Tag: ಸಂಚು

  • 7 ಬಾರಿ ತಲೆ ಮೇಲೆ ಲೇಸರ್ ಲೈಟ್ – ಅಮೇಥಿ ರ‍್ಯಾಲಿ ವೇಳೆ ರಾಹುಲ್ ಹತ್ಯೆಗೆ ಸಂಚು?

    7 ಬಾರಿ ತಲೆ ಮೇಲೆ ಲೇಸರ್ ಲೈಟ್ – ಅಮೇಥಿ ರ‍್ಯಾಲಿ ವೇಳೆ ರಾಹುಲ್ ಹತ್ಯೆಗೆ ಸಂಚು?

    – ಕೇಂದ್ರ ಗೃಹ ಸಚಿವಾಲಯಕ್ಕೆ ಕಾಂಗ್ರೆಸ್ ಪತ್ರ

    ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಅಪಾಯವಿದ್ದು, ರ್ಯಾಲಿ ವೇಳೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಕಾಂಗ್ರೆಸ್ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.

    ಕಾಂಗ್ರೆಸ್ ಬರೆದಿರುವ ಪತ್ರದಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ 7 ಬಾರಿ ಅವರ ಮೇಲೆ ಲೇಸರ್ ಗ್ರೀನ್ ಲೈಟ್ ಬಿದ್ದಿದೆ ಎಂದು ಉಲ್ಲೇಖಿಸಿದೆ. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ರಾಹುಲ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ತಿಳಿಸಿದೆ.

    ಲೇಸರ್ ಗ್ರೀನ್ ಲೈಟ್ ರಾಹುಲ್ ಗಾಂಧಿ ಅವರ ತಲೆ ಮೇಲೆ ಸುಮಾರು 7 ಬಾರಿ ಅತಿ ಕಡಿಮೆ ಅವಧಿಯಲ್ಲಿ ಬಿದ್ದಿರುವುದು ದೃಢವಾಗಿದೆ. ಅಲ್ಲದೇ ದೇವಾಲಯದ ಭೇಟಿ ಸಂದರ್ಭದಲ್ಲಿ ಅವರ ಎಡಭಾಗದ ತಲೆ ಮೇಲೆ 2 ಬಾರಿ ಲೇಸರ್ ಬೆಳಕು ಕಾಣಿಸಿತ್ತು ಎಂದು ವಿವರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಕೂಡ ಕಾಂಗ್ರೆಸ್ ಗೃಹ ಸಚಿವಾಲಯಕ್ಕೆ ಪತ್ರದೊಂದಿಗೆ ನೀಡಿದೆ. ಈ ಪತ್ರದಲ್ಲಿ ಅಹ್ಮದ್ ಪಟೇಲ್, ಜೈರಾಮ್ ರಮೇಶ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಹಿ ಇದೆ.

    ರಾಹುಲ್ ಗಾಂಧಿ ಅವರ ರಕ್ಷಣೆಗೆ ಸಂಬಂಧಿಸಿದಂತೆ ಇಂತಹ ಘಟನೆ ಎಚ್ಚರಿಕೆಯ ಸಂದೇಶವಾಗಿರಬಹುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅಲ್ಲದೇ ಘಟನೆಯಿಂದ ನಾವು ಶಾಕ್‍ಗೆ ಒಳಗಾಗಿದ್ದು, ರಾಹುಲ್ ಗಾಂಧಿ ಅವರನ್ನ ಗುರಿಯಾಗಿಸಿ ಕೊಲೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಇಂದಿರಾ ಗಾಂಧಿ, ರಾಹುಲ್ ಗಾಂಧಿ ಅವರ ಹತ್ಯೆಯ ವೇಳೆ ಉಂಟಾಗಿದ್ದ ರಕ್ಷಣಾ ಲೋಪಗಳನ್ನು ಪ್ರಸ್ತಾಪಿಸಿ ರಕ್ಷಣೆಯ ಜವಾಬ್ದಾರಿ ಹೊಂದಿರುವ ಉತ್ತರ ಪ್ರದೇಶ ಸರ್ಕಾರದ ಆಡಳಿತದ ಅಪಾಯ ನಡೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

     

    ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ರಾಹುಲ್ ಅವರು ಪ್ರಚಾರ ಸಭೆಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ನಡೆದ ಘಟನೆ ಬಗ್ಗೆಯೂ ಕಾಂಗ್ರೆಸ್ ಈ ಹಿಂದೆ ಆತಂಕ ವ್ಯಕ್ತಪಡಿಸಿತ್ತು. ಏಪ್ರಿಲ್ 26ರಂದು ಕರ್ನಾಟಕ ವಿಧಾನಸಭೆಯ ಪ್ರಚಾರಕ್ಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದರು. ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಹೊರಟಿದ್ದರು. ಆದರೆ ವಿಮಾನದ ಲ್ಯಾಂಡಿಂಗ್ ವೇಳೆ ಸಮಸ್ಯೆ ಕಾಣಿಸಿಕೊಂಡಿತ್ತು. ವಿಮಾನ ದಿಢೀರನೇ ಎಡಭಾಗಕ್ಕೆ ವಾಲಿತ್ತು. ವೇಗವಾಗಿ 8 ಸಾವಿರ ಅಡಿಯಿಂದಲೇ ಆಗಸದಿಂದ ಕೆಳಗಿಳಿಯುತ್ತಿರುವಂತೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ರಾಹುಲ್ ಗಾಂಧಿ ಅಂದು ಪ್ರತಿಕ್ರಿಯೆ ನೀಡಿ ವಿಮಾನ ಹಠಾತ್ತನೇ 8 ಸಾವಿರ ಅಡಿ ಕೆಳಗೆ ಕುಸಿದಾಗ ಎಲ್ಲಾ ಮುಗಿದು ಹೋಯ್ತು ಅಂದುಕೊಂಡೆ. ಆ ಕ್ಷಣದಲ್ಲೇ ಕೈಲಾಸ ಮತ್ತು ಮಾನಸ ಸರೋವರ ಯಾತ್ರೆಗೆ ನಿರ್ಧರಿಸಿದ್ದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದ ಮೇಲೆ ಯಾತ್ರೆ ಹೋಗುತ್ತೇನೆ ಎಂದು ರಾಹುಲ್ ಹೇಳಿದ್ದರು.

  • ಬೌದ್ಧ ಧರ್ಮಗುರು ದಲೈಲಾಮ ಹತ್ಯೆಗೆ ಸಂಚು – ರಾಮನಗರದಲ್ಲಿ ಸೆರೆ ಸಿಕ್ಕ ಉಗ್ರರಿಂದ ಸ್ಫೋಟಕ ಮಾಹಿತಿ

    ಬೌದ್ಧ ಧರ್ಮಗುರು ದಲೈಲಾಮ ಹತ್ಯೆಗೆ ಸಂಚು – ರಾಮನಗರದಲ್ಲಿ ಸೆರೆ ಸಿಕ್ಕ ಉಗ್ರರಿಂದ ಸ್ಫೋಟಕ ಮಾಹಿತಿ

    ಬೆಂಗಳೂರು: ಬೌದ್ಧ ಧರ್ಮಗುರು ದಲೈಲಾಮ ಹತ್ಯೆಗೆ ಸಂಚು ರೂಪಿಸಿಲಾಗಿತ್ತು ಅನ್ನೋ ಭಯಾನಕ ಮಾಹಿತಿ ಎನ್‍ಐಎ ತನಿಖೆಯಿಂದ ಬಯಲಾಗಿದೆ.

    ಉಗ್ರರ ಸಂಚಿನ ಕುರಿತಂತೆ ಎನ್‍ಐಎ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ದಲೈಲಾಮ ಅವರನ್ನು ಮುಗಿಸಲು ರಾಜ್ಯದ ರಾಮನಗರದಲ್ಲೇ ಸಂಚು ರೂಪಿಸಿರುವುದಾಗಿ ಎನ್‍ಐಎ ನಡೆಸಿದ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಪರಿಣಾಮ ಬೌದ್ಧ ಧರ್ಮಗುರು ದಲೈಲಾಮ ಪ್ರಾಣ ಉಳಿದಿದೆ.

    ಚಾರ್ಜ್ ಶೀಟ್ ನಲ್ಲಿ ಏನಿದೆ?
    2018ರ ಜನವರಿ 18ರಂದು ಬಿಹಾರದ ಬೋಧ್ ಗಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲೈಲಾಮ ಮತ್ತು ಬಿಹಾರ ರಾಜ್ಯಪಾಲರನ್ನು ಜೊತೆಯಲ್ಲೇ ಬಾಂಬ್ ಬಿಟ್ಟು ಉಡಾಯಿಸಲು ಸ್ಕೆಚ್ ರೂಪಿಸಿದ್ದರು. ಇದರ ಮಾಹಿತಿ ಅರಿತ ಎನ್‍ಐಎ ರಂಗಕ್ಕಿಳಿದು ಮೂವರನ್ನು ಅರೆಸ್ಟ್ ಮಾಡಿತ್ತು. ಇದು ವಿಫಲವಾದ ಬೆನ್ನಲ್ಲೇ ಲಾಮ ಹತ್ಯೆಗೆ ಮತ್ತೊಂದು ಸ್ಕೆಚ್ ಅನ್ನು ಕರ್ನಾಟಕದಲ್ಲಿ ರೂಪಿಸಲಾಗ್ತಿತ್ತು. ಅದರಲ್ಲೂ ರಾಮನಗರದ ಮನೆಯೊಂದರಲ್ಲಿ ಲಾಮ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಬೋಧ್‍ಗಯಾದಲ್ಲಿ ಬಂಧಿಸಲ್ಪಟ್ಟಿದ್ದ ಮೂವರು ಉಗ್ರರ ವಿಚಾರಣೆ ವೇಳೆ ರಾಮನಗರದಲ್ಲಿ ರೂಪಿಸಲಾಗ್ತಿದ್ದ ಸಂಚಿನ ಬಗ್ಗೆ ಬಾಯ್ಬಿಟ್ಟಿದ್ದರು.

    ಆಗಸ್ಟ್ 7ರಂದು ರಾಜ್ಯಕ್ಕೆ ಧಾವಿಸಿದ ಎನ್‍ಐಎ ತಂಡ, ರಾಮನಗರಕ್ಕೆ ತೆರಳಿ ಜೆಎಂಬಿ ಉಗ್ರ ಮುನೀರ್‍ನನ್ನು ಯಶಸ್ವಿಯಾಗಿ ಬೇಟೆಯಾಡಿತ್ತು. ಮುನೀರ್ ನನ್ನು ವಶಕ್ಕೆ ಪಡೆದಿದ್ದರಿಂದ ಸಂಭವಿಸಬಹುದಾಗಿದ್ದ ಘನಘೋರ ದುರಂತವನ್ನ ಎನ್‍ಐಎ ತಪ್ಪಿಸಿತ್ತು. ಬಾಂಬ್ ಸ್ಫೋಟಿಸಿ ದಲೈಲಾಮ ಹತ್ಯೆಗೆ ಮುನೀರ್ ಸಂಚು ನಡೆಸಿದ್ದ ವಿಚಾರ ಎನ್‍ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    1959ರಲ್ಲಿ ಚೀನಾದಿಂದ ಎದುರಾಗಿದ್ದ ಪ್ರಾಣಕಂಟಕದಿಂದ ಪಾರಾಗಲು ಟಿಬೆಟ್‍ನಿಂದ ದಲೈಲಾಮ ರಾತ್ರೋರಾತ್ರಿ ಆಶ್ರಯ ಅರಸಿ ಭಾರತಕ್ಕೆ ಬಂದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv