Tag: ಸಂಘ ಪರಿವಾರ

  • ಸಂಘ ಪರಿವಾರ ಎಂದಿಗೂ ಮೀಸಲಾತಿ ವಿರೋಧಿಸಿಲ್ಲ: ಆರ್‌ಎಸ್‌ಎಸ್‌ ಮುಖ್ಯಸ್ಥ

    ಸಂಘ ಪರಿವಾರ ಎಂದಿಗೂ ಮೀಸಲಾತಿ ವಿರೋಧಿಸಿಲ್ಲ: ಆರ್‌ಎಸ್‌ಎಸ್‌ ಮುಖ್ಯಸ್ಥ

    ಹೈದರಾಬಾದ್: ಸಂಘ ಪರಿವಾರವು (Sangh Parivar) ಎಂದಿಗೂ ಮೀಸಲಾತಿಯನ್ನು ವಿರೋಧಿಸಿಲ್ಲ ಎಂದು ಆರ್‌ಎಸ್‌ಎಸ್‌ (RSS) ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

    ಶಿಕ್ಷಣ ಸಂಸ್ಥೆಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ಎಲ್ಲಿಯವರೆಗೂ ಅಗತ್ಯವಿದೆಯೋ ಅಲ್ಲಿಯವರೆಗೆ ವಿಸ್ತರಿಸಬೇಕು ಎಂಬುದು ಸಂಘದ ಅಭಿಪ್ರಾಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಆಪ್‌ ಮೈತ್ರಿಗೆ ವಿರೋಧ – ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ರಾಜೀನಾಮೆ

    ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗವತ್ (Mohan Bhagwat) ತಮ್ಮ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಅಗೋಚರವಾಗಿದ್ದರೂ ತಾರತಮ್ಯವಿದೆ ಎಂದಿದ್ದಾರೆ.

    ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ಕಳೆದ ವರ್ಷ ನಾಗ್ಪುರದಲ್ಲಿ ಹೇಳಿದ್ದರು. ಆ ಹೇಳಿಕೆಯನ್ನು ಈಗ ಪುನರುಚ್ಛರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು, ಅಭ್ಯರ್ಥಿ ಬೇಡ – ಪ್ರಚಾರದಿಂದ ದೂರ ಸರಿದ ನಸೀಮ್‌ ಖಾನ್‌

  • ಬಿಜೆಪಿ ನಾಯಕರು ಜಾತಿ ಸಮಾವೇಶ ಮಾಡುತ್ತಿರುವುದು ರಾಜಕೀಯ ಷಡ್ಯಂತ್ರವೇ – ಸಿದ್ದರಾಮಯ್ಯ ಪ್ರಶ್ನೆ

    ಬಿಜೆಪಿ ನಾಯಕರು ಜಾತಿ ಸಮಾವೇಶ ಮಾಡುತ್ತಿರುವುದು ರಾಜಕೀಯ ಷಡ್ಯಂತ್ರವೇ – ಸಿದ್ದರಾಮಯ್ಯ ಪ್ರಶ್ನೆ

    ಬೆಂಗಳೂರು: ನಾವೆಲ್ಲ ಒಂದು ಎಂದು ಹೇಳಿ ಹಿಂದೂ ಸಮಾವೇಶ ಮಾಡುತ್ತಿದ್ದ ಬಿಜೆಪಿ ನಾಯಕರು ಈಗ ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಅಥವಾ ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಮೀಸಲಾತಿ ಪರ ಬಿಜೆಪಿ ನಾಯಕರು ಸಮಾವೇಶ ಮಾಡುತ್ತಿದ್ದಂತೆ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡಿ ಕೇಂದ್ರ ಮತ್ತು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ?

    ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ

    ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?

    ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು.

    ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ಮೋದಿ ಮತ್ತು ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

    ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇ.73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಸರ್ಕಾರದ ಕೈಯಲ್ಲಿದೆ.

     

    ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು.

  • ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಂಗಳೂರಿನಲ್ಲಿಯೇ ಮುಹೂರ್ತ?

    ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಂಗಳೂರಿನಲ್ಲಿಯೇ ಮುಹೂರ್ತ?

    ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಹೂರ್ತ ನಿಗದಿ ಮಾಡಲು ಮುಂದಾಗಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿವೆ.

    ಗುರುವಾರ ಸಂಘನಿಕೇತನದಲ್ಲಿ ನಡೆಯುತ್ತಿರುವ ಆರ್‍ಎಸ್‍ಎಸ್ ಅಖಿಲ ಭಾರತ ಬೈಠಕ್‍ನಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಈ ವೇಳೆ ದೇಶದ ವಿವಿಧ ಪ್ರದೇಶಗಳಿಂದ 400ಕ್ಕೂ ಹೆಚ್ಚು ಪ್ರತಿನಿಧಿಗಳು ಆಗಮಿಸಿಲಿದ್ದಾರೆ. ಕಾರ್ಯಕ್ರಮದ ಪೂರ್ವ ಸಿದ್ಧತೆ ಉದ್ದೇಶದಿಂದ ಅಮಿತ್ ಶಾ ಮಂಗಳವಾರ ಸಂಜೆಯೇ ನಗರಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡಿದ್ದಾರೆ.

    ಅಮಿತಾ ಶಾ ನೇತೃತ್ವದ ಬೈಠಕ್‍ನಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಯಲಿದೆ. ಹೀಗಾಗಿ ರಾಮ ಮಂದಿರದ ನಿರ್ಮಾಣದ ಕೂಗಿಗೆ ಮಂಗಳೂರಿನಿಂದಲೇ ಮುಹೂರ್ತ ನಿಗದಿ ಮಾಡಲಾಗುತ್ತಿದೆಯಂತೆ. ಮಂಗಳೂರು ಅಷ್ಟೇ ಅಲ್ಲದೆ ವಾರಣಾಸಿಯಲ್ಲಿಯೂ ಏಕಾಲದಲ್ಲಿ ಬೈಠಕ್ ಆಯೋಜಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಅಖಿಲ ಭಾರತ ಬೈಠಕ್ ನವೆಂಬರ್ 8ರಂದು ಆರಂಭವಾಗಿದ್ದು, 16ರವರೆಗೆ ನಡೆಯಲಿದೆ. ಅತ್ಯಂತ ಗೌಪ್ಯವಾಗಿ ಬೈಠಕ್ ಕಾರ್ಯಕ್ರಮ ಸಂಘ ಪರಿವಾರದ ನಾಯಕರು ನಡೆಸುತ್ತಿದ್ದಾರೆ. ಹೀಗಾಗಿ ಅಮಿತ್ ಶಾ ಅವರು ಗುರುವಾರ ಬೈಠೆಕ್ ಕಾರ್ಯಕ್ರಮದ ಭಾಗವಹಿಸಿ, ಲೋಕಸಭಾ ಚುನಾವಣಾ ಸಿದ್ಧತೆ, ರಾಮ ಮಂದಿರ ನಿರ್ಮಾಣದ ಕುರಿತಾಗಿ ಚರ್ಚೆ ನಡೆಸಲಿದ್ದಾರೆ. ಸಂಘಟನೆಯ ಸ್ಥಳೀಯ ಮುಂಖಡರ ನಿಲುವು ತಿಳಿದು ದೆಹಲಿಗೆ ಮರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಾಯಲು ಮನಸ್ಸಿರುವವರು ಸಂಘ ಪರಿವಾರ ಸೇರಿ- ಪ್ರತಿಭಾ ಕುಳಾಯಿ ವಿವಾದಾತ್ಮಕ ಹೇಳಿಕೆ

    ಸಾಯಲು ಮನಸ್ಸಿರುವವರು ಸಂಘ ಪರಿವಾರ ಸೇರಿ- ಪ್ರತಿಭಾ ಕುಳಾಯಿ ವಿವಾದಾತ್ಮಕ ಹೇಳಿಕೆ

    ಉಡುಪಿ: ಸಾಯಲು ಮನಸ್ಸಿರುವವರು ಸಂಘ ಪರಿವಾರ ಸೇರಿ ಎಂದು ಮಂಗಳೂರಿನ ಸುರತ್ಕಲ್ ಕಾಂಗ್ರೆಸ್ ಕಾರ್ಪೋರೇಟರ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

    ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಉಡುಪಿಯ ಕಾರ್ಕಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತುಳುವಿನಲ್ಲಿ ಮಾಡಿರುವ ಭಾಷಣ ಈಗ ವೈರಲ್ ಆಗಿದೆ.

    ಯಾರಿಗೆಲ್ಲ ಸಾಯಲು ಮನಸ್ಸಿದೆ ಅವರು ಸಂಘ ಪರಿವಾರ ಸೇರಿ. ದುಡಿಯಲು ಮನಸ್ಸಿಲ್ಲದವರೂ ಸಂಘ ಪರಿವಾರ ಸೇರಿ. ಮರ್ಡರ್ ಮಾಡಿ ಬಂದ್ರೆ ಸಾಕು ಜೈಲಿನಲ್ಲಿ ನಿಮಗೆ ಎಷ್ಟು ಬೇಕಾದ್ರೂ ಅನ್ನ ಸಿಗುತ್ತದೆ ಅಂತ ಹೇಳಿಕೆ ನೀಡಿದ್ದಾರೆ.

    ಧರ್ಮಾರ್ಥ ನಿಮಗೆ ಜೈಲಿನಲ್ಲಿ ಅನ್ನ ಸಿಗುತ್ತದೆ. ಕೊಲೆ ಮಾಡಿಸಿದ ಸಂಘ ಪರಿವಾರದವರು ಜೈಲಿಗೆ ಇಣುಕಿ ನೋಡಲು ಹೋಗುವುದಿಲ್ಲ. ಯಾರಾದ್ರೂ ಹಿಂದುಗಳು ಸತ್ತರೆ ಸಾಕು ವಾಟ್ಸಪ್, ಫೇಸ್ ಬುಕ್ ನಲ್ಲಿ ಸತ್ತವರ ಬಗ್ಗೆ ಪ್ರಚಾರ ಮಾಡ್ತಾರೆ. ಇಷ್ಟು ಕೋಟಿ ಸಂಗ್ರಹ ಆಯ್ತು, ಅಷ್ಟು ಕೋಟಿ ಸಂಗ್ರಹ ಆಯ್ತು ಅಂತ ಪ್ರಚಾರ ಮಾಡುತ್ತಾರೆ. ಆದ್ರೆ ಸಂತ್ರಸ್ತ ಮನೆಯವರಿಗೆ ಒಂದು ರುಪಾಯಿ ಈವರೆಗೆ ಸಿಕ್ಕಿಲ್ಲ. ಎಲ್ಲರೂ ಬಂದು ಹೋದ್ರು, ಯಾರೂ ಏನೂ ಮಾಡಿಲ್ಲ ಅಂತ ಶರತ್ ಮಡಿವಾಳ ತಂದೆ ಹೇಳಿಕೆ ಕೊಟ್ಟಿದ್ದರು. ದೀಪಕ್ ರಾವ್ ಕೊಲೆಯಾದಾಗ್ಲೂ ಕೋಟಿಗಟ್ಟಲೆ ಸಂಗ್ರಹ ಮಾಡಿದ್ದಾರೆ. ದೀಪಕ್ ರಾವ್ ಮನೆಯವರಿಗೆ ಇವತ್ತಿನವರೆಗೂ ಒಂದು ರೂಪಾಯಿ ಸಿಕ್ಕಿಲ್ಲ ಅಂತ ಹೇಳಿದ್ರು.

    ಹಿಂದೂ ಯುವಕರು ಸತ್ತರೆ ಹಿಂದೂಪರ ಸಂಘಟನೆಗಳು ಸಂಭ್ರಮಿಸುತ್ತವೆ. ಹಲವಾರು ಹಿಂದೂಗಳನ್ನು ಇವರೇ ಕೊಂದಿದ್ದಾರೆ. ನಾನು ಕೂಡಾ ಒಬ್ಬಳು ಹಿಂದೂ. ನನ್ನ ಬಣ್ಣ ಕೂಡಾ ಕೇಸರಿಯೇ. ಆದರೆ ಬಿಜೆಪಿಯವರು ಕೇಸರಿಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

    ಭಾಷಣದ ಕೊನೆಗೆ ಪ್ರತಿಭಾ ಕುಳಾಯಿ ವಂದೇ ಮಾತರಂ.. ವಂದೇ ಮಾತರಂ… ಅಂತ ಘೋಷಣೆ ಕೂಗಿದ್ದಾರೆ. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಲ್ಲಿ ವಂದೇ ಮಾತರಂ ಜೈಘೋಷ ಹಾಕಿಸಿದ್ದಾರೆ. ಪ್ರತಿಭಾ ಮಂಗಳೂರಿನ ಸುರತ್ಕಲ್ ವ್ಯಾಪ್ತಿಯ ಕಾರ್ಪೋರೇಟರ್ ಆಗಿದ್ದು, ದೀಪಕ್ ರಾವ್ ಮೃತಪಟ್ಟಾಗ ಬಹಳ ಆಕ್ರೋಶಕ್ಕೆ ಒಳಗಾಗಿದ್ದರು. ಪ್ರತಿಭಾ ಕುಳಾಯಿ ವಿವಾದಾತ್ಮಕ ಭಾಷಣ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • ಸಂಘ ಪರಿವಾರದ ವಿರುದ್ಧ ಆಕ್ರೋಶ ಹೊರಹಾಕಿದ ಮುತಾಲಿಕ್

    ಸಂಘ ಪರಿವಾರದ ವಿರುದ್ಧ ಆಕ್ರೋಶ ಹೊರಹಾಕಿದ ಮುತಾಲಿಕ್

    ವಿಜಯಪುರ: ಈ ಹಿಂದೆ ಸಂಘ ಪರಿವಾರ ಮಾನಸಿಕ, ದೈಹಿಕ, ಆರ್ಥಿಕವಾಗಿ ನನಗೆ ಸಾಕಷ್ಟು ಹಿಂಸೆ ನೀಡಿದೆ. ನಾನು ಸಂಘ ಪರಿವಾರದ ಮೂಲಕ ಚಿತ್ರಹಿಂಸೆ ಅನುಭವಿಸಿದ್ದೆನೆಂದು ಸಂಘ ಪರಿವಾರದ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯಿಂದ ಕರ್ನಾಟಕದಲ್ಲಿ ಕನ್ನಡಕ್ಕೆ ಏಟಾಗಿಲ್ಲ. ಭಾಷೆಗೆ ಯಾವುದೇ ಧಕ್ಕೆಯಾಗಿಲ್ಲ. ಕರ್ನಾಟಕದ ಶಿವಸೇನೆ ಕನ್ನಡಕ್ಕೆ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ರು. ಕನ್ನಡ ಪರ ಸಂಘಟನೆಗಳ ವಿರೋಧ ತಪ್ಪಲ್ಲ. ಅವರನ್ನ ಕನ್ವಿನ್ಸ್ ಮಾಡ್ತೀವಿ. ಅಲ್ಲದೆ ರಾಜ್ಯದಲ್ಲಿ 50 ಕ್ಷೇತ್ರಗಳಲ್ಲಿ ಶಿವಸೇನೆ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ನಾನು ಶೃಂಗೇರಿ, ವಿಜಯಪುರ, ತೇರದಾಳ ಕ್ಷೇತ್ರಗಳಲ್ಲಿ ಯಾವುದಾದರು ಒಂದರಲ್ಲಿ ಸ್ಪರ್ಧೆ ಮಾಡ್ತೀನಿ ಎಂದರು. ಇದನ್ನೂ ಓದಿ: ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

    ಇದೇ ವೇಳೆ ವಿಹೆಚ್‍ಪಿ ಮುಖಂಡ ಪ್ರವೀಣ್ ಭಾಯ್ ತೊಗಾಡಿಯಾ ಅವರ ಘಟನೆಯನ್ನು ಮುತಾಲಿಕ್ ಖಂಡಸಿದ್ದು, ಇವತ್ತು ಸಂಘ ಪರಿವಾರದ ಒಳಗಡೆಯೇ ಇದ್ದು ಎನ್ ಕೌಂಟರ್ ಮಾಡುವ ಸ್ಥಿತಿಗೆ ಬಂದಿದ್ದು ಆಘಾತಕಾರಿ ವಿಷಯ ಎಂದರು. ಪರಿವಾರದ ಒಳಗಡೆ ಇದ್ದುಕೊಂಡೇ ಅವರ ಮೇಲೆ ಷಡ್ಯಂತ್ರ ನಡೆಸಲಾಗುತ್ತಿದೆ. ಕಳೆದ 14 ವರ್ಷಗಳಲ್ಲಿ ಅವರು ಸಾಕಷ್ಟು ನೋವು, ಕಿರುಕುಳ ಅನುಭವಿಸಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ಹಿಂದೂ ಮುಖಂಡನ ಕಣ್ಣಲ್ಲಿ ನೀರು ತರಿಸಿದ್ದಾರಲ್ಲಾ. ಇವರಿಗೆ ಮಾನ ಮರ್ಯಾದೆ ಇದೆಯಾ? ತೊಗಾಡಿಯಾ ಏನು ರೇಪಿಸ್ಟಾ? ಡ್ರಗ್ಗಿಸ್ಟಾ? ಉಗ್ರವಾದಿಯಾ? ಕೇಂದ್ರ ಸಾರ್ಕಾರ ಅವರನ್ನು ಹತ್ತಿಕ್ಕಲು ಈ ರೀತಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಅರೋಪ ಮಾಡಿದರು. ಇದನ್ನೂ ಓದಿ: ಕಾಣೆಯಾಗಿದ್ದ ಪ್ರವೀಣ್ ತೊಗಾಡಿಯಾ ಪಾರ್ಕ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ, ಆಸ್ಪತ್ರೆಗೆ ದಾಖಲು

    ಎನ್ ಕೌಂಟರ್ ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆಯಾಗಬೇಕು. ಪರಿವಾರದ ಒಳಗಡೆಯೇ ಹಿಂದೂವಾದವನ್ನು ಹತ್ತಿಕ್ಕಲಾಗುತ್ತಿದೆ. ತೊಗಾಡಿಯಾ ಅವರ ಕಣ್ಣಲ್ಲಿ ನೀರು ತರಿಸಿದ ಇವರಿಗೆ ಹಿಂದೂಗಳ ಶಾಪ ತಟ್ಟುತ್ತದೆ. 15 ದಿನಗಳ ಹಿಂದೆ ಒಡಿಶಾದ ಭುವನೇಶ್ವರದಲ್ಲಿ ಸಂಘ ಪರಿವಾರದ ಮೀಟಿಂಗ್ ಆಯ್ತು. ಆ ಮೀಟಿಂಗ್ ನಲ್ಲಿ ವಿಹೆಚ್‍ಪಿ ಅಂತರಾಷ್ಟ್ರೀಯ ಅಧ್ಯಕ್ಷ ರಾಘವಲು ಹಾಗೂ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ತೊಗಾಡಿಯಾ ಅವರನ್ನು ಆ ಸ್ಥಾನಗಳಿಂದ ತೆಗೆಯಲು ಷಡ್ಯಂತ್ರ ಮಾಡಲಾಗಿತ್ತು. ಅಧಿಕಾರದ ಮದ, ಅಧಿಕಾರದ ದರ್ಪದಿಂದ ಅವರಿಗೆ ಮಾನಸಿಕ ಕಿರುಕುಳ ಕೊಡಲಾಗುತ್ತಿದೆ. ತೊಗಾಡಿಯಾ ಅವರನ್ನು ಎನ್‍ಕೌಂಟರ್ ಮಾಡುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನ ಪರೋಕ್ಷವಾಗಿ ಕೇಂದ್ರ ಸರ್ಕಾರದ ಮೇಲೆ ಮಾಡಿದರು.

    20 ವರ್ಷದ ಹಳೆಯ ಪ್ರಕರಣಗಳನ್ನು ಅವರ ಮೇಲೆ ಹೊರಿಸಲಾಗುತ್ತಿದೆ. ಈ ಕೂಡಲೇ ಕೇಂದ್ರ ಸರ್ಕಾರ ಬೇಷರತ್ ಆಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರಾಜಸ್ಥಾನದ ಮುಖ್ಯಮಂತ್ರಿ, ಗೃಹಮಂತ್ರಿಯೂ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ. ತೊಗಾಡಿಯಾ ಅವರ ಜೊತೆಗೆ ಸಮಸ್ತ ಹಿಂದೂ ಸಮುದಾಯ ಇದೆ ಎಂದರು.

  • ಟಿಪ್ಪು ಜಯಂತಿ ವಿರೋಧಿಸಿ ಹೋರಾಟಕ್ಕೆ ಬಿಜೆಪಿ ಪ್ಲಾನ್

    ಟಿಪ್ಪು ಜಯಂತಿ ವಿರೋಧಿಸಿ ಹೋರಾಟಕ್ಕೆ ಬಿಜೆಪಿ ಪ್ಲಾನ್

    ಬೆಂಗಳೂರು: ಈ ಬಾರಿಯೂ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

    ಟಿಪ್ಪು ಜಯಂತಿ ವಿರೋಧಿ ಸಮಿತಿ ವೇದಿಕೆಯಲ್ಲಿ ಆಕ್ಟೋಬರ್ 23ರಂದು ಬಿಜೆಪಿ ಮತ್ತು ಸಂಘಪರಿವಾರದ ಸಭೆ ನಡೆಯಲಿದೆ. ಸಂಘ ಪರಿವಾರದ ಮುಖಂಡರು, ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ, ಶ್ರೀರಾಮುಲು ಸೇರಿದಂತೆ ಹಲವರು ಬೆಂಗಳೂರಿನಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಟಿಪ್ಪು ಜಯಂತಿ ಆಚರಣೆ ವಿರುದ್ಧ ಹೋರಾಟ ನಡೆಸಲು ತೀರ್ಮಾನ ಮಾಡಿದ್ದು, 23ರ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲು ಬಿಜೆಪಿ ಪ್ಲ್ಯಾನ್ ಮಾಡಿದೆ.

    ಕಳೆದ ಬಾರಿ ಮಡಿಕೇರಿಯಲ್ಲಿ ಗಲಾಟೆಯಾಗಿ ಸಂಘ ಪರವಾರದ ಕಾರ್ಯಕರ್ತ ಕುಟ್ಟಪ್ಪ ಸಾವನ್ನಪ್ಪಿದ್ರು. ಆಗ ಟಿಪ್ಪು ಜಯಂತಿಗೆ ಬಿಜೆಪಿ, ಸಂಘ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿತು. ಅಷ್ಟೇ ಅಲ್ಲ ವಿಧಾನಸೌಧದಲ್ಲಿ ನಡೆದ ಟಿಪ್ಪು ಜಯಂತಿಯಲ್ಲೂ ಗಲಾಟೆಯಾಗಿತ್ತು. ಇನ್ನು ಈ ವರ್ಷವೂ ಸಹ ಟಿಪ್ಪು ಜಯಂತಿ ವಿರೋಧಕ್ಕೆ ಬಿಜೆಪಿ ನಿರ್ಧಾರ ಮಾಡಿದ್ದು, ದೊಡ್ಡ ಮಟ್ಟದ ಹೋರಾಟಕ್ಕೆ ಪ್ಯ್ಲಾನ್ ಮಾಡಿದೆ.