Tag: ಸಂತೋಷ್ ಪಾಟೀಲ್

  • ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು- ಇಂದು ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

    ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು- ಇಂದು ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

    – ಅಮಿತ್ ಶಾ ನಿವಾಸದ ಬಳಿ ಪ್ರತಿಭಟನೆಗೆ ಪ್ಲ್ಯಾನ್

    ಬೆಂಗಳೂರು: ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ. ಕಮಿಷನ್ ಆರೋಪ, ಗುತ್ತಿಗೆದಾರರ ಸಾವು ಇಟ್ಟುಕೊಂಡು, ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಟಕ್ಕರ್ ನೀಡಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಇವತ್ತು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

    ಗುತ್ತೆಗೆದಾರ ಸಂತೋಷ್ ಡೆತ್‍ನೋಟ್‍ನಲ್ಲಿ ಈಶ್ವರಪ್ಪ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ, ಬೆಳಗ್ಗೆ 9 ಗಂಟೆಗೆ ರಾಜಭವನಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಲಿದ್ದಾರೆ.

    ಈಶ್ವರಪ್ಪ ತಲೆದಂಡ ಹಾಗೂ ಬಂಧನಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿನ ಈಶ್ವರಪ್ಪ ನಿವಾಸ ಹಾಗೂ ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮ ನಡೆಯುತ್ತಿದ್ದ ಹೋಟೆಲ್‍ಗೂ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ರು. ಇಂದು ಕೂಡ ರಾಜ್ಯಾದ್ಯಂತ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಇದನ್ನೂ ಓದಿ: ನನ್ನ ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ: ಸಂತೋಷ್ ಪತ್ನಿ ಕಣ್ಣೀರು

    ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಸರ್ಕಾರ ತಮ್ಮದೇ ಕಾರ್ಯಕರ್ತನನ್ನು ಬಲಿ ಪಡೆದಿದೆ. ಸಂತ್ರಸ್ತ ಪ್ರಧಾನಿಗೆ ಸಲ್ಲಿಸಿದ ಮನವಿಗೆ ಉತ್ತರ ಸಿಕ್ಕಿಲ್ಲ. “ಬಿಜೆಪಿ ಕರಪ್ಷನ್ ಫೈಲ್ಸ್” ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಂತೋಷ್ ಪ್ರಕರಣ ಎಲ್ಲಾ ಆ್ಯಂಗಲ್‌ನಲ್ಲೂ ತನಿಖೆಯಾಗುತ್ತಿದೆ: ಆರಗ ಜ್ಞಾನೇಂದ್ರ

    ಇಂದು ದೆಹಲಿಯಲ್ಲಿ ಯೂಥ್ ಕಾಂಗ್ರೆಸ್, ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ, ಗೃಹ ಸಚಿವ ಅಮಿತ್ ನಿವಾಸದ ಮುಂದೆ ಪ್ರತಿಭಟನೆಗೆ ನಿರ್ಧರಿಸಿದೆ. ಇದಷ್ಟೇ ಅಲ್ಲ, ಜೆ.ಪಿ ನಡ್ಡಾ, ಬಿ.ಎಲ್ ಸಂತೋಷ್ ಸೇರಿದಂತೆ ಹಲವು ಬಿಜೆಪಿ ನಾಯಕರ ಮನೆ ಮುಂದೆ ಪ್ರತಿಭಟನೆ ನಡೆಸಲು ಪ್ಲ್ಯಾನ್ ಮಾಡಿದೆ. ಒಟ್ಟಾರೆ ಧರ್ಮ ಸಂಕಟದಲ್ಲಿ ಸಿಲುಕಿದ್ದ ಕಾಂಗ್ರೆಸ್‍ಗೆ, ಇದೀಗ ಬ್ರಹ್ಮಾಸ್ತ್ರವೇ ಸಿಕ್ಕಿದೆ. ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದು, ಬಿಜೆಪಿ ಹೈಕಮಾಂಡ್ ನಡೆ ಕುತೂಹಲ ಮೂಡಿಸಿದೆ.

  • ಬಿಜೆಪಿ ಕರಪ್ಷನ್ ಫೈಲ್ಸ್: ಸಂತೋಷ್ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

    ಬಿಜೆಪಿ ಕರಪ್ಷನ್ ಫೈಲ್ಸ್: ಸಂತೋಷ್ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

    ನವದೆಹಲಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ಕರ್ನಾಟಕದಲ್ಲಿ ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರ ತಮ್ಮದೇ ಕಾರ್ಯಕರ್ತನನ್ನು ಬಲಿ ಪಡೆದಿದೆ. ಸಂತ್ರಸ್ತ ಪ್ರಧಾನಿಗೆ ಸಲ್ಲಿಸಿದ ಮನವಿಗೆ ಉತ್ತರ ಸಿಕ್ಕಿಲ್ಲ. ಈ ಪ್ರಕರಣಕ್ಕೆ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಇಬ್ಬರೂ ಪಾಲುದಾರರು. ಇದು “ಬಿಜೆಪಿ ಕರಪ್ಷನ್ ಫೈಲ್ಸ್” ಎಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಂತೋಷ್ ಪ್ರಕರಣ ಎಲ್ಲಾ ಆ್ಯಂಗಲ್‌ನಲ್ಲೂ ತನಿಖೆಯಾಗುತ್ತಿದೆ: ಆರಗ ಜ್ಞಾನೇಂದ್ರ

    ಇದು ಆತ್ಮಹತ್ಯೆಯಲ್ಲ, ಸರ್ಕಾರಿ ಕೊಲೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಕೊಲೆ ಮಾಡಿದ ಬಿಜೆಪಿ ಸರ್ಕಾರ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಒಂದು ಕ್ಷಣವೂ ಅಧಿಕಾರದಲ್ಲಿರಲು ಅನರ್ಹ. ಈ ಕೂಡಲೇ ಈಶ್ವರಪ್ಪರನ್ನು ಸಂಪಟುದಿಂದ ವಜಾ ಮಾಡಿ, ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

  • ಈಶ್ವರಪ್ಪ ರಾಜೀನಾಮೆಗೆ ಒತ್ತಾಯ- ಬಿಎಸ್‌ವೈಗೆ ಫೋನ್ ಕರೆ ಮಾಡಿ ಬೊಮ್ಮಾಯಿ ಮಾತುಕತೆ

    ಈಶ್ವರಪ್ಪ ರಾಜೀನಾಮೆಗೆ ಒತ್ತಾಯ- ಬಿಎಸ್‌ವೈಗೆ ಫೋನ್ ಕರೆ ಮಾಡಿ ಬೊಮ್ಮಾಯಿ ಮಾತುಕತೆ

    ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Eshwarappa

    ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಸಂತೋಷ್ ಪಾಟೀಲ್ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಹೀಗಾಗಿ ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯುವ ಸಂಬಂಧ ಯಡಿಯೂರಪ್ಪ ಅವರೊಂದಿಗೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಸಾಲ ಸೋಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು: ಈಶ್ವರಪ್ಪ ಪರ ಯತ್ನಾಳ್ ಬ್ಯಾಟಿಂಗ್

    ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು, ವಿಪಕ್ಷಗಳು ಸಹ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿವೆ.

    ಕಳೆದೆರಡು ತಿಂಗಳಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರಿಗೆ ಸಾಲು ಸಾಲು ದೂರು ನೀಡಿದ್ದ ಗುತ್ತಿಗೆದಾರ ಸಂತೋಷ್ ಇದೀಗ ಸಾವಿಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ನಿನ್ನೆ ರಾತ್ರಿ 11.30ಕ್ಕೆ ವಾಟ್ಸಪ್ ಮಾಡಿದ್ದ ಸಂತೋಷ್ ಪಾಟೀಲ್ ನಾಪತ್ತೆಯಾಗಿದ್ದರು. ಪೊಲೀಸರು ಮೊಬೈಲ್ ಟವರ್ ಮೂಲಕ ಪರಿಶೀಲನೆ ನಡೆಸಿದಾಗ ಸಂತೋಷ್ ಉಡುಪಿಯಲ್ಲಿರುವುದು ಗೊತ್ತಾಗಿತ್ತು. ಪರಿಶೀಲನೆ ವೇಳೆ ಶಾಂಭವಿ ಲಾಡ್ಜ್‌ನ ಕೊಠಡಿವೊಂದರಲ್ಲಿ ಸಂತೋಷ್ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ನನ್ನ ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ: ಸಂತೋಷ್ ಪತ್ನಿ ಕಣ್ಣೀರು

  • ನಾ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ: ನಾಸೀರ್ ಹುಸೇನ್ ಪ್ರಶ್ನೆ

    ನಾ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ: ನಾಸೀರ್ ಹುಸೇನ್ ಪ್ರಶ್ನೆ

    ನವದೆಹಲಿ: ಸಂತೋಷ್ ಪಾಟೀಲ್ ಮಾತ್ರವಲ್ಲ ಬಹಳಷ್ಟು ಗುತ್ತಿಗೆದಾರರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಆರೋಪ ಮಾಡಿದ್ದಾರೆ. ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಏನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ರಾಜ್ಯಸಭೆ ಸಂಸದ ನಾಸೀರ್ ಹುಸೇನ್ ಪ್ರಶ್ನಿಸಿದ್ದಾರೆ.

    MODi

    ನವದೆಹಲಿಯಲ್ಲಿ ಮಾತನಾಡಿದ ಅವರು, ಸಂತೋಷ ಪಾಟೀಲ್ ಡೆತ್‌ನೋಟ್‌ನಲ್ಲಿ ಕೆ.ಎಸ್.ಈಶ್ವರಪ್ಪ ಹೆಸರು ಉಲ್ಲೇಖಿಸಿದ್ದಾರೆ. ಸಾವಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಬಹಳಷ್ಟು ನಾಯಕರಿಗೆ ಪತ್ರ ಬರೆದು ನ್ಯಾಯ ಕೊಡಿಸಲು ಮನವಿ ಮಾಡಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಸರಣಿ ಪತ್ರಗಳನ್ನು ಬರೆದರೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಯಾವ ನಾಯಕರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ತಮ್ಮ ಪಕ್ಷದ ಕಾರ್ಯಕರ್ತನಿಗೆ ತಮ್ಮದೇ ಪಕ್ಷದ ನಾಯಕರಿಂದ ಅನ್ಯಾಯ ಆದರೂ ಯಾರೂ ನ್ಯಾಯ ಕೊಡಿಸಲಿಲ್ಲ. ಇದರಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಸಂತೋಷ ಪಾಟೀಲ್ ಆತ್ಮಹತ್ಯೆ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಕೆ.ಎಸ್.ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಬೇಕು. ಒಂದು ವೇಳೆ ರಾಜೀನಾಮೆ ನೀಡದಿದ್ದಲ್ಲಿ ಕಾಂಗ್ರೆಸ್ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

  • ಸಾರ್ವಜನಿಕರಿಗೆ ಸಂಶಯ ಬಾರದಂತೆ ಬೇಗ ಒಂದು ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು: ವಿಶ್ವನಾಥ್

    ಸಾರ್ವಜನಿಕರಿಗೆ ಸಂಶಯ ಬಾರದಂತೆ ಬೇಗ ಒಂದು ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು: ವಿಶ್ವನಾಥ್

    ಬೆಂಗಳೂರು: ಸಾರ್ವಜನಿಕರಿಗೆ ಸಂಶಯ ಬಾರದಂತೆ ಬೇಗ ಒಂದು ತನಿಖೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40% ಕಮಿಷನ್ ಬಗ್ಗೆ ವ್ಯಾಪಕ ಚರ್ಚೆ ಆಗುತ್ತಿದೆ. ಸಂತೋಷ್ ಆತ್ಮಹತ್ಯೆ ಹಿನ್ನೆಲೆ ಬೇರೆ ಬೇರೆ ಇದೆ ಎನ್ನಲಾಗುತ್ತಿದೆ. ಸರ್ಕಾರ ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡಬೇಕು. ಸತ್ಯಾಸತ್ಯತೆ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ನಾನು ಯಾವುದೇ ತಪ್ಪು ಮಾಡಿಲ್ಲ, ಸಂತೋಷ್ ತಪ್ಪು ಮಾಡಿರೋದು : ಈಶ್ವರಪ್ಪ

    ಈಶ್ವರಪ್ಪ ರಾಜೀನಾಮೆ ಅಮೇಲೆ, ಮೊದಲು ತನಿಖೆ ಆಗಲಿ. ಆಡಳಿತ ಇದ್ದಾಗ ಒಂಥರಾ ಮಾತಾಡ್ತೀವಿ, ವಿರೋಧ ಪಕ್ಷದಲ್ಲಿ ಇದ್ದಾಗ ಬೇರೆ ತರಹ ಮಾತಾಡ್ತೀವಿ. ಸಾರ್ವಜನಿಕರಿಗೆ ಸಂಶಯ ಬಾರದ ಹಾಗೇ ಬೇಗ ಒಂದು ವಿಚಾರಣೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

    ಯಾವುದೇ ಮಂತ್ರಿ ನೈತಿಕತೆ ಬಂದಾಗ ಅವರೇ ತೀರ್ಮಾನ ತೆಗೆದುಕೊಳ್ಳಬೇಕು. ಅದು ಅವರ ನೈತಿಕ ಹೊಣೆಗಾರಿಕೆ ಪ್ರಶ್ನೆ. ನಾವು ಫೋರ್ಸ್ ಮಾಡುವುದಕ್ಕೆ ಸಾಧ್ಯವಿಲ್ಲ. ಎಲ್ಲಿದೆ ನೈತಿಕತೆ, ಮೂರು ಪಾರ್ಟಿ ಅಲ್ಲಿಗೇ ಬಂದು ನಿಂತಿವೆ. 10% ನವರು ಈಗ ಯಾಕೆ 40% ತಗೋತಾರೆ ಅಂತಾ ಕೇಳುತ್ತಾರೆ. 40% ತಗೊಂಡವರು ನೀವು ತಗೊಂಡಿಲ್ಲವಾ ಅಂತಾರೆ. ಏನ್ ವಿಪರ್ಯಾಸ ಎಂದು ನಕ್ಕು ವಿಶ್ವನಾಥ್ ಅಲ್ಲಿಂದ ಹೊರಟರು.

  • ಈಶ್ವರಪ್ಪ ವಜಾಗೊಳಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಿ: ಪ್ರಿಯಾಂಕ್ ಖರ್ಗೆ

    ಈಶ್ವರಪ್ಪ ವಜಾಗೊಳಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಿ: ಪ್ರಿಯಾಂಕ್ ಖರ್ಗೆ

    ಕಲಬುರಗಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ. ಡೆತ್ ಮೆಸೇಜ್ ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಉಲ್ಲೇಖವಿರುವುದರಿಂದ ಅವರನ್ನ ವಜಾ ಮಾಡಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರಿಂದ ನೇಮಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ನಾತನಾಡಿದ ಅವರು, ಗುತ್ತಿಗೆದಾರರು ಈ ಮುಂಚೆ ಸರ್ಕಾರ 40% ಕಮಿಷನ್ ಬೇಡಿಕೆ ಇಟ್ಟಿದೆ. ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಆದರೂ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರತಿಯೊಂದಕ್ಕೂ ಸರ್ಕಾರ ದಾಖಲೆ ಕೇಳುತ್ತಿದೆ. ಈಗ ಒಂದು ಜೀವ ಹೋಗಿದೆ ಇದಕ್ಕಿಂತ ಪ್ರೂಫ್ ಬೇಕಾ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಬೊಮ್ಮಾಯಿ

    40% ಪರ್ಸೆಂಟ್ ಕಮಿಷನ್ ಬಗ್ಗೆ ಈ ಹಿಂದೆ ಅನೇಕ ಬಾರಿ ಸಂತೋಷ್ ಹೇಳಿದ್ದರು. ಆದರೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರಲಿಲ್ಲ. ನಾ ಖಾವುಂಗ..ಖಾನೇ ದೂಂಗಾ ಎಂದು ಪ್ರಧಾನಿ ಹೇಳಿದ್ದರು. ಆದರೆ ಸರ್ಕಾರದಲ್ಲಿ ಎಲ್ಲವೂ ನಡೆಯುತ್ತಿದೆ. ಈ ವಿಷಯವನ್ನು ಬೆಳಗಾವಿ-ಬೆಂಗಳೂರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆವು. ಆದರೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ದುರ್ದೈವವೆಂದರೆ ಚರ್ಚೆ ಮಾಡಲು ನಿಮ್ಮಹತ್ರ ಪ್ರೂಫ್ ಇದೆಯಾ ಅಂತಾ ಕೇಳಿದ್ದರು ಎಂದು ನೆನಪಿಸಿಕೊಂಡರು.

    ಸಿಎಂ ಬಸವರಾಜ ಬೊಮ್ಮಾಯಿ ಆರ್‍ಎಸ್‍ಎಸ್ ಕೈಗೊಂಬೆಯಾಗಿದ್ದು ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ಕ್ರಮ ತೆಗೆದುಕೊಳ್ಳದ ಸಿಎಂ, ಓರ್ವ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಜಿಪಿ ಬದುಕಿದ್ದರೆ, ಕ್ರಮ ಕೈಗೊಳ್ಳಬೇಕು: ಡಿಕೆಶಿ

    ಸಂತೋಷ್ ಪಾಟೀಲ್ ಡೆತ್ ಮೆಸೇಜ್ ನಲ್ಲಿ ತಮ್ಮ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟವಾಗಿ ಉಲ್ಲೇಖಿಸಿರುವುದರಿಂದ ಆತ್ಮಹತ್ಯೆಗೆ ಪ್ರೇರಣೆ ಎಂದು ಕೇಸು ದಾಖಲಿಸಬೇಕು. ಜೊತೆಗೆ ನ್ಯಾಯಾಧೀಶರಿಂದ ಸಮಗ್ರ ತನಿಖೆವಾಗುವರೆಗೆ ಈಶ್ವರಪ್ಪನವರನ್ನ ವಜಾಗೊಳಿಸಬೇಕು ಎಂದು ಪುನರುಚ್ಛರಿಸಿದರು.

  • ರಾಜ್ಯದಲ್ಲಿ ಡಿಜಿಪಿ ಬದುಕಿದ್ದರೆ, ಕ್ರಮ ಕೈಗೊಳ್ಳಬೇಕು: ಡಿಕೆಶಿ

    ರಾಜ್ಯದಲ್ಲಿ ಡಿಜಿಪಿ ಬದುಕಿದ್ದರೆ, ಕ್ರಮ ಕೈಗೊಳ್ಳಬೇಕು: ಡಿಕೆಶಿ

    ಬೆಂಗಳೂರು: ಈ ರಾಜ್ಯದಲ್ಲಿ ಡಿಜಿಪಿ ಬದುಕಿದ್ದಾರೆ ಅಂದರೆ ಈಶ್ವರಪ್ಪನವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

    Eshwarappa

    ನಗರದ ಕೆಪಿಸಿಸಿ ಕಛೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರು, ಮುಖ್ಯಮಂತ್ರಿ ಏನೂ ಮಾಡಲ್ಲ. ಈ ರಾಜ್ಯದಲ್ಲಿ ಡಿಜಿಪಿ ಬದುಕಿದ್ದಾರೆ ಅಂದರೆ ಕ್ರಮ ಕೈಗೊಳ್ಳಬೇಕು. ಅವರು ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಇದರಲ್ಲಿ ಸತ್ಯ ಇದೆಯೋ ಇಲ್ಲವೋ ಗೊತ್ತಿಲ್ಲ. ಮೊದಲು ಎಫ್‍ಐಆರ್ ದಾಖಲಿಸಬೇಕು. ಎಫ್‍ಐಆರ್ ಆಧಾರದ ಮೇಲೆ ತನಿಖೆ ಕೈಗೊಳ್ಳಬೇಕು. ಡೆತ್ ನೋಟ್ ಬಂದಾಗ ಎಫ್‍ಐಆರ್ ದಾಖಲಿಸುತ್ತಾರೆ. ಇಂತಹ ಕೇಸ್ ಸೀರಿಯಸ್ ಆಗಿ ತೆಗೆದುಕೊಳ್ಳುತ್ತಾರೆ. ಹಾಗಾಗಿ ಪೊಲೀಸರು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸರ್ಕಾರ ಬೇರೆ, ತನಿಖೆ ಮಾಡುವವರು ಬೇರೆ. ಅನೇಕ ಕೇಸ್‍ಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸಿದೆ. ಮಧ್ಯಪ್ರವೇಶ ಮಾಡಿ ಅವರನ್ನು ರಕ್ಷಿಸಿದೆ. ಮಂತ್ರಿಗಳ ಕೇಸ್‍ನಲ್ಲಿ ಅವರನ್ನು ರಕ್ಷಣೆ ಮಾಡಿದೆ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

    ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ಇಂದು ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಓಲೈಕೆ ರಾಜಕಾರಣ ಗೊತ್ತಿಲ್ಲ: ಇಬ್ಬರು ಮಾಜಿ ಸಿಎಂಗಳಿಗೆ ಕುಟುಕಿದ  ಬೊಮ್ಮಾಯಿ

    ವಾಟ್ಸಾಪ್ ಸಂದೇಶದಲ್ಲಿ ನನ್ನ ಸಾವಿಗೆ ನೇರ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ. ಕರ್ನಾಟಕ ಸರ್ಕಾರದಿಂದ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.