್ದಾರೆ. ಆದ್ರೆ ಭಾರತ ರತ್ನ ನೀಡಿ ಗೌರವಿಸಿಲ್ಲ. ಪ್ರಧಾನಿ ಅವರಿಗೆ ಶ್ರೀಗಳ ಮೇಲೆ ನಿಜವಾದ ಗೌರವ ಇದ್ದರೆ ಭಾರತ ರತ್ನ ನೀಡಲಿ ಎಂದು ಬಸವರಾಜ ರಾಯರೆಡ್ಡಿ ಆಗ್ರಹಿಸಿದರು.

    https://www.youtube.com/watch?v=OflAzK4wALY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಭಕ್ತರ ಪ್ರೀತಿಗೆ ಭಾವುಕರಾದ ಸಿದ್ದಲಿಂಗ ಶ್ರೀಗಳು

    ಭಕ್ತರ ಪ್ರೀತಿಗೆ ಭಾವುಕರಾದ ಸಿದ್ದಲಿಂಗ ಶ್ರೀಗಳು

    ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ಭಕ್ತಾಧಿಗಳು ದಾಸೋಹಕ್ಕಾಗಿ ಸಾಮಾಗ್ರಿಗಳನ್ನು ಕಾಣಿಕೆ ನೀಡುತ್ತಿರುವುದನ್ನು ಕಂಡು ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

    ಇದೇ ತಿಂಗಳ 31ರಂದು ಡಾ. ಶ್ರೀ ಶಿವಕುಮಾರ ಸ್ವಾಮಿಜಿ ಅವರ ಪುಣ್ಯಾರಾಧನೆಯನ್ನು ಮಾಡಲಾಗುತ್ತಿದೆ. ಆದರಿಂದ ಶ್ರೀಗಳ ಭಕ್ತಾಧಿಗಳು ವಿವಿಧೆಡೆಯಿಂದ ತಮ್ಮ ಕೈಲಾದ ಸಾಮಾಗ್ರಿಗಳನ್ನು ಕಾಣಿಕೆ ರೂಪದಲ್ಲಿ ನೀಡಿ ದಾಸೋಹಕ್ಕೆ ಸಹಾಯ ಮಾಡುತ್ತಿದ್ದಾರೆ. ನಡೆದಾಡುವ ದೇವರಿಗೆ ನಮನ ಸಲ್ಲಿಸಲು ರಾಜ್ಯದ ಹಲವೆಡೆಯಿಂದ ಭಕ್ತಾಧಿಗಳು ಸ್ವಯಂ ಪ್ರೇರಿತರಾಗಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ, ಬೇಳೆ, ದವಸ ಧಾನ್ಯಗಳನ್ನು ತಂದು ಸಿದ್ದಗಂಗಾ ಮಠಕ್ಕೆ ನೀಡುತ್ತಿದ್ದಾರೆ.ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಭಕ್ತರು ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಮೇಲೆ ಇಟ್ಟಿರುವ ಪ್ರೀತಿಯನ್ನು ಕಂಡು ಸಿದ್ದಲಿಂಗ ಶ್ರೀಗಳ ಕಣ್ತುಂಬಿ ಬಂತು. ಭಕ್ತರಿಂದ ಕಣ್ಣೀರು ಮರೆ ಮಾಚಲು ಸಿದ್ದಲಿಂಗ ಶ್ರೀಗಳು ತಿರುಗಿನಿಂತು ಕಣ್ಣೀರು ಒರೆಸಿಕೊಂಡರು. ಶ್ರೀಗಳ ಪುಣ್ಯಾರಾಧನೆಗೆ ಸಿದ್ದತೆಗಳು ನಡೆಯುತ್ತಿದ್ದು, ಸಾಲು ಸಾಲಾಗಿ ಲಾರಿಗಳ ಮೂಲಕ ಭಕ್ತಾಧಿಗಳು ದವಸ ಧಾನ್ಯಗಳು ತಂದು ಕಾಣಿಕೆಯಾಗಿ ಮಠಕ್ಕೆ ನೀಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ದಾವಣಗೆರೆ: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತುಮಕೂರು ಸಿದ್ದಗಂಗಾ ಮಠಕ್ಕೆ ಬರೋಬ್ಬರಿ 11 ಟನ್‍ಕ್ಕಿಂತ ಹೆಚ್ಚು ಅಕ್ಕಿಯನ್ನು ದಾವಣಗೆರೆಯ ಸಿದ್ದಗಂಗಾ ವಿದ್ಯಾಸಂಸ್ಥೆ ಕಾಣಿಕೆಯಾಗಿ ನೀಡಿದೆ.

    ಇದೇ ತಿಂಗಳ 31ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆಯವ ಶ್ರೀಗಳ ಪುಣ್ಯಾರಾಧನೆಗೆ ಲಕ್ಷಾಂತರ ಮಂದಿ ಭಕ್ತರು ಬರುತ್ತಾರೆ. ಈ ಕುರಿತು ಮಾಹಿತಿ ತಿಳಿದ ಬಳಿಕ ಸಿದ್ದಗಂಗಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಪೋಷಕರು ಸ್ವಯಂ ಪ್ರೇರಿತರಾಗಿ ಬಂದು ಮಠಕ್ಕೆ ತಮ್ಮ ಕೈಲಾದ ಕಾಣಿಕೆ ನೀಡುತ್ತಿದ್ದಾರೆ. ನಮ್ಮೊಂದಿಗೆ ಕೈ ಜೋಡಿಸಿದ್ದಾರೆ ಎಂದು ಸಿದ್ದಗಂಗಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.

    ಈಗಾಗಲೇ ಸಿದ್ದಗಂಗಾ ವಿದ್ಯಾಸಂಸ್ಥೆಗೆ ಮಾರುಕಟ್ಟೆಯಿಂದ ಸಾಕಷ್ಟು ಪ್ರಮಾಣದಲ್ಲಿ ತರಕಾರಿ ಹಾಗೂ ಅಡುಗೆ ಸಾಮಾಗ್ರಿಗಳು ಕಾಣಿಕೆ ರೂಪದಲ್ಲಿ ಬಂದಿದ್ದು, ಎಲ್ಲವನ್ನು ಲಾರಿ ಮುಖಾಂತರ ಸಿದ್ದಗಂಗಾ ಮಠಕ್ಕೆ ರವಾನೆ ಮಾಡಲಾಗುತ್ತದೆ.

    ಸಿದ್ದಗಂಗಾ ವಿದ್ಯಾಸಂಸ್ಥೆಯಿಂದ ಮೊದಲು 111 ಚೀಲ ಅಕ್ಕಿಯನ್ನು ಸಿದ್ದಗಂಗಾ ಮಠಕ್ಕೆ ನೀಡಲು ನಿರ್ಧರಿಸಿದ್ದರು. ಆದ್ರೆ ವಿದ್ಯಾರ್ಥಿಗಳ ಪೋಷಕರು ಸ್ವಯಂ ಪ್ರೇರಿತರಾಗಿ ಆಗಮಿಸಿ ಕೈ ಜೋಡಿಸಿದಕ್ಕೆ ಈಗ 11,111 ಕೆಜಿ ಅಕ್ಕಿ ಸಂಗ್ರಹವಾಗಿದ್ದು, ಇದನ್ನು ಕಾಣಿಕೆಯಾಗಿ ಸಿದ್ದಗಂಗಾ ಮಠಕ್ಕೆ ಕಳುಹಿಸುತ್ತೇವೆ. ಇದು ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ಶ್ರೀಗಳ ಪುಣ್ಯಾರಾಧನೆಗೆ ಒಂದು ಅಳಿಲು ಸೇವೆ ಎಂದು ಸಿದ್ದಗಂಗಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 70 ವರ್ಷದಲ್ಲಿ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ಕೊಟ್ಟಿಲ್ಲ: ಬಾಬಾ ರಾಮ್‍ದೇವ್

    70 ವರ್ಷದಲ್ಲಿ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ಕೊಟ್ಟಿಲ್ಲ: ಬಾಬಾ ರಾಮ್‍ದೇವ್

    ನವದೆಹಲಿ: ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗೂ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿಲ್ಲ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ವಿಭಾಗದಲ್ಲೂ ಸಾಧನೆ ಮಾಡಿದ ಗಣ್ಯರಿಗೆ ಸರ್ಕಾರ ಭಾರತದ ಶ್ರೇಷ್ಠ ಪ್ರಶಸ್ತಿ ಭಾರತ ರತ್ನವನ್ನು ನೀಡಿ ಗೌರವಿಸುತ್ತೆ. ಆದರೇ ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗಳಿಗೆ ಅಥವಾ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದಿದ್ದಾರೆ. ಇದನ್ನೂ ಓದಿ:ಶ್ರೀಗಳಿಗೆ ಭಾರತರತ್ನ ಕೊಡದಿರುವುದು ಎಲ್ಲರಿಗಿಂತ ನನಗೆ ಹೆಚ್ಚು ನೋವು ತಂದಿದೆ – ಬಿಎಸ್‍ವೈ

    ವಿಪರ್ಯಾಸವೆಂದರೆ ಸಾಮಾಜಕ್ಕಾಗಿ ದುಡಿದು, ಜನರಿಗಾಗಿ ಒಳ್ಳೆಯ ಕೆಲಸವನ್ನು ಮಾಡಿರುವ ಮಹಾಋಷಿ ದಯಾನಂದ ಸರಸ್ವತಿ, ಸ್ವಾಮಿ ವಿವೇಕಾನಂದರಿಂದ ಹಿಡಿದು ಶ್ರೀ ಶಿವಕುಮಾರ ಸ್ವಾಮೀಜಿಗಳ ವರೆಗೂ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ನೀಡಿಲ್ಲ ಎಂದು ಅಸಮಾಧಾನವನ್ನು ಹೊರಹಾಕಿದರು. ಇದನ್ನೂ ಓದಿ:ಭಾರತ ರತ್ನ – ಲತಾಗಿಲ್ಲದ ನಿಯಮಾವಳಿ ಸಿದ್ದಗಂಗಾ ಶ್ರೀಗಳಿಗೆ ಮಾತ್ರ ಯಾಕೆ?

    ಮುಂದಿನ ಬಾರಿಯಾದರೂ ಸಾಧು ಸನ್ಯಾಸಿಗಳು ಮಾಡಿರುವ ಸೇವೆಯನ್ನು ಗುರುತಿಸಿ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರವನ್ನು ರಾಮ್‍ದೇವ್ ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv