ನಟಿ ರಚಿತಾ ರಾಮ್ (Rachita Ram) ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ (Film Chamber) ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದ ನಿರ್ದೇಶಕ ನಾಗಶೇಖರ್ (Nagashekar) ಒತ್ತಾಯಿಸಿದ್ದಾರೆ.
ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.
ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್ಲೈನ್ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದ್ರು. ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವ್ರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಅಂತ ಫಿಲ್ಮ್ ಚೇಂಬರ್ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.
ಪವಿತ್ರ ಇಂಟರ್ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ (Nagasekhar) ಅವರ ನಿರ್ದೇಶನದ ಈ ವರ್ಷದ ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. (Sanju Weds Geetha 2) ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ‘ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ ನಟ ಉಪೇಂದ್ರ, ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಕೂಡ ಹಾಜರಿದ್ದರು. ಕವಿರಾಜ್ ಅವರ ಸಾಹಿತ್ಯ ರಚನೆಯ ಈ ಹಾಡಿಗೆ ಶ್ರೀಧರ್ ವಿ.ಸಂಭ್ರಮ್ ಅದ್ಭುತವಾದ ಟ್ಯೂನ್ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ನಾಗಶೇಖರ್ ನಾನು ಈ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ಮೊದಲು ಹಾಡುಗಳನ್ನು ರೆಡಿ ಮಾಡಿಕೊಳ್ಳಬೇಕಾಗಿತ್ತು. ಒಟ್ಟು 6 ಸುಂದರ ಹಾಡುಗಳು ಚಿತ್ರದಲ್ಲಿದ್ದು, ಈ ಹಾಡಿನಲ್ಲಿ ಒಬ್ಬ ಸೈನಿಕನ ಪ್ರೇಮಕಥೆಯನ್ನು ಹೇಳಿದ್ದೇನೆ. ಸ್ವಿಟ್ಜರ್ ಲ್ಯಾಂಡ್ ಸೈನಿಕನೊಬ್ಬ ತನ್ನ ರಾಣಿ ಸೆಲ್ವಿಕ್ ಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಪ್ರೀತಿ ಮಾಡ್ತಿರ್ತಾನೆ. ಆತನಿಗೆ ತನ್ನ ಪ್ರೀತಿಯನ್ನು ಹೇಳಿಕೊಳ್ಳಲಿಕ್ಕೆ ಆಗ್ತಿರಲಿಲ್ಲ, ಏಕೆಂದರೆ ಆಕೆ ಮಹಾರಾಣಿ. ಆತನದು ಒನ್ ವೇ ಲವ್, ಒಮ್ಮೆ ಜರ್ಮನ್ ಸೈನಿಕರು ಸ್ವಿಟ್ಜರ್ ಲ್ಯಾಂಡ್ ಮೇಲೆ ಅಟ್ಯಾಕ್ ಮಾಡ್ತಾರೆ. ಆಗ ವೀರಾವೇಶದಿಂದ ಹೋರಾಡಿದ ಆ ಸೈನಿಕ ಅವರನ್ನು ಸೋಲಿಸಿ ವೀರಮರಣವನ್ನಪ್ಪುತ್ತಾನೆ, ತನ್ನ ರಾಣಿಗೆ ಆಕೆಯ ಕಿರೀಟವನ್ನು ಮತ್ತೆ ತಂದುಕೊಡುತ್ತಾನೆ. ಸಾಯೋ ಸಮಯದಲ್ಲಿ ಆತ ರಾಣಿಗೆ ತನ್ನ ರಕ್ತದಲ್ಲಿ “ಐ ಲವ್ ಯು ಫಾರೆವರ್” ಅಂತ ಒಂದು ಪತ್ರ ಬರೆಯುತ್ತಾನೆ. ಈ ಹಾಡು ಚಿತ್ರಕಥೆಯಲ್ಲಿ ಬಹಳ ಮುಖ್ಯವಾದ ಭಾಗವಾಗಿರುತ್ತದೆ. ಈ ಸಾಂಗ್ ನಲ್ಲಿ ಮೊದಲಬಾರಿಗೆ ಆಕ್ಷನ್ ಇಟ್ಟಿದ್ದೇನೆ ಎಂದು ಹೇಳಿದರು.
ಶ್ರೀಧರ್ ವಿ.ಸಂಭ್ರಮ್ ಮಾತನಾಡಿ ನಾಗಶೇಖರ್ ಅವರು ಈ ಥರದ ಕಥೆ ಇದೆ ಎಂದಾಗ ಖುಷಿಯಾಯ್ತು. ಅವರುಸುಲಭವಾಗಿ ಟ್ಯೂನ್ ಒಪ್ಪುವವರಲ್ಲ, ಆದರೆ ಈ ನಾನು ಈ ಟ್ಯೂನ್ ಕೊಟ್ಟ ಕೂಡಲೇ ಒಪ್ಪಿದರು. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿ ಮೂಡಿಬಂದಿವೆ ಎಂದರು. ಸಾಹಿತಿ ಕವಿರಾಜ್ ಮಾತನಾಡಿ ಇದು ಸಿನಿಮಾ ಕೆಲಸ ಅನಿಸೋದೇ ಇಲ್ಲ. ನಮಗೆ ಅಷ್ಟು ಫ್ರೀಡಂ ಕೊಟ್ಟಿರ್ತಾರೆ. ನಾಗಶೇಖರ್ ಸಿನಿಮಾಗೆ ಹಾಡುಗಳನ್ನು ಬರೀಬೇಕಾದ್ರೆ ತಾನಾಗೇ ಒಳ್ಳೊಳ್ಳೆ ಪದಗಳು ಹುಟ್ಟಿಕೊಳ್ಳುತ್ತವೆ. ನಿರ್ದೇಶಕರು ನಮಗೆಲ್ಲ ಒಂದು ರೆಸಾರ್ಟ್ ಬುಕ್ ಮಾಡಿ ಲಿರಿಕ್ ಬರೆಯಲು ಹೇಳಿದ್ದರು, ಈ ಚಿತ್ರದ ಸಾಂಗ್ ಬರೆಯಲು ಹೋದಾಗ ಏನೋ ಹೊಸ ಸ್ಪೂರ್ತಿ ಬರುತ್ತದೆ ಎಂದು ಹೇಳಿದರು.
ನಟ ಉಪೇಂದ್ರ ಮಾತನಾಡಿ ನನಗೆ ಮೊದಲು ಈ ಚಿತ್ರದ ಕ್ಲೈಮ್ಯಾಕ್ಸ್ ಏನು ಅಂತ ಗೊತ್ತಾಯ್ತು.ನಾನು ಅವತ್ತೇ ಹೇಳಿದೆ ಈ ಸಿನಿಮಾ ಸೂಪರ್ ಸಕ್ಸಸ್ ಅಂತ. ಈಗ ಈ ಹಾಡನ್ನು ನೋಡಿದಾಗ ಡಿಸೈಡ್ ಮಾಡಿದೆ. 100% ಹಿಟ್ ಆಗುತ್ತೆ ಎಂದು ಕಾನ್ಫಿಡೆಂಟಾಗಿ ಹೇಳಿದರು. ನಿರ್ಮಾಪಕ ಛಲವಾದಿ ಕುಮಾರ್, ಮಾತನಾಡುತ್ತ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಮುಂದಿನ ತಿಂಗಳು ಬಿಡುಗಡೆಯಾಗುತ್ತಿದೆ. ಖಂಡಿತ ಹಿಟ್ ಆಗುತ್ತೆ ಎಂಬ ಬಂಬಿಕೆಯಿದೆ ಎಂದರು. ನಾಯಕಿ ರಚಿತಾರಾಮ್ ಶೂಟಿಂಗ್ ನಲ್ಲಿದ್ದುದರಿಂದ ಬಂದಿರಲಿಲ್ಲ.
ವಿತರಕ ಗೋಕುಲರಾಜ್ ಮಾತನಾಡಿ ನನಗೆ ಚಿತ್ರದ ಸ್ಯಾಂಪಲ್ಸ್ ತೋರಿಸಿದರು. ತುಂಬಾ ಚೆನ್ನಾಗಿ ಬಂದಿದೆ. ಎಂದರು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ನಟ ಶ್ರೀನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ಹೆಸರಾಂತ ಕಲಾವಿದರೇ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ನ ಅದ್ಭುತವಾದ ಲೊಕೇಶನ್ಗಳಲ್ಲಿ 72 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ ಸಮಸ್ಯೆ, ಅಲ್ಲಿನ ಕಪ್ಪುಮಣ್ಣಿನ ಕಥೆಯನ್ನು ಈ ಚಿತ್ರದ ಮೂಲಕ ನಾಗಶೇಖರ್ ಹೇಳ ಹೊರಟಿದ್ದಾರೆ. ಈಗಿನ ಕಾಲದ ಲವ್ಸ್ಟೋರಿ ಜೊತೆಗೆ ಒಂದು ಸರ್ ಪ್ರೈಸ್ ಕೂಡ ಈ ಚಿತ್ರದಲ್ಲಿದೆ.
ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ ಮೊದಲಬಾರಿಗೆ ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.
ಇದು ಕಾಕತಾಳೀಯವಾದರೂ ನಿಜ. ರಮ್ಯಾ (Ramya) ನಟನೆಯ ಮುಂದುವರೆದು ಭಾಗದ ಸಿನಿಮಾಗಳು ರಚಿತಾ ರಾಮ್ (Rachita Ram) ಪಾಲಾಗುತ್ತಿವೆ. ರಮ್ಯಾ ನಟನೆಯ ಸಿನಿಮಾಗಳ ಪಾರ್ಟ್ 2 ಚಿತ್ರದಲ್ಲಿ ರಚಿತಾ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ನಟನೆಯ ಎರಡು ಸಿನಿಮಾಗಳಿಗೆ ಹೀಗೆ ರಚಿತಾ ಆಯ್ಕೆಯಾಗಿದ್ದಾರೆ.
ಈ ಹಿಂದೆ ದುನಿಯಾ ವಿಜಯ್ ನಟನೆಯ ‘ಜಾನಿ’ (Johnny) ಸಿನಿಮಾದಲ್ಲಿ ರಮ್ಯಾ ನಾಯಕಿಯಾಗಿ ನಟಿಸಿದ್ದರು. ‘ಊರಿಗೊಬ್ಬಳೇ ಪದ್ಮಾವತಿ’ ಹಾಡಿನ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದರು. ಈ ಸಿನಿಮಾ ‘ಜಾನಿ ಜಾನಿ ಯೆಸ್ ಪಪ್ಪಾ’ ಹೆಸರಿನಲ್ಲಿ ಪಾರ್ಟ್ 2 ಬಂತು. ಆದರೆ, ಈ ಸಿನಿಮಾದಲ್ಲಿ ನಟಿಸಲು ರಮ್ಯಾ ನಿರಾಕರಿಸಿದ್ದರು. ಹಾಗಾಗಿ ಸಲೀಸಾಗಿ ರಚಿತಾ ರಾಮ್ ಗೆ ಈ ಅವಕಾಶ ಒದಗಿ ಬಂತು. ಇದನ್ನೂ ಓದಿ:ಆಲ್ ಓಕೆ ಅಲೋಕ್ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ರವಿಚಂದ್ರನ್
ಇದೀಗ ನಾಗಶೇಖರ್ ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 (Sanju Weds Geetha)ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಸಂಜು ವೆಡ್ಸ್ ಗೀತಾ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದವರು ಅದೇ ರಮ್ಯಾ. ಆದರೆ, ಪಾರ್ಟ್ 2ನಲ್ಲಿ ಪಾತ್ರ ಮಾಡಲು ರಮ್ಯಾ ನಿರಾಕರಿಸಿದ್ದಾರೆ. ಹಾಗಾಗಿ ಆ ಸ್ಥಾನವನ್ನು ಮತ್ತದೇ ರಚಿತಾ ರಾಮ್ ತುಂಬುತ್ತಿದ್ದಾರೆ.
ರಚಿತಾ ರಾಮ್ ಅವರನ್ನು ಭೇಟಿ ಮಾಡಿರುವ ನಿರ್ದೇಶಕ ನಾಗಶೇಖರ್. ಸಿನಿಮಾದ ಸಂಪೂರ್ಣ ಕಥೆಯನ್ನು ಹೇಳಿದ್ದಾರಂತೆ. ರಚಿತಾ ಕೂಡ ಕಥೆ ಮತ್ತು ಪಾತ್ರ ಇಷ್ಟಪಟ್ಟು ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಇದೇ ಆಗಸ್ಟ್ 15ರಂದು ಮುಹೂರ್ತ ಆಚರಿಸಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾಹಿತಿ ಚಿತ್ರತಂಡದಿಂದ ಸಿಗಬಹುದು.
ಸದಾ ಕಾಲ ಸುದ್ದಿಯಲ್ಲಿರುವ ನಟಿ ಎಂದರೆ ರಶ್ಮಿಕಾ ಮಂದಣ್ಣ,(Rashmika Mandanna) ಇದೀಗ ಮತ್ತೆ ಚಾಲ್ತಿಯಲ್ಲಿದ್ದಾರೆ. ಕರ್ನಾಟಕದಲ್ಲಿ ಬ್ಯಾನ್ ಆಕ್ರೋಶದ ಬೆನ್ನಲ್ಲೇ ʻಮೈನಾʼ ನಿರ್ದೇಶಕ ನಾಗಶೇಖರ್(Nagashekar) ಈ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾನ ಬ್ಯಾನ್ ಮಾಡಿದ್ರೆ ಕನ್ನಡ ಚಿತ್ರರಂಗಕ್ಕೆ ನಷ್ಟ ಎಂಬ ಹೇಳಿಕೆಯನ್ನ ನೀಡಿದ್ದಾರೆ.
ಸದ್ಯ ಸೌತ್ ಮತ್ತು ಬಾಲಿವುಡ್ನಲ್ಲಿ (Bollywood) ಬ್ಯುಸಿಯಿರುವ ನಟಿ ರಶ್ಮಿಕಾ (Rashmika Mandanna) ಇತ್ತೀಚೆಗೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಸಂದರ್ಶನವೊಂದರಲ್ಲಿ ನಟಿ ತಮ್ಮ ಚೊಚ್ಚಲ ಸಿನಿಮಾದ ನಿರ್ಮಾಣ ಸಂಸ್ಥೆಯ ಹೆಸರು ಹೇಳಿಲ್ಲ ಎಂದು ಕನ್ನಡಿಗರ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ರಿಷಬ್ ಶೆಟ್ಟಿ ಕೂಡ ತಮ್ಮದೇ ಶೈಲಿಯಲ್ಲಿ ನಟಿಗೆ ಟಾಂಗ್ ಕೊಟ್ಟಿದ್ದರು. ನಂತರ ರಶ್ಮಿಕಾ ಬ್ಯಾನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಇದೀಗ ವಿಷ್ಯವಾಗಿ ನಿರ್ದೇಶಕ ನಾಗಶೇಖರ್ ಕೂಡ ರಿಯಾಕ್ಟ್ ಮಾಡಿದ್ದಾರೆ.
`ಸಂಜು ವೆಡ್ಸ್ ಗೀತಾ’, `ಮೈನಾ; ಖ್ಯಾತಿಯ ನಾಗಶೇಖರ್ ತೆಲುಗಿನ ತಮ್ಮ ಮುಂದಿನ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ರಶ್ಮಿಕಾ ಬ್ಯಾನ್ ಮತ್ತು ಮೊದಲ ಚಿತ್ರದ ಅವಕಾಶದ ಬಗ್ಗೆ ನಿರ್ದೇಶಕ ನಾಗಶೇಖರ್ ಅವರಿಗೆ ಪ್ರಶ್ನೆ ಕೇಳಲಾಗಿದೆ. ಅವಕಾಶ ಕೊಟ್ಟವರನ್ನು ನೆನಪು ಇಟ್ಟುಕೊಳ್ಳಬೇಕು ಎಂದು ನಿರೀಕ್ಷೆ ಮಾಡುವುದೇ ತಪ್ಪು. ಅದನ್ನೆಲ್ಲಾ ನಿರೀಕ್ಷಿಸಬಾರದು ಎಂದಿದ್ದಾರೆ. ಇದನ್ನೂ ಓದಿ: ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಇನ್ನೂ ನನಗೆ ಈ ಬಗ್ಗೆ ಗೊತ್ತಿಲ್ಲ. ಒಂದು ವೇಳೆ ರಶ್ಮಿಕಾ ಅವರನ್ನು ಚಿತ್ರರಂಗ ಬ್ಯಾನ್ ಮಾಡಿದರೆ ಚಿತ್ರರಂಗಕ್ಕೆ ನಷ್ಟ ಎಂದಿದ್ದಾರೆ. ಒಬ್ಬ ಒಳ್ಳೆಯ ಕಲಾವಿದೆಯನ್ನ ಬ್ಯಾನ್ ಮಾಡುವುದು ಸರಿಯಲ್ಲ. ಉದಾಹರಣೆಗೆ ಮುಂದಿನ ದಿನಗಳಲ್ಲಿ ನನ್ನ ಕನ್ನಡದ ಸಿನಿಮಾಗೆ ರಶ್ಮಿಕಾ ರೀತಿಯ ನಟಿ ಬೇಕು ಎಂದುಕೊಳ್ಳುತ್ತೇವೆ. ನೀವು ಆಕೆಯನ್ನು ಬ್ಯಾನ್ ಮಾಡಿದರೆ, ಫಿಲ್ಮ್ ಮೇಕರ್ಸ್ಗೆ ತೊಂದರೆಯಾಗುತ್ತದೆ ಎಂದು ನಾಗಶೇಖರ್ ಮಾತನಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]