Tag: ಷೇರು ಮಾರುಕಟ್ಟೆ

  • ಬಿಜೆಪಿಗೆ ಗೆಲುವು | ಹೂಡಿಕೆದಾರರ ಸಂಪತ್ತು ಒಂದೇ ದಿನ 14 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌, ನಿಫ್ಟಿ

    ಬಿಜೆಪಿಗೆ ಗೆಲುವು | ಹೂಡಿಕೆದಾರರ ಸಂಪತ್ತು ಒಂದೇ ದಿನ 14 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌, ನಿಫ್ಟಿ

    ಮುಂಬೈ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮೋದಿ(PM Narendra Modi) ನೇತೃತ್ವದ ಎನ್‌ಡಿಎ ಒಕ್ಕೂಟ 350ಕ್ಕೂ ಹೆಚ್ಚು ಸ್ಥಾನ ಗೆದ್ದು ಮೂರನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ ಹೂಡಿಕೆದಾರರ ಸಂಪತ್ತು ಒಂದೇ ದಿನ 14 ಲಕ್ಷ ಕೋಟಿ ರೂ. ಹೆಚ್ಚಳವಾಗಿದೆ.

    ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನ ದಿನ ಬಾಂಬೆ ಷೇರು ಮಾರುಕಟ್ಟೆ (BSE) ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ (Sensex) ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ (NSE) ಸೂಚಂಕ್ಯ ನಿಫ್ಟಿ (Nifty) ಸಾರ್ವಕಾಲಿಕ ಎತ್ತರಕ್ಕೆ ಜಿಗಿದು ದಾಖಲೆ ಬರೆದಿದೆ. ಇದನ್ನೂ ಓದಿ: ಆರ್‌ಬಿಐನಿಂದ ಸಾಧನೆ – ಯುಕೆಯಿಂದ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ!

     

    ಸೆನ್ಸೆಕ್ಸ್‌ ಇಂದು ಒಂದೇ ದಿನ ಬರೋಬ್ಬರಿ 2,507.47 ಅಂಶ ಏರಿಕೆಯಾಗಿ ಅಂತಿಮವಾಗಿ 76,468.78 ರಲ್ಲಿ ಕೊನೆಯಾಯಿತು. ನಿಫ್ಟಿ 733 ಅಂಶ ಏರಿಕೆಯಾಗಿ 23,263.90 ರಲ್ಲಿ ಇಂದಿನ ವಹಿವಾಟನ್ನು ಮುಗಿಸಿತು. ಈ ಹಿಂದೆ ಸೆನ್ಸೆಕ್ಸ್‌ ಮತ್ತು ನಿಫ್ಟಿ 2021 ಜನವರಿಯಲ್ಲಿ 5% ಏರಿಕೆಯಾಗಿತ್ತು. ಮೂರು ವರ್ಷದ ಬಳಿಕ ಸೆನ್ಸೆಕ್ಸ್‌ ಮತ್ತು ನಿಫ್ಟಿ 50 ಭರ್ಜರಿ ಏರಿಕೆ ಕಂಡಿದೆ. ಇದನ್ನೂ ಓದಿ: ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ದಾಖಲೆ – Zerodha, CDSL ಸರ್ವರ್‌ ಡೌನ್‌, ಹೂಡಿಕೆದಾರರ ಆಕ್ರೋಶ 

    ಸರ್ಕಾರಿ ಸ್ವಾಮ್ಯದ ಕಂಪನಿಗಳು, ಬ್ಯಾಂಕ್‌ಗಳು, ಅದಾನಿ ಕಂಪನಿಗಳು ಸೇರಿದಂತೆ ಬಹುತೇಕ ಕಂಪನಿಗಳ ಷೇರು ಬೆಲೆಗಳು ಏರಿಕೆ ಕಂಡಿವೆ. ಗೇಲ್‌ ಪ್ರತಿ ಷೇರಿನ ಬೆಲೆ 26.50 ರೂ. (12.97%), ಪವರ್‌ ಫೈನಾನ್ಸ್‌ 62.35 ರೂ. (12.66%), ಆರ್‌ಇಸಿ 66.75 ರೂ.(12.41%), ಬ್ಯಾಂಕ್‌ ಆಫ್‌ ಬರೋಡಾ 32.05 ರೂ. (12.10%), ಅದಾನಿ ಪೋರ್ಟ್ಸ್‌ ರೂ. 146.55(10.20%) ಏರಿಕೆ ಕಂಡಿದೆ.

    ಏರಿಕೆಗೆ ಕಾರಣ ಏನು?
    ಸತತ ಮೂರನೇ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಏರಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದ ಹಿನ್ನೆಲೆಯಲ್ಲಿ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ ಪರಿಣಾಮ ಸೆನ್ಸೆಕ್ಸ್‌ ಮತ್ತು ನಿಫ್ಟಿ ಏರಿಕೆ ಕಂಡಿದೆ. ಈ ಹಿಂದೆಯೂ ವಿಧಾನಸಭಾ ಚುನಾವಣೆಗಳ ಫಲಿತಾಂಶದ ದಿನ ಬಿಜೆಪಿ ಜಯಗಳಿಸಿದ ಸಮಯದಲ್ಲೂ ಸೆನ್ಸೆಕ್ಸ್‌ ಮತ್ತು ನಿಫ್ಟಿ ಏರಿಕೆ ಕಂಡಿತ್ತು. ಆದರೆ ಇಷ್ಟೊಂದು ಪ್ರಮಾಣದಲ್ಲಿ ಏರಿಕೆ ಕಂಡಿರಲಿಲ್ಲ. ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 4ನೇ ತ್ರೈಮಾಸಿಕದಲ್ಲಿ 7.8% , 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ

    ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ-ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿತ್ತು. ಮೇ 31 ರಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಈ ವರದಿಯನ್ನು ಬಿಡುಗಡೆ ಮಾಡಿತ್ತು. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು 2023-24ರಲ್ಲಿ ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗುತ್ತಿರುವುದನ್ನು ಕಂಡು ಹರ್ಷಗೊಂಡು ಹೂಡಿಕೆದಾರರು ದೇಶದಲ್ಲಿರುವ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ.

    ಮೇ ತಿಂಗಳಲ್ಲಿ 1.73 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹಿಸಿತ್ತು. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ 10% ಏರಿಕೆಯಾಗಿತ್ತು. ಈ ಎಲ್ಲಾ ಕಾರಣದಿಂದ ದೇಶದಲ್ಲಿರುವ ಹೂಡಿಕೆದಾರರು ಮತ್ತು ವಿದೇಶದ ಸಾಂಸ್ಥಿಕ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದಾರೆ.

     

  • ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಒಂದೇ ದಿನ ಕರಗಿತು ಹೂಡಿಕಾದರರ 14 ಲಕ್ಷ ಕೋಟಿ ಸಂಪತ್ತು

    ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಒಂದೇ ದಿನ ಕರಗಿತು ಹೂಡಿಕಾದರರ 14 ಲಕ್ಷ ಕೋಟಿ ಸಂಪತ್ತು

    ಮುಂಬೈ: ಷೇರುಮಾರುಕಟ್ಟೆಯಲ್ಲಿ (Share Market) ರಕ್ತಪಾತವಾಗಿದ್ದು ಹೂಡಿಕೆದಾರರ (Investors) ಸಂಪತ್ತು ಒಂದೇ ದಿನದಲ್ಲಿ 14 ಲಕ್ಷ ಕೋಟಿ ರೂ. ಕರಗಿದೆ.

    ಬಾಂಬೆ ಷೇರು ಮಾರುಕಟ್ಟೆ(BSE) ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌(Sensex) ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ(NSE) ಸೂಚಂಕ್ಯ ನಿಫ್ಟಿ(Nifty) ಅಂಕಗಳು ಭಾರೀ ಇಳಿಕೆಯಾಗಿದ್ದರಿಂದ ಒಂದೇ ದಿನ ಹೂಡಿಕೆದಾರರು ಸುಮಾರು 14 ಲಕ್ಷ ಕೋಟಿ ರೂ. ಕಳೆದುಕೊಂಡಿದ್ದಾರೆ. ನಿಫ್ಟಿ ಮಿಡ್‌ಕ್ಯಾಪ್‌ ಮತ್ತು ನಿಫ್ಟಿ ಸ್ಮಾಲ್‌ ಕ್ಯಾಪ್‌ ಇಂಡೆಕ್ಸ್‌ 4% ಇಳಿಕೆಯಾಗಿದೆ.‌  ಇದನ್ನೂ ಓದಿ: ಮೈಸೂರಿನಿಂದ ಯದುವೀರ್‌, ಬೆಂಗಳೂರು ಉತ್ತರದಿಂದ ಕರಂದ್ಲಾಜೆ – ಯಾರಿಗೆ ಎಲ್ಲಿ ಟಿಕೆಟ್‌?

    ಯಾವುದು ಎಷ್ಟು ಇಳಿಕೆ?
    ಸೆನ್ಸೆಕ್ಸ್‌ 906.17 (-1.23%) ಅಂಕ ಕುಸಿದು 72,761.8ರಲ್ಲಿ ಕೊನೆಯಾಯಿತು. ನಿಫ್ಟಿ ಮಿಡ್‌ಕ್ಯಾಪ್‌ 100 2,115.45 (-4.40%) ಅಂಕ ಕುಸಿದು 45,971.4 ರಲ್ಲಿ ಕೊನೆಯಾಯಿತು. ಎರಡು ವರ್ಷದ ಬಳಿಕ ಒಂದೇ ದಿನ ನಿಫ್ಟಿ ಮಿಡ್‌ಕ್ಯಾಪ್‌ ಇಷ್ಟೊಂದು ಇಳಿಕೆಯಾಗಿದೆ.

    ಮಾರುಕಟ್ಟೆ ಮೌಲ್ಯ 5 ಸಾವಿರ ಕೋಟಿ ರೂ. ಇರುವ ಕಂಪನಿಗಳು ಸ್ಮಾಲ್‌ಕ್ಯಾಪ್‌ ಎಂದು ಗುರುತಿಸಿಕೊಂಡರೆ, 5 ಸಾವಿರ ಕೋಟಿ ರೂ.ನಿಂದ 20 ಸಾವಿರ ಕೋಟಿ ರೂ. ಮಾರುಕಟ್ಟೆ ಮೌಲ್ಯ ಇರುವ ಕಂಪನಿಗಳು ಮಿಡ್‌ ಕ್ಯಾಪ್‌ ವ್ಯಾಪ್ತಿಯಲ್ಲಿ ಬರುತ್ತವೆ.

     

    ಇಳಿಕೆಯಾಗಲು ಕಾರಣ ಏನು?
    ಸೆಬಿ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳ ಷೇರು ಬೆಲೆಗಳನ್ನು ತಿರಚುಲಾಗುತ್ತಿದೆ. ಹೀಗಾಗಿ ಕಂಪನಿಗಳಲ್ಲಿ ಹೂಡಿಕೆ ಮಾಡುವ ಮೊದಲು ಹೂಡಿಕೆದಾರರು ಎಚ್ಚರದಲ್ಲಿ ಇರಬೇಕು ಎಂದು ಸೆಬಿ (SEBI) ಮುಖ್ಯಸ್ಥೆ ಮಾಧಬಿ ಪುರಿ ಬಾಚ್ ಎಚ್ಚರಿಸಿದ್ದರು. ಇದನ್ನೂ ಓದಿ: ರಾಜವಂಶಸ್ಥ ಯದುವೀರ್ ಸ್ಪರ್ಧಿಸಿದ್ರೆ ಕಾಂಗ್ರೆಸ್‌ಗೆ ಲಾಭನಾ? ನಷ್ಟನಾ?

    ಕೆಲ ತಿಂಗಳಿನಿಂದ ಸಣ್ಣ ಮತ್ತು ಮಿಡ್‌ ಕ್ಯಾಪ್‌ ಕಂಪನಿಗಳ ಷೇರುಗಳ ಬೆಲೆ ಏರಿಕೆಯಾಗುತ್ತಿದೆ. ಏರಿಕೆ ಆಗುತ್ತಿರುವ ಷೇರಿನ ಬೆಲೆಗಳು ಆಯಾ ಕಂಪನಿಗಳ ಆರ್ಥಿಕ ಮೂಲಗಳಿಗೆ ಸಂಬಂಧಿಸಿದಂತೆ ಕಾಣುತ್ತಿಲ್ಲ. ಹೀಗಾಗಿ ಈ ವಲಯದಲ್ಲಿ ಹೂಡಿಕೆದಾರರು ಹಣ ಕಳೆದುಕೊಳ್ಳುವ ಲಕ್ಷಣಗಳು ಹೆಚ್ಚಾಗಿದೆ ಎಂದು ಹೇಳಿದ್ದರು. ಮಂಗಳವಾರ ಮಾಧಬಿ ಪುರಿ ಬಾಚ್‌ ಹೇಳಿಕೆ ನೀಡಿದ ಬೆನ್ನಲ್ಲೇ ಇಂದು ಮಿಡ್‌ಕ್ಯಾಪ್‌ ಕಂಪನಿಗಳ ಷೇರು ಒಂದೇ ದಿನದಲ್ಲಿ ಭಾರೀ ಇಳಿಕೆಯಾಗಿದೆ.

    ಜಾರಿ ನಿರ್ದೇಶನಾಲಯ ಮಹಾದೇವ ಬೆಟ್ಟಿಂಗ್‌ ಆಪ್‌ ವಿರುದ್ಧ ತನಿಖೆ ನಡೆಸುತ್ತಿದ್ದು ಈ ವೇಳೆ ಈ ಕಂಪನಿಯ ಪ್ರವರ್ತಕರು ಹಲವು ಸಣ್ಣ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೃತಕವಾಗಿ ಷೇರುಗಳ ದರವನ್ನು ಏರಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಈ ಕಂಪನಿಯ ಡಿಮ್ಯಾಟ್‌ ಖಾತೆ ಲಿಂಕ್‌ ಆಗಿರುವ 1,100 ಕೋಟಿ ರೂ. ಮೌಲ್ಯದ ಷೇರುಗಳನ್ನು ತಡೆ ಹಿಡಿಯಲಾಗಿದೆ. ಸುಮಾರು 30ಕ್ಕೂ ಹೆಚ್ಚು ಕಂಪನಿಗಳ ಷೇರುಗಳಲ್ಲಿ ಮಹಾದೇವ ಬೆಟ್ಟಿಂಗ್‌ ಆಪ್‌ ಪ್ರವರ್ತಕರು ಹೂಡಿಕೆ ಮಾಡಿದ್ದಾರೆ ಎಂಬ ವರದಿಯೂ ಕೆಲ ಕಂಪನಿಗಳ ಷೇರು ಮೌಲ್ಯ ಇಳಿಕೆಗೆ ಕಾರಣವಾಯಿತು.

     

  • ಪೇಟಿಎಂ ವ್ಯಾಲೆಟ್‌ ಸೇವೆ ಖರೀದಿ ಮಾತುಕತೆ ನಡೆದಿಲ್ಲ – ಜಿಯೋ ಫೈನಾನ್ಸ್‌ ಅಧಿಕೃತ ಹೇಳಿಕೆ

    ಪೇಟಿಎಂ ವ್ಯಾಲೆಟ್‌ ಸೇವೆ ಖರೀದಿ ಮಾತುಕತೆ ನಡೆದಿಲ್ಲ – ಜಿಯೋ ಫೈನಾನ್ಸ್‌ ಅಧಿಕೃತ ಹೇಳಿಕೆ

    ನವದೆಹಲಿ: ಪೇಟಿಯಂ ವ್ಯಾಲೆಟ್ (Paytm Wallet) ಸೇವೆಯನ್ನು ತಾನು ಖರೀದಿ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ ಎಂದು  ಜಿಯೋ ಫೈನಾನ್ಸ್‌ (Jio Finance) ಅಧಿಕೃತವಾಗಿ ತಿಳಿಸಿದೆ.

    ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ (RBI) ಹಲವು ನಿರ್ಬಂಧ ವಿಧಿಸಿದ ಬಳಿಕ ಪೇಟಿಎಂ ಸಾಕಷ್ಟು ನಷ್ಟಕ್ಕೆ ಸಿಲುಕಿಕೊಂಡಿದೆ. ಈ ಬೆನ್ನಲ್ಲೇ ಮುಕೇಶ್‌ ಅಂಬಾನಿ (Mukesh Ambani) ನೇತೃತ್ವದ ಜಿಯೋ ಫೈನಾನ್ಸ್‌ ಪೇಟಿಯಂ ವ್ಯಾಲೆಟ್ ಸೇವೆಯನ್ನು ಖರೀದಿಸಲಿದೆ ಎಂದು ವರದಿಯಾಗಿತ್ತು.

    ಈ ವರದಿಯ ಬೆನ್ನಲ್ಲೇ ಬಾಂಬೆ ಷೇರು ಮಾರುಕಟ್ಟೆಗೆ (BSE) ಜಿಯೋ ಫೈನಾನ್ಸಿಯಲ್‌ ಸರ್ವಿಸ್‌ ಲಿಮಿಟೆಡ್‌(JFSL) ತಾನು ಪೇಟಿಎಂ ವ್ಯಾಲೆಟ್‌ ಖರೀದಿಸುವುದಿಲ್ಲ ಎಂದು ತಿಳಿಸಿದೆ. ಖರೀದಿ ವಿಚಾರ ಕೇವಲ ಊಹಾತ್ಮಕ ಸುದ್ದಿಯಾಗಿದೆ. ಈ ವಿಷಯದಲ್ಲಿ ಯಾವುದೇ ಮಾತುಕತೆ ನಡೆಸಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ ಎಂದು ತಡರಾತ್ರಿ ಜಿಯೋ ಫೈನಾನ್ಸ್‌ ಫೈಲಿಂಗ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿ ದಾಟುತ್ತೆ.. ಬಿಜೆಪಿಗೆ 370 ಸೀಟು ಬರುತ್ತೆ: ಮೋದಿ ಭವಿಷ್ಯ

    ಮಾಧ್ಯಮಗಳಲ್ಲಿ ಖರೀದಿ ವರದಿ ಪ್ರಕಟವಾಗುತ್ತಿದ್ದಂತೆ ಸೋಮವಾರ ಜಿಯೋ ಫೈನಾನ್ಸ್‌ ಷೇರಿನ ಬೆಲೆ 35.30 ರೂ. (13.91%) ಏರಿಕೆಯಾಗಿ 289.05 ರೂ. ತಲುಪಿತ್ತು.

    ವ್ಯಾಲೆಟ್ ಖರೀದಿಗೆ ಸಂಬಂಧಿಸಿದಂತೆ ಪೇಟಿಯಂ ಮಾತೃ ಸಂಸ್ಥೆಯಾದ 97 ಕಮ್ಯುನಿಕೇಶನ್ ಸಂಸ್ಥೆ ಹಾಗೂ ರಿಲಯನ್ಸ್‌ ಮತ್ತು ಖಾಸಗಿ ಬ್ಯಾಂಕ್ ಹೆಚ್‌ಡಿಎಫ್‌ಸಿ ಜೊತೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

    ವ್ಯಾಲೆಟ್ ಸೇವೆಯನ್ನು ಖರೀದಿ ಮಾಡಲು ಜಿಯೋ ಫೈನಾನ್ಸ್ ಮತ್ತು ಹೆಚ್‌ಡಿಎಫ್‌ಸಿ ಬ್ಯಾಂಕ್‌ಗಳು ಕಳೆದ ನವೆಂಬರ್‌ನಲ್ಲೇ ಮಾತುಕತೆಗಳು ನಡೆದಿತ್ತು. ಈಗ ಆರ್‌ಬಿಐ ನಿರ್ಬಂಧ ಹೇಳಿದ ನಂತರ ಮಾತುಕತೆ ಮತ್ತೆ ಚುರುಕುಗೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ನಮ್ಮ 3ನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯ ದೇಶವಾಗಲಿದೆ: ಮೋದಿ ಭರವಸೆ

    ಕಳೆದ 3 ದಿನಗಳಲ್ಲಿ ಪೇಟಿಯಂನ ಮೌಲ್ಯ 42%ರಷ್ಟು ಕುಸಿತ ಕಂಡಿದ್ದು, 20 ಸಾವಿರ ಕೋಟಿ ನಷ್ಟ ಉಂಟುಮಾಡಿದೆ. ಕಳೆದ ಅಕ್ಟೋಬರ್‌ನಲ್ಲಿ ಪೇಟಿಎಂ ಒಂದು ಷೇರಿನ ಬೆಲೆ 998 ರೂ. ಏರಿತ್ತು. ಆದರೆ ಫೆ.5ರ ವೇಳೆ ಒಂದು ಷೇರಿನ ಮೌಲ್ಯ 438.50 ರೂ.ಗೆ ಕುಸಿದಿದೆ.

     

  • ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ಅದಾನಿ ಷೇರು ಶಾರ್ಟ್‌ ಸೆಲ್ಲಿಂಗ್‌, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?

    ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿ (Hindenburg Research Report) ಬಿಡುಗಡೆಯಾಗುವ ಸಮಯದಲ್ಲಿ ಅದಾನಿ (Adani) ಸಮೂಹದ ಷೇರುಗಳನ್ನು ಶಾರ್ಟ್ ಸೆಲ್ಲಿಂಗ್ (Short Selling ) ಮಾಡುವ ಮೂಲಕ ಒಂದು ಖಾಸಗಿ ಬ್ಯಾಂಕ್‌ ಸೇರಿದಂತೆ 16 ಸಂಸ್ಥೆಗಳು ಭಾರೀ ಲಾಭ ಮಾಡಿರುವ ವಿಷಯ ಜಾರಿ ನಿರ್ದೇಶನಾಲಯದ (ED) ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ವಿದೇಶಿ ಬಂಡವಾಳ ಹೂಡಿಕೆದಾರರು ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FPIs/FIIs) ಸೇರಿದಂತೆ ಒಂದು ಡಜನ್ ಕಂಪನಿಗಳು ಅದಾನಿ ಗ್ರೂಪ್‌ನ ಷೇರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಲಾಭ ಮಾಡಿರುವ ವಿಷಯ ಇಡಿ ನಡೆಸಿದ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

    ಲಾಭ ಮಾಡಿದ ಸಂಸ್ಥೆಗಳ ಪೈಕಿ ಮೂರು ಭಾರತದಲ್ಲಿ ನೆಲೆಗೊಂಡಿದ್ದರೆ, ನಾಲ್ಕು ಮಾರಿಷಸ್‌, ಮತ್ತು ಫ್ರಾನ್ಸ್, ಹಾಂಕಾಂಗ್‌, ಕೇಮನ್ ದ್ವೀಪಗಳು, ಐರ್ಲೆಂಡ್ ಮತ್ತು ಲಂಡನ್‌ನಲ್ಲಿ ತಲಾ ಒಂದು ಸಂಸ್ಥೆಗಳು ನೆಲೆಗೊಂಡಿವೆ ಎಂದು ಇಡಿ ತನ್ನ ವರದಿಯಲ್ಲಿ ಹೇಳಿದೆ. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

    ಹಿಂಡೆನ್‌ಬರ್ಗ್‌ ವರದಿ ಜನವರಿ 24ರಂದು ಪ್ರಕಟವಾಗಿತ್ತು. ವರದಿ ಪ್ರಕಟವಾಗುವ 2-3 ದಿನಗಳ ಹಿಂದೆ ಕೆಲ ಕಂಪನಿಗಳು ಶಾರ್ಟ್‌ ಸೆಲ್ಲಿಂಗ್‌ ಮಾಡಿವೆ. ಅದರಲ್ಲೂ ಕೆಲ ಕಂಪನಿಗಳು ಇದೇ ಮೊದಲ ಬಾರಿಗೆ ಶಾರ್ಟ್‌ ಸೆಲ್ಲಿಂಗ್‌ ಮಾಡಿದೆ ಎಂದು ಇಡಿ ಜುಲೈನಲ್ಲಿ ಸಲ್ಲಿಸಿದ ತನಿಖಾ ವರದಿಯಲ್ಲಿ ಸೆಬಿಗೆ (SEBI) ತಿಳಿಸಿದೆ. ಎರಡು ಭಾರತೀಯ ಕಂಪನಿಗಳು ‘ಟಾಪ್ ಶಾರ್ಟ್ ಸೆಲ್ಲರ್’ಗಳಲ್ಲಿ ಕಾಣಿಸಿಕೊಂಡಿವೆ. ಈ ಪೈಕಿ ಒಂದು ದೆಹಲಿಯಲ್ಲಿ ಮತ್ತು ಇನ್ನೊಂದು ಮುಂಬೈನಲ್ಲಿ ನೋಂದಾಯಿಸಲಾಗಿದೆ.

    ಕಡಿಮೆ ಅವಧಿಯಲ್ಲಿ ಲಾಭ ಮಾಡಿದ 16 ಸಂಸ್ಥೆಗಳ ಮೇಲೆ ಸದ್ಯ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಸಂಸ್ಥೆಗಳ ಮೇಲೆ ಕ್ರಿಮಿನಲ್‌ ತನಿಖೆ ನಡೆಸುವ ಸಂಪೂರ್ಣ ಅಧಿಕಾರ ಸೆಬಿಗೆ ಇದ್ದು ಒಂದು ವೇಳೆ ಅನುಮಾನಾಸ್ಪದ ವ್ಯವಹಾರ ನಡೆದಿದ್ದರೆ ದೂರು ದಾಖಲಿಸಬಹುದು. ದೂರು ದಾಖಲಾದ ಬಳಿಕ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿ ಇಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಿದೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

    ಏನಿದು ಶಾರ್ಟ್‌ ಸೆಲ್ಲಿಂಗ್‌?
    ಶಾರ್ಟ್ ಸೆಲ್ಲಿಂಗ್ ಎನ್ನುವುದು ಹೂಡಿಕೆಯ ತಂತ್ರವಾಗಿದ್ದು, ಮುಂದಿನ ದಿನಗಳಲ್ಲಿ ಕಂಪನಿಯ ಷೇರು ಮೌಲ್ಯ ಕುಸಿಯಬಹುದು ಎಂಬುದನ್ನು ಮೊದಲೇ ಊಹಿಸಿ ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ನಂತರ ಆ ಕಂಪನಿಯ ಷೇರು ಮೌಲ್ಯ ಕುಸಿತಗೊಂಡಾಗ ಅವುಗಳನ್ನು ಕಡಿಮೆ ಬೆಲೆಗೆ ಮರು ಖರೀದಿಸಿ ಲಾಭ ಮಾಡುವುದಕ್ಕೆ ಶಾರ್ಟ್‌ ಸೆಲ್ಲಿಂಗ್‌ ಎಂದು ಕರೆಯಲಾಗುತ್ತದೆ.

    ಲಾಭ ಮಾಡಿರುವ ಒಂದು ಸಂಸ್ಥೆ 2020ರಲ್ಲಿ ಆರಂಭಗೊಂಡಿದ್ದರೂ 2021 ರವರೆಗೆ ನಿಷ್ಕ್ರಿಯವಾಗಿತ್ತು. ಹೀಗಿದ್ದರೂ ಇದು ಸೆಪ್ಟೆಂಬರ್ 2021 ರಿಂದ ಮಾರ್ಚ್ 2022 ರವರೆಗಿನ ಕೇವಲ ಆರು ತಿಂಗಳೊಳಗೆ 31,000 ಕೋಟಿ ರೂ. ವಹಿವಾಟಿನ ಮೇಲೆ 1,100 ಕೋಟಿ ರೂಪಾಯಿಗಳ ಗಳಿಕೆಯನ್ನು ಘೋಷಿಸಿದೆ. ಇದನ್ನೂ ಓದಿ: ಅದಾನಿ ಸಮೂಹ ಕಂಪನಿಗಳಲ್ಲಿ 15,446 ಕೋಟಿ ಹೂಡಿಕೆ – ಅದಾನಿ ಕೈ ಹಿಡಿದ ರಾಜೀವ್‌ ಜೈನ್‌ ಯಾರು?

    ಭಾರತದಲ್ಲಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಹಣಕಾಸು ಸೇವೆಗಳ ಗುಂಪು 122 ಕೋಟಿ ರೂಪಾಯಿಗಳ ಅಲ್ಪ ಆದಾಯವನ್ನು ದಾಖಲಿಸಿದೆ. ಹೀಗಿದ್ದರೂ ಎಫ್‌ಐಐ ಆಗಿ ಯಾವುದೇ ತೆರಿಗೆ ಹೊಣೆಗಾರಿಕೆಯಿಲ್ಲದೆ 9,700 ಕೋಟಿ ರೂ. ಆದಾಯಗಳಿಸಿ ಅಚ್ಚರಿ ಮೂಡಿಸಿದೆ ಎಂದು ಇಡಿ ಹೇಳಿದೆ.

    ಈ ಎಫ್‌ಪಿಐಗಳು ಮತ್ತು ಎಫ್‌ಐಐಗಳು ನಿಜವಾದ ಫಲಾನುಭವಿಗಳಲ್ಲ. ಇವುಗಳು ವಿದೇಶಿ ಹೂಡಿಕೆದಾರರರಿಗೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿರಬಹುದು ಎಂದು ಇಡಿ ಸಂಶಯ ವ್ಯಕ್ತಪಡಿಸಿದೆ.

    ಅದಾನಿಯಿಂದ ಎಫ್‌ಪಿಒ ರದ್ದು:
    20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿ ಈ ಜನವರಿಯಲ್ಲಿ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಿಂಡೆನ್‌ಬರ್ಗ್‌ ಅದಾನಿ ಕಂಪನಿ ವಿರುದ್ಧ ಸಂಶೋಧನಾ ವರದಿ ಬಿಡುಗಡೆ ಮಾಡಿತ್ತು. ವರದಿ ಬಳಿಕ ಅದಾನಿ ಕಂಪನಿಯ ಷೇರಿನ ಮೌಲ್ಯ ಕುಸಿತ ಕಂಡಿದ್ದರೂ ಎಫ್‌ಪಿಒ ಬಿಡ್‌ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿತ್ತು.

    ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಂತರ 20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ಅದಾನಿ ಸಮೂಹ ರದ್ದು ಮಾಡಿತ್ತು. ನಮ್ಮ ಷೇರು (Share) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಹೇಳಿ ಹೂಡಿಕೆದಾರರ ಹಣವನ್ನು ಮರಳಿಸಲಾಗುವುದು ಎಂದು ಗೌತಮ್‌ ಅದಾನಿ ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 65 ಸಾವಿರ ಗಡಿ ದಾಟಿ ದಾಖಲೆ ಬರೆದ ಸೆನ್ಸೆಕ್ಸ್‌ – ಒಂದೇ ದಿನ ಹೂಡಿಕೆದಾರರ ಸಂಪತ್ತು 2 ಲಕ್ಷ ಕೋಟಿ ಹೆಚ್ಚಳ

    65 ಸಾವಿರ ಗಡಿ ದಾಟಿ ದಾಖಲೆ ಬರೆದ ಸೆನ್ಸೆಕ್ಸ್‌ – ಒಂದೇ ದಿನ ಹೂಡಿಕೆದಾರರ ಸಂಪತ್ತು 2 ಲಕ್ಷ ಕೋಟಿ ಹೆಚ್ಚಳ

    ಮುಂಬೈ: ಗೃಹಸಾಲ ಮಾರುಕಟ್ಟೆಯ ಪ್ರಮುಖ ಕಂಪನಿ ಹೆಚ್‌ಡಿಎಫ್‌ಸಿ (HDFC) ಹಾಗೂ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ ಆಗಿರುವ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ (HDFC Bank) ವಿಲೀನವನ್ನು ಹೂಡಿಕೆದಾರರು ಸ್ವಾಗತಿಸಿದ ಪರಿಣಾಮ ಬಾಂಬೆ ಷೇರು ಮಾರುಕಟ್ಟೆ(BSE) ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ (Sensex) ಮೊದಲ ಬಾರಿಗೆ 65 ಸಾವಿರದ ಗಡಿಯನ್ನು ದಾಟಿದೆ.

    ಶುಕ್ರವಾರ 64,718 ರಲ್ಲಿ ಕೊನೆಯಾಗಿದ್ದರೆ ಇಂದು 65,205 ಅಂಶದಲ್ಲಿ ಕೊನೆಯಾಗಿದೆ. ಶುಕ್ರವಾರ ಒಂದೇ ದಿನ ಸೆನ್ಸೆಕ್ಸ್‌ 803.14 ಅಂಶ ಏರಿದ್ದರೆ ಸೋಮವಾರ 0.75% ಅಥವಾ 486.49 ಅಂಶ ಏರಿಕೆಯಾಗಿದೆ. ಒಂದು ಹಂತದಲ್ಲಿ ಸೆನ್ಸೆಕ್‌ 65,300.35 ಅಂಶಕ್ಕೆ ಹೋಗಿತ್ತು.

    ಹೆಚ್‌ಡಿಎಫ್‌ಸಿ ಬ್ಯಾಂಕು ಷೇರು ಮೌಲ್ಯ ಇಂದು 1.15% ಅಥವಾ 19.60 ರೂ. ಏರಿಕೆಯಾಗಿ ಅಂತಿಮವಾಗಿ 1,721 ರೂ.ನಲ್ಲಿ ವಹಿವಾಟು ಮುಗಿಸಿತು. ಹೆಚ್‌ಡಿಎಫ್‌ಸಿ ಷೇರು ಮೌಲ್ಯ 1.79% ಅಥವಾ 50.60 ರೂ. ಏರಿಕೆಯಾಗಿ ಅಂತಿಮವಾಗಿ 2,872.55 ರೂ.ನಲ್ಲಿ ವಹಿವಾಟು ಕೊನೆಗೊಳಿಸಿತು.

    ಹೆಚ್‍ಡಿಎಫ್‍ಸಿ ಬ್ಯಾಂಕ್, ಮಹೀಂದ್ರಾ ಅಂಡ್ ಮಹೀಂದ್ರಾ, ಆಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್ ಷೇರುಗಳು ದೊಡ್ಡಮಟ್ಟದಲ್ಲಿ ಟ್ರೇಡಿಂಗ್ ಆಗಿವೆ. ಪರಿಣಾಮ ಒಂದೇ ದಿನದಲ್ಲಿ ಹೂಡಿಕೆದಾರರ ಸಂಪತ್ತು 2 ಲಕ್ಷ ಕೋಟಿ ರೂ. ಏರಿಕೆಯಾಗಿದೆ. ಜೂನ್‌ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹ ಏರಿಕೆ, ಹೆಚ್‌ಡಿಎಫ್‌ಸಿ ವಿಲೀನ ಸುದ್ದಿ ಹೂಡಿಕೆದಾರರಿಗೆ ಸಿಹಿ ನೀಡಿದ ಪರಿಣಾಮ ಸೆನ್ಸೆಕ್ಸ್‌ ಮೊದಲ ಬಾರಿಗೆ 65 ಸಾವಿರದ ಗಡಿಯನ್ನು ದಾಟಿದೆ.

    ಸೆನ್ಸೆಕ್ಸ್‌ ಯಾವ ವರ್ಷ ಎಷ್ಟು ಏರಿಕೆ?
    ಫೆಬ್ರವರಿ 6, 2006 – 10,000
    ಅಕ್ಟೋಬರ್‌ 29, 2007- 20,000
    ಮಾರ್ಚ್‌ 04, 2015 – 30,000
    ಮೇ 23, 2019 – 40,000
    ಜನವರಿ 21, 2021 -50,000
    ಸೆಪ್ಟೆಂಬರ್‌ 24, 2021 -60,000
    ಜುಲೈ 03, 2023 – 65,000

     

    ರಾಷ್ಟ್ರೀಯ ಷೇರು ಮಾರುಕಟ್ಟೆ (NSE) ಸೂಚಂಕ್ಯ ನಿಫ್ಟಿ (Nifty) ಇಂದು 0.70% ಅಥವಾ 133.50 ಅಂಶ ಏರಿಕೆಯಾಗಿ 19,322.55 ಅಂಶದಲ್ಲಿ ಕೊನೆಯಾಗಿದ್ದು ಇದು ಸಾರ್ವಕಾಲಿಕ ದಾಖಲೆಯಾಗಿದೆ. ಶುಕ್ರವಾರ 19,189 ಅಂಶದಲ್ಲಿ ಕೊನೆಯಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆನ್ಸೆಕ್ಸ್‌, ನಿಫ್ಟಿ ಹೈಜಂಪ್‌ – ಸಾರ್ವಕಾಲಿಕ ಎತ್ತರಕ್ಕೆ ಜಿಗಿದು ದಾಖಲೆ ಸೃಷ್ಟಿ

    ಸೆನ್ಸೆಕ್ಸ್‌, ನಿಫ್ಟಿ ಹೈಜಂಪ್‌ – ಸಾರ್ವಕಾಲಿಕ ಎತ್ತರಕ್ಕೆ ಜಿಗಿದು ದಾಖಲೆ ಸೃಷ್ಟಿ

    ಮುಂಬೈ: ವಿಶ್ವದ ಹಲವು ರಾಷ್ಟ್ರಗಳು ಆರ್ಥಿಕ ಹಿಂಜರಿತದ (Economic Recession) ಭೀತಿ ಎದುರಿಸುತ್ತಿದ್ದರೆ ಭಾರತದ ಬಾಂಬೆ ಷೇರು ಮಾರುಕಟ್ಟೆ(BSE) ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ (Sensex) ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ (NSE) ಸೂಚಂಕ್ಯ ನಿಫ್ಟಿ (Nifty) ಸಾರ್ವಕಾಲಿಕ ಎತ್ತರಕ್ಕೆ ಜಿಗಿದು ದಾಖಲೆ ಬರೆದಿದೆ.

    ಶುಕ್ರವಾರ ಒಂದೇ ದಿನ ಸೆನ್ಸೆಕ್ಸ್‌ 803.14 ಅಂಕ ಏರಿಕೆಯಾಗಿದೆ. ಗುರುವಾರ 63,915 ರಲ್ಲಿ ಕೊನೆಯಾಗಿದ್ದರೆ ಇಂದು 64,718.56 ರಲ್ಲಿ ವಹಿವಾಟು ಕೊನೆಗೊಳಿಸಿತು. ಒಂದು ಹಂತದಲ್ಲಿ 64,768 ಅಂಕಕ್ಕೆ ಹೋಗಿತ್ತು. ಜೂನ್‌ 28 ರಂದು ಸೆನ್ಸೆಕ್ಸ್‌ ಮೊದಲ ಬಾರಿಗೆ 64 ಸಾವಿರದ ಗಡಿಯನ್ನು ದಾಟಿತ್ತು.

    ಇಂದಿನ ಏರಿಕೆ ನಂತರ ಬಾಂಬೆ ಷೇರು ಮಾರುಕಟ್ಟೆಯ ಮೌಲ್ಯ 295.72 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ. ಈ ಮೊದಲು ಜೂನ್‌ 21 ರಂದು ಮಾರುಕಟ್ಟೆಯ ಮೌಲ್ಯ 2,94,36,594.50 ಕೋಟಿ ರೂ. ತಲುಪಿತ್ತು ಇದನ್ನೂ ಓದಿ: ಬ್ಯಾಂಕ್‍ಗಳ ವಿಲೀನ – ವಿಶ್ವದ ಮೌಲ್ಯಯುತ ಬ್ಯಾಂಕ್ ಆಗಿ ಹೊರಹೊಮ್ಮಿದ HDFC

    ರಾಷ್ಟ್ರೀಯ ಷೇರು ಮಾರುಕಟ್ಟೆ(NSE) ಸೂಚಂಕ್ಯ ನಿಫ್ಟಿ 216.95 ಅಂಕ ಏರಿಕೆ ಕಂಡಿದೆ. ಗುರುವಾರ 18,972 ರಲ್ಲಿ ಕೊನೆಗೊಂಡಿದ್ದರೆ ಇಂದು 19,189.05 ರಲ್ಲಿ ವಹಿವಾಟು ಮುಗಿಸಿದೆ. ಒಂದು ಹಂತದಲ್ಲಿ ಇದು 19,201.70 ಅಂಕಕ್ಕೆ ಏರಿಕೆಯಾಗಿತ್ತು.

    ಏರಿಕೆಯಾಗಿದ್ದು ಯಾಕೆ?
    ಹೆಚ್‌ಡಿಎಫ್‌ಸಿ ಬ್ಯಾಂಕ್‌ ವಿಲೀನ, ಮಾಹಿತಿ ತಂತ್ರಜ್ಞಾನ, ಅಟೋಮೊಬೈಲ್‌ ಮತ್ತು ಉಳಿದ ಬ್ಯಾಂಕ್‌ ಕಂಪನಿಗಳ ಷೇರುಗಳನ್ನು ಖರೀದಿಸಲು ಹೂಡಿಕೆದಾರರು ಹೆಚ್ಚು ಉತ್ಸಾಹ ತೋರಿದ್ದರಿಂದ ಸೆನ್ಸೆಕ್ಸ್‌, ನಿಫ್ಟಿ ಏರಿಕೆಯಾಗಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಮಹೀಂದ್ರಾ ಮತ್ತು ಮಹೀಂದ್ರಾ, ಇಂಡಸ್‌ಇಂಡ್ ಬ್ಯಾಂಕ್, ಎಚ್‌ಸಿಎಲ್ ಟೆಕ್ನಾಲಜೀಸ್, ಟೆಕ್ ಮಹೀಂದ್ರಾ, ಮಾರುತಿ, ವಿಪ್ರೋ, ಹೆಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಲಾಭ ಗಳಿಸಿವೆ.

     
    ಭಾರತದ ಜಿಡಿಪಿ ಬೆಳವಣಿಗೆ ಆಗುತ್ತಿದೆ. ವಿಶೇಷವಾಗಿ ಉತ್ಪದನಾ ಕಂಪನಿಗಳು ಚೀನಾದ ಬದಲಾಗಿ ಭಾರತದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿವೆ. ಈ ಕಾರಣಕ್ಕೆ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಹೆಚ್ಚಿನ ಪ್ರಮಾಣದಲ್ಲಿ ಭಾರತದ ಕಂಪನಿಗಳಲ್ಲಿ ಹಣವನ್ನು ಹೂಡಿಕೆ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 1 ಷೇರಿನ ಬೆಲೆ 1 ಲಕ್ಷ – ಭಾರತದಲ್ಲಿ ದಾಖಲೆ ಬರೆದ ಎಂಆರ್‌ಎಫ್‌: ಯಾವ ವರ್ಷ ಎಷ್ಟಿತ್ತು?

    1 ಷೇರಿನ ಬೆಲೆ 1 ಲಕ್ಷ – ಭಾರತದಲ್ಲಿ ದಾಖಲೆ ಬರೆದ ಎಂಆರ್‌ಎಫ್‌: ಯಾವ ವರ್ಷ ಎಷ್ಟಿತ್ತು?

    ಮುಂಬೈ:  ಪ್ರಖ್ಯಾತ ಟಯರ್‌ ಕಂಪನಿ ಎಂಆರ್‌ಎಫ್‌ (MRF) ಭಾರತದ ಷೇರು ಮಾರುಕಟ್ಟೆಯಲ್ಲಿ (Share Market) ಹೊಸ ದಾಖಲೆ ಬರೆದಿದೆ.

    ಮಂಗಳವಾರ ಬೆಳಗ್ಗಿನ ವಹಿವಾಟಿನಲ್ಲಿ ಎಂಆರ್‌ಎಫ್‌ ಕಂಪನಿಯ ಒಂದು ಷೇರಿನ ಬೆಲೆ 1 ಲಕ್ಷ ರೂ. ದಾಟಿತ್ತು. ಈ ಮೂಲಕ ಒಂದು ಷೇರಿನ ಬೆಲೆ 1 ಲಕ್ಷ ರೂ.ದಾಟಿದ ದೇಶದ ಮೊದಲ ಕಂಪನಿ ಎಂಬ ಇತಿಹಾಸ (History Created) ಸೃಷ್ಟಿಸಿತು.

    2023ರ ನಾಲ್ಕನೇಯ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ 86% ಏರಿಕೆಯಾಗಿ 313.5 ಕೋಟಿ ರೂ. ದಾಖಲಿಸಿತ್ತು. ಕಳೆದ ವರ್ಷ ಈ ಅವಧಿಯಲ್ಲಿ 168. ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಕಚ್ಚಾ ವಸ್ತುಗಳ ಬೆಲೆಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಕಂಪನಿಯು ಜನವರಿ – ಮಾರ್ಚ್ ತ್ರೈಮಾಸಿಕದಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ ಬೆನ್ನಲ್ಲೇ ಷೇರುಗಳ ಬೆಲೆಯೂ ಏರಿಕೆ ಕಂಡಿತ್ತು.

    ನಾಲ್ಕನೇ ತ್ರೈಮಾಸಿಕದಲ್ಲಿ ಕಾರ್ಯಾಚರಣೆಗಳಿಂದ ಕಂಪನಿಯು 5,841.7 ಕೋಟಿ ರೂ. ಆದಾಯ ಗಳಿಸಿದೆ. ಕಂಪನಿಯು ಕಳೆದ ವರ್ಷ ಈ ಅವಧಿಯಲ್ಲಿ 5,304.8 ಕೋಟಿ ರೂ. ಆದಾಯ ಗಳಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿರೆ ಈ ಬಾರಿ ಆದಾಯ ಗಳಿಕೆ 10.12% ರಷ್ಟು ಏರಿಕೆ ಕಂಡಿದೆ.

    ಈ ವರ್ಷದ ಆರಂಭದಿಂದಲೇ ಎಂಆರ್‌ಎಫ್‌ ಷೇರು ಮೌಲ್ಯ ವೃದ್ಧಿಸುತ್ತಿದೆ. 1993 ಏಪ್ರಿಲ್‌ 27 ರಂದು ಎಂಆರ್‌ಎಫ್‌ ಕಂಪನಿಯ ಒಂದು ಷೇರಿನ ಬೆಲೆ 11 ರೂ. ಇತ್ತು. ಇದನ್ನೂ ಓದಿ: Bomb Threat:ಬೆಂಗಳೂರಿನ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ

    ಯಾವ ವರ್ಷ ಎಷ್ಟು ರೂ. ಇತ್ತು?
    2001 ಜನವರಿ – 1,200
    2005 ಜನವರಿ – 2,540
    2010 ಜನವರಿ – 6,145
    2015 ಜನವರಿ – 38,000
    2020 ಜನವರಿ – 66,700
    2023 ಜೂನ್‌ – 1,00,000

    ಸೋಮವಾರ ಎಂಆರ್‌ಎಫ್‌ ಕಂಪನಿಯ ಷೇರಿನ ಬೆಲೆ 98,968.55 ರೂ.ಗೆ ಕೊನೆಯಾಗಿದ್ದರೆ ಇಂದು ಬೆಳಗ್ಗೆ 1,00,439 ರೂ.ಗೆ ಏರಿಕೆಯಾಗಿ ಕೊನೆಗೆ 99,900 ರೂ.ಗೆ ಇಂದಿನ ವ್ಯವಹಾರ ಮುಗಿಸಿತು.

  • ಭಾರೀ ಏರಿಕೆ ಕಂಡ Adani Enterprises ಷೇರು – ಮತ್ತಷ್ಟು ಹೂಡಿಕೆ ಮಾಡಿದ GQG

    ಭಾರೀ ಏರಿಕೆ ಕಂಡ Adani Enterprises ಷೇರು – ಮತ್ತಷ್ಟು ಹೂಡಿಕೆ ಮಾಡಿದ GQG

    ಮುಂಬೈ: ಹಿಂಡೆನ್‌ಬರ್ಗ್‌ (Hindenburg) ಸಂಶೋಧನಾ ವರದಿಯಿಂದ ಪಾತಾಳ ಕಂಡಿದ್ದ ಅದಾನಿ ಸಮೂಹ ಕಂಪನಿಗಳ (Adani Group Companies) ಷೇರುಗಳು ಈಗ ಮೇಲಕ್ಕೆ ಏರುತ್ತಿದೆ. ಅದರಲ್ಲೂ ಅದಾನಿ ಎಂಟರ್‌ಪ್ರೈಸ್‌ (Adani Enterprises) ಷೇರು ರಾಕೆಟ್‌ ವೇಗದಲ್ಲಿ ಮೇಲೇಳುತ್ತಿದೆ.

    ಅದಾನಿ ಸಮೂಹ ಯಾವುದೇ ರೀತಿಯಲ್ಲೂ ಷೇರಿನ ಬೆಲೆಗಳನ್ನು ತಿರುಚಿಲ್ಲ. ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಕಡೆಯಿಂದಲೂ ಯಾವುದೇ ನಿಯಂತ್ರಣ ವೈಫಲ್ಯವೂ ಕಂಡುಬಂದಿಲ್ಲ ಎಂದು ಸುಪ್ರೀಂ (Supreme Court) ನೇಮಿಸಿದ ಸಮಿತಿಯ ವರದಿ ಶುಕ್ರವಾರ ಪ್ರಕಟಗೊಂಡ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರುಗಳ ಬೆಲೆ ಸೋಮವಾರದಿಂದ ಏರಿಕೆಯಾಗುತ್ತಿದೆ.

    ಅದಾನಿ ಎಂಟರ್‌ಪ್ರೈಸ್‌ ಷೇರು ಬೆಲೆ ಇಂದು ಒಂದೇ ದಿನ 307 ರೂ. ಏರಿಕೆ ಕಂಡು ಕೊನೆಗೆ 2,333.70 ರೂ.ನಲ್ಲಿ ವ್ಯವಹಾರ ಮುಗಿಸಿದೆ. ಶುಕ್ರವಾರ 1956 ರೂ.ನಲ್ಲಿ ಕೊನೆಯಾಗಿದ್ದರೆ ಎರಡು ದಿನದ ವ್ಯವಹಾರದಲ್ಲಿ 677 ರೂ. ಏರಿಕೆಯಾಗಿದೆ. ಇದನ್ನೂ ಓದಿ: ಅದಾನಿ ಸಮೂಹ ಕಂಪನಿಗಳಲ್ಲಿ ಭಾರೀ ಹೂಡಿಕೆ – ಅದಾನಿ ಕೈ ಹಿಡಿದ ರಾಜೀವ್‌ ಜೈನ್‌ ಯಾರು?

    1 ಷೇರಿನ ಬೆಲೆ ಎಷ್ಟು ಏರಿಕೆ?
    ಇಂದಿನ ವ್ಯವಹಾರದಲ್ಲಿ ಅದಾನಿ ಟ್ರಾನ್ಸ್‌ಮಿಷನ್‌ ಒಂದು ಷೇರಿನ ಬೆಲೆ 41 ರೂ., ಅದಾನಿ ಗ್ರೀನ್‌ ಎನರ್ಜಿ ಬೆಲೆ 47 ರೂ. ಏರಿಕೆಯಾಗಿದೆ. ಅದಾನಿ ಪವರ್‌ 12 ರೂ., ಅದಾನಿ ಪೋರ್ಟ್‌ 8 ರೂ. ಏರಿಕೆಯಾಗಿದೆ.

     

    GQG ಕಂಪನಿಯಿಂದ ಮತ್ತಷ್ಟು ಹೂಡಿಕೆ:
    ಅಮೆರಿಕದ GQG ಕಂಪನಿ ಅದಾನಿ ಕಂಪನಿಯಲ್ಲಿ ಮತ್ತಷ್ಟು ಹೂಡಿಕೆ ಮಾಡಿದೆ. 3.5 ಶತಕೋಟಿ ಡಾಲರ್‌ (ಅಂದಾಜು 28 ಸಾವಿರ ಕೋಟಿ ರೂ.) ಹೂಡಿಕೆ ಮಾಡಿ 10% ರಷ್ಟು ಷೇರುಗಳನ್ನು ಖರೀದಿಸಿದೆ. ಯಾವ ಕಂಪನಿಯ ಷೇರುಗಳನ್ನು ಎಷ್ಟು ಪ್ರಮಾಣದಲ್ಲಿ ಖರೀದಿ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ. ಭಾರತದಲ್ಲಿ ಲಭ್ಯವಿರುವ ಅತ್ಯುತ್ತಮ ಮೂಲಸೌಕರ್ಯ ಹೂಡಿಕೆ ಎಂದು GQG ಕಂಪನಿಯ ಅಧ್ಯಕ್ಷ ಮತ್ತು ಸಿಐಒ ರಾಜೀವ್‌ ಜೈನ್‌ ಅದಾನಿ ಸಮೂಹದ ಕಂಪನಿಯನ್ನು ಬಣ್ಣಿಸಿದ್ದಾರೆ.

  • ಅದಾನಿ ಕಂಪನಿ ಬಗ್ಗೆ 2016 ರಿಂದ ಯಾವುದೇ ತನಿಖೆ ನಡೆಸಿಲ್ಲ: ಸೆಬಿ

    ಅದಾನಿ ಕಂಪನಿ ಬಗ್ಗೆ 2016 ರಿಂದ ಯಾವುದೇ ತನಿಖೆ ನಡೆಸಿಲ್ಲ: ಸೆಬಿ

    ನವದೆಹಲಿ: ಅದಾನಿ ಸಮೂಹದ (Adani Group) ಕಂಪನಿಯ ಬಗ್ಗೆ 2016 ರಿಂದ ಯಾವುದೇ ತನಿಖೆ ನಡೆಸಿಲ್ಲ ಎಂದು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ (SEBI) ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.

    ಅದಾನಿ ಕಂಪನಿಯ ಹಿಂಡೆನ್‌ಬರ್ಗ್ (Hindenburg) ಮಾಡಿದ ಆರೋಪದ ಬಗ್ಗೆ ತನಿಖೆ ನಡೆಸಲು 6 ತಿಂಗಳು ಕಾಲಾವಕಾಶ ನೀಡಬೇಕೆಂದು ಕೋರಿ ಸೆಬಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾ. ಡಿವೈ ಚಂದ್ರಚೂಡ್, ನ್ಯಾ. ಪಿಎಸ್ ನರಸಿಂಹ ಮತ್ತು ನಾ. ಜೆಬಿ ಪರ್ದಿವಾಲಾ ಪೀಠದಲ್ಲಿ ನಡೆಯಿತು.

    ಸೋಮವಾರವೂ ಸೆಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಲು ಸಮಯ ವಿಸ್ತರಣೆಯ ಅಗತ್ಯವಿದೆ ಎಂದು ಪುನರುಚ್ಚರಿಸಿತು. ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಮಾರಿಷಸ್‌ ಸಂಸತ್ತಿಗೆ ಸರ್ಕಾರ ಉತ್ತರ

    ಈ ವೇಳೆ ಪೀಠ, ನಾವು ಈಗ 6 ತಿಂಗಳು ನೀಡಲು ಸಾಧ್ಯವಿಲ್ಲ. ಕೆಲಸದಲ್ಲಿ ಸ್ವಲ್ಪ ಎಚ್ಚರ ಅಗತ್ಯ. ಒಂದು ತಂಡವನ್ನು ರಚಿಸಿ ಕೆಲಸ ಮಾಡಿ. ನಾವು ಆಗಸ್ಟ್ ಮಧ್ಯದಲ್ಲಿ ಪ್ರಕರಣವನ್ನು ಪಟ್ಟಿ ಮಾಡಬಹುದುಎಂದು ಆದೇಶ ನೀಡಿತು.

     

    ಶತಕೋಟ್ಯಧಿಪತಿ ಗೌತಮ್ ಅದಾನಿ ಸಮೂಹ ಮಾರಿಷಸ್ ಮೂಲದ ಶೆಲ್ ಕಂಪನಿಗಳನ್ನು ಬಳಸಿ ಸ್ಟಾಕ್‌ ಮಾರುಕಟ್ಟೆಯಲ್ಲಿ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಳ ಮಾಡಿದೆ ಎಂದು ಹಿಂಡೆನ್‌ಬರ್ಗ್‌ ಆರೋಪಿಸಿತ್ತು.

    ತನಿಖೆ ಪೂರ್ಣಗೊಳಿಸಲು ಕಾಲವಕಾಶದ ಅಗತ್ಯವಿದೆ. ಇದುವರೆಗೂ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಹಾಗೂ ಇದುವರೆಗೂ ತಿಳಿದು ಬಂದ ಅಂಶಗಳನ್ನು ತಜ್ಞರ ಸಮಿತಿಯ ಗಮನಕ್ಕೆ ತರಲಾಗಿದೆ. ಅಲ್ಲದೆ ಹಿಂಡೆನ್‍ಬರ್ಗ್ ವರದಿಯಲ್ಲಿ ತಿಳಿಸಿರುವ 12 ಶಂಕಾಸ್ಪದ ವರ್ಗಾವಣೆಗಳ ಕುರಿತು ಆಳವಾದ ತನಿಖೆ ನಡೆಸಬೇಕಿದೆ. ಆ ವರ್ಗಾವಣೆಗಳ ಮಾಹಿತಿಗಳು ಜಟಿಲವಾಗಿವೆ. ಅಲ್ಲದೆ ಅಲ್ಲಿ ವಿವಿಧ ವರ್ಗಾವಣೆ ನಡೆದಿದೆ ಎಂದು ಸೆಬಿ ಅರ್ಜಿಯಲ್ಲಿ ಮನವಿ ಮಾಡಿತ್ತು.

  • ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಮಾರಿಷಸ್‌ ಸಂಸತ್ತಿಗೆ ಸರ್ಕಾರ ಉತ್ತರ

    ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಮಾರಿಷಸ್‌ ಸಂಸತ್ತಿಗೆ ಸರ್ಕಾರ ಉತ್ತರ

    ಪೋರ್ಟ್ ಲೂಯಿಸ್: ಅದಾನಿ ಸಮೂಹದ (Adani Group) ಕಂಪನಿಗಳ ಬಗ್ಗೆ ಹಿಂಡೆನ್‌ಬರ್ಗ್‌ (Hindenburg) ಮಾಡಿರುವ ಸಂಶೋಧನಾ ವರದಿ ಸುಳ್ಳು ಮತ್ತು ಆಧಾರ ರಹಿತ ಎಂದು ಮಾರಿಷಸ್ (Mauritius) ಸರ್ಕಾರ ಅಲ್ಲಿನ ಸಂಸತ್ತಿಗೆ ಉತ್ತರ ನೀಡಿದೆ.

    ಲಿಖಿತ ಉತ್ತರ ನೀಡಿದ ಹಣಕಾಸು ಸೇವೆಗಳ ಸಚಿವ ಮಹೇನ್ ಕುಮಾರ್ ಸೀರುತ್ತುನ್, ಮಾರಿಷಸ್‌ನಲ್ಲಿ ಶೆಲ್ ಕಂಪನಿಗಳಿವೆ ಎಂಬ ಆರೋಪಗಳು ಸುಳ್ಳು ಮತ್ತು ನಿರಾಧಾರ ಎಂದು ನಾನು ಸದನಕ್ಕೆ ತಿಳಿಸಲು ಬಯಸುತ್ತೇನೆ. ಕಾನೂನಿನ ಪ್ರಕಾರ ಮಾರಿಷಸ್‌ನಲ್ಲಿ ಶೆಲ್ ಕಂಪನಿಗಳಿಗೆ ಅವಕಾಶವಿಲ್ಲ. ಅದಾನಿ ಕಂಪನಿ ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದು ತಿಳಿಸಿದ್ದಾರೆ.

    ಹಣಕಾಸು ಸೇವಾ ಆಯೋಗದಿಂದ ಪರವಾನಗಿ ಪಡೆದ ಎಲ್ಲಾ ಜಾಗತಿಕ ವ್ಯಾಪಾರ ಕಂಪನಿಗಳು ಎಲ್ಲಾ ಅವಶ್ಯಕತೆಗಳನ್ನು ಪೂರೈಸಬೇಕು ಮತ್ತು ಆಯೋಗವು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಅದಾನಿ ಸಮೂಹ ವಿರುದ್ಧದ ಹಿಂಡೆನ್‍ಬರ್ಗ್ ವರದಿ ತನಿಖೆ – 6 ತಿಂಗಳ ಕಾಲಾವಕಾಶ ವಿಸ್ತರಣೆಗೆ ಸೆಬಿ ಮನವಿ

    ಹಿಂಡೆನ್‌ಬರ್ಗ್‌ ಆರೋಪ ಸುಳ್ಳು ಮತ್ತು ಆಧಾರ ರಹಿತ ಎಂದು ಹೇಗೆ ತೀರ್ಮಾನಕ್ಕೆ ಬರಲಾಯಿತು ಎಂದು ಕೇಳಿದ ಪ್ರಶ್ನೆಗೆ, ಮಾರಿಷಸ್‌ನಲ್ಲಿ ಕಂಪನಿ ಪರವಾನಗಿ ಪಡೆಯಬೇಕಾದರೆ ಷರತ್ತುಗಳನ್ನು ವಿಧಿಸಲಾಗುತ್ತದೆ. ಆ ಕಂಪನಿಗಳು ಷರತ್ತುಗಳಿಗೆ ಬದ್ಧವಾಗಿರಬೇಕು ಮತ್ತು ಆಯೋಗವೂ ಕಂಪನಿಯನ್ನು ಮೇಲ್ವಿಚಾರಣೆ ಮಾಡುತ್ತಿರುತ್ತದೆ. ಈ ಷರತ್ತುಗಳನ್ನು ಒಪ್ಪಿದ ಕಂಪನಿಗಳನ್ನು ಶೆಲ್‌ ಕಂಪನಿಗಳು ಎಂದು ಹೇಳುವುದು ಆಧಾರ ರಹಿತ ಎಂದು ಅವರು ತಿಳಿಸಿದರು.

     

    ಶತಕೋಟ್ಯಧಿಪತಿ ಗೌತಮ್ ಅದಾನಿ ಸಮೂಹ ಮಾರಿಷಸ್ ಮೂಲದ ಶೆಲ್ ಕಂಪನಿಗಳನ್ನು ಬಳಸಿ ಸ್ಟಾಕ್‌ ಮಾರುಕಟ್ಟೆಯಲ್ಲಿ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಳ ಮಾಡಿದೆ ಎಂದು ಹಿಂಡೆನ್‌ಬರ್ಗ್‌ ಆರೋಪಿಸಿತ್ತು.

    ಅದಾನಿ ಸಮೂಹದ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿನ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court) ನೇಮಕ ಮಾಡಿದ ಸಮಿತಿ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.

     

    ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ಒ.ಪಿ. ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್, ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡ ಸಮಿತಿಯನ್ನು ಸಿಜೆಐ ಡಿ.ವೈ. ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ ಮಾರ್ಚ್‌ನಲ್ಲಿ ನೇಮಿಸಿತ್ತು. ಸಮಿತಿ ವರದಿಯನ್ನು ಸಲ್ಲಿಸಿದ್ದು ಮೇ 12 ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲಿದೆ.