Tag: ಸಂತೂರ್ ವಾದಕ

  • ಸಂತೂರ್ ವಾದಕ ಭಜನ್ ಸೊಪೋರಿ ಇನ್ನಿಲ್ಲ

    ಸಂತೂರ್ ವಾದಕ ಭಜನ್ ಸೊಪೋರಿ ಇನ್ನಿಲ್ಲ

    ನವದೆಹಲಿ: ಖ್ಯಾತ ಸಂತೂರ್ ವಾದಕ ಭಜನ್ ಸೊಪೋರಿ (73) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಗುರುಗ್ರಾಮ್ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಕಳೆದ ವರ್ಷ ಜೂನ್‌ನಲ್ಲಿ ಸೊಪೋರಿ ಅವರಿಗೆ ಕರುಳಿನ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇಮ್ಯುನೊ ಥೆರಪಿ ಚಿಕಿತ್ಸೆಗಾಗಿ ಅವರನ್ನು 3 ವಾರಗಳ ಹಿಂದೆ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಅಭಯ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

    ಭಜನ್ ಸೊಪೋರಿ ವಾಷಿಂಗ್ಟನ್ ವಿಶ್ವವಿದ್ಯಾಲಯದಿಂದ ಪಾಶ್ಚಿಮಾತ್ಯ ಶಾಸ್ತ್ರೀಯ ಸಂಗೀತವನ್ನು ಮತ್ತು ಅವರ ತಂದೆ ಮತ್ತು ತಾತನಿಂದ ಹಿಂದೂಸ್ತಾನಿ ಸಂಗೀತವನ್ನು ಕಲಿತರು. ಅಲ್ಲದೆ ತಮ್ಮ ವೃತ್ತಿಜೀವನದ ಸಾಧನೆಗಳ ಮೂಲಕ 2004 ರಲ್ಲಿ ಪದ್ಮಶ್ರೀ, 1992 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.

  • ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶ

    ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶ

    ಮುಂಬೈ: ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ(84) ಅವರು ವಿಧಿವಶರಾಗಿದ್ದಾರೆ.

    6 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಕುಮಾರ್ ಅವರು ಡಯಾಲಿಸಿಸ್ ಪಡೆಯುತ್ತಿದ್ದರು. ಆದರೆ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಕುಮಾರ್ ಶರ್ಮಾ ಅವರು ಸಂಗೀತ ನಿರ್ದೇಶಕರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ಜಮ್ಮುವಿನಲ್ಲಿ ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ ಅವರು ತಮ್ಮ ಹದಿಮೂರನೇ ವಯಸ್ಸಿನಲ್ಲಿಯೇ ಸಂತೂರ್ ನುಡಿಸುವುದನ್ನು ಕಲಿಯಲು ಪ್ರಾರಂಭಿಸಿದರು. 1955ರಲ್ಲಿ ಮೊದಲ ಬಾರಿಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಸಂತೂರ್ ಪ್ರದರ್ಶನ ನೀಡುವ ಮೂಲಕ ಸಂತೂರ್‌ನನ್ನು ಜನಪ್ರಿಯಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

    ಶಿವಕುಮಾರ್ ಶರ್ಮಾ ಅವರು 1956ರ ಝಣಕ್ ಝಣಕ್ ಪಾಯಲ್ ಬಜೆ ಚಿತ್ರದ ಒಂದು ದೃಶ್ಯಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. ನಾಲ್ಕು ವರ್ಷಗಳ ನಂತರ ಶಿವಕುಮಾರ್ ಶರ್ಮಾ ಮೊದಲ ಬಾರಿಗೆ ಒಬ್ಬರೇ ಆಲ್ಬಂ ರೆಕಾರ್ಡ್ ಮಾಡಿದರು. ಇದನ್ನೂ ಓದಿ: ಬೆಂಗಳೂರು ರಸ್ತೆಯ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡ ಖ್ಯಾತ ಗಾಯಕ ಅಜಯ್ ವಾರಿಯರ್

    ಹರಿಪ್ರಸಾದ್ ಚೌರಾಸಿಯಾ ಅವರೊಂದಿಗೆ, ಪಂಡಿತ್ ಶಿವಕುಮಾರ್ ಶರ್ಮಾ ಅವರು, ಸಿಲ್ಸಿಲಾ, ಚಾಂದಿನಿ ಮತ್ತು ಡರ್ ಸೇರಿದಂತೆ ಹಲವಾರು ಹಿಂದಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. 1991 ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಮತ್ತು 2001 ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ಪಂಡಿತ್ ಶಿವಕುಮಾರ್ ಶರ್ಮಾ ಅವರು ತಮ್ಮ ಮುಡಿಗೇರಿಸಿಕೊಂಡಿದ್ದರು.