Tag: ಸಂಗೊಳ್ಳಿರಾಯಣ್ಣ

  • ವೀರಶೈವ ಲಿಂಗಾಯತ ಧರ್ಮ ಹುಟ್ಟಿದ್ದೇ ಮತಾಂತರದಿಂದ:  ಮಸೂದೆ ವಿರುದ್ಧ ಎಚ್.ವಿಶ್ವನಾಥ್ ಕಿಡಿ

    ವೀರಶೈವ ಲಿಂಗಾಯತ ಧರ್ಮ ಹುಟ್ಟಿದ್ದೇ ಮತಾಂತರದಿಂದ: ಮಸೂದೆ ವಿರುದ್ಧ ಎಚ್.ವಿಶ್ವನಾಥ್ ಕಿಡಿ

    -ಮತಾಂತರ ನಿಷೇಧ ಮಸೂದೆಗೆ ವಿರೋಧ
    -ಬಸವಣ್ಣರ ಮಾನವ ಧರ್ಮ ಒಡೆಯುತ್ತಿದ್ದಾರೆ ಸಿಎಂ

    ಮೈಸೂರು: ವೀರಶೈವ ಲಿಂಗಾಯತ ಧರ್ಮ ರೂಪುಗೊಂಡಿದ್ದೇ ಮತಾಂತರದಿಂದ. ನೀವು ಬಸವಣ್ಣ ಅವರನ್ನು ಬಂಧಿಸುತ್ತೀರಾ ಎನ್ನುವ ಮೂಲಕ ರಾಜ್ಯ ಸರ್ಕಾರದ ಮತಾಂತರ ನಿಷೇಧ ಮಸೂದೆಯನ್ನು ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ವಿರೋಧಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದರು. ಬಸವೇಶ್ವರರು ಕಟ್ಟಿದ ಮಾನವ ಧರ್ಮವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದಲೇ ಒಡೆಸಲಾಗುತ್ತಿದೆ. ಇದು ನಿಜಕ್ಕೂ ವಿಪರ್ಯಾಸದ ಸಂಗತಿ. ಭಾರತ ಬಹುತ್ವದ ದೇಶ. ಸಂವಿಧಾನದಲ್ಲೇ ಧಾರ್ಮಿಕ ಸ್ವಾತಂತ್ರ್ಯ ಕೊಡಲಾಗಿದೆ. ಬಸವಣ್ಣನ ಕಾಲದಲ್ಲೇ ಮತಾಂತರ ನಡೆಯಿತು. ಬಸವಣ್ಣ 12ನೇ ಶತಮಾನದಲ್ಲೇ ಶೋಷಿತರು, ಅಸ್ಪೃಶ್ಯರಿಗೆ ಲಿಂಗ ದೀಕ್ಷೆ ಮಾಡಿ ಲಿಂಗಾಯತ ಮಾನವ ಧರ್ಮ ಕಟ್ಟಿದರು. ಮಾನವ ಧರ್ಮಕ್ಕೆ ಬಸವಣ್ಣ ಅವರು ಎಲ್ಲರನ್ನೂ ಸೇರಿಸಿಕೊಂಡರು ಎಂದರು.

    basavaraj bommai

    ಹಾಗಾದರೆ ಮತಾಂತರ ವಿಧೇಯಕದ ಮೂಲಕ ಗಾಂಧೀಜಿ, ಬಸವಣ್ಣ ಅವರನ್ನು ಬಂಧಿಸಬೇಕು. ಅಡ್ವಾಣಿ, ಬಾಳಾ ಠಾಕ್ರೆ, ಪ್ರವೀಣ್ ತೊಗಾಡಿಯಾ ಕುಟುಂಬದಲ್ಲಿ ಅನ್ಯ ಧರ್ಮದವರನ್ನು ಮದುವೆಯಾಗಿದ್ದಾರೆ. ಇವರನ್ನೆಲ್ಲಾ ಡಿಸಿಗಳ ಮೂಲಕ ಜೈಲಿಗೆ ಹಾಕುತ್ತೀರಾ ಎಂದು ಖಾರವಾಗಿ ಪ್ರಶ್ನಿಸಿದರು.

    ಕಾಂಗ್ರೆಸ್ ಮತಾಂತರ ಕಾಯ್ದೆ ವಿಚಾರದಲ್ಲಿ ಇಬ್ಬಂದಿತನ ಪ್ರದರ್ಶನ ಮಾಡುತ್ತಿದೆ. ಕಲಾಪದ ಬೆಲ್ ಬಾರಿಸಿದ ಮೇಲೂ ಸದನದ ಹೊರಗೆ ಹರಟೆ ಹೊಡೆಯುತ್ತಾ ಕೂತಿದ್ದರು. ಕಾಂಗ್ರೆಸ್‌ನವರು ಮತ ಬ್ಯಾಂಕ್‌ಗಾಗಿ ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಪಾಡಲು ಸಾಧ್ಯವಿದೆಯಾ ಎಂದು ಪ್ರಶ್ನಿಸಿದ ಅವರು, ಸರ್ಕಾರದಿಂದ ಧಾರ್ಮಿಕ ದಿಗ್ಭಂಧನ ಹಾಕಲಾಗುತ್ತಿದೆ. ದಲಿತರಿಗೆ ಇದು ದೊಡ್ಡ ದಿಗ್ಭಂಧನ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿಚಾರಣೆಗೆ ಕೋರ್ಟ್‌ಗೆ ಬಂದವರ ಮೇಲೆ ತಹಶೀಲ್ದಾರ್‌ ಹಲ್ಲೆ!

    ಮತಾಂತರ ತಡೆ ವಿಧೇಯಕದ ವಿಷಯದಲ್ಲಿ ಬಸವೇಶ್ವರರ ಹೆಸರಿನ ಮಠಗಳು, ಅಹಿಂದ ಮಠಗಳು, ವೀರಶೈವ ಮಠಗಳು, ಚಿತ್ರದುರ್ಗದ ಪ್ರಗತಿಪರ ಮುರುಘ ಮಠದ ಸ್ವಾಮೀಜಿ ಯಾಕೆ ಮಾತಾಡುತ್ತಿಲ್ಲ. ಸರ್ಕಾರದ ಅನುದಾನ ಮಠಗಳ ಬಾಯಿ ಮುಚ್ಚಿಸಿದೆಯಾ ಎಂದು ಪ್ರಶ್ನಿಸಿದರು.

    ಸಾಹಿತಿಗಳು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮಾತ್ರ ಸಿಮೀತರಾಗಿದ್ದಾರೆ. ಕ್ರಿಶ್ಚಿಯನ್ ದೇಶಗಳಲ್ಲಿ ಕನ್ನಡಿಗರು ಬದುಕು ಕಟ್ಟಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ವಾಪಾಸ್ ಕರೆಸಿಕೊಳ್ಳಿ. ಕ್ರಿಶ್ಚಿಯನ್ನರಿಗೆ ಇಲ್ಲಿ ಯಾಕೆ ಕಿರುಕುಳ ನೀಡುತ್ತೀದ್ದಿರಾ? ಈ ವಿಧೇಯಕ ಜಾಗತಿಕವಾಗಿ ಪರಿಣಾಮ ಬೀರುತ್ತದೆ ಎಂದರು. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಶಾಸಕಾಂಗ ಸಮಿತಿ ರಚಿಸಿ ಮತ್ತೆ ಈ ವಿಧೇಯಕದ ಚರ್ಚೆ ಆಗಲಿ. ಈ ನಿಟ್ಟಿನಲ್ಲಿ ದಲಿತರ ಧಾರ್ಮಿಕ ಸ್ವಾತಂತ್ರ್ಯ ಹರಣ ತಡೆಯಬೇಕು. ಈ ವಿಧೇಯಕ ತರುವುದರಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ಅವರು ಈ ವಿಧೇಯಕ ತರಲು ಯಾಕೆ ಇಷ್ಟು ಅವಸರ ಮಾಡುತ್ತಿದ್ದಾರೆ? ಜನರಿಗೆ ಸರ್ಕಾರ ಉತ್ತರ ಕೊಡಲಿ. ವೀರಶೈವ ಲಿಂಗಾಯತ ಧರ್ಮ ಮತಾಂತರದಿಂದಲೇ ರೂಪಗೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: 2023ರ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲೇ ನಡೆಯುತ್ತೆ: ವಿ. ಸೋಮಣ್ಣ

    ಬೆಳಗಾವಿಯಲ್ಲಿ ನಡೆದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮರಾಠಿ ಮತಕ್ಕಾಗಿ ಬೆಳಗಾವಿಯ ಮುಖಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನವಾದರೂ ಮಾತಾಡುತ್ತಿಲ್ಲ. ಸರ್ಕಾರ ಎಂಇಎಸ್ ಬ್ಯಾನ್ ಮಾಡಬೇಕು. ನಮ್ಮ ಅನ್ನ ತಿಂದು, ನೀರು ಕುಡಿದು ನಮ್ಮ ಬಾವುಟ ಸುಟ್ಟರೆ ಅಂಥವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಎಂಇಎಸ್ ಅನ್ನು ಮೊದಲು ಬ್ಯಾನ್ ಮಾಡಿ ಎಂದು ಒತ್ತಾಯಿಸಿದರು.

  • ಕರವೇ ಪ್ರತಿಭಟನೆ- ಬೆಂಗಳೂರು, ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

    ಕರವೇ ಪ್ರತಿಭಟನೆ- ಬೆಂಗಳೂರು, ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

    ನೆಲಮಂಗಲ: ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಹಾಗೂ ಕನ್ನಡಿಗರ ವಾಹನಗಳಿಗೆ ಕಲ್ಲು ತೂರಿದ ಎಂಇಎಸ್ ಪುಂಡರ ಕೃತ್ಯವನ್ನು ಖಂಡಿಸಿ ನಗರದಲ್ಲಿ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಮಾಕಳಿ ಬಳಿ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಹೀಗಾಗಿ ಕೆಲಕಾಲ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಕರವೇ ಕಾರ್ಯಕರ್ತರು ಎಂಇಎಸ್ ಪುಂಡರಿಗೆ ಹಾಗೂ ಸಂಘಟನೆಗೆ ಬೆಂಬಲ ನೀಡುತ್ತಿರುವ ರಾಜಕಾರಣಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಂಇಎಸ್ ಸಂಘಟನೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರೆಲ್ಲಾ ಕಾಂಗ್ರೆಸಿಗರು: ಶ್ರೀರಾಮುಲು

    ಕರವೇ ನಾರಾಯಣ ಗೌಡ ಬಣದ ಮಂಜೇಗೌಡ ನೇತೃತ್ವದಲ್ಲಿ ಕಾರ್ಯಕರ್ತರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿ, ರಸ್ತೆ ತೆರವುಗೊಳಿಸಿದರು. ಇದನ್ನೂ ಓದಿ: ಎಲ್ಲರನ್ನೂ ಅಪರಾಧಿ, ಆರೋಪಿಗಳು ಎಂದು ನೋಡಬಾರದು: ಲಕ್ಷ್ಮಿ ಹೆಬ್ಬಾಳ್ಕರ್

  • ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದವರು ದೇಶದ್ರೋಹಿಗಳು: ವಿನೋದ್ ರಾಜ್

    ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದವರು ದೇಶದ್ರೋಹಿಗಳು: ವಿನೋದ್ ರಾಜ್

    ನೆಲಮಂಗಲ: ಸಂಗೊಳ್ಳಿ ರಾಯಣ್ಣ ಕನ್ನಡಿಗ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಪ್ರತಿಮೆ ಧ್ವಂಸ ಮಾಡುವುದು ದೇಶದ್ರೋಹ ಮಾಡಿದಂತೆ ಆಗುತ್ತದೆ. ಪ್ರತಿಮೆ ಧ್ವಂಸ ಮಾಡುವವರನ್ನು ದೇಶದ್ರೋಹಿಗಳೆಂದು ಕರೆದು ಕ್ರಮಕೈಗೊಳ್ಳಿ ಎಂದು ನಟ ವಿನೋದ್ ರಾಜ್ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಹೋರಾಟಗಾರರಿಗೆ ಬೆಂಬಲವನ್ನು ಸೂಚಿಸಿದರು. ಕನ್ನಡಿಗರು ದಂಗೆಗೆ ಮುಂದಾದರೆ ಏನಾಗುತ್ತದೆ ಎಂದು ಹಿರಿಯರು ಗೋಕಾಕ್ ಚಳುವಳಿಯಿಂದ ತೋರಿಸಿದ್ದಾರೆ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಕೆಲವು ಕೆಲಸ ಆಗುತ್ತಿದೆ. ಅದನ್ನು ಎಂದಿಗೂ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

    ಎಂಇಎಸ್ ಪುಂಡಾಟಿಕೆಯಿಂದ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ಜನರನ್ನು ಬಲಿಪಶು ಮಾಡಿ ಹೋರಾಟ ಮಾಡುವ ಸಂಕಷ್ಟಕ್ಕೆ ಸರ್ಕಾರ ದೂಡುತ್ತಿದೆ. ಪ್ರತಿಮೆ ಧ್ವಂಸ, ಸರ್ಕಾರಿ ವಾಹನಗಳಿಗೆ ದಾಳಿ ಮಾಡುವ ಮಟ್ಟಕ್ಕೆ ಬಿಟ್ಟುಕೊಂಡಿರುವುದು ತಪ್ಪು. ಈ ಘಟನೆ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಿರುವುದು ತಿಳಿಯುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

    ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಕೆಲಸವಾಗುತ್ತಿದೆ ಎಂದಾಗ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಿವಣ್ಣನವರ ಹೋರಾಟದ ಹಿಂದೆ ನಾವೆಲ್ಲ ಇರುತ್ತೇವೆ. ನಮ್ಮ ತಾಯಿ ಕೂಡ ಹೋರಾಟಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ