Tag: ಸಂಪಿಗೆಹಳ್ಳಿ

  • ಕೆಲಸದ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆ – ಚಾಕುವಿನಿಂದ ಇರಿದು ಓರ್ವನ ಹತ್ಯೆ

    ಕೆಲಸದ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆ – ಚಾಕುವಿನಿಂದ ಇರಿದು ಓರ್ವನ ಹತ್ಯೆ

    – ಏಳಿಗೆ ಸಹಿಸಲಾಗದೆ ಕೊಲೆ ಮಾಡಿಸಿರುವುದಾಗಿ ಕುಟುಂಬಸ್ಥರು ಆರೋಪ

    ಬೆಂಗಳೂರು: ಕೆಲಸ ಮಾಡುವ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆಯಾಗಿದ್ದು, ಓರ್ವ ಕಾರ್ಮಿಕನನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ (Bengaluru) ಸಂಪಿಗೆಹಳ್ಳಿಯ (Sampigehalli) ಆಕಾಶವಾಣಿ ಲೇಔಟ್‌ನಲ್ಲಿ ನಡೆದಿದೆ.

    ಮೃತ ಕಾರ್ಮಿಕನ  ಸೈಯದ್ ಮೆಹಬೂಬ್ ಪಾಷ, ಆರೋಪಿಯನ್ನು ಖಾನಿಯಾ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿಕೆಶಿ ದಂಪತಿ ಭಾಗಿ – ಸಂಗಮದಲ್ಲಿ ಪುಣ್ಯಸ್ನಾನ

    ಇಬ್ಬರು ಕಾರ್ಮಿಕರು ಜೆಲ್ಲಿ, ಮರಳು ಟಾಟಾ ಏಸ್ ಗಾಡಿಗಳಿಗೆ ಲೋಡ್ ಮಾಡುವ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ರಾಜು ಎನ್ನುವ ವ್ಯಕ್ತಿ ಜೊತೆಗೂಡಿ ಮೃತ ಮೆಹಬೂಬ್ ಜೆಲ್ಲಿ, ಮರಳು ವ್ಯಾಪಾರ ಮಾಡುತ್ತಿದ್ದರು. ಭಾನುವಾರ ರಾತ್ರಿ ರಾಜು, ಮೆಹಬೂಬ್‌ಗೆ ಕರೆ ಮಾಡಿ ಬಾಡಿಗೆಯಿದೆ ಬಾ ಎಂದು ಕರೆದಿದ್ದ. 8:40ಕ್ಕೆ ಸ್ಥಳಕ್ಕೆ ಹೋಗಿದ್ದ ಮೆಹಬೂಬ್ ಖಾನ್ ಅಲ್ಲಿದ್ದ ಖಾನಿಯಾ ಎನ್ನುವ ಮತ್ತೊಬ್ಬ ಕಾರ್ಮಿಕ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಸಿಮೆಂಟ್ ಚೀಲ ಕಟ್ ಮಾಡಲು ಬಳಸುತ್ತಿದ್ದ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಖಾನಿಯಾ ಎಸ್ಕೇಪ್ ಆಗಿದ್ದಾನೆ.

    ಬಳಿಕ ಅಂಗಡಿ ಪಕ್ಕದ ಪರಿಚಯಸ್ಥರು ಮೆಹಬೂಬ್ ಕುಟುಂಬಸ್ಥರಿಗೆ ಕರೆ ಮಾಡಿ ಯಾರೋ ಹೊಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಸದ್ಯ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ.

    ಇನ್ನೂ ಈ ಕುರಿತು ಮೃತ ಮೆಹಬೂಬ್‌ನ ಕುಟುಂಬಸ್ಥರು, ರಾಜು ಅಲಿಯಾಸ್ ಲಂಗಡ ಮತ್ತು ಖಾನಿಯಾ ಇಬ್ಬರು ಸೇರಿ ಹತ್ಯೆ ಮಾಡಿದ್ದಾರೆ. ಮೆಹಬೂಬ್‌ನ ಏಳಿಗೆ ರಾಜುಗೆ ಸಹಿಸಲಾಗದೆ ಕೊಲೆ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಮೈಸೂರು | ಫೆ.10ರಿಂದ ಮೂರು ದಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ

  • ಶೀಘ್ರವೇ  ಯೆಲಚೇನಹಳ್ಳಿ, ಸಂಪಿಗೆಹಳ್ಳಿ ಮಧ್ಯೆ ಮೆಟ್ರೊ ಸೇವೆ ಆರಂಭ

    ಶೀಘ್ರವೇ ಯೆಲಚೇನಹಳ್ಳಿ, ಸಂಪಿಗೆಹಳ್ಳಿ ಮಧ್ಯೆ ಮೆಟ್ರೊ ಸೇವೆ ಆರಂಭ

    ಬೆಂಗಳೂರು: ನಮ್ಮ ಮೆಟ್ರೊ ಮೊದಲ ಹಂತದ ಉತ್ತರ-ದಕ್ಷಣ ಕಾರಿಡಾರ್‍ನ ಯೆಲಚೇನಹಳ್ಳಿ ಮತ್ತು ಸಂಪಿಗೆಹಳ್ಳಿ ನಡುವಿನ ಮಾರ್ಗ ಜನರ ಸೇವೆಗೆ ಸಿದ್ಧವಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಸಂಚಾರ ಪ್ರಾರಂಭವಾಗುವ ಎಲ್ಲ ಲಕ್ಷಣಗಳು ಕಂಡುಬಂದಿವೆ.

    ಕಳೆದ ನಾಲ್ಕು ದಿನಗಳಿಂದ ಈ ಮಾರ್ಗದ ತಪಾಸಣೆ ನಡೆಸಿರುವ ರೈಲು ಸುರಕ್ಷತಾ ಆಯುಕ್ತ ಕೆ ಎ ಮನೋಹರ್ ಅವರು ಮುಂದಿನ ವಾರವೇ ಸುರಕ್ಷತಾ ಪ್ರಮಾಣ ಪತ್ರ ಸಲ್ಲಿಸುವ ನಿರೀಕ್ಷೆಯಲ್ಲಿದ್ದಾರೆ.

    ಈ ಮಾರ್ಗದಲ್ಲಿ ಯಾವುದೇ ಬದಲಾವಣೆ ಮಾಡುವ ಆಗತ್ಯವಿಲ್ಲ ಸಂಚಾರಕ್ಕೆ ಸಂಪೂರ್ಣ ಸುರಕ್ಷತೆಯಿಂದ ಕೂಡಿದೆ ಅಂತಾ ತಿಳಿದು ಬಂದಿದೆ. ಈಗಾಗಲೇ ಸುರಕ್ಷತಾ ಪರೀಕ್ಷೆಯಲ್ಲಿ ಈ ಮಾರ್ಗ ಉತ್ತೀರ್ಣವಾಗಿದ್ದು, ಸುರಕ್ಷತಾ ಪ್ರಮಾಣ ಪತ್ರ ದೊರೆತ ಮೇಲೆ ಸಂಚಾರಕ್ಕೆ ಮುಕ್ತವಾಗಲಿದೆ.

    ಸಂಪಿಗೆಹಳ್ಳಿಯಿಂದ ನ್ಯಾಷನಲ್ ಕಾಲೇಜಿನವರೆಗೆ ಅಂಡರ್‍ಪಾಸ್ ಕಾಮಗಾರಿ ಸಂಪೂರ್ಣ ಮುಗಿದಿದೆ. ಕೆಲ ಸಣ್ಣಪುಟ್ಟ ಕೆಲಸಗಳು ಬಾಕಿಯಿದ್ದು ಅತಿ ಶೀಘ್ರದಲ್ಲೇ ಜನರ ಸೇವೆಗೆ ಈ ಮಾರ್ಗ ಲಭ್ಯವಾಗಲಿದೆ.