Tag: ಸಂಡೂರು

  • ಬಳ್ಳಾರಿ | ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು

    ಬಳ್ಳಾರಿ | ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು

    – ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರ ಆಕ್ರೋಶ

    ಬಳ್ಳಾರಿ: ಚರಂಡಿ ಗುಂಡಿಗೆ (Drain) ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ (Ballari) ಜಿಲ್ಲೆ ಸಂಡೂರು (Sandur) ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.

    ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ (4) ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ, ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನ ಜಿಂದಾಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದರು. ನೀರಿನಲ್ಲೇ ಮಗು ಮೃತಪಟ್ಟಿದ್ದ ಬಗ್ಗೆ ವೈದ್ಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

    ಕೊನೇ ಕ್ಷಣದಲ್ಲಿ ಮಗು ಚರಂಡಿ ನೀರಿನಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಮಗು ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

  • ಸಂಡೂರಿನ ನಾರಿಹಳ್ಳದಲ್ಲಿ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆ

    ಸಂಡೂರಿನ ನಾರಿಹಳ್ಳದಲ್ಲಿ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆ

    ಬಳ್ಳಾರಿ: ಸಂಡೂರು ತಾಲೂಕಿನ ನಾರಿಹಳ್ಳದ ತಟದಲ್ಲಿ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆಯಾಗಿದೆ.

    10ನೇ ಶತಮಾನದ ವಿರುಪಾಕ್ಷ, ವಿಷ್ಣು ಆರಾಧನೆಯ ಶಿಲಾ ಶಾಸನ ಇದಾಗಿದ್ದು, ನಾರಿಹಳ್ಳದ ಬಳಿಯ ಬಂಡಿ ಬಸವೇಶ್ವರ ದೇವರ ಆವರಣದಲ್ಲಿ ಪತ್ತೆಯಾಗಿದೆ. ಶಾಸನದಲ್ಲಿ ಸೂರ್ಯ ಚಂದ್ರ ಶಿವಲಿಂಗ ನಕ್ಷತ್ರಗಳನ್ನ ಕಾಣಬಹುದಾಗಿದೆ.

    ಹತ್ತು ಅಡಿ ಎತ್ತರ ಇರುವ ಕಲ್ಲಿನಲ್ಲಿ ಆರು ಸಾಲುಗಳು ಬರೆದಿರುವ ಶಾಸನ ಇದಾಗಿದೆ. ದೇವರ ಆರಾಧನೆ ಹಾಗೂ ಮರುಜನ್ಮ ಮತ್ತು ಮೋಕ್ಷಕ್ಕೆ ಸಂಬಂಧಿಸಿದ ಶಾಸನ ಎನ್ನಲಾಗಿದ್ದು, ಈ ಶಾಸನದ ಕಾಲಾವಧಿ ಉಲ್ಲೇಖವಾಗಿಲ್ಲ‌. ಇದನ್ನೂ ಓದಿ: ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ ಟಾಪ್‌ ಲೀಡರ್‌ ಪಾರು

    ಲಿಪಿಯ ಶೈಲಿ ಹಾಗೂ ದುರ್ಮುಖಿ ಸಂವತ್ಸರ ಮಾರ್ಗಶಿರಾ ಕಾರ್ತಿಕ ಎಂದು ಉಲ್ಲೇಖವಾಗಿರುವುದರಿಂದ  ಇದು 10ನೇ ಶತಮಾನದ್ದು ಎಂದು ಹೇಳಲಾಗುತ್ತಿದೆ. ವಿಜಯನಗರ ತಿರುಗಾಟ ಅಲೆಮಾರಿ ಸಂಶೋಧನಾ ತಂಡದ ಡಾ. ಪ್ರೊಫೆಸರ್ ತಿಪ್ಪೇಸ್ವಾಮಿ, ಡಾ. ಕೃಷ್ಣಗೌಡ ಇವರ ನೇತೃತ್ವದ ತಂಡ ಈ ಶಾಸನ ಪತ್ತೆ ಹಚ್ಚಿದೆ.

  • ಬಳ್ಳಾರಿ | ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಸಾವು

    ಬಳ್ಳಾರಿ | ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಸಾವು

    – ಹೃದಯಾಘಾತಕ್ಕೆ 35 ವರ್ಷದ ವ್ಯಕ್ತಿ ಸಾವು

    ಬಳ್ಳಾರಿ: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಂಡೂರು (Sandur) ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.

    ಕಾಳಂಗೇರಿಯ ದೀಕ್ಷಾ (12) ಮೃತ ಬಾಲಕಿ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕಿ ದೀಕ್ಷಾಳನ್ನ ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ದೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರೀ ಮಳೆ- ದಕ್ಷಿಣ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಇನ್ನೂ ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದಲ್ಲಿ ನಡೆದಿದೆ. 35 ವರ್ಷದ ರಾಜೇಶ್ ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ. ರಾಜೇಶ್ ಸೋಮವಾರ ಸಂಜೆ ತಾರಾನಗರ ಗ್ರಾಮದ ಮನೆಲ್ಲಿರುವಾಗ ಎದೆ ನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

    ಹಾರ್ಟ್ ಅಟ್ಯಾಕ್ ಲಕ್ಷಣಗಳು ಇದ್ದ ಹಿನ್ನೆಲೆ, ಕೂಡಲೇ ಬಳ್ಳಾರಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಗಿದೆ. ತಾರಾನಗರದಿಂದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ರಾಜೇಶ್ ಸಾವನ್ನಪ್ಪಿದ್ದಾನೆ. ಜಿಂದಾಲ್ ಕಾರ್ಖಾನೆಯಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್‌ಗೆ ಇನ್ನೂ ವಿವಾಹವೂ ಆಗಿರಲಿಲ್ಲ. ಘಟನೆ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು

  • 400ಕ್ಕೂ ಹೆಚ್ಚು ಕರಡಿಗಳ ವಾಸಸ್ಥಾನವಾಗಿರುವ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ

    400ಕ್ಕೂ ಹೆಚ್ಚು ಕರಡಿಗಳ ವಾಸಸ್ಥಾನವಾಗಿರುವ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ

    ಬಳ್ಳಾರಿ: 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಹಾಗೂ ಪಕ್ಷಿಗಳ ವಾಸಸ್ಥಾನವಾಗಿರುವ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.ಇದನ್ನೂ ಓದಿ: ವಿದೇಶಕ್ಕೆ ಪ್ರಯಾಣಿಸುವಾಗ ವಿಮಾನದಲ್ಲಿ ಎಷ್ಟು ಚಿನ್ನ, ನಗದು ಕೊಂಡೊಯ್ಯಬಹುದು? ಭಾರತದ ಕಸ್ಟಮ್ಸ್ ನಿಯಮಗಳೇನು?

    ಭಾನುವಾರ ತಡರಾತ್ರಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಗುಡ್ಡದ ತುಂಬೆಲ್ಲಾ ಆವರಿಸಿಕೊಂಡಿದೆ. ದರೋಜಿ ಗುಡ್ಡದಲ್ಲಿ 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯ ಜೀವಿಗಳು ಹಾಗೂ ಪಕ್ಷಿಗಳು ವಾಸವಾಗಿದ್ದು, ಬೆಂಕಿ ಕೆನ್ನಾಲಿಗೆಯಿಂದ ಕಾಡು ಪ್ರಾಣಿಗಳಿಗೆ ಅಪಾಯದ ಆತಂಕ ಎದುರಾಗಿತ್ತು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ತಡರಾತ್ರಿಯಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ತೊಡಗಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಯಾವುದೇ ವನ್ಯಜೀವಿಗಳ ಪ್ರಾಣಕ್ಕೆ ಹಾನಿಯಾಗಿಲ್ಲ.ಇದನ್ನೂ ಓದಿ: ‘ಅಪ್ಪು’ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

  • ನಡು ರಸ್ತೆಯಲ್ಲೇ ಹೊತ್ತಿ ಉರಿದ ಮಹೀಂದ್ರಾ ಥಾರ್

    ನಡು ರಸ್ತೆಯಲ್ಲೇ ಹೊತ್ತಿ ಉರಿದ ಮಹೀಂದ್ರಾ ಥಾರ್

    ಬಳ್ಳಾರಿ: ರಸ್ತೆಯ ಮಧ್ಯೆಯೇ ಇದ್ದಕ್ಕಿದ್ದಂತೆ ಮಹೀಂದ್ರಾ ಕಂಪನಿಯ ಥಾರ್‌ ಜೀಪ್‌ (Mahindra Thar) ಹೊತ್ತಿ ಉರಿದ ಘಟನೆ ಸಂಡೂರು (Sanduru) ತಾಲೂಕಿನ ಜೈಸಿಂಗ್‌ಪುರ ಬಳಿ ನಡೆದಿದೆ.

    ತಾಳೂರು ಗ್ರಾಮದಿಂದ ಸಂಡೂರು ಕಡೆ ಪ್ರಯಾಣಿಸುತ್ತಿದ್ದಾಗ ಜೀಪ್‌ ಇದ್ದಕ್ಕಿದ್ದಂತೆ ಆಫ್ ಅಗಿದೆ. ಚಾಲಕ ಪ್ರಯತ್ನ ಪಟ್ಟರೂ ಸ್ಟಾರ್ಟ್‌ ಆಗಿರಲಿಲ್ಲ. ಈ ವೇಳೆ ಸುಟ್ಟ ವಾಸನೆ ಬರಲಾರಂಭಿಸಿದೆ. ಇದನ್ನೂ ಓದಿ: ಸದ್ದಿಲ್ಲದೇ ಕೊಡಗಿನ 21 ಸರ್ಕಾರಿ ಶಾಲೆಗಳಿಗೆ ಬೀಗ!

    ವಾಸನೆ ಬರುತ್ತಿದ್ದಂತೆ ಚಾಲಕ ಥಾರ್‌ನಿಂದ ಹೊರಗೆ ಇಳಿದಿದ್ದಾನೆ. ಕ್ಷಣ ಮಾತ್ರದಲ್ಲಿ ಥಾರ್‌ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಥಾರ್‌ ಹೊತ್ತಿ ಉರಿಯಲು ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವೊಮ್ಮೆ ಕಂಪನಿ ನೀಡಿದ ಬಳಿಕವೂ ಗ್ರಾಹಕರು ತಮಗೆ ಬೇಕಾದಂತೆ ವಾಹನಗಳನ್ನು ವಿನ್ಯಾಸ ಮಾಡುತ್ತಾರೆ. ಈ ರೀತಿ ಕಸ್ಟಮೈಸ್ಡ್‌ ಮಾಡಿದ ನಂತರ ವಾಹನಗಳು ಬೆಂಕಿ ತುತ್ತಾಗಿರುವ ಹಲವಾರು ಘಟನೆಗಳು ನಡೆದಿವೆ.

     

  • ಬಳ್ಳಾರಿ| ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ

    ಬಳ್ಳಾರಿ| ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ

    – 30 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

    ಬಳ್ಳಾರಿ: ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಂಡೂರು (Sandur) ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ.

    ಘಟನೆಯಲ್ಲಿ ಆಟೋಮೊಬೈಲ್ ಶಾಪ್, ಎಲೆಕ್ಟ್ರಿಕಲ್ ಹಾಗೂ ಹೋಟೆಲ್ ಬೆಂಕಿಗಾಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಸಿಕ್ಕು ಅಂಗಡಿಯಲ್ಲಿನ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಎಲೆಕ್ಟ್ರಿಕ್ ಬ್ಯಾಟರಿಗಳು, ಎಲೆಕ್ಟ್ರಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಅಂದಾಜು 30 ಲಕ್ಷದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ

    ಇನ್ನೂ ಬೆಂಕಿ ತಗುಲಿ ದಟ್ಟ ಹೊಗೆ ಆವರಿಸಿದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದರು. ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಮೂರೂ ಅಂಗಡಿಗಳು ಸುಟ್ಟು ಕರಕಲಾಗಿದ್ದವು. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋಲಾರದ ರಾಜಕೀಯ ವ್ಯಕ್ತಿಯಿಂದ ಥಾರ್‌ ಗಿಫ್ಟ್‌ – ʼಮೈಸೂರ್‌ಪಾಕ್‌ʼ ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌!

  • ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರವೂ ಕಾಂಗ್ರೆಸ್ ಪಾಲು – ಫಲಕೊಡದ ಗೌಡರ ತಂತ್ರ, ಕೈಹಿಡಿದ ಮುಸ್ಲಿಂ ಮತ!

    ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರವೂ ಕಾಂಗ್ರೆಸ್ ಪಾಲು – ಫಲಕೊಡದ ಗೌಡರ ತಂತ್ರ, ಕೈಹಿಡಿದ ಮುಸ್ಲಿಂ ಮತ!

    ಬೆಂಗಳೂರು: ಹೆಚ್‌.ಡಿ ಕುಮಾರಸ್ವಾಮಿ (HD Kumaraswamy), ಬಸವರಾಜ ಬೊಮ್ಮಾಯಿ ಹಾಗೂ ಈ. ತುಕಾರಾಮ್‌ ಅವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ (By Election) ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು, ಹೈವೋಲ್ಟೇಜ್ ಕಣ ಚನ್ನಪಟ್ಟಣ.

    ಅಂತಿಮವಾಗಿ ಎಲ್ಲರ ಲೆಕ್ಕಾಚಾರ ತಲೆಕೆಳಗು ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (CP Yogeshwar) ಗೆಲುವಿನ ನಗಾರಿ ಬಾರಿಸಿದ್ದಾರೆ. ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ 3ನೇ ಬಾರಿಯೂ ವಿಫಲರಾಗಿದ್ದಾರೆ. ಈ ಪ್ರತಿಷ್ಠೆಯ ರಾಜಕೀಯ ಆಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಕೈ ಮೇಲಾಗಿದೆ. ಇದನ್ನೂ ಓದಿ: ಜೈಲರ್‌ ಬಾಕ್ಸ್‌ನಿಂದ ಬ್ಯಾಲೆಟ್‌ ಬಾಕ್ಸ್‌ವರೆಗೆ – ಒಂದೇ ವರ್ಷದಲ್ಲಿ 2ನೇ ಬಾರಿ ಹೇಮಂತ್‌ ಸೊರೆನ್‌ ಸಿಎಂ

    ಸ್ವಂತ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸಲಾಗದೇ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮುಜುಗರ ಅನುಭವಿಸಿದ್ದಾರೆ. ದೇವೇಗೌಡರು ನಿರಂತರ 10 ದಿನ ಪ್ರಚಾರ ನಡೆಸಿ ಅಬ್ಬರಿಸಿದರೂ, ಬಿಜೆಪಿ ನಾಯಕರು ಬಂದು ಸಂಘಟಿತವಾಗಿ ಪ್ರಚಾರ ನಡೆಸಿದ್ರೂ, ಅದು ನಿಖಿಲ್‌ಗೆ ಗೆಲುವು ತಂದುಕೊಡಲಿಲ್ಲ. ಮತ ಎಣಿಕೆಯ ಮೊದಲ 6 ಸುತ್ತಿನ ವರೆಗೂ ಹಾವು – ಏಣಿ ಆಟ ನಡೆದಿತ್ತು. ಆದ್ರೆ 6ನೇ ಸುತ್ತಿನ ಬಳಿಕ ಫಲಿತಾಂಶದ ದಿಕ್ಕೇ ಬದಲಾಯಿತು. ಯೋಗೇಶ್ವರ್‌ ಸತತ ಮುನ್ನಡೆ ಸಾಧಿಸುತ್ತಾ ಹೋದ್ರು, ಇದರಿಂದ ಗೆಲುವು ʻಕೈʼ ಪಾಲಾಯಿತು.

    ಮೂರು ಕ್ಷೇತ್ರಗಳ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಲ್ಲಿ ಮುಳುಗಿದ್ರೆ, ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಮೌನಕ್ಕೆ ಶರಣಾದ್ರು. ಸೋಲು ಗೆಲುವಿನ ಬಗ್ಗೆ ಎಂದಿನಂತೆ ರಾಜಕಾರಣಿಗಳು ಮಾತಾಡಿದರು. ಗೌಡರ ಒಕ್ಕಲಿಗ ನಾಯಕತ್ವವನ್ನು ಜನ ಕಿತ್ಕೊಂಡಿದ್ದಾರೆ ಎಂದು ಯೋಗೇಶ್ವರ್ ವ್ಯಾಖ್ಯಾನಿಸಿದರು. ಇದನ್ನೂ ಓದಿ: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?

    ಚನ್ನಪಟ್ಟಣ ಫಲಿತಾಂಶ – ಯಾರಿಗೆ ಎಷ್ಟು ಮತ?
    * ಯೋಗೇಶ್ವರ್ – ಕಾಂಗ್ರೆಸ್ – ಗೆಲುವು – 1,12,642 ಮತ
    * ನಿಖಿಲ್ – ಎನ್‌ಡಿಎ – ಸೋಲು – 87,229 ಮತ
    * ಕಾಂಗ್ರೆಸ್ ಗೆಲುವಿನ ಅಂತರ – 25,413 ಮತ

    ಚನ್ನಪಟ್ಟಣ ಫಲಿತಾಂಶ ಟ್ರೆಂಡ್ಸ್ ಹೇಗಿತ್ತು?
    * 1ನೇ ಸುತ್ತು – ಯೋಗೇಶ್ವರ್‌ಗೆ 49 ಮತಗಳ ಮುನ್ನಡೆ (ಗ್ರಾಮೀಣ)
    * 2ನೇ ಸುತ್ತು – ನಿಖಿಲ್‌ಗೆ 135 ಮತಗಳ ಮುನ್ನಡೆ (ಗ್ರಾಮೀಣ)
    * 5ನೇ ಸುತ್ತು – ನಿಖಿಲ್‌ಗೆ 1,306 ಮತಗಳ ಮುನ್ನಡೆ (ಗ್ರಾಮೀಣ)
    * 6ನೇ ಸುತ್ತು – ಯೋಗೇಶ್ವರ್‌ಗೆ 783 ಮತಗಳ ಮುನ್ನಡೆ (ಟೌನ್)
    * 10ನೇ ಸುತ್ತು – ಯೋಗೇಶ್ವರ್‌ಗೆ 19,799 ಮತಗಳ ಮುನ್ನಡೆ (ಟೌನ್)
    * 20ನೇ ಸುತ್ತು – 25,515 ಮತಗಳ ಅಂತರದಿಂದ ಯೋಗೇಶ್ವರ್ ಗೆಲುವು

    ಚನ್ನಪಟ್ಟಣ ಫಲಿತಾಂಶ ವಿಶ್ಲೇಷಣೆ
    * ಯೋಗೇಶ್ವರ್ ಕೈ ಹಿಡಿದ ಮುಸ್ಲಿಂ ಮತ
    * ಯೋಗೇಶ್ವರ್ ಕೈ ಹಿಡಿದ `ಪಟ್ಟಣ’ದ ಮತ
    * ಒಕ್ಕಲಿಗ ಮತ ವಿಭಜನೆ- ನಿಖಿಲ್ ಸೋಲು
    * ಯೋಗೇಶ್ವರ್ ಕೈ ಹಿಡಿದ `ಗೃಹಲಕ್ಷ್ಮಿ’ಯರ `ಶಕ್ತಿ’
    * ಸಿಪಿವೈ ವೈಯಕ್ತಿಕ ವರ್ಚಸ್ಸು – 2 ಸೋಲಿನ ಅನುಕಂಪ
    * ಬಿಜೆಪಿಯ `ವಕ್ಫ್’ ವಿರೋಧಿ ನೀತಿ-ನಿಖಿಲ್‌ಗೆ ಹೊಡೆತ
    * ಕಾಂಗ್ರೆಸ್‌ಗೆ ಪ್ಲಸ್ ಆದ ಜಮೀರ್ ವಿವಾದಿತ ಮಾತು
    * ಕೈಗೂಡದ ದೇವೇಗೌಡರು- ಹೆಚ್‌ಡಿಕೆ ರಣತಂತ್ರ

    ಶಿಗ್ಗಾಂವಿಯಲ್ಲಿ 3 ದಶಕದ ಬಳಿಕ ʻಕೈʼ ಮೇಲು:
    ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರ ನಿರೀಕ್ಷೆ ಮೀರಿ ಮತಪ್ರಭುಗಳು ಅಚ್ಚರಿಯ ತೀರ್ಪು ನೀಡಿದ್ದಾರೆ. ಬಿಜೆಪಿಯ ಭದ್ರಕೋಟೆ ಛಿದ್ರವಾಗಿದೆ. 1994ರ ಬಳಿಕ ಇದೇ ಮೊದಲ ಬಾರಿಗೆ ಶಿಗ್ಗಾಂವಿ ಕಾಂಗ್ರೆಸ್ ಕೈ ಹಿಡಿದಿದೆ. ತಾವೇ ಕಟ್ಟಿರುವ ಕೋಟೆಯಲ್ಲಿ ಮಗನನ್ನು ಪ್ರತಿಷ್ಠಾಪಿಸಲು ಬೊಮ್ಮಾಯಿ ವಿಫಲರಾಗಿದ್ದಾರೆ. ಜನಾದೇಶ ಭರತ್ ಬೊಮ್ಮಾಯಿ ವಿರುದ್ಧ ಬಂದಿದೆ. ಮೊದಲ 7 ಸುತ್ತಿನವರೆಗೆ ಭರತ್ ಬೊಮ್ಮಾಯಿ ಲೀಡ್‌ನಲ್ಲಿದ್ದರು. ಆದ್ರೆ 8ನೇ ಸುತ್ತಿನ ನಂತ್ರ ಚಿತ್ರಣ ಬದಲಾಯ್ತು. ಅಂತಿಮವಾಗಿ ಕಾಂಗ್ರೆಸ್ ಜನಾದೇಶ ಕಾಂಗ್ರೆಸ್ ಪರ ಬಂತು. ಪರಿಣಾಮ ಯಾಸೀರ್ ಪಠಾಣ್ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡ್ತಿದ್ದಾರೆ. ಕಾಂಗ್ರೆಸ್ ಹಣ ಹರಿಸಿದ್ದು, ಮುಸ್ಲಿಮರು, ಕುರುಬರು ಕಾಂಗ್ರೆಸ್ ಪರ ನಿಂತಿದ್ದು ನಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ. ನಾನು ಡಿಸಿಎಂ ಅಲ್ದೇ ಇದ್ರೂ ಗೆಲ್ಸಿದ್ದೀನಿ ನೋಡಿ ಎನ್ನುತ್ತಾ ಡಿಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಟವೆಲ್ ಹಾಕಿದ್ದಾರೆ. ಬೆಳಗಾವಿಯಲ್ಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಘೋಷಣೆ ಮೊಳಗಿವೆ.

    ಶಿಗ್ಗಾಂವಿ ಫಲಿತಾಂಶ ಹೇಗಿದೆ?
    * ಯಾಸೀರ್ ಪಠಾಣ್ – ಕಾಂಗ್ರೆಸ್ – ಗೆಲುವು – 1,00,756 ಮತ
    * ಭರತ್ ಬೊಮ್ಮಾಯಿ – ಬಿಜೆಪಿ – ಸೋಲು – 87,308 ಮತ
    * ಕಾಂಗ್ರೆಸ್ ಗೆಲುವಿನ ಅಂತರ – 13,448 ಮತ

    ಶಿಗ್ಗಾಂವಿ ರಿಸಲ್ಟ್ ಟ್ರೆಂಡ್ಸ್ ಹೇಗಿತ್ತು?
    * 1ನೇ ಸುತ್ತು – ಭರತ್‌ಗೆ 325 ಮತಗಳ ಮುನ್ನಡೆ
    * 7ನೇ ಸುತ್ತು – ಭರತ್‌ಗೆ 998 ಮತಗಳ ಮುನ್ನಡೆ
    * 8ನೇ ಸುತ್ತು – ಯಾಸೀರ್‌ಗೆ 1158 ಮತಗಳ ಮುನ್ನಡೆ
    * 18ನೇ ಸುತ್ತು – ಯಾಸೀರ್‌ಗೆ 13,448 ಮತಗಳ ಗೆಲುವು

    ಶಿಗ್ಗಾಂವಿ ಫಲಿತಾಂಶ ವಿಶ್ಲೇಷಣೆ
    * ಕಾಂಗ್ರೆಸ್ ಕೈಹಿಡಿದ ಅಹಿಂದ ಮತ
    * ಕುರುಬ, ಮುಸ್ಲಿಂ ಮತ ಚದುರದಂತೆ ಸಿಎಂ ಕಾರ್ಯತಂತ್ರ
    * ಯಾಸೀರ್‌ಗೆ ವರವಾದ ಗ್ಯಾರಂಟಿ ಮತ
    * ತಳಮಟ್ಟದಲ್ಲಿ ಸತೀಶ್ ಜಾರಕಿಹೊಳಿ ಸಂಘಟನೆ
    * ಫಲ ಕೊಡದ ಬೊಮ್ಮಾಯಿ ಕಾರ್ಯತಂತ್ರ
    * ಕುಟುಂಬ ರಾಜಕೀಯ ಒಪ್ಪದ ಮತದಾರ

    ಸಂಡೂರು ಕ್ಷೇತ್ರಕ್ಕೆ ಮೊದಲ ಮಹಿಳಾ ಶಾಸಕಿ:
    ಇನ್ನೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. 19 ಸುತ್ತುಗಳ ಮತ ಎಣಿಕೆಯಲ್ಲಿ ಆರಂಭದಿಂದ ಅನ್ನಪೂರ್ಣ, ಬಂಗಾರು ಹನುಮಂತು ನಡ್ವೆ ತುರುಸಿನ ಪೈಪೋಟಿ ಕಂಡುಬಂದಿತ್ತು. ಆದ್ರೆ 6 ಮತ್ತು 7ನೇ ಸುತ್ತು ಹೊರತು ಪಡಿಸಿದ್ರೆ, ಉಳಿದಂತೆ ಅನ್ನಪೂರ್ಣ ಎಲ್ಲೂ ಹಿನ್ನಡೆ ಕಾಣಲಿಲ್ಲ. ನಿಧಾನಕ್ಕೆ ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಾ, ಸುಲಭ ಜಯ ಗಳಿಸಿದ್ರು. ಈ ಮೂಲಕ ಸಂಡೂರಿನಿಂದ ವಿಧಾನಸಭೆ ಪ್ರವೇಶ ಮಾಡ್ತಿರುವ ಮೊದಲ ಮಹಿಳಾ ಶಾಸಕಿ ಅನ್ನೋ ಹೆಗ್ಗಳಿಕೆಗೂ ಪಾತ್ರರಾದ್ರು.

    ಸಂಡೂರು ಫಲಿತಾಂಶ ಹೇಗಿದೆ?
    * ಅನ್ನಪೂರ್ಣ – ಕಾಂಗ್ರೆಸ್ – ಗೆಲುವು – 93,616 ಮತ
    * ಬಂಗಾರು ಹನುಮಂತು – ಬಿಜೆಪಿ – ಸೋಲು – 83,967 ಮತ
    (ಕಳೆದ ಬಾರಿ ಬಿಜೆಪಿ ಪಡೆದ ಮತ 49,700 )
    * ಕಾಂಗ್ರೆಸ್ ಗೆಲುವಿನ ಅಂತರ – 9649 ಮತ

    ಸಂಡೂರು ರಿಸಲ್ಟ್ ಟ್ರೆಂಡ್ಸ್ ಹೇಗಿದೆ?
    * 1ನೇ ಸುತ್ತು – ಅನ್ನಪೂರ್ಣಗೆ 2,586 ಮತಗಳ ಮುನ್ನಡೆ
    * 6ನೇ ಸುತ್ತು – ಬಂಗಾರುಗೆ 262 ಮತಗಳ ಮುನ್ನಡೆ
    * 8ನೇ ಸುತ್ತು – ಅನ್ನಪೂರ್ಣಗೆ 33 ಮತಗಳ ಮುನ್ನಡೆ
    * 19ನೇ ಸುತ್ತು – ಅನ್ನಪೂರ್ಣಗೆ 9,649 ಮತಗಳ ಗೆಲುವು

    ಸಂಡೂರು ಫಲಿತಾಂಶ ವಿಶ್ಲೇಷಣೆ
    * ಕಾಂಗ್ರೆಸ್‌ನ ಭದ್ರಕೋಟೆ
    * ಸಂಸದ ತುಕಾರಾಂ ಸಾಫ್ಟ್ ಇಮೇಜ್
    * ಸಂತೋಷ್ ಲಾಡ್ ಸಂಘಟನೆ
    * ಕಾಂಗ್ರೆಸ್ ಕೈಹಿಡಿದ `ಗ್ಯಾರಂಟಿ’
    * ಜನಾರ್ದನರೆಡ್ಡಿ ರಣತಂತ್ರ ಫೇಲ್
    * ಬಿಜೆಪಿಯಲ್ಲಿ ಹೊಂದಾಣಿಕೆ ಕೊರತೆ
    * ಬಂಗಾರು ಹೊರಗಿನವರು ಎಂಬ ಆರೋಪ

  • ಅಭಿವೃದ್ಧಿ ಕಾರ್ಯ, ಗ್ಯಾರಂಟಿ ಯೋಜನೆ, ಟೀಂ ವರ್ಕ್ ಗೆಲುವಿಗೆ ಸಹಕಾರಿಯಾಗಿದೆ – ಅನ್ನಪೂರ್ಣ ತುಕಾರಾಂ

    ಅಭಿವೃದ್ಧಿ ಕಾರ್ಯ, ಗ್ಯಾರಂಟಿ ಯೋಜನೆ, ಟೀಂ ವರ್ಕ್ ಗೆಲುವಿಗೆ ಸಹಕಾರಿಯಾಗಿದೆ – ಅನ್ನಪೂರ್ಣ ತುಕಾರಾಂ

    ಬಳ್ಳಾರಿ: ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಕಾಂಗ್ರೆಸ್ (Congress) ವಿಜೇತ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ (Annapurna Tukaram) ಹೇಳಿದರು.ಇದನ್ನೂ ಓದಿ: ಯಡಿಯೂರಪ್ಪ, ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ: ಯತ್ನಾಳ್‌ ವಾಗ್ದಾಳಿ

    ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮತದಾರರು ನನ್ನ ಮೇಲೆ ವಿಶ್ವಾಸ ಇಟ್ಟು ಗೆಲ್ಲಿಸಿದ್ದಾರೆ. ಅವರಿಗೆ ನಾನು ಕೃತಜ್ಞತೆ ಸಲ್ಲಿಸ್ತೇನೆ. ನಮ್ಮ ನಾಯಕರು ನಮಗೆ ಬೆಂಬಲವಾಗಿ ನಿಂತಿದ್ದರು. ಇನ್ನೂ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ. ಈ ಬಾರಿ ಜನರ ಶೇಕಡಾವಾರು ಮತದಾನ ಹೆಚ್ಚಾಗಿದೆ. ಅದನ್ನು ನಾನು ಸೇವೆ ಮೂಲಕ ವಾಪಸ್ ಕೊಡುತ್ತೇನೆ. ನನ್ನ ಪತಿ ಸಂಸದರಾಗಿದ್ದಾರೆ. ನಾನು ಶಾಸಕಿಯಾಗಿದ್ದೇನೆ. ನಮ್ಮ ಜವಾಬ್ದಾರಿ ಹೆಚ್ಚಾಗಿದೆ. ದಂಪತಿಯಾಗಿದ್ವಿ, ಇದೀಗ ಸಂಸದ, ಶಾಸಕರಾಗಿ ಜನರ ಸೇವೆ ಮಾಡುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.

    ಇದೇ ವೇಳೆ ಸಂಸದ ತುಕಾರಾಂ ಮಾತನಾಡಿ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ನಾನು ಈ ಮೂಲಕ ಧನ್ಯವಾದ ತಿಳಿಸುತ್ತೇನೆ. ಅವರ ಅಭಿಮಾನ, ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುತ್ತೇವೆ. ಈ ಮೂಲಕ ನಮ್ಮ ಜವಾಬ್ದಾರಿ ಹೆಚ್ಚಾಗಿದೆ. ಸೋತ ಮೇಲೆ ಸಹಜವಾಗಿ ಹಣಬಲ ಎಂದು ಆರೋಪ ಮಾಡುತ್ತಾರೆ. ಆರೋಪ ಮಾಡುವವರು ಮಾಡಲಿ, ನಾವು ಗೆಲ್ಲುತ್ತಲೇ ಇರುತ್ತವೆ. ಜನಾರ್ದನರೆಡ್ಡಿ ಗಂಗಾವತಿಯಲ್ಲಿ ಏನು ಅಭಿವೃದ್ದಿ ಮಾಡಿದ್ದಾರೆ ತೋರಿಸಲಿ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

  • ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

    ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

    ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

    ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ. ಪತಿಯಿಂದ ತೆರವಾಗಿ ಸ್ಥಾನದಲ್ಲಿ ಪತ್ನಿ ಗೆದ್ದಿದ್ದಾರೆ.

    ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರ ಬಳಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ‘ಕೈ’ ನಾಯಕರ ಪರ ಜೈಕಾರ ಹಾಕಿದ್ದಾರೆ.

    ಇತ್ತ ಸೋಲೊಪ್ಪಿಕೊಂಡಿರುವ ಬಂಗಾರು ಹನುಮಂತ, ಧರ್ಮದ ವಿರುದ್ಧ ಅಧರ್ಮ ಗೆದ್ದಿದೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್‌ ಹಣ ಬಲದಿಂದ ಗೆದ್ದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

  • ನಾವು ಓಲೈಕೆ ಮಾಡಲ್ಲ, ಮುಸ್ಲಿಮರು ನಮ್ಗೆ ಮತ ಹಾಕಲ್ಲ: ಸಿ.ಟಿ ರವಿ

    ನಾವು ಓಲೈಕೆ ಮಾಡಲ್ಲ, ಮುಸ್ಲಿಮರು ನಮ್ಗೆ ಮತ ಹಾಕಲ್ಲ: ಸಿ.ಟಿ ರವಿ

    ಕಲಬುರಗಿ: ನಾವು ಮುಸ್ಲಿಮರ ಪರವಾಗಿ ಎಷ್ಟೇ ಕೆಲಸ ಮಾಡಿದರೂ ಅವರು ನಮಗೆ ಮತ ಹಾಕಲ್ಲ, ಏಕೆಂದರೆ ನಾವು ಅವರನ್ನ ಓಲೈಕೆ ಮಾಡಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.

    ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಟಫ್ ಪೈಟ್ ಇದೆ, ಆದ್ರೂ ಎರಡರಲ್ಲಿ ಎನ್‌ಡಿಎ ಗೆಲ್ಲುತ್ತೆ ಅಂತ ವಿಶ್ವಾಸವಿದೆ ಎಂದಿದ್ದಾರೆ. ಪ್ರಯತ್ನ ನಾವು ಪಟ್ಟಿದ್ದೆವೆ ತೀರ್ಪು ಜನರು ಕೊಡ್ತಾರೆ ಎಂದಿದ್ದಾರೆ.

    ಮಹಾರಾಷ್ಟ್ರದಲ್ಲಿ ಕರ್ನಾಟಕದಿಂದ ನಾನು ಸೇರಿ ಹಲವು ಜನರು ಕೆಲಸ ಮಾಡಿದ್ದೆವೆ. ಪಶ್ಚಿಮ ಮಹಾರಾಷ್ಟ್ರದ 58 ಕ್ಷೇತ್ರದಲ್ಲಿ ಓಡಾಟ ನಡೆಸಿದ್ದೇನೆ. ಎನ್‌ಡಿಎ 221 ಕ್ಷೇತ್ರದಲ್ಲಿ ಮುನ್ನಡೆ ಕಾಯ್ಡುಕೊಂಡಿದೆ. ಇದೇ ಅಂತಿಮ ಅಲ್ಲ, ಜಾರ್ಖಂಡ್‌ನಲ್ಲಿ ನಮ್ಮ ನೀರಿಕ್ಷೆಯಷ್ಟು ಮುನ್ನಡೆ ಸಿಕ್ಕಿಲ್ಲ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರ್ತೀವಿ ಅನ್ನೋ ವಿಶ್ವಾವಿದೆ. ಕರ್ನಾಟಕದಲ್ಲಿ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕು ಎಂದು ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ ಅಲ್ಲಿನ ಮುಸ್ಲಿಂ ಮತಗಳ ಸಂಖ್ಯೆ ಜಾಸ್ತಿ ಇದೆ. ಹಾಗಾಗಿ ಯೋಗೇಶ್ವರ್‌ಗೆ ಮುನ್ನಡೆ ಇರಬೇಕು. ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ. ಶಿಗ್ಗಾಂವಿ ನಗರದಲ್ಲೂ ಮುಸ್ಲಿಂ ಮತಗಳು ಹೆಚ್ಚಾಗಿದೆ. ಓಲೈಕೆ ನಾವು ಮಾಡಲ್ಲ ಹಾಗಾಗಿ ಅವರು ನಮಗೆ ಮತ ಹಾಕಲ್ಲ. ತೀರ್ಪು ಏನೇ ಬಂದರೂ ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇವೆ. ಆದ್ರೆ ಕಾಂಗ್ರೆಸ್ ಮೂರು ಗೆದ್ದರೆ ಜನಾದೇಶ ಅಂತಾರೆ. ಬರಲಿಲ್ಲ ಅಂದ್ರೆ ಇವಿಎಂ ದೋಷ ಅಂತಾ ಹೇಳ್ತಾರೆ ಎಂದು ಕುಟುಕಿದ್ದಾರೆ.

    ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ:
    ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್‌ 23,210 ಮತಗಳ ಮುನ್ನಡೆ ಸಾಧಿಸಿದ್ದಾರೆ. 15ನೇ ಸುತ್ತಿನಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8,239 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್‌ 12,251 ಮತಗಳಿಂದ ಮುನ್ನಡೆಯಲ್ಲಿದ್ದಾರೆ.