Tag: ಶ್ವಾನ ಪ್ರಿಯ

  • 50 ಕೋಟಿಗೆ ನಾಯಿ ಖರೀದಿ ಮಾಡಿದ್ದೇನೆ ಅಂತಿದ್ದ ಸತೀಶ್ ಮನೆ ಮೇಲೆ ಇಡಿ ದಾಳಿ – ಬಯಲಾಯ್ತು ಸತ್ಯ

    50 ಕೋಟಿಗೆ ನಾಯಿ ಖರೀದಿ ಮಾಡಿದ್ದೇನೆ ಅಂತಿದ್ದ ಸತೀಶ್ ಮನೆ ಮೇಲೆ ಇಡಿ ದಾಳಿ – ಬಯಲಾಯ್ತು ಸತ್ಯ

    ಬೆಂಗಳೂರು: 50 ಕೋಟಿ ರೂಪಾಯಿ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ನಾಯಿಯೊಂದನ್ನು ಖರೀದಿ ಮಾಡಿದ್ದೇನೆ ಎಂದು ಹೇಳುತ್ತಿದ್ದ ಬೆಂಗಳೂರಿನ ಶ್ವಾನಪ್ರೇಮಿ ಸತೀಶ್‌ (Bengaluru Dog Breeder Satish) ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

     

    View this post on Instagram

     

    A post shared by Satish S (@satishcadaboms)

    ಸತೀಶ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ (ED) ಅಧಿಕಾರಿಗಳು ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಬೆಲೆ 50 ಕೋಟಿ ಅನ್ನೋದು ಸುಳ್ಳು ಎಂಬುದು ಗೊತ್ತಾಗಿದೆ. ಸದ್ಯ ಸ್ಥಳದಲ್ಲೇ ಬೀಡುಬಿಟ್ಟಿರುವ ಅಧಿಕಾರಿಗಳಿ ಪರಿಶೀಲನೆ ಮುಂದುವರಿಸಿದ್ದಾರೆ.

    ಸತೀಶ್‌ 50 ಕೋಟಿ ರೂ. ಕೊಟ್ಟು ಶ್ವಾನವೊಂದನ್ನು ಖರೀದಿ ಮಾಡಿರುವಿದಾಗಿ ಹೇಳಿಕೊಂಡಿದ್ದರು. ಕಾಡು ತೋಳ ಮತತ್ತು ಕಕೇಶಿಯನ್‌ ಶೆಫರ್ಡ್‌ ತಳಿಯ ಮಿಶ್ರಣವಾಗಿರುವ ಇದನ್ನು ತೋಳನಾಯಿ ಎಂದೂ ಕರೆಯುತ್ತಾರೆ. ಇದನ್ನೂ ಓದಿ: ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದೀರಿ: ವಿಜಯ್‌ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಜಮಾತ್‌

    ಸತೀಶ್‌ ಯಾರು?
    ಸತೀಶ್‌ ಬೆಂಗಳೂರಿನ ಶ್ವಾನಪ್ರಿಯರಲ್ಲಿ ಒಬ್ಬರು. ಇವರು ಹಲವು ಶ್ವಾನ ತಳಿ ಸಂಘಗಳನ್ನು ಮುನ್ನಡೆಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೇ ನಾಯಿ ಸಾಕುವುದನ್ನು ಬಿಟ್ಟಿದ್ದರೂ ಆಗಾಗ್ಗೆ ಅಪರೂಪದ ನಾಯಿಗಳೊಂದಿಗೆ ಪ್ರದರ್ಶನಕ್ಕೆ ಬರುತ್ತಿರುತ್ತಾರೆ. ಅಲ್ಲದೇ ಸತೀಶ್‌ ಯಾವುದೇ ಕಾರ್ಯಕ್ರಮಕ್ಕೆ ತಮ್ಮ ಅಪರೂಪದ ಶ್ವಾನದೊಂದಿಗೆ ಹೋದ್ರೆ ಅದಕ್ಕೆ ನಿರ್ದಿಷ್ಟ ಮೊತ್ತವನ್ನು ಪಡೆಯುವುದಾಗಿ ಎಂದು ಈ ಹಿಂದೆ ಹೇಳಿಕೊಂಡಿದ್ದರು. ಇದನ್ನೂ ಓದಿ: ಕಿವಿ ಕೇಳದ, ಮಾತು ಬಾರದ 11ರ ಬಾಲಕಿ ಮೇಲೆ ರೇಪ್‌ – ಖಾಸಗಿ ಭಾಗಗಳಿಗೆ ಸಿಗರೇಟ್‌ನಿಂದ ಸುಟ್ಟು ವಿಕೃತಿ

    ಕಕೇಷ್ಯನ್ ಶೆಫರ್ಡ್ ವಿಶೇಷತೆ ಏನು?
    `ಕ್ಯಾಡಾಬೊಮ್ಸ್ ಹೇಡರ್’ ಹೆಸರಿನ ಕಕೇಷ್ಯನ್ ಶೆಫರ್ಡ್ (Caucasian Shepherd) ಶ್ವಾನವು ಬರೋಬ್ಬರಿ 100 ಕೆ.ಜಿ ತೂಕವಿದೆ. ನೋಡಲು ಸಿಂಹದಂತೆಯೇ ಕಾಣುವ ಈ ಶ್ವಾನದ ತಲೆಬುರುಡೆ ಗಾತ್ರವು 38 ಇಂಚುಗಳಿದ್ದು, ಭುಜಗಳು 34 ಇಂಚುಗಳಿವೆ. ಅಲ್ಲದೇ ಶ್ವಾನದ ಕಾಲುಗಳು 2 ಲೀಟರ್ ಜ್ಯೂಸ್ ಬಾಟಲಿ ಗಾತ್ರದಷ್ಟು ದೊಡ್ಡದಾಗಿದೆ.

    ಕ್ಯಾಸ್ಪಿಯನ್ ಮತ್ತು ಕಪ್ಪು ಸಮುದ್ರ ಮಧ್ಯೆ ಇರುವ ಕಕೇಷ್ಯಾ ಪ್ರಾಂತ್ಯದ ಬಳಿ ಇರುವ ಕಕೇಷಿಯನ್ ಶೆಫರ್ಡ್ ಶ್ವಾನವನ್ನು (Caucasian Shepherd Dog) ಜಾನುವಾರುಗಳ ರಕ್ಷಣೆಗೆ ನೋಡಿಕೊಳ್ಳಲು ಸಾಕುತ್ತಾರೆ. ಈ ತಳಿಯ ಶ್ವಾನವು ಜಾರ್ಜಿಯಾ, ಅರ್ಮೇನಿಯಾ, ಅಜೆರ್ಬೈಜಾನ್, ಒಸ್ಸೆಟಿಯಾ, ಸರ್ಕಾಸಿಯಾ, ಟರ್ಕಿ, ರಷ್ಯಾ ಮತ್ತು ಡಾಗೆಸ್ತಾನ್ ದೇಶಗಳಲ್ಲಿ ಕಾಣಸಿಗುತ್ತವೆ. ಭಾರತ ದೇಶದಲ್ಲಿ ನೋಡಲು ಸಿಗೋದು ಅಪರೂಪ ಎಂದು ಸತೀಶ್ ಈ ಹಿಂದೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಮೊದಲ ನಿರ್ದೇಶನದ ಸಿನಿಮಾ ಬಗ್ಗೆ ಗುಡ್‌ ನ್ಯೂಸ್‌ ಕೊಟ್ರು ರಂಜನಿ ರಾಘವನ್

  • ನಾಲ್ಕೈದು ವರ್ಷದಿಂದ ಬೀದಿನಾಯಿಗಳಿಗೆ ಎರಡೊತ್ತು ಊಟ ಹಾಕ್ತಿರೋ ಉಮಾಶಂಕರ್

    ನಾಲ್ಕೈದು ವರ್ಷದಿಂದ ಬೀದಿನಾಯಿಗಳಿಗೆ ಎರಡೊತ್ತು ಊಟ ಹಾಕ್ತಿರೋ ಉಮಾಶಂಕರ್

    – ಲಾಕ್‍ಡೌನ್ ಹಿನ್ನೆಲೆ ಮೂರೊತ್ತು ಊಟ
    – ಪ್ರತಿ ದಿನ 500-700 ರೂ. ಖರ್ಚು ಮಾಡುವ ಉಮಾಶಂಕರ್

    ಚಿಕ್ಕಮಗಳೂರು: ಕೇವಲ ಲಾಕ್‍ಡೌನ್ ಸಮಯದಲ್ಲಿ ಮಾತ್ರವಲ್ಲ, ಕಳೆದ ನಾಲ್ಕೈದು ವರ್ಷಗಳಿಂದ ಬೀದಿ ನಾಯಿಗಳಿಗೆ ಎರಡು ಹೊತ್ತು ಊಟ ಹಾಕುವ ಮೂಲಕ ಚಿಕ್ಕಮಗಳೂರು ನಿವಾಸಿ ಉಮಾಶಂಕರ್ ಮಾನವೀಯತೆ ಮೆರೆಯುತ್ತಿದ್ದಾರೆ.

    ಬೀದಿ ನಾಯಿಗಳು ಆಹಾರವಿಲ್ಲದೆ ಪರದಾಡುವುದನ್ನು ಮನಗಂಡ ಇವರು ಪ್ರತಿ ದಿನ ಎರಡು ಹೊತ್ತು ಊಟ ಹಾಕುತ್ತಿದ್ದಾರೆ. ಪ್ರತಿ ದಿನ ಬೆಳಗ್ಗೆ-ಸಂಜೆ ಎರಡು ಗಂಟೆ ನಾಯಿಗಳಿಗಾಗೇ ಮೀಸಲಟ್ಟಿದ್ದಾರೆ. ಬೀದಿ-ಬೀದಿ ಸುತ್ತಿ ನಾಯಿಗಳಿಗೆ ಅನ್ನ ಹಾಕುತ್ತಾರೆ. ಕೇವಲ ಒಂದೆರಡು ಏರಿಯಾ ಅಲ್ಲ, ಇಡೀ ನಗರದ ಬೀದಿನಾಯಿಗಳ ಹಸಿವನ್ನು ಉಮಾಶಂಕರ್ ನೀಗಿಸುತ್ತಾರೆ.

    ನಗರದಲ್ಲಿ ವೆಲ್ಡಿಂಗ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿರುವ ಇವರಿಗೆ ಬೀದಿನಾಯಿಗಳೆಂದರೆ ಮಮಕಾರ. ಹೀಗಾಗಿ ಕಳೆದ ನಾಲ್ಕೈದು ವರ್ಷಗಳಿಂದ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಸ್ಕೂಟರ್ ನಲ್ಲಿ ಊಟ, ಬ್ರೆಡ್, ಬಿಸ್ಕೆಟ್ ಇಟ್ಟುಕೊಂಡು ಮನೆಯಿಂದ ಹೊರಟರೆ ಆಹಾರ ಖಾಲಿಯಾದ ಮೇಲೆ ಮನೆಗೆ ವಾಪಸ್ಸಾಗುತ್ತಾರೆ. ನಾಯಿಗಳಿಗೆಲ್ಲ ಬಿಸ್ಕೆಟ್ ತಿನಿಸುವ ಮೂಲಕ ಅವುಗಳ ಜೀವಗಳನ್ನು ಉಳಿಸುದ್ದಾರೆ. ಲಾಕ್‍ಡೌನ್ ಸಮಯದಲ್ಲೂ ಈ ಕಾಯಕವನ್ನು ಮುಂದುವರಿಸಿದ್ದು, ಪ್ರತಿ ದಿನ ನಾಯಿಗಳಿಗೆ ಆಹಾರ ನೀಡುತ್ತಾರೆ.

    ಪ್ರತಿದಿನ ಸಂಜೆ 5 ರಿಂದ 7ರವರೆಗೆ 2 ಗಂಟೆಗಳ ಕಾಲ ಸುಮಾರು 100 ರಿಂದ 150 ಬೀದಿನಾಯಿಗಳಿಗೆ ಊಟ ಹಾಕುತ್ತಾರೆ. ಲಾಕ್‍ಡೌನ್ ವೇಳೆಯಲ್ಲಿ ನಗರದ ಹೋಟೆಲ್‍ಗಳೆಲ್ಲ ಬಾಗಿಲು ಹಾಕಿದ್ದವು. ನಗರದ ಬೀದಿ ನಾಯಿಗಳೆಲ್ಲ ಊಟವಿಲ್ಲದೆ ಪರದಾಡುತ್ತಿದ್ದವು. ಇದನ್ನರಿತ ಉಮಾಶಂಕರ್ ಬೀದಿನಾಯಿಗಳನ್ನ ಹುಡುಕಿಕೊಂಡು ಹೋಗಿ ಮೂರು ಹೊತ್ತು ಊಟ ಹಾಕಿ ಹಸಿವು ನೀಗಿಸುತ್ತಿದ್ದಾರೆ.

    ಮನೆಯಲ್ಲಿ 3 ಡ್ಯಾಶ್‍ಎಂಡ್ ನಾಯಿಗಳನ್ನು ಸಾಕಿರುವ ಇವರಿಗೆ ಮನೆ ನಾಯಿಗಳಿಗಿಂತ ಬೀದಿನಾಯಿಗಳೆಂದರೆ ಪ್ರೀತಿ. ಹೀಗಾಗಿ ಪ್ರತಿದಿನ ನಾಯಿಗಳಿಗೋಸ್ಕರ ಕನಿಷ್ಠ 500 ರಿಂದ 700ರೂ. ಖರ್ಚು ಮಾಡುತ್ತಾರೆ. ಬ್ರೆಡ್, ಬಿಸ್ಕೆಟ್ ಜೊತೆಗೆ ಹಾಲು, ಮೊಸರು ಹಾಕುತ್ತಾರೆ. ಹಲವು ಬಾರಿ ಬಿರಿಯಾನಿ ಊಟವನ್ನೂ ಹಾಕಿ ನಾಯಿಗಳಿಗೂ ಖುಷಿ ಪಡಿಸುತ್ತಾರೆ. ಆದರೆ ತಾವು ಮಾಡುವ ಕೆಲಸವನ್ನು ಯಾರ ಬಳಿಯೂ ಹೇಳಿಕೊಂಡಿಲ್ಲ, ತಾನು ಮಾಡೋ ಕೆಲಸ ಖುಷಿ ಕೊಡುತ್ತೆ ಅದಕ್ಕೆ ಮಾಡುತ್ತಿದ್ದೇನೆ ಅಂತಾರೆ. ನಾಯಿಗಳು ಇವರನ್ನು ಕಂಡರೆ ಸಾಕು ಓಡಿ ಬಂದು ಮುತ್ತಿಹಾಕಿಕೊಳ್ಳುತ್ತವೆ.