Tag: ಸಂಪುಟ ವಿಸ್ತರಣೆ

  • ಜಾತಿವಾರು, ಪ್ರಾಂತ್ಯಾವಾರು ವಿಚಾರದಲ್ಲಿ ಜಿಲ್ಲೆ ಲೆಕ್ಕಕ್ಕೆ ಇಲ್ಲದಂತಾಗಿದೆ: ಬಿ.ಸಿ ಪಾಟೀಲ್ ಬೇಸರ

    ಜಾತಿವಾರು, ಪ್ರಾಂತ್ಯಾವಾರು ವಿಚಾರದಲ್ಲಿ ಜಿಲ್ಲೆ ಲೆಕ್ಕಕ್ಕೆ ಇಲ್ಲದಂತಾಗಿದೆ: ಬಿ.ಸಿ ಪಾಟೀಲ್ ಬೇಸರ

    ಹಾವೇರಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಳ ನೋವು, ಬೇಸರ ಆಗಿದೆ. ಜಾತಿವಾರು, ಪ್ರಾಂತ್ಯಾವಾರು ವಿಚಾರದಲ್ಲಿ ಹಾವೇರಿ ಜಿಲ್ಲೆ ಲೆಕ್ಕಕ್ಕೆ ಇಲ್ಲದಂತಾಗಿದೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾನು ಏಕೈಕ ಕಾಂಗ್ರೆಸ್ ಶಾಸಕನಾಗಿದ್ದೇನೆ. ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ನಾನೊಬ್ಬನೆ ಲಿಂಗಾಯತ ಶಾಸಕ. ಈ ಬಾರಿ ಸಚಿವ ಸ್ಥಾನ ಸಿಗೋ ಭರವಸೆ ಇತ್ತು. ಪ್ರಥಮ ಬಾರಿ ಸಾದರ ಲಿಂಗಾಯತರನ್ನು ಹೊರಗಿಟ್ಟು ಸಚಿವ ಸಂಪುಟ ಆಗಿರೋದು. ಹಾವೇರಿ ಜಿಲ್ಲೆಗೆ ಹೇಳೋರು ಕೇಳೋರು ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಪ್ಪನಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬಿ.ಸಿ ಪಾಟೀಲ್ ಮಗಳು ಗರಂ..!

    ಬಹುತೇಕ ಎಲ್ಲ ಸರ್ಕಾರಗಳು ಇದ್ದಾಗ ಸಾದರ ಲಿಂಗಾಯತರಿಗೆ ಸ್ಥಾನ ಸಿಕ್ಕಿತ್ತು. ಕಾಂಗ್ರೆಸ್ ವಿರೋಧಿ ಅಲೆ ಇದ್ದಾಗಲೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ನಾನು ಸಿದ್ದರಾಮಯ್ಯರನ್ನ ನಂಬಿದ್ದೆ. ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯನವರ ಜೊತೆಗಿದ್ದೆ. ಅವರೇ ನಮ್ಮ ಗಾಡ್ ಫಾದರ್. ನಾನು ಅವರನ್ನೇ ನಂಬಿದ್ದೆ, ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ನನಗೆ ಮಂತ್ರಿ ಸ್ಥಾನ ಸಿಗುತ್ತಿತ್ತು. ಹಾವೇರಿ ಜಿಲ್ಲೆ ಏನು ತಪ್ಪು ಮಾಡಿದೆ. ಜಿಲ್ಲೆಯ ಜನರು ಯಾವ ರೀತಿ ಪಕ್ಷವನ್ನು ನಂಬಬೇಕು ಅಂತ ಗೊತ್ತಾಗ್ತಿಲ್ಲ. ಸಚಿವ ಸ್ಥಾನ ಸಿಕ್ಕಿಲ್ಲ ಎಂದಾಗ ಯಾರೂ ನನ್ನ ಪರವಾಗಿಲ್ಲ ಎಂದು ನೊಂದುಕೊಂಡಿದ್ದಾರೆ.

    ಮುಂದಿನ ನಡೆ ಏನು ಅಂತ ಕಾದು ನೋಡಿ, ದಿಢೀರ್ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ನಾನು ಎಲ್ಲೂ ಹೋಗಲ್ಲ, ಲೋಕಸಭಾ ಚುನಾವಣೆಯ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ. ನಾನು ಪಕ್ಷದ ಪರ ನಿಲ್ಲಲೇಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    ಇದಕ್ಕೂ ಮೊದಲು ಪುತ್ರಿ ಸೃಷ್ಠಿ ಪಾಟೀಲ್ ಅವರು ತಂದೆಗೆ ಸಚಿವ ಸ್ಥಾಸ ಸಿಗಲಿಲ್ಲ ಅಂತ ಹೈಕಮಾಂಡ್ ವಿರುದ್ಧ ಕಿಡಿಕಾರಿ ಅಸಮಾಧಾನ ಹೊರಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಪುಟ ವಿಸ್ತರಣೆ ಮೊದಲೇ ಆಪರೇಷನ್ ಕಮಲ – ರಹಸ್ಯ ಮಾತುಕತೆಯಲ್ಲಿ ಜಾರಕಿಹೊಳಿ ಬ್ರದರ್ಸ್!

    ಸಂಪುಟ ವಿಸ್ತರಣೆ ಮೊದಲೇ ಆಪರೇಷನ್ ಕಮಲ – ರಹಸ್ಯ ಮಾತುಕತೆಯಲ್ಲಿ ಜಾರಕಿಹೊಳಿ ಬ್ರದರ್ಸ್!

    ಬೆಂಗಳೂರು: ಪಂಚರಾಜ್ಯ ಚುನಾವಣೆಗಳ ಬಳಿಕ ಬಿಜೆಪಿ ಆಪರೇಷನ್ ಕಮಲ ಕೈಬಿಟ್ಟಿದೆ ಎಂಬ ಮಾತಿನ ನಡುವೆಯೇ ಮತ್ತೆ ಆಪರೇಷನ್ ಕಮಲ ಮಾಡುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಮಾಜಿ ಸಚಿವ ಹಾಗೂ ಹಾಲಿ ಸಚಿವ ಜಾರಕಿಹೊಳಿ ಸಹೋದರೊಂದಿಗೆ ರಹಸ್ಯ ಮಾತುಕತೆಯಲ್ಲಿ ಭಾಗವಹಿಸಿರುವ ಫೋಟೋ ವೈರಲ್ ಆಗಿದೆ.

    ಕಾಂಗ್ರೆಸ್ ಪಕ್ಷದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ವೈಮನಸ್ಸು ಮುಂದುವರಿದಿದೆ. ಇದರ ನಡುವೆಯೇ ರಾಜ್ಯ ಪ್ರಮುಖ ಸಮುದಾಯವಾದ ವಾಲ್ಮೀಕಿ ಸಮುದಾಯದ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಚರ್ಚೆಯಲ್ಲಿ ರಮೇಶ್ ಜಾರಕಿಹೊಳಿ ಮಾತ್ರವಲ್ಲದೇ ಸತೀಶ್ ಜಾರಕಿಹೊಳಿ ಅವರು ಕೂಡ ಭಾಗವಹಿಸಿದ್ದರು. ಈ ವೇಳೆ ಆಪರೇಷನ್ ಕಮಲ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

    ಈ ಹಿಂದೆ ಆಪರೇಷನ್ ಕಮಲ ಮಾಡಲು ವಿಫಲವಾಗಿದ್ದ ಬಿಜೆಪಿ, ಸದ್ಯ ಕಾಂಗ್ರೆಸ್ ಮುಖಂಡರ ಮೂಲಕವೇ ಮಾಡಲು ತೀರ್ಮಾನಿಸಿದೆ ಎನ್ನಲಾಗಿದೆ. ಶಾಸಕ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯದವರೇ ಆದ ಕಾರಣ ಅವರ ಮುಂದಾಳತ್ವದಲ್ಲಿ ಚರ್ಚೆ ನಡೆಸಲಾಗಿದೆ. ಚರ್ಚೆ ವೇಳೆ ಕಾಂಗ್ರೆಸ್ ಪಕ್ಷದಿಂದ ಶಾಸಕರನ್ನು ಕರೆತರುವ ಜವಾಬ್ದಾರಿಯನ್ನು ಜಾರಕಿಹೊಳಿ ಸಹೋದರರಿಗೆ ವಹಿಸಿದ್ದಾರೆ ಎನ್ನಲಾಗಿದೆ. ಕಳೆದ 2 ದಿನಗಳ ಹಿಂದೆ ಸಭೆ ನಡೆದಿದೆ ಎಂಬ ಮಾಹಿತಿ ಲಭಿಸಿದ್ದು, ಈ ವೇಳೆ ಹಲವು ಬಿಜೆಪಿ ಶಾಸಕರು ಹಾಜರಿರುವುದನ್ನು ಫೋಟೋದಲ್ಲಿ ಕಾಣಬಹುದು.

    ಒಂದೊಮ್ಮೆ ಸಚಿವ ಸಂಪುಟ ನಡೆದರೂ ಅಥವಾ ಸಂಪುಟ ವಿಸ್ತರಣೆ ಆಗದೆ ಇದ್ದರು ಏನು ಮಾಡಬೇಕೆಂಬ ಮಾತುಕತೆ ನಡೆದಿದೆ. ಸಂಪುಟ ವಿಸ್ತರಣೆಯಲ್ಲಿ ಅಸಮಾಧಾನ ಹೊಂದಿರುವ ಶಾಸಕರನ್ನು ಬಿಜೆಪಿಗೆ ಕರೆತರುವುದು ಅಥವಾ ಸಂಪುಟ ವಿಸ್ತರಣೆ ಆಗದಿದ್ದರೆ ಕೈ ಬಂಡಾಯ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು ಹಾಗೂ ಅವರನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡುವುರ ಬಗ್ಗೆ ಚರ್ಚೆ ಎನ್ನಲಾಗಿದೆ.

    ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಕೂಡ ನಾಳೆ ಸಂಪುಟ ವಿಸ್ತರಣೆ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ. ಹೈಕಮಾಂಡ್‍ಗೆ ಸಂಪುಟ ವಿಸ್ತರಣೆ ಮಾಡಲು ಒಪ್ಪಿಗೆ ಇಲ್ಲ ಎನ್ನಲಾಗಿದ್ದು, ಇಲ್ಲಿ ಜಾರಕಿಹೊಳಿ ಬ್ರದರ್ಸ್‍ಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎನ್ನಲಾಗಿದೆ. ಅಲ್ಲದೇ ಆಪರೇಷನ್ ಯಶಸ್ವಿಯಾದರೆ ಉತ್ತರ ಕರ್ನಾಟದ ಶ್ರೀರಾಮುಲು ಅವರಿಗೆ ಉಪಮುಖ್ಯ ಮಂತ್ರಿ ಸ್ಥಾನ ಹಾಗೂ ಜಾರಕಿಹೊಳಿ ಸಹೋದರಿಗೆ ಸಚಿವ ಸ್ಥಾನ ಹಾಗೂ ಶಾಸಕರಿಗೆ ಮುಂದಿನ ಚುನಾವಣೆಯ ಖರ್ಚು-ವೆಚ್ಚ ಭರಿಸುವ ಭರವಸೆ ಹಾಗೂ ನಿಗಮ, ಮಂಡಳಿ ಅಧ್ಯಕ್ಷಗಿರಿಯ ನೀಡುವ ಆಶ್ವಾಸನೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆ ಮೇಲೆ ಮಾಜಿ ಸಿಎಂ ಗರಂ

    ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆ ಮೇಲೆ ಮಾಜಿ ಸಿಎಂ ಗರಂ

    – ಬಿಜೆಪಿಯವರು ಸತ್ಯ ಹರಿಶ್ಚಂದ್ರರಾಗಿದ್ದರೆ ಜಂಟಿ ಸದನ ಸಮಿತಿಗೆ ರಫೇಲ್ ಪ್ರಕರಣ ಒಪ್ಪಿಸಲಿ
    – ನಾನೇನು ಅವನ ನಾಲಿಗೆನಾ? ದಿನೇಶ್ ಗುಂಡೂರಾವ್ ವಿರುದ್ಧ ಕಿಡಿ

    ಬಾಗಲಕೋಟೆ: ಬಾದಾಮಿ ಗೃಹಕಚೇರಿಯಲ್ಲಿ ನಡೆದಿದ್ದ ಅಹವಾಲು ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆದ ಪ್ರಸಂಗ ಇಂದು ನಡೆಯಿತು.

    ಬಾದಾಮಿ ತಾಲೂಕಿನ ತಳಕವಾಡ ಗ್ರಾಮದ ನಿವಾಸಿ ಪ್ರೇಮಾ, ಸಿದ್ದರಾಮಯ್ಯ ಅವರ ಕೈಮುಟ್ಟಿ ನಮಸ್ಕರಿಸಿ ಮನವಿಪತ್ರ ಸಲ್ಲಿಸಿ ಸಮಸ್ಯೆ ತೋಡಿಕೊಂಡರು. ಈ ವೇಳೆ ಕೋಪದಲ್ಲಿದ್ದ ಮಾಜಿ ಸಿಎಂ ಏಯ್.. ನಡೆಯಮ್ಮ ಎಂದು ಗದರಿಸಿದರು. ಬಳಿಕ ಮಾಧ್ಯಮದವರನ್ನು ನೋಡಿ ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆ ಸಮಸ್ಯೆ ಪರಿಹರಿಸುವಂತೆ ಸಿಪಿಐಗೆ ಸೂಚಿಸಿದರು.

    ಪತಿಯಿಂದ ನನಗೆ ಅನ್ಯಾಯವಾಗಿದೆ. ಕಳೆದ ಮೂರು ತಿಂಗಳಿನಿಂದ ಪೊಲೀಸ್ ಠಾಣೆಗೆ ಅಲೆದಾಡಿದರು ನ್ಯಾಯ ಸಿಗುತ್ತಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಪ್ರೇಮಾ ಮಾಜಿ ಸಿಎಂ ಸಿದ್ದರಾಮಯ್ಯ ಬಳಿ ಸಿಪಿಐ ಬಳಿ ಅಳಲು ತೋಡಿಕೊಂಡರು.

    ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಂಪುಟ ವಿಸ್ತರಣೆಯಲ್ಲಿ ಒಂದೆರಡು ಸ್ಥಾನಗಳು ಬದಲಾಗಬಹುದು, ಉತ್ತರ ಕರ್ನಾಟಕಕ್ಕೆ ಅನ್ಯಾವಾಗಲು ನಾನು ಬಿಡುವುದಿಲ್ಲ. ಉತ್ತರ ಕರ್ನಾಟಕಕ್ಕೂ ನ್ಯಾಯ ಸಿಗಬೇಕು, ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಪ್ರದೇಶಕ್ಕೂ ನ್ಯಾಯ ಸಿಗಬೇಕು ಎಂದರು.

    ಕೆಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾವ್ ಹೇಳಿದ್ದಾರೆ. ನಿಮ್ಮ ಅಭಿಪ್ರಾಯವೇನು ಮಾಧ್ಯಮದವರು ಪ್ರಶ್ನಿಸುತ್ತಿದ್ದಂತೆ ಗರಂ ಆದ ಮಾಜಿ ಸಿಎಂ, ನಾನೇನು ಅವನ ನಾಲಿಗೆನಾ? ಈ ಪ್ರಶ್ನೆ ನನ್ನನ್ಯಾಕೆ ಕೇಳ್ತೀರಿ, ಅವ್ರನ್ನೇ ಕೇಳಿ ಎಂದು ಗುಡುಗಿದರು. ವಿಧಾನ ಪರಿಷತ್ ಸಭಾಪತಿ ಆಯ್ಕೆ ವಿಚಾರದ ಬಗ್ಗೆ ನಿಮಗೆ ಸಮಾಧಾನವಿದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸಮಾಧಾನ, ಅಸಮಾಧಾನ ಎಂಬ ವಿಚಾರ ಇರುವುದಿಲ್ಲ, ಸಭಾಪತಿ ಸ್ಥಾನಕ್ಕೆ ನಾನು ಎಸ್.ಆರ್.ಪಾಟೀಲ್ ಹೆಸರು ಸೂಚಿಸಿದ್ದು ನಿಜ. ಆದರೆ ಆಯ್ಕೆ ಮಾಡಿದ್ದು ಹೈಕಮಾಂಡ್ ಎಂದರು.

    ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣದ ಕುರಿತು ಮಾತನಾಡಿದ ಮಾಜಿ ಸಿಎಂ, ವಿಮಾನ ಖರೀದಿಯಲ್ಲಿ ಬಿಜೆಪಿ ಭ್ರಷ್ಟಾಚಾರವನ್ನೇ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿಲ್ಲ. ಬಿಜೆಪಿಯವರು ಸತ್ಯ ಹರಿಶ್ಚಂದ್ರರು ಆಗಿದ್ದರೆ ಜಂಟಿ ಸದನ ಸಮಿತಿಗೆ ಪ್ರಕರಣ ಕೊಡಲಿ ನೋಡೋಣ ಎಂದು ಸವಾಲ್ ಎಸೆದರು.

    ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಳ್ಳುತ್ತೇವೆ ಅಂತಾ ಅವರು ಜಂಟಿ ಸದನ ಸಮಿತಿಗೆ ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣ ಒಪ್ಪಿಸುತ್ತಿಲ್ಲ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಾಲದ ಬೊಫೋರ್ಸ್ ಹಗರಣವನ್ನು ಜಂಟಿ ಸದನ ಸಮಿತಿಗೆ ಕೊಟ್ಟಿದ್ದರು. ಹಾಗೇ ಬಿಜೆಪಿಯವರು ರಫೇಲ್ ಡೀಲ್ ಹಗರಣವನ್ನು ಒಪ್ಪಿಸಲಿ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಪುಟದ ನಾಲ್ವರು ಹಾಲಿ ಸಚಿವರಿಗೆ ಕೈ ನಾಯಕರಿಂದ ಕೋಕ್?

    ಸಂಪುಟದ ನಾಲ್ವರು ಹಾಲಿ ಸಚಿವರಿಗೆ ಕೈ ನಾಯಕರಿಂದ ಕೋಕ್?

    ಬೆಳಗಾವಿ: ಸಂಪುಟ ವಿಸ್ತರಣೆಯಲ್ಲಿ ನಮಗೂ ಸಚಿವ ಸ್ಥಾನ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿರುವುದರಿಂದ ನಾಲ್ವರು ಹಾಲಿ ಶಾಸಕರನ್ನು ಕೈ ಬಿಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಈ ಮೂಲಕ ಡಿಸೆಂಬರ್ 22ರಂದು ನಡೆಯುವುದು ಸಂಪುಟ ವಿಸ್ತರಣೆಯೋ? ಅಥವಾ ಪುನರಚನೆಯೋ ಎನ್ನುವ ಪ್ರಶ್ನೆ ಶುರುವಾಗಿದೆ. ಸಂಪುಟ ಪುನರ್ ರಚನೆ ಮಾಡುವಂತೆ ಕಾಂಗ್ರೆಸ್‍ನ ಕೆಲವು ಹಿರಿಯ ಶಾಸಕರ ಪಟ್ಟು ಹಿಡಿದಿದ್ದಾರಂತೆ. ಹೀಗಾಗಿ ಅವರ ಒತ್ತಡಕ್ಕೆ ಮಣಿದ ನಾಯಕರು, ನಾಲ್ವರು ಸಚಿವರ ಹೆಸರನ್ನು ಮಂತ್ರಿಗಿರಿಯಿಂದ ಕೈಬಿಡುವ ಪಟ್ಟಿಗೆ ಸೇರಿಸಿದ್ದಾರೆ ಎನ್ನಲಾಗಿದೆ.

    ಯಾರೆಲ್ಲ ಸಂಪುಟದಿಂದ ಔಟ್:
    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್.ಶಂಕರ್, ಕಾರ್ಮಿಕ ಸಚಿವ ವೆಂಕಟರಮಣಪ್ಪ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರನ್ನು ಸಂಪುಟದಿಂದ ಕೈಬಿಡುವ ನಿರ್ಧಾರವನ್ನು ಕೈ ನಾಯಕರು ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಮಂತ್ರಿಗಳ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಕಳುಹಿಸಲಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿ ಮಾಹಿತಿ ಲಭಿಸಿದೆ.

    ಸಂಪುಟ ಪುನಾರಚನೆಯ ಕುರಿತು ಡಿಸೆಂಬರ್ 21ರಂದು ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಚರ್ಚೆ ನಡೆಸಿ ಯಾರಿಗೆ ಮಂತ್ರಿಗಿರಿ ನೀಡಬೇಕು ಎನ್ನುವ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

    ಸಂಪುಟ ವಿಸ್ತರಣೆ ವಿಚಾರ ಹೊರ ಬೀಳುತ್ತಿದ್ದಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿದಂತೆ ಅನೇಕರು ಮಂತ್ರಿಗಿರಿಗಾಗಿ ಲಾಭಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಬಣದ ನಾಯಕರ ಮೂಲಕ ಹೈಕಮಾಂಡ್ ಮಟ್ಟದಲ್ಲಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಳಗಾವಿ ಅಧಿವೇಶನದ ಬಳಿಕವೇ ಸಂಪುಟ ವಿಸ್ತರಣೆ : ಸಿದ್ದರಾಮಯ್ಯ

    ಬೆಳಗಾವಿ ಅಧಿವೇಶನದ ಬಳಿಕವೇ ಸಂಪುಟ ವಿಸ್ತರಣೆ : ಸಿದ್ದರಾಮಯ್ಯ

    ಬೆಂಗಳೂರು: ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಮಾಡಲು ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಸಮನ್ವಯ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮ್ಯಯ ಅವರು, ಬಹಳ ದಿನಗಳ ನಂತರ ಸಮನ್ವಯ ಸಭೆ ಸೇರಿದ್ದು, ಅಧಿವೇಶನ ಡಿಸೆಂಬರ್ 10 ರಂದು ಆರಂಭವಾಗಲಿರುವ ಕಾರಣ ಡಿಸೆಂಬರ್ 22ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಸಭೆಯಲ್ಲಿ ಸಂಪುಟ ವಿಸ್ತರಣೆ, ಶಾಸಕರಿಗೆ ಬೋರ್ಡ್ ಕಾರ್ಪೋರೇಷನ್ ನೇಮಕ ಕೂಡ ಮಾಡಲಾಗುವುದು. ಸದ್ಯ 10 ಮಂದಿ ಜೆಡಿಎಸ್ ಹಾಗೂ 20 ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡಲಾಗುವುದು. ಅಲ್ಲದೇ ಸಭೆಯಲ್ಲಿ ಸರಕಾರ ಸುಗಮವಾಗಿ ನಡೆಯುವ ಕುರಿತು ಕೈಗೊಳ್ಳಬೇಕಾದ ಬಗ್ಗೆ ಸಾಕಷ್ಟು ಚರ್ಚೆ ನಡೆಸಲಾಯಿತು ಎಂದರು.

    ಇದೇ ವೇಳೆ ಸರ್ಕಾರದ ಯಾವುದೇ ಶಾಸಕರು ಕೂಡ ರಾಜೀನಾಮೆ ನೀಡಲ್ಲ. ಅಂತಹ ಯಾವುದೇ ಬೆಳವಣಿಗೆ ಇಲ್ಲ. ಕೇವಲ ಕೆಲ ವರದಿಗಳು ಬಂದಿದೆ ಅಷ್ಟೇ. ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಒಂದು ವೇಳೆ ಶಾಸಕರು ಸದನಕ್ಕೆ ಗೈರಾದರೆ ಬನ್ನಿ ಎಂದು ಹೇಳುತ್ತೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಯಾವುದೇ ನಾಯಕರು ರಾಜೀನಾಮೆ ನೀಡಲ್ಲ. ಇದು ಕೇವಲ ಬಿಜೆಪಿ ನಾಯಕರ ಹೇಳಿಕೆ ಮಾತ್ರ. ಒಮ್ಮೆ ಆಪರೇಷನ್ ಕಮಲ ಮಾಡಿ ಯಶಸ್ವಿಯಾಗಿದ್ದಾರೆ. ಈ ಬಾರಿ ಇಂತಹ ಯಾವುದೇ ಕ್ರಮ ನಡೆಯುವುದಿಲ್ಲ ಎಂದರು.

    ನಾನು ಸಮನ್ವಯ ಸಮಿತಿಯ ಮುಖ್ಯಸ್ಥನಾದ ಕಾರಣ ಪಕ್ಷದ ಶಾಸಕರು ಆಗಮಿಸಿ ಚರ್ಚೆ ನಡೆಸುತ್ತಾರೆ. ಸದ್ಯ ಸಂಪುಟ ವಿಸ್ತರಣೆ 9 ರಂದೇ ಮಾಡಲು ತೀರ್ಮಾನ ಮಾಡುವ ಬಗ್ಗೆ ಈ ಹಿಂದೆ ಚಿಂತನೆ ಮಾಡಲಾಗಿತ್ತು. ಆದರೆ ಬೆಳಗಾವಿಯಲ್ಲಿ ಸದನ ಆರಂಭವಾಗುವುದರಿಂದ ಡಿಸೆಂಬರ್ 22ಕ್ಕೆ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

    ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

    ಬಳ್ಳಾರಿ: ಲೋಕಸಭಾ ಉಪಚುನಾವಣೆಗೂ ಮುನ್ನ ಬಳ್ಳಾರಿ ಶಾಸಕರ ಸಭೆ ನಡೆಸಿ ಚುನಾವಣೆಯಲ್ಲಿ ಪ್ರತಿ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನೀಡಿದ್ದ ಟಾರ್ಗೆಟನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಉಗ್ರಪ್ಪ ಭಾರೀ ಅಂತರದಿಂದ ಗೆದ್ದಿದ್ದಾರೆ.

    ಉಗ್ರಪ್ಪ ಅವರ ಗೆಲುವು ತಮ್ಮ ಸ್ವಕ್ಷೇತ್ರದಲ್ಲಿ ಶ್ರೀರಾಮುಲು ಅವರಿಗೆ ಭಾರೀ ಮುಖಭಂಗಕ್ಕೆ ಕಾರಣವಾಗಿದೆ. ಆದರೆ ಇದರ ಹಿಂದೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೀಡಿದ ಗುರಿಯೇ ಪ್ರಮುಖವಾಗಿ ಕೆಲಸ ಮಾಡಿದೆ ಎನ್ನಲಾಗಿದೆ. ಚುನಾವಣೆ ಮತ ಎಣಿಕೆಯ ಕೊನೆಯ 18 ಸುತ್ತಿನ ಮುಕ್ತಾಯ ಬಳಿಕ ಉಗ್ರಪ್ಪ 6,28,163 ಮತ, ಬಿಜೆಪಿ ಅಭ್ಯರ್ಥಿ ಜೆ.ಶಾಂತಾ 3,84,892 ಮತ ಪಡೆದಿದ್ದಾರೆ. ಈ ಮೂಲಕ ಉಗ್ರಪ್ಪ ಅವರು 2,43,271 ಮತಗಳ ಭಾರೀ ಅಂತರದಲ್ಲಿ ಗೆಲುವು ಪಡೆದಿದ್ದಾರೆ. ಇತ್ತ ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ್ 13,704 ಮತ ಪಡೆದರೆ, 12,403 ಮಂದಿ ನೋಟಾ ಮತ ಚಲಾಯಿಸಿದ್ದಾರೆ.

    ಬಳ್ಳಾರಿಯ 7 ವಿಧಾನ ಸಭಾ ಕ್ಷೇತ್ರಗಳಲ್ಲಿ 10,47,619 ಮತದಾರರು ಇದ್ದು, ಇದರಲ್ಲಿ ಯಾವ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳು ಲಭಿಸಿದೆ ಎಂದು ನೋಡುವುದಾದರೇ, ಸಂಡೂರು ಶಾಸಕ ಟಿ ತುಕರಾಂ ಅವರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ 85,140 ಮತಗಳು ಹಾಗೂ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರ ಕ್ಷೇತ್ರದಲ್ಲಿ 84,446 ಮತಗಳನ್ನು ಕಾಂಗ್ರೆಸ್ ಪಡೆದಿದೆ.

    ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಎನ್. ನಾಗೇಂದ್ರ ಅವರ ಕ್ಷೇತ್ರದಲ್ಲಿ 83,918 ಮತ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಕ್ಷೇತ್ರದಲ್ಲಿ 83,364 ಮತ ಲಭಿಸಿದೆ. ವಿಜಯನಗರ (ಹೊಸಪೇಟೆ) ಶಾಸಕ ಅನಂದ್ ಸಿಂಗ್ ಕ್ಷೇತ್ರದಲ್ಲಿ 82,832, ಎನ್ ನಾಗೇಂದ್ರ ಶಾಸಕರಾಗಿರುವ ಬಳ್ಳಾರಿ ನಗರ ಕ್ಷೇತ್ರದಲ್ಲಿ 72,288, ಹೂವಿನಹಡಗಲಿ ಕ್ಷೇತ್ರದ ಶಾಸಕ ಪರಮೇಶ್ವರ್ ನಾಯ್ಕ್ ಕ್ಷೇತ್ರದಲ್ಲಿ 70,598 ಹಾಗೂ ಬಿಜೆಪಿ ಶಾಸಕರಾಗಿರುವ ಎನ್‍ವೈ ಗೋಪಾಲ ಕೃಷ್ಣ ಅವರ ಕೂಡ್ಲಿಗಿ ಕ್ಷೇತ್ರದಲ್ಲಿ 65,557 ಮತ ಲಭಿಸಿದೆ. ಸಿದ್ದರಾಮಯ್ಯ ಅವರು ಕೊಟ್ಟ ಪರೀಕ್ಷೆಯಲ್ಲಿ ಸಂಡೂರು ಶಾಸಕ ತುಕಾರಾಂ ಅತಿ ಹೆಚ್ಚು ಲೀಡ್ ಕೊಡಿಸಿದ್ದು, ಎರಡನೇ ಸ್ಥಾನದಲ್ಲಿ ಕಂಪ್ಲಿ ಶಾಸಕ ಗಣೇಶ್, ಮೂರನೇ ಸ್ಥಾನದಲ್ಲಿ ಬಳ್ಳಾರಿ ಶಾಸಕ ನಾಗೇಂದ್ರ, ನಾಲ್ಕನೇಯ ಸ್ಥಾನದಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಐದನೇ ಸ್ಥಾನದಲ್ಲಿ ಹೂವಿನಹಡಗಲಿ ಶಾಸಕ ಪರಮೇಶ್ವರ್ ನಾಯಕ್ ಹಾಗೂ 6ನೇ ಸ್ಥಾನದಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಇದ್ದಾರೆ.

    ಇತ್ತ ಬಿಜೆಪಿಗೆ ವಿಜಯನಗರ (ಹೊಸಪೇಟೆ)ದಲ್ಲಿ 53,372 ಮತ, ಹಗರಿಬೊಮ್ಮನಹಳ್ಳಿಯಲ್ಲಿ 53,102 ಮತ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ 50,663 ಮತ, ಕಂಪ್ಲಿಯಲ್ಲಿ 50,018, ಬಳ್ಳಾರಿ ನಗರದಲ್ಲಿ 48,565, ಸಂಡೂರಿನಲ್ಲಿ 46,465, ಕೂಡ್ಲಿಗಿ ಕ್ಷೇತ್ರದಲ್ಲಿ 43,528 ಮತ ಹಾಗೂ ಹೂವಿನಹಡಗಲಿ 39,179 ಮತಗಳನ್ನು ಬಿಜೆಪಿ ಪಡೆದಿದೆ.

    ಉಪಚುನಾವಣೆಯ ಬಳಿಕ ಸಮ್ಮಿಶ್ರದ ಸಂಪುಟ ವಿಸ್ತರಣೆಗೆ ಮಾಡುತ್ತೇವೆ ಎಂದು ಕಾಂಗ್ರೆಸ್ ತಮ್ಮ ಶಾಸಕರಿಗೆ ಸ್ಪಷ್ಟನೆ ನೀಡಿತ್ತು. ಈ ವೇಳೆ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಎಲ್ಲಾ ಶಾಸಕರು ತಮ್ಮ ಕ್ಷೇತ್ರದಲ್ಲಿ 30 ಸಾವಿರ ಮತಗಳ ಲೀಡ್ ತಂದುಕೊಡಬೇಕು. ಸಂಪುಟ ವಿಸ್ತರಣೆ ವೇಳೆ ಹೆಚ್ಚು ಲೀಡ್ ತಂದುಕೊಡುವ ಶಾಸಕರನ್ನು ಪರಿಗಣಿಸುತ್ತೇವೆ ಎಂದು ಸಿದ್ದರಾಮಯ್ಯ ಚುನಾವಣೆಗೂ ಮುನ್ನ ಆಶ್ವಾಸನೆ ನೀಡಿದ್ದರು. ಅಲ್ಲದೇ ಯಾವ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುತ್ತದೆ ಅಂತಹ ಕ್ಷೇತ್ರದ ಶಾಸಕರನ್ನು ಪರಿಗಣಿಸುವುದಿಲ್ಲ ನೇರವಾಗಿಯೇ ಹೇಳಿದ್ದರು. ಸದ್ಯ ಸಿದ್ದರಾಮಯ್ಯ ನೀಡಿದ ಟಾರ್ಗೆಟನ್ನು ಎಲ್ಲಾ ಶಾಸಕರು ಪೂರ್ಣಗೊಳಿಸಿದ್ದು ಯಾರಿಗೆ ಸಚಿವ ಸ್ಥಾನ ಲಭಿಸಲಿದೆ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ.

    2014ರ ಚುನಾವಣೆಯಲ್ಲಿ ಶ್ರೀರಾಮುಲು 85,144 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮುಲು ಅವರಿಗೆ 5,34,406 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ಸಿನ ಎನ್‍ವೈ ಹನುಮಂತಪ್ಪ ಅವರಿಗೆ 4,49,262 ಮತಗಳು ಬಿದ್ದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಹುಲ್ ಭೇಟಿ ವೇಳೆ `ಕೈ’ ನಾಯಕರಿಗೆ ಶಾಕ್ ಕೊಟ್ಟ ಸಿಎಂ: ಮಾತುಕತೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ರಾಹುಲ್ ಭೇಟಿ ವೇಳೆ `ಕೈ’ ನಾಯಕರಿಗೆ ಶಾಕ್ ಕೊಟ್ಟ ಸಿಎಂ: ಮಾತುಕತೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ಈಗ ಬೇಡ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ.

    ಕುಮಾರಕೃಪಾದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ ಕುಮಾರಸ್ವಾಮಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಮುಂದಿನ ಲೋಕಸಭಾ ಚುನಾವಣೆವರೆಗೂ ಸಂಪುಟ ವಿಸ್ತರಣೆ ಮಾಡದಿರಲು ಸಲಹೆ ನೀಡಿದ್ದಾರೆ. ಇದಕ್ಕೆ ಪ್ರಮುಖ ಕಾರಣವನ್ನು ರಾಹುಲ್ ಮುಂದಿಟ್ಟಿರುವ ಸಿಎಂ, ಈಗ ಸಂಪುಟ ವಿಸ್ತರಣೆ ಮಾಡಿದರೆ ಅಸಮಾಧಾನ ಹಾಗೂ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆ ಹೆಚ್ಚಿದ್ದು ಇದು ಲೋಕಸಭೆ ಚುನಾವಣೆ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಸದ್ಯ ಸಂಪುಟ ವಿಸ್ತರಣೆ ಬದಲಾಗಿ ನಿಗಮ ಮಂಡಳಿ ನೇಮಕ ಮಾಡುವ ಪ್ರಸ್ತಾವನ್ನು ಸಿಎಂ ರಾಹುಲ್ ಮುಂದಿಟ್ಟಿದ್ದಾರೆ. ಪ್ರಮುಖ 25 ಮಂಡಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಅತೃಪ್ತಿಯನ್ನು ಕಡಿಮೆ ಮಾಡಬಹುದು. ತಮ್ಮ ವಾದಕ್ಕೆ ಬಿಜೆಪಿಯ ಆಪರೇಷನ್ ಕಮಲದ ಬಗ್ಗೆಯೂ ಮಾಹಿತಿ ನೀಡಿದ ಸಿಎಂ, ಒಂದೊಮ್ಮೆ ಸಂಪುಟದಲ್ಲಿ ಆಕಾಂಕ್ಷಿಗಳಿಗೆ ಮಂತ್ರಿಗಿರಿ ಸಿಗದೇ ಇದ್ದರೆ ಬಿಜೆಪಿಯನ್ನು ಸಂಪರ್ಕ ಮಾಡುವ ಸಾಧ್ಯತೆಯಿದೆ ಎಂದಿದ್ದಾರೆ.

    ಮಾತುಕತೆಯ ವೇಳೆ ಮುಂದಿನ ಉಪಚುನಾವಣೆ ಮತ್ತು ಲೋಕಸಭೆ ಚುನಾವಣೆ ಬಗ್ಗೆಯೂ ಚರ್ಚೆ ನಡೆದಿದ್ದು, ಉಪ ಚುನಾವಣೆ ಕಾರ್ಯತಂತ್ರದ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಸಿಎಂ ವಿವರಿಸಿದ್ದಾರೆ. ಅಲ್ಲದೇ ಕ್ಷೇತ್ರ ಹಂಚಿಕೆಯಲ್ಲಿ ಆಗಿರುವ ಕೊನೆ ಕ್ಷಣದ ಬೆಳವಣಿಗೆ, ಬದಲಾವಣೆ ಬಗ್ಗೆಯೂ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದೇ ವೇಳೆ ಮೈತ್ರಿ ಸರ್ಕಾರದ ಸಂಪುಟದಿಂದ ಹೊರ ನಡೆದ ಎನ್ ಮಹೇಶ್ ರಾಜೀನಾಮೆ ಪರಿಣಾಮದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

    ಸದ್ಯ ಎಚ್‍ಡಿಕೆ ಅವರ ಸಲಹೆಯನ್ನು ಪಡೆದಿರುವ ರಾಹುಲ್ ಗಾಂಧಿ ಅವರು, ತಮ್ಮ ಪಕ್ಷದ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರವನ್ನು ತಿಳಿಸುತ್ತೇನೆ ಎಂದಿದ್ದಾರೆ ಎಂದು ತಿಳಿದುಬಂದಿದೆ.

    ಇತ್ತ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು, ಮುಖಂಡರು ಸಚಿವ ಸಂಪುಟದ ವಿಸ್ತರಣೆ ಈಗಾಗಲೇ ಬಹಿರಂಗ ಹೇಳಿಕೆ ನೀಡಿದ್ದಾರೆ. ಅಲ್ಲದೇ ಕೆಲ ಮುಖಂಡರು ಪಕ್ಷದ ಸಭೆಯ ವೇಳೆಯೂ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಬಂಡಾಯ ನಾಯಕರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿತ್ತು. ಈ ವೇಳೆ ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡದಿದ್ದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನುವ ಮಾಹಿತಿ ಪಕ್ಷದ ಮೂಲಗಳಿಂದ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದು ವಿದೇಶ ಪ್ರವಾಸ ನಂತರ ಸಂಪುಟ ವಿಸ್ತರಣೆ

    ಸಿದ್ದು ವಿದೇಶ ಪ್ರವಾಸ ನಂತರ ಸಂಪುಟ ವಿಸ್ತರಣೆ

    ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ಹಾಗೂ ಸಿದ್ದರಾಮಯ್ಯ ವಿರುದ್ಧ ರಾಹುಲ್ ಗಾಂಧಿಗೆ ಸಿಎಂ ಕುಮಾರಸ್ವಾಮಿ ದೂರು ನೀಡಿದ್ದಾರೆ ಅಂತ ಕೇಳಿ ಬಂದ ಕಾರಣ ಇವತ್ತಿನ ಸಮನ್ವಯ ಸಮಿತಿ ಸಭೆ ಭಾರೀ ಕುತೂಹಲ ಮೂಡಿಸಿತ್ತು. ಆದರೆ ಇಂದಿನ ಸಭೆಯಲ್ಲಿ ಮುಖಾಮುಖಿಯಾದ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಇಬ್ಬರೂ ಏನೂ ಆಗಿಲ್ಲ ಎನ್ನುವ ರೀತಿ ಪರಸ್ಪರ ಹಸ್ತಲಾಘವ ಮಾಡಿ ಒಗ್ಗಟ್ಟು ಪ್ರದರ್ಶಿಸಿದರು.

    ಸಿಎಂ ಕುಮಾರಸ್ವಾಮಿ ಬೆನ್ನು ತಟ್ಟಿದ ಸಿದ್ದರಾಮಯ್ಯ ಅವರು ನಗುಮೊಗದಿಂದಲೇ ಸಭೆಗೆ ಬರಮಾಡಿಕೊಂಡರು. ಸುಮಾರು ಒಂದೂವರೆ ಗಂಟೆ ಕಾಲ ನಡೆದ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚೆ ಮಾಡಿದರು. ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡದೆ ತೆರಳಿದ ಸಿಎಂ ಕುಮಾರಸ್ವಾಮಿ, ಸಭೆ ಬಗ್ಗೆ ಸಮಿತಿಯ ಅಧ್ಯಕ್ಷರು ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು.

    ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, ಸೆಪ್ಟೆಂಬರ್ 3ನೇ ವಾರದಲ್ಲಿ ಸಂಪುಟ ವಿಸ್ತರಣೆ ಜೊತೆಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೂ ನೇಮಕಾತಿ ಮಾಡಲಾಗುತ್ತದೆ. ಸಮ್ಮಿಶ್ರ ಸರ್ಕಾರದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ನಾವು ಜಾರಿಗೆ ತರುತ್ತೇವೆ. ಈ ಸರ್ಕಾರ ಐದು ವರ್ಷ ಅಧಿಕಾರ ಪೂರೈಸಲಿದ್ದು, ಈ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಎಲ್ಲಾ ಯೋಜನೆಗಳು ಮುಂದುವರಿಯಲಿದೆ ಎಂದು ತಿಳಿಸಿದರು.

    ಇದೇ ವೇಳೆ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಚುನಾವಣೆಯಲ್ಲಿ ಕೆಲವು ಕಡೆ ಸ್ನೇಹಪೂರ್ವಕವಾಗಿ ಸ್ಪರ್ಧೆ ಮಾಡಿದ್ದೇವೆ. ಅತಂತ್ರ ಇರುವ ಸ್ಥಳಗಳಲ್ಲಿ ಎರಡು ಪಕ್ಷಗಳು ಸೇರಿ ಅಧಿಕಾರ ಹೊಂದಾಣಿಕೆ ಮಾಡಿಕೊಳ್ಳಲಿದೆ. ಅಲ್ಲದೇ ಸಭೆಯಲ್ಲಿ ವಿಧಾನಪರಿಷತ್‍ಗೆ ಮೂವರನ್ನು ಆಯ್ಕೆ ಮಾಡಲು ಚರ್ಚೆ ನಡೆಸಲಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆ ಮುಕ್ತಾಯವಾದ ಬಳಿಕ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.

    ಇಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಡಿಸಿಎಂ ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಭಾಗವಹಿಸಿದ್ದರು. ಎರಡು ಪಕ್ಷಗಳ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸುವ ಕುರಿತು ಯಾವುದೇ ಚರ್ಚೆ ನಡೆಸಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದರಾಮಯ್ಯ ಕರೆದಿದ್ದ ರಾತ್ರಿ ಊಟಕ್ಕೆ ಅತೃಪ್ತರು ಗೈರು – ಹೆಚ್‍ಕೆಪಿ, ರೋಷನ್‍ಬೇಗ್, ಜಾರಕಿಹೊಳಿ ದೂರದೂರ

    ಸಿದ್ದರಾಮಯ್ಯ ಕರೆದಿದ್ದ ರಾತ್ರಿ ಊಟಕ್ಕೆ ಅತೃಪ್ತರು ಗೈರು – ಹೆಚ್‍ಕೆಪಿ, ರೋಷನ್‍ಬೇಗ್, ಜಾರಕಿಹೊಳಿ ದೂರದೂರ

    ಬೆಂಗಳೂರು: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಇನ್ನೂ ಸಹ ಅನೇಕ ಕಾಂಗ್ರೆಸ್ ನಾಯಕರು ತಮ್ಮ ಅಸಮಾಧಾನದಲ್ಲಿದ್ದು, ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ಕರೆದ ಔತನ ಕೂಟಕ್ಕೂ ಗೈರಾಗಿದ್ದಾರೆ.

    ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ರೋಷನ್ ಬೇಗ್, ಸತೀಶ್ ಜಾರಕಿಹೊಳಿ, ಹೆಚ್‍ಕೆ ಪಾಟೀಲ್ ಬರಲೇ ಇಲ್ಲ. ತಮ್ಮ ಮಗಳನ್ನು ಗೆಲ್ಲಿಸಿದ ಜಯನಗರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸೋದ್ರಲ್ಲಿ ನಾನು ಬ್ಯುಸಿ ಆಗಿದ್ದೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ರೆ, ಮಂತ್ರಿ ಸ್ಥಾನ ಕೊಡಿಸಿದ್ರೆ ಹೋಗ್ತಿದೆ, ಈಗ್ಯಾಕೆ ಹೋಗ್ಲಿ ಅನ್ನೋದು ಬೆಳಗಾವಿಯಲ್ಲಿರುವ ಜಾರಕಿಹೊಳಿ ಅವರ ಅಭಿಪ್ರಾಯವಂತೆ.

    ಜಯಾಮಾಲಾಗೆ ಪರಿಷತ್ ಸಭಾ ನಾಯಕಿ ಸ್ಥಾನ ಕೊಟ್ಟಿರುವ ಕಾರಣ ಹೆಚ್‍ಎಂ ರೇವಣ್ಣ, ವಿ ಎಸ್ ಉಗ್ರಪ್ಪ, ಪ್ರತಾಪ್‍ಚಂದ್ರ ಶೆಟ್ಟಿ ಅಸಮಾಧಾನಗೊಂಡಿದ್ದು, ಕಲಾಪದ ಹೊರಗೆಯೇ ಹೆಚ್ಚು ಕಾಲ ಕಳೆದಿದ್ದಾರೆ. ಹೆಚ್‍ಕೆ ಪಾಟೀಲ್. ಮೊದಲ ದಿನವಷ್ಟೇ ಸದನದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ರೋಷನ್‍ಬೇಗ್ ಇದೂವರೆಗೂ ಸದನಕ್ಕೆ ಬಂದೇ ಇಲ್ಲ.

    ಹಿರಿಯ ನಾಯಕ ಎಸ್.ಆರ್.ಪಾಟೀಲ್ ಮಾತ್ರ ತಮಗೇನು ಸಂಬಂಧ ಇಲ್ಲದಂತೆ ಸದನಕ್ಕೆ ಬಂದು ಮೌನವಾಗಿಯೇ ಕುಳಿತು ಹೋಗುತ್ತಿದ್ದಾರೆ. ಎಂ.ಬಿ.ಪಾಟೀಲ್, ಬಿ.ಸಿ.ಪಾಟೀಲ್, ಶಾಮನೂರು ಶಿವಶಂಕರಪ್ಪ ಸಹ ಮೌನವಾಗಿ ಸದನಕ್ಕೆ ಬಂದು ಹಿಂದಿರುಗುತ್ತಿದ್ದಾರೆ.

  • ರಾಜ್ಯ ಕಾಂಗ್ರೆಸ್‍ನ ಪವರ್ ಲೆಸ್, ಪವರ್ ಫುಲ್ ನಾಯಕರಿಬ್ಬರ ನಡುವೆ ಮುಸುಕಿನ ಗುದ್ದಾಟ!

    ರಾಜ್ಯ ಕಾಂಗ್ರೆಸ್‍ನ ಪವರ್ ಲೆಸ್, ಪವರ್ ಫುಲ್ ನಾಯಕರಿಬ್ಬರ ನಡುವೆ ಮುಸುಕಿನ ಗುದ್ದಾಟ!

    ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲೀಗ ಪವರ್ ಲೆಸ್ ಹಾಗು ಪವರ್ ಫುಲ್ ನಾಯಕರಿಬ್ಬರ ನಡುವೆ ತೆರೆಮರೆಯಲ್ಲಿ ಯಾರು ಬಲಿಷ್ಠರೆಂಬ ಪೈಪೋಟಿ ನಡೆಯುತ್ತಿದೆ. ಇಲ್ಲಿ ಒಬ್ಬರಿಗೆ ಅಧಿಕಾರವಿದ್ರೂ ಪವರ್ ಲೆಸ್ ಆಗಿದ್ದಾರೆ. ಇತ್ತ ಅಧಿಕಾರ ಇಲ್ಲದಿದ್ದರೂ ಪಕ್ಷದ ಆಂತರಿಕ ಆಡಳಿತದಲ್ಲಿ ಹಿಡಿತವನ್ನು ಹೊಂದಿದ್ದಾರೆ. ಈ ಇಬ್ಬರ ನಾಯಕರ ಪೈಪೋಟಿಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೂ ಬ್ರೇಕ್ ಬಿದ್ದಿದೆ.

    ಪವರ್ ಲೆಸ್ ಹಾಗೂ ಪವರ್ ಫುಲ್ ಗೇಮ್ ಆಡ್ತಾ ಇರೋದು ಬೇರೆ ಯಾರು ಅಲ್ಲಾ ಒಬ್ರು ಡಿಸಿಎಂ ಜಿ.ಪರಮೇಶ್ವರ್ ಇನ್ನೊಬ್ಬರು ಮಾಜಿ ಸಿಎಂ, ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಮುಖ್ಯಸ್ಥ ಸಿದ್ದರಾಮಯ್ಯ. ಪವರ್ ಫುಲ್ ಮತ್ತು ಪವರ್ ಲೆಸ್ಸ್ ನಾಯಕರ ಕಣ್ಣಾಮುಚ್ಚಾಲೆ ಆಟದಿಂದಾಗಿ ವಾರದ ಒಳಗೆ ನಿಗಮ ಮಂಡಳಿ ಅಧ್ಯಕ್ಷರಾಗ್ತೀವಿ ಅಂದುಕೊಂಡಿದ್ದ ಶಾಸಕರು, ನಾಯಕರುಗಳಿಗೆ ನಿರಾಸೆಯಾಗಿದೆ.

    ಕಾಂಗ್ರೆಸ್ ಹೈಕಮಾಂಡ್ ಕ್ಯಾಬಿನೆಟ್ ಹಾಗೂ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡುವಂತೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಗೆ ಹೋದ ಕಾರಣ ಪರಮೇಶ್ವರ್ ಯಾವುದೇ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೈಕಮಾಂಡ್ ನಿಗಮ ಮಂಡಳಿಯ ಪಟ್ಟಿ ಕೊಡಿ ಅಂದ್ರು ಪವರ್ ಇರೋ ನಾಯಕರು ಲಿಸ್ಟ್ ಕೊಡ್ತಿಲ್ಲ. ಪವರ್ ಕಳೆದುಕೊಂಡವರು ಪಟ್ಟು ಬಿಡ್ತಿಲ್ಲ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಸಂಪುಟ ವಿಸ್ತರಣೆ ಯಾವಾಗ..?: ಇತ್ತ ಸಚಿವ ಅಥವಾ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಂಪುಟ ರಚನೆ ಯಾವಾಗ ಎಂದು ಪರಮೇಶ್ವರ್ ಅವರ ದುಂಬಾಲು ಬಿದ್ದಿದ್ದಾರಂತೆ. ಇತ್ತ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಸಿದ್ದರಾಮಯ್ಯ ಧರ್ಮಸ್ಥಳದಿಂದ ಬಂದ ಮೇಲೆ ನೆಮ್ಮದಿಯಾಗಿ ಕುಳಿತು ಮಾತನಾಡೋಣ ಅಂತಾ ಹೇಳಿದ್ದರಿಂದ ಪರಮೇಶ್ವರ್ ಯಾವ ಪಟ್ಟಿಯನ್ನು ಅಂತಿಮಗೊಳಿಸಲು ಮುಂದಾಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರೋದರ ಜೊತೆಗೆ ಉಪ ಮುಖ್ಯಮಂತ್ರಿ ಆಗಿದ್ದರೂ ನಾನು ಬೇರೆಯವರ ಮಾತು ಕೇಳುವ ಪರಿಸ್ಥಿತಿ ಬಂದಿದೆ. ಆದ್ರೆ ಇದೆನ್ನಲ್ಲಾ ಎಲ್ಲರ ಮುಂದೆ ಹೇಳಿಕೊಳ್ಳೊದಕ್ಕೆ ಆಗಲ್ಲ, ಅನಿವಾರ್ಯವಾಗಿ ಸಿದ್ದರಾಮಯ್ಯನವರು ಚಿಕಿತ್ಸೆ ಮುಗಿಸಿ ಬರುವವರೆಗೂ ಕಾಯುವುದು ಅನಿವಾರ್ಯವಾಗಿದೆ ಎಂದು ಪರಮೇಶ್ವರ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರುಗಳು ಈಗ ಪರಮೇಶ್ವರ್ ಗೆ ಪವರ್ ಇದ್ರು ಪವರ್ ಲೆಸ್. ಸಿದ್ರಾಮಯ್ಯ ಕೈಲಿ ಪವರ್ ಇಲ್ದಿದ್ರು ಪವರ್ ಫುಲ್ ಕಣ್ರಿ ಅಂತ ತಮ್ಮ ಆಪ್ತರ ಜೊತೆ ಮಾತನಾಡಿಕೊಳ್ಳುತ್ತಿದ್ದಾರೆ.