Tag: ಷಷ್ಠಿ

  • ರಾಮನಾಥಪುರದಲ್ಲಿ ಅದ್ಧೂರಿ ಷಷ್ಠಿ ರಥೋತ್ಸವ

    ರಾಮನಾಥಪುರದಲ್ಲಿ ಅದ್ಧೂರಿ ಷಷ್ಠಿ ರಥೋತ್ಸವ

    ಹಾಸನ: ರಾಜ್ಯದ ಎರಡನೇ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಹಾಸನ (Hassan) ಜಿಲ್ಲೆ, ಅರಕಲಗೂಡು (Arakalgud) ತಾಲೂಕಿನ, ರಾಮನಾಥಪುರದಲ್ಲೂ (Ramanathapura) ಇಂದು ಶ್ರೀ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿಯ ಮೊದಲ ಷಷ್ಠಿ (Shasti) ರಥೋತ್ಸವ (Chariot Festival) ಅದ್ಧೂರಿಯಿಂದ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿ ರಥಕ್ಕೆ ಹಣ್ಣು-ಜವನ ಎಸೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

    ಈ ಕ್ಷೇತ್ರದ ವಿಶೇಷತೆ ಎಂದರೆ, ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subrahmanya) ಹೋಗಲಾಗದವರು, ರಾಮನಾಥಪುರದ ಕಾವೇರಿ ನದಿಯಲ್ಲಿ ಮಿಂದು, ವಿಶೇಷ ಪೂಜೆ ಸಲ್ಲಿಸಿದರೆ ಸಾಕು ಕಂಕಣಭಾಗ್ಯ, ರೋಗ-ರುಜಿನ ನಿವಾರಣೆ ಸೇರಿ ಬೇಡಿಕೊಂಡಿದ್ದು ಈಡೇರಲಿದೆ ಎಂಬ ಪ್ರತೀತಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವುದರಿಂದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮೋದಿ ಭೇಟಿಯಾಗ್ತೀನಿ ಎಂದ ಸಿದ್ದರಾಮಯ್ಯ; ಕಾರಣ ಏನು?

    ಸುಪ್ರಸಿದ್ಧ ಕುಕ್ಕೆಸುಬ್ರಹ್ಮಣ್ಯ ರಥೋತ್ಸವ ದಿನದಂದೇ ರಾಮನಾಥಪುರದಲ್ಲೂ ಷಷ್ಠಿಯಂದು ಅದ್ಧೂರಿ ರಥೋತ್ಸವ ಜರುಗಿತು. ಮಧ್ಯಾಹ್ನ 12:30ಕ್ಕೆ ಸರಿಯಾಗಿ ಅಲಂಕೃತ ರಥ, ರಾಮನಾಥಪುರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸುಬ್ರಹ್ಮಣ್ಯಸ್ವಾಮಿ ಉತ್ಸವಮೂರ್ತಿ ಹೊತ್ತ ರಥ, ರಾಜಬೀದಿಗಳಲ್ಲಿ ಸಾಗುವ ಮುನ್ನ ದೈವೀ ಸ್ವರೂಪ ಎನಿಸಿರುವ ಗರುಡ ನಭದಲ್ಲಿ ಹಾರಾಡಿದರೆ ಶುಭ ಸೂಚನೆ ಎಂಬ ನಂಬಿಕೆ ಹಿಂದಿನಿಂದಲೂ ಇರುವುದರಿಂದ ಇಂದೂ ಸಹ ಗರುಡ ಪ್ರತ್ಯಕ್ಷವಾದ ನಂತರವೇ ರಥ ಮುಂದೆ ಸಾಗಿತು. ಇದನ್ನೂ ಓದಿ: ನನ್ನ ತಂಟೆಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ, ಮುಂದೆಯೂ ಬಂದರೆ ಸುಮ್ನೆ ಬಿಡಲ್ಲ: ಶೆಟ್ಟರ್ ವಾರ್ನಿಂಗ್

    ಸುಬ್ರಹ್ಮಣ್ಯಸ್ವಾಮಿ ರಥ ಪೂರ್ವಾಭಿಮುಖವಾಗಿ ಸಾಗುತ್ತಿದ್ದಂತೆಯೇ ಜಿಲ್ಲೆ ಹಾಗೂ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು, ಹಣ್ಣು-ಜವನ ಎಸೆದು ಜಯಘೋಷ ಮೊಳಗಿಸಿ ತಮ್ಮ ಭಕ್ತಿ ಭಾವ ಪ್ರದರ್ಶನ ಮಾಡಿದರು. ವರ್ಷಕ್ಕೊಮ್ಮೆ ಒಂದು ತಿಂಗಳ ಕಾಲ ನಡೆಯುವ ಷಷ್ಠಿ ಉತ್ಸವದ ವೇಳೆ ಆಗಮಿಸಿ ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರೆ ಅಂದುಕೊಂಡಿದ್ದೆಲ್ಲಾ ಈಡೇರಲಿದೆ ಎಂಬ ನಂಬಿಕೆ ಇದೆ. ಕಂಕಣಭಾಗ್ಯ, ಸಂತಾನ ಫಲ ಹಾಗೂ ಚರ್ಮ ರೋಗದಂಥ ಆರೋಗ್ಯ ಸಮಸ್ಯೆಗಳು ಶ್ರೀ ಕ್ಷೇತ್ರಕ್ಕೆ ಬಂದು ಹೋದರೆ ಗುಣವಾಗಲಿವೆ. ಪ್ರಸನ್ನ ಸುಬ್ರಹ್ಮಣ್ಯನ ಸನ್ನಿಧಿ ಅನೇಕ ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿರುವುದರ ಸಾವಿರಾರು ವರ್ಷಗಳಿಂದಲೂ ರಾಮನಾಥಪುರಕ್ಕೆ ಅದರದ್ದೇ ಮಹತ್ವವಿದೆ. ಇದನ್ನೂ ಓದಿ: ಮಕ್ಕಳೊಂದಿಗೆ ಮಗುವಾದ ಮೋದಿ – ತನಗಾಗಿ ವಿಶೇಷ ಕವಿತೆ ಹಾಡಿದ ಬಾಲಕಿಗೆ ಭೇಷ್‌ ಎಂದ ಪ್ರಧಾನಿ

    ಶ್ರೀ ಕ್ಷೇತ್ರದ ಮತ್ತೊಂದು ವಿಶೇಷ ಎಂದರೆ, ರಥೋತ್ಸವ ವೇಳೆ ಇಲ್ಲಿಗೆ ಬಂದು ಹಣ್ಣು ತುಪ್ಪದ ಹರಕೆ ತೀರಿಸಿದರೆ ಚರ್ಮರೋಗದಂಥ ಕಾಯಿಲೆ ವಾಸಿಯಾಗುತ್ತದೆ. ಕಾವೇರಿ ನದಿಯಲ್ಲಿ ಮಿಂದು ಗಂಗೆ ಪೂಜೆ ಮಾಡಿದರೆ ಮಕ್ಕಳಾಗುತ್ತವೆ ಎನ್ನುವ ಪ್ರತೀತಿ ಇದೆ. ಹೀಗಾಗಿಯೇ ಇದಕ್ಕೆಂದು ಹರಕೆ ಕಟ್ಟಿಕೊಂಡಿದ್ದ ಹೆಂಗಸರು, ನವಜೋಡಿ ಆಗಮಿಸಿ ಪೂಜೆ ಸಲ್ಲಿಸೋದು ವಾಡಿಕೆ. ಮತ್ತೊಂದು ವಿಶೇಷ ಎಂದರೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲಾಗದವರು ರಾಮನಾಥಪುರಕ್ಕೆ ಬಂದು ಪೂಜಿಸಿದರೆ ಸಾಕು ಎಂಬ ವಾಡಿಕೆ ಇರುವುದರಿಂದ ಇದನ್ನು ಬಡವರ ಕಾಶಿ ಎಂದು ಕರೆಯುತ್ತಾರೆ. ಇದೇ ಕಾರಣಕ್ಕೆ ಯಾವುದೇ ರೀತಿಯ ಬೇಧ-ಭಾವ ಇಲ್ಲದೇ ಅಪಾರ ಭಕ್ತ ಸಂಗಮವೇ ಇಲ್ಲಿ ಮೇಳೈಸುತ್ತದೆ. ಇದನ್ನೂ ಓದಿ: ಇಂದು ದೆಹಲಿಗೆ ತೆರಳಲಿರುವ ಸಿಎಂಗೆ ಆರ್. ಅಶೋಕ್ ಕಿವಿಮಾತು

    ಇಂದಿನಿಂದ ಒಂದು ತಿಂಗಳ ರಾಮನಾಥಪುರದಲ್ಲಿ ಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು, ನಿತ್ಯವೂ ಸಾವಿರಾರು ಭಕ್ತರು ಬಂದು ಕಾವೇರಿ ನದಿಯಲ್ಲಿ ಮಿಂದು ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಹೋಗುತ್ತಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಬಿಜೆಪಿ ಇರುವುದ್ರಿಂದ ಪ್ರತಾಪ್ ಸಿಂಹನ ರಕ್ಷಣೆ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಆಕ್ರೋಶ

  • ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ: ಖಾಲಿದ್ ಆಕ್ರೋಶ

    ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ: ಖಾಲಿದ್ ಆಕ್ರೋಶ

    ಬೆಂಗಳೂರು: ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದರು.

    ಕುಕ್ಕೆ ಸುಬ್ರಹ್ಮಣ್ಯದ (Kukke Sri Subrahmanya Swami Temple) ಚಂಪಾಷಷ್ಠಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಧರ್ಮದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಮರು ಅವರ ಪರವಾಗಿ ನಿಲ್ಲುವುದಿಲ್ಲ. ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲುವುದನ್ನು ನಾವು ನೋಡಿದ್ದೇವೆ. ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ. ಮುಸ್ಲಿಂ ಅವರನ್ನು ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜಾತಿಥ್ಯ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ ಎಂದು ಕಿಡಿಕಾರಿದರು.

    ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ. ತಪ್ಪು ನಡೆದಾಗ ಮೌನವಾಗಿ ಇರುತ್ತೇವೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ, ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡಬೇಡಿ ಎಂದ ಅವರು, ಒಂದು ಸಮಾಜ ಶಾಂತಿ ಇರಬೇಕು ಅಂದರೆ ಎಲ್ಲಾ ಜಾತಿಯರು ಚೆನ್ನಾಗಿರಬೇಕು. ಅದು ಅವಶ್ಯಕತೆ ಹಾಗೂ ಅನಿವಾರ್ಯತೆ ಕೂಡವಾಗಿದೆ. ಇಲ್ಲಾಂದ್ರೆ ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಕಿಡಿಕಾರಿದರು.

    kukke subramanya

    ಮುಸ್ಲಿಂ ವ್ಯಾಪಾರ ಬಹಿಷ್ಕಾರ : ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಇದನ್ನೂ ಓದಿ: ಮತ್ತೆ ಧರ್ಮ ದಂಗಲ್ ಶುರು- ಕುಕ್ಕೆಯಲ್ಲಿ ಷಷ್ಠಿ ವೇಳೆ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ

    ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಮಹೋತ್ಸವವಾದ ಚಂಪಾ ಷಷ್ಠೀಯ ಸಂದರ್ಭದಲ್ಲಿ ದೇವಸ್ಥಾನದ ವಠಾರದಲ್ಲಿ ಸಾಕಷ್ಟು ಸಂಖ್ಯೆಯ ತಾತ್ಕಾಲಿಕ ವ್ಯಾಪಾರ ಮಳಿಗೆಗಳನ್ನು ಹಾಕಲಾಗುತ್ತದೆ. ಪ್ರತಿವರ್ಷ ಹಿಂದೂ ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ ಇಲ್ಲಿ ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಹಿಂದೂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ವ್ಯಾಪಾರ ನಡೆಸದಂತೆ ತಡೆಯಲು ಪ್ರಯತ್ನಿಸಿದ್ದಾರೆ. ಇದು ಚರ್ಚೆಗೆ ವೇದಿಕೆಯಾಗಿದ್ದು ಪರ-ವಿರೋಧಗಳು ಆರಂಭಗೊಂಡಿದೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಧರ್ಮ ದಂಗಲ್ ಶುರು- ಕುಕ್ಕೆಯಲ್ಲಿ ಷಷ್ಠಿ ವೇಳೆ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ

    ಮತ್ತೆ ಧರ್ಮ ದಂಗಲ್ ಶುರು- ಕುಕ್ಕೆಯಲ್ಲಿ ಷಷ್ಠಿ ವೇಳೆ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ

    ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ.

    ಹೌದು. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯ (Kukke Sri Subrahmanya Swami Temple) ದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಮಾತ್ರವಲ್ಲ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆ (Subrahmanya Police Station) ಗೆ ದೂರು ನೀಡಿದ್ದು ಕ್ಷೇತ್ರದ ಪಾವಿತ್ರ್ಯತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೆ.ಎಲ್.ರಾಹುಲ್

    ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಮಹೋತ್ಸವವಾದ ಚಂಪಾ ಷಷ್ಠೀಯ ಸಂದರ್ಭದಲ್ಲಿ ದೇವಸ್ಥಾನದ ವಠಾರದಲ್ಲಿ ಸಾಕಷ್ಟು ಸಂಖ್ಯೆಯ ತಾತ್ಕಾಲಿಕ ವ್ಯಾಪಾರ ಮಳಿಗೆಗಳನ್ನು ಹಾಕಲಾಗುತ್ತದೆ. ಪ್ರತೀ ವರ್ಷ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ ಇಲ್ಲಿ ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಹಿಂದೂಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ವ್ಯಾಪಾರ ನಡೆಸದಂತೆ ತಡೆಯಲು ಪ್ರಯತ್ನಿಸಿದ್ದಾರೆ. ಇದು ಚರ್ಚೆಗೆ ವೇದಿಕೆಯಾಗಿದ್ದು ಪರ-ವಿರೋಧಗಳು ಆರಂಭಗೊಂಡಿದೆ.

    ವ್ಯಾಪಾರ ಬಾಯ್ಕಾಟ್ ಇದು ಹೊಸತೇನಲ್ಲದಿದ್ರೂ ಇದೀಗ ಮಂಗಳೂರು ಬಾಂಬ್ ಸ್ಫೋಟ (Mangaluru Bomb Blast) ದ ಬಳಿಕ ಧರ್ಮದ ವಿಚಾರದಲ್ಲಿ ಸದ್ದು ಮಾಡ್ತಿದೆ. ಒಟ್ಟಿನಲ್ಲಿ ಕೆಲದಿನಗಳ ಕಾಲ ತಣ್ಣಗಿದ್ದ ಕರಾವಳಿಯಲ್ಲಿ ಮತ್ತೆ ಧರ್ಮದ ವಿಚಾರಗಳ ವಿವಾದಗಳು ಆರಂಭಗೊಂಡಂತಿದೆ.

    Live Tv
    [brid partner=56869869 player=32851 video=960834 autoplay=true]

  • ಮಡಿಕೇರಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ

    ಮಡಿಕೇರಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ

    ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ಇಂದು ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿತ್ತು. ನಗರದ ಮುತ್ತಪ್ಪ ದೇವಾಲಯದ ಉತ್ಸವ ಸಮಿತಿ ವತಿಯಿಂದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ಜರುಗಿದವು. ಪೂಜೆಯಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

    ದೇಗುಲದ ಸುತ್ತ ತಳಿರು-ತೋರಣ, ಹೂವಿನೊಂದಿಗೆ ಶೃಂಗರಿಸಲಾಗಿತ್ತು. ಸರತಿ ಸಾಲಿನಲ್ಲಿ ನಿಂತು ಭಕ್ತರು ವಿವಿಧ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ, ಪಂಚ ಕಜ್ಜಾಯ ಸೇವೆ, ಹಣ್ಣು ಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ ನಡೆಯಿತು. ವಿಶೇಷವಾಗಿ ಮುತ್ತಪ್ಪನ್ ಹಾಗೂ ಸುಬ್ರಹ್ಮಣ್ಯ ದೇವರ ಅರಧಾನೆ ನಡೆಯಿತು. ಇದೇ ಸಂದರ್ಭದಲ್ಲಿ ದೇವಾಲಯ ಅವರಣದಲ್ಲಿ ಹರಕೆಯಾಗಿ ನವಜೋಡಿಗಳ ಮದುವೆ ಕಾರ್ಯವು ನೇರವೇರಿತು.

    ನಗರದ ಓಂಕಾರೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ, ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು. ಕೋವಿಡ್ 19 ಇರುವ ಕಾರಣದಿಂದ ಈ ಬಾರಿ ದೇವಾಲಯದಲ್ಲಿ ಭಕ್ತರ ಸಂಖ್ಯೆ ಅತ್ಯಂತ ವಿರಳವಾಗಿತ್ತು.

  • ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಾಜಮಾರ್ಗದಲ್ಲಿ ಭಕ್ತ ಸಾಗರ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಾಜಮಾರ್ಗದಲ್ಲಿ ಭಕ್ತ ಸಾಗರ

    ಮಂಗಳೂರು: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಆನೆಯೊಂದಿಗೆ ರಥೋತ್ಸವ ಸಂಭ್ರಮ ನಡೆಯಿತು.

    ಕೋಟ್ಯಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ ಹಿಂದಿನ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಈ ಅಪರೂಪದ ಕ್ಷಣಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದಾರೆ. ಮುಂಜಾನೆ 6.41 ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.

    ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಮೊದಲು ಉಮಾಮಹೇಶ್ವರ ದೇವರ ಸಣ್ಣ ರಥ ಮುಂದೆ ಸಾಗಿದರೆ, ಅದರ ಹಿಂದೆ ಸುಬ್ರಹ್ಮಣ್ಯ ಬ್ರಹ್ಮರಥ ದಲ್ಲಿ ಸಾಗಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. 400 ವರ್ಷಕ್ಕೂ ಹಳೆಯ ಬ್ರಹ್ಮರಥದಲ್ಲಿ ಕೊನೆಯ ಬಾರಿ ರಥೋತ್ಸವ ನಡೆದಿದ್ದು, ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಉದ್ಯಮಿ ಮುತ್ತಪ್ಪ ರೈ ಎರಡು ಕೋಟಿ ವೆಚ್ಚದಲ್ಲಿ ನೂತನ ಬ್ರಹ್ಮರಥ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಲಿದ್ದಾರೆ.

    ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv