Tag: ಸಂತೋಷ್ ತಮ್ಮಯ್ಯ

  • ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಷರತ್ತುಬದ್ಧ ಜಾಮೀನು

    ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಷರತ್ತುಬದ್ಧ ಜಾಮೀನು

    ಮಡಿಕೇರಿ: ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಪೊನ್ನಂಪೇಟೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

    ಅರ್ಧ ಗಂಟೆಗೂ ಅಧಿಕ ಸಮಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ಬಾರಿ ತೀರ್ಪನ್ನು ಕಾಯ್ದಿರಿಸಿದ್ದರು. ನ್ಯಾಯಾಧೀಶರಾದ ಮೋಹನ್ ಗೌಡ, ಬಂಧನಕ್ಕೊಳಗಾಗಿದ್ದ ಸಂತೋಷ್ ತಮ್ಮಯ್ಯರಿಗೆ ಷರತ್ತು ಬದ್ಧ ಜಾಮೀನು ನೀಡಿ ಅದೇಶಿಸಿದ್ದಾರೆ.

    ಏನಿದು ಪ್ರಕರಣ?
    ಪ್ರವಾದಿ ಹಾಗೂ ಟಿಪ್ಪು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟ ಆರೋಪದ ಮೇಲೆ ಪತ್ರಕರ್ತ ಸಂತೋಷ ತಮ್ಮಯ್ಯ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜವನಯ್ಯನ ಪಾಳ್ಯದಲ್ಲಿನ ಮಾವನ ಮನೆಯಲ್ಲಿ ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಕೊಡಗಿನ ಗೋಣಿಕೊಪ್ಪ ಪೊಲೀಸರು ಬಂಧಿಸಿ, ಇವತ್ತು ಕೋರ್ಟ್‍ಗೆ ಹಾಜರು ಪಡಿಸಿದ್ದರು.

    ನವೆಂಬರ್ 5ರಂದು ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿ “ಟಿಪ್ಪು ಕರಾಳ ಮುಖಗಳು” ಅನ್ನೋ ವಿಚಾರ ಸಂಕೀರಣದಲ್ಲಿ ಸಂತೋಷ್ ತಮ್ಮಯ್ಯ ಮಾತನಾಡಿ, ಪ್ರವಾದಿಗಳನ್ನು ಅವಹೇಳನ ಮಾಡಿದ್ದರು ಅಂತ ಕೊಡಗಿನ ಸಿದ್ದಾಪುರದ ಆಸಿಫ್ ಎಂಬಾತ ದೂರು ನೀಡಿದ್ದರು. ಇದರ ಮೇರೆಗೆ ಎಫ್‍ಐಆರ್ ದಾಖಲಿಸಿದ ಪೊಲೀಸರು ಸಂತೋಷ್ ತಮ್ಮಯ್ಯನನ್ನು ಬಂಧಿಸಿದ್ದರು.

    ಸಂತೋಷ್ ಬಂಧನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡೋವರ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲ್ಲ. ಆದ್ರೆ, ಟಿಪ್ಪು, ಪ್ರವಾದಿ ಅಂತ ಮಾತನಾಡಿದ್ರೆ ಹಿಂದೂಗಳನ್ನು ಹತ್ತಿಕ್ಕುವ ಹುನ್ನಾರ ಮಾಡ್ತಾರೆ ಅಂತ ಹಿಂದೂಪರ ಸಂಘಟನೆಗಳು ಇವತ್ತು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ನಾಳೆ ಮಧ್ಯಾಹ್ನ 1 ಗಂಟೆ ಬಂದ್‍ಗೆ ಕರೆ ನೀಡಿದ್ದಾರೆ. ಈ ಮಧ್ಯೆ ಪ್ರಕರಣದಲ್ಲಿ ಬಾಚರಣಿಯಂಡ ಪಿ.ಅಪ್ಪಣ್ಣ, ಅಡ್ಡಂಡ ಕಾರ್ಯಪ್ಪ, ಸುಧಾಕರ್ ಹೊಸಳ್ಳಿ, ರಾಬರ್ಟ್ ರೊಜಾರಿಯೋ ಎಂಬವರಿಗೆ ಬಂಧನ ಭೀತಿ ಎದುರಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ – ಪತ್ರಕರ್ತ ಸಂತೋಷ್ ತಮ್ಮಯ್ಯ ಅರೆಸ್ಟ್

    ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ – ಪತ್ರಕರ್ತ ಸಂತೋಷ್ ತಮ್ಮಯ್ಯ ಅರೆಸ್ಟ್

    ಮಡಿಕೇರಿ: ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ನವಂಬರ್ 5 ರಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿ ನಡೆದ ಟಿಪ್ಪು ಕರಾಳ ಮುಖಗಳ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂತೋಷ್ ತಮ್ಮಯ್ಯ ಪ್ರವಾದಿಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಕೊಡಗಿನ ಸಿದ್ದಾಪುರದ ಆಸಿಫ್ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂತೋಷ್ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ತುಮಕೂರಿನ ಮಧುಗಿರಿಯಲ್ಲಿದ್ದ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

    ಸಂತೋಷ್ ಬಂಧನಕ್ಕೆ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಗೋಣಿಕೊಪ್ಪದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸದ್ಯ ಸಂತೋಷ್ ತಮ್ಮಯ್ಯ ನನ್ನು ಗೋಣಿಕೊಪ್ಪ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನು ಸಿಗುವ ಸಾಧ್ಯತೆ ಇದೆ.

    ಈ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿರುವ ಇನ್ನೂ ನಾಲ್ವರಾದ ಬಾಚರಣಿಯಂಡ ಪಿ.ಅಪ್ಪಣ್ಣ, ಅಡ್ಡಂಡ ಕಾರ್ಯಪ್ಪ, ಸುಧಾಕರ್ ಹೊಸಳ್ಳಿ, ರಾಬರ್ಟ್ ರೊಜಾರಿಯೋ ಬಂಧನ ಭೀತಿ ಎದುರಾಗಿದೆ.

    ಈ ನಡುವೆ ದುಬೈಯಲ್ಲಿ ಕೊಡಗಿನ ನಿವಾಸಿ ಆಸೀಫ್ ಸಾಮಾಜಿಕ ಜಾಲತಾಣ ಮೂಲಕ ಪ್ರವಾದಿ ಭೋದನೆ ಭಯತ್ಪಾದನೆ ಕುಮ್ಮಕ್ಕು ನೀಡವಂತೆಯಿದೆ ಎಂಬುದನ್ನು ಸಾಬೀತುಪಡಿಸಿ ಎಂದು ಸವಾಲು ಹಾಕಿದ್ದಾನೆ. ನಿಮ್ಮ ರಾಜಕೀಯಕ್ಕೆ ಪ್ರವಾದಿ ಅವರ ಹೆಸರನ್ನು ಬಳಸಬೇಡಿ. ಇದೇ ಮುಂದುವರಿದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ.

    ಕೊಡಗಿನ ಪೊನ್ನಂಪೇಟೆ ಕೋರ್ಟ್ ನಲ್ಲಿ ನ್ಯಾಯಾಧೀಶರು ಸಂತೋಷ್ ಅವರನ್ನು ಅರ್ಧ ಗಂಟೆಗೂ ಅಧಿಕ ಸಮಯ ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಮತ್ತೆ 5 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews