Tag: ಸಂಪತ್ ಮೈತ್ರೇಯ

  • ‘ಕೆರೆಬೇಟೆ’ಗಾಗಿ ಖಾಕಿ ತೊಟ್ಟ ಸಂಪತ್ ಮೈತ್ರೇಯ

    ಸಿನಿಮಾ ಜಗತ್ತಿನಲ್ಲಿ ಬಹುಬೇಗನೆ ಅವಕಾಶ ಗಿಟ್ಟಿಸಿಕೊಂಡು, ಪ್ರಸಿದ್ಧಿ ಪಡೆಯಬೇಕೆಂಬ ಹಂಬಲ ಹೊತ್ತು ನೂಕುನುಗ್ಗಲಿನಲ್ಲಿ ನಿಂತವರು ಯಥೇಚ್ಚವಾಗಿ ಕಾಣಸಿಗುತ್ತಾರೆ. ಅಂಥಾ ಜಂಗುಳಿಯ ಇಕ್ಕೆಲದಲ್ಲಿ ತಮ್ಮದೇ ಆದ ಗುರಿ, ಗುಣಮಟ್ಟ ಕಾಯ್ದುಕೊಂಡ ಮತ್ತೊಂದು ಸಣ್ಣ ಗುಂಪೂ ಕಾಣ ಸಿಗುತ್ತದೆ. ಅದು ಯಾವ ಪಾತ್ರಕ್ಕಾದರೂ ಸೈ ಎಂಬ ನಟನಾ ಚಾತುರ್ಯವಿರುವವರ ಬಳಗ. ಸದ್ಯದ ಮಟ್ಟಿಗೆ ಆ ಬಳಗದ ಪ್ರತಿಭಾನ್ವಿತ ನಟನಾಗಿ ಹೊರಹೊಮ್ಮಿರುವವರು ಸಂಪತ್ ಮೈತ್ರೇಯ (Sampath Maitreya). ರಂಗಭೂಮಿಯನ್ನೇ ಉಸಿರಾಗಿಸಿಕೊಂಡು, ಸಾಮಾಜಿಕ ಸ್ಥಿತ್ಯಂತರಗಳಿಗೆ ರಂಗದ ಮೂಲಕ ಕಣ್ಣಾಗುತ್ತಾ ಬಂದಿರುವ ಸಂಪತ್ ಮೈತ್ರೇಯ, ಗೌರಿಶಂಕರ್ ನಾಯಕನಾಗಿ ನಟಿಸಿರುವ `ಕೆರೆಬೇಟೆ’ (Kerebete) ಚಿತ್ರದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಟಿಸಿದ್ದಾರೆ.

    ಈವತ್ತಿಗೂ ರಂಗಭೂಮಿಯನ್ನೇ ಮೊದಲ ಆದ್ಯತೆಯಾಗಿಸಿಕೊಂಡಿರುವ ಸಂಪತ್ ಮೈತ್ರೇಯ, ಕಿರುತೆರೆ, ಹಿರಿತೆರೆ ಪ್ರೇಕ್ಷಕರೆಲ್ಲರಿಗೂ ಚಿರಪರಿಚಿತರು. ಸಿನಿಮಾ ವಿಚಾರಕ್ಕೆ ಬಂದರೆ, ಅಲ್ಲಿಯೂ ಪ್ರಯೋಗಾತ್ಮಕ ಚಿತ್ರಗಳಿಗೆ, ಪಾತ್ರಗಳಿಗೆ ಮಾತ್ರವೇ ಅವರು ಮೊದಲ ಆದ್ಯತೆ ಕೊಡುತ್ತಾ ಸಾಗಿ ಬಂದಿದ್ದಾರೆ. ಕೆರೆಬೇಟೆಯಲ್ಲಿ ಬಲು ಮಹತ್ವ ಹೊಂದಿರೋ ಸರ್ಕಲ್ ಇನ್ಸ್ ಪೆಕ್ಟರ್ ಪಾತ್ರಕ್ಕೆ ಕಲಾವಿದರ ಅನ್ವೇಷಣೆಯಲ್ಲಿದ್ದಾಗ ಗೌರಿಶಂಕರ್ (Gowrishankar) ಮತ್ತು ನಿರ್ದೇಶಕ ರಾಜಗುರು ಅವರ ಪ್ರಧಾನ ಆಯ್ಕೆಯಾಗಿದ್ದದ್ದು ಸಂಪತ್ ಮೈತ್ರೇಯ. ಇಂಥಾದ್ದೊಂದು ಆಫರ್ ಬಂದಾಗ, ನೆಲದ ಘಮಲಿನ ಕಥೆ, ಆ ಪಾತ್ರದ ಖದರ್ ಕಂಡು ಖುಷಿಯಾಗಿಯೇ ನಟಿಸಲು ಒಪ್ಪಿಕೊಂಡಿದ್ದರಂತೆ.

    ಕೆರೆಬೇಟೆ ಮಲೆನಾಡು ಭಾಗದ ಕಥೆ ಹೊಂದಿರುವ ಚಿತ್ರ. ಈಗ ಕಾಣಿಸಿರುವಂತೆ ಪ್ರೀತಿಯ ಸುತ್ತ ಮಾತ್ರವೇ ಸುತ್ತುತ್ತದೆ ಅಂದುಕೊಳ್ಳುವಂತಿಲ್ಲ. ಮಲೆನಾಡು ಭಾಗದ ಜನಜೀವನ, ಸಂಸ್ಕøತಿ, ಬದುಕಿನ ಕ್ರಮ, ರಾಜಕೀಯ, ಸಿಟ್ಟು, ದ್ವೇಷ ಸೇರಿದಂತೆ ಅಂದಾಜಿಗೆ ನಿಲುಕದ ಅದೆಷ್ಟೋ ಅಂಶಗಳಿಂದ ಈ ಸಿನಿಮಾ ರೂಪುಗೊಂಡಿದೆ. ಅದರಲ್ಲಿ ಅತ್ಯಂತ ಮಹತ್ವದ ತನಿಖಾಧಿಕಾರಿಯ ಪಾತ್ರವನ್ನು ಸಂಪತ್ ನಿರ್ವಹಿಸಿದ್ದಾರೆ. ಒಟ್ಟಾರೆ ಕಥೆ, ಅದಕ್ಕೆ ದೃಷ್ಯ ರೂಪ ನೀಡಿರುವ ರೀತಿ ಮತ್ತು ಚಿತ್ರತಂಡದ ಅತೀವ ಸಿನಿಮಾ ಪ್ರೀತಿಯ ಬಗ್ಗೆ ಸಂಪತ್ ಅವರಲ್ಲೊಂದು ಬೆರಗಿದೆ. ಅವರೇ ಖುದ್ದಾಗಿ ಹೇಳಿಕೊಂಡಿರುವ ಒಂದಷ್ಟು ಮಾಹಿತಿಗಳನ್ನು ಆಧರಿಸಿ ಹೇಳೋದಾದರೆ, ಕೆರೆಬೇಟೆ ಅಪರೂಪದ ಗೆಲುವಿನ ರೂವಾರಿಯಾಗೋ ಲಕ್ಷಣಗಳು ದಟ್ಟವಾಗಿವೆ.

     

    ಜೈಶಂಕರ್ ಜನಮನ ಸಿನಿಮಾಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೇವಲ ಕಥೆ ಮಾತ್ರವಲ್ಲದೇ ತಾಂತ್ರಿಕವಾಗಿಯೂ ಶ್ರೀಮಂತಿಕೆ ಹೊಂದಿರುವ ಕೆರೆಬೇಟೆಯಲ್ಲಿ ಗಗನ್ ಬದೇರಿಯಾ ಸಂಗೀತ, ಕೀರ್ತನ್ ಪೂಜಾರಿ ಛಾಯಾಗ್ರಹಣ, ಜ್ಞಾನೇಶ್-ಯುವರತ್ನ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಮತ್ತು ಗೋಪಾಲ್ ದೇಶಪಾಂಡೆ, ಹರಿಣಿ, ಸಂಪತ್ ಕುಮಾರ್, ರಘು ರಾಜಾನಂದ, ರಾಮ್ ದಾಸ್, ರಾಕೇಶ್ ಪೂಜಾರಿ, ಚಿಲ್ಲರ್ ಮಂಜು, ಗೌತಮ್ ರಾಜ್, ವರ್ಧನ್ ತೀರ್ಥಹಳ್ಳಿ, ರಣಧೀರ್ ಗೌಡ, ಶೇಖರ್ ಕೆ, ದೇವಿಪ್ರಕಾಶ್, ಆಶಾ ಸುಜಯ್, ವಿದ್ಯಾ, ಕಿರಣ್ ರಾವ್, ಗೀತಾ ಮೈಸೂರು ಮುಂತಾದವರ ತಾರಾಗಣವಿದೆ. ಅಂದಹಾಗೆ, ಕೆರೆಬೇಟೆ ಚಿತ್ರ ಇದೇ ಮಾರ್ಚ್ 15ರಂದು ರಾಜ್ಯಾದ್ಯಂತ ತೆರೆಗಾಣಲಿದೆ.

  • ಐವತ್ತನೇ ದಿನದ ಸಂಭ್ರಮದಲ್ಲಿ ಬಿಸಿಲು ಕುದುರೆ

    ಐವತ್ತನೇ ದಿನದ ಸಂಭ್ರಮದಲ್ಲಿ ಬಿಸಿಲು ಕುದುರೆ

    ನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ (Hrudayashiva) ನಿರ್ದೇಶನದ ‘ಬಿಸಿಲು ಕುದುರೆ’ (Bisilu kudure) ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು.  ಚಿತ್ರ ಈಗ ಐವತ್ತು ದಿನಗಳನ್ನು (Fifty days) ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.

    ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ  ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ. ಸದ್ಯದಲ್ಲೇ ಸಿನಿಮಾ ಓಟಿಟಿಯಲ್ಲೂ ಬರಲಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಸದ್ಯದಲ್ಲೇ ನನ್ನ ನಿರ್ದೇಶನದಲ್ಲಿ ಎರಡು ಹೊಸ ಚಿತ್ರಗಳು ಆರಂಭವಾಗಲಿದೆ. ಅದರಲ್ಲಿ ಒಂದು ಬಿಗ್ ಬಜೆಟ್ ಚಿತ್ರವಾಗಿರಲಿದೆ ಎಂದರು ನಿರ್ದೇಶಕ ಹೃದಯ ಶಿವ.

    ನಾನು ಚಿತ್ರದ ಕುರಿತು ಬಿಡುಗಡೆ ಪೂರ್ವದಲ್ಲೇ ಸಾಕಷ್ಟು ಮಾತನಾಡಿದ್ದೇನೆ. ಈಗ ಐವತ್ತನೇ ದಿನದ ಸಂತೋಷವನ್ನು ಸಂಭ್ರಮಿಸುತ್ತಿದ್ದೇನೆ ಎಂದು ನಟ ಸಂಪತ್ ಮೈತ್ರೇಯ (Sampat Maitreya)ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಚರಿ ವಾಸು, ಸಂಗೀತ ನಿರ್ದೇಶಕ ಇಮ್ತಿಯಾಜ್ ಸುಲ್ತಾನ್, ಛಾಯಾಗ್ರಾಹಕ ನಾಗಾರ್ಜುನ, ಸಂಕಲನಕಾರ ಕೆಂಪರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಸಿನಿಮಾದ ಯಶಸ್ಸಿನ ಬಗ್ಗೆ ಮಾತನಾಡಿದರು.  ಹೃದಯ ಶಿವ ಚಿತ್ರತಂಡದವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

  • ಹೋಮ್ ಸ್ಟೇ ನಿರ್ದೇಶಕನ ಹೊಸ ಚಿತ್ರದಲ್ಲಿ ಗೀತಾ ಭಾರತಿ ಭಟ್ ನಟನೆ

    ಹೋಮ್ ಸ್ಟೇ ನಿರ್ದೇಶಕನ ಹೊಸ ಚಿತ್ರದಲ್ಲಿ ಗೀತಾ ಭಾರತಿ ಭಟ್ ನಟನೆ

    ಹೋಮ್  ಸ್ಟೇ ಚಿತ್ರದ ಖ್ಯಾತಿಯ ಸಂತೋಷ್ ಕೊಡಂಕೇರಿ (Santhosh Kodankeri)  ನಿರ್ದೇಶಿಸುತ್ತಿರುವ ಇನ್ನೂ ಹೆಸರಿಡದ “ಪ್ರೊಡಕ್ಷನ್ ನಂ 02” ನೂತನ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಸುಳ್ಯದ ಶ್ರೀ ಚನ್ನಕೇಶವ  ದೇವಸ್ಥಾನದಲ್ಲಿ ಜರುಗಿತು. ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ  ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು.

    ತೂಗು ಸೇತುವೆಗಳ ಸರದಾರ ಪದ್ಮಶ್ರೀ ಶ್ರೀ ಗಿರೀಶ್ ಭಾರಧ್ವಾಜ್ ರವರು, ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಗವರ್ನರ್ ಹಾಗೂ ಜೆಡಿಎಸ್ ರಾಜ್ಯ ಸಂಚಾಲಕ ಎಂ.ಬಿ. ಸದಾಶಿವ, ಶ್ರೀಚನ್ನಕೇಶವ ದೇವಳದ ಆಡಳಿತ ಮೊಕೇಸ್ತರ ಡಾ. ಹರಪ್ರಸಾದ್ ತುದಿಯಡ್ಕ, ನ.ಪಂ. ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಹಾಗೂ ಇನ್ನಿತರ ಸ್ಥಳೀಯ ಮುಖಂಡರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ:ರಾಕೇಶ್‌ಗಾಗಿ ಬಿಗ್ ಬಾಸ್ ಮನೆನಾ ಎರಡು ಮನೆ ಮಾಡಬೇಕಾ: ಸೋನು ವಿರುದ್ಧ ಗುರೂಜಿ ಗರಂ

    ಗೀತಾ ಭಾರತಿ ಭಟ್ (Geeta Bharati Bhatt), ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಸಂಪತ್ ಮೈತ್ರೇಯ, ರಘು ಪಾಂಡೇಶ್ವರ್, ಖುಷಿ ಆಚಾರ್, ಮೀನ ಹಾಗೂ ದರ್ಶಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪಾವನಾ ಸಂತೋಷ್  ಕಥೆ ಮತ್ತು ಸಂಭಾಷಣೆ ಬರೆದಿದ್ದು, ಸಂತೋಷ್ ಕೊಡಂಕೇರಿ ಚಿತ್ರಕಥೆ ಬರೆದು  ನಿರ್ದೇಶನ ಮಾಡುತ್ತಿದ್ದಾರೆ. ಮುರಳಿಧರ್. ಎಂ ಛಾಯಾಗ್ರಹಣ, ವಿನಯ್ ಶರ್ಮಾ ಸಂಗೀತ ನಿರ್ದೇಶನ,  ರಘು ಎಸ್. ಸಂಕಲನ, ಕಿರಣ್ ಕಾವೇರಪ್ಪ ಗೀತರಚನೆ ಹಾಗೂ  ಪ್ರಸನ್ನ – ಕಲ್ಯಾಣ್ ರೆಡ್ಡಿ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ. ಈ ಚಲನಚಿತ್ರವು ದಕ್ಷಿಣ ಕನ್ನಡದ ಸೊಗಡು, ಭಾಷೆ, ಸಂಸ್ಕೃತಿ ಹೊಂದಿದ್ದು, ದಕ್ಷಿಣ ಕನ್ನಡದ ಸುಳ್ಯ, ಸಂಪಾಜೆ, ತೋಡಿಕಾನ ಆಸುಪಾಸಿನಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ‌ ಎಂದು ನಿರ್ದೇಶಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]