Tag: ಸಂತೋಷ್ ಹೆಗ್ಡೆ

  • ಅಯೋಧ್ಯೆ ವಿವಾದವನ್ನು ಸುಪ್ರೀಂಕೋರ್ಟ್ ಬಗೆಹರಿಸಲು ಸಾಧ್ಯವೇ ಇಲ್ಲ: ಸಂತೋಷ್ ಹೆಗ್ಡೆ

    ಅಯೋಧ್ಯೆ ವಿವಾದವನ್ನು ಸುಪ್ರೀಂಕೋರ್ಟ್ ಬಗೆಹರಿಸಲು ಸಾಧ್ಯವೇ ಇಲ್ಲ: ಸಂತೋಷ್ ಹೆಗ್ಡೆ

    ಬೆಂಗಳೂರು: ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟ್ ಬಗೆಹರಿಸಲು ಸಾಧ್ಯವೇ ಇಲ್ಲವೆಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟಿದ್ದಾರೆ.

    ಭಾನುವಾರ ನಗರದ ಮೆಟ್ರೋ ರಂಗೋಲಿಯಲ್ಲಿ ಛಾಯಗ್ರಾಹಕ ಸುಧೀರ್ ಶೆಟ್ಟಿಯವರ ಕ್ಯಾಮೆರಾದಲ್ಲಿ ಕಂಡ ಅಯೋಧ್ಯೆ ಕುರಿತಾದ ಛಾವಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟ್‍ನಿಂದ ಬಗೆಹರಿಸಲು ಸಾಧ್ಯವೇ ಇಲ್ಲ. ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದ ನಂತರ ಕೋಮು ಸೌಹಾರ್ದ ಉಳಿಯುವುದು ಅನುಮಾನಸ್ಪದವಾಗಿದೆ. ಈ ಸಮಸ್ಯೆಯನ್ನು ಅಲ್ಲಿನ ಸ್ಥಳಿಯರು ಮಾತನಾಡಿ ಬಗೆಹರಿಸಿಕೊಳ್ಳಬೇಕು. ಅಯೋಧ್ಯೆ ವಿಚಾರಕ್ಕೆ ಹೊರಗಿನವರ ಹಸ್ತಕ್ಷೇಪ ಹೆಚ್ಚಾಗಿದೆ. ರಾಜಕೀಯ ಹಿತಾಸಕ್ತಿಯಿಂದಲೇ ಅದು ದೊಡ್ಡ ಮಟ್ಟದ ವಿವಾದವಾಗಿ ಬೆಳೆದಿದೆ. ಕೇವಲ ಸುಪ್ರೀಂ ತೀರ್ಪಿನ ಮೂಲಕವೇ ಎಲ್ಲವನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆಂದು ಅಭಿಪ್ರಾಯ ಪಟ್ಟಿದ್ದಾರೆ.

    ಸಂತೋಷ್ ಹೆಗ್ಡೆ ಅಲ್ಲದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಪ್ರತಿಕ್ರಿಯಿಸಿ, ಅಯೋಧ್ಯೆ ವಿವಾದವನ್ನು ಬಿಜೆಪಿಯವರು ರಾಜಕೀಯ ದಾಳವನ್ನಾಗಿಸಿಕೊಂಡಿದ್ದಾರೆ. ಅವರಿಗೆ ರಾಮ ಬೇಕಾಗಿಲ್ಲ. ಒಂದು ವೇಳೆ ದೇವರು ಬೇಕಾಗಿದ್ದರೆ ಈ ಹೊತ್ತಿಗೆ ಅಯೋಧ್ಯೆಯನ್ನು ಅಭಿವೃದ್ಧಿ ಮಾಡುತ್ತಿದ್ದರು. ಆದರೆ ಅವರಿಗೆ ಗಲಾಟೆಯಾಗೋದು ಅಷ್ಟೆ ಬೇಕಾಗಿದೆ. ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ್ದು ದೊಡ್ಡ ತಪ್ಪು ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

    ಛಾಯಗ್ರಾಹಕ ಸುಧೀರ್ ಶೆಟ್ಟಿಯವರ ಕ್ಯಾಮೆರಾ ಕಣ್ಣಲ್ಲಿ ರಾಮಜನ್ಮ ಭೂಮಿಯ ಸತ್ಯ ಪ್ರದರ್ಶನವಾಗಿದ್ದು, ಅಯೋಧ್ಯ ಕುರಿತಾದ ಸ್ಫೋಟಕ ಮಾಹಿತಿಗಳು ಛಾಯಚಿತ್ರಗಳ ಮೂಲಕ ಹೊರ ಬಂದಿವೆ. ಛಾಯಚಿತ್ರ ಪ್ರದರ್ಶನದಲ್ಲಿ ರಾಮಜನ್ಮ ಭೂಮಿಯ ಸ್ಥಿತಿ-ಗತಿಗಳ ಛಾಯಚಿತ್ರ ಹಾಗೂ ವಿಡಿಯೋವನ್ನು ಅನಾವರಣಗೊಳಿಸಿದ್ದಾರೆ.

    ಅಯೋಧ್ಯಾ ನಗರಿಯಲ್ಲಿರುವ ಸ್ಥಳೀಯರಿಗೆ ಈ ವಿವಾದ ಬೇಕಾಗಿಲ್ಲ. ವಿವಾದದ ದಳ್ಳುರಿಯಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ. ಅಲ್ಲಿನ ಮುಸ್ಲಿಮರು ಹಾಗೂ ಹಿಂದೂಗಳಿಗೆ ವಿವಾದವನ್ನು ಬಗೆಹರಿಸುವ ಆಸೆಯಿದೆ. ಆದರೆ ರಾಜಕೀಯ ನಾಯಕರಿಗೆ ವಿವಾದ ಜೀವಂತವಾಗಿದ್ದರೇ ಒಳ್ಳೆಯದು ಎನ್ನುವ ಭಾವನೆಯನ್ನು ಛಾಯಚಿತ್ರದ ಮೂಲಕ ಬಿಚ್ಚಿಟ್ಟಿದ್ದಾರೆ.

    ಆಯೋಧ್ಯೆ ವಿವಾದ ಸಂಬಂಧ ಸಲ್ಲಕೆಯಾಗಿರುವ ಅರ್ಜಿ ವಿಚಾರಣೆ ಅಕ್ಟೋಬರ್ 29 ರಿಂದ ಆರಂಭವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಇಂದಿನ ರಾಜಕೀಯ ಪರಿಸ್ಥಿತಿಗೆ ಮತದಾರರೇ ಮೂಲ ಕಾರಣ – ಸಂತೋಷ್ ಹೆಗ್ಡೆ

    ಇಂದಿನ ರಾಜಕೀಯ ಪರಿಸ್ಥಿತಿಗೆ ಮತದಾರರೇ ಮೂಲ ಕಾರಣ – ಸಂತೋಷ್ ಹೆಗ್ಡೆ

    ಮೈಸೂರು: ರಾಜ್ಯಪಾಲರು ಕಾನೂನಾತ್ಮಕವಾಗಿನಡೆದುಕೊಂಡಿದ್ದಾರೆ. ಶಾಸಕರ ರೆಸಾರ್ಟ್ ರಾಜಕೀಯ ಮಾಡಿದರೆ ಮಾಡಲಿ. ರೆಸಾರ್ಟ್ ನವರಿಗೆ ಒಂದಷ್ಟು ದುಡ್ಡಾದರು ಆಗುತ್ತೆ ಅಂತ ನಿವೃತ್ತ ಲೋಕಯುಕ್ತ ಸಂತೋಷ್ ಹೆಗ್ಡೆ ಹೇಳಿದ್ದಾರೆ.

    ರಾಜ್ಯ ರಾಜಕಾರಣದ ಬೆಳವಣಿಗೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯೇ ಬಿಜೆಪಿಯವರು ಬಹುಮತ ಸಾಬೀತು ಮಾಡಬೇಕು ಎಂಬ ಸುಪ್ರಿಂ ಆದೇಶ ಸ್ವಾಗಾತಾರ್ಹವಾಗಿದೆ. ಕುದುರೆ ವ್ಯಾಪಾರವನ್ನು ತಪ್ಪಿಸಲು ಸಹಕಾರಿಯಾಗುತ್ತದೆ ಅಂದ್ರು.

    ರಾಜ್ಯಪಾಲರು ಬಿಜೆಪಿಯನ್ನು ಮೊದಲು ಸರ್ಕಾರ ರಚನೆಗೆ ಆಹ್ವಾನ ಮಾಡಿದ್ದು ಸರಿ. ಇದರಲ್ಲಿ ಯಾವ ತಪ್ಪಿಲ್ಲ. ಆದರೆ ಬಹುಮತ ಸಾಬೀತಿಗೆ 15 ದಿನ ಕಾಲಾವಕಾಶ ನೀಡಿದ್ದು ತಪ್ಪು. ಇದನ್ನು ಸುಪ್ರಿಂ ಕೋರ್ಟ್ ಸರಿಪಡಿಸಿದೆ. ರಾಜ್ಯಪಾಲರ ನಡೆಯನ್ನು ರಾಜಕೀಯವಾಗಿ ಟೀಕೆ ಮಾಡುವುದು ಸುಲಭ. ರಾಜ್ಯಪಾಲರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ ಅಂತ ಅವರು ಹೇಳಿದ್ರು.

    ಇವತ್ತಿನ ರಾಜ್ಯದ ರಾಜಕೀಯ ಪರಿಸ್ಥಿತಿಗೆ ಮತದಾರರೆ ಮೂಲ ಕಾರಣ. ಜಾತಿಗಾಗಿ, ಹಣಕ್ಕಾಗಿ ಮತಹಾಕಿರುವ ಪರಿಣಾಮ ಈ ರೀತಿ ಅಂತ್ರತರ ಸೃಷ್ಟಿಯಾಗಿದೆ ಇದು ಬೇಸರದ ಸಂಗತಿಯಾಗಿದೆ ಅಂತ ಹೆಗ್ಡೆ ಹೇಳಿದೆ.

  • ಇದು ವಿಪರ್ಯಾಸವೇ ಸರಿ: ಸಂತೋಷ್ ಹೆಗ್ಡೆ

    ಇದು ವಿಪರ್ಯಾಸವೇ ಸರಿ: ಸಂತೋಷ್ ಹೆಗ್ಡೆ

    ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.

    ಪ್ರಕರಣ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲೋಕಾಯುಕ್ತ ಕಚೇರಿಗೆ ಒಬ್ಬ ವ್ಯಕ್ತಿ ಚಾಕು ಹಿಡಿದುಕೊಂಡು ಹೋಗಿದ್ದಾನೆಂದರೆ ಅಲ್ಲಿನ ಭದ್ರತಾ ವ್ಯವಸ್ಥೆ ಸರಿಯಲ್ಲ ಎಂದರ್ಥ ಅಂತ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲೂ ತಪಾಸಣೆ ಮಾಡಿಯೇ ಮಾಡುತ್ತಾರೆ. ಅಂತದ್ದರಲ್ಲಿ ಒಂದು ಲೋಕಾಯುಕ್ತ ಕಚೇರಿಗೆ ಬರುವಾಗ ವ್ಯಕ್ತಿಯೋರ್ವ ಚಾಕು ಹಿಡಿದುಕೊಂಡು ಬರುತ್ತಾನೆ ಎಂದರೆ ಇದು ವಿಪರ್ಯಾಸವೇ ಸರಿ ಅಂತ ಅವರು ಹೇಳಿದ್ರು.  

    ಏನಿದು ಘಟನೆ?: ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ನ್ಯಾ. ವಿಶ್ವನಾಥ್ ಶೆಟ್ಟಿಯವರು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ತೇಜ ರಾಜ ಶರ್ಮಾ ಎಂಬಾತ ಏಕಾಏಕಿ ಕಚೇರಿಗೆ ನುಗಿ ಲೋಕಾಯುಕ್ತರ ಕಿಬ್ಬೊಟ್ಟೆಗೆ ಮೂರು ಬಾರಿ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಲೋಕಾಯುಕ್ತ ಕೂಡಲೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಹಲ್ಲೆಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಶ್ವನಾಥ್ ಶೆಟ್ಟಿ ಅವರನ್ನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

    ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾ ರೆಡ್ಡಿ ಆಸ್ಪತ್ರೆಗೆ ದೌಡಾಯಿಸಿದ್ದು, ಆರೋಗ್ಯ ವಿಚಾರಿಸುತ್ತಿದ್ದಾರೆ.

  • ಸುದ್ದಿಗೋಷ್ಠಿಯಲ್ಲಿ ಶೆಣೈಗೆ ಸಿಟ್ಟು: ಅರ್ಧಕ್ಕೆ ಪ್ರೆಸ್‍ಮೀಟ್ ಮುಗಿಸಿ ಎದ್ದು ಹೋದ್ರು

    ಸುದ್ದಿಗೋಷ್ಠಿಯಲ್ಲಿ ಶೆಣೈಗೆ ಸಿಟ್ಟು: ಅರ್ಧಕ್ಕೆ ಪ್ರೆಸ್‍ಮೀಟ್ ಮುಗಿಸಿ ಎದ್ದು ಹೋದ್ರು

    ಬಳ್ಳಾರಿ: ಹೊಸ ರಾಜಕೀಯ ಪಕ್ಷ ಕಟ್ಟಿ ರಾಜಕೀಯ ನೆಲೆ ಕಂಡುಕೊಳ್ಳಲು ಹೊರಟಿರುವ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಪತ್ರಕರ್ತರ ಪ್ರಶ್ನೆಗೆ ಸಿಟ್ಟಾಗಿ ಸುದ್ದಿಗೋಷ್ಠಿಯಿಂದ ಕೈ ಮುಗಿದು ಹೊರ ನಡೆದ ಘಟನೆ ನಡೆದಿದೆ.

    ನವಂಬರ್ ಒಂದರಂದು ಉದ್ಘಾಟನೆ ಯಾಗಲಿರುವ ಹೊಸ ಪಕ್ಷದ ಬಗ್ಗೆ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಪತ್ರಕರ್ತರೊಬ್ಬರು ಕೂಡ್ಲಿಗಿಯಲ್ಲೇ ಹೊಸ ಪಕ್ಷ ಉದ್ಘಾಟನೆ ಯಾಕೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ರು.

    ಇದಕ್ಕೆ ಸಿಟ್ಟಾದ ಅನುಪಮಾ ಶೆಣೈ ಮಾಧ್ಯಮವರು ಬಳ್ಳಾರಿಯನ್ನು ‘ರಿಪಬ್ಲಿಕ್ ಆಫ್ ಬಳ್ಳಾರಿ’ ಅಂತಾ ಕೆಟ್ಟದಾಗಿ ಬಿಂಬಿಸಿದ್ದೀರಿ. ಆದ್ರೆ ವಾಸ್ತವವಾಗಿ ಬಳ್ಳಾರಿ ಹಾಗಿಲ್ಲ. ಇಲ್ಲಿನ ಜನರು ಮುಗ್ದರು ಅಂತಾ ಪತ್ರಕರ್ತರಿಗೆ ಮರುಪ್ರಶ್ನೆ ಎಸೆದರು. ಇದಕ್ಕೆ ಪ್ರತಿ ಉತ್ತರ ನೀಡಿದ ಪತ್ರಕರ್ತರು ನಾವೂ ‘ರಿಪಬ್ಲಿಕ್ ಆಫ್ ಬಳ್ಳಾರಿ’ ಅಂದಿಲ್ಲ. ನ್ಯಾಯಮೂರ್ತಿ ಸಂತೋಷ ಹೆಗಡೆ ರಿಪಬ್ಲಿಕ್ ಆಫ್ ಬಳ್ಳಾರಿ ಅಂತಾ ಹೇಳಿದ್ದರು. ಈ ಹಿಂದೆ ನೀವೂ ಕೂಡಾ ಕೂಡ್ಲಿಗಿಯಲ್ಲಿ ‘ಲಿಕ್ಕರ್ ಲಾಬಿ’ ಎಂದು ಆರೋಪಿಸಿದ್ದು ಮರೆತುಬಿಟ್ಟರಾ ಎಂದು ಮರು ಪ್ರಶ್ನೆ ಎಸೆದರು.

    ಪತ್ರಕರ್ತರ ಉತ್ತರ, ಪ್ರತಿಯುತ್ತರಕ್ಕೆ ಏಕಾಎಕಿ ಸಿಟ್ಟಾದ ಅನುಪಮಾ ಶೆಣೈ, ಅರ್ಧಕ್ಕೆ ಮೊಟಕುಗೊಳಿಸಿ ಪತ್ರಕರ್ತರಿಗೆ ಕೈ ಮುಗಿದು ಸಿಟ್ಟಿನಿಂದಲೇ ಸುದ್ದಿಗೋಷ್ಠಿಯಿಂದ ಹೊರನಡೆದರು.

    ನವೆಂಬರ್ ಒಂದರಂದು ಹೊಸ ಪಕ್ಷ ಉದ್ಘಾಟನೆ ಮಾಡಲಿರುವ ಅನುಪಮಾ ಶೆಣೈ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಆದರೆ ಕ್ಷೇತ್ರ ಯಾವುದು ಎಂದು ಈಗಲೇ ಹೇಳವುದಿಲ್ಲವೆಂದು ಸ್ಪಷ್ಟಪಡಿಸಿದರು.

    224 ಕ್ಷೇತ್ರಗಳ ಪೈಕಿ 80 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಅನುಪಮಾ ಶೆಣೈ ಪ್ಲಾನ್ ರೂಪಿಸಿದ್ದಾರೆ. ಆದ್ರೆ ಅನುಪಮಾ ಹೊಸದಾಗಿ ರಾಜಕೀಯಕ್ಕೆ ಬರುವವರನ್ನೆ ಅಭ್ಯರ್ಥಿಗಳನ್ನಾಗಿ ಮಾಡಿ ಪಕ್ಷ ಕಟ್ಟಲು ಚಿಂತನೆ ನಡೆಸಿದ್ದಾರೆ.