Tag: ಸಂತೋಷ್ ಕೊಡಂಕೇರಿ

  • ರವಿಕೆ ಪ್ರಸಂಗ: ನಿರ್ದೇಶಕ ಸಂತೋಷ್ ಕೊಡಂಕೇರಿ ಕಂಡಂತೆ

    ರವಿಕೆ ಪ್ರಸಂಗ: ನಿರ್ದೇಶಕ ಸಂತೋಷ್ ಕೊಡಂಕೇರಿ ಕಂಡಂತೆ

    ಸಾಕಷ್ಟು ಮಂದಿ ದೊಡ್ಡ ಬಜೆಟ್ಟಿನ ಹಿಟ್ ಸಿನಿಮಾಗಳು ಬಂದರಷ್ಟೇ ಚಿತ್ರರಂಗ ಉದ್ಧಾರವಾಗುತ್ತದೆ ಅಂದುಕೊಂಡಿರುತ್ತಾರೆ. ಆದರೆ, ಅಂಥಾದ್ದರ ನಡುವೆಯೂ ಹೊಸಾ ಪ್ರಯತ್ನಗಳು ದೃಷ್ಯರೂಪ ಧರಿಸಿ ಗೆಲ್ಲುವುದೊಂದೇ ಸಿನಿಮಾ ರಂಗದ ಜೀವಂತಿಕೆಯ ಲಕ್ಷಣ ಎಂಬುದು ಸಾರ್ವಕಾಲಿಕ ಸತ್ಯ. ಸದ್ಯದ ಮಟ್ಟಿಗೆ ಸಂತೋಷ್ ಕೊಡಂಕೇರಿ  (Santosh Kodankeri)ನಿರ್ದೇಶನದ `ರವಿಕೆ ಪ್ರಸಂಗ’ (Ravike Prasanga) ಅಂಥಾದ್ದೊಂದು ಅಪೇಕ್ಷಿತ ಬೆಳವಣಿಗೆಯ ಭಾಗವಾಗಿ ಕಾಣಿಸುತ್ತದೆ. ಇದೇ ಫೆಬ್ರವರಿ 16ರಂದು ತೆರೆಗಾಣಲಿರುವ ಈ ಚಿತ್ರ ಎಲ್ಲರ ಬದುಕಿಗೂ ತೀರಾ ಹತ್ತಿರದ ನಂಟು ಹೊಂದಿರುವ ಸೂಕ್ಷ್ಮ ಕಥಾನಕವನ್ನೊಳಗೊಂಡಿದೆ.

    ರವಿಕೆಯ ಸುತ್ತ ಘಟಿಸೋ ಕಥೆಯನ್ನು ಎಲ್ಲಿಯೂ ಬೋರು ಹೊಡೆಸದಂತೆ, ಮನೋರಂಜನೆಗೆ ಕೊರತೆಯಾಗದೆ, ಭಾವ ಸೂಕ್ಷಕ್ಕೂ ಧಕ್ಕೆಯಾಗದಂತೆ ಕಟ್ಟಿ ಕೊಡುವುದೇ ಒಂದು ಸಾಹಸ. ಅದನ್ನು ಇಷ್ಟೂ ವರ್ಷಗಳ ಅನುಭವವನ್ನು ಧಾರೆಯೆರೆದು ಸಂತೋಷ್ ಕೊಡಂಕೇರಿ ಸಮರ್ಥವಾಗಿ ಮಾಡಿ ಮುಗಿಸಿದ್ದಾರೆ. ತಮ್ಮ ಮಡದಿ ಪಾವನಾ ಸಂತೋಷ್ ಬರೆದ ಕಥೆ ನೋಡಿದಾಕ್ಷಣವೇ ಅದಕ್ಕೆ ದೃಷ್ಯ ರೂಪ ನೀಡುವ ನಿರ್ಧಾರ ಮಾಡಿದ್ದವರು ಸಂತೋಷ್. ಆ ಯಾನವೇನೂ ಸಾಧಾರಣದ್ದಾಗಿರಲಿಲ್ಲ. ಆದರೆ, ಅದನ್ನು ಸಮರ್ಥವಾದ ತಂಡ, ಪ್ರತಿಭಾನ್ವಿತ ಕಲಾವಿದರು ಮತ್ತು ತಂತ್ರಜ್ಞರ ಬೆಂಬಲದೊಂದಿಗೆ ಪೂರ್ಣಗೊಳಿಸಿದ ತುಂಬು ತೃಪ್ತಿ ಸಂತೋಷ್ ರಲ್ಲಿದೆ.

    ಹೀಗೆ ಭಿನ್ನ ರವಿಕೆ ಪ್ರಸಂಗದಂಥಾ ಭಿನ್ನ ಕಥೆಗೆ ದೃಷ್ಯ ರೂಪ ನೀಡಿರುವ ಸಂತೋಷ್ ಕೊಡಂಕೇರಿಯವರದ್ದು ಕ್ರಿಯಾಶೀಲ ಕ್ಷೇತ್ರದಲ್ಲಿ ಹದಿನಾರು ವರ್ಷಗಳ ಅನುಭವ. ನೂರಕ್ಕೂ ಹೆಚ್ಚು ಕಾರ್ಪೊರೇಟ್ ಜಾಹೀರಾತು ಚಿತ್ರಗಳನ್ನು ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿದ್ದ ಅವರು ಒಂದಷ್ಟು ಪ್ರಯೋಗಾತ್ಮಕ ಸಾಹಸಗಳನ್ನು ಮಾಡಿ ಸೈ ಅನ್ನಿಸಿಕೊಂಡಿದ್ದಾರೆ. 2016ರಲ್ಲಿ ಹೋಂ ಸ್ಟೇ ಅಂತೊಂದು ಸಿನಿಮಾ ನಿರ್ದೇಶನ ಮಾಡಿದ್ದ ಸಂತೋಷ್, ಅದನ್ನು ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ರೂಪಸಿ ಗೆದ್ದಿದ್ದರು. ಆ ನಂತರ ದಿಗಿಲ್ ಎಂಬ ತಮಿಳು ಚಿತ್ರವನ್ನೂ ಕೂಡಾ ನಿರ್ದೇಶನ ಮಾಡಿದ್ದರು. ಕೊರೋನಾ ಕಾಲದಲ್ಲಿ ಮತ್ತೊಂದು ಸಾಹಸಕ್ಕೆ ಒಡ್ಡಿಕೊಂಡಿದ್ದ ಸಂತೋಷ್, ಒಂದೂರಲ್ಲಿ ಒಬ್ಬ ರಾಜ ಇದ್ದ ಎಂಬ ಏಕವೈಕ್ತಿ ಪ್ರದರ್ಶನದ ಸಿನಿಮಾ ರೂಪಿಸಿದ್ದರು. ರವೀಂದ್ರನಾಥ ಟ್ಯಾಗೋರ್ ರಚಿಸಿದ್ದ ಆ ಕೃತಿಯನ್ನು ಯಶಸ್ವಿಯಾಗಿ ದೃಷ್ಯರೂಪಕ್ಕಿಳಿಸಿದ್ದರು. ಆ ಚಿತ್ರದಲ್ಲಿ ಓರ್ವ ಕಲಾವಿದ ಇಪ್ಪತ್ನಾಲಕ್ಕು ಪಾತ್ರಗಳನ್ನು ನಿರ್ವಹಿಸುವ ಮೂಲಕ ಆ ಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲಾಗಿತ್ತು. ಆ ನಂತರದಲ್ಲಿ ತಮ್ಮ ಮೂಲ ವೃತ್ತಿಯತ್ತ ಹೊರಳಿಕೊಂಡಿದ್ದರೂ ಸಿನಿಮಾ ಧ್ಯಾನದಲ್ಲಿದ್ದ ಅವರ ಪಾಲಿಗೆ ಗುಂಗಿನಂತೆ ತಲೆಗೇರಿಕೊಂಡು ಕಾಡಿದ್ದ ರವಿಕೆ ಪ್ರಸಂಗ.

    ಇದು ಬರೀ ಹೆಂಗಳೆಯರಿಗೆ ಮಾತ್ರವಲ್ಲದೇ ಪ್ರತಿಯೊಬ್ಬರಿಗೂ ಹತ್ತಿರಾಗುವ, ಸಿನಿಮಾ ನೋಡಿ ಹೊರ ಬಂದ ಮೇಲೂ ಕಾಡುವ ಗುಣಗಳನ್ನು ಒಳಗೊಂಡಿರುವ ಚಿತ್ರವೆಂಬುದು ಸಂತೋಷ್ ರ ಸ್ಪಷ್ಟನೆ. ರವಿಕೆ ಎಂಬುದು ನಮ್ಮ ಸಂಸ್ಕಂತಿಯೂ ಸೇರಿದಂತೆ ಒಟ್ಟಾರೆ ಭಾರತೀಯರ ಭಾವಕೋಶದಲ್ಲೊಂದು ಭಿನ್ನವಾದ ಸ್ಥಾನ ಗಿಟ್ಟಿಸಿಕೊಂಡಿದೆ. ಆದರೆ, ಓರ್ವ ಹೆಣ್ಣಿಗೆ ರವಿಕೆಯೆಂಬೋ ಮಾಯೆ ಬೇರೆಯದ್ದೇ ರೀತಿಯಲ್ಲಿ ಬದುಕಿನ ಪ್ರತೀ ಘಟ್ಟದಲ್ಲಿಯೂ ಎದುರುಗೊಳ್ಳುತ್ತೆ. ಅದಕ್ಕೆ ತನ್ನ ಚಹರೆಗನುಗುಣವಾಗಿ ಬೆಸೆಯೋ ಗುಣವೂ ಇದೆ. ಆ ಕ್ಷಣಕ್ಕೆ ನಿರಾಸೆಗೆ ತಳ್ಳಿ, ಸಿಟ್ಟು ಉಕ್ಕಿಸಿ ಮತ್ತೇನೋ ನಿರ್ಧಾರ ಕೈಗೊಳ್ಳುವಂತೆ ಮಾಡೋ ಶಕ್ತಿಯೂ ಇದೆ. ಅಂಥಾದ್ದೇನಿದೆ ಅನ್ನೋ ಕುತೂಹಲ ತಣಿಯಲು ಇನ್ನೊಂದು ವಾರವಷ್ಟೇ ಬಾಕಿ ಉಳಿದುಕೊಂಡಿದೆಯಷ್ಟೇ.

     

    ಈ ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ ಮೂಲಕ ದೊಡ್ಡ ಮಟ್ಟದ ಗೆಲುವು ದಾಖಲಿಸಲಿದೆ ಎಂಬ ನಂಬಿಕೆ ಸಂತೋಷ್ ಮತ್ತು ಚಿತ್ರತಂಡದಲ್ಲಿದೆ. ಸದ್ಯದ ವಾತಾವರಣ ಅದಕ್ಕೆ ಪೂರಕವಾಗಿಯೂ ಇದೆ. ಇಂಥಾ ಭಿನ್ನ ಬಗೆಯ ಸಿನಿಮಾಗಳನ್ನು ಪ್ರೇಕ್ಷಕರು ಗೆಲ್ಲಿಸಿದರೆ ಚಿತ್ರರಂಗಕ್ಕೆ ಮತ್ತಷ್ಟು ಶಕ್ತಿಯಂತೂ ಸಿಕ್ಕೇ ಸಿಗುತ್ತದೆ. ಅದು ರವಿಕೆ ಪ್ರಸಂಗದ ಮೂಲಕ ಸಾಧ್ಯವಾಗಲಿದೆ ಎಂಬ ನಂಬಿಕೆ ಸಂತೋಷ್ ರದ್ದು. ದೃಷ್ಟಿ ಮೀಡಿಯಾ ಪ್ರೊಡಕ್ಷನ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಗೀತಾ ಭಾರತಿ ಭಟ್, ಸುಮನ್ ರಂಗನಾಥ್, ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಪದ್ಮಜಾ ರಾವ್, ಕೃಷ್ಣಮೂರ್ತಿ  ಕವತ್ತಾರ್, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ್, ಖುಷಿ ಆಚಾರ್, ದರ್ಶಿನಿ, ಹನುಮಂತೇಗೌಡ, ಹನುಮಂತ ರಾವ್, ಆಶಾ ಸುಜಯ್ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಮುರಳೀಧರ ಎನ್ ಛಾಯಾಗ್ರಹಣ, ವಿಜಯ್ ಶರ್ಮಾ ಸಂಗೀತ, ರಘು ಶಿವರಾಮ್ ಸಂಕಲನವಿದೆ. ಶಾಂತನು ಮಹರ್ಶಿ, ನಿರಂಜನ್ ಗೌಡ, ಗಿರೀಶ್ ಎಸ್.ಎಂ, ಶಿವರುದ್ರಯ್ಯ ಎಸ್.ವಿ ಸಹ ನಿರ್ಮಾಪಕರಾಗಿ ಈ ಚಿತ್ರಕ್ಕೆ ಜೊತೆಯಾಗಿದ್ದಾರೆ.

  • ‘ರವಿಕೆ ಪ್ರಸಂಗ’ದಲ್ಲಿದೆ ಸಂಕೀರ್ಣ ಕಥೆ: ನಟಿ ಗೀತಾ ಭಾರತಿ ಭಟ್ ಮಾತು

    ‘ರವಿಕೆ ಪ್ರಸಂಗ’ದಲ್ಲಿದೆ ಸಂಕೀರ್ಣ ಕಥೆ: ನಟಿ ಗೀತಾ ಭಾರತಿ ಭಟ್ ಮಾತು

    ಸಂತೋಷ್ ಕೊಡಂಕೇರಿ ನಿರ್ದೇಶನದ `ರವಿಕೆ ಪ್ರಸಂಗ’ (Ravike Prasanga) ಇದೇ ತಿಂಗಳ 16ರಂದು ತೆರೆಗಾಣುತ್ತಿದೆ. ಇದೀಗ ಚಿತ್ರತಂಡ ಅತ್ಯಂತ ಕ್ರಿಯಾಶೀಲವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಈ ಹಂತದಲ್ಲಿ ಹೊರಬೀಳುತ್ತಿರುವ ಒಂದಷ್ಟು ವಿಚಾರಗಳು ರವಿಕೆ ಪ್ರಸಂಗದತ್ತ ಪ್ರೇಕ್ಷಕರು ತೀವ್ರವಾಗಿ ಕುತೂಹಲಗೊಳ್ಳುವಂತೆ ಮಾಡುತ್ತಿದೆ. ಈ ಚಿತ್ರದಲ್ಲಿ ಪ್ರಧಾನ ಪಾತ್ರವನ್ನು ಗೀತಾ ಭಾರತಿ ಭಟ್ ನಿರ್ವಹಿಸಿದ್ದಾರೆ. ಬ್ರಹ್ಮಗಂಟು ಎಂಬ ಧಾರಾವಾಹಿಯಿಂದ ಪ್ರಸಿದ್ಧಿ ಪಡೆದುಕೊಂಡಿದ್ದ ಗೀತಾ, ರವಿಕೆ ಪ್ರಸಂಗದ ಮೂಲಕವೇ ಪೂರ್ಣ ಪ್ರಮಾಣದ ನಾಯಕಿಯಾಗಿದ್ದಾರೆ.

    ಗೀತಾ ಭಾರತೀ ಭಟ್ ಅವರ ಛಲಗಾರಿಕೆ, ಜೀವನ ಪ್ರೀತಿ ಈಗಾಗಲೇ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ತಲುಪಿಕೊಂಡಿವೆ. ಬ್ರಹ್ಮಗಂಟು ಸೀರಿಯಲ್ಲಿನ ಸಂದರ್ಭದಲ್ಲಿಯೇ ಆಕೆ ಪ್ರತಿಭಾನ್ವಿತ ನಟಿಯಾಗಿ ಹೊರಹೊಮ್ಮಿದ್ದರು. ಇಂಥಾ ಗೀತಾ ಆ ನಂತರದಲ್ಲಿಯೂ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ, ಖುದ್ದು ಅವರೇ ಖುಷಿಗೊಂಡು ನಾಯಕಿಯಾಗಿ ನಟಿಸಿರುವ ಚಿತ್ರ `ರವಿಕೆ ಪ್ರಸಂಗ’. ವಿಶೇಷವೆಂದರೆ, ನಿರ್ದೇಶಕ ಸಂತೋಷ್ ಕೊಡಂಕೇರಿ ಅವರ ಮಡದಿ ಪಾವನಾ ಸಂತೋಷ್ ಆ ಕಥೆ ಬರೆಯುವಾಗಲೇ ಮುಖ್ಯ ಪಾತ್ರಕ್ಕಗಿ ಅವರ ಮನಸಲ್ಲಿದ್ದದ್ದು ಇದೇ ಗೀತಾ ಭಾರತಿ ಭಟ್.

    ಯಾವ ಕಲಾವಿದರ ಪಾಲಿಗಾದರೂ ತನಗೆಂದೇ ಪಾತ್ರ ಸೃಷ್ಟಿಯಾಗೋದು ಜೀವಮಾನವೆಲ್ಲ ಸ್ಮರಣೆಯಲ್ಲಿರುವ ವಿಚಾರ. ಅಂಥಾದ್ದೊಂದು ಖುಷಿ ಗೀತಾಗೆ ಸಿಕ್ಕಿದೆ. ಆರಂಭಿಕವಾಗಿ ಪಾವನಾ ಈ ಕಥೆ ಹೇಳಿದಾಗ, ತನ್ನ ಪಾತ್ರದ ಚಹರೆಗಳ ಬಗ್ಗೆ ತಿಳಿಸಿದಾಗಲೇ ಗೀತಾ ತಮ್ಮ ಪಾತ್ರದ ಬಗ್ಗೆ ಮೋಹಗೊಂಡಿದ್ದರಂತೆ. ಯಾಕೆಂದರೆ, ಪ್ರತೀ ಹೆಣ್ಣುಮಕ್ಕಳಿಗೂ ನೇರಾನೇರ ಕಾಡುವಂತೆ ಈ ಕಥೆ ರೂಪುಗೊಂಡಿದೆ ಎಂಬುದು ಗೀತಾ ಮಾತು. ರವಿಕೆ ಪ್ರಸಂಗ ಅಂದಾಕ್ಷಣವೇ ಕೆಲ ಮಂದಿಯ ಚಿತ್ತ ಎತ್ತೆತ್ತಲೋ ಹರಿದಾಡಬಹುದು. ಯಾಕೆಂದರೆ, ರವಿಕೆಯ ಸುತ್ತಾ ಅಂಥಾ ನೆಗೆಟಿವ್ ಶೇಡಿನ ಕಣ್ಣುಗಳು ಪಹರೆ ಕಾಯುತ್ತಿರುತ್ತವೆ.

    ಆದರೆ, ಇದು ಭಾವುಕ ಜಗತ್ತಿನ ಒಳಗಣ್ಣಿಗೆ ನಿಲುಕುವ ಸೂಕ್ಷ್ಮ ಕಥೆ ಅನ್ನೋದರ ಸುಳಿವು ಟ್ರೈಲರ್ ಮೂಲಕ ಈಗಾಗಲೇ ಸಿಕ್ಕಿಬಿಟ್ಟಿದೆ. ಅದರಲ್ಲಿಯೇ ಗೀತಾ ಪಾತ್ರವೂ ಪ್ರೇಕ್ಷಕರೆದುರು ತೆರೆದುಕೊಂಡಿದೆ. ಸಾಮಾನ್ಯವಾಗಿ ಎಲ್ಲ ನಟ ನಟಿಯರಿಗೂ ಕೂಡಾ ಜೀವಮಾನದಲ್ಲಿ ಇಂಥಾದ್ದೊಂದು ಪಾತ್ರ ಮಾಡಬೇಕೆಂಬ ಆಸೆ ಇರುತ್ತದೆ. ಆದರೆ, ಗೀತಾ ಪಾಲಿಗೆ ಅಂಥಾದ್ದೊಂದು ಅವಕಾಶ ತಾನೇ ತಾನಾಗಿ ಹುಡುಕಿಕೊಂಡು ಬಂದಿದೆ. ಈ ಸಿನಿಮಾದ ಮೂಲಕವೇ ತನ್ನ ವೃತ್ತಿಬದುಕಿಗೆ ಮತ್ತಷ್ಟು ಆವೇಗ ಸಿಗುತ್ತದೆಂಬ ನಿರೀಕ್ಷೆ, ಈ ಸಿನಿಮಾ ಸಮಸ್ತ ಪ್ರೇಕ್ಷಕರಿಗೂ ಇಷ್ಟವಾಗಿ ಗೆಲ್ಲುತ್ತದೆಂಬ ಗಾಢ ನಂಬಿಕೆ ಗೀತಾರದ್ದು.

     

    ದೃಷ್ಟಿ ಮೀಡಿಯಾ ಪ್ರೊಡಕ್ಷನ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಗೀತಾ ಭಾರತಿ ಭಟ್, ಸುಮನ್ ರಂಗನಾಥ್, ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಪದ್ಮಜಾ ರಾವ್, ಕೃಷ್ಣಮೂರ್ತಿ  ಕವತ್ತಾರ್, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ್, ಖುಷಿ ಆಚಾರ್, ದರ್ಶಿನಿ, ಹನುಮಂತೇಗೌಡ, ಹನುಮಂತ ರಾವ್, ಆಶಾ ಸುಜಯ್ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಮುರಳೀಧರ ಎನ್ ಛಾಯಾಗ್ರಹಣ, ವಿಜಯ್ ಶರ್ಮಾ ಸಂಗೀತ, ರಘು ಶಿವರಾಮ್ ಸಂಕಲನ ವಿರುವ ರವಿಕೆ ಪ್ರಸಂಗಕ್ಕೆ ಶಾಂತನು ಮಹರ್ಶಿ, ನಿರಂಜನ್ ಗೌಡ, ಗಿರೀಶ್ ಎಸ್.ಎಂ, ಶಿವರುದ್ರಯ್ಯ ಎಸ್.ವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

  • ಹೋಮ್ ಸ್ಟೇ ನಿರ್ದೇಶಕನ ಹೊಸ ಚಿತ್ರದಲ್ಲಿ ಗೀತಾ ಭಾರತಿ ಭಟ್ ನಟನೆ

    ಹೋಮ್ ಸ್ಟೇ ನಿರ್ದೇಶಕನ ಹೊಸ ಚಿತ್ರದಲ್ಲಿ ಗೀತಾ ಭಾರತಿ ಭಟ್ ನಟನೆ

    ಹೋಮ್  ಸ್ಟೇ ಚಿತ್ರದ ಖ್ಯಾತಿಯ ಸಂತೋಷ್ ಕೊಡಂಕೇರಿ (Santhosh Kodankeri)  ನಿರ್ದೇಶಿಸುತ್ತಿರುವ ಇನ್ನೂ ಹೆಸರಿಡದ “ಪ್ರೊಡಕ್ಷನ್ ನಂ 02” ನೂತನ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಸುಳ್ಯದ ಶ್ರೀ ಚನ್ನಕೇಶವ  ದೇವಸ್ಥಾನದಲ್ಲಿ ಜರುಗಿತು. ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ  ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು.

    ತೂಗು ಸೇತುವೆಗಳ ಸರದಾರ ಪದ್ಮಶ್ರೀ ಶ್ರೀ ಗಿರೀಶ್ ಭಾರಧ್ವಾಜ್ ರವರು, ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಗವರ್ನರ್ ಹಾಗೂ ಜೆಡಿಎಸ್ ರಾಜ್ಯ ಸಂಚಾಲಕ ಎಂ.ಬಿ. ಸದಾಶಿವ, ಶ್ರೀಚನ್ನಕೇಶವ ದೇವಳದ ಆಡಳಿತ ಮೊಕೇಸ್ತರ ಡಾ. ಹರಪ್ರಸಾದ್ ತುದಿಯಡ್ಕ, ನ.ಪಂ. ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಹಾಗೂ ಇನ್ನಿತರ ಸ್ಥಳೀಯ ಮುಖಂಡರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ:ರಾಕೇಶ್‌ಗಾಗಿ ಬಿಗ್ ಬಾಸ್ ಮನೆನಾ ಎರಡು ಮನೆ ಮಾಡಬೇಕಾ: ಸೋನು ವಿರುದ್ಧ ಗುರೂಜಿ ಗರಂ

    ಗೀತಾ ಭಾರತಿ ಭಟ್ (Geeta Bharati Bhatt), ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಸಂಪತ್ ಮೈತ್ರೇಯ, ರಘು ಪಾಂಡೇಶ್ವರ್, ಖುಷಿ ಆಚಾರ್, ಮೀನ ಹಾಗೂ ದರ್ಶಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪಾವನಾ ಸಂತೋಷ್  ಕಥೆ ಮತ್ತು ಸಂಭಾಷಣೆ ಬರೆದಿದ್ದು, ಸಂತೋಷ್ ಕೊಡಂಕೇರಿ ಚಿತ್ರಕಥೆ ಬರೆದು  ನಿರ್ದೇಶನ ಮಾಡುತ್ತಿದ್ದಾರೆ. ಮುರಳಿಧರ್. ಎಂ ಛಾಯಾಗ್ರಹಣ, ವಿನಯ್ ಶರ್ಮಾ ಸಂಗೀತ ನಿರ್ದೇಶನ,  ರಘು ಎಸ್. ಸಂಕಲನ, ಕಿರಣ್ ಕಾವೇರಪ್ಪ ಗೀತರಚನೆ ಹಾಗೂ  ಪ್ರಸನ್ನ – ಕಲ್ಯಾಣ್ ರೆಡ್ಡಿ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ. ಈ ಚಲನಚಿತ್ರವು ದಕ್ಷಿಣ ಕನ್ನಡದ ಸೊಗಡು, ಭಾಷೆ, ಸಂಸ್ಕೃತಿ ಹೊಂದಿದ್ದು, ದಕ್ಷಿಣ ಕನ್ನಡದ ಸುಳ್ಯ, ಸಂಪಾಜೆ, ತೋಡಿಕಾನ ಆಸುಪಾಸಿನಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ‌ ಎಂದು ನಿರ್ದೇಶಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]