Tag: ಸಂತೋಷ್ ಕೊಡೆಂಕೆರಿ

  • ‘ರವಿಕೆ’ ಹೆಸರಿನಲ್ಲೊಂದು ಸಾಂಗ್ : ಇದು ರವಿಕೆ ಪ್ರಸಂಗ

    ‘ರವಿಕೆ’ ಹೆಸರಿನಲ್ಲೊಂದು ಸಾಂಗ್ : ಇದು ರವಿಕೆ ಪ್ರಸಂಗ

    ಹೆಣ್ಣುಮಕ್ಕಳು ನಿತ್ಯ ಧರಿಸುವ ಸೀರೆ, ಓಲೆ, ಬಳೆ, ಗೆಜ್ಜೆ ಮುಂತಾದವುಗಳ ಬಗ್ಗೆ ಹಾಡು ಬಂದಿದೆ. ಆದರೆ ರವಿಕೆ ಬಗ್ಗೆ ಈವರೆಗೂ ಯಾವುದೇ ಹಾಡು ಬಂದಿಲ್ಲ. ರವಿಕೆಯ ಬಗೆಗಿನ ಹಾಡು ರವಿಕೆ ಕುರಿತಾಗಿಯೇ ನಿರ್ಮಾಣವಾಗಿರುವ ‘ರವಿಕೆ ಪ್ರಸಂಗ’ ಚಿತ್ರದಲ್ಲಿದೆ. ಈ ಚಿತ್ರಕ್ಕಾಗಿ ಕಿರಣ್ ಕಾವೇರಪ್ಪ ಅವರು ಬರೆದಿರುವ ‘ರವಿ, ರವಿ, ರವಿಕೆ ಪ್ರಸಂಗ’ ಎಂಬ ಟೈಟಲ್ ಬಿಡುಗಡೆಯಾಗಿದೆ. ಈ ಹಾಡಿಗೆ ವಿನಯ್ ಶರ್ಮ ಸಂಗೀತ ನೀಡಿದ್ದು, ಚೈತ್ರ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ ಅವರು ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಹಾಡಿನ ಕುರಿತು ಹೆಚ್ಚಿನ ಮಾಹಿತಿ ನೀಡಿದರು.

    ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ ವತಿಯಿಂದ ನಿರ್ಮಾಣವಾಗಿರುವ ಈ ಚಿತ್ರದ ಟೈಟಲ್ ಸಾಂಗ್ ಇಂದು ಬಿಡುಗಡೆಯಾಗಿದೆ‌. ಕಿರಣ್ ಕಾವೇರಪ್ಪ ರವಿಕೆ ಬಗ್ಗೆ ಒಳ್ಳೆಯ ಹಾಡು ಬರೆದಿದ್ದಾರೆ‌‌. ಅಷ್ಟೇ ಚೆನ್ನಾಗಿ ಚೈತ್ರ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ವಿನಯ್ ಶರ್ಮ ಸಂಗೀತದಲ್ಲಿ ಎಲ್ಲಾ ಹಾಡುಗಳು ಚೆನ್ನಾಗಿ ಬಂದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ದೇಶಕ ಹಾಗೂ ನಿರ್ಮಾಪಕ ಸಂತೋಷ್ ಕೊಡೆಂಕೆರಿ ತಿಳಿಸಿದರು.

    ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದಿರುವ ಪಾವನ ಸಂತೋಷ್ ಮಾತನಾಡುತ್ತಾ, ಹೆಣ್ಣುಮಕ್ಕಳಿಗೆ ಸೀರೆಗಿಂತ ಹೆಚ್ಚಿನ ಪ್ರೀತಿ ರವಿಕೆ ಮೇಲಿರುತ್ತದೆ. ಆ ರವಿಕೆ ಕುರಿತು ಕಥೆ ಬರೆದಿದ್ದೇನೆ. ಸಹಕಾರ ನೀಡಿದ ನನ್ನ ಪತಿ ಸಂತೋಷ್ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ನಾನು ಆಭಾರಿ ಎಂದರು. ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಇಂದು ಬಿಡುಗಡೆಯಾಗಿರುವ “ರವಿಕೆ” ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲ್ಲಲಿದೆ ಎಂದರು‌ ನಾಯಕಿ ಗೀತಾ ಭಾರತಿ ಭಟ್. ಈ ತಂಡದೊಂದಿಗೆ ಕೆಲಸ ಮಾಡಿದ್ದು ಸಂತೋಷವಾಗಿದೆ. ರವಿಕೆ ಕುರಿತಾಗಿ ಬರುತ್ತಿರುವ ಈ ಚಿತ್ರ ಎಲ್ಲಾ ಹೆಣ್ಣುಮಕ್ಕಳ ಮನಸ್ಸಿಗೆ ಹತ್ತಿರವಾಗಲಿದೆ ಎಂದು ನಟಿ ಪದ್ಮಜಾರಾವ್ ತಿಳಿಸಿದರು.

    ನಿರ್ಮಾಣಕ್ಕೆ ಸಾಥ್ ನೀಡಿರುವ ಶಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ ಹಾಗೂ ಶಿವರುದ್ರಯ್ಯ, ಗಾಯಕಿ ಚೈತ್ರ ಸೇರಿದಂತೆ ಅನೇಕರು ಹಾಡಿನ ಬಗ್ಗೆ ಮಾತನಾಡಿದರು. ಕನ್ನಡ ಚಿತ್ರರಂಗದ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ರವಿಕೆ ಹಾಡಿಗೆ ವಿಡಿಯೋ ಮೂಲಕ ಶುಭ ಕೋರಿದರು.

    ಬ್ರಹ್ಮ ಗಂಟು ಧಾರಾವಾಹಿ ಖ್ಯಾತಿಯ ಗೀತಾಭಾರತಿ ಭಟ್, ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಸುಮನ್ ರಂಗನಾಥ್,  ಪದ್ಮಜಾರಾವ್, ರಘು ಪಾಂಡೇಶ್ವರ್ , ಕೃಷ್ಣಮೂರ್ತಿ ಕವತ್ತಾರ್, ಪ್ರವೀಣ್ ಅಥರ್ವ, ಮೀನಾ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಅವರ  ಸಂಕಲನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಸಂದಾಗಿದೆ ‘ರವಿಕೆ ಪ್ರಸಂಗ’ ಎಂದ ಗೀತಾಭಾರತಿ ಭಟ್

    ಪಸಂದಾಗಿದೆ ‘ರವಿಕೆ ಪ್ರಸಂಗ’ ಎಂದ ಗೀತಾಭಾರತಿ ಭಟ್

    ಹೆಣ್ಣುಮಕ್ಕಳು ಮನೆಯಲ್ಲಿ ಯಾವುದೇ ಸಮಾರಂಭವಾದರೂ ಸೀರೆಗೆ ತಕ್ಕಂತೆ ರವಿಕೆ ಹೊಲಿಸಿಕೊಳ್ಳುವುದು ರೂಡಿ. ಅಂತಹ ರವಿಕೆಯ ಕುರಿತಾದ  ‘ರವಿಕೆ ಪ್ರಸಂಗ’ (Ravike Prasanga) ಎಂಬ  ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಪ್ರಚಾರದ ಮೊದಲ ಹೆಜ್ಜೆಯಾಗಿ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮಕ್ಕೆ ಮಾಹಿತಿ ನೀಡಿದರು.

    ನಮ್ಮ ದೃಷ್ಟಿ ಮೀಡಿಯಾ & ಪ್ರೊಡಕ್ಷನ್ ವತಿಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಶಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ ಹಾಗೂ ಶಿವರುದ್ರಯ್ಯ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ನನ್ನ ಪತ್ನಿ ಪಾವನ ಸಂತೋಷ್ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.  ‘ಬ್ರಹ್ಮ ಗಂಟು’ ಧಾರಾವಾಹಿ ಖ್ಯಾತಿಯ ಗೀತಾಭಾರತಿ ಭಟ್ (Geeta Bharati Bhatt), ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಸುಮನ್ ರಂಗನಾಥ್,  ಪದ್ಮಜಾರಾವ್ (Padmaja Rao) ರಘು ಪಾಂಡೇಶ್ವರ್ ಹೀಗೆ ಸಾಕಷ್ಟು ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಸಂಕಲನವಿರುವ “ರವಿಕೆ ಪ್ರಸಂಗ” ಚಿತ್ರದ ಮೊದಲ ಪ್ರತಿ ಸದ್ಯದಲ್ಲೇ ಬರಲಿದೆ. ವಿಭಿನ್ನ ಕಥೆಯ ಈ ಚಿತ್ರ ಎಲ್ಲರಿಗೂ ಹಿಡಿಸಲಿದೆ ಎಂದು ಚಿತ್ರದ ಕುರಿತು ನಿರ್ದೇಶಕ ಸಂತೋಷ್ ಕೊಡೆಂಕೆರಿ (Santhosh Kodenkeri) ಮಾಹಿತಿ ನೀಡಿದರು.

    ಈ ಚಿತ್ರದ ಕಥೆ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಹೆಣ್ಣುಮಕ್ಕಳಿಗೆ ರವಿಕೆ ಮೇಲೆ ಪ್ರೀತಿ. ಅದರ ಅಳತೆ ಸರಿಯಾಗಿರಬೇಕು ಎಂದು ಸಾಕಷ್ಟು ಸಲ ಟೈಲರ್ ಜೊತೆ ಚರ್ಚಿಸುತ್ತಾರೆ. ಈ ರೀತಿ ಮಹಿಳೆ ಹಾಗೂ ಟೈಲರ್ ನಡುವೆ ರವಿಕೆಗಾಗಿ ನಡೆಯುವ ಮುಖ್ಯ ವಿಷಯವೇ “ರವಿಕೆ ಪ್ರಸಂಗ”. ಸಂಭಾಷಣೆ ಮಂಗಳೂರು ಕನ್ನಡದಲ್ಲಿರುತ್ತದೆ. ಎಲ್ಲರ ಮನಸ್ಸಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಈ ಚಿತ್ರ ಪ್ರಿಯವಾಗಲಿದೆ ಎಂದರು ನಾಯಕಿ ಗೀತಾಭಾರತಿ ಭಟ್.

    ನಾನು ಇಪ್ಪತ್ತೈದು ವರ್ಷಗಳ ನನ್ನ ಸಿನಿಮಾ ಜರ್ನಿಯಲ್ಲಿ ನೂರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ. ಅದರಲ್ಲಿ ನನ್ನ ಮನಸ್ಸಿಗೆ ಹತ್ತಿತವಾದ ಚಿತ್ರಗಳು ಕೆಲವು ಮಾತ್ರ. ಅದರಲ್ಲಿ ಈ ಚಿತ್ರ ಕೂಡ ಒಂದು ಎಂದರು ನಟಿ ಪದ್ಮಜಾರಾವ್. ಕಥೆ ಹಾಗೂ ಸಂಭಾಷಣೆ ಬರೆದಿರುವ ಪಾವನ ಸಂತೋಷ್, ಛಾಯಾಗ್ರಾಹಕ ಮುರಳಿಧರ್ ಎನ್, ಸಂಗೀತ ನಿರ್ದೇಶಕ ವಿನಯ್ ಶರ್ಮ ಹಾಗೂ ಚಿತ್ರದಲ್ಲಿ ನಟಿಸಿರುವ ರಾಕೇಶ್ ಮಯ್ಯ, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.