Tag: ಶ್ವೇತಾ ತಿವಾರಿ

  • ಇಬ್ರಾಹಿಂ ಅಲಿ ಖಾನ್ ಜೊತೆಗಿನ ಡೇಟಿಂಗ್ ಸುದ್ದಿ ನಿಜಾನಾ? ಪಾಲಕ್ ತಿವಾರಿ ಸ್ಪಷ್ಟನೆ

    ಇಬ್ರಾಹಿಂ ಅಲಿ ಖಾನ್ ಜೊತೆಗಿನ ಡೇಟಿಂಗ್ ಸುದ್ದಿ ನಿಜಾನಾ? ಪಾಲಕ್ ತಿವಾರಿ ಸ್ಪಷ್ಟನೆ

    ಬಾಲಿವುಡ್ (Bollywood) ನಟಿ ಶ್ವೇತಾ ತಿವಾರಿ (Shwetha Tiwari) ಪುತ್ರಿ ಪಾಲಕ್ ತಿವಾರಿ (Palak Tiwari) ಕೂಡ ಬಿಟೌನ್ ಅಂಗಳದಲ್ಲಿ ನಾಯಕಿಯಾಗಿ ಮಿಂಚ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಿರುವ ನಟಿ ಪಾಲಕ್, ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ (Ibrahim Ali Khan) ಜೊತೆಗಿನ ಡೇಟಿಂಗ್ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

    ಸಲ್ಮಾನ್ ಖಾನ್ – ಪೂಜಾ ಹೆಗ್ಡೆ ನಟನೆಯ `ಕಿಸಿ ಕಾ ಭಾಯ್ ಕಿಸಿ ಕಾ ಜಾನ್’ ಚಿತ್ರದ ಮೂಲಕ ಪಾಲಕ್ ಎಂಟ್ರಿ ಕೊಡ್ತಿದ್ದಾರೆ. ಮತ್ತೊಂದಿಷ್ಟು ಸಿನಿಮಾಗಳು ನಟಿಯ ಕೈಯಲ್ಲಿದೆ. ಇದೀಗ ಸಂದರ್ಶನವೊಂದರಲ್ಲಿ ಇಬ್ರಾಹಿಂ ಜೊತೆಗಿನ ಲವ್ ರಿಲೇಷನ್‌ಶಿಪ್ ಬಗ್ಗೆ ನಟಿ ಪಾಲಕ್‌ ಅವರಿಗೆ ಕೇಳಲಾಗಿದೆ. ‘ನಾವಿಬ್ಬರೂ ಒಳ್ಳೆಯ ಸ್ನೇಹಿತರುʼ ಎಂದು ನಟಿ ಮಾತನಾಡಿದ್ದಾರೆ.

    ಎರಡು ಚಿತ್ರಗಳ ಶೂಟಿಂಗ್ ನನ್ನನ್ನು ತುಂಬಾ ಬ್ಯುಸಿಯಾಗಿರುವಂತೆ ಮಾಡಿದೆ, ಜೀವನದಲ್ಲಿ ತೃಪ್ತಿ ನೀಡಿದೆ. ಇದು ನನ್ನ ಏಕೈಕ ಗಮನ. ನನಗಿದು ಮಹತ್ವದ ವರ್ಷ, ನಾನು ವೃತ್ತಿಯಲ್ಲಿ ಒಂದು ಭಾಗವಾಗಿರುವುದರಿಂದ ಈ ವದಂತಿಗೆಲ್ಲಾ ಕಿವಿಗೊಡುವುದಿಲ್ಲ. ಕೆಲಸದ ಮೇಲೆ ಹೆಚ್ಚು ಗಮನ ಹರಿಸುತ್ತೇನೆ. ಪ್ರೀತಿಯನ್ನು ಎಂದಿಗೂ ಲೆಕ್ಕಾಚಾರ ಮಾಡಲು ಅಥವಾ ಊಹಿಸಲು ಸಾಧ್ಯವಿಲ್ಲ. ನನ್ನ ಕೆರಿಯರ್ ನನ್ನ ಮೊದಲ ಪ್ರಾಮುಖ್ಯತೆ. ಆದ್ದರಿಂದ ನಾನು ಅದರ ಮೇಲೆ ನನ್ನ ಶಕ್ತಿಯನ್ನು ಕೇಂದ್ರೀಕರಿಸುತ್ತಿದ್ದೇನೆ ಎಂದು ಪಾಲಕ್ ತಿವಾರಿ ಹೇಳಿದ್ದಾರೆ. ಇದನ್ನೂ ಓದಿ:‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ಈ ಹಿಂದೆ, ಪಾಲಕ್- ಇಬ್ರಾಹಿಂ ಜೊತೆ ರೆಸ್ಟೋರೆಂಟ್‌ನಿಂದ ಹೊರ ಬರುವಾಗ ಪಾಪರಾಜಿಗಳು ಫೋಟೋ ಕ್ಲಿಕ್ಕಿಸಿದ್ದರು. ಈ ವೇಳೆ ಪಾಲಕ್ ಮುಖ ಮುಚ್ಚಿಕೊಳ್ಳಲು ಪ್ರಯತ್ನಿಸಿದ್ದರು. ಈ ಬಗ್ಗೆ ಇದೀಗ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಮ್ಮನಿಗೆ ಫ್ರೆಂಡ್ಸ್ ಜೊತೆ ಹೊರಗಡೆ ಬರುವ ಬಗ್ಗೆ ಸುಳ್ಳು ಹೇಳಿದ್ದೆ, ಹಾಗಾಗಿ ಮುಖ ಮುಚ್ಚಿಡಲು ಪ್ರಯತ್ನಿಸಿದೆ ಎಂದು ನಟಿ ಮಾತನಾಡಿದ್ದಾರೆ.

  • ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ ಎಂದಿದ್ದ ನಟಿ ಕ್ಷಮೆ

    ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ ಎಂದಿದ್ದ ನಟಿ ಕ್ಷಮೆ

    ಭೋಪಾಲ್: ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಇದೀಗ ಕ್ಷಮೆಯಾಚಿಸಿದ್ದಾರೆ.

    ತನ್ನ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಫ್‍ಐಆರ್ ದಾಖಲಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ನಟಿ, ಪತ್ರಿಕಾಗೋಷ್ಠಿ ನಡೆಸಿ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಕೂಡ ದೇವರನ್ನು ಆರಾಧಿಸುತ್ತೇನೆ. ಹೀಗಾಗಿ ಉದ್ದೇಶಪೂರ್ವಕವಾಗಿ ನಾನು ಆ ಹೇಳಿಕೆಯನ್ನು ನೀಡಿಲ್ಲ. ನನ್ನ ನಿರ್ದಿಷ್ಟ ಹೇಳಿಕೆಯೇ ಬೇರೆ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಯಾರ ಭಾವನೆಗಳನ್ನು ನೋಯಿಸಲು ನಾನು ಇಷ್ಟಪಡುವುದಿಲ್ಲ. ಆದರೆ ಇದೀಗ ನನ್ನ ಹೇಳಿಕೆಯಿಂದ ಜನರ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬುದು ತಿಳಿದಿದೆ. ಹಾಗಾಗಿ ನನ್ನ ಈ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ. ನಟ ಸೌರಭ್ ರಾಜ್ ಜೈನ್ ಬಗ್ಗೆ ಮಾತನಾಡುತ್ತಿದ್ದ ವೇಳೆ ಅವರನ್ನು ಭಗವಾನ್ ಎಂದು ಉದಾಹರಣೆಯಾಗಿ ಬಳಸಿದ್ದೇನೆ. ಉದ್ದೇಶಪೂರ್ವಕವಾಗಿ ಈ ಹೇಳಿಕೆ ನೀಡಿಲ್ಲ ಎಂದು ನಟಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 15 ದಿನದ ಹಿಂದೆಯಷ್ಟೇ ಪತಿ ಜೊತೆಗೆ ಕಾಲೇಜಿಗೆ ತೆರಳಿ ಹಳೆ ಸ್ನೇಹಿತರನ್ನು ಮಾತಾಡಿಸಿದ್ದ ಸೌಂದರ್ಯ!

    ವೈರಲ್ ಆಗಿದ್ದೇನು..?
    ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಕಿಡಿಕಾರಿದ್ದರು. ಇದನ್ನೂ ಓದಿ: ಅತ್ತಿಗೆಯಾಗಬೇಕಿದ್ದವಳ ಮೇಲೆ ಕಣ್ಣಾಕಿದ್ದ ಸಹೋದರನ ಕತ್ತು ಸೀಳಿದ ಅಣ್ಣ!

    ತನಿಖೆಗೆ ಸೂಚನೆ:
    ನಟಿಯ ಈ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಕಮಿಷನರ್ ಗೆ ತ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಶ್ವೇತಾ ತಿವಾರಿ ಅವರು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅಲ್ಲದೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ನನಗೆ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

  • ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ- ಶ್ವೇತಾ ತಿವಾರಿ ವಿವಾದಾತ್ಮಕ ಹೇಳಿಕೆ

    ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ- ಶ್ವೇತಾ ತಿವಾರಿ ವಿವಾದಾತ್ಮಕ ಹೇಳಿಕೆ

    ಭೋಪಾಲ್: ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಅವರು ಹೇಳಿಕೆಯೊಂದನ್ನು ನೀಡಿ ಇದೀಗ ವಿವಾದಕ್ಕೀಡಾಗಿದ್ದಾರೆ. ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.

    ತಮ್ಮ ಮುಂಬರುವ ವೆಬ್ ಸೀರಿಸ್ ವೇಳೆ ನಟಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ.

    ಶ್ವೇತಾ ಹೇಳಿದ್ದೇನು..?
    ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಗನ ವಿಚ್ಛೇದನಕ್ಕೆ ನಿಜವಾದ ಕಾರಣವನ್ನು ಬಹಿರಂಗ ಪಡಿಸಿದ ನಾಗಾರ್ಜುನ

    ತನಿಖೆಗೆ ಸೂಚನೆ:
    ನಟಿಯ ಈ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಕಮಿಷನರ್ ಗೆ ತ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಶ್ವೇತಾ ತಿವಾರಿ ಅವರು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅಲ್ಲದೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ನನಗೆ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.