Tag: ಸಂಧಾನ

  • ಸುದೀಪ್-ಎನ್.ಕುಮಾರ್ ಸಂಧಾನ: ಇವತ್ತು ಡೌಟು, ನಾಳೆಗೆ ಡೇಟು

    ಸುದೀಪ್-ಎನ್.ಕುಮಾರ್ ಸಂಧಾನ: ಇವತ್ತು ಡೌಟು, ನಾಳೆಗೆ ಡೇಟು

    ನಿರ್ಮಾಪಕ ಎನ್.ಕುಮಾರ್ ಮತ್ತು ಕಿಚ್ಚ ಸುದೀಪ್ (Sudeep) ನಡುವಿನ ಸಂಧಾನ (Sandhana) ಸಭೆ ಇಂದು ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ನಿನ್ನೆ ಬರೋಬ್ಬರಿ ಏಳು ಗಂಟೆಗಳ ಕಾಲ ನಟ ರವಿಚಂದ್ರನ್ (Ravichandran) ಈ ಇಬ್ಬರನ್ನೂ ಕೂರಿಸಿಕೊಂಡು ಮಾತನಾಡಿದ್ದಾರೆ. ಮಧ್ಯಾಹ್ನ ಶುರುವಾದ ಸಭೆ ರಾತ್ರಿ 10.30ಕ್ಕೆ ಮುಗಿದಿದೆ ಎಂದು ಹೇಳಲಾಗುತ್ತಿದೆ. ಆದರೂ, ಒಮ್ಮತಕ್ಕೆ ಬಾರದೇ ಇರುವ ಕಾರಣಕ್ಕಾಗಿ ಇಂದು ಮತ್ತೆ ಸಭೆ ಇದೆ ಎನ್ನುವ ಮಾಹಿತಿ ಇತ್ತು.

    ಇಂದು ಮತ್ತೆ ಸಭೆ ಸೇರುವುದು ಅನುಮಾನ ಎನ್ನಲಾಗುತ್ತಿದೆ. ಸುದೀಪ್ ಮತ್ತು ಕುಮಾರ್ ಆಡಿದ ಮಾತುಗಳನ್ನು ಕೇಳಿಸಿಕೊಂಡಿರುವ ರವಿಚಂದ್ರನ್, ಕೇವಲ ಮಾತುಗಳನ್ನಷ್ಟೇ ಕೇಳದ ಅದಕ್ಕಿರುವ ಪೂರಕ ಸಾಕ್ಷಿಯನ್ನೂ ಪರಿಶೀಲಿಸಿದ್ದಾರಂತೆ. ಇನ್ನೂ ಕೆಲವು ವಿಷಯಗಳಿಗೆ ಅಸ್ಪಷ್ಟ ಚಿತ್ರಣ ಸಿಕ್ಕಿರುವ ಕಾರಣದಿಂದಾಗಿ ಮತ್ತೆ ಸಭೆ ಮಾಡುವ ಮಾತುಗಳಾಗಿತ್ತು. ಅದರಂತೆ ನಾಳೆ ಸಂಧಾನದ ಸಭೆ ನಡೆಯಲಿದೆ.

    ಸುದೀಪ್ ಮೇಲೆ ನಿರ್ಮಾಪಕ ಎನ್.ಕುಮಾರ್ (N. Kumar) ಮಾಡಿರುವ ಆರೋಪದ ಕುರಿತಂತೆ ನಿನ್ನೆಯಿಂದ ರವಿಚಂದ್ರನ್ ನಿವಾಸದಲ್ಲಿ ಸಂಧಾನ ಸಭೆ ನಡೆಯುತ್ತಿದೆ. ನಿನ್ನೆ ಈ ಸಭೆಗೆ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು. ತಡರಾತ್ರಿವರೆಗೂ ನಡೆದ ಸಭೆಗೆ ಶಿವಣ್ಣ ಹಾಜರಾಗಲಿಲ್ಲ. ಆದರೆ, ಈ ಕುರಿತಂತೆ ಶಿವರಾಜ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಕಾಶ್ಮೀರದಲ್ಲಿ ಸ್ಟೈಲ್‌ ಆಗಿ ಕಾಣಿಸಿಕೊಂಡ ಸಾನ್ಯ ಅಯ್ಯರ್

    ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಜ್ ಕುಮಾರ್, ‘ರವಿದು ನಂದು ಬೇರೆ ಬೇರೆ ಮಾತಿಲ್ಲ. ಅವರು ಏನು ಹೇಳಿದ್ರೆ ಅದೇ ನನ್ನ ಮಾತು. ಎಲ್ಲಾ ಒಳ್ಳೆಯ ರೀತಿಯಲ್ಲಿ ಆಗ್ಬೇಕು ಅನ್ನೊದು ನನ್ನ ಆಸೆ. ಆದಷ್ಟು ಬೇಗ ಕುಮಾರ್-ಸುದೀಪ್ ನಡುವಿನ ಸಮಸ್ಯೆ ಬಗೆಹರಿಯಬೇಕು. ಸಿನಿಮಾ ಅನ್ನುವುದು ಒಂದು ಕುಟುಂಬ. ಸಮಸ್ಯೆ ಆಗೋದು ಸಹಜ. ಆದಷ್ಟು ಬೇಗ ಸರಿ ಹೋಗಲಿ’ ಎಂದಿದ್ದಾರೆ.

     

    ಆದರೆ, ನಿನ್ನೆಯ ಸಂಧಾನ ಯಶಸ್ವಿ ಆಗಿಲ್ಲ ಎಂದು ಹೇಳಲಾಗುತ್ತಿದೆ. ಕಿಚ್ಚ ಸುದೀಪ್ ಮತ್ತು ಕುಮಾರ್ ಪ್ರತ್ಯೇಕವಾಗಿ ತಮ್ಮ ನೋವುಗಳನ್ನು ಹೇಳಿಕೊಂಡಿದ್ದು, ಬಹುಶಃ ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಅಂದಾಜಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತನ್ನದೇ ದೇಶದ ಸಂಧಾನಕಾರನನ್ನು ಹತ್ಯೆಗೈದ ಉಕ್ರೇನ್

    ತನ್ನದೇ ದೇಶದ ಸಂಧಾನಕಾರನನ್ನು ಹತ್ಯೆಗೈದ ಉಕ್ರೇನ್

    ಕೀವ್: ಉಕ್ರೇನ್ ಮತ್ತು ರಷ್ಯಾ ನಡುವೆ 10 ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದ್ದು, ದಿನಕ್ಕೊಂದು ಹೊಸ ಸುದ್ದಿ ಕೇಳಿಬರುತ್ತಿದೆ. ಇಂದು ತನ್ನದೇ ದೇಶದ ಸಂಧಾನಕಾರನನ್ನು ಉಕ್ರೇನ್ ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

    ಉಕ್ರೇನ್ ನಿನ್ನೆಯೂ ಸಹ ತನ್ನ ದೇಶವನ್ನು ರಷ್ಯಾದಿಂದ ಬಚಾವ್ ಮಾಡಲು ತನ್ನದೇ ಹಡಗನ್ನು ಸ್ಫೋಟಿಸಿಕೊಂಡಿತ್ತು. ಆದರೆ ಇಂದು ಉಕ್ರೇನ್ ಸಂಧಾನಕಾರ ರಷ್ಯಾ ಜೊತೆಗೆ ಕೈ ಜೋಡಿಸಿದ್ದಾನೆ ಎಂದು ಶಂಕೆ ಹಿನ್ನೆಲೆಯಲ್ಲಿ ಆತನನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಇಬ್ಬರು ವಿದ್ಯಾರ್ಥಿಗಳು ತಾಯ್ನಾಡಿಗೆ

    10 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಯುದ್ಧಕ್ಕೆ ರಷ್ಯಾ 6 ಗಂಟೆ ಬ್ರೇಕ್ ಕೊಟ್ಟಿತ್ತು. ಈ ನಡುವೆಯೂ ಸಹ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಿದ್ದಾರೆ. ಇದು ನಿಯಮ ಉಲ್ಲಂಘನೆ ಎಂದು ತಿಳಿದಿದ್ದರೂ ರಷ್ಯಾ ಈ ಕೃತ್ಯವನ್ನು ಮಾಡಿದೆ. ಇದಕ್ಕೆ ತನ್ನ ದೇಶದ ಸಂಧಾನಕನೇ ಕಾರಣವೆಂದು ಶಂಕಿಸಿದ ಉಕ್ರೇನ್ ಅವನ ಮೇಲೆಯೇ ದಾಳಿ ಮಾಡಿ ಕೊಂದಿದ್ದಾರೆ. ಒಂದು ಕಡೆ ಕದನ ವಿರಾಮ ಇದ್ದರೂ, ಇನ್ನೊಂದು ಕಡೆ ತೀವ್ರ ದಾಳಿ ನಡೆಯುತ್ತಿದೆ.

  • ಸುಧಾಕರ್ ಜೊತೆಗಿನ ಸಂಧಾನ ಯತ್ನ ವಿಫಲ – ಸಿದ್ದರಾಮಯ್ಯ ಮನೆಗೆ ವಾಪಸ್ ಆದ ಎಂಟಿಬಿ

    ಸುಧಾಕರ್ ಜೊತೆಗಿನ ಸಂಧಾನ ಯತ್ನ ವಿಫಲ – ಸಿದ್ದರಾಮಯ್ಯ ಮನೆಗೆ ವಾಪಸ್ ಆದ ಎಂಟಿಬಿ

    ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದ ಶಾಸಕ ಸುಧಾಕರ್ ಅವರ ಮನವೊಲಿಕೆ ಯತ್ನ ವಿಫಲವಾಗಿದೆ ಎಂಬ ಮಾಹಿತಿ ಲಭಿಸಿದೆ. ಸಚಿವ ಜಮೀರ್ ಅಹಮದ್ ಅವರೊಂದಿಗೆ ತೆರಳಿದ್ದ ಸಚಿವ ಎಂಟಿಬಿ ನಾಗರಾಜ್ ಮತ್ತೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ವಾಪಸ್ ಆಗಿದ್ದಾರೆ.

    ನಿನ್ನೆ ತಡರಾತ್ರಿಯಿಂದ ಆರಂಭವಾಗಿದ್ದ ರೆಬೆಲ್ ಶಾಸಕರ ಸಂಧಾನ ಯತ್ನ ದಿನ ಪೂರ್ತಿ ವಿವಿಧ ಬೆಳವಣಿಗೆಗಳಿಗೆ ಕಾರಣವಾಗಿತ್ತು. ಸುಮಾರು 3 ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಂಧಾನ ಸಭೆಯಲ್ಲಿ ಎಂಟಿಬಿ ನಾಗರಾಜ್ ಯಾವುದೇ ದೃಢ ನಿರ್ಧಾರಕ್ಕೆ ಬಂದಿರಲಿಲ್ಲ. ಅಲ್ಲದೇ ತಮ್ಮೊಂದಿಗೆ ರಾಜೀನಾಮೆ ನೀಡಿದ್ದ ಡಾ. ಸುಧಾಕರ್ ಅವರ ಮನವೊಲಿಕೆಗೆ ಎಂಟಿಬಿ ನಾಗರಾಜ್ ತೆರಳಿದ್ದರು. ಈ ವೇಳೆ ಅವರಿಗೆ ಜಮೀರ್ ಅಹಮದ್ ಸಾಥ್ ನೀಡಿದ್ದರು.

    ಇಬ್ಬರು ಶಾಸಕರು ಒಂದೇ ಬಾರಿ ರಾಜೀನಾಮೆ ನೀಡಿದ್ದ ಕಾರಣ ಹಾಗೂ ತಮ್ಮ ತೀರ್ಮಾನಕ್ಕೆ ಡಾ. ಸುಧಾಕರ್ ಅವರೊಂದಿಗೆ ಮಾತುಕತೆ ನಡೆಸಲೇ ಬೇಕು ಎಂದು ಎಂಟಿಬಿ ನಾಗರಾಜ್ ಅವರು ಹೇಳಿದ್ದರು. ಸಿದ್ದರಾಮಯ್ಯ ಅವರ ನಿವಾಸಕ್ಕೆ ಚರ್ಚೆಗೆ ಆಗಮಿಸಲು ಸುಧಾಕರ್ ನಿರಾಕರಿಸಿದ್ದಾರೆ. ಬೆಳಗ್ಗೆಯಿಂದಲೂ ಫೋನ್ ಸ್ವಿಚ್ ಆಫ್ ಮಾಡಿಕೊಂಡಿರುವ ಸುಧಾಕರ್ ಅವರ ಸಂಪರ್ಕ ಮಾಡಿದ ಸಂದರ್ಭದಲ್ಲಿ ಸ್ಪಷ್ಟ ಸಂದೇಶ ನೀಡಿರುವ ಅವರು, ಯಾವ ಕಾರಣಕ್ಕೂ ಸಂಧಾನಕ್ಕೆ ನಾನು ಬರಲ್ಲ ಹಾಗೂ ರಾಜೀನಾಮೆ ಹಿಂಪಡೆಯುವುದಿಲ್ಲ. ರಾಜೀನಾಮೆ ನೀಡಿದ್ದ ದಿನ ನನ್ನ ಮೇಲೆ ಹಲ್ಲೆ ಸಹ ಮಾಡಿದ್ದಾರೆ. ನನ್ನ ದಾರಿಗೆ ನನಗೆ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಸುಧಾಕರ್ ಮನವೊಲಿಕೆ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಎಂಟಿಬಿ ನಾಗರಾಜ್ ಅವರು ಸ್ಪಷ್ಟಪಡಿಸಿದ್ದಾರೆ. ಇತ್ತ ಎಂಟಿಬಿ ನಾಗರಾಜ್ ಅವರಿಗೆ ಸ್ಪಷ್ಟ ಸಂದೇಶ ನೀಡಿರುವ ಸುಧಾಕರ್ ಅವರು ಬಳಿಕ ಮುಂಬೈಗೆ ತೆರಳಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಬೆಳಗ್ಗೆಯಿಂದಲೂ ಯಾರ ಸಂಪರ್ಕಕ್ಕೂ ಸಿಗದ ಸುಧಾಕರ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಬೆಂಗಳೂರು ಅಂತರಾಷ್ಟ್ರಿಯ ವಿಮಾನ ನಿಲ್ದಾಣದಿಂದ ನೇರ ಮುಂಬೈಗೆ ತೆರಳಿದ್ದಾರೆ. ಮೊದಲೇ ಮೈತ್ರಿ ಸರ್ಕಾರದ ಮೇಲೆ ಅಸಮಾಧಾನ ಹೊಂದಿದ್ದ ಸುಧಾಕರ್ ಅವರ ಮೇಲೆ ಕಾಂಗ್ರೆಸ್ ನಾಯಕರು ಹಲ್ಲೆ ನಡೆಸಿದ್ದು ಕೂಡ ಅವರ ಸ್ಪಷ್ಟ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ರಾಜೀನಾಮೆ ನೀಡುವುದಕ್ಕೂ ಮುನ್ನವೇ ಪಕ್ಷ ತೊರೆಯುವ ಬಗ್ಗೆ ಸುಧಾಕರ್ ಸಾಕಷ್ಟು ಚಿಂತನೆ ನಡೆಸಿದ್ದರು.

    ಈಗಾಗಲೇ ಅಸಮಾಧಾನಿತ ಶಾಸಕರು ಮುಂಬೈನಲ್ಲಿ ಇರುವ ಕಾರಣ ಸುಧಾಕರ್ ಅವರನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಇತ್ತ ಪ್ರತಿಬಾರಿಯೂ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದ ಎಂಟಿಬಿ ನಾಗರಾಜ್ ಅವರು ಈಗ ಯಾವ ನಿರ್ಧಾರ ಮಾಡುತ್ತಾರೆ. ಸುಧಾಕರ್ ಅವರಂತೆ ರಾಜೀನಾಮ ಹಿಂಪಡೆಯದಿರುವ ನಿರ್ಧಾರ ಮಾಡುತ್ತಾರಾ ಅಥವಾ ವಾಪಸ್ ಪಡೆದು ಕಾಂಗ್ರೆಸ್‍ನೊಂದಿಗೆಯೇ ಇರುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ. ಆದರೆ ಸಿದ್ದರಾಮಯ್ಯ ಮನೆಯಿಂದ ತೆರಳುವುದಕ್ಕೂ ಮುನ್ನ ಮಾತನಾಡಿದ್ದ ಸಚಿವ ಜಮೀರ್, ಸಂಧಾನ ಯಶಸ್ವಿಯಾಗಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು. ಈಗ ಅವರಿಗೂ ಭಾರೀ ಹಿನ್ನಡೆಯಾಗಿದೆ.

  • ಕಾರ್ಯಕರ್ತರ ಕಿತ್ತಾಟದ ನಡುವೆಯೂ ಕೋಲಾರ ನಾಯಕರ ಮುನಿಸಿಗೆ ತೇಪೆ ಹಚ್ಚಿ ಡಿಕೆಶಿ ಸಂಧಾನ!

    ಕಾರ್ಯಕರ್ತರ ಕಿತ್ತಾಟದ ನಡುವೆಯೂ ಕೋಲಾರ ನಾಯಕರ ಮುನಿಸಿಗೆ ತೇಪೆ ಹಚ್ಚಿ ಡಿಕೆಶಿ ಸಂಧಾನ!

    – ಕೋಲಾರ ಕಾಂಗ್ರೆಸ್ಸಿನಲ್ಲಿ ನಿಲ್ಲದ ಭಿನ್ನಮತ
    – ಸಂಸದರ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು
    – ಶಿಡ್ಲಘಟ್ಟ ಕಾಂಗ್ರೆಸ್ ಕಚೇರಿಯಲ್ಲಿ ಸಂಧಾನ

    ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕೋಲಾರ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ.

    ಸಂಸದ ಕೆ.ಎಚ್ ಮುನಿಯಪ್ಪರ ಪಕ್ಷ ವಿರೋಧಿ ಚಟುವಟಿಕೆಗಳಿಂದ ಕೆಂಡಾಮಂಡಲರಾಗಿರುವ ಕಾಂಗ್ರೆಸ್ ನಾಯಕರು ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಮುಂದಾಗಿರೋದು ಮಗ್ಗಲು ಮುಳ್ಳಾಗಿದೆ. ವಿರೋಧ ಜಾಸ್ತಿಯಾಗುತ್ತಿರುವುದನ್ನು ಕಂಡ ಕೆ.ಎಚ್ ಮುನಿಯಪ್ಪ ಟ್ರಬಲ್ ಶೂಟರ್ ಡಿಕೆಶಿ ಮುಖಾಂತರ ತೇಪೆ ಹಾಕೋ ಕೆಲಸಕ್ಕೆ ಮುಂದಾಗಿ ಇಂದು ಸಂಧಾನ ಮಾಡಿದ್ದಾರೆ.

    ಕೋಲಾರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ಎಚ್ ಮುನಿಯಪ್ಪ ವಿರುದ್ಧ ಮುನಿಸಿಕೊಂಡಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ವಿ. ಮುನಿಯಪ್ಪ ನಡುವಿನ ಮುನಿಸು ದೂರ ಮಾಡಲು ಇಂದು ಡಿಕೆ ಶಿವಕುಮಾರ್ ಮುಂದಾಗಿದ್ದರು. ಶಿಡ್ಲಘಟ್ಟ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುನಿಯಪ್ಪದ್ವಯರ ನಡುವೆ ಕಾರ್ಯಕರ್ತರ ಸಮ್ಮುಖದಲ್ಲೇ ಭಿನ್ನಮತ ಶಮನಕ್ಕೆ ಮುಂದಾಗಿದ್ರು. ಆದ್ರೆ ಆರಂಭದಲ್ಲೇ ಕೆ.ಎಚ್ ಮುನಿಯಪ್ಪ ವಿರುದ್ಧ ಧಿಕ್ಕಾರಗಳ ಘೋಷಣೆಗಳು ಮೊಳಗಿದವು.

    ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಮುನಿಯಪ್ಪರ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಬಾರಿ ಕೆ.ಎಚ್ ಮುನಿಯಪ್ಪರಿಗೆ ಬೆಂಬಲಿಸಬಾರದೆಂದು ಕಾರ್ಯಕರ್ತರು ಒತ್ತಾಯಿಸಿದಾಗ ಸಭೆಯಲ್ಲಿ ತಳ್ಳಾಟ ನೂಕಾಟ ನಡೆದು, ಸಚಿವ ಡಿ.ಕೆ.ಶಿವಕುಮಾರ್, ಸಂಸದ ಕೆ.ಎಚ್.ಮುನಿಯಪ್ಪ ಹಾಗೂ ವಿ.ಮುನಿಯಪ್ಪರ ಸಮ್ಮುಖದಲ್ಲೇ ಕೈ ಕೈ ಮೀಲಾಯಿಸುವ ಹಂತಕ್ಕೆ ತಲುಪಿತು. ಈ ಮಧ್ಯೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವಂತಾಯಿತು.

    ಸಂಸದರ ವಿರುದ್ಧ ಕಿಡಿ:
    ಸಭೆಯಲ್ಲಿ ಮಾತನಾಡಿದ ಶಾಸಕ ವಿ. ಮುನಿಯಪ್ಪ ಕೆ.ಎಚ್ ಮುನಿಯಪ್ಪನವರಿಗೆ 7 ಚುನಾವಣೆಗಳಲ್ಲೂ ನಾವು ದುಡಿದು ರಾಜಕೀಯ ಸ್ಥಾನ ಮಾನ ನೀಡಿದರೆ ನಮಗೆ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದರು. ಕೆ.ಎಚ್ ಮುನಿಯಪ್ಪನವರೇ ನಿಮ್ಮಿಂದ ನಮಗೇನು ಆಗಬೇಕಿಲ್ಲ. ನಾನು ಸಂಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೆರವಾದರು. ಅನುಕೂಲ ಪಡೆದ ಪುಣ್ಯಾತ್ಮ ಕೆ.ಎಚ್ ಮುನಿಯಪ್ಪ ನಮ್ಮ ವಿರೋಧಿಗಳ ಜೊತೆ ಸೇರಿ ಸಂಭ್ರಮಿಸಿದರೆಂದು ಕೆಂಡಾಮಂಡಲರಾದರು. ಕೆ.ಎಚ್ ಮುನಿಯಪ್ಪ ಕುತಂತ್ರ ರಾಜಕಾರಣಿ ಎಂದು ಹಿರಿಯರು ಹೇಳಿದ್ದರು ಆದರೂ ನಾನು ನಂಬಲಿಲ್ಲ. ಮಗುವಿಗೆ ತಾಯಿ ಜನ್ಮ ನೀಡಬೇಕಾದರೆ ಎಷ್ಟು ನೋವು ತಿಂತಾರೋ ಅಷ್ಟೇ ನೋವನ್ನು ನಾನು ಈ ಪುಣ್ಯಾತ್ಮನಿಂದ ತಿಂದಿದ್ದೇನೆ ಎಂದು ನೊಂದು ತಮ್ಮ ಆಕ್ರೋಶವನ್ನು ಹಂಚಿಕೊಂಡರು. ಈ ವೇಳೆ ಕಾರ್ಯಕರ್ತರು ಕೂಡ ವಿ.ಮುನಿಯಪ್ಪರ ಮಾತಿಗೆ ಧ್ವನಿಯಾದರು.

    ರಾಜಕೀಯ ನಿವೃತ್ತಿ ಸವಾಲ್
    ಕೋಲಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಚ್ ಮುನಿಯಪ್ಪ ಮಾತನಾಡಿ ವಿ. ಮುನಿಯಪ್ಪ ಶಾಸಕರಾಗೋ ಮೊದಲೇ ನಾನು ತಾಲೂಕು ಪಂಚಾಯತಿ ಸದಸ್ಯನಾಗಿದ್ದೆ. ಅವರ ಗೆಲುವಿಗೆ ನಾನು ಶ್ರಮಿಸಿದ್ದೇನೆ. ನಾನು ಮುನಿಯಪ್ಪರ ವಿರುದ್ಧ ಕೆಲಸ ಮಾಡಿಲ್ಲ. ಅವರಿಗೆ ಮತ ಹಾಕಬೇಡಿ ಅಂತ ನಾನೇಳಿರೋದು ಸಾಬೀತಾದರೆ ರಾಜಕೀಯ ನಿವೃತ್ತಿಯಾಗೋದಾಗಿ ಸವಾಲ್ ಹಾಕಿದರು. ಒಕ್ಕಲಿಗ ನಾಯಕರಲ್ಲಿ ವಿ.ಮುನಿಯಪ್ಪ ಕೂಡ ಹಿರಿಯರು ಅವರಿಗೆ ಸಚಿವ ಸ್ಥಾನ ನೀಡುವಂತೆ ನಾನು ಒತ್ತಾಯಿಸಿದ್ದೆ. ನಾನು ಅವರ ಋಣದಲ್ಲಿ ಇದ್ದೇನೆ. ಅವರಿಗೆ ದ್ರೋಹ ಮಾಡೋ ವ್ಯಕ್ತಿ ನಾನಲ್ಲ. ಸುಬ್ರಮಣಿ ಅಂತ ನಾಲ್ಕು ಜನ ಬೆಂಕಿ ಹಾಕೋವರಿಂದ ನಮ್ಮಿಬ್ಬರ ಮಧ್ಯೆ ವೈಮನಸ್ಸು ಮೂಡುವಂತಾಗಿದೆ ಎಂದಾಗ ವೇದಿಕೆಯಲ್ಲಿದ್ದ ಸುಬ್ರಮಣಿ ಕೆ.ಎಚ್ ಮುನಿಯಪ್ಪ ವಿರುದ್ಧ ಎದ್ದು ನಿಂತು ಕೆಂಡಾಮಂಡಲರಾದರು. ಆದರೂ ಕೆ.ಎಚ್ ಮುನಿಯಪ್ಪ ಎಲ್ಲರನ್ನೂ ಸಮಾಧಾನ ಪಡಿಸಿ ಓಲೈಕೆ ಮಾಡಿದ್ದು ವಿಶೇಷವಾಗಿತ್ತು.

    ಡಿಕೆಶಿ ಸಂಧಾನ ಸಫಲ:
    ಸಂಧಾನಕ್ಕೆ ಬಂದಿದ್ದ ಸಚಿವ ಡಿ.ಕೆ.ಶಿವಕುಮಾರ್ ನಾನು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವನು. ವರಿಷ್ಠರ ನಿರ್ಧಾರದಿಂದ ಹೊಂದಾಣಿಕೆ ಮಾಡಿಕೊಂಡು ಹೋಗ್ತಿದ್ದೇನೆ. ಇಂತಹದರಲ್ಲಿ ಮುನಿಯಪ್ಪಧ್ವಯರ ಮಧ್ಯೆ ಇರೋ ಮುನಿಸು ಮರೆತು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕರೆ ನೀಡಿದರು. ಅಲ್ಲದೇ ಚುನಾವಣೆ ಮುಗಿದ ಬಳಿಕ ನಾನು ಕೆ.ಎಚ್ ಮುನಿಯಪ್ಪ ಸೇರಿ ವಿ. ಮುನಿಯಪ್ಪರಿಗೆ ಮಂತ್ರಿ ಮಾಡೋ ಭರವಸೆ ನೀಡೋ ಮೂಲಕ ತೇಪೆ ಹಾಕುವ ಕೆಲಸ ಮಾಡಿದರು.

  • ಅರ್ಜುನ್ ಸರ್ಜಾ- ಶೃತಿ ಹರಿಹರನ್ ಸಂಧಾನಕ್ಕೆ 1.5 ಕೋಟಿ ರೂ. ಬೇಡಿಕೆ!

    ಅರ್ಜುನ್ ಸರ್ಜಾ- ಶೃತಿ ಹರಿಹರನ್ ಸಂಧಾನಕ್ಕೆ 1.5 ಕೋಟಿ ರೂ. ಬೇಡಿಕೆ!

    – ಬೇಳೆ ಬೇಯಿಸಿಕೊಳ್ಳಲು ಮುಂದಾದ ಮೂರನೇ ವ್ಯಕ್ತಿ
    – ಅರ್ಜುನ್ ಸರ್ಜಾ ಮ್ಯಾನೇಜರ್ ಗೆ ಕರೆ ಮಾಡಿ ಬೇಡಿಕೆ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ಚರ್ಚೆಗೆ ಕಾರವಾಗಿದ್ದ ಶೃತಿ ಹರಿಹರನ್ ಮೀಟೂ ಆರೋಪ ಹೊಸ ತಿರುವುದು ಪಡೆದುಕೊಂಡಿದೆ. ಸಂಧಾನ ನೆಪದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ 1.5 ಕೋಟಿ ರೂ. ಬೇಡಿಕೆ ಇಟ್ಟಿದ್ದಾನೆ.

    ಮೀ ಟೂ ಆರೋಪ ಮಾಡಿದ ಮರುದಿನವೇ ಅನಾಮಿಕರೊಬ್ಬರು ನಟ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಕರೆ ಮಾಡಿದ್ದಾನೆ. ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಅಂತಾ ಬೇಡಿಕೆ ಇಟ್ಟಿದ್ದಾನೆ ಎಂದು ಶಿವಾರ್ಜುನ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೆ, ಮಾತಿಗೆ ಇಳಿದಿದ್ದಾನೆ. ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದಾನೆ. ಇಬ್ಬರ ಆರೋಪ ಪ್ರತ್ಯಾರೋಪದ ಲಾಭ ಪಡೆಯಲು ಮೂರನೇ ವ್ಯಕ್ತಿ ಈ ರೀತಿ ಕರೆ ಮಾಡಿರಬಹುದಾ ಎನ್ನುವ ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ಶೃತಿ ಪರ ಬ್ಯಾಟ್ ಬೀಸಿ ಈಗ ಉಲ್ಟಾ ಹೊಡೆದ ನಟ ಪ್ರಕಾಶ್ ರೈ

    ಏನಿದು ಪ್ರಕರಣ?:
    ಮ್ಯಾಗಜಿನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಹೇಳಿಕೊಂಡಿದ್ದರು. ಕಳೆದ ವರ್ಷ `ವಿಸ್ಮಯ’ ಚಿತ್ರದಲ್ಲಿ ನಾನು ಅರ್ಜುನ್ ಸರ್ಜಾ ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ “ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?” ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ “ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ” ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು. ಇದನ್ನು ಓದಿ: ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

    ನಟಿ ಶೃತಿ ಹರಿಹರನ್ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾಂಡಲ್‍ವುಡ್ ಹಿರಿಯ ಕಲಾವಿದರು ಅರ್ಜುನ್ ಸರ್ಜಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇತ್ತ ನಟ ಚೇತನ್ ಶೃತಿ ಹರಿಹರನ್ ಬೆಂಬಲಕ್ಕೆ ನಿಂತು ಕನ್ನಡ ಚಿತ್ರರಂಗದ ವಾಣಿಜ್ಯ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದ್ದರು. ಅಷ್ಟೇ ಅಲ್ಲದೆ ಚೇತನ್ ವಿರುದ್ಧ ಧ್ರುವಾ ಸರ್ಜಾ ಕೂಡ ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಾರಕಿಹೊಳಿ ಸಹೋದರರ ಸಂಧಾನಕ್ಕೆ ಮುಂದಾದ ಖರ್ಗೆ

    ಜಾರಕಿಹೊಳಿ ಸಹೋದರರ ಸಂಧಾನಕ್ಕೆ ಮುಂದಾದ ಖರ್ಗೆ

    ಬೆಂಗಳೂರು: ಬೆಳಗಾವಿಯ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸಹೋದರರ ಸಮಸ್ಯೆಯನ್ನು ದಮನ ಮಾಡಲು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಾಗಿದ್ದಾರೆ.

    ಈ ಕುರಿತು ಸದಾಶಿವನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯ ಸಮಸ್ಯೆಯಿಂದಾಗಿ ಎದ್ದಿರುವ ಸಮಸ್ಯೆಯನ್ನು ಕುರಿತು ಚರ್ಚಿಸಿ, ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡುತ್ತೇನೆ. ಅಲ್ಲದೇ ಅವರ ಗೊಂದಲ ಏನೆಂಬುದು ಸರಿಯಾಗಿ ನನಗೆ ಗೊತ್ತಿಲ್ಲ. ಅವರ ಜೊತೆ ಮಾತನಾಡಿ ಎಲ್ಲಾ ಬಗೆಹರಿಸುತ್ತೇನೆ. ರಮೇಶ್ ಜಾರಕಿಹೊಳಿಯವರು ಮೊದಲಿನಿಂದಲೂ ಕಾಂಗ್ರೆಸ್ಸಿನಲ್ಲಿಯೇ ಇದ್ದವರು, ಅವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಹೇಳಿದರು.

    ಬೆಳಗಾವಿಯ ಸಮಸ್ಯೆಯನ್ನು ಮಾಧ್ಯಮಗಳು ವೈಭವಿಕರಿಸಿ ಸೃಷ್ಟಿಸುತ್ತಿವೆ. ಬಿಜೆಪಿಯವರು ಸರ್ಕಾರ ರಚಿಸುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂಧಾನ ಯಶಸ್ವಿ ಎಂದ ಈಶ್ವರ ಖಂಡ್ರೆ

    ಸಂಧಾನ ಯಶಸ್ವಿ ಎಂದ ಈಶ್ವರ ಖಂಡ್ರೆ

    ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಸ್ಥಳೀಯ ನಾಯಕರ ನಡುವಿನ ಗೊಂದಲಕ್ಕೆ ವರಷ್ಠರ ಸಲಹೆ ಮೇರೆಗೆ ತೆರೆ ಎಳೆಯಲಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಈಶ್ವರ ಖಂಡ್ರೆ ಹೇಳಿದರು.

    ಪ್ರವಾಸಿ ಮಂದಿರದಲ್ಲಿ ಪಿಎಲ್‍ಡಿ ಬ್ಯಾಂಕಿನ ಚುನಾವಣಾ ಫಲಿತಾಂಶಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಜತೆಗೆ ಚರ್ಚಿಸಿ ಒಮ್ಮತ ನಿರ್ಣಯ ಕೈಗೊಳ್ಳಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಮಹಾದೇವ ಪಾಟೀಲ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಾಪುಸಾಹೇಬ ನಾಮಪತ್ರ ಸಲ್ಲಿಸಿದ್ದು, ಇವರೇ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಈ ಇಬ್ಬರ ಆಯ್ಕೆಗೆ ಸ್ಥಳೀಯ ನಾಯಕರ ಸಹಮತ ಇದೆ. ವರಿಷ್ಠರ ಸೂಚನೆ ಮೇರೆಗೆ ಈ ಆಯ್ಕೆ ನಡೆದಿದೆ. ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಜತೆಗೆ ಸೌಹಾರ್ದಯುತವಾಗಿ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದೇನೆ. ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಶಾಂತಿಯುತವಾಗಿ ಬಗೆಹರಿದಿದೆ. ಇದರಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರಲಿದೆ ಎಂದರು.

    ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಆದ ಬೆಳವಣಿಗೆಗೆ ಸಂವಹನ ಕೊರತೆಯೇ ಮುಖ್ಯ ಕಾರಣ. ನಮ್ಮ ಹಾಗೂ ಗ್ರಾಮೀಣ ಕ್ಷೇತ್ರದ ಶಾಸಕರ ನಡುವೆ ಸಂವಹನ ಕೊರತೆ ಉಂಟಾಗಿತ್ತು. ಇದೀಗ ಕೆಪಿಸಿಸಿ ಕಾರ್ಯದರ್ಶಿ ಅವರು ನಮ್ಮ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದ್ದಾರೆ. ನಮ್ಮ ವಾದ ಕೂಡ ಅವಿರೋಧ ಆಯ್ಕೆ ನಡೆಯಲಿ, ಚುನಾವಣೆ ಬೇಡ ಎಂದಾಗಿತ್ತು. ಹೀಗಾಗಿ ಒಮ್ಮತದ ಅಭಿಪ್ರಾಯದ ಮೇರೆಗೆ ಅವಿರೋಧ ಆಯ್ಕೆ ನಡೆದಿದೆ. ನಮ್ಮ ಭಾವನೆ, ವರ್ಚಸ್ಸಿಗೆ ಧಕ್ಕೆ ಆಗಿಲ್ಲ ಎಂದು ಹೇಳಿದರು.

    ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ನಾನು ವೈಯಕ್ತಿಕವಾಗಿ ಯಾವುದೇ ಹೇಳಿಕೆ ನೀಡುವುದಿಲ್ಲ. ಒಮ್ಮತದ ಆಯ್ಕೆಗೆ ನಮ್ಮ ಸಹಮತ ಇದೆ. ನಾನು ತಪ್ಪು ಮಾಡಿದ್ದರೆ ಭಗವಂತ ನೋಡಿಕೊಳ್ಳುತ್ತಾನೆ ಎಂದು ಪರೋಕ್ಷವಾಗಿ ಜಾರಕಿಹೊಳಿ ಕುಟುಂಬಕ್ಕೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ಬೆಂಗಳೂರು: ಪುತ್ರ ನಲಪಾಡ್ ನಿಂದ ಹಲ್ಲೆಗೆ ಒಳಗಾದ ವಿದ್ವತ್ ಅವರನ್ನು ನೋಡಲು ಶಾಂತಿನಗರದ ಶಾಸಕ ಹ್ಯಾರಿಸ್ ದಂಪತಿ ಇಂದು ರಾತ್ರಿ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದರು.

    ಈ ಸಂದರ್ಭದಲ್ಲಿ ವಿದ್ವತ್ ತಂದೆ ಲೋಕನಾಥ್ ಬಳಿ, ಏನೋ ಮಕ್ಕಳು ಹೊಡೆದಾಡಿಕೊಂಡಿದ್ದು ಬುದ್ಧಿ ಹೇಳೋಣ. ಕಳೆದ ಮೂರು ದಿನಗಳಿಂದ ಸತ್ತು ಬದುಕಿದ್ದೇನೆ. ಕೋರ್ಟ್ ನಲ್ಲಿ ಆಕ್ಷೇಪಣೆ ಹಾಕಬೇಡಿ, ನನ್ನ ಮಗನಿಗೆ ಜಾಮೀನು ಸಿಗುವುದಿಲ್ಲ ಎಂದು ಹೇಳಿ ಶಾಸಕ ಹ್ಯಾರಿಸ್ ಗೋಳಾಡಿದ್ದಾರೆ.

    ಹ್ಯಾರಿಸ್ ಅವರ ಈ ಸಂಧಾನಕ್ಕೆ ಮಣಿಯದ ಲೋಕನಾಥ್, ಶಾಸಕರ ಸಂಪೂರ್ಣ ಮಾತು ಕೇಳಿ ಡಾಕ್ಟರ್ ಕರೆದರು ಎಂದು ಹೇಳಿ ಒಳಗಡೆ ಹೋಗಿದ್ದಾರೆ. ಕೊನೆಗೆ ಸಂಧಾನ ಯಶಸ್ವಿಯಾಗದೇ ಸಪ್ಪೆ ಮೋರೆ ಹಾಕಿಕೊಂಡು ಹ್ಯಾರಿಸ್ ಹೊರಬಂದಿದ್ದಾರೆ.

    ಇಬ್ಬರ ಮಾತುಕತೆಯ ಬಳಿಕ ಮಾಧ್ಯಮಗಳು ಪ್ರತಿಕ್ರಿಯೆ ಕೇಳಲು ಮುಂದಾದಾಗ “ನೋ ನೋ” ಎಂದು ಹೇಳಿ ಹ್ಯಾರಿಸ್ ಕಾರು ಹತ್ತಿ ಹೊರಟು ಹೋಗಿದ್ದಾರೆ.

    ರಾತ್ರಿ ಬಿಜೆಪಿ ಮುಖಂಡ ಸಿಟಿ ರವಿ ಅವರು ವಿದ್ವತ್ ನೋಡಲು ಆಸ್ಪತ್ರೆಗೆ ಆಗಮಿಸಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ಫೆಕ್ಷನ್ ಆಗುತ್ತದೆ ಎನ್ನುವ ಕಾರಣಕ್ಕೆ ಐಸಿಯುಗೆ ಬಿಡಲಿಲ್ಲ. ಅವರ ತಂದೆಯ ಜೊತೆ ಮಾತನಾಡಿ ಆರೋಗ್ಯವನ್ನು ವಿಚಾರಿಸಿ ಬಂದಿದ್ದೇನೆ. ಪೋಷಕರು ಮಕ್ಕಳನ್ನು ಹೇಗೆ ಬೆಳೆಸಬೇಕು ಎನ್ನುವುದನ್ನು ಈ ಪ್ರಕರಣ ತಿಳಿಸಿಕೊಡುತ್ತದೆ ಎಂದು ಹೇಳಿದರು.

    https://youtu.be/JGFneQ-8OTg

    https://youtu.be/-BMml-Cw79E

    https://youtu.be/S8uFT-0fdmo

     

    https://www.youtube.com/watch?v=rByoOC1wzSk