Tag: ಶ್ರೀ ಶ್ರೀ ರವಿಶಂಕರ್‌ ಗುರೂಜಿ

  • ಶ್ರೀ ಶ್ರೀ ರವಿಶಂಕರ್ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

    ಶ್ರೀ ಶ್ರೀ ರವಿಶಂಕರ್ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

    ಬೆಂಗಳೂರು: ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ರವಿಶಂಕರ್‌ ಗುರೂಜಿ (Ravishankar Guruji) ಅವರಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ (ಹಾನರರಿ ಆಫಿಸರ್ ಆಫ್ ದಿ ಆರ್ಡರ್ ಆಫ್ ಫೀಜಿ) (Fiji Civilian Award) ನೀಡಿ ಗೌರವಿಸಲಾಯಿತು.

    ಮಾನವ ಸ್ಫೂರ್ತಿ ಹಾಗೂ ಶಾಂತಿ ಮತ್ತು ಸಾಮರಸ್ಯದ ಮೂಲಕ ವಿವಿಧ ಸಮುದಾಯಗಳನ್ನು ಒಂದುಗೂಡಿಸುವ ಅವರ ಕಾರ್ಯವನ್ನು ಶ್ಲಾಘಿಸಿ ಫಿಜಿ ರವಿಶಂಕರ್‌ ಗುರೂಜಿ ಅವರಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಲಾಯಿತು. ಫಿಜಿ ರೀಪಬ್ಲಿಕ್‌ನ ಅಧ್ಯಕ್ಷ ಹೆಚ್.ಇ ರಟು ವಿಲ್ಲಿಯಮೆ ಎಂ. ಕಟೋನಿವೆರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ರವಿಶಂಕರ್‌ ಗುರೂಜಿ ಅವರಿಗೆ ವಿವಿಧ ದೇಶಗಳ 6ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದೆ.

    ರವಿಶಂಕರ್‌ ಗುರೂಜಿ ಅವರು ತಮ್ಮ ಆರ್ಟ್‌ ಆಫ್‌ ಲಿವಿಂಗ್‌ (Art Of living) ಮೂಲಕ ಕಳೆದ 43 ವರ್ಷಗಳಿಂದ ಜನ ಸಮೂಹಕ್ಕೆ ಸಂತೋಷ, ಸಾಮರಸ್ಯ ಹರಡುತ್ತಿದ್ದಾರೆ. ಇದರೊಂದಿಗೆ ಮಾನಸಿಕ ಆರೋಗ್ಯ, ಶಿಕ್ಷಣ, ಪರಿಸರ ಜಾಗೃತಿ, ಮಹಿಳಾ ಹಾಗೂ ಯುವ ಸಬಲೀಕರಣಕ್ಕೆ ಒತ್ತು, ಒತ್ತಡ ನಿವಾರಣೆ, ಧ್ಯಾನದ ಕಾರ್ಯಮಗಳು ಹೀಗೆ ಅನೇಕ ಸಮಾಜ ಸೇವಾ ಕಾರ್ಯಗಳನ್ನು ನಡೆಸಿಕೊಡುತ್ತಿದ್ದಾರೆ. ಗುರೂಜಿ ಅವರ ಸಮಾಜದೇವಾ ಕಾರ್ಯಕ್ಕೆ ಮೆಚ್ಚಿ ಫಿಜಿ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಸನ್ಮಾನಿಸಿದೆ.

    ರವಿಶಂಕರ್‌ ಗುರೂಜಿ ಅವರು ಫಿಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಫಿಜಿಯ ಉಪಪ್ರಧಾನಿ ವಿಲಿಯಮೆ ಗಾವೋಕ, ಫಿಜಿಯ ಸಂಯುಕ್ತ ರಾಷ್ಟ್ರಗಳ ವಸತಿ ಸಂಯೋಜಕರಾದ ಡಿರ್ಕ್ ವಾಗೆನರ್ ಅವರೊಂದಿಗೆ ಸಂವಾದ ನಡೆಸಿದರು. ಈ ದ್ವೀಪ ರಾಷ್ಟ್ರದಲ್ಲಿ ಯುವಕ ಸಬಲೀಕರಣ, ಸ್ಥಳೀಯ ಸಮುದಾಯಗಳ ಮಾನಸಿಕ ಆರೋಗ್ಯದ ಸುಧಾರಣೆ, ಕಾಲಾತೀತ ಜ್ಞಾನವಾದ ಆಯುರ್ವೇದದ ಜ್ಞಾನದ ಪರಿಚಯದ ಮೂಲಕ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಫಿಜಿಯ ಸಮಗ್ರ ಬೆಳವಣಿಗೆಗೆ ಹೇಗೆ ಕೊಡುಗೆ ನೀಡಬಹುದು ಎನ್ನುವ ಬಗ್ಗೆ ಗಣ್ಯರೊಂದಿಗೆ ಚರ್ಚಿಸಿದರು.

  • ವಿಶ್ವ ಸಾಂಸ್ಕೃತಿಕ ಉತ್ಸವ; ಉಕ್ರೇನ್‌ ಶಾಂತಿಗಾಗಿ ಪ್ರಾರ್ಥಿಸಿದ 180 ದೇಶಗಳ ಜನ

    ವಿಶ್ವ ಸಾಂಸ್ಕೃತಿಕ ಉತ್ಸವ; ಉಕ್ರೇನ್‌ ಶಾಂತಿಗಾಗಿ ಪ್ರಾರ್ಥಿಸಿದ 180 ದೇಶಗಳ ಜನ

    – ಉತ್ಸವದಲ್ಲಿ ಯೋಗ ಕಾರ್ಯಕ್ರಮ ನಡೆಸಿಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ (Washington DC) ಡಿಸಿಯ ನ್ಯಾಷನಲ್‌ ಮಾಲ್‌ನಲ್ಲಿ ಆಯೋಜಿಸಿರುವ ‘ವಿಶ್ವ ಸಾಂಸ್ಕೃತಿಕ ಉತ್ಸವ’ (World Culture Festival) 2ನೇ ದಿನವೂ ಅದ್ಧೂರಿಯಾಗಿ ಜರುಗಿತು. ಉತ್ಸವಕ್ಕೆ 180 ದೇಶಗಳಿಂದ ಆಗಮಿಸಿದ್ದ ಜನರು, ಉಕ್ರೇನ್‌ನಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು.

    ಉತ್ಸವದಲ್ಲಿ ಎರಡನೆಯ ದಿನವು ಕೂಡ ನೂರಾರು ಬಾವುಟಗಳು ಹಾರಾಡಿದವು. ಮತ್ತೊಮ್ಮೆ ಏಕತೆಯ ಭಾವವು ಎಲ್ಲೆಡೆ ರಾರಾಜಿಸಿತು. 180 ದೇಶಗಳಿಂದ ಬಂದಿದ್ದ ಜನರು ಒಬ್ಬರನ್ನೊಬ್ಬರು ಕಲೆತು, ನೃತ್ಯ, ಸಂಗೀತ ಮತ್ತು ಆಹಾರದೊಡನೆ ಜಗತ್ತಿನ ವಿವಿಧ ಸಂಸ್ಕೃತಿಗಳನ್ನು ಸಂಭ್ರಮಿಸಿದರು.

    ಬೃಹತ್ ಪ್ರಮಾಣದಲ್ಲಿ ನಡೆದ ಈ ಉತ್ಸವವು ವಿಶ್ವವನ್ನು ಒಗ್ಗೂಡಿಸಲು ಹೊರಟಿರುವ ಭಾರತದ ಸಂಕಲ್ಪ ಶಕ್ತಿಯನ್ನು ಪ್ರತಿಬಿಂಬಿಸಿತು. ವಾಷಿಂಗ್ಟನ್ ಡಿಸಿ ನ್ಯಾಷನಲ್ ಮಾಲಿನ ಐತಿಹಾಸಿಕ ಲಿಂಕನ್ ಸ್ಮಾರಕದ ಎದುರು ಸಾವಿರಾರು ಜನ ತಮ್ಮ ತಮ್ಮ ಮ್ಯಾಟ್ ಹಾಸಿ ಯೋಗ ಮಾಡುವುದರೊಂದಿಗೆ 2ನೇ ದಿನದ ಉತ್ಸವಕ್ಕೆ ಚಾಲನೆ ಕೊಟ್ಟರು. ಅಲ್ಲಿ ನೆರೆದಿದ್ದ ಎಲ್ಲರಿಗೂ ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿ (Ravishankar Guruji) ಅವರು ಒಂದು ಅನುಪಮವಾದ ಉಸಿರಾಟ, ಯೋಗ ಮತ್ತು ಧ್ಯಾನದ ಪ್ರಕ್ರಿಯೆಗಳನ್ನು ಹೇಳಿಕೊಟ್ಟರು. ಸಂಜೆಯ ವೇಳೆಗೆ ಮನಸೂರೆಗೊಳ್ಳುವಂತಹ ಪ್ರದರ್ಶನಗಳು ಜರುಗಿದವು. ಇದನ್ನೂ ಓದಿ: ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    ಗಣ್ಯರ ಸ್ಫೂರ್ತಿದಾಯಕ ಭಾಷಣಗಳು ಮನುಷ್ಯರ ಬಾಂಧವ್ಯಗಳನ್ನು ಇನ್ನಷ್ಟು ಬೆಸೆಯುವಂತಿತ್ತು. ಭಾರತದ ಮಾಜಿ ರಾಷ್ಟ್ರಪತಿಗಳಾದ ರಾಮ್‌ನಾಥ್ ಕೋವಿಂದ್ ಮಾತನಾಡಿ, ಪರ್ವತ ಶ್ರೇಣಿಗಳು, ಕರಾವಳಿ ಬಯಲು, ನದಿಯ ತೀರ, ಮರುಭೂಮಿ ಪ್ರದೇಶ ಹೀಗೆ ಪ್ರಪಂಚದ ಮೂಲೆ ಮೂಲೆಗಳಿಂದ ಬಂದು ಜನರು ಇಲ್ಲಿ ಸೇರಿದ್ದಾರೆ. ಗುರುದೇವರು ಇಲ್ಲಿ ಒಂದು ಪುಟ್ಟ ಪ್ರಪಂಚವನ್ನೇ ನಿರ್ಮಿಸಿದ್ದಾರೆ ಎಂದು ಬಣ್ಣಿಸಿದರು.

    ಅನೇಕ ಕಲಾರೂಪಗಳ ಪ್ರದರ್ಶನಗಳು ನಡೆದವು. ಅವುಗಳಲ್ಲಿ ಪಾರಂಪರಿಕ ಉಕ್ರೇನ್‌ನ ಹಾಡಿನ ಪ್ರದರ್ಶನ ಕೂಡ ಒಂದು. ಇದನ್ನು ಉಕ್ರೇನ್ ಖ್ಯಾತ ಸಂಗೀತಗಾರರಾದ ಒಲೇನ ಅಸ್ತಶೇವ‌ ಅವರು ನಡೆಸಿಕೊಟ್ಟರು. ಯುದ್ಧದ ಕಾರಣದಿಂದಾಗಿ ಇವರು ತಮ್ಮ ಮಾತೃಭೂಮಿಯನ್ನು ತೊರೆದಿದ್ದರು. ಮನಕುಲಕುವ ಈ ಹಾಡಿನ ಪ್ರದರ್ಶನದ ನಂತರ ಜನರೆಲ್ಲರೂ ಸೇರಿ ಉಕ್ರೇನ್ ಶಾಂತಿಗಾಗಿ ಗುರುದೇವರ ಸಮ್ಮುಖದಲ್ಲಿ ಪ್ರಾರ್ಥಿಸಿದರು. ಇದನ್ನೂ ಓದಿ: ಬೆಂಗಳೂರಿನ BSF ಯೋಧರಿಂದ ಸ್ವಚ್ಛತಾ ಅಭಿಯಾನ

    ಎಲ್ಲರನ್ನೂ ಎಚ್ಚರಿಸುವಂತೆ ಬಿರುಸಿನ ಭಾಷಣ ಮಾಡಿದ ರೆವರೆಂಡ್ ಜೆರಾಲ್ಡ್ ದುರ್ಲೆ, ಆರ್ಟ್ ಆಫ್ ಲಿವಿಂಗ್‌ನ ಹೆಸರನ್ನು ಆರ್ಟ್ ಆಫ್ ಪ್ರೂಫ್ ಎಂದು ಬದಲಿಸಬೇಕು. ಏಕೆಂದರೆ ನಾವು ಎಲ್ಲರನ್ನೂ ಪ್ರೀತಿಸಬಹುದು. ನಾವು ಎಲ್ಲರೊಂದಿಗೆ ಹಂಚಿಕೊಳ್ಳಬಹುದು ಎಂದು ಗುರುದೇವರು ಪ್ರೂವ್ ಮಾಡಿದ್ದಾರೆ ಎಂದರು.

    ಅಮೆರಿಕದ ವೆಂಚರ್ ಕ್ಯಾಪಿಟಲ್ ಹೂಡಿಕೆದಾರರಾದ ಟಿಮ್ ಡ್ರೇಪರ್ ಮಾತನಾಡಿ, ಅಮೆರಿಕನ್ನರಾದ ನಾವು ಇತರ ಜನರನ್ನು ಅನ್ಯಲೋಕದವರಂತೆ ಕಂಡಿದ್ದೇವೆ. ಅದು ಒಳ್ಳೆಯ ಬೆಳವಣಿಗೆ ಆಗಿರಲಿಲ್ಲ. ಆದರೆ ಈಗ ಬದಲಾವಣೆ ಆರಂಭವಾಗಿದೆ. ಗುರುದೇವರ ನಾಯಕತ್ವದಲ್ಲಿ ಜನರನ್ನು ಒಂದಾಗಿ ತರುತ್ತಿದ್ದೇವೆ. ಈಗ ಭೂಮಿಯ ಮೇಲಿರುವ ಯಾರು ಕೂಡ ಏಲಿಯನ್ನರಲ್ಲ (ಅನ್ಯಗ್ರಹ ಜೀವಿಗಳು). ಆದರೆ ಈ ಭೂಮಿಯ ಮೇಲೆ ಯಾರಾದರೂ ಏಲಿಯನ್ನರು ಇದ್ದು, ನಿಮ್ಮ ನಾಯಕರ ಬಳಿಗೆ ಕರೆದೊಯ್ಯಿರಿ ಎಂದರೆ ನಾನು ಅವರನ್ನು ಗುರುದೇವ್ ಶ್ರೀ ಶ್ರೀ ರವಿಶಂಕರರ ಬಳಿಗೆ ಕರೆದೊಯ್ಯುತ್ತೇನೆ ಎಂದರು.

    ಮಾರಿಷಿಯಸ್‌ನ ಅಧ್ಯಕ್ಷರಾದ ಪೃಥ್ವಿರಾಜ್‌ ಸಿಂಗ್ ರೂಪನ್, ಜಪಾನಿನ ಮಾಜಿ ಪ್ರಧಾನ ಮಂತ್ರಿ ದಿವಂಗತ ಶಿಂಜೊ ಅಬೆಯವರ ಪತ್ನಿ ಅಕೀ ಅಬೆ, ಯುಎಸ್‌ನ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಇನ್ನಿತರ ಗಣ್ಯರು ಎರಡನೇ ದಿನ ಉಪಸ್ಥಿತರಾಗಿದ್ದರು. ಇದನ್ನೂ ಓದಿ: BJP-JDS ಮೈತ್ರಿಗೆ ಜೆಡಿಎಸ್ ಶಾಸಕರಿಂದ ಸರ್ವಾನುಮತದ ಒಪ್ಪಿಗೆ

    ಸಾಂಸ್ಕೃತಿಕ ಕಾರ್ಯಕ್ರಮ
    ಎರಡನೆಯ ದಿನ ಸಾಂಸ್ಕೃತಿಕ ಮಹೋತ್ಸವದಲ್ಲಿ, 10,000 ಜನರಿಂದ ಗರ್ಭ ನೃತ್ಯ ನಡೆಯಿತು. ಅವರೊಡನೆ ಗ್ರಾಮಿ ಪ್ರಶಸ್ತಿ ವಿಜೇತರಾದ ಭಾರತೀಯ ಅಮೆರಿಕನ್ನರೂ ಆದ ಫಾಲು ಶಾ ಅವರು ಗಾಯನ ಮಾಡಿದರು. 200 ಜನರನ್ನೊಳಗೊಂಡ ಭಾಂಗ್ರ ನೃತ್ಯ, ಐರಿಶ್‌ನ ಸ್ಟೆಪ್ ನೃತ್ಯ, ಆಫ್ಗಾನಿನ ಸುಮಧುರ ಸಂಗೀತ, 1000 ಚೀನಿ ಅಮೆರಿಕನ್ನರಿಂದ ವೈಭವಯುತವಾದ ನೃತ್ಯ ಹಾಗೂ ಗಾಯನ ಜರುಗಿತು. ಇದರೊಡನೆ ಕುಂಗ್ ಫೂ ಪ್ರದರ್ಶನವೂ ನಡೆಯಿತು.

    ಭವ್ಯವಾದ ಡ್ರಾಗನ್ ಮತ್ತು ಸಿಂಹಗಳು ಕಲಾತ್ಮಕ ಕಲ್ಪನೆಯನ್ನು ಜೀವಂತವಾಗಿಸಿದವು. ಇಂಡೊನೇಷಿಯಾ, ಬ್ರೆಜಿಲ್, ಬೊಲಿವಿಯ ಮತ್ತು ಲ್ಯಾಟಿನ್ ಅಮೆರಿಕದ ದೇಶಗಳು ಅವಿಸ್ಮರಣೀಯವಾದ ನೃತ್ಯಗಳನ್ನು ನಡೆಸಿದವು. ಖ್ಯಾತ ಕುರ್ಟಿಸ್ ಬ್ಲೋ ಅವರ ನೇತೃತ್ವದಲ್ಲಿ ಹಿಪ್ ಹಾಪ್ ಮತ್ತು ಬ್ರೇಕ್ ಡಾನ್ಸ್‌ನ ಪ್ರದರ್ಶನ ನಡೆಯಿತು. 1,200 ಹಾಡುಗಾರರ ಗಾಸ್ಪೆಲ್ ಕಾಯರ್, ಪಾಕಿಸ್ತಾನದ ಮನಮೋಹಕ ಪ್ರದರ್ಶನವು ನಡೆಯಿತು.

    ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಮಾತನಾಡಿ, ಇಂದಿನ ವಿಶ್ವ ಸಾಂಸ್ಕೃತಿಕ ಉತ್ಸವದಂತಹ ಉತ್ಸವಗಳು ಬಹಳ ಮುಖ್ಯ. ನಾವೆಲ್ಲರೂ ಪರಸ್ಪರ ಹೊಂದಿರುವ ಸಂಬಂಧವು ಎಷ್ಟು ಅವಶ್ಯಕವಾದದ್ದು ಎಂಬುದನ್ನು ಇದು ತೋರಿಸುತ್ತದೆ. ಇಂದಿನ ದಿನಗಳಲ್ಲಿ ಏಕಾಂಗಿತನ ಹಾಗೂ ಪ್ರತ್ಯೇಕತೆಯು ಹೆಚ್ಚಾಗಿದೆ. ಎಲ್ಲರೂ ಒಂದಾಗಿರುವ ಸಂಬಂಧಗಳನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ. ಏಕಾಂಗಿತನ, ಪ್ರತ್ಯೇಕತೆಯಿಂದ ದೈಹಿಕ ಕಾಯಿಲೆ, ಹೃದ್ರೋಗಗಳು ಹೆಚ್ಚುತ್ತಿವೆ. ಇವು ನಮ್ಮ ಸಮುದಾಯಗಳ ಒಳಿತನ್ನೇ ನಾಶಮಾಡುತ್ತಿವೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    – ‘ವಿಶ್ವ ಸಾಂಸ್ಕೃತಿಕ ಉತ್ಸವ’ದ ಮೊದಲ ದಿನದ ಕಾರ್ಯಕ್ರಮದಲ್ಲಿ 10 ಲಕ್ಷ ಮಂದಿ ಭಾಗಿ

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿ ಆರ್ಟ್‌ ಆಫ್‌ ಲಿವಿಂಗ್‌ (The Art Of Living) ಸಂಸ್ಥೆ ಆಯೋಜಿಸಿರುವ 4ನೇ ವಿಶ್ವ ಸಾಂಸ್ಕೃತಿಕ ಉತ್ಸವದಲ್ಲಿ (World Culture Festival 2023) 10 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. 180 ದೇಶಗಳ ಲಕ್ಷಾಂತರ ಜನರು ಜಗತ್ತಿನ ಮಾನವೀಯತೆ, ಶಾಂತಿ ಮತ್ತು ಸಂಸ್ಕೃತಿಗಳ ಸಂಗಮದ ಹಬ್ಬವಾದ ‘ವಿಶ್ವ ಸಾಂಸ್ಕೃತಿ ಉತ್ಸವ’ದಲ್ಲಿ ಭಾಗಿಯಾಗಿ ಅದ್ಭುತಕ್ಕೆ ಸಾಕ್ಷಿಯಾದರು.

    ಈ ಸಮಾರಂಭದಲ್ಲಿ ಜಾಗತಿಕ ಗಣ್ಯರಾದ ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಹೆಚ್.ಇ. ಬಾನ್ ಕಿ-ಮೂನ್, ವಾಷಿಂಗ್ಟನ್‌ ಡಿ.ಸಿಯ ಮೇಯರ್ ಮುರಿಯಲ್ ಬೌಸರ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಬಿಷಪ್ ಎಮೆರಿಟ್ಸ್‌ ಮಾರ್ಸೆಲೊ ಸ್ಯಾಂಚೆಜ್ ಸೊರೊಂಡೋ, ಪಾಂಟಿಫಿಕಲ್ ಅಕಾಡೆಮಿ ಆಫ್ ಸೈನ್ಸಸ್‌ನ ಚಾನ್ಸೆಲರ್ ಎಮೆರಿಟಸ್ ಪಾಲ್ಗೊಂಡಿದ್ದರು. ವಸುದೈವ ಕುಟುಂಬಕಂ (ಇಡೀ ವಿಶ್ವವೇ ಒಂದು ಕುಟುಂಬ) ಎಂಬ ಧ್ಯೇಯವಾಕ್ಯದೊಂದಿಗೆ ಆರ್ಟ್ ಆಫ್ ಲಿವಿಂಗ್‌ನ ‘ವಿಶ್ವ ಸಾಂಸ್ಕೃತಿಕ ಉತ್ಸವವು ಸಂಗೀತ, ನೃತ್ಯಗಳ ಮೂಲಕ ಏಕತೆ, ಸಾಮರಸ್ಯದ ಜಾಗತಿಕ ಸಂದೇಶ ಸಾರಿತು.

    ಜಾಗತಿಕ ಗಣ್ಯರು, ರೋಮಾಂಚನಗೊಳಿಸುವ ಸಂಗೀತ ಮತ್ತು ವರ್ಣರಂಜಿತ ನೃತ್ಯ ಪ್ರದರ್ಶನ ಕಲಾವಿದರು, ಗ್ರ್ಯಾಮಿ ಪ್ರಶಸ್ತಿ ವಿಜೇತರು, ಇತರೆ ಹೆಸರಾಂತ ಕಲಾವಿದರು ಬೃಹತ್‌ ಕಾರ್ಯಕ್ರಮದಲ್ಲಿ ಒಟ್ಟಾಗಿ ಪಾಲ್ಗೊಂಡಿದ್ದರು.

    ಜಾಗತಿಕ ಮಾನವತಾವಾದಿ ಮತ್ತು ಶಾಂತಿದೂತರಾದ, ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ (Ravishankar Guruji) ಅವರು ಮಾತನಾಡಿ, ನಮ್ಮ ವೈವಿಧ್ಯತೆಯನ್ನು ಆಚರಿಸಲು ಇದು ಒಂದು ಸುಂದರ ಸಂದರ್ಭವಾಗಿದೆ. ನಮ್ಮ ಜಗತ್ತು ತುಂಬಾ ವೈವಿಧ್ಯಮಯವಾಗಿದೆ. ಆದರೂ ನಮ್ಮ ಮಾನವೀಯ ಮೌಲ್ಯಗಳಲ್ಲಿ ಏಕತೆ ಇದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಹೆಚ್ಚಿನ ಸಂತೋಷವನ್ನು ತರಲು ನಾವು ಬದ್ಧರಾಗೋಣ. ಎಲ್ಲರ ಮುಖದಲ್ಲೂ ನಗು ಮೂಡಿಸೋಣ. ಅದೇ ಮಾನವೀಯತೆ. ಅದರಿಂದಲೇ ನಾವೆಲ್ಲರೂ ಮಾಡಲ್ಪಟ್ಟಿರುವುದು. ಜ್ಞಾನದ ಬೆಂಬಲವಿಲ್ಲದಿದ್ದರೆ ಯಾವುದೇ ಆಚರಣೆಯು ಸತ್ವವನ್ನು ಹೊಂದಿರುವುದಿಲ್ಲ. ಆ ಜ್ಞಾನವು ನಮ್ಮೆಲ್ಲರೊಳಗಿದೆ. ನಾವು ವಿಭಿನ್ನವಾಗಿದ್ದರೂ, ನಾವೆಲ್ಲರೂ ಒಂದೇ ಎಂದು ಗುರುತಿಸುವುದು ಜಾಣ್ಮೆಯಾಗಿದೆ. ನಾವೆಲ್ಲರೂ ಪರಸ್ಪರ ಒಬ್ಬರಿಗೊಬ್ಬರು ಸೇರಿದವರು. ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು. ನಮ್ಮ ಜೀವನವನ್ನು ಸಂಭ್ರಮಿಸೋಣ. ಸವಾಲುಗಳನ್ನು ದಿಟ್ಟತನದಂದ ಸ್ವೀಕರಿಸಿ ಎದುರಿಸೋಣ. ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಕನಸನ್ನು ಕಾಣೋಣ ಎಂದು ಸಂದೇಶ ನೀಡಿದರು.

    ಭಾರತದ ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಮಾತನಾಡಿ, ನಾವೆಲ್ಲರೂ ಸಮೃದ್ಧಿಯನ್ನು ಹೆಚ್ಚಿಸಲು ಮತ್ತು ನಮ್ಮ ಭೂಮಿಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಸವಾಲುಗಳನ್ನು ಎದುರಿಸುವುದು ಸಹಜ. ನೈಸರ್ಗಿಕ ವಿಕೋಪಗಳಾಗಲಿ, ಮಾನವ ನಿರ್ಮಿತವಾದವುಗಳಾಗಲಿ, ಘರ್ಷಣೆಗಳಾಗಲಿ ಅಥವಾ ಅಡೆತಡೆಗಳಾಗಲಿ ಪರಸ್ಪರ ಅವಲಂಬಿತ ಜಗತ್ತಿನಲ್ಲಿ ನಾವು ಯಾವಾಗಲೂ ಒಬ್ಬರಿಗೊಬ್ಬರು ಇರುತ್ತೇವೆ ಎಂಬುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಒಂದು ಸ್ಪೂರ್ತಿದಾಯಕ ಉದಾಹರಣೆಯಾಗಿದೆ. ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಅವರು ಇತ್ತೀಚೆಗೆ ಬೀರಿದ ಪ್ರಭಾವವನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ. ಇಂದು ಅವರ ಸಂದೇಶ, ನಿಮ್ಮ ಸಂದೇಶ, ನಮ್ಮ ಸಂದೇಶವು ಕಾಳಜಿ, ಹಂಚಿಕೊಳ್ಳುವಿಕೆ, ಔದಾರ್ಯ, ತಿಳುವಳಿಕೆಯ ಸದ್ಭಾವನೆ ಮತ್ತು ಸಹಕಾರವಾಗಿರಬೇಕು. ಇದುವೇ ನಮ್ಮೆಲ್ಲರನ್ನೂ ಇಲ್ಲಿ ಒಟ್ಟುಗೂಡಿಸಿರುವುದು ಎಂದು ಹೇಳಿದರು.

    ವಿಶ್ವ ಸಾಂಸ್ಕೃತಿಕ ಉತ್ಸವದ ಮೊದಲ ದಿನದಂದು ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಹೆಚ್.ಇ. ಬಾನ್ ಕಿ-ಮೂನ್, ವಾಷಿಂಗ್ಟನ್‌ ಡಿ.ಸಿಯ ಮೇಯರ್ ಮುರಿಯಲ್ ಬೌಸರ್, ಮಿಚಿಗನ್ ಕಾಂಗ್ರೆಸಿಗ ಥಾನೆದರ್, ಜಪಾನಿನ ಶಿಕ್ಷಣ, ಸಂಸ್ಕೃತಿ, ಕ್ರೀಡೆ, ವಿಜ್ಞಾನ ಹಾಗೂ ತಂತ್ರಜ್ಞಾನದ ಮಾಜಿ ಸಚಿವ, ಸಂಸದ ಹಕುಬುನ್ ಶಿಮೊಮುರಾ, ಯುಎನ್‌ಇಪಿಯ ಮಾಜಿ ಉಪ ಪ್ರಧಾನ ಕಾರ್ಯದರ್ಶಿ ಮತ್ತು ಯುಎನ್‌ಇಪಿಯ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್‌ಹೈಮ್, ಮಾಜಿ ಅಂತಾರಾಷ್ಟ್ರೀಯ ಅಭಿವೃದ್ಧಿ ನಾರ್ವೆ ಸಚಿವರು ಮತ್ತು ಇತರ ಜಾಗತಿಕ ಗಣ್ಯರು, ಅನೇಕ ಜಾಗತಿಕ ಸವಾಲುಗಳನ್ನು ಎದುರಿಸುತ್ತಿರುವ ಸಂಘರ್ಷದ ಜಗತ್ತಿನಲ್ಲಿ ಏಕತೆ, ಶಾಂತಿ ಮತ್ತು ಸಾಮರಸ್ಯದ ಸಹಬಾಳ್ವೆ ಕುರಿತು ಮಾತನಾಡಿದರು.

    ದಿ ರೆವರೆಂಡ್ ಬಿಷಪ್ ಎಮೆರಿಟ್ಸ್‌ ಮಾರ್ಸೆಲೊ ಸ್ಯಾಂಚೆಜ್ ಸೊರೊಂಡೋ ಅವರು, ವಿಶ್ವ ಶಾಂತಿ ಸಾಧಿಸಲು ನಮ್ಮಲ್ಲಿ ಆಂತರಿಕ ಶಾಂತಿಯಿರಬೇಕು. ಶಾಂತಿಯನ್ನು ಸಂವಹನ ಮಾಡಲು, ನಾವು ಶಾಂತಿಯಿಂದ ಬದುಕಬೇಕು. ಶಾಂತಿಯಿಂದ ಬದುಕಲು ನಮಗೆ ಆರ್ಟ್ ಆಫ್ ಲಿವಿಂಗ್ ಅಗತ್ಯವಿದೆ. ಶಾಂತಿಯಿಂದ ಬದುಕುವ ಕಲೆಯನ್ನು ಹೊಂದಲು ನಾವು ದೇವರೊಂದಿಗೆ ಸಂವಹನ ಸಾಧಿಸಬೇಕು. ದೇವರು ಮಾನವನಿಗೆ ಶತ್ರುವಲ್ಲ. ದೇವರು ಒಬ್ಬ ಸ್ನೇಹಿತ. ದೇವರು ಅಂದರೆ ಪ್ರೀತಿ. ದೇವರನ್ನು ಹೊಂದಲು ನಾವು ಧ್ಯಾನಕ್ಕೆ, ಪ್ರಾರ್ಥನೆಗೆ ಹಿಂತಿರುಗಬೇಕಾಗಿದೆ. ನಾವು ನಮ್ಮ ಮೂಲಕ್ಕೆ ಹಿಂತಿರುಗಬೇಕಾಗಿದೆ. ಆದ್ದರಿಂದ ಈ ಸೂಕ್ಷ್ಮ ಕ್ಷಣದಲ್ಲಿ ನಾವು ದೇವರನ್ನು ಪ್ರಾರ್ಥಿಸಬೇಕಾಗಿದೆ. ಪೋಪ್ ಫ್ರಾನ್ಸಿಸ್ ಅವರ ಹೆಸರಿನಲ್ಲಿ ನಾವು ಎಲ್ಲಾ ಮಾನವರ ಭ್ರಾತೃತ್ವದಲ್ಲಿ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ. ನಾನು ಈ ದೊಡ್ಡ ಸಭೆಯನ್ನು ಆಶೀರ್ವದಿಸುತ್ತೇನೆ. ಈ ಜೀವನ ಕ್ರಮವು ನಿಜವಾಗಿಯೂ ನಮ್ಮ ಮಾನವೀಯತೆಯ ಭವಿಷ್ಯವಾಗಿರಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

    ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರಿಂದ ಪ್ರೇರಿತರಾಗಿ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಆಯೋಜಿಸಿದ ವಿಶ್ವ ಸಾಂಸ್ಕೃತಿಕ ಉತ್ಸವವು ಗಡಿಗಳನ್ನು ಮೀರಿದ್ದು, ಮಾನವೀಯತೆ ಮತ್ತು ಸಹೋದರತ್ವದ ಎಳೆಯಲ್ಲಿ ಒಟ್ಟಿಗೆ ಕಟ್ಟಿದ ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಆಚರಿಸಿತು. ಸಂಗೀತ ಮತ್ತು ನೃತ್ಯದ ಮೂಲಕ ಸ್ಥಳೀಯ ಸಂಪ್ರದಾಯಗಳ ಸಂರಕ್ಷಣೆಗಾಗಿ ವಿಶ್ವ ಸಾಂಸ್ಕೃತಿಕ ಉತ್ಸವವು ವೇದಿಕೆ ಒದಗಿಸುತ್ತದೆ. ಹಾಗೆಯೇ ಪ್ರತಿಯೊಬ್ಬರೂ ಆನಂದಿಸಲು ಅವಕಾಶವನ್ನು ಒದಗಿಸುತ್ತದೆ. ಇದು ಪ್ರೀತಿ, ಸಹಾನುಭೂತಿ ಮತ್ತು ಸೌಹಾರ್ದತೆಯಂತಹ ಸಾರ್ವತ್ರಿಕ ಮಾನವೀಯ ಮೌಲ್ಯಗಳ ಪುನರುಜ್ಜೀವನದ ಆಂದೋಲನವಾಗಿದೆ ಎಂದು ಹೇಳಿಲಾಯಿತು.

    ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಮಹಾಮಹಿಮರಾದ ಬಾನ್ ಕಿ-ಮೂನ್, ಸಂಸ್ಕೃತಿ ಸೇತುವೆಗಳನ್ನು ನಿರ್ಮಿಸುತ್ತದೆ, ಗೋಡೆಗಳನ್ನು ಒಡೆಯುತ್ತದೆ. ಮಾತುಕತೆ ಮತ್ತು ಪರಸ್ಪರ ತಿಳಿವಳಿಕೆಯ ಮೂಲಕ ಜಗತ್ತನ್ನು ಒಟ್ಟುಗೂಡಿಸುತ್ತದೆ. ಜನರು ಮತ್ತು ರಾಷ್ಟ್ರಗಳ ನಡುವೆ ಏಕತೆ ಮತ್ತು ಸಾಮರಸ್ಯವನ್ನು ಹೆಚ್ಚಿಸುತ್ತದೆ. ಸಂಸ್ಕೃತಿಯು ಎಲ್ಲಾ ಜಾಗತಿಕ ನಾಗರಿಕರ ನಡುವೆ ಪ್ರಬಲ ವಿನಿಮಯವನ್ನು ರಚಿಸಬಹುದು. ಇಂದು ಪ್ರಪಂಚದ ಎಲ್ಲಾ ಸಾಂಸ್ಕೃತಿಕ ಶ್ರೀಮಂತಿಕೆಯು ಯುನೈಟೆಡ್ ಸ್ಟೇಟ್ಸ್‌ನ ನ್ಯಾಷನಲ್ ಮಾಲ್‌ನಲ್ಲಿ ಒಟ್ಟುಗೂಡಿದೆ. ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರ ಏಕತೆ ಮತ್ತು ವೈವಿಧ್ಯತೆಯ ಸ್ಪೂರ್ತಿದಾಯಕ ದೃಷ್ಟಿಕೋನವನ್ನು ನಾನು ಪ್ರಶಂಸಿಸುತ್ತೇನೆ. ನಮಗೆ ಇಂತಹ ಹೆಚ್ಚು ಹೆಚ್ಚು ಆಚರಣೆಗಳು, ಹೆಚ್ಚು ಒಗ್ಗೂಡುವಿಕೆ, ಹೆಚ್ಚು ಶಾಂತಿ ಮತ್ತು ಹೆಚ್ಚಿನ ಸಹಕಾರ, ಐಕ್ಯಭಾವ ಮತ್ತು ಪಾಲುದಾರಿಕೆಯ ಅಗತ್ಯವಿದೆ. ನಾವು ಈಗ ಎದುರಿಸುತ್ತಿರುವ ದೊಡ್ಡ ಸವಾಲುಗಳ ಮೇಲೆ ನಾವು ಹೀಗೆಯೇ ಮುನ್ನುಗ್ಗಿ ಮುಂದುವರಿಯುತ್ತೇವೆ. ಇದೇ ರೀತಿ ನಾವು ಶಾಂತಿಯನ್ನು ನಿರ್ಮಿಸುತ್ತೇವೆ. ಸಂಘರ್ಷಗಳನ್ನು ಪರಿಹರಿಸುತ್ತೇವೆ. ಹಸಿವನ್ನು ಕೊನೆಗೊಳಿಸುತ್ತೇವೆ. ಆರೋಗ್ಯಕರ ಜೀವನವನ್ನು ಖಚಿತಪಡಿಸಿಕೊಳ್ಳುತ್ತೇವೆ. ಗುಣಮಟ್ಟದ ಶಿಕ್ಷಣವನ್ನು ಮುನ್ನಡೆಸುತ್ತೇವೆ. ಮಹಿಳೆಯರು ಮತ್ತು ಬಾಲಕಿಯರನ್ನು ಸಬಲೀಕರಣಗೊಳಿಸುತ್ತೇವೆ. ಹೀಗೆಯೇ ನಾವು ಯಾರೂ ಹಿಂದುಳಿಯದಂತೆ ಮುನ್ನಡೆಯಲಿರುವುದು ಎಂದು ತಿಳಿಸಿದರು.

    ಸಾವಿರಾರು ರಾಷ್ಟ್ರಧ್ವಜಗಳು ಏಕತೆಯ ಉತ್ಸಾಹದಲ್ಲಿ ಗಾಳಿಯಲ್ಲಿ ಹಾರಾಡಿದವು. ಉತ್ಸವದಲ್ಲಿ ನೆರೆದಿದ್ದ ಜನರ ಉತ್ಸಾಹ ಮತ್ತು ಸಂತೋಷ ಇಮ್ಮಡಿಗೊಂಡಿತ್ತು. ಕಲಾವಿದರಲ್ಲಿ ಶಕ್ತಿಯ ಸಂಚಲನ ಮೂಡಿದಂತಿತ್ತು.

    ಉತ್ಸವದ ಮಹತ್ವ ಕುರಿತು ಮಾತನಾಡಿದ ಮೋಹಿನಿಯಾಟ್ಟಂ ಪ್ರದರ್ಶನದ ನೃತ್ಯ ಸಂಯೋಜಕಿ ಬೀನಾ ಮೋಹನ್, ಈ ಪ್ರದರ್ಶನದ ಭಾಗವಾಗುವುದು ಒಂದು ಕನಸು. ಈ ಕಾರ್ಯವನ್ನು ಸಂಯೋಜಿಸುವುದು ನನಗೆ ಮತ್ತು ನನ್ನ ವಿದ್ಯಾರ್ಥಿಗಳಿಗೆ ನಂಬಲಾಗದ ಒಂದು ಅನುಭವವಾಗಿತ್ತು. ಪ್ರದರ್ಶನದ ನಂತರ ಇದು ನಮಗೆ ತರುವ ಆತ್ಮವಿಶ್ವಾಸ, ಸಂತೋಷ ಎಲ್ಲವೂ ಒಂದು ವಿಭಿನ್ನ ಭಾವನೆಯಾಗಿರಲಿದೆ ಎಂದು ಅವರು ಹೇಳಿದರು.

    ವಿಶ್ವ ಸಾಂಸ್ಕೃತಿಕ ಉತ್ಸವದ ತಮ್ಮ ಭಾಷಣದಲ್ಲಿ ಮಿಚಿಗನ್ ಕಾಂಗ್ರೆಸಿಗರಾದ ಥಾನೇದಾರ್ ಮಾತನಾಡಿ, ಕರ್ನಾಟಕ ರಾಜ್ಯದೊಂದಿಗಿನ ತಮ್ಮ ಸಂಬಂಧದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಎಂತಹ ಸುಂದರವಾದ ಸಂಜೆ. ಎಂತಹ ಸುಂದರ ಪ್ರದರ್ಶನಗಳು. ನಾವು ಸ್ವಲ್ಪ ಮಳೆಯನ್ನು ನೋಡಿದ್ದೇವೆ. ಅದು ವಿಶ್ವ ಶಾಂತಿ ಮತ್ತು ಹೊಸ ಆರಂಭವನ್ನು ತರುತ್ತದೆ. ಕರ್ನಾಟಕದ ಬೆಳಗಾವಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಮನೆಯಲ್ಲಿ ಬೆಳೆದು, ಆ ರಾಜ್ಯವನ್ನು ಗುರುದೇವರೊಂದಿಗೆ ಹಂಚಿಕೊಂಡಿದ್ದ ನನಗೆ ಇತ್ತೀಚೆಗೆ ಗುರುದೇವರೊಂದಿಗೆ ಕನ್ನಡದಲ್ಲಿ ಮಾತನಾಡಲು ಸಾಧ್ಯವಾಗಿದ್ದಕ್ಕೆ ತುಂಬಾ ಸಂತೋಷವಾಯಿತು ಎಂದರು.

    ಗ್ರ್ಯಾಮಿ ಪ್ರಶಸ್ತಿ ವಿಜೇತೆ ಚಂದ್ರಿಕಾ ಟಂಡನ್ ಮತ್ತು 200 ಕಲಾವಿದರು ‘ಅಮೆರಿಕಾ ದಿ ಬ್ಯೂಟಿಫುಲ್ ಮತ್ತು ವಂದೇ ಮಾತರಂ’ ಗಾಯನ ಮಾಡಿದರು. 1,000 ಕಲಾವಿದರನ್ನು ಒಳಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಮತ್ತು ಶಾಸ್ತ್ರೀಯ ಕಛೇರಿಯು ಪಂಚಭೂತಂ ಎಂಬ ಪ್ರದರ್ಶನ ನಡೆಸಿತು. ಗ್ರ್ಯಾಮಿ ಪ್ರಶಸ್ತಿ ವಿಜೇತ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1,000 ಗಿಟಾರ್‌ಗಳ ವಾದನವೂ ನಡೆಯಿತು. ಆಫ್ರಿಕಾ, ಜಪಾನ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಅನೇಕ ಪ್ರದರ್ಶನಗಳು ನಡೆದವು. ಅಂತಿಮವಾಗಿ ‘ಒನ್ ಲವ್’ ಆಚರಣೆಯೊಂದಿಗೆ ಸ್ಕಿಪ್ ಮಾರ್ಲೆಯವರ ರೆಗ್ಗೀ ರಿದಮ್ಸ್ ಪ್ರದರ್ಶನದೊಂದಿಗೆ ಮೊದಲ ದಿನದ ಕಾರ್ಯಕ್ರಮವು ಮುಕ್ತಾಯಗೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.29 ರಿಂದ ವಾಷಿಂಗ್ಟನ್‌ನಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ

    ಸೆ.29 ರಿಂದ ವಾಷಿಂಗ್ಟನ್‌ನಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ

    – ಶ್ರೀ ಶ್ರೀ ರವಿಶಂಕರ್‌ ಗುರೂಜಿ ನೇತೃತ್ವದಲ್ಲಿ ‘ಸಾಂಸ್ಕೃತಿಕ ಒಲಿಂಪಿಕ್ಸ್‌’

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ ಡಿ ಸಿಯ (Washington DC) ನ್ಯಾಷನಲ್‌ ಮಾಲ್‌ನಲ್ಲಿ ಸೆ.29 ರಿಂದ ಅ.1 ರ ವರೆಗೆ ‘ವಿಶ್ವ ಸಾಂಸ್ಕೃತಿಕ ಉತ್ಸವ’ವನ್ನು (World Culture Festival 2023) ಆರ್ಟ್‌ ಆಫ್‌ ಲಿವಿಂಗ್‌ (Art Of Living) ಸಂಸ್ಥೆಯು ಆಯೋಜಿಸಿದೆ.

    ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್‌ ಗುರೂಜಿ (Ravishankar Guruji) ಅವರ ಮುಂದಾಳತ್ವದಲ್ಲಿ ಈ ಉತ್ಸವ ಜರುಗಲಿದೆ. 17,000 ಕಲಾವಿದರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಡಾ.ವಿವೇಕ್‌ ಮೂರ್ತಿ, ಅಮೆರಿಕದ ಸಂಸದರಾದ ರಿಕ್ ಸ್ಕಾಟ್, ಭಾಷಣಕಾರರಾಗಿ ನಾನ್ಸಿ ಪೆಲೋಸಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಎಲ್ಲಾ ಸರ್ಕಾರಗಳು ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿವೆ: ಸತೀಶ್ ಜಾರಕಿಹೊಳಿ

    ಈ ದಿನಗಳಂದು ಇಡೀ ಜಗತ್ತಿನ ಕಣ್ಣು, ಅಮೆರಿಕದ ರಾಜಧಾನಿ ಮೇಲೆ ನೆಟ್ಟಿರುತ್ತದೆ. ಅವಿಸ್ಮರಣೇಯವಾದ ವೈವಿಧ್ಯತೆ ಹಾಗೂ ಏಕತೆಯ ಉತ್ಸವಕ್ಕೆ ಆತಿಥ್ಯವನ್ನು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ವಹಿಸಲಿದೆ. ಇದು ಸಂಸ್ಥೆಯ ವಿಶ್ವ ಸಾಂಸ್ಕೃತಿಕ ಉತ್ಸವದ ನಾಲ್ಕನೆಯ ಆವೃತ್ತಿಯಾಗಿದೆ.

    ವಿಶ್ವ ಸಾಂಸ್ಕೃತಿಕ ಉತ್ಸವದಲ್ಲಿ 17,000 ಕಲಾವಿದರು, ಅನೇಕ ರಾಜ್ಯಗಳ ಮುಖ್ಯಸ್ಥರು, 100 ಕ್ಕಿಂತಲೂ ಹೆಚ್ಚು ದೇಶಗಳ ಚಿಂತಕರು ಭಾಗವಹಿಸಲಿದ್ದಾರೆ. 5 ಲಕ್ಷಕ್ಕೂ ಹೆಚ್ಚು ಜನರು ಈ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಇದು ಜಾಗತಿಕವಾಗಿ ಮಹತ್ವದ ಉತ್ಸವವಾಗಲಿದೆ. ಈ ಉತ್ಸವದಲ್ಲಿ 50 ಪ್ರದರ್ಶನಗಳು ನಡೆಯಲಿವೆ. ಪಾರಂಪರಿಕ ಚೀನಾದ ಸಾಂಸ್ಕೃತಿಕ ಪ್ರದರ್ಶನವೂ ಇರಲಿದೆ. ಇದರಲ್ಲಿ 1,000 ಹಾಡುಗಾರರು ಮತ್ತು ನರ್ತಕರು ಭಾಗವಹಿಸಲಿದ್ದಾರೆ.

    7,000 ನರ್ತಕರನ್ನೊಳಗೊಂಡ ಗರ್ಭನೃತ್ಯ ವೈಭವ, ನೇರ ಸ್ವರಮೇಳದ ಸಹಿತ 700 ಭಾರತೀಯ ಶಾಸ್ತ್ರೀಯ ನರ್ತಕರು, ಹಿಪ್ ಹಾಪ್‌ನ 50ನೇ ವರ್ಷದ ಸಂಭ್ರಮ, ಕುರ್ಟಿಸ್ ಬ್ಲೋ, ಎಸ್‌ಹೆಚ್‌ಎ-ರಾಕ್, ಸೀಕ್ವೆನ್ಸ್ ಗರ್ಲ್ಸ್, ಡಿಜೆಕೂಲ್ ಹಾಗೂ ಕಿಂಗ್ ಚಾರ್ಲ್ಸ್ ಹಾಗೂ ಕೆಲ್ಲಿ ಫಾರ್ಮನ್ ಅವರಿಂದ ಸಂಯೋಜಿಸಲ್ಪಟ್ಟ ನೃತ್ಯ ಸಂಯೋಜನೆಯಲ್ಲಿ 100 ಬ್ರೇಕ್ ಡಾನ್ಸ್‌ನ ನರ್ತಕರು ತಮ್ಮ ಚೊಚ್ಚಲ ಪ್ರದರ್ಶನವನ್ನು ನೀಡಲಿದ್ದಾರೆ. ತಮ್ಮ ಪಾರಂಪರಿಕ ನೃತ್ಯವಾದ ಹೋಪಾಕ್ ನೃತ್ಯ ಪ್ರದರ್ಶನವನ್ನು ನೀಡಲಿರುವ 1,000 ಉಕ್ರೇನ್‌ ನರ್ತಕರು, ಗ್ರಾಮಿ ಪ್ರಶಸ್ತಿ ವಿಜೇತರಾದ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1,000 ಗಿಟಾರ್ ವಾದ್ಯ ಕಾರ್ಯಕ್ರಮ ನಡೆಯಲಿದೆ. ಬಾಬ್ ಮಾರ್ಲೆಯವರ ಖ್ಯಾತ “ಒನ್ ಲವ್” ಮರುಸೃಷ್ಟಿ ಕಾರ್ಯಕ್ರಮವನ್ನು ಅವರ ಮೊಮ್ಮಗ ಸ್ಕಿಪ್ ಮಾರ್ಲಿನ್ ನಡೆಸಿಕೊಡಲಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್‌ – ವಿಜಯನಗರ ವಿವಿ ಪರೀಕ್ಷೆ ಮುಂದೂಡಿಕೆ

    ನ್ಯಾಷನಲ್ ಮಾಲ್‌ನಲ್ಲಿ 1963 ರಲ್ಲಿ ಮಾರ್ಟಿನ್ ಲೂಥರ್ ಕಿಂಗ್ “ಐ ಹ್ಯಾವ್ ಎ ಡ್ರೀಮ್” ಅತ್ಯದ್ಭುತ ಭಾಷಣವನ್ನು ನೀಡಿದ್ದರು. ಆ ಮೂಲಕ ಜಗತ್ತಿಗೆ ಸಮನ್ವಯತೆ, ಏಕತೆಯ ಸಂದೇಶವನ್ನು ಸಾರಿದ್ದರು. ಅದಕ್ಕಿಂತಲೂ ನೂರು ವರ್ಷಗಳ ಹಿಂದೆ ಚಿಕಾಗೋನಲ್ಲಿ ನಡೆದ ಪ್ರಥಮ ವಿಶ್ವ ಧಾರ್ಮಿಕ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ಅವಿಸ್ಮರಣೀಯ ಭಾಷಣ ಮಾಡಿ, ಸಭಿಕರನ್ನು ಮಂತ್ರಮುಗ್ಧರನ್ನಾಗಿಸಿದ್ದರು. ಧಾರ್ಮಿಕ ಪ್ರತಿನಿಧಿಗಳನ್ನು ಸಹೋದರ, ಸಹೋದರಿಯರೆ ಎಂದು ಸಂಬೋಧಿಸಿ ವಿವೇಕಾನಂದರು ಗಮನ ಸೆಳೆದಿದ್ದರು. ಧಾರ್ಮಿಕ ದ್ವಂದ್ವತೆ, ಅಸಹಿಷ್ಣುತೆ ಕೊನೆಗಾಣಿಸಬೇಕು ಎಂದು ಕರೆ ನೀಡಿದ್ದರು.

    ಇಂತಹ ಐತಿಹಾಸಿಕ ಸ್ಮರಣೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದ ನ್ಯಾಷನಲ್‌ ಮಾಲ್‌ನಲ್ಲಿ ಇದೇ ಸೆ.29 ರಂದು ಗುರುದೇವ್ ಶ್ರೀ ಶ್ರೀ ರವಿಶಂಕರ ಗುರೂಜಿ ಅವರು, “ವಸುದೈವ ಕುಟುಂಬಕಂ” ಎಂಬ ಧ್ಯೇಯವಾಕ್ಯದೊಂದಿಗೆ 180 ದೇಶಗಳ ಗಡಿಗಳ ಜನ, ಧರ್ಮ, ಪಂಥಗಳನ್ನು ಒಂದುಗೂಡಿಸಲು ಸೇತುವೆಯಾಗಲಿದ್ದಾರೆ. ಈ ಉತ್ಸವದಲ್ಲಿ ಜಗತ್ತಿನ ಎಲ್ಲೆಡೆಯ ಆಹಾರಗಳ ಮೇಳವೂ ನಡೆಯಲಿದೆ. ಈ ಉತ್ಸವದ ವಿಶೇಷತೆಯೆಂದರೆ, ಉದಯೋನ್ಮುಖ ಕಲಾವಿದರು ಮತ್ತು ಪ್ರದರ್ಶಕರಿಗೆ ತಮ್ಮ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗುವುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

    ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

    ಬೆಂಗಳೂರು: ಇಲ್ಲಿನ ಆರ್ಟ್‌ ಆಫ್‌ ಲಿವಿಂಗ್‌ (Art of Living) ಅಂತಾರಾಷ್ಟ್ರೀಯ ಕೇಂದ್ರದಲ್ಲಿ ದುರ್ಗಾಷಮಿ ಪೂಜಾ ಮಹೋತ್ಸವದ (Dasara Celebration) ಅದ್ಧೂರಿ ಆಚರಣೆ ನಡೆಯಿತು. 82 ದೇಶಗಳಿಂದ ಒಂದೂವರೆ ಲಕ್ಷ ಜನರು ವಿಶೇಷ ಹೋಮ, ಮಂತ್ರೋಚ್ಚಾರಣೆ, ಭಜನೆ, ಧ್ಯಾನದ ಮೂಲಕ ವಿಶ್ವ ಶಾಂತಿಗಾಗಿ ಪ್ರಾರ್ಥಿಸಿದರು.

    ವಿಶ್ವದ ಶಾಂತಿಗಾಗಿ ಹಾಗೂ ಯೋಗಕ್ಷೇಮಕ್ಕಾಗಿ ಶಕ್ತಿಶಾಲಿ ಚಂಡಿ ಹೋಮ ನೆರವೇರಿಸಲಾಯಿತು. ಮಂತ್ರೋಪಚಾರಣೆಯೊಂದಿಗೆ 108 ಗಿಡಮೂಲಿಕೆಗಳು, ಹಣ್ಣುಗಳು ಹಾಗೂ ವಿಶೇಷ ಪದಾರ್ಥಗಳನ್ನು ಹೋಮಕ್ಕೆ ಅರ್ಪಣೆ ಮಾಡಲಾಯಿತು. 700 ಶ್ಲೋಕಗಳನ್ನೊಳಗೊಂಡ ದುರ್ಗಾ ಸಪ್ತಶತಿ ಪಾರಾಯಣ ಮಾಡಿದ ನಂತರ ಗೋಪೂಜೆ, ಗಜಪೂಜೆ, ಕನ್ಯಾಪೂಜೆ, ವಟುಪೂಜೆ ಹಾಗೂ ದಂಪತಿ ಪೂಜಾ ವಿಧಾನಗಳನ್ನು ನೆರವೇರಿಸಲಾಯಿತು. ಇದನ್ನೂ ಓದಿ: ಸ್ವಚ್ಛನಗರಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಕುಸಿದ ಬೆಂಗಳೂರು- ಬಿಗ್‌ಶೇಮ್‌ ಎಂದು ಕುಟುಕಿದ ಪೈ

    ಈ ಕುರಿತು ಮಾತನಾಡಿದ ಶ್ರೀ ಶ್ರೀ ರವಿಶಂಕರ್‌ ಗುರೂಜಿ (Sri Sri Ravi Shankar Guruj) ಅವರು, ಚಂಡಿ ಎಂದರೆ ಬಹಳ ಶಕ್ತಿಶಾಲಿ ಎಂದರ್ಥ. ಚಂಡಿಹೋಮದ ಪ್ರತಿಯೊಂದು ಮಂತ್ರದೊಡನೆ ಒಂದು ಗಿಡಮೂಲಿಕೆ ಸಂಬಂಧ ಪಟ್ಟಿದೆ. ಪ್ರತೀ ಮಂತ್ರವೂ ತನ್ನದೇ ಆದ ವಿಶಿಷ್ಟ ಶಕ್ತಿಯನ್ನು ಹೊಂದಿದೆ. ಇದು ವಾತಾವರಣದಲ್ಲಿ ಸಕಾರಾತ್ಮಕ ಕಂಪನಗಳನ್ನುಂಟುಮಾಡುತ್ತದೆ. ಈ ನವರಾತ್ರಿ ಉತ್ಸವವು ಸಂಕುಚಿತ ಮನಸ್ಸಿನಿಂದ ವಿಶಾಲ ಮನಸ್ಸಿನ ಚಲನೆಯ ಸಂಭ್ರಮಾಚರಣೆಗೆ ಕೊಂಡೊಯ್ಯುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಾಂಡಿಯಾ ಪೆಂಡಾಲ್‌ನಲ್ಲಿ ಮುಸ್ಲಿಮ್ ಯುವಕರಿಗೆ ಏನು ಕೆಲಸ – ಮುತಾಲಿಕ್ ಪ್ರಶ್ನೆ

    ನವರಾತ್ರಿಯ ಮತ್ತೊಂದು ವಿಶೇಷವೆಂದರೆ ಆಶ್ರಮದ ಅಡುಗೆ ಮನೆಯಲ್ಲಿ ಪ್ರತಿನಿತ್ಯವೂ ಸಾವಿರಾರು ಭಕ್ತರಿಗಾಗಿ ಪ್ರಸಾದ ವಿತರಣೆ ಮಾಡಲಾಯಿತು. ಅದಕ್ಕಾಗಿ 60 ಟನ್ ಅಕ್ಕಿ, 40 ಟನ್ ಗೋಧಿಹಿಟ್ಟು, 20 ಟನ್ ಬೇಳೆ, 40,000 ಲೀಟರ್ ಎಣ್ಣೆ, 45,000 ಲೀಟರ್ ಹಾಲು, 250 ಟನ್ ತರಕಾರಿ, 10,000 ಲೀಟರ್ ಮೊಸರನ್ನು ಬಳಸಲಾಯಿತು.

    Live Tv
    [brid partner=56869869 player=32851 video=960834 autoplay=true]