Tag: ಶ್ರೀ ಶಿವಕುಮಾರ ಸ್ವಾಮೀಜಿ

  • ಶ್ರೀಗಳಿಗೆ ಭಾರತ ರತ್ನ ಕೊಡದಿದ್ರೆ ಪ್ರತಿಭಟನೆ ಮಾಡ್ತೀವಿ: ಬಸನಗೌಡ ಪಾಟೀಲ್ ಯತ್ನಾಳ್

    ಶ್ರೀಗಳಿಗೆ ಭಾರತ ರತ್ನ ಕೊಡದಿದ್ರೆ ಪ್ರತಿಭಟನೆ ಮಾಡ್ತೀವಿ: ಬಸನಗೌಡ ಪಾಟೀಲ್ ಯತ್ನಾಳ್

    ವಿಜಯಪುರ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ವಿಶ್ವದಲ್ಲೇ ಶ್ರೇಷ್ಠ ವ್ಯಕ್ತಿ. ಅವರು ಮಾಡಿರುವ ಕಾಯಕಕ್ಕೆ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಇಲ್ಲವಾದರೆ ಪ್ರತಿಭಟನೆ ಮೂಲಕ ಅನ್ಯಾಯವನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಎಲ್ಲೆಡೆಯಿಂದ ಜನರು ಆಗ್ರಹಿಸುತ್ತಿದ್ದಾರೆ. ಭಾರತ ರತ್ನ ನೀಡದಿದ್ದರೂ ಶ್ರೇಷ್ಠ ಸಂತರಾಗಿ ಎಲ್ಲೆಡೆ ಹೆಸರುವಾಸಿಯಾಗಿದ್ದಾರೆ. ಅವರ ಹೆಸರನ್ನು ಕೇಂದ್ರ ಸರ್ಕಾರ ಈ ಬಾರಿ ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕಾಗಿತ್ತು. ಶ್ರೀಗಳಿಗೆ ಭಾರತ ರತ್ನ ಕೊಡಿಸುವಲ್ಲಿ ಲೋಕಸಭಾ ಹಾಗು ರಾಜ್ಯ ಸಭಾ ಸದಸ್ಯರು ಪ್ರಯತ್ನ ಮಾಡಬೇಕು. ಅನ್ಯಾಯವಾದಾಗ ಪ್ರತಿಭಟನೆ ಮೂಲಕ ಸರಿಪಡಿಸಿಕೊಳ್ಳಬೇಕು ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಈ ಹಿಂದೆ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಬೇಕಾದರೆ ಆಂಧ್ರಪ್ರದೇಶದ ಸರ್ಕಾರ ವಿರೋಧ ಮಾಡಿತ್ತು. ಆಗ ವಾಜಪೇಯಿ ಪ್ರಧಾನಿಯಾಗಿದ್ದಾಗ ನಾನು ಕೇಂದ್ರ ಸಚಿವನಿದ್ದೆ. ಜಲಾಶಯದ ಎತ್ತರಕ್ಕಾಗಿ ಹೋರಾಟ ಮಾಡಿ ಯಶಸ್ವಿಯಾಗಿದ್ದೆವು. ಅದೇ ಮಾದರಿಯಲ್ಲಿ ಈಗ ಹೋರಾಡಬೇಕಿದೆ. ತ್ರಿವಿಧ ದಾಸೋಹಿಗೆ ಭಾರತ ರತ್ನ ಕೊಡಬೇಕೆಂದು ನಾನು ಪ್ರಧಾನಿಗಳಿಗೆ ಒತ್ತಾಯ ಮಾಡುತ್ತೇನೆ. ಭಾರತ ರತ್ನ ಕೊಡದಿದ್ದರೆ ಪ್ರತಿಭಟನೆ ಮಾಡಿ ನಮ್ಮ ಶಕ್ತಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಕಾಂಗ್ರೆಸ್ ಶಾಸಕರ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿ, ಗಣಿ ರಾಜಕೀಯದ ಪರಿಣಾಮದಿಂದಾಗಿ ಬಿಯರ್ ಬಾಟಲಿಗಳಿಂದ ಹೊಡೆದಾಟ ಶುರುವಾಗಿದೆ. ಗಣಿ ರಾಜಕೀಯ ಕರ್ನಾಟಕಕ್ಕೆ ಶಾಪವಾಗಿ ಪರಿಣಮಿಸಿದೆ. ಬಾಟಲಿಯಿಂದ ಹೊಡೆದಾಡುವ ಅಯೋಗ್ಯರೆಲ್ಲಾ ಶಾಸಕರಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕರನ್ನು ಟೀಕಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೈತಿಕತೆ ಎನ್ನೋದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ; ಪ್ರಹ್ಲಾದ್ ಜೋಶಿ ಕಿಡಿ

    ನೈತಿಕತೆ ಎನ್ನೋದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ; ಪ್ರಹ್ಲಾದ್ ಜೋಶಿ ಕಿಡಿ

    – ಶಾಸಕರ ರೆಸಾರ್ಟ್ ಗಲಾಟೆ ಪಾರ್ಟಿ ಡ್ರಾಮಾ

    ಹುಬ್ಬಳ್ಳಿ: ರಾಜ್ಯ ಸರ್ಕಾರ ರಜೆ ಹಾಗೂ ಶೋಕಾಚರಣೆ ಘೋಷಣೆ ಮಾಡಿದ್ದರೂ ಕಾರ್ಯಕ್ರಮ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ, ನೈತಿಕತೆ ಎನ್ನುವುದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎನ್ನೋದು ಅಪ್ರಸ್ತುತ. ಕೂಡಲೇ ಕಾಂಗ್ರೆಸ್ ಅಧ್ಯಕ್ಷರು ಈ ಘಟನೆ ಬಗ್ಗೆ ಕ್ಷಮೆ ಕೇಳಬೇಕು. ಅಲ್ಲದೇ ಸಿಎಂ, ಡಿಸಿಎಂ ಉತ್ತರ ಕೊಡಬೇಕು. ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದರೆಂದು ಸರ್ಕಾರಿ ರಜೆ ಘೋಷಿಸಿದ್ದರೂ ಕಾರ್ಯಕ್ರಮವನ್ನು ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ನೈತಿಕತೆ ಇಲ್ಲ. ದೇಶ ವಿರೋಧಿ ಹೇಳಿಕೆ ಕೊಟ್ಟ ಕನ್ನಯ್ಯ ಕುಮಾರ್‍ನನ್ನು ಕರೆದುಕೊಂಡು ಬಂದು ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ರೆಸಾರ್ಟಿನಲ್ಲಿ ಶಾಸಕರ ಗಲಾಟೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಇದು ಕಾಂಗ್ರೆಸ್ ಪಾರ್ಟಿಯ ಡ್ರಾಮಾ. ಎಲ್ಲರನ್ನ ಅಲ್ಲಿಗೆ ಕರೆದುಕೊಂಡು ಹೋಗಿದ್ದು ಏಕೆ? ಎಲ್ಲಾ ಡ್ರಾಮಾ ಮುಗಿದ ಮೇಲೆ ಕೇಸ್ ಹಾಕಿದ್ದಾರೆ. ಹೀಗಾಗಿ ಕೂಡಲೇ ಸೂಕ್ತ ತನಿಖೆ ನಡೆಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು. ಇದನ್ನೂ ಓದಿ: ಈಗಲ್ಟನ್ ರೆಸಾರ್ಟಿನಲ್ಲಿ ಸಣ್ಣ ಅಚಾತುರ್ಯವಾಗಿರೋದು ನಿಜ: ಸಿಎಂ ಎಚ್‍ಡಿಕೆ

    ಈ ವಿಷಯವಾಗಿ ಹುಬ್ಬಳ್ಳಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿ, ರಕ್ಷಣೆ ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಶಾಸಕರನ್ನ ರೆಸಾರ್ಟಿಗೆ ಕರೆದುಕೊಂಡು ಹೋಗಿದ್ದರು. ಆದರೆ ಅವರ ಶಾಸಕರಿಗೆ ರಕ್ಷಣೆ ನೀಡಲು ಆಗಿಲ್ಲ. ಜನರಿಗೆ ರಕ್ಷಣೆ ಎಲ್ಲಿಂದ ಕೊಡುತ್ತಾರೆ ಎಂದು ಟೀಕಿಸಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸರ್ಕಾರಿ ರಜೆ ಘೋಷಣೆ ಮಾಡಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮ ಮಾಡಿದ್ದಾರೆ. ನೈತಿಕ ಹೊಣೆ ಹೊತ್ತು ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ಬೆಂಗಳೂರು: ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯ ಆದೇಶ ಹೊರಡಿಸಿದರೂ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ಹೀಗಾಗಿ ಬೆಳ್ಳಂಬೆಳಗ್ಗೆ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

    ಯಾವ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ನಿಮಗೆ ಇಲ್ಲದೇ ಹೋಯ್ತೇ? ಸಿದ್ದಗಂಗಾ ಶ್ರೀಗಳಂತ ಸಾಧಕರು ಅಗಲಿದಾಗ ಈ ಕಾರ್ಯಕ್ರಮ ನಡೆಸಿ ವಿವಾದ ಮಾಡಿಕೊಳ್ಳಬೇಕಾದ ಅವಶ್ಯಕತೆ ಏನಿತ್ತು? ಈ ವಿಚಾರಗಳು ಭಾವನಾತ್ಮಕವಾದ ವಿಷಯಗಳು ಎನ್ನುವುದು ನಿಮಗೆ ಗೊತ್ತಾಗುದಿಲ್ಲವೇ? ಇದರಿಂದ ಆಗುವ ಪರಿಣಾಮಗಳೇನು ಅಂತ ಯೋಚಿಸುವ ಶಕ್ತಿಯು ನಿಮಗಿಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೇ ಈ ವಿಚಾರವಾಗಿ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಪ್ರಿಯಾಂಕ್ ಖರ್ಗೆಗೆ ಸೂಚನೆಯನ್ನು ಕೂಡ ವೇಣುಗೋಪಾಲ್ ನೀಡಿದ್ದಾರೆ.

    ಸಮಾಜ ಕಲ್ಯಾಣ ಇಲಾಖೆ ಸಮಾನತೆ ಅನ್ವೇಷಣೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮವನ್ನು ಬೆಂಗಳೂರಿನ ಅಶೋಕ ಹೋಟೆಲ್‍ನಲ್ಲಿ ಆಯೋಜಿಸಿದೆ. ಮಂಗಳವಾರ ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಕಾರ್ಯಕ್ರಮವನ್ನು ಮುಂದುವರಿಸಲಾಯಿತು. ಇಡೀ ರಾಜ್ಯವೇ ಶೋಕಾಚರಣೆ ಮಾಡುತ್ತಿರುವಾಗ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ತಪ್ಪು ಎಂದು ಬಿಜೆಪಿ ಆಕ್ಷೇಪಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಕಟು ಟೀಕೆ ವ್ಯಕ್ತವಾಗಿತ್ತು.

    https://www.youtube.com/watch?v=kX1PUyGudYg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರಿಗೆ ನಮನ – ಭಾವಚಿತ್ರದ ಮುಂದೆ 1 ಗಂಟೆ ಇತ್ತು ನಾಗರಹಾವು!

    ನಡೆದಾಡುವ ದೇವರಿಗೆ ನಮನ – ಭಾವಚಿತ್ರದ ಮುಂದೆ 1 ಗಂಟೆ ಇತ್ತು ನಾಗರಹಾವು!

    ದಾವಣಗೆರೆ: ನಡೆದಾಡುವ ದೇವರು ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರದ ಮುಂಭಾಗ ನಾಗರಹಾವೊಂದು ಒಂದು ಗಂಟೆಗಳ ಕಾಲ ಕುಳಿತ ಅಚ್ಚರಿಯ ಘಟನೆ ಚನ್ನಗಿರಿ ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ.

    ನಾಗೇನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಗ್ರಾಮಸ್ಥರು ಶ್ರೀಗಳ ಭಾವಚಿತ್ರವಿಟ್ಟು ಶ್ರದ್ಧಾಂಜಲಿ ಸಲ್ಲಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಮಾಡಿದ್ದಾರೆ. ಗ್ರಾಮಸ್ಥರು ಶ್ರದ್ಧಾಂಜಲಿ ಸಲ್ಲಿಸಿ ತೆರಳಿದ ಬಳಿಕ ಅಲ್ಲಿಗೆ ನಾಗರಹಾವೊಂದು ಆಗಮಿಸಿದೆ. ಇದನ್ನೂ ಓದಿ: ಅನ್ನ ಚೆಲ್ಲಲು ಬಂದ ಭಕ್ತನಿಗೆ ಮಠದ ವಿದ್ಯಾರ್ಥಿಯಿಂದ ಅನ್ನದ ಪಾಠ! – ವಿಡಿಯೋ ನೋಡಿ

    ಎಲ್ಲಿಂದಲೋ ಬಂದಿದ್ದ ನಾಗರಹಾವು ಸಿದ್ದಗಂಗಾ ಶ್ರೀಗಳ ಭಾವಚಿತ್ರದ ಮುಂದೆ ಒಂದು ಗಂಟೆಗೂ ಅಧಿಕ ಕಾಲ ಕುಳಿತಿತ್ತು. ಈ ವಿಶೇಷ ದೃಶ್ಯವನ್ನು ನೋಡಿದ ಗ್ರಾಮಸ್ಥರು ಆಶ್ಚರ್ಯ ಪಟ್ಟಿದ್ದಾರೆ. ಸಾಧಾರಣವಾಗಿ ಕಾಣಿಸಿಕೊಳ್ಳದ ನಾಗರಹಾವು ಸಿದ್ದಗಂಗಾ ಶ್ರೀಗಳ ಭಾವಚಿತ್ರ ಮುಂದೆ ಕಾಣಿಸಿದ್ದನ್ನು ಕಂಡು ಜನರು ಇದೊಂದು ವಿಸ್ಮಯ ಎಂದಿದ್ದಾರೆ. ಕೇವಲ ಮನುಷ್ಯರು ಮಾತ್ರವಲ್ಲದೇ ಮೂಖ ಜೀವಿ ಕೂಡ ಸಿದ್ದಗಂಗಾ ಶ್ರೀಗಳಿಗೆ ನಮನ ಸಲ್ಲಿಸಿದೆ ಎಂದು ಬರೆದು ಭಾವಚಿತ್ರ ಮುಂದಿರುವ ನಾಗರಹಾವಿನ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೂಜೆ ಬಳಿಕ ಭಕ್ತಾಧಿಗಳಿಗೆ ಸಿಗಲಿದೆ ಶ್ರೀಗಳ ಗದ್ದುಗೆಯ ದರ್ಶನ ಭಾಗ್ಯ

    ಪೂಜೆ ಬಳಿಕ ಭಕ್ತಾಧಿಗಳಿಗೆ ಸಿಗಲಿದೆ ಶ್ರೀಗಳ ಗದ್ದುಗೆಯ ದರ್ಶನ ಭಾಗ್ಯ

    ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಗದ್ದುಗೆಗೆ ಭಕ್ತರು ಬುಧವಾರವೇ ಭೇಟಿ ನೀಡಬಹುದು. ಈಗ ಸಿದ್ಧಲಿಂಗ ಸ್ವಾಮೀಜಿ ಜೊತೆ ವಿವಿಧ ಮಠಾಧಿಶರು ಪೂಜೆ ನಡೆಸುತ್ತಿದ್ದು, ಪೂಜೆ ಮುಗಿದ ಬಳಿಕ ಭಕ್ತಾಧಿಗಳಿಗೆ ಗದ್ದುಗೆ ದರ್ಶನ ಪಡೆಯಲು ಅವಕಾಶ ನೀಡಲಾಗುತ್ತದೆ.

    ನಡೆದಾಡುವ ದೇವರು ಲಿಂಗೈಕ್ಯರಾದ ಗದ್ದುಗೆಯಲ್ಲಿ ಇಂದಿನ ಪೂಜಾ ವಿಧಾನಗಳು ಆರಂಭವಾಗಿದೆ. ಈ ಪೂಜೆ ಸಂದರ್ಭದಲ್ಲಿ ಸಿದ್ಧಲಿಂಗೇಶ್ವರ ಸ್ವಾಮಿಗೆ ಅಭಿಷೇಕ ಹಾಗೂ ಮಂತ್ರಪಠಣೆ ಮಾಡಿ ಪೂಜೆ ಮಾಡಲಾಗುತ್ತದೆ. ಸಿದ್ದಗಂಗೆಯ ಉದ್ದಾನ ಶಿವಯೋಗಿಗಳ ಗದ್ದುಗೆಯಲ್ಲಿ ಪೂಜಾ ವಿಧಾನಗಳು ಆರಂಭಗೊಂಡಿದ್ದು, ಈ ಪೂಜೆ ಪೂರ್ಣಗೊಂಡ ಬಳಿಕ ಶ್ರೀಗಳ ಗದ್ದುಗೆಗೂ ಪೂಜೆ ಸಲ್ಲಿಸಲಾಗುತ್ತದೆ. ಪೂಜೆಯ ನಂತರ ಭಕ್ತರಿಗೆ ಸಿದ್ದಗಂಗಾ ಶ್ರೀಗಳ ಗದ್ದುಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇದನ್ನೂ ಓದಿ: ಖಾಕಿಗಳಿಗೆ ಸರ್ಕಾರದಿಂದ ವೇತನ ಹೆಚ್ಚಳದ ಉಡುಗೊರೆ!

    ಗದ್ದುಗೆ ಪ್ರವೇಶಕ್ಕೆ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಮಠಕ್ಕೆ ಬಂದಿರುವ ಭಕ್ತಾಧಿಗಳು ಶ್ರೀಗಳು ಕೂರುತ್ತಿದ್ದ ವೇದಿಕೆಯ ದರ್ಶನ ಪಡೆಯುತ್ತಿದ್ದಾರೆ. ಮಠದ ಮುಂಭಾಗದ ಪ್ರಸಾದ ನಿಲಯದ ಪಕ್ಕದಲ್ಲಿಯೇ ಈ ವೇದಿಕೆ ಇದೆ. ಹಾಗೆಯೇ ರಾತ್ರಿ ಬಂದಿರುವ ಭಕ್ತರು ಮಠದ ಆವರಣದಲ್ಲಿ ವಿಶ್ರಾಂತಿ ಪಡೆದು ಬೆಳಗ್ಗೆ ವೇದಿಕೆಯ ದರ್ಶನ ಪಡೆದು ಹಿಂದಿರುಗಿದ್ದಾರೆ. ಸಿದ್ದಗಂಗಾ ಮಠದ ಸುತ್ತ ಪೊಲೀಸ್ ಭದ್ರತೆಯನ್ನು ಮುಂದುವರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮರಳಿನಲ್ಲಿ ಮೂಡಿಬಂತು ಶತಾಯುಷಿಯ ಕಲಾಕೃತಿ

    ಮರಳಿನಲ್ಲಿ ಮೂಡಿಬಂತು ಶತಾಯುಷಿಯ ಕಲಾಕೃತಿ

    ಧಾರವಾಡ: ಕಲಾವಿದರೊಬ್ಬರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಮರಳಿನ ಕಲಾಕೃತಿಯನ್ನು ರಚಸಿ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ.

    ನಗರದ ಕೆಲಗೇರಿ ನಿವಾಸಿಯಾದ ಮಂಜುನಾಥ ಹಿರೇಮಠ ಸಿದ್ದಗಂಗಾ ಶ್ರೀಗಳ ಕಲಾಕೃತಿಯನ್ನ ರಚನೆ ಮಾಡಿದ್ದಾರೆ. ಇಂದು ಬೆಳಗ್ಗೆಯಿಂದಲೇ ಮಂಜುನಾಥ ಅವರು ಮರಳಿನಲ್ಲಿ ಸಿದ್ದಗಂಗಾ ಶ್ರೀಗಳ ಕಲಾಕೃತಿಯನ್ನು ಮಾಡಿ ಪೂರ್ಣಗೊಳಿಸಿದ್ದು, ಕಲಾಕೃತಿಗೆ ಪೂಜೆ ಸಹ ಸಲ್ಲಿಸಿದ್ದಾರೆ. ಹಾಗೆಯೇ ಮಂಜುನಾಥ್ ಅವರ ಕೆಲಸ ಸ್ಥಳೀಯರ ಮನ ಗೆದ್ದಿದ್ದು, ಸಾರ್ವಜನಿಕರು ಕೂಡ ಶ್ರೀಗಳ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗದ್ದುಗೆ ಪ್ರವೇಶಿಸಲು ಶಲ್ಯ, ಪಂಚೆ ತೊಟ್ಟ 8 ಜನ ಪೊಲೀಸರು

    ಈ ಕುರಿತು ಕಲಾವಿದ ಮಂಜುನಾಥ ಹಿರೇಮಠ ಅವರು ಮಾತನಾಡಿ, ಶ್ರೀಗಳ ಅಂತಿಮ ದರ್ಶನ ಪಡೆಯಲು ನಮಗೆ ಸಾಧ್ಯವಾಗಲಿಲ್ಲ. ಸಿದ್ದಗಂಗಾ ಮಠಕ್ಕೆ ತೆರಳಲು ತುಂಬಾ ದೂರ ಪ್ರಯಾಣಿಸಬೇಕು ಹಾಗೆಯೇ ಅಲ್ಲಿ ಈಗಾಗಲೇ ಇರುವ ಜನರ ನಡುವೆ ಸರಿಯಾಗಿ ನಡೆದಾಡುವ ದೇವರ ದರ್ಶನ ಸಿಗುವುದು ಕಷ್ಟ. ಆದರಿಂದ ಈ ಭಾಗದ ಜನರಿಗೆ ಇಲ್ಲಿಂದಲೇ ಶ್ರೀಗಳ ದರ್ಶನ ಭಾಗ್ಯ ಸಿಗಲಿ ಅಂತ ಈ ಮರಳಿನ ಕಲಾಕೃತಿಯನ್ನು ಮಾಡಿದ್ದೇನೆ. ಶ್ರೀಗಳ ಕಲಾಕೃತಿಗೆ ನಮಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೇನೆ ಎಂದು ಹೇಳಿದರು.

    https://www.youtube.com/watch?v=VeSYe14zzhk

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಕ್ಕಳಿಗೆ ನೀಡಿದ ಊಟ, ವಿದ್ಯೆಯಲ್ಲಿ ಶ್ರೀಗಳು ಇದ್ದಾರೆ: ಶಿವಣ್ಣ

    ಮಕ್ಕಳಿಗೆ ನೀಡಿದ ಊಟ, ವಿದ್ಯೆಯಲ್ಲಿ ಶ್ರೀಗಳು ಇದ್ದಾರೆ: ಶಿವಣ್ಣ

    ಬೆಂಗಳೂರು: ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಮಕ್ಕಳಿಗೆ ಕೊಟ್ಟಿರುವ ವಿದ್ಯೆ ಮತ್ತು ಊಟದಲ್ಲಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

    ಶ್ರೀಗಳ ಅಗಲಿಕೆಯ ಸುದ್ದಿ ತಿಳಿದು ಬೇಸರ ವ್ಯಕ್ತಪಡಿಸಿದ ನಟ ಶಿವಣ್ಣ, ಕಾರಣಾಂತರದಿಂದ ಶ್ರೀಗಳ ಅಂತಿಮ ದರ್ಶನಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಶ್ರೀಗಳ ಅಗಲಿಕೆ ಸಂತಾಪ ಸೂಚಿಸಿದ್ದಾರೆ.

    “ಶ್ರೀಗಳು ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂದು ಹೇಳುವುದಕ್ಕೆ ನಾನು ಇಷ್ಟ ಪಡುವುದಿಲ್ಲ. ಅವರ ನೆನಪು ನಮ್ಮಲ್ಲಿದೆ. ಅವರು ಇಲ್ಲ ಎಂದು ಊಹಿಸಿಕೊಳ್ಳುವುದು ತುಂಬಾ ಕಷ್ಟವಾಗುತ್ತದೆ. ಇವತ್ತು ನಮ್ಮನ್ನು ಬಿಟ್ಟು ಶ್ರೀಗಳು ಶಿವನ ಪಾದ ಸೇರಿದ್ದಾರೆ. ಇದರಿಂದ ಎಲ್ಲರಿಗೂ ನೋವಾಗಿದೆ. ಆದರೆ ಶ್ರೀಗಳು ಅಲ್ಲಿಂದ ನಮಗೆ ಆಶೀರ್ವಾದ ಮಾಡುತ್ತಿರುತ್ತಾರೆ. ಜೊತೆಗೆ ನಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸುತ್ತಾರೆ ಎಂದು ಶಿವಣ್ಣ ಹೇಳಿದ್ದಾರೆ.

    ತುಮಕೂರಿನಲ್ಲಿ ಮಠ ನಿರ್ಮಾಣ ಮಾಡಿ ಅಲ್ಲಿ ಸಾವಿರಾರು ಮಕ್ಕಳಿಗೆ ಆಶ್ರಯ ಕೊಟ್ಟಿದ್ದಾರೆ. ಆಶ್ರಯದ ಜೊತೆಗೆ ವಿದ್ಯಾರ್ಥಿಗಳಿಗೆ ವಿದ್ಯೆ, ಊಟ ಕೊಟ್ಟಿದ್ದಾರೆ. ಆ ವಿದ್ಯೆ ಮತ್ತು ಊಟದಲ್ಲಿ ಶ್ರೀಗಳು ಇದ್ದಾರೆ. ಅಷ್ಟೇ ಅಲ್ಲದೇ ಇಡೀ ಕರ್ನಾಟಕದ ಜನತೆಯ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

    ಶ್ರೀಗಳ  ಸಾವಿನಿಂದ ನನಗೆ ತುಂಬಾ ನೋವಾಗಿದೆ. ಆದರೆ ಅಮೆರಿಕದ ಕಾರ್ಯಕ್ರಮವೊಂದರಲ್ಲಿ ಇದ್ದೇನೆ. ಆದ್ದರಿಂದ ನಾನು ಬರುವುದಕ್ಕೆ ಆಗುತ್ತಿಲ್ಲ. ಶ್ರೀಗಳ ಸಾವಿನ ಸುದ್ದಿ ಕೇಳಿದ ತಕ್ಷಣ ಬೇಸರವಾಯಿತು. ಅವರು ಮಾತನಾಡುವ ರೀತಿ ತುಂಬಾ ಇಷ್ಟವಾಗಿತ್ತು. ಇಂದಿಗೂ ಅವರ ಮಾತನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಶ್ರೀಗಳು ನಮ್ಮನ್ನು ಬಿಟ್ಟು ಹೋಗಿಲ್ಲ, ಸದಾ ನಮ್ಮ ಮನದಲ್ಲಿ ಇರುತ್ತಾರೆ ಎಂದು ಶಿವರಾಜ್ ಕುಮಾರ್ ಹೇಳಿದರು.

    https://www.youtube.com/watch?v=zUXukC5M7Fc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರಿ ರಜೆ ಇದ್ದರೂ ಶಾಲಾ, ಕಾಲೇಜು ಓಪನ್!

    ಸರ್ಕಾರಿ ರಜೆ ಇದ್ದರೂ ಶಾಲಾ, ಕಾಲೇಜು ಓಪನ್!

    ಬೆಂಗಳೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಇದ್ದರೂ ಶಾಲೆ,ಕಾಲೇಜು ನಡೆಸಿ ಶ್ರೀಗಳಿಗೆ ಅವಮಾನ ಮಾಡಿದ್ದಾರೆ ಎನ್ನುವ ಟೀಕೆ ಕೇಳಿಬಂದಿದೆ.

    ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಎಂ.ಎಸ್ ರಾಮಯ್ಯ ಇನ್ಸ್ ಟ್ಯೂಟ್ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸರ್ಕಾರಿ ಆದೇಶವನ್ನು ಕಾಲೇಜು ಧಿಕ್ಕರಿಸಿದ್ದು, ವಿದ್ಯಾರ್ಥಿಗಳು ಒಲ್ಲದ ಮನಸ್ಸಿನಿಂದ ಕಾಲೇಜಿಗೆ ಬಂದಿದ್ದಾರೆ.

    ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ಎರಡು ಖಾಸಗಿ ಕಾಲೇಜುಗಳು ಅಗೌರವ ತೋರಿ ಎಂದಿನಂತೆ ಕಾಲೇಜಿನಲ್ಲಿ ತರಗತಿಯನ್ನು ನಡೆಸಿದೆ. ಕೆ.ಆರ್.ಪೇಟೆ ಪಟ್ಟಣದ ಕ್ರೈಸ್ಟ್ ಕಿಂಗ್ ಹಾಗೂ ಸ್ಕಾಲರ್ಸ್ ಪಿಯು ಕಾಲೇಜುಗಳು ಇಂದು ಓಪನ್ ಆಗಿದೆ. ಸರ್ಕಾರದ ಆದೇಶ ಧಿಕ್ಕರಿಸಿ ಎಂದಿನಂತೆ ತರಗತಿ ನಡೆಸುತ್ತಿದ್ದು, ಶ್ರೀಗಳ ಅನುಯಾಯಿಗಳು ಪ್ರಶ್ನಿಸಿದ್ದಕ್ಕೆ, ಕಾಲೇಜಿಗೆ ನೂರರಷ್ಟು ಫಲಿತಾಂಶ ತರಬೇಕೆಂದು ಕ್ಲಾಸ್ ನಡೆಸುತ್ತಿದ್ದೇವೆ ಎಂಬ ಉತ್ತರ ನೀಡಿದ್ದಾರೆ. ಕಾಲೇಜು ಸಿಬ್ಬಂದಿಯ ಈ ವರ್ತನೆಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ರಾಯಚೂರಿನ ಎಎಂಇ ಸೊಸೈಟಿಯ ವಿಎಸ್‍ಸಿ ಫಾರ್ಮರ್ಸಿ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆ. 3ನೇ ಸೆಮಿಸ್ಟರ್ ಫಾರ್ಮಸಿಟಿಕಲ್ ಎಂಜಿನಿಯರಿಂಗ್ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ರಜೆಯ ಬಗ್ಗೆ ನಮಗೆ ಮಾಹಿತಿಯಿಲ್ಲ, ದೂರದ ಊರಿನಿಂದ ಬಂದಿದ್ದೇನೆ ಪರೀಕ್ಷೆ ನಡೆಸುತ್ತಿದ್ದೇನೆ ಎಂದಿದ್ದಾರೆ. ಕಾಲೇಜು ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೇ ನೀಡದೇ ಜಾರಿಕೊಳ್ಳುವ ಪ್ರಯತ್ನ ಮಾಡಿದೆ.

    ಬೀದರ್ ನ ಬಸವನಗರದಲ್ಲಿರುವ ದತ್ತಗಿರಿ ಮಹಾರಾಜ್ ಪಬ್ಲಿಕ್ ಸ್ಕೂಲ್ ನಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಸಿಬಿಎಸ್‍ಸಿ ಪೂರಕ ಪರೀಕ್ಷೆ ನಡೆಸಿದೆ. ಬೆಳಗ್ಗೆ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಶಾಲೆಯ ಮೂರನೇ ಮಹಡಿಯಲ್ಲಿ ವಿಜ್ಞಾನ ಪರೀಕ್ಷೆ ನಡೆಸಲಾಗಿದೆ. ವಿಷಯ ತಿಳಿದು ಶಾಲೆಗೆ ಪಬ್ಲಿಕ್ ಟಿವಿ ಭೇಟಿ ನೀಡಿದ ಕ್ಯಾಮೆರಾ ನೋಡಿ ಆಡಳಿತ ಮಂಡಳಿಯ ಸದಸ್ಯರು ಕೆಲ ಸಮಯ ಕಕ್ಕಾಬಿಕ್ಕಿಯಾದರು. ಈ ಬಗ್ಗೆ ಪ್ರಿನ್ಸಿಪಾಲ್ ಬಳಿ ಪ್ರಶ್ನಿಸಿದರೆ, ಪರೀಕ್ಷೆ ನಡೆದಿದೆ ಈಗ ಏನು ಮಾಡುವುದು ಎಂದು ಉಡಾಫೆಯ ಉತ್ತರ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

    ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

    – ಸಮಾನತೆ, ಅನ್ವೇಷಣೆ, ಸಂವಿಧಾನ, ಸಂಭಾಷಣೆ ಕಾರ್ಯಕ್ರಮ
    – ಅತಿಥಿಗಳಾಗಲಿದ್ದಾರೆ ಕನ್ಹಯ್ಯ ಕುಮಾರ್, ಓವೈಸಿ
    – ಪ್ರಿಯಾಂಕ್ ಖರ್ಗೆ ವಿರುದ್ಧ ಭಾರೀ ಟೀಕೆ

    ಬೆಂಗಳೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.

    ಸಮಾಜ ಕಲ್ಯಾಣ ಇಲಾಖೆ ಎರಡು ದಿನಗಳ ಕಾಲ ಸಮಾನತೆ ಅನ್ವೇಷಣೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮಕ್ಕೆ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಇಂದು ಚಾಲನೆ ಸಿಕ್ಕಿದೆ. ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿರಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಒಂದು ನಿಮಿಷ ಶ್ರೀಗಳಿಗೆ ಮೌನಾಚರಣೆ ಸಲ್ಲಿಸಿದ್ದಾರೆ.

    ಸಂವಿಧಾನದ ಸಂವಾದದ ಸಭೆಗೆ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಕೇಂದ್ರ ಸಚಿವೆ ಅಂಬಿಕಾ ಸೋನಿ ಸೇರಿ ಹಲವರು ಭಾಗಿಯಾಗಿದ್ದಾರೆ.

    ಇತ್ತ ಅಶೋಕ ಹೊಟೇಲ್ ಮುಂದೆ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಕ್ಕೆ ಕರುನಾಡ ಸೇವಕರು ಸಂಘಟನೆಯಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಕಾರ್ಯಕ್ರಮವನ್ನು ರದ್ದು ಮಾಡುವಂತೆ ಆಗ್ರಹಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.

    ಕನ್ನಯ್ಯ ಕುಮಾರ್, ಓವೈಸಿ ಕಾರ್ಯಕ್ರಮಕ್ಕೆ ಆಗಮನ ಹಿನ್ನೆಲೆಯಲ್ಲಿ ಕಾರ್ಯಕ್ರಮದಿಂದ ಬಿಜೆಪಿ ಗೋ ಮಧುಸೂದನ್ ವಾಪಸ್ ಆಗಿದ್ದಾರೆ. ಆದರೆ ಓವೈಸಿ ಆಗಮನಕ್ಕೆ ಕರುನಾಡ ಸೇನೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶ್ರೀ ಶಿವಕುಮಾರ್ ಸ್ವಾಮೀಜಿ ಲಿಂಗೈಕ್ಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮಾಡಬಾರದಿತ್ತು ಆಗ್ರಹಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕರುನಾಡ ಸೇವಕರು ಮತ್ತು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಸದ್ಯಕ್ಕೆ ಅಶೋಕ ಹೊಟೇಲ್ ಗೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಇನ್ನೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಕ್ಕೆ ಬಿಜೆಪಿ ಬಹಿಷ್ಕಾರ ಸೂಚಿಸಿದೆ.

    ಗೋ ಮಧುಸೂದನ್, ಲೆಹರ್ ಸಿಂಗ್ ಕಾರ್ಯಕ್ರಮದಿಂದ ವಾಪಸ್ಸಾಗಿದ್ದು, ಸರ್ಕಾರದ ವಿರುದ್ಧ ಇಬ್ಬರು ವಾಗ್ದಾಳಿ ಮಾಡಿದ್ದಾರೆ. ದೇಶದ ವಿರುದ್ಧ ಘೋಷಣೆ ಕೂಗಿದವರನ್ನ ಕಾರ್ಯಕ್ರಮಕ್ಕೆ ಕರೆದಿದ್ದಾರೆ. ಓವೈಸಿಯಂತಹ ದೇಶ ವಿರೋಧಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲ. ಸಿದ್ದಗಂಗಾ ಶ್ರೀಗಳ ಅಂತಿಮ ಯಾತ್ರೆ ನಡೆಯುತ್ತಿದ್ದರೂ ಸರ್ಕಾರ ಈ ಕಾರ್ಯಕ್ರಮವನ್ನು ಮಾಡುತ್ತಿದೆ. ಇದು ಸರಿಯಾದ ಪದ್ಧತಿ ಅಲ್ಲ ಎಂದು ಗೋ ಮಧುಸೂದನ್ ಹೇಳಿದರು.

    ಲೆಹರ್ ಸಿಂಗ್ ಕಿಡಿ: ಸಂವಿಧಾನದ ಬಗ್ಗೆ ಗೊತ್ತಿಲ್ಲದ ಜುಜುಬಿಗಳನ್ನ ಕರೆದುಕೊಂಡು ಕಾರ್ಯಕ್ರಮ ಮಾಡುತ್ತಿದ್ದಾರೆ. ಹಣ ಮಾಡಲು ಈ ಕಾರ್ಯಕ್ರಮವನ್ನು ಫೈವ್ ಸ್ಟಾರ್ ಹೋಟೆಲ್‍ನಲ್ಲಿ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಒಂದು ಸ್ಕ್ಯಾಮ್ ಆಗಿದ್ದು, ನಾವು ಆರ್ ಟಿಐನಲ್ಲಿ ಮಾಹಿತಿ ಪಡೆದು ಈ ಹಗರಣ ಹೊರಗೆ ಹಾಕುತ್ತೇವೆ. ಸಂವಿಧಾನ ಗೊತ್ತಿಲ್ಲದವರು ಕಾರ್ಯಕ್ರಮ ಮಾಡುತ್ತಿದ್ದಾರೆ. ಕೂಡಲೇ ಈ ಬಗ್ಗೆ ಸರ್ಕಾರ ತನಿಖೆ ನಡೆಯಬೇಕು. ನಾಡಿನ ಜನ ಶೋಕದಲ್ಲಿ ಇದ್ರೆ, ಸಚಿವರು ಕಾರ್ಯಕ್ರಮ ಮಾಡಿ ಮಜಾ ಮಾಡುತ್ತಿದ್ದಾರೆ. ಸರ್ಕಾರದ ಈ ವರ್ತನೆಗೆ ಯಾವ ಪದ ಬಳಕೆ ಮಾಡಬೇಕು ಗೊತ್ತಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಲೆಹರ್ ಸಿಂಗ್ ವಾಗ್ದಾಳಿ ಮಾಡಿದ್ದಾರೆ.

    ಕಾರ್ಯಕ್ರಮ ಮಾಡಲು ಇಂತಹ ಫೈವ್ ಸ್ಟಾರ್ ಹೋಟೆಲ್ ಬೇಕಾ? ಅಂಬೇಡ್ಕರ್ ಭವನ, ಇನ್ನಿತರ ಸರ್ಕಾರದ ಸ್ಥಳ ಇದ್ದರೂ ಇಂತಹ ಕಡೆ ಕಾರ್ಯಕ್ರಮ ಮಾಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. ಅವರಿಗೆ ಕೊಡುವುದಕ್ಕೆ ಹಣ ಇಲ್ಲ. ಇಂತಹ ಕಾರ್ಯಕ್ರಮ ಮಾಡಿ ದುಡ್ಡು ಹೊಡೆಯೋದು ಸಚಿವರ ಪ್ಲಾನ್. ರೆಸಾರ್ಟ್ ನಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್ ನವರು ಸಂವಿಧಾನದ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಲೆಹರ್ ಸಿಂಗ್ ಕಿಡಿಕಾರಿದರು.

    ಕನ್ನಯ್ಯ, ಓವೈಸಿ ಕಾರ್ಯಕ್ರಮ ರದ್ದಿಲ್ಲ ಏಕೆ? ಸಮಾಜ ಕಲ್ಯಾಣ ಎಂಬ ಈ ಇಲಾಖೆಯ ಅಜೆಂಡಾ ಏನು? ಎಂದು ಬಿಜಪಿ ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

    https://www.youtube.com/watch?v=8iVnMTXiYcI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಟ ದರ್ಶನ್‍ರಿಂದ ಶ್ರೀಗಳ ಅಂತಿಮ ದರ್ಶನ

    ನಟ ದರ್ಶನ್‍ರಿಂದ ಶ್ರೀಗಳ ಅಂತಿಮ ದರ್ಶನ

    ತುಮಕೂರು: ನಟ ದರ್ಶನ್ ಅವರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದಿದ್ದಾರೆ.

    ಶ್ರೀಗಳು ಶಿವೈಕೈವಾದ ಸೋಮವಾರವೇ ಗಣ್ಯರು ಬಂದು ಮಠಕ್ಕೆ ಅಂತಿಮ ದರ್ಶನ ಪಡೆದಿದ್ದರು. ಇಂದು ಕೂಡ ಭಕ್ತರು ಲಕ್ಷಾನುಗಟ್ಟಲೆ ಬಂದು ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಶ್ರೀಗಳ ಅಗಲಿಕೆಯಿಂದ ಸ್ಯಾಂಡಲ್‍ವುಡ್ ಸ್ಟಾರ್ ಗಳು ಕೂಡ ಕಂಬನಿ ಮಿಡಿದಿದ್ದರು. ಕಳೆದ ದಿನವೇ ನಟ ಪುನೀತ್ ರಾಜ್‍ಕುಮಾರ್ ಶ್ರೀಗಳ ಅಂತಿಮ ದರ್ಶನ ಪಡೆದಿದ್ದರು.

    https://twitter.com/DarshanFanz/status/1087569874832875520

    ಇಂದು ಬೆಳಗ್ಗೆ ನಟ ದರ್ಶನ್ ಅವರು ಮಠಕ್ಕೆ ಬಂದು ಶ್ರೀಗಳು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಅಲ್ಲಿದ್ದ ಹಿರಿಯ ಸ್ವಾಮೀಜಿಗಳ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು, ಕಿರಿಯ ಸ್ವಾಮೀಜಿ ಅವರನ್ನು ಮಾತನಾಡಿಸಿದ್ದಾರೆ. ನಟ ದರ್ಶನ್ ಮಾತ್ರವಲ್ಲದೇ ನಟ ಇಂದ್ರಜೀತ್ ಲಂಕೇಶ್ ಕೂಡ ಬಂದು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ.

    ಸೋಮವಾರ ಶ್ರೀಗಳು ಶಿವೈಕ್ಯ ಮಾಹಿತಿ ತಿಳಿದ ದರ್ಶನ್, “ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಇಹಲೋಕ ತ್ಯಜಿಸಿರುವುದು ಬಹಳ ನೋವಿನ ಸಂಗತಿ. ಇಷ್ಟು ದಿನ ಭಕ್ತರ ದರ್ಶನಕ್ಕೆ ಅವರಿದ್ದರು, ಈಗ ದೈಹಿಕವಾಗಿ ನಮ್ಮನ್ನು ಅಗಲಿದರೂ ಎಲ್ಲರ ಮನೆ ಮನಗಳಲ್ಲಿ ಅವರು ಭದ್ರವಾಗಿ ನೆಲೆಸಿದ್ದಾರೆ” ಎಂದು ಟ್ವೀಟ್ ಮಾಡಿ ಶ್ರೀಗಳು ಫೋಟೋ ಹಾಕಿ ಸಂತಾಪ ಸೂಚಿಸಿದ್ದರು.

    https://www.youtube.com/watch?v=0KTgJYBYBdo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv