Tag: ಸಂಜೀವ ಮಠಂದೂರು

  • ಭಿನ್ನಮತೀಯ ಜೋಡಿ ಪತ್ತೆ, ಇಬ್ಬರ ಬಂಧನ – ಉಪ್ಪಿನಂಗಡಿಯಲ್ಲಿ ಬಿಜೆಪಿ ಶಾಸಕರಿದ್ದ ಬಸ್‌ಗೆ ತಡೆ, ಮುತ್ತಿಗೆ

    ಭಿನ್ನಮತೀಯ ಜೋಡಿ ಪತ್ತೆ, ಇಬ್ಬರ ಬಂಧನ – ಉಪ್ಪಿನಂಗಡಿಯಲ್ಲಿ ಬಿಜೆಪಿ ಶಾಸಕರಿದ್ದ ಬಸ್‌ಗೆ ತಡೆ, ಮುತ್ತಿಗೆ

    ಮಂಗಳೂರು: ಭಿನ್ನಮತೀಯ ಜೋಡಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಕ್ಕೆ ಹಿಂದೂಪರ ಸಂಘಟನೆಯ ಸದಸ್ಯರು ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಮುತ್ತಿಗೆ ಹಾಕಿದ್ದಾರೆ.

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅರಣ್ಯ ಪ್ರದೇಶದಲ್ಲಿ ಭಿನ್ನಮತೀಯ ಜೋಡಿ ಪತ್ತೆಯಾಗಿತ್ತು. ವೀಡಿಯೋ ವೈರಲ್‌ ಆದ ಬೆನ್ನಲ್ಲೇ ಯುವಕ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧವೇ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದ.

    POLICE JEEP

    ಆಟೋ ರಿಕ್ಷಾ ತಡೆದು ನಿಲ್ಲಿಸಿ ಹಲ್ಲೆ ನಡೆಸಿರುವುದಾಗಿ ಯುವಕ ದೂರಿನಲ್ಲಿ ಆರೋಪಿಸಿದ್ದ. ಈ ದೂರಿನ ಆಧಾರದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಹಿಂದೂಪರ ಸಂಘಟನೆಯ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ನಮ್ಮ ತ್ಯಾಗಕ್ಕೆ ಬೆಲೆ ಸಿಗಲಿದೆ, ನಾನು ಕ್ಯಾಬಿನೆಟ್ ಸೇರಲಿದ್ದೇನೆ: ಆರ್.ಶಂಕರ್

    ಬಂಧನವನ್ನು ಖಂಡಿಸಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಾತ್ರಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಂಜೀವ ಮಠಂದೂರು ಅವರಿದ್ದ ಬಸ್ಸನ್ನು ಉಪ್ಪಿನಂಗಡಿಯಲ್ಲಿ ತಡೆದಿದ್ದಾರೆ. ಸಂಜೀವ ಮಠಂದೂರಿಗೆ ಮುತ್ತಿಗೆ ಹಾಕಿದ ಕಾರ್ಯರ್ತರು ಬಂಧನ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಸ್ಕೈವಾಕ್‍ನಿಂದ ಜಿಗಿದ ವ್ಯಕ್ತಿ – ಸೊಂಟಕ್ಕೆ ಗಂಭೀರ ಪೆಟ್ಟು

  • ದಕ್ಷಿಣ ಕನ್ನಡದ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

    ದಕ್ಷಿಣ ಕನ್ನಡದ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

    ಮಂಗಳೂರು: ಇಂದು ಪ್ರತಿ ಗ್ರಾಮ ಪಂಚಾಯತ್ ಸೇರಿದಂತೆ ದೇಶದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ನಲ್ಲಿಯೂ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತಿತ್ತು. ಆದರೆ ಈ ಸಂದರ್ಭ ಎಸ್‍ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿ ಕಿರಿಕ್ ಮಾಡಿದ್ದಾರೆ.

    ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲು ರೆಡಿಯಾಗಿದ್ದ ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹಾಕಿ ಪಂಚಾಯತ್ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪರಸ್ಪರ ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪುತ್ತೂರು ಪೊಲೀಸರು ಬಂದು ಎಸ್‍ಡಿಪಿಐ ಕಾರ್ಯಕರ್ತರನ್ನು ಚದುರಿಸಿದ್ದಾರೆ.

    ಪ್ರಾರಂಭದಲ್ಲಿ ಪ್ರತಿಭಟನಕಾರರಿಗೆ ಪಂಚಾಯತ್ ಅಧ್ಯಕ್ಷರು, ಪಿಡಿಓ ತಿಳಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಆದರೆ ಇವರ ಮಾತನ್ನು ಕೇಳದೆ ಎಸ್‍ಡಿಪಿಐ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಘಟನೆಯ ಬಗ್ಗೆ ತಿಳಿದುಕೊಂಡಿದ್ದಾರೆ. ತಕ್ಷಣ ಕೇಸು ದಾಖಲಿಸಿ ಆರೋಪಿಗಳ ಬಂಧಿಸುವಂತೆ ಪೋಲೀಸರಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಮಾಜಘಾತುಕ ಕೃತ್ಯದ ಹಿಂದೆ ಯಾರೇ ಇದ್ರು ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಕಟೀಲ್

    ಈ ಮತೀಯವಾದಿ ದೇಶದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಈ ಮತೀಯವಾದಿಗಳ ಹಿಂದೆ ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದೆ. ಕಬಕ ಕಾಶ್ಮೀರ ಆಗೋದನ್ನು ಸಹಿಸಲ್ಲ, ಮಟ್ಟ ಹಾಕುವ ಕೆಲಸ ಆಗಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆ ನಿಷೇಧಿಸಬೇಕೆಂದು ಸಂಜೀವ ಮಠಂದೂರು ಒತ್ತಾಯಿಸಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು.