Tag: ಸಂದೀಪ್ ಉನ್ನಿಕೃಷ್ಣನ್

  • ಪಠ್ಯದಲ್ಲಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು: ಬಿಜೆಪಿ

    ಪಠ್ಯದಲ್ಲಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು: ಬಿಜೆಪಿ

    ಬೆಂಗಳೂರು: ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ಪಠ್ಯವನ್ನು ಕಿತ್ತು ಹಾಕಿತ್ತು. ಇದನ್ನು ಸಮರ್ಥಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಎಂದು ಪಠ್ಯ ಪರಿಷ್ಕರಣೆ ವಾಪಸ್‍ಗೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.

    bjP

     

    ಟ್ವೀಟ್‍ನಲ್ಲಿ ಏನಿದೆ?
    ಹಿಂದಿನ ಪಠ್ಯಕ್ರಮ ಮುಂದುವರಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಇದ್ದ ಪಾಠವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ ಸಮಿತಿ ತೆಗೆದುಹಾಕಿತ್ತು. ಇದನ್ನು ಸಮರ್ಥಿಸಿ ಪ್ರತಿಭಟನೆ ಮಾಡುತ್ತಿದ್ದೀರಾ? ಮುಡಂಬಡಿತ್ತಾಯ ಸಮಿತಿ ಪರಿಷ್ಕರಿಸಿದ ಪಠ್ಯಗಳಲ್ಲಿ, ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ 8 ಪಾಠಗಳಿದ್ದವು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅದಕ್ಕೂ ಕತ್ತರಿ ಹಾಕಲಾಯಿತು. ಆದರೆ ಬಿಜೆಪಿ ಸರ್ಕಾರ ನೇಮಿಸಿದ ಸಮಿತಿ ಕುವೆಂಪು ಅವರ 10 ಪಠ್ಯ ಅಳವಡಿಸಿದೆ. ಇದನ್ನೂ ಓದಿ: 3 ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ: ಮುತಾಲಿಕ್

    ಕಾಂಗ್ರೆಸ್ ಪ್ರತಿಭಟನೆ ಕುವೆಂಪು ವಿರುದ್ಧವೇ? ನವ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಇದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು. ಈಗ ಅದೇ ಹಿಂದಿನ ಪಠ್ಯ ಮುಂದುವರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದೆ. ಅಂದರೆ ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ಚರಿತ್ರೆ ಇರಬಾರದೇ? ಭೂಕಂದಾಯದ ಪತ್ರಗಳಲ್ಲಿದ್ದ ಕನ್ನಡವನ್ನು ತೆಗೆದು ಪರ್ಷಿಯನ್ ಭಾಷೆ ಹೇರಿದ ಟಿಪ್ಪು ಬಗ್ಗೆ ಕನ್ನಡ ಭಾಷಾಭಿಮಾನಿ ಎಂದು ಬರಗೂರು ಸಮಿತಿ ವೈಭವೀಕರಿಸಿತ್ತು. ಇದನ್ನು ಸಮರ್ಥಿಸುವ ಸಲುವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಮಾನ್ಯ ಡಿಕೆಶಿ ಹಾಗೂ ಸಿದ್ದರಾಮಯ್ಯನವರೇ ನಾಡಿನ ಹೆಮ್ಮೆಯ ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವನ ಪಾಠಗಳನ್ನು ನಿಮ್ಮದೇ ಸರ್ಕಾರ ನೇಮಿಸಿದ್ದ ಸಮಿತಿ ಪಠ್ಯದಿಂದ ತೆಗೆದುಹಾಕಿತ್ತು. ಇದನ್ನು ಬೆಂಬಲಿಸಿ ಇಂದು ಪ್ರತಿಭಟನೆ ಮಾಡುತ್ತಿದ್ದೀರಾ? ಇದನ್ನೂ ಓದಿ: ರಾಜ್ಯಸಭೆ ಫೈಟ್‍ನಲ್ಲಿ ಟ್ವಿಸ್ಟ್ – ಕಾಂಗ್ರೆಸ್, ಜೆಡಿಎಸ್ ಮಧ್ಯೆ ‘ಆತ್ಮಸಾಕ್ಷಿ’ ಫೈಟ್

    ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ಪಠ್ಯವನ್ನು ಕಿತ್ತು ಹಾಕಿತ್ತು. ಇದನ್ನು ಸಮರ್ಥಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

  • ಕನ್ನಡದಲ್ಲಿ ಇಲ್ಲ, ಕನ್ನಡಿಗರೇ ಆಗಿದ್ದ  ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸಿನಿಮಾ

    ಕನ್ನಡದಲ್ಲಿ ಇಲ್ಲ, ಕನ್ನಡಿಗರೇ ಆಗಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸಿನಿಮಾ

    ಮೂಲತಃ ಮಲಯಾಳಿ ಆದರೂ, ಕನ್ನಡಿಗರೇ ಆಗಿ ಹೋಗಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಬದುಕಿನ ಕುರಿತಾಗಿ ‘ಮೇಜರ್’ ಹೆಸರಿನಲ್ಲಿ ಸಿನಿಮಾ ನಿರ್ಮಾಣವಾಗಿದೆ. ಈ ಸಿನಿಮಾ ಇದೇ ಜೂ.03ರಂದು ದೇಶಾದ್ಯಂತ ರಿಲೀಸ್ ಆಗುತ್ತಿದೆ. ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದರೂ, ಕನ್ನಡದಲ್ಲಿ ಮಾತ್ರ ಬೇರೆ ಭಾಷೆಯಲ್ಲೇ ಈ ಸಿನಿಮಾ ನೋಡಬೇಕಂತೆ. ಇದನ್ನೂ ಓದಿ:ಕಿಯಾರಾಗೆ ಸಿದ್ಧಾರ್ಥ್ ಮಲ್ಹೋತ್ರಾ ಕ್ಲಾಸ್: ಅಷ್ಟಕ್ಕೂ ಆಗಿದ್ದೇನು?

    ಬೆಂಗಳೂರಿನಲ್ಲೇ ಬಾಳಿ ಬದುಕಿ, ಕೊನೆಗೆ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಹುತಾತ್ಮರಾದಾಗಲೂ ಅವರ ಸಮಾಧಿಯನ್ನು ಬೆಂಗಳೂರಿನಲ್ಲೇ ಮಾಡಲಾಗಿದೆ. ಈ ಹೊತ್ತಿಗೂ ಸಂದೀಪ್ ಅವರ ಕುಟುಂಬ ಬೆಂಗಳೂರಿನಲ್ಲೇ ನೆಲೆಯೂರಿದೆ. ಕನ್ನಡಿಗರ ನೆಚ್ಚಿನ ಮೇಜರ್ ಆಗಿದ್ದ ಸಂದೀಪ್ ಅವರ ಸಿನಿಮಾವನ್ನು ಕನ್ನಡ ಭಾಷೆಯಲ್ಲಿ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ.

    ಈ ಸಿನಿಮಾದ ಪ್ರಚಾರಕ್ಕೆಂದು ಸಿನಿಮಾ ತಂಡ ಬೆಂಗಳೂರಿಗೂ ಬಂದಿತ್ತು. ಈ ಸಂದರ್ಭದಲ್ಲಿ ಕನ್ನಡದಲ್ಲಿ ಯಾಕೆ ಈ ಸಿನಿಮಾ ಬರುತ್ತಿಲ್ಲ ಎಂಬ ಪ್ರಶ್ನೆ ಕೂಡ ಚಿತ್ರತಂಡಕ್ಕೆ ಎದುರಾಯಿತು. ಸ್ಸಾರಿ ಮಾಡುವುದಕ್ಕೆ ಆಗಲಿಲ್ಲ, ಕ್ಷಮಿಸಿ ಎಂದಷ್ಟೇ ಉತ್ತರ ಸಿಕ್ಕಿತು. ಕನ್ನಡಿಗರೇ ಆಗಿದ್ದ ಸಂದೀಪ್ ಅವರ ಬಗ್ಗೆ ಕನ್ನಡದಲ್ಲೇ ಸಿನಿಮಾ ನೋಡಬೇಕು ಎನ್ನುವುದು ಹಲವರ ಅಭಿಪ್ರಾಯವಾಗಿತ್ತು. ಆದರೆ, ಈ ಸಿನಿಮಾವನ್ನು ಪರಭಾಷೆಯಲ್ಲಿ ನೋಡುವುದು ಅನಿವಾರ್ಯವಾಗಿದೆ.

    ಸಂದೀಪ್ ಉನ್ನಿಕೃಷ್ಣ ಅವರ ಬಯೋಪಿಕ್ ಗೆ ‘ಮೇಜರ್’ ಎಂದು ಹೆಸರಿಡಲಾಗಿದೆ. ತೆಲುಗಿನ ನಟ ಅರಿವಿ ಶೇಷ ಅವರು ಸಂದೀಪ್ ಅವರ ಪಾತ್ರವನ್ನು ನಿರ್ವಹಿಸಿದ್ದಾರೆ. ಖ್ಯಾತ ತೆಲುಗು ನಟ ಪ್ರಿನ್ಸ್ ಮಹೇಶ್ ಬಾಬು ಅವರು ಈ ಸಿನಿಮಾದ ಹಿಂದಿದ್ದಾರೆ.

  • ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತು ಸಿನಿಮಾ: ಸಂದೀಪ್ ತಂದೆಯ ಪಾತ್ರದಲ್ಲಿ ಪ್ರಕಾಶ್ ರೈ

    ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತು ಸಿನಿಮಾ: ಸಂದೀಪ್ ತಂದೆಯ ಪಾತ್ರದಲ್ಲಿ ಪ್ರಕಾಶ್ ರೈ

    ದಿಮೂರು ವರ್ಷಗಳ ಹಿಂದೆ ಮುಂಬೈನ ತಾಜ್ ಹೋಟೆಲ್ ನಲ್ಲಿ ನಡೆದ ಟೆರರ್ ಅಟ್ಯಾಕ್ ನಲ್ಲಿ ಪ್ರಾಣ ತೆತ್ತ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತಾಗಿ ತೆಲುಗುನಲ್ಲಿ ಸಿನಿಮಾವೊಂದು ತಯಾರಾಗಿದೆ. ಅವರ ತ್ಯಾಗ, ಬಲಿದಾನಗಳ ಕಥಾ ಹಂದರ ಹೊತ್ತ ತಯಾರಾಗುತ್ತಿರುವ ಸಿನಿಮಾದಲ್ಲಿ ಸಂದೀಪ್ ಅವರ ಲೈಫ್ ಜರ್ನಿ ಕೂಡ ಇದೆಯಂತೆ. ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ಅಡವಿ ಶೇಷು ಕಾಣಿಸಿಕೊಂಡಿದ್ದರೆ, ಸಂದೀಪ್ ಅವರ ತಂದೆಯಾಗಿ ಕನ್ನಡಿಗ ಪ್ರಕಾಶ್ ರೈ ನಟಿಸಿದ್ದಾರೆ. ಇದನ್ನೂ ಓದಿ : ಮಗುವಿಗಾಗಿ ಪ್ಲ್ಯಾನ್ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್

    ಮುಂಬೈ ತಾಜ್ ಹೋಟೆಲ್ ಹೈಜಾಕ್ ಮಾಡಿ, ಸಾವು ನೋವಿಗೆ ಕಾರಣವಾದ ಆ ಘಟನೆಯನ್ನು 26/11 ಅಟ್ಯಾಕ್ ಎಂದೇ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಈ ಕರಾಳ ಅಧ್ಯಾಯವನ್ನು ಸಿನಿಮಾ ಮಾಡಿ, ಅದನ್ನು ತೆರೆಗೆ ತರುತ್ತಿದ್ದಾರೆ ಪ್ರಿನ್ಸ್ ಮಹೇಶ್ ಬಾಬು ಪ್ರೊಡಕ್ಷನ್ ಕಂಪೆನಿ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಸಂದೀಪ್ ಉನ್ನಿಕೃಷ್ಣನ್ ಮೂಲತಃ ಕೇರಳದವರು. ಆದರೆ, ವಾಸವಾಗಿದ್ದು ಬೆಂಗಳೂರಿನಲ್ಲಿ ಹಾಗಾಗಿ ಕೇರಳ, ಕರ್ನಾಟಕ ಸೇರಿದಂತೆ ಹಲವು ಕಡೆ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆಯಂತೆ. ಈಗಾಗಲೇ ಟ್ರೈಲರ್ ರಿಲೀಸ್ ಆಗಿದ್ದು, ನೋಡುಗರು ಟ್ರೈಲರ್ ಗೆ ಫಿದಾ ಆಗಿದ್ದಾರೆ. ದೇಶಭಕ್ತಿ ಸಾರುವಂತಹ ಇಂತಹ ಸಿನಿಮಾಗಳು ಇನ್ನಷ್ಟು ಬರಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ : ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

    ಈ ಸಿನಿಮಾಗಾಗಿ ಸತತ ಹತ್ತು ವರ್ಷಗಳಿಂದ ಪ್ರಯತ್ನ ನಡೆದಿದೆಯಂತೆ. ಕೊನೆಗೂ ಸಂದೀಪ್ ಅವರ ತಂದೆ ತಾಯಿಯನ್ನು ಒಪ್ಪಿಸಿ, ಇಂಥದ್ದೊಂದು ಪಾತ್ರದಲ್ಲಿ ನಾನು ಕಾಣಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ ಶೇಷು. ಈ ಚಿತ್ರಕ್ಕೆ ಶಶಿ ಕಿರಣ್ ಅವರು ನಿರ್ದೇಶನ ಮಾಡಿದ್ದು ಪ್ರಿನ್ಸ್ ಮಹೇಶ್ ಬಾಬು ನಿರ್ಮಾಪಕರು. ಹೀಗಾಗಿ ಹಿಂದಿ, ತೆಲುಗು ಮತ್ತು ಮಲಯಾಳಂನಲ್ಲಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರಕ್ಕೆ ಮೇಜರ್ ಎಂದು ಹೆಸರಿಡಲಾಗಿದೆ.