Tag: ಸಂಗೊಳ್ಳಿ ರಾಯಣ್ಣ

  • ರಾಯಣ್ಣರ ಪ್ರತಿಮೆಗೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ?: ಹೆಚ್‍ಡಿಕೆ

    ರಾಯಣ್ಣರ ಪ್ರತಿಮೆಗೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ?: ಹೆಚ್‍ಡಿಕೆ

    ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ? ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮುಖದ ಭಾಗ, ಮೂಗು ಮತ್ತು ಕತ್ತಿಯನ್ನು ಕಿಡಿಗೇಡಿಗಳು ಶನಿವಾರದ ಮುಂಜಾವಿನಲ್ಲಿ ವಿರೂಪಗೊಳಿಸಿದ್ದರು. ರಾಯಣ್ಣ ಹಿಡಿದಿದ್ದ ಕಠಾರಿಯನ್ನು ರಸ್ತೆಯ ಬದಿಗೆ ಎಸೆದಿದ್ದರು. ಸದ್ಯ ಈ ಕುರಿತಂತೆ ರಾಷ್ಟ್ರೀಯ ಪಕ್ಷಗಳ ವಿರುದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ.ದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

     

    ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ ಎಂದಿದ್ದಾರೆ.

    ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳಬಳ್ಳಿಗಳು ಎಂದು ಹೇಳಿದ್ದಾರೆ.

    ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

    ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ-ಕರ್ನಾಟಕ ಅಲ್ಲ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೇವೆ. ಇದು ಇನ್ನೆಷ್ಟು ದಿನ? ಎಂದು ಪ್ರಶ್ನಿಸಿದ್ದಾರೆ.

    ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರಪ್ರೇಮದಲ್ಲೂ ಬೇಧ ಭಾವವೇ? ಎಂದು ಕಿಡಿಕಾರಿದ್ದಾರೆ.  ಇದನ್ನೂ ಓದಿ:  ಶಾಸಕರೊಬ್ಬರ ಸಂತೃಪ್ತಿಗೆ ಡಿಕೆಶಿ ಎಂಇಎಸ್ ಪರ ಬ್ಯಾಟಿಂಗ್: ಸಚಿವ ಈಶ್ವರಪ್ಪ

    2006ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ? ಎಂದಿದ್ದಾರೆ.

    ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ಕೈಚಳಕದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ವಿಷಯಾಂತರ ಮಾಡುವ ಹುನ್ನಾರ ಏಕೆ? ಕನ್ನಡಿಗರ ಹೆಮ್ಮೆ ಸಂಗೊಳ್ಳಿರಾಯಣ್ಣ ಎಂದು ಟ್ವೀಟ್ ಮಾಡಿದ್ದಾರೆ.

  • ಎಂಇಎಸ್ ಪುಂಡಾಟ ನಿಲ್ಲಲಿ: ಡಾಲಿ ಧನಂಜಯ್

    ಎಂಇಎಸ್ ಪುಂಡಾಟ ನಿಲ್ಲಲಿ: ಡಾಲಿ ಧನಂಜಯ್

    ಕೋಲಾರ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಕೃತಿ ಹಾಳು ಮಾಡಿ ವಿಕೃತಿ ಮೆರೆಯುತ್ತಿರುವ ಎಂಇಎಸ್ ಪುಂಡರ ಪುಂಡಾಟ ನಿಲ್ಲಿಸಬೇಕು ಎಂದು ನಟ ಡಾಲಿ ಧನಂಜಯ್ ಹೇಳಿದರು.

    ಕೋಲಾರದ ನರಸಾಪುರದಲ್ಲಿ ಪುನೀತ್ ನಮನ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದಿರುವ ಘಟನೆ ಖಂಡನೀಯವಾಗಿದೆ. ಮರಾಠರು, ಕನ್ನಡಿಗರು ದೇಶದ ಮೂಲೆ ಮೂಲೆಗಳಲ್ಲಿ ನೆಲೆಸಿದ್ದಾರೆ. ಇಂತಹ ಅನಾಹುತಗಳನ್ನು ಮಾಡುವ ಮೊದಲು ಎಲ್ಲರೂ ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ರಾಜ್ಯ ಸರ್ಕಾರ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದಿಷ್ಟು ಪುಂಡರು ಮಾಡಿರುವ ಕೃತ್ಯದಿಂದ ಎಲ್ಲರಿಗೂ ತೊಂದರೆ ಆಗೋದು ಬೇಡ. ನಾನು ಕಲಾವಿದನಾಗಿ, ಸಾಮಾನ್ಯ ವ್ಯಕ್ತಿಯಾಗಿ ಪ್ರತಿಭಟಿಸಬಲ್ಲೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

    ರಾಜ್ಯದಲ್ಲಿ ಸಾಮರಸ್ಯ ಕದಡುವ ಕೆಲಸ ಆಗಬಾರದು. ಹೋರಾಟದ ವಿಚಾರದಲ್ಲಿ ಚಲನಚಿತ್ರ ಮಂಡಳಿಯ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

  • ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

    ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

    ಮುಂಬೈ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಇತ್ತ ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

    ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಟ್ವಿಟ್ಟರ್ ಮೂಲಕ ಟ್ವೀಟ್ ಮಾಡಿರುವ ಠಾಕ್ರೆ, ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ. ಈ ಬಗ್ಗೆ ನೀವು ಮಧ್ಯಪ್ರವೇಶಿಸಬೇಕು. ಶಿವಾಜಿಯನ್ನು ಕೇವಲ ಮಹರಾಷ್ಟ್ರದಲ್ಲಿ ಮಾತ್ರ ಪೂಜಿಸುವುದಿಲ್ಲ ದೇಶದಾದ್ಯಂತ ಗೌರವಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದಾರೆ. ಅಲ್ಲಿ ಬಿಜೆಪಿ ಸರ್ಕಾರವಿದೆ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ವೇಳೆ ಸುಮ್ಮನಿದ್ದ ಠಾಕ್ರೆ ಇದೀಗ ಕನ್ನಡಿಗರ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಅದಲ್ಲದೆ ಮಹರಾಷ್ಟ್ರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮಕ್ಕೆ ಮುಂದಾಗದೇ ಇದೀಗ ಕರ್ನಾಟಕದ ಮೇಲೆ ಆರೋಪ ಮಾಡುತ್ತೀರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

  • ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಪ್ರತಿಷ್ಠಾಪನೆಗೊಳಿಸಲಾಗಿದೆ.

    ಶುಕ್ರವಾರ ತಡರಾತ್ರಿ ಬೆಳಗಾವಿ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಪಡಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿಗೊಳಿಸಿ ದುಷ್ಕೃತ್ಯವೆಸಗಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಜಾಗದಲ್ಲಿಯೇ ಆರು ಅಡಿ ಎತ್ತರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೊಸ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

    ಬೆಳಗಾವಿ ಪೊಲೀಸರು ಕೊಟ್ಟ ಭರವಸೆಯಂತೆ ಹೊಸ ಮೂರ್ತಿ ತಂದುಕೊಟ್ಟಿದ್ದು, ರಾಯಣ್ಣನ ಪ್ರತಿಮೆಗೆ ಕನ್ನಡಪರ ಸಂಘಟನೆಗಳು, ಸ್ಥಳೀಯ ನಿವಾಸಿಗಳಿ ಕ್ಷೀರಾಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

  • ರಾಜ್ಯದಲ್ಲಿ ಪಟ್ಟಾಭದ್ರ ಹಿತಾಸಕ್ತಿಗಳಿಂದ ಗೊಂದಲ ಸೃಷ್ಟಿ: ಕೆ.ಎಸ್ ಈಶ್ವರಪ್ಪ

    ರಾಜ್ಯದಲ್ಲಿ ಪಟ್ಟಾಭದ್ರ ಹಿತಾಸಕ್ತಿಗಳಿಂದ ಗೊಂದಲ ಸೃಷ್ಟಿ: ಕೆ.ಎಸ್ ಈಶ್ವರಪ್ಪ

    ಶಿವಮೊಗ್ಗ: ರಾಜ್ಯದಲ್ಲಿ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ನಡೆಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಅವರ ಪುಂಡಾಟಿಕೆ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸವನ್ನು ಖಂಡಿಸುತ್ತೇನೆ. ಈ ಬಗ್ಗೆ ಬೇರೆ ಬೇರೆ ರೀತಿಯ ಕುತಂತ್ರ ನಡೆಯುತ್ತಿದೆ. ಅದನ್ನು ನಿಭಾಯಿಸುವ ಶಕ್ತಿ ಗೃಹ ಸಚಿವರಿಗೆ ಇದೆ. ರಾಜ್ಯದಲ್ಲಿ ವಿದ್ವಂಸಕಾರಿ ನಡೆಸುತ್ತಿರುವ ಕೃತ್ಯಕ್ಕೆ ಸರಕಾರ ಸರಿಯಾದ ಉತ್ತರ ಕೊಡುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದರು.

    ಸಿ.ಟಿ.ರವಿ ಅವರಿಗೆ ಡಿಕೆಶಿ ಲೂಟಿ ರವಿ ಎಂದು ಹೇಳಿಕೆ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ಅವರು ತಿಹಾರ್ ಜೈಲಿಗೆ ಹೋಗಿದ್ದರು. ನೀವು ತಿಹಾರ್ ಜೈಲಿಗೆ ಏಕೆ ಹೋಗಿದ್ದೀರಿ ಎನ್ನುವುದನ್ನು ಸ್ಪಷ್ಟವಾಗಿ ಹೇಳಬೇಕು. ಯಾವುದೇ ಕೇಸ್ ಇಲ್ಲದ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆದಿದ್ದೀರಾ, ನೀವು ಈಗಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

    ಸರ್ಕಾರದಲ್ಲಿ ಸಮಸ್ಯೆ ಇದ್ದರೆ ಟೀಕೆ ಮಾಡಿ ಅದಕ್ಕೆ ಉತ್ತರ ಕೊಡುತ್ತೇವೆ. ಪಕ್ಷದಲ್ಲಿ ಗೊಂದಲ ಇದ್ದರೆ ಅದನ್ನು ಟೀಕೆ ಮಾಡಬಹುದು. ಆದರೆ ವೈಯಕ್ತಿಕವಾಗಿ ಸಿ.ಟಿ.ರವಿ ವಿರುದ್ಧ ಮಾತನಾಡಿದ್ದು, ಬಿಪಿಯ ಕಾರ್ಯಕರ್ತರಿಗೆ ನೋವುಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: 10 ಲಕ್ಷ ರೂ. ವರದಕ್ಷಿಣೆ ಕೇಳಿದ ವರನಿಗೆ ಮದುವೆ ಮನೆಯಲ್ಲೇ ಬಿತ್ತು ಗುಸಾ

    ಈ ಸರ್ಕಾರ ಬಿಟ್ ಕಾಯಿನ್, 40% ಸರ್ಕಾರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬರಿ ಬಾಯಿಯಲ್ಲಿ ಹೇಳೋದನ್ನು ಬಿಟ್ಟು, ವಿಧಾನಸಭೆಯಲ್ಲಿ ಚರ್ಚೆಗೆ ಬನ್ನಿ. ಅಧಿವೇಶನ ಆರಂಭವಾಗಿ ಒಂದು ವಾರ ಕಳೆಯಿತು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕಿತ್ತು. ಇವರು ಬಿಟ್ ಕಾಯಿನ್, 40% ಎಂದು ಹೇಳ್ತಾನೆ ಇರುತ್ತಾರೆ. ಯಾವುದನ್ನು ನಿಖರವಾಗಿ ಆಗಿ ಹೇಳುತ್ತಿಲ್ಲ. ದಾಖಲೆ ಸಮೇತ ಕೊಟ್ಟರೆ ಅದಕ್ಕೆ ಎಲ್ಲಿ ಉತ್ತರಿಸಬೇಕೋ ಅಲ್ಲಿ ಉತ್ತರ ಕೊಡುತ್ತೇವೆ ಎಂದರು. ಇದನ್ನೂ ಓದಿ: ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

    ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯದಲ್ಲಿ ಏನು ರಾಮರಾಜ್ಯ ಇತ್ತಾ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಲ್ಲಿಯೂ ಒಂದೇ ಒಂದು ಗಲಾಟೆ ಆಗಲಿಲ್ಲವಾ. ರಾಮನಗರದಲ್ಲಿ ಹಿಂದೂ ಮುಸ್ಲಿಂ ಗಲಾಟೆ ಮಾಡಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಇಳಿಸಿದ್ದು ಕಾಂಗ್ರೆಸ್ ಸರ್ಕಾರವೇ ಆಗಿತ್ತು ಎಂದು ವ್ಯಂಗ್ಯವಾಡಿದರು.

  • ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಆರಗ ಜ್ಞಾನೇಂದ್ರ

    ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಆರಗ ಜ್ಞಾನೇಂದ್ರ

    ಶಿವಮೊಗ್ಗ: ವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೆರಡು ದಿನದಿಂದ ಬೆಳಗಾವಿಯಲ್ಲಿ ಪುಂಡತನ ಹೆಚ್ಚಾಗುತ್ತಿದ್ದು, ನಿನ್ನೆ ರಾತ್ರಿಯೂ ಗುಂಪು ಸೇರಿ ಸರ್ಕಾರಿ ವಾಹನಗಳಿಗೆ ಬೆಂಕಿ ಇಡುವ ಮೂಲಕ ಶಾಂತಿಯನ್ನು ಕದಡುವ ಕೆಲಸ ಮಾಡಿದ್ದಾರೆ. ಇಂತಹ ಕೆಲಸವನ್ನು ಮಾಡಿದವರು ಯಾರೇ ಆದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಇನ್ನೊಮ್ಮೆ ಇಂತಹ ಪ್ರಕರಣ ಆಗದಿರುವ ಹಾಗೇ ನೋಡಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ಅವರು ನಮ್ಮೆಲ್ಲರ ಹೆಮ್ಮೆಯ ಪ್ರತೀಕವಾಗಿದ್ದಾರೆ. ಇವರಿಬ್ಬರೂ ಪ್ರತಿಯೊಬ್ಬ ನಾಗರಿಕರೂ ಹೆಮ್ಮೆ ಹಾಗೂ ಗರ್ವದಿಂದ ನೆನಸಿಕೊಳ್ಳುವಂತಹ ಭಾರತೀಯ ಪುತ್ರರು. ಇವರ ಹೆಸರಿನಲ್ಲಿ, ಕೆಲವು ಕಿಡಿಗೇಡಿಗಳು ದುಷ್ಕೃತ್ಯ ನಡೆಸಿ, ಭಾಷೆ ಹಾಗೂ ಸಹೋದರತ್ವ ಬಾಂಧವ್ಯವನ್ನು ಕೆಡಿಸುವಂತಹ ಕೃತ್ಯ ಎಸಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಜೊತೆಗೆ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆಗೆ ಹಾನಿ ಮಾಡಿರುವ ಘಟನೆಯನ್ನು ಖಂಡಿಸುತ್ತೇನೆ ಎಂದರು. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

    ಘಟನೆಯ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಬೆಂಗಳೂರು ಹಾಗೂ ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯ ಕಾಪಾಡಲು ಸಹಕರಿಸೇಕೆಂದು, ವಿನಂತಿಸುತ್ತೇನೆ ಎಂದು ಮನವಿ ಮಾಡಿದರು. ಇದನ್ನೂ ಓದಿ: MES ಪುಂಡಾಟಿಕೆಯನ್ನು ಖಂಡಿಸಿದ ಸಿಎಂ – 27 ಮಂದಿ ಅರೆಸ್ಟ್

    ರಾಯಣ್ಣ ಮೂರ್ತಿ ಭಂಗ ಪ್ರಕರಣದ ಕುರಿತು ಮಾತನಾಡಿದ ಅವರು, ರಾಯಣ್ಣ ಮೂರ್ತಿ ಭಂಗ ಮಾಡಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ಕೆಲವರ ವಶ ಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

  • 159 ಕೋಟಿ ವೆಚ್ಚ – ಈ ವರ್ಷವೇ ರಾಯಣ್ಣ ಸೈನಿಕ ಶಾಲೆ ಪ್ರಾರಂಭ

    ಬೆಂಗಳೂರು: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ 109 ಕೋಟಿ ಖರ್ಚಾಗಿದೆ. ಈ ವರ್ಷ 50 ಕೋಟಿ ಖರ್ಚು ಮಾಡಿ, ಅದನ್ನು ಪೂರ್ಣ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಕನಕ ಜಯಂತಿ ಹಿನ್ನೆಲೆ ಶಾಸಕರ ಭವನದಲ್ಲಿರುವ ಕನಕದಾಸ ಪ್ರತಿಮೆಗೆ ಮಲಾರ್ಪಣೆ ಮಾಡಿ ಮಾತನಾಡಿದ ಅವರು, ಕನಕದಾಸರ ದಾಸ ಶ್ರೇಷ್ಠರು ಅವರು ಮೊದಲು ರಾಜ ಆಗಿದ್ದರು. ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ಕೊಟ್ಟ ತತ್ವಜ್ಞಾನಿ. ವಿಶ್ವಮಾನ ಕಲ್ಪನೆ ಸಾರಿದವರು, ಸತ್ಯವನ್ನು ಹೇಳಿದವರು. ಕನಕದಾಸರು ಶಿಗ್ಗಾಂವ ತಾಲೂಕಿನಲ್ಲಿ ಜನಿಸಿದರು. ಇವರ ಕರ್ಮ ಭೂಮಿ ಕಾಗಿನೆಲೆಯಾಗಿದೆ. ರಾಜ್ಯಾದ್ಯಂತ ದಾಸರ ಪದಗಳನ್ನು ಹಾಡುತ್ತಾ ಜನರಿಗೆ ಜೀವದ ದಾರಿ ತೋರಿಸಿದವರು. ಕುಲ ಕುಲ ಎಂದು ಬಡೆದಾಡದಿರಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ನಿಮ್ಮ ಹನಿಮೂನ್ ಕಾಲ ಮುಗಿದಿದೆ: ಸಿದ್ದರಾಮಯ್ಯ

    ಅವರ ತತ್ವ ಆದರ್ಶಗಳು ಇವತ್ತಿಗೂ ಪ್ರಸ್ತುತವಾಗಿದೆ. ಅವರ ವಿಚಾರಗಳನ್ನು ಇಟ್ಟುಕೊಂಡು ಬಾಡಗ್ರಾಮದಲ್ಲಿ ಕನಕದಾಸರ ಅರಮನೆ ನಿರ್ಮಾಣ ಮಾಡಲಾಗಿದೆ. ಕಾಗಿನೆಲೆಯಲ್ಲಿ ಸ್ಮಾರಕವನ್ನು ಕೂಡ ಮಾಡಿದ್ದೇವೆ. ಕನಕದಾಸರ ತ್ರಿಪದಿಗಳು, ದಾಸರ ಪದಗಳು ಆದರ್ಶ, ಸಂಕಲ್ಪವಾಗುವ ದಿನವಾಗಿದೆ ಎಂದರು. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಕ್ಕಟ್ಟು – ಕಾಂಗ್ರೆಸ್‍ನಿಂದ ಟಿಕೆಟ್ ಘೋಷಣೆ ವಿಳಂಬ

    ಅದೇ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಸಮಾಧಿ ಅಭಿವೃದ್ಧಿ ಮಾಡುತ್ತಿದ್ದೇವೆ. ಈಗಾಗಲೇ 109 ಕೋಟಿ ಖರ್ಚಾಗಿದೆ. ಈ ವರ್ಷ 50 ಕೋಟಿ ಖರ್ಚು ಮಾಡಿ, ಅದನ್ನು ಪೂರ್ಣ ಮಾಡುತ್ತೇವೆ. ಯುವಕರಿಗಾಗಿ ಆದರ್ಶಪ್ರಾಯ ಮತ್ತು ಶಿಸ್ತಿನ ಶಾಲೆ ಮಾಡುತ್ತಿದ್ದೇವೆ. ಈ ಬಗ್ಗೆ ಕೇಂದ್ರದ ರಾಜನಾಥ್ ಸಿಂಗ್ ಅವರ ಜೊತೆಗೆ ಮಾತನಾಡಿದ್ದೇನೆ. ಜೊತೆಗೆ ಪತ್ರನೂ ಬರೆದಿದ್ದೇನೆ. ಸೈನಿಕ ಶಾಲೆ ಪೂರ್ಣವಾದ ಮೇಲೆ ಕೇಂದ್ರ ರಕ್ಷಣಾ ಇಲಾಖೆ ತೆಗೆದುಕೊಳ್ಳಬೇಕು. ಇದು ರಾಜ್ಯ ಸರ್ಕಾರದ ಇಚ್ಛೆಯಾಗಿದೆ. ಕೆಲಸ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ ತಿಳಿಸಿದರು.

  • ಸಂಗೊಳ್ಳಿಯ ಸೈನಿಕ ಶಾಲೆಯಲ್ಲಿ ಕೆಚ್ಚೆದೆಯ ರಾಯಣ್ಣನಂತ ಸೈನಿಕರನ್ನು ತಯಾರಿಸುತ್ತೇವೆ: ಕಾರಜೋಳ

    ಸಂಗೊಳ್ಳಿಯ ಸೈನಿಕ ಶಾಲೆಯಲ್ಲಿ ಕೆಚ್ಚೆದೆಯ ರಾಯಣ್ಣನಂತ ಸೈನಿಕರನ್ನು ತಯಾರಿಸುತ್ತೇವೆ: ಕಾರಜೋಳ

    ಬೆಳಗಾವಿ: ಕೆಲವೇ ದಿನಗಳಲ್ಲಿ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಲೋಕಾರ್ಪಣೆಗೊಳ್ಳಲಿದೆ. ಈ ಶಾಲೆಯಲ್ಲಿ ಸಂಗೊಳ್ಳಿ ರಾಯಣ್ಣನನಂತಹ ಸೈನಿಕರನ್ನು ರಾಷ್ಟ್ರದ ರಕ್ಷಣೆಗಾಗಿ ತಯಾರು ಮಾಡುತ್ತೇವೆ ಎಂದು ಜಲಸಂಪನ್ಮೂಲ ಇಲಾಖೆ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿಯ ಬಸವರಾಜ್ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು. ಇದನ್ನೂ ಓದಿ: ಹುತಾತ್ಮ ಸೋನಿಯಾ ಗಾಂಧಿ – ಭಾಷಣ ವೇಳೆ ಡಿಕೆಶಿ ಯಡವಟ್ಟು

    ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಸಂಗೊಳ್ಳಿ ರಾಯಣ್ಣನ ಜಯಂತಿ ಉತ್ಸವ ಮಾಡುವುದರ ಜೊತೆಗೆ ಸಂಗೊಳ್ಳಿ ರಾಯಣ್ಣನವರ ಹೆಸರಿನಲ್ಲಿ ಸಂಗೊಳ್ಳಿಯಲ್ಲಿ ಒಂದು ಸೈನಿಕ ಶಾಲೆಯನ್ನು 150 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಅದು ಕೆಲವೇ ದಿನಗಳಲ್ಲಿ ಲೋಕಾರ್ಪಣೆ ಆಗಲಿದೆ. ಮಹನೀಯರ ಹೆಸರಿನಲ್ಲಿ ಕೇವಲ ಸಮುದಾಯ ಭವನ ಕಟ್ಟುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ದೇಶದ ಮಹನೀಯರ ಹೆಸರಿನಲ್ಲಿ ಶಾಲೆಗಳನ್ನು ತೆರೆಯುವ ಮೂಲಕ ಅವರನ್ನು ಜೀವಂತವಾಗಿ ಇಡುವ ಕೆಲಸ ಮಾಡಬೇಕು ಎಂದು ತಮ್ಮ ಅಭಿಪ್ರಾಯಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಬೆನಕೆ, ಡಿಸಿ ಮಹಾಂತೇಶ್ ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ, ಜಿಲ್ಲಾ ಪಂಚಾಯತಿ ಸಿಇಓ ದರ್ಶನ್, ಅಶೋಕ್ ಸದಲಗೆ, ವಿಶೇಷ ಉಪನ್ಯಾಸಕ ನೀಡಿದ ಮಹೇಶ್ ಚನ್ನಂಗಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

  • ದೇಶದಲ್ಲಿ ಮೊದಲು ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು ಟಿಪ್ಪು, ರಾಣಿ ಚನ್ನಮ್ಮ, ರಾಯಣ್ಣನ ಕಾಲದಲ್ಲಿ: ಸಿದ್ದು

    ದೇಶದಲ್ಲಿ ಮೊದಲು ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು ಟಿಪ್ಪು, ರಾಣಿ ಚನ್ನಮ್ಮ, ರಾಯಣ್ಣನ ಕಾಲದಲ್ಲಿ: ಸಿದ್ದು

    – ಸ್ವಾತಂತ್ರ್ಯ ಸಂಗ್ರಾಮದ ಪಾಠ ಹೇಳಿದ ಸಿದ್ದರಾಮಯ್ಯ

    ದಾವಣಗೆರೆ: ನಮ್ಮ ದೇಶದಲ್ಲಿ ಬ್ರಿಟಿಷರ ವಿರುದ್ಧ ಮೊದಲು ಸ್ವಾತಂತ್ರ್ಯ ಸಂಗ್ರಾಮ ನಡೆಸಿದ್ದು ಟಿಪ್ಪು ಸುಲ್ತಾನ್, ರಾಣಿ ಚನ್ನಮ್ಮನ ಹಾಗೂ ಸಂಗೊಳ್ಳಿ ರಾಯಣ್ಣನ ಕಾಲದಲ್ಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆದರು.

    ಜಿಲ್ಲೆಯ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಯಣ್ಣ ಸೋತಿದ್ದು, ನಮ್ಮಲ್ಲಿರುವ ಕೆಲ ದೇಶ ದ್ರೋಹಿಗಳಿಂದ. ರಾಯಣ್ಣ ಸಣ್ಣ ಸೈನ್ಯವನ್ನು ಕಟ್ಟಿ ಗೆರಿಲ್ಲಾ ಯುದ್ಧ ಮಾಡಿದ್ದರು. ಗೆರಿಲ್ಲಾ ಯುದ್ಧ ಅಂದ್ರೆ ನಿಮಗೆ ಗೊತ್ತಾ ಎಂದು ಜನರಿಗೆ ಸಿದ್ದರಾಮಯ್ಯ ಪ್ರಶ್ನಿಸಿದರು.

    ಯಕ್ಕನಹಳ್ಳಿಯನ್ನು ಮಿನಿ ನಂದಗಡ ಎಂದು ಕರೆಯುತ್ತಾರೆ ಅದು ತಪ್ಪು, ನಂದಗಡ ಸಂಗೊಳ್ಳಿ ರಾಯಣ್ಣನನ್ನು ನೇಣು ಹಾಕಿದ ಸ್ಥಳ. ಹುಟ್ಟಿದ ಜಾಗ ಸಂಗೊಳ್ಳಿ ಗ್ರಾಮ. ಮಿನಿ ನಂದಗಡ ಅಂದರೆ ರಾಯಣ್ಣನನ್ನು ನೇಣು ಹಾಕಿದ ಜಾಗಾನಾ ಇದು ಎಂದು ಪ್ರಶ್ನಿಸುವ ಮೂಲಕ ಗ್ರಾಮಸ್ಥರಿಗೆ ವಿಸ್ತಾರವಾಗಿ ವಿವರಿಸಿದರು. ಸಂಗೊಳ್ಳಿ ಹಾಗೂ ನಂದಗಡ ಅಭಿವೃದ್ಧಿಗೆ 270 ಕೋಟಿ ರೂ. ಬಿಡುಗಡೆ ಮಾಡಿದ್ದೆ. ಈಗ ಏನಾದರೂ ಅನುದಾನ ಕೊಡುತ್ತಿದ್ದಾರೇನಯ್ಯ ರೇವಣ್ಣ ಎಂದು ಪ್ರಶ್ನಿಸಿದರು.

    ರೇಣುಕಾಚಾರ್ಯ ನೀನು ಯಡಿಯೂರಪ್ಪನ ಜೊತೆ ಚೆನ್ನಾಗಿದ್ದೀಯಾ, ನೀನು ಹೇಳಿ ಬೇಗ ಅನುದಾನ ಕೊಡಿಸು. ರಾಯಣ್ಣ ಬಿಡಿ, ಚನ್ನಮ್ಮನ ಹೆಸರಿನಲ್ಲಾದರೂ ಅನುದಾನ ಬಿಡುಗಡೆ ಮಾಡಿ ಎಂದು ಶಾಸಕ ರೇಣುಕಾಚಾರ್ಯಗೆ ಕುಟುಕಿದರು.

  • ರಾಯಣ್ಣನನ್ನು ನಮ್ಮವರೇ ಹಿಡಿದು ಕೊಟ್ರು, ಇಂಥ ದೇಶ ದ್ರೋಹಿಗಳು ಯಾವಾಗಲೂ ಇರ್ತಾರೆ: ಸಿದ್ದರಾಮಯ್ಯ

    ರಾಯಣ್ಣನನ್ನು ನಮ್ಮವರೇ ಹಿಡಿದು ಕೊಟ್ರು, ಇಂಥ ದೇಶ ದ್ರೋಹಿಗಳು ಯಾವಾಗಲೂ ಇರ್ತಾರೆ: ಸಿದ್ದರಾಮಯ್ಯ

    ಮೈಸೂರು: ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಗೇರಿಲ್ಲ ಯುದ್ಧ ಮಾಡಿ ಬ್ರಿಟಿಷರಿಗೆ ಕಾಡಿದ್ದರು. ಅಪ್ರತಿಮ ವೀರ ಆಗಿದ್ದರು, ಅವರನ್ನ ಹಿಡಿಯೋಕೆ ಆಗುತ್ತಿರಲೇ ಇಲ್ಲ. ಆದರೆ ನಮ್ಮವರೇ ಯಾರೋ ಅವರನ್ನ ಹಿಡಿಯೋಕೆ ಸಹಾಯ ಮಾಡಿಬಿಟ್ಟರು ಎಂದು ಇತಿಹಾಸವನ್ನು ನೆನೆದರು.

    ಜಿಲ್ಲೆಯ ಗಂಧನಹಳ್ಳಿ ಗ್ರಾಮದಲ್ಲಿ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಗೇರಿಲ್ಲ ಯುದ್ಧ ಮಾಡಿ ಬ್ರಿಟಿಷರಿಗೆ ಕಾಡಿದ್ದರು. ಅಪ್ರತಿಮ ವೀರ ಆಗಿದ್ದರು, ಅವರನ್ನ ಹಿಡಿಯೋಕೆ ಆಗುತ್ತಿರಲೇ ಇಲ್ಲ. ಆದರೆ ನಮ್ಮವರೇ ಯಾರೋ ಅವರನ್ನ ಹಿಡಿಯೋಕೆ ಸಹಾಯ ಮಾಡಿಬಿಟ್ಟರು. ಕೊನೆಗೆ ಅವರನ್ನ ಬ್ರಿಟಿಷರು ಗಲ್ಲಿಗೇರಿಸಿದರು. ಇಂತಹ ದೇಶದ್ರೋಹಿಗಳು ಸಮಾಜದಲ್ಲಿ ಯಾವಾಗಲೂ ಇರುತ್ತಾರೆ ಎಂದು ಹೇಳಿದರು.

    ಅವರು ಹುಟ್ಟಿದ್ದು ಆಗಸ್ಟ್ 15ರಂದು. ಅವರನ್ನ ಗಲ್ಲಿಗೇರಿಸಿದ್ದು ಜನವರಿ 26ರಂದು. ಎರಡು ದಿನ ನಮ್ಮ ದೇಶಕ್ಕೆ ಅತ್ಯಂತ ವಿಶೇಷ ದಿನಗಳು. ನಿಮಗೆ ಗೊತ್ತಾ ಈ ದಿನಗಳು? ಸುಮ್ಮನೆ ಗೊತ್ತಿಲ್ಲದೆ ಮಾತನಾಡಬೇಡಿ. ಕೆಲವರಿಗೆ ಗೊತ್ತಿರುವುದಿಲ್ಲ ಆದರೂ ತಲೆ ಅಲ್ಲಾಡಿಸಿಬಿಡುತ್ತಾರೆ. ತಿಳ್ಕೋಬೇಕು ಇದನ್ನೆಲ್ಲ ಗೊತ್ತಾಯ್ತಾ ಎಂದು ಸಭೆಯಲ್ಲಿದ್ದವರನ್ನು ನಗೆಗಡಲಲ್ಲಿ ತೇಲಿಸಿದ್ದಾರೆ. ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿಮ್ಮೂರಿನಲ್ಲಿ ನಿರ್ಮಾಣ ಆಗಿದೆ. ಅವರ ಪ್ರತಿಮೆನಾ ಯಾಕೇ ನಿರ್ಮಾಣ ಮಾಡ್ತಾರೆ ಗೊತ್ತಾ? ಅವರಂತೆ ದೇಶ ಪ್ರೇಮ ಹುಟ್ಟಲಿ ಅಂತ. ಕುರುಬ ಜಾತಿಯಲ್ಲಿ ಹುಟ್ಟಿದಕ್ಕೆ ಅವರ ಪ್ರತಿಮೆ ಮಾಡೋದಲ್ಲ. ಅವರೇನು ಅರ್ಜಿ ಹಾಕ್ಕೊಂಡು ಕುರುಬ ಜಾತಿಯಲ್ಲಿ ಹುಟ್ಟಿರಲಿಲ್ಲ. ಇದನ್ನ ಅರ್ಥ ಮಾಡಿಕೊಳ್ಳಿ ಎಂದು ನೆರೆದಿದ್ದ ಜನರಿಗೆ ತಿಳಿ ಹೇಳಿದರು.

    ಇದೇ ವೇಳೆ ಹಳೆ ನೆನಪು ಬಿಚ್ಚಿಟ್ಟ ಸಿದ್ದರಾಮಯ್ಯ, ನಾನು ಲಾಯರ್ ಆಗಿದ್ದಾಗಲೂ ಗಂಧನಹಳ್ಳಿ ಗೊತ್ತು. ಆಗ ಮೂವರು ನಾಯಕರು ಇದ್ದರು. ಒಬ್ಬರಿಗೆ ಇನ್ನೊಬ್ಬರನ್ನು ಕಂಡರೆ ಆಗುತ್ತಿರಲಿಲ್ಲ. ಅವರನ್ನು ಒಟ್ಟಿಗೆ ಸೇರಿಸಿದರೆ ವಿಧಾನ ಸಭೆ ಚುನಾವಣೆ ಗೆಲ್ಲಬಹುದು ಎಂದು ಇಲ್ಲಿದೆ ಬಂದಿದ್ದೆ. ಅವರನ್ನ ಒಟ್ಟಾಗಿಸುವ ದಿನ ಮರಿ ಹೊಡೆದು ಮಾಂಸದ ಊಟ ಹಾಕಿದ್ದರು. ಹೀಗಾಗಿ ಈ ಗ್ರಾಮದ ಜೊತೆ ನನಗೆ ನಿಕಟ ಸಂಪರ್ಕ ಇದೆ ಎಂದರು.