Tag: ಷಹಜಹಾನ್‌

  • TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

    TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮುಗ್ಧ ಮತ್ತು ಬಡ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ಭೂಕಬಳಿಕೆ ಆರೋಪ ಹೊತ್ತಿದ್ದ ತೃಣಮೂಲ ಕಾಂಗ್ರೆಸ್ ಪ್ರಭಾವಿ ನಾಯಕ ಶೇಖ್ ಷಹಜಹಾನ್‌ನನ್ನ ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ (Calcutta High Court) ಆದೇಶಿಸಿದೆ.

    ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (Abhishek Banerjee), ನ್ಯಾಯಾಲಯವು ಪೊಲೀಸರ ಕೈಗಳನ್ನು ಕಟ್ಟಿಹಾಕಿದ ಕಾರಣ ಬಂಗಾಳ ಸರ್ಕಾರವು ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೆ ನೀಡಿದ ಒಂದು ದಿನದ ನಂತರ ಕೋಲ್ಕತ್ತಾ ಹೈಕೋರ್ಟ್ ಬಂಧನಕ್ಕೆ ಆದೇಶಿಸಿದೆ. ಇದನ್ನೂ ಓದಿ: ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    ಲೈಂಗಿಕ ಕಿರುಕುಳ ಹಾಗೂ ಭೂಕಬಳಿಕೆ ಆರೋಪ ಹೊತ್ತಿರುವ ಪ್ರಮುಖ ಆರೋಪಿ ಶೇಖ್ ಷಹಜಹಾನ್‌ನನ್ನು (Sheikh Shahjahan) ಬಂಧಿಸದಂತೆ ಬಂಗಾಳ ಪೊಲೀಸರಿಗೆ (Bengal Police) ಯಾರೂ ಹೇಳಿಲ್ಲ. ಯಾವುದೇ ಹಂತದಲ್ಲೂ ಬಂಧನಕ್ಕೆ ಅಡೆತಡೆ ಇಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸುತ್ತದೆ. ಷಹಜಹಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ಎಂದು ಹೆಸರಿಸಲಾಗಿದೆ. ಆದ್ದರಿಂದ ನಿಸ್ಸಂಶಯವಾಗಿ ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಹೇಳಿದೆ.

    ಶಹಜಹಾನ್ ಮತ್ತು ಅವರ ಸಹಚರರಿಂದ ಬುಡಕಟ್ಟು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಮತ್ತು ಭೂಕಬಳಿಕೆ ಮಾಡಿದ್ದಾರೆ ಎಂದು ಟಿಎಂಸಿ ಪ್ರಭಾವಿ ವಿರುದ್ಧ ಆರೋಪಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಾನವ ಹಕ್ಕುಗಳ ಆಯೋಗ, ಸಂದೇಶ್‌ಖಾಲಿಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನೂ ಕಳುಹಿಸಿತ್ತು. ಇದಾದ ನಂತರ ಷಹಜಹಾನ್ ಬಂಧನ ವಿಳಂಭಕ್ಕೆ ನ್ಯಾಯಾಲಯವೇ ಕಾರಣ ಎಂದು ದೂರಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಬಂಧಿಸುವಂತೆ ತಿಳಿಸಿದೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

    ಈ ಸಂಬಂಧ ಸೋಮವಾರ ವಿಚಾರಣೆ ನಡೆಸಿದ ಕೋರ್ಟ್, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ ವರೆಗೆ 43 ಎಫ್‌ಐಆರ್‌ಗಳು ದಾಖಲಾಗಿವೆ. 42 ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನೂ ಬುಡಕಟ್ಟು ಜನರ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 8 ರಿಂದ 26ರ ವರೆಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 24 ಪ್ರಕರಣಗಳು ದಾಖಲಾಗಿದೆ ಎಂಬುದನ್ನು ಪರಿಗಣಿಸಿದೆ. ಅಲ್ಲದೇ ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸದೇ ಇರೋದಕ್ಕೆ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.

    ಬಿಜೆಪಿಗೆ ಸೇರಿ ಪಾಪ ತೊಳೆದುಕೊಳ್ಳಿ: ಟಿಎಂಸಿ ಮುಖಂಡನ ಬಂಧನಕ್ಕೆ ಕೋರ್ಟ್ ಆದೇಶಿಸಿದ ನಂತರ ಬಿಜೆಪಿ ನಾಯಕರು ಮಮತಾ ಬ್ಯಾನರ್ಜಿ ಮತ್ತು ಅವರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಟಿಎಂಸಿ ನಾಯಕರ ಮೇಲೆ ನಡೆಸಿದ್ದ ಇಡಿ ದಾಳಿಗಳನ್ನು ಉಲ್ಲೇಖಿಸುತ್ತಾ, ಬಿಜೆಪಿಗೆ ಸೇರಿ ಪಾಪ ತೊಳೆದುಕೊಳ್ಳಬಹುದು ಎಂದು ಕುಟುಕಿದ್ದಾರೆ.

  • ತಾಜ್ ಮಹಲ್‌ಗೆ 3 ದಿನಗಳ ಉಚಿತ ಪ್ರವೇಶ

    ತಾಜ್ ಮಹಲ್‌ಗೆ 3 ದಿನಗಳ ಉಚಿತ ಪ್ರವೇಶ

    ಲಕ್ನೋ: ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿರುವ ಭಾರತದ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ಭೇಟಿಗೆ 3 ದಿನಗಳ ಉಚಿತ ಪ್ರವೇಶ ಘೋಷಿಸಲಾಗಿದೆ.

    ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ) ಫೆಬ್ರವರಿ 27, 28 ಹಾಗೂ ಮಾರ್ಚ್ 1ರಂದು ಪ್ರವಾಸಿಗರಿಗೆ ಉಚಿತ ಪ್ರವೇಶ ನೀಡುವುದಾಗಿ ತಿಳಿಸಿದೆ. ಈ 3 ದಿನ ತಾಜ್ ಮಹಲ್‌ನಲ್ಲಿ ಷಹಜಹಾನ್‌ನ ಉರ್ಸ್ ಆಚರಿಸಲಾಗುವುದು. ಹೀಗಾಗಿ ಈ 3 ದಿನಗಳಲ್ಲಿ ಪ್ರವಾಸಿಗರು ವಿನಾಯಿತಿ ಪಡೆಯಲಿದ್ದಾರೆ ಎಂದು ತಿಳಿಸಿದೆ.

    ಪ್ರತಿ ವರ್ಷ ಉರುಸ್ ಆಚರಣೆ ಸಂದರ್ಭದಲ್ಲಿ ಈ ವಿನಾಯಿತಿಯನ್ನು ನೀಡಲಾಗುತ್ತದೆ. ಇದರೊಂದಿಗೆ ವಿಶ್ವ ಪ್ರವಾಸೋದ್ಯಮ ದಿನದಂದು ಕೂಡಾ ತಾಜ್ ಮಹಲ್‌ನಲ್ಲಿ ಪ್ರವೇಶ ಉಚಿತವಾಗಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ

    ತಾಜ್ ಮಹಲ್‌ನಲ್ಲಿ ಮುಮ್ತಾಜ್ ಮಹಲ್‌ನ ಸಮಾಧಿ ಇದೆ. ಷಹಜಹಾನ್‌ನನ್ನು ಅವನ ಪತ್ನಿಯೊಂದಿಗೆ ಸಮಾಧಿ ಮಾಡಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಅನುಮತಿಗೆ ಅನುಗುಣವಾಗಿ ಪ್ರತಿ ವರ್ಷ ಚಕ್ರವರ್ತಿಯ ಷಹಜಹಾನ್ ಮೃತಪಟ್ಟ ದಿನದಂದು ಇಲ್ಲಿ ಉರುಸ್ ನಡೆಯುತ್ತದೆ

    ಫೆಬ್ರವರಿ 27ರಂದು ಷಹಜಹಾನ್‌ನ ಉರುಸ್ ಮೊದಲ ದಿನ. ಅಂದು ಮಧ್ಯಾಹ್ನ 2 ಗಂಟೆಯಿAದ ಸೂರ್ಯಾಸ್ತದ ವರೆಗೆ ಎಲ್ಲಾ ಪ್ರವಾಸಿಗರಿಗೂ ಉಚಿತ ಪ್ರವೇಶ ಇರಲಿದೆ. ಫೆಬ್ರವರಿ 28 ರಂದು ಹಿಂದಿನ ದಿನದ ವೇಳಾಪಟ್ಟಿ ಅನುಸರಿಸಲಾಗುತ್ತದೆ. ಮಾರ್ಚ್ 1 ಉರುಸ್ ಕೊನೆಯ ದಿನ ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ಉಚಿತ ಪ್ರವೇಶ ಇರಲಿದೆ ಎಂದು ಎಎಸ್‌ಐನ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಡಾ. ರಾಜ್‌ಕುಮಾರ್ ಪಟೇಲ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ

    ಷಹಜಹಾನ್‌ನ 3 ದಿನಗಳ ಉರುಸ್ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ ಇರಲಿದೆ. ಹೀಗಾಗಿ ತಾಜ್ ಮಹಲ್‌ನ ಭದ್ರತಾ ವ್ಯವಸ್ಥೆ ಬಲಪಡಿಸಲಾಗುತ್ತದೆ. ಉಚಿತ ಪ್ರವೇಶ ಪಡೆಯುವ ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ.