Tag: ಸಂಘ

  • ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

    ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

    ನ್ನಡದ ಒಟ್ಟು ಸಿನಿಮಾ ಬೆಳವಣಿಗೆ, ಇತಿಹಾಸವನ್ನು ರಾಷ್ಟ್ರೀಯ ನೆಲೆಯಲ್ಲಿ ವಿಶ್ಲೇಷಣೆ ಮಾಡುವುದು ತುರ್ತು ಅಗತ್ಯವಿದೆ ಎಂದು ಹಿರಿಯ ನಿರ್ದೇಶಕ ಪದ್ಮಶ್ರೀ ಗಿರೀಶ್ ಕಾಸರವಳ್ಳಿ ಇಂದಿಲ್ಲಿ ಹೇಳಿದರು. ‘ಸಂಸ್ಕಾರ’ , ‘ಸ್ಕೂಲ್ ಮಾಸ್ಟರ್ ‘ ರೀತಿಯ ಚಿತ್ರಗಳನ್ನು ಸರಿಯಾಗಿ ಬಿಂಬಿಸುವ ಕೆಲಸ ಆಗಿಲ್ಲ. ರೌಡಿಸಂ ಮಾದರಿಯ ಸಿನಿಮಾಗಳನ್ನು‌ ಹೆಚ್ಚು ಹೆಚ್ಚು ಪ್ರೊಜೆಕ್ಟ್ ಮಾಡಿ ರಾಜ್ಯದ ಹೊರಗೂ ಕನ್ನಡ ಚಿತ್ರಗಳ ಕುರಿತಂತೆ ನಾವೇ ತಪ್ಪು ಕಲ್ಪನೆ ಮೂಡಿಸಿದ್ದೇವೆ,  ಅದನ್ನು ಹೋಗಲಾಡಿಸುವ ಅಗತ್ಯವಿದೆ’ ಎಂದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘವನ್ನು  ಉದ್ಘಾಟಿಸಿ, ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕನ್ನಡದ ಅಸ್ಮಿತೆ, ಕಲಾತ್ಮಕ ಹೆಗ್ಗಳಿಕೆ ತೋರಿಸಬೇಕು, ಆ ಕೆಲಸ ಆಗಬೇಕು. ಬೆಂಗಳೂರು ಅಲ್ಲದೆ ರಾಜ್ಯದ  ಆಚೆಗೂ  ಕನ್ನಡದಲ್ಲಿ ಈ ರೀತಿ ಸಾಧನೆ ಆಗಿದೆ ಎನ್ನುವುದು ತಿಳಿಸಬೇಕು’ ಎಂದು ಅವರು ಸಲಹೆ ನೀಡಿದರು.

    ‘ಕನ್ನಡದಲ್ಲಿ  ಒಳ್ಳೆಯ ಸಿನಿಮಾಗಳನ್ನು ಪ್ರೊಜೆಕ್ಟ್ ಮಾಡುತ್ತಿಲ್ಲ. ‘‌ಕಾಂತಾರ ‘ ತನ್ನ ಅಸ್ಮಿತೆಯಿಂದ ದೇಶವಿದೇಶಗಳಲ್ಲಿ ಯಶಸ್ಸು ಗಳಿಸಿತು. ಆದರೆ ‘ಕೆಜಿಎಫ್’ ಹಾಗಲ್ಲ, ಅದರ ಗೆಲುವಿಗೆ ಬೇರೆಯದೇ  ಆದ ಕಾರಣ ಇದೆ. ಕನ್ನಡದಲ್ಲಿ ಬೇರೆಯೇ ರೀತಿಯ ಚಿತ್ರಗಳು ಕಳೆದ ನಾಲ್ಕೈದು ವರ್ಷಗಳಲ್ಲಿ ಆಗಿದೆ. ‘ಬಳೆ ಕೆಂಪ’,  ‘ಪಿಂಕಿ ಎಲ್ಲಿ’, ‘ನಾನು ಕುಸುಮ’, ‘ಪೆದ್ರೋ’, ‘ಶಿವಮ್ಮ’ ಮುಂತಾದ ಚಿತ್ರಗಳು ಜಗತ್ತಿನಾದ್ಯಂತ  ಸದ್ದು ಮಾಡುತ್ತಿವೆ. ಅವುಗಳು ಜನರಿಗೆ ತಲುಪುತ್ತಿಲ್ಲ ಅಷ್ಟೇ’ ಎಂದು ಅವರು ಹೇಳಿದರು.  ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    ದಲಿತ, ಬಂಡಾಯ ಸಾಹಿತ್ಯ ಕನ್ನಡ ಚಿತ್ರರಂಗದಲ್ಲಿ ಚಿತ್ರ ಗೀತೆಯಲ್ಲಿ ಬಂದಿದೆ. ಆದರೆ  ಸಿನಿಮಾದಲ್ಲಿ ಬಂದಿಲ್ಲ. ‌ಅದನ್ನು ದಾಖಲು ಮಾಡವ ಅಗತ್ಯವಿದೆ ಎಂದ ಅವರು, ‘ಕೃತಿಯನ್ನು ಸಮಾಜದ ಬೆಳವಣಿಗೆ, ಕಾಲ ಮತ್ತು ಕಾಲಾತೀತವಾಗಿ ನೋಡಬೇಕಾಗಿದೆ. ಪುಟ್ಟಣ್ಣ ಅವರು ಸಾಂಸ್ಕೃತಿಕ, ಧಾರ್ಮಿಕ ನಿಲುವು ಇಟ್ಟುಕೊಂಡು ವಿಶ್ಲೇಷಣೆ ಮಾಡಬೇಕು. ಸಿನಿಮಾ ಶೂನ್ಯದಲ್ಲಿ ಸೃಷ್ಠಿ ಆಗುವುದಿಲ್ಲ’ ಎಂದು ಹೇಳಿದರು.

    ‘ನಾನು ಚಿತ್ರರಂಗ ಪ್ರವೇಶಿಸಿದ್ದು 1975ರಲ್ಲಿ.  ಆಗ ಚಲನಚಿತ್ರ ಪತ್ರಕರ್ತಕರು ಬೆನ್ನೆಲುಬಾಗಿದ್ದರಿಂದ ಈ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಯಿತು.  ಕೃತಿಕಾರ ಇಲ್ಲದಿದ್ದರೆ ವಿಮರ್ಶಕನ ಅಗತ್ಯವಿಲ್ಲ. ವಿಮರ್ಶಕ ಆಮ್ಲಜನಕದ ರೀತಿ ಕೆಲಸ ಮಾಡುತ್ತಾರೆ. ಸಿನಿಮಾ ವಿಮರ್ಶೆ ಮಾಡದಿದ್ದರೆ ನನ್ನನ್ನು ನಾನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಹಿಂದೆ ಪತ್ರಕರ್ತರ ಪರಿಷತ್ ಪ್ರತಿ ವಾರ ನಡೆಸುತ್ತಿದ್ದ ವಿಮರ್ಶೆಗಳ ವಿಮರ್ಶೆ ಸಂವಾದ ಕಾರ್ಯಕ್ರಮ ನಿರ್ದೇಶಕರನ್ನು ಉತ್ತೇಜಿಸುತ್ತಿದ್ದುದನ್ನು ಹೇಳಿದರು.   ‘ವಿಮರ್ಶಕರಿಂದ ಮಾಧ್ಯಮ, ಉದ್ಯಮ ಬೆಳೆಯಲಿದೆ. ಇಲ್ಲದಿದ್ದರೆ ಸ್ಥಗಿತವಾಗಲಿದೆ. ಚಲನಚಿತ್ರ  ಪತ್ರಕರ್ತರ ಸಂಘ ಮತ್ತೊಮ್ಮೆ ಉದ್ಘಾಟನೆಯಾಗಿರುವುದು ಖುಷಿಕೊಟ್ಟಿದೆ’  ಎಂದರು.

    ಹಿರಿಯ ಪರ್ತಕರ್ತೆ ಡಾ. ವಿಜಯಾ ಮಾತನಾಡಿ, ‘ಹಿಂದಿನ ಸಂಘಟನೆಗಳು, ತಮ್ಮ ವೈಯಕ್ತಿಕ ಹಿತಾಸಕಿಗಳನ್ನು ಮರೆತು,  ಚಿತ್ರರಂಗದ ಬೆಳವಣಿಗೆಯನ್ನಷ್ಟೇ ಬಯಸಿದವು, ಇಲ್ಲಿ ಹಾಗಾಗದಂತೆ ಗಮನಹರಿಸಿದ್ದೀರಿ’ ಎಂದು ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಪತ್ರಕರ್ತರ ಕೊಡುಗೆ ಮತ್ತು ವಿವಿಧ ವಿಷಯಗ‌ಳ‌ ಮೇಲೆ ಬೆಳಕು ಚೆಲ್ಲಿದರು.

    ಸಂಘದ ಅಧ್ಯಕ್ಷ ಬಾ.ನಾ. ಸುಬ್ರಹ್ಮಣ್ಯ ಸಂಘದ ಕಾರ್ಯ ಚಟುವಟಿಕೆ ಉದ್ದೇಶಗಳ ಕುರಿತು ವಿವರಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಚಲನಚಿತ್ರ ಅಕಾಡಮಿ ಅಧ್ಯಕ್ಷ ಅಶೋಕ್ ಕಶ್ಯಪ್,  ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,  ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಅರಸ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅಖಿಲ ಬಾರತ ಕಾರ್ಯನಿರತ  ಒಕ್ಕೂಟದ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ, ಮಾಧ್ಯಮ ತಜ್ಞ ಜಿ.ಎನ್. ಮೋಹನ್,  ಹಿರಿಯ ಚಲನಚಿತ್ರ ಪತ್ರಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ಸಂಸ್ಥಾಪಕ ಆಡಳಿತ ಮಂಡಳಿ : 

    ಬಿ.ಎನ್. ಸುಬ್ರಹ್ಮಣ್ಯ – ಅಧ್ಯಕ್ಷರು

    ಸುನಯನಾ ಸುರೇಶ್ – ಉಪಾಧ್ಯಕ್ಷರು

    ನಾಡಿಗೇರ್ ಚೇತನ್ – ಕಾರ್ಯಾಧ್ಯಕ್ಷರು

    ಅರುಣ್ ಕುಮಾರ್. ಜಿ – ಪ್ರಧಾನ ಕಾರ್ಯದರ್ಶಿ

    ಜಗದೀಶ್ ಕುಮಾರ್ ಎಸ್ –  ಕಾರ್ಯದರ್ಶಿ

    ಹರೀಶ್ ಸೀನಪ್ಪ – ಸಹ ಕಾರ್ಯದರ್ಶಿ

    ಕೆ.ಎಸ್.ವಾಸು – ಖಜಾಂಚಿ

    ಕಾರ್ಯಕಾರಿ ಸಮಿತಿಯ ಸದಸ್ಯರು

    ಮನೋಹರ್‌ ಆರ್

    ಮಂಜುನಾಥ್ ಎನ್

    ದೇಶಾದ್ರಿ ಹೆಚ್

    ಲಕ್ಷ್ಮೀನಾರಾಯಣ

    ಸಿ.ಜಿ. ರಮೇಶ್

    ವಿಜಯ್ ಆರ್

    ಅವಿನಾಶ್ ಜಿ.ಆರ್

    ಹರ್ಷವರ್ಧನ್ ಎಸ್‌.ಆರ್‌

    ಮಾಲತೇಶ ಹೆಚ್. ಜಗ್ಗೇನ್

    ಶಶಿಧರ ಚಿತ್ರದುರ್ಗ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪೋಷಕ ಕಲಾವಿದರ ಸಂಘದ ಕಾರ್ಯದರ್ಶಿ ಅಶ್ಲೀಲ ವಿಡಿಯೋ ಕಳಿಸ್ತಾರೆ : ನಟಿ ರಾಣಿ ಆರೋಪ

    ಪೋಷಕ ಕಲಾವಿದರ ಸಂಘದ ಕಾರ್ಯದರ್ಶಿ ಅಶ್ಲೀಲ ವಿಡಿಯೋ ಕಳಿಸ್ತಾರೆ : ನಟಿ ರಾಣಿ ಆರೋಪ

    ರ್ನಾಟಕ ಪೋಷಕ ಕಲಾವಿದರ ಸಂಘದ ಭಿನ್ನಾಭಿಪ್ರಾಯ ಇದೀಗ ಬೀದಿಗೆ ಬಂದಿದೆ. ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಯ ನಡೆಗೆ ಸಿನಿಮಾ ಹಾಗೂ ಕಿರುತೆರೆ ನಟಿ ರಾಣಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಣಕಾಸಿನ ಅವ್ಯವಹಾರದ ಜೊತೆ ಮಹಿಳೆಯರಿಗೆ ಸಂಘದಲ್ಲಿರುವವರು ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದರು ಎಂದು ಗುರುತರ ಆರೋಪ ಮಾಡಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟಿ ರಾಣಿ, ‘ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಮೇಲೆ ಆರೋಪ ಮಾಡಿದ್ದು, ತಮ್ಮದು ಪೋಷಕ ಕಲಾವಿದರ ಸಂಘದ ಮೇಲೆ ಆರೋಪ ಮಾಡುವುದಿಲ್ಲ’  ಎಂದಿದ್ದಾರೆ. ಮಹಿಳೆಯರನ್ನು ಅಗೌರವದಿಂದ ಇವರು ನಡೆಸಿಕೊಳ್ಳುತ್ತಾರೆ. ಅದರಲ್ಲೂ ಸಂಘದ ಕಾರ್ಯದರ್ಶಿಗಳೇ ಸಂಘದಲ್ಲಿ ಇರುವಂತಹ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ.

    ‘ನಾನು ಈ ಸಂಘದಲ್ಲಿ 15 ವರ್ಷಗಳಿಂದ ಇದ್ದೇನೆ. ಚುನಾವಣೆಯಲ್ಲಿ ಗೆದ್ದು ಉಪಾಧ್ಯಕ್ಷೆ ಆಗಿದ್ದೇನೆ. ಸಂಘದ ಚಟುವಟಿಕೆಗಳಲ್ಲಿ ಭಾಗಿ ಆಗಲು ಬಿಡುತ್ತಿಲ್ಲ. ಸಂಘದ ಲೆಕ್ಕಾಚಾರ ಕೇಳಿದರೆ, ನಮಗೆ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಾರೆ. ಅವರವರೇ ಸೇರಿಕೊಂಡು ಕೆಲಸ ಮಾಡಿಕೊಳ್ಳುತ್ತಾರೆ. ಪ್ರತಿಭಟಿಸಿದರೆ ಕೊಳಕು ಭಾಷೆ ಬಳಸುತ್ತಾರೆ. ಸುಮ್ಮನೆ ಇರದೇ ಇದ್ದರೆ ರಾಜಿನಾಮೆ ಕೊಟ್ಟು ಹೋಗಿ ಎಂದು ಹೆದರಿಸುತ್ತಾರೆ’ ಎನ್ನುತ್ತಾರೆ ರಾಣಿ.

    ಸಂಘದ ಕಾರ್ಯದರ್ಶಿ ಬಗ್ಗೆಯೇ ಹೆಚ್ಚು ಮಾತನಾಡಿರುವ ರಾಣಿ, ‘ಮಹಿಳೆಯರಿಗೆ ಅಗೌರವ ತೋರೋ ರೀತಿಯಲ್ಲಿ ಅವರು ಮಾತಾಡಿದ್ದಾರೆ. ಕೆಲವೊಮ್ಮೆ ಅಶ್ಲೀಲ ವಿಡಿಯೋ ಕಳಿಸ್ತಿದ್ರು. ಆ ವಿಚಾರವಾಗಿ ಗಲಾಟೆಯೂ ಆಗಿದೆ. ಸಭೆಯಲ್ಲಿ ದೊಡ್ಡ ಚರ್ಚೆಯಾಗಿ ಸಮಾಧಾನ ಮಾಡಿದರು. ಹಣಕಾಸಿನ ದುರುಪಯೋಗದ ಬಗ್ಗೆ ಕೇಳೀದಾಗ ಅವಾಚ್ಯ ಶಬ್ದಗಳಿಂದ  ನಿಂದನೆ ಮಾಡಿದರು. ಉಪಾಧ್ಯಕ್ಷೆ ಸ್ಥಾನದಿಂದ ಏಕಾಏಕಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ. ಹೀಗಾಗಿ ನ್ಯಾಯ ಸಿಗಬೇಕು ಅಂತ ಹೋರಾಟ ಮಾಡ್ತಿದ್ದಿನಿ’ ಎಂದಿದ್ದಾರೆ ರಾಣಿ.

    Live Tv
    [brid partner=56869869 player=32851 video=960834 autoplay=true]

  • ಸುದೀಪ್ ಹೆಸರಲ್ಲಿ 5 ಸಾವಿರ ಸ್ತ್ರೀಯರ ಮಹಾಸೇನೆ

    ಸುದೀಪ್ ಹೆಸರಲ್ಲಿ 5 ಸಾವಿರ ಸ್ತ್ರೀಯರ ಮಹಾಸೇನೆ

    ಬೆಂಗಳೂರು: ಸ್ಟಾರ್ ನಟರ ಹೆಸರಿನಲ್ಲಿ ಅಭಿಮಾನಿ ಸಂಘಗಳನ್ನು ಕಟ್ಟಿಕೊಳ್ಳುವುದು ಸರ್ವೇಸಾಮಾನ್ಯವಾಗಿದೆ. ಆದರೆ ಸ್ಯಾಂಡಲ್‍ವುಡ್‍ನ ಸ್ಟಾರ್ ನಟ ಕಿಚ್ಚನ ಮೇಲಿನ ಅಭಿಮಾನಕ್ಕಾಗಿ 5 ಸಾವಿರ ಸ್ತ್ರೀಯರು ಒಟ್ಟಾಗಿ ಒಂದು ಸಂಘವನ್ನು ಕಟ್ಟಿಕೊಳ್ಳುವ ಮೂಲಕವಾಗಿ ಸುದ್ದಿಯಲ್ಲಿದ್ದಾರೆ.

    ಹೌದು. ಸ್ಯಾಂಡಲ್‍ವುಡ್ ಬಾದ್ ಷಾ ಕಿಚ್ಚನಿಗೆ ಅಪಾರವಾದ ಅಭಿಮಾನಿ ಬಳಗವಿದೆ. ಪುರುಷರಷ್ಟೇ ಸ್ತ್ರೀಯರ ಸಂಖ್ಯೆ ಕೂಡ ಇದೆ ಎಂಬುದಕ್ಕೆ ಉತ್ತಮ ಉದಾಹರಣೆ ಈ ಸಂಘವಾಗಿದೆ. ಯುವಕರ ಗುಂಪು ಅಭಿಮಾನಿ ಸಂಘಗಳನ್ನು ಕಟ್ಟಿ ಕೊಂಡಿರುತ್ತಾರೆ. ಆದರೆ ಕಿಚ್ಚ ಸುದೀಪ್ ಅವರ ಮಹಿಳಾ ಅಭಿಮಾನಿಗಳು ಕೂಡ ಇಂಥದ್ದೊಂದು ಸಂಘ ಮಾಡಿಕೊಂಡು ಒಳ್ಳೆಯ ಕೆಲಸಗಳಲ್ಲಿ ನಿರತರಾಗಿದ್ದಾರೆ. ಈ ವಿಚಾರವನ್ನು ಟ್ವಿಟ್ಟರ್‌ನಲ್ಲಿ ವೀಡಿಯೋವನ್ನು ಹಂಚಿಕೊಂಡು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ವೀಡಿಯೋದಲ್ಲಿ ಏನಿದೆ?
    ಚಿತ್ರರಂಗದಲ್ಲಿ 25 ವರ್ಷಗಳನ್ನು ಸುದೀಪ್ ಅವರು ಪೂರೈಸಿರುವುದರ ಸಂಭ್ರಮಕ್ಕಾಗಿ ಹಾವೇರಿ ಜಿಲ್ಲೆ, ಬ್ಯಾಡಗಿ ತಾಲೂಕಿನಲ್ಲಿರುವ ಮಹಿಳಾ ಅಭಿಮಾನಿಗಳು ಒಂದು ವೀಡಿಯೋ ಮೂಲಕ ಕಿಚ್ಚನಿಗೆ ಶುಭಾಶಯ ತಿಳಿಸಿ, ತಾವು ಮಾಡಿಕೊಂಡಿರುವ ಸಂಘದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

    ‘ಮಹಾ ಸೇವಕ ಬಾದ್ ಷಾ ಕಿಚ್ಚ ಸುದೀಪ್ ಮಹಿಳಾ ಸೇನೆ’ ಎಂದು ನಮ್ಮ ಸಂಘಕ್ಕೆ ಹೆಸರಿಡಲಾಗಿದೆ. ಈ ಮಹಾಸೇನೆಯಲ್ಲಿ ಬರೀ ಮಹಿಳೆಯರೇ ಸಕ್ರಿಯರಾಗಿದ್ದೇವೆ. 5 ಸಾವಿರಕ್ಕೂ ಅಧಿಕ ಸ್ತ್ರೀಯರು ಸುದೀಪ್ ಮೇಲಿನ ಅಭಿಮಾನಕ್ಕಾಗಿ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದೇವೆ. ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಅಡಿಯಲ್ಲಿ ಈ ಸಂಘ ಕಾರ್ಯ ನಿರ್ವಹಿಸುತ್ತದೆ. ಸುದೀಪ್ ಅವರ ಮಾರ್ಗದರ್ಶನದಲ್ಲಿ ತಾವು ಮುನ್ನಡೆಯುತ್ತೇವೆ ಎಂದು ಈ ಮಹಿಳಾ ಸೇನೆಯ ಸದಸ್ಯರು ವೀಡಿಯೋ ಮಾಡಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಟ್ವಿಟ್ಟರ್‌ನಲ್ಲಿ ಈ ವೀಡಿಯೋ ನೋಡಿದ ಸುದೀಪ್ ಅವರು ‘ಇದು ಮಧುರವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು’ ಎಂದು ಟ್ವೀಟ್ ಮೂಲಕವಾಗಿ ಪ್ರೀತಿಯ ಸಂದೇಶವನ್ನು ಅಭಿಮಾನಿಗಳಿಗೆ ಹೇಳಿದ್ದಾರೆ. ಕಿಚ್ಚನ ಅಭಿಮಾನಿಯ ಬಳಗ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಿನಿಮಾ ರಂಗ ಮಾತ್ರವಲ್ಲದೆ ಅವರ ಹೆಸರಿನಲ್ಲಿ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ.

  • ಖಾಕಿ ವಿರುದ್ಧ ಸಮರ ಸಾರಿದ ರೌಡಿಶೀಟರ್ ಗಳು!

    ಖಾಕಿ ವಿರುದ್ಧ ಸಮರ ಸಾರಿದ ರೌಡಿಶೀಟರ್ ಗಳು!

    ಬೆಂಗಳೂರು: ಖಾಕಿ ಖದರ್ ಗೆ ಬೆಚ್ಚಿಬಿದ್ದ ರೌಡಿಶೀಟರ್ ಗಳು ಈಗ ಪೊಲೀಸರ ವಿರುದ್ಧವೇ ಸಿಡಿದೆದ್ದಿದ್ದಾರೆ.

    ಪೊಲೀಸರು ಸುಖಾಸುಮ್ಮನೆ ಹಿಂಸೆ ಕೊಡ್ತಾರೆ ನಕಲಿ ಎನ್‍ಕೌಂಟರ್ ಇದನ್ನ ವಿರೋಧಿಸಬೇಕು ಅಂತ ಸಿದ್ಧ ಆಗಿರೋ ರೌಡಿಶೀಟರ್ ಗಳು ಸಂಘ ತೆರೆಯಲು ಮುಂದಾಗುತ್ತಿದ್ದಾರೆ. “ಫೈಟ್ ಫಾರ್ ಜಸ್ಟೀಸ್” ಎಂಬ ಸಂಘ ಹುಟ್ಟು ಹಾಕುತ್ತಿರುವ ರೌಡಿಶೀಟರ್ ಗಳು ಸಂಘ ನಿಯಂತ್ರಣ ಮಾಡಲು ಸಂಘಕ್ಕೆ ಲೀಗಲ್ ಅಡ್ವೈಸರ್ ಕೂಡ ಇರಲಿದ್ದಾರೆ ಅಂತೆ.

    ಒಂದು ಕಚೇರಿಯನ್ನು ತೆರಯಲು ಸಿದ್ಧ ಮಾಡಿರೋ ರೌಡಿಶೀಟರ್ ಗಳು ಮಾನವ ಹಕ್ಕುಗಳ ಆಯೋಗಕ್ಕೆ ಈಗಾಗಲೇ ಭೇಟಿ ನೀಡಿದ್ದು ಮಾಹಿತಿ ರವಾನೆ ಮಾಡಿದ್ದಾರೆ. ಖಾಕಿ ವಿರುದ್ಧ ಯಾರ ರೀತಿ ಹೋರಾಡಬೇಕು ಅನ್ನೋದನ್ನ ಮಾನವ ಹಕ್ಕು ಆಯೋಗದಿಂದ ಮಾಹಿತಿ ಸಂಗ್ರಹಿಸಿದ್ದಾರಂತೆ. ಈ ಎಲ್ಲಾ ಮಾಹಿತಿ ಕಲೆಹಾಕಿರೋ ಗುಪ್ತಚರ ಇಲಾಖೆ ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ರವಾನೆ ಮಾಡಿದೆ. ಸದ್ಯ ಮಾಹಿತಿ ಪಡೆದಿರೋ ಸಿಸಿಬಿ ಪೊಲೀಸರು ಇನ್ನಷ್ಟು ರೌಡಿಶೀಟರ್ ಗಳಿಗೆ ಕಡಿವಾಣ ಹಾಕುವುದು ಹೇಗೆ ಎಂಬುದರ ಬಗ್ಗೆ ಪ್ಲಾನ್ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಣಕ್ಕಾಗಿ ನಡುರಸ್ತೆಯಲ್ಲಿ ಹಲ್ಲೆ ಮಾಡಿಸಿ, ಕಾರು-ಹಣ ದೋಚಿದ ಚಿತ್ರ ನಟಿ

    ಹಣಕ್ಕಾಗಿ ನಡುರಸ್ತೆಯಲ್ಲಿ ಹಲ್ಲೆ ಮಾಡಿಸಿ, ಕಾರು-ಹಣ ದೋಚಿದ ಚಿತ್ರ ನಟಿ

    ಬೆಂಗಳೂರು: ಮಹಿಳಾ ಸಂಘದ ಹಣಕ್ಕಾಗಿ ನಟಿಯೊಬ್ಬರು ಆದಿಶಕ್ತಿ ಮಹಿಳಾ ಸಂಘದ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿಸಿ, ಕಾರು ಹಾಗೂ ಹಣವನ್ನು ಸುಲಿಗೆ ಮಾಡಿದ ಘಟನೆ ಬಸವೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ರಘು ಹಲ್ಲೆಗೊಳಗಾದ ಕಾರ್ಯಕರ್ತ. ಚಿತ್ರನಟಿ ಸುಷ್ಮಿತಾ ಸೇರಿದಂತೆ ಇನ್ನೂ ಅನೇಕ ಕಾರ್ಯಕರ್ತರು ಆದಿಶಕ್ತಿ ಮಹಿಳಾ ಸಂಘವನ್ನು ಉದ್ಘಾಟನೆ ಮಾಡಿದ್ದರು. ಸಂಘದ ಹೆಸರಿನಲ್ಲಿ ರಾಜ್ಯಾದ್ಯಂತ ಶಾಖೆಗಳನ್ನು ತೆರೆಯಲು ಹಣವನ್ನು ಸಂಗ್ರಹ ಮಾಡುತ್ತಿದ್ದರು. ರಘು ತಾನೊಬ್ಬನೇ ಹಣ ಮಾಡಿಕೊಳ್ಳುತ್ತಿದ್ದಾನೆ ಎಂದು ಆರೋಪಿಸಿ ಕಳೆದ ಸೆಪ್ಟೆಂಬರ್ 2ನೇ ತಾರೀಖಿನಂದು ಬಸವೇಶ್ವರನಗರದ ಮುಖ್ಯರಸ್ತೆಯಲ್ಲಿ ರಘುವಿನ ಕಾರನ್ನು ಅಡ್ಡಗಡ್ಡಿ ಕಾರು, ಹಣ ಸೇರಿದಂತೆ ಲ್ಯಾಪ್‍ಟಾಪ್ ದೋಚಿಕೊಂಡು ಹೋಗಿದ್ದಲ್ಲದೇ ಪ್ರಾಣ ಬೆದರಿಕೆಯನ್ನು ಹಾಕಿದ್ದರು.

    ಹಲ್ಲೆಗೊಳಗಾದ ರಘು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಚಿತ್ರನಟಿ ಸುಷ್ಮಿತಾ ಸೇರಿದಂತೆ ಒಟ್ಟು 6 ಮಂದಿಯ ವಿರುದ್ಧ ದೂರನ್ನು ನೀಡಿದ್ದಾರೆ. ಸಂಘದ ಎಲ್ಲಾ ಹೊಣೆಯನ್ನು ನಾನೊಬ್ಬನೇ ಹೊತ್ತಿಕೊಳ್ಳಲು ಸಾಧ್ಯವಿಲ್ಲ, ಸಂಘಕ್ಕೆ ಬರುತ್ತಿದ್ದ ಹಣದ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೆ. ಆದರೆ ಏಕಾಏಕಿ ಸುಷ್ಮಿತಾ ತಾವು ನೀಡಿದ್ದ ಹಣವನ್ನು ಹಿಂದಿರುಗಿಸು, ಇದರಲ್ಲಿ ನೀನೊಬ್ಬನೇ ಹಣ ಮಾಡಿಕೊಳ್ಳುತ್ತಿದ್ದೀಯಾ ಎಂದು ಆರೋಪಿಸಿ ನನ್ನ ಮೇಲೆ ಹಲ್ಲೆ ನಡೆಸಿ ಕಾರು, ಹಣ ಹಾಗೂ ಲ್ಯಾಪ್‍ಟಾಪ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ್ದಾರೆ. ನನಗೆ ಜೀವಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv