Tag: ಸಂಬಳ

  • 27 ತಿಂಗಳಿನಿಂದ ಸಂಬಳ ಇಲ್ಲ – ಪಂಚಾಯತ್‌ ಕಚೇರಿ ಮುಂದೆಯೇ ವಾಟರ್‌ಮ್ಯಾನ್‌ ನೇಣಿಗೆ ಶರಣು

    27 ತಿಂಗಳಿನಿಂದ ಸಂಬಳ ಇಲ್ಲ – ಪಂಚಾಯತ್‌ ಕಚೇರಿ ಮುಂದೆಯೇ ವಾಟರ್‌ಮ್ಯಾನ್‌ ನೇಣಿಗೆ ಶರಣು

    ಚಾಮರಾಜನಗರ: 27 ತಿಂಗಳಿಂದ ಸಂಬಳ (Salary) ನೀಡದ್ದಕ್ಕೆ ಬೇಸತ್ತು ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದಲ್ಲಿ ನಡೆದಿದೆ.

    ವಾಟರ್‌ಮ್ಯಾನ್‌ ಚಿಕ್ಕೂಸನಾಯಕ (60) ಅವರು ಗ್ರಾಮ ಪಂಚಾಯತ್‌ (Village Panchayat) ಕಚೇರಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಆತ್ಮಹತ್ಯೆಗೆ ಶರಣಾಗುವ ಮುನ್ನ ಚಿಕ್ಕೂಸನಾಯಕ ಡೆತ್ ನೋಟ್ ಬರೆದು ಗೋಡೆಗೆ ಅಂಟಿಸಿದ್ದಾರೆ. ಗ್ರಾಪಂ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್, ಪಿಡಿಒ ರಾಮೇಗೌಡ ನನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ನನಗೆ ರಜೆ ಬೇಕೆಂದರೂ ಕೊಡದೇ ಕಿರುಕುಳ ಕೊಡುತ್ತಿದ್ದರು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ವರೆಗೂ ಕೆಲಸ ಮಾಡಿಸುತ್ತಿದ್ದರು. ಎಷ್ಟು ಬಾರಿ ಮನವಿ ಮಾಡಿದರೂ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ದರು.

    ಬಿಲ್ ಕಲೆಕ್ಷನ್ ಮಾಡಿಕೊಂಡು ಬಂದರಷ್ಟೇ ಸಂಬಳ ಕೊಡುವುದಾಗಿ ಪಿಡಿಒ ರಾಮೇಗೌಡ ಪೀಡಿಸಿಸುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ.

    ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಡಿಒ ಹಾಗೂ ಗ್ರಾ.ಪಂ.ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸಲು ಕುಟುಂಬಸ್ಥರ ಆಗ್ರಹಿಸಿದ್ದಾರೆ.

  • ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 2ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

    ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.12.25 ರಿಂದ ಶೇ.14.25 ಗೆ ಏರಿಕೆ ಮಾಡಿದೆ.  ಇದನ್ನೂ ಓದಿ:  ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ಸಾಮಾನ್ಯವಾಗಿ ರಾಜ್ಯ ಸರ್ಕಾರವೂ ಏರಿಕೆ ಮಾಡುತ್ತದೆ. ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಹೆಚ್ಚುವರಿ 3% ತುಟ್ಟಿ ಭತ್ಯೆ ನೀಡಲು ಒಪ್ಪಿಗೆ ನೀಡಿತ್ತು.  ಇದನ್ನೂ ಓದಿ:  ಕೇದಾರನಾಥ ಯಾತ್ರಿಗಳಿಗೆ ಗುಡ್ ನ್ಯೂಸ್ – 12.9 ಕಿಮೀ ರೋಪ್‌ವೇ ನಿರ್ಮಿಸಲಿದೆ ಅದಾನಿ ಕಂಪನಿ

    ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿತ್ತು.

  • ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ – ಡಿಎ 3% ಏರಿಕೆ

    ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ – ಡಿಎ 3% ಏರಿಕೆ

    ನವದೆಹಲಿ: ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗಿಫ್ಟ್‌ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ 3% ತುಟ್ಟಿ ಭತ್ಯೆ (Dearness Allowance) ನೀಡಲು ಒಪ್ಪಿಗೆ ನೀಡಿದೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿದೆ.

     

    ಈ ವರ್ಷದಲ್ಲಿ ಮಾರ್ಚ್ ತಿಂಗಳಿನಲ್ಲಿ 2% ರಷ್ಟು ಡಿಎ ಏರಿಕೆ ಮಾಡಲಾಗಿತ್ತು. ಈಗ ಮೊತ್ತೊಮ್ಮೆ ಡಿಕೆ ಏರಿಕೆ ಮಾಡಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಇದು ಮೂಲ ವೇತನ/ಪಿಂಚಣಿಯ 55% ಹಾಲಿ ದರಕ್ಕಿಂತ 3% ಹೆಚ್ಚಳವಾಗಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ 1,0083.96 ಕೋಟಿ ರೂ.ಗಳ ಹೊರೆ ಬೀಳಲಿದೆ. ಇದನ್ನೂ ಓದಿ: RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

    7ನೇ ಕೇಂದ್ರ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಜೀವನ ವೆಚ್ಚ ಏರಿಕೆಗೆ ಅನುಗುಣವಾಗಿ ತುಟ್ಟಿಭತ್ಯೆಯನ್ನು ಪ್ರತಿ ವರ್ಷ ನೀಡಲಾಗುತ್ತದೆ. ಕೇಂದ್ರದ ನಿರ್ಧಾರದಿಂದ ಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.

    ಗ್ರಾಹಕರ ಬೆಲೆ ಸೂಚ್ಯಂಕದ ಆಧಾರದ ಮೇಲೆ ವರ್ಷದಲ್ಲಿ 2 ಬಾರಿ ಕೇಂದ್ರ ಸರ್ಕಾರ ಡಿಎ ಏರಿಕೆ ಮಾಡುತ್ತೆ. ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಿನಲ್ಲಿ ಡಿಎ, ಡಿಆರ್ ನೀಡಲಾಗುತ್ತದೆ.

  • ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?

    ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?

    – ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ
    – ಬಿಜೆಪಿ ಸರ್ಕಾರ ಪ್ರತ್ಯೇಕ ನಿಧಿ ಹಂಚಿಕೆ ಮಾಡಿಲ್ಲ

    ಬೆಂಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ (Salary Hike) ಇರಲು ಬಿಜೆಪಿ ಸರ್ಕಾರದ ಆದೇಶವೇ ಕಾರಣ ಎಂದು ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ದೂರಿದ್ದಾರೆ.

    ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಜಾರಿ ಮಾಡಬಹುದು ಅಂತಾ ಆದೇಶದಲ್ಲಿ ಇದೆ. ಬಿಜೆಪಿ (BJP) ಸರ್ಕಾರದ ಆದೇಶದಿಂದ ಹಿಂಬಾಕಿ ತಡವಾಗಿದೆ ಎಂದು ಹೇಳಿದ್ದಾರೆ.

    ಏನಿದು ಆದೇಶ ಗೊಂದಲ?
    ಪ್ರತಿ 4 ವರ್ಷಗಳಿಗೊಮ್ಮೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ನಡೆಯುತ್ತದೆ. ಈ ಹಿಂದೆ 2012-2016ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2012ರಿಂದ ಜಾರಿಗೆ ಬರುವುದಾಗಿ, 2016-2020ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2016ರಿಂದ ಜಾರಿಗೆ ಬರುವಂತೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖವಾಗಿತ್ತು.

    2023ರ ಆದೇಶದಲ್ಲಿ 2023ರ ಮಾರ್ಚ್ 1ರಿಂದ ಜಾರಿಗೆ ಬರುವಂತೆ ಎಂದು ಉಲ್ಲೇಖಿಸಿದೆ. ಈ ಆದೇಶದಲ್ಲಿ 2020 ರಿಂದ ಎಂದು ಉಲ್ಲೇಖ ಮಾಡಿಲ್ಲ. ಈ ಆದೇಶದ ಅನ್ವಯ ಮುಂದಿನ 4 ವರ್ಷ ಅಂದರೆ 2027 ರವರೆಗೆ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ. ಆದೇಶದಲ್ಲಿ ಎಲ್ಲಿಯೂ ಸ್ಪಷ್ಟವಾಗಿ 2020 ರಿಂದಲೇ ಜಾರಿಗೆ ಬರುವಂತೆ ಎಂದು ಉಲ್ಲೇಖ ಮಾಡದ ಕಾರಣ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂಬ ವಾದವನ್ನು ಕಾಂಗ್ರೆಸ್‌ ಸರ್ಕಾರ ಮುಂದಿಟ್ಟಿದೆ. ಇದನ್ನೂ ಓದಿ: ಟೆಕ್ಕಿಗಳಿಗೆ ಗುಡ್‌ನ್ಯೂಸ್‌ – ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

    ಪ್ರತ್ಯೇಕ ನಿಧಿ ಇಲ್ಲ
    2020 ರಿಂದ‌ ಅನ್ವಯವಾಗುವಂತಿದ್ದರೆ ಇದಕ್ಕಾಗಿ‌ ಯಾವುದೇ ಪ್ರತ್ಯೇಕ ನಿಧಿಯನ್ನು ಹಿಂದಿನ ಸರ್ಕಾರ ಹಂಚಿಕೆ‌ ಮಾಡಿಲ್ಲ. ಈ‌ ಹಿಂದಿನ ಸರ್ಕಾರದ ಆದೇಶವನ್ನು ಮಾರ್ಪಾಡಿಸಲು ಸಾಧ್ಯವಿಲ್ಲ. 2023 ರಿಂದ 2027 ರವರೆಗೆ ನಾಲ್ಕು ವರ್ಷಗಳ ಅವಧಿಯವರೆಗೂ ಬಿಜೆಪಿ ಸರ್ಕಾರದ ಆದೇಶ‌ ಅನ್ವಯವಾಗುತ್ತದೆ. ಯಾವುದೇ ನಿಧಿಯನ್ನು ಮೀಸಲಿಡದ ಕಾರಣ 2027 ರಿಂದಲೇ ಮುಂದಿನ ವೇತನ‌ ಪರಿಷ್ಕರಣೆ ಜಾರಿಯಾಗಲು ಸಾಧ್ಯ ಎಂಬ ನಿಲುವಿಗೆ ಸರ್ಕಾರ ಬಲವಾಗಿ ಅಂಟಿಕೊಂಡಿದೆ.

    2020ರಲ್ಲಿ ಏನಾಗಿತ್ತು?
    ಕೋವಿಡ್‌ ಲಾಕ್‌ಡೌನ್‌ ಕಾರಣದಿಂದ 2020 ರಲ್ಲಿ ಕೆಲ ತಿಂಗಳು ಬಸ್ಸುಗಳ ಸಂಚಾರವನ್ನು ಬಂದ್‌ ಮಾಡಲಾಗಿತ್ತು. ನಂತರ ಸೇವೆ ಆರಂಭಗೊಂಡಿದ್ದರೂ ಜನ ಕಡಿಮೆ ಪ್ರಮಾಣದಲ್ಲಿ ಸಂಚರಿಸುತ್ತಿದ್ದರು. ಕೋವಿಡ್ ಸಮಯದಲ್ಲಿ ಪೂರ್ಣ/ ಅಪೂರ್ಣ ಪ್ರಮಾಣದಲ್ಲಿ ಬಸ್ಸುಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದರಿಂದ ಸಾರಿಗೆ ಇಲಾಖೆ ಮುಳುಗುವ ಹಂತದಲ್ಲಿತ್ತು.

    ಈ ಕಠಿಣ ಪರಿಸ್ಥಿತಿಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳ‌ ಸಿಬ್ಬಂದಿ ವೇತನ‌ ಹಾಗೂ ಇತರೇ ಭತ್ಯೆಗಳನ್ನು ಸರ್ಕಾರ ಪಾವತಿ ಮಾಡಿತ್ತು. ಆದರೆ ಸಂಬಳವನ್ನು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿರಲಿಲ್ಲ. ಕೋವಿಡ್‌ ನಂತರ ಬಸ್ಸುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಇಳಿದ ಬಳಿಕ 2023 ರಲ್ಲಿ ಬಿಜೆಪಿ ಸರ್ಕಾರ ವೇತನ ಪರಿಷ್ಕರಣೆ ಮಾಡಿತ್ತು.

    ನೌಕರರ ವಾದ ಏನು?
    ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿಲ್ಲ ಮತ್ತು ಕಡಿಮೆ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದರು. ಆದರೆ ಈಗ ಬಸ್ಸುಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡಿದ್ದರೂ ನಿರ್ವಾಹಕರು ಟಿಕೆಟ್‌ ಹರಿಯುತ್ತಾರೆ. ಉಚಿತ ಟಿಕೆಟ್‌ ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಪಾವತಿ ಮಾಡಬೇಕು.

    ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿ ಮೈಲಿಗಲ್ಲು ಸ್ಥಾಪಿಸಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ಆದಾಯವೂ ಜಾಸ್ತಿಯಾಗಿದೆ. ಆದಾಯ ಜಾಸ್ತಿಯಾಗಿರುವ ಕಾರಣ ಸರ್ಕಾರ ಸಂಬಳ ಏರಿಕೆ ಮಾಡಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ.

     

  • ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ನವದೆಹಲಿ: ಕೇಂದ್ರ ಸರ್ಕಾರ ಸಂಸದರ ಸಂಬಳವನ್ನು (Salary) 24% ಏರಿಕೆ ಮಾಡಿದೆ. ಏಪ್ರಿಲ್‌ 1 ರಿಂದ ಇದು ಜಾರಿಗೆ ಬರಲಿದೆ.

    ಸಂಸದೀಯ ವ್ಯವಹಾರಗಳ ಸಚಿವಾಲಯದ (Ministry of Parliamentary Affairs) ಸುತ್ತೋಲೆಯ ಪ್ರಕಾರ, ಸಂಸದರ ಮಾಸಿಕ ವೇತನವು 1,00,000 ರೂ.ಗಳಿಂದ 1,24,000 ರೂ.ಗಳಿಗೆ ಏರಿಕೆಯಾಗಿದೆ.  ದೈನಂದಿನ ಭತ್ಯೆ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.

    ಸಂಸದರು ಮತ್ತು ಮಾಜಿ ಸಂಸದರ ಮಾಸಿಕ ಪಿಂಚಣಿಯನ್ನು 25,000 ರೂ.ಗಳಿಂದ 31,000 ರೂ.ಗಳಿಗೆ ಪರಿಷ್ಕರಿಸಲಾಗಿದೆ. ಹೆಚ್ಚುವರಿಯಾಗಿ ಮಾಜಿ ಸಂಸದರ ಹೆಚ್ಚುವರಿ ಪಿಂಚಣಿಯನ್ನು ವರ್ಷಕ್ಕೆ 2,000 ರೂ.ಗಳಿಂದ 2,500 ರೂ.ಗಳಿಗೆ ಏರಿಕೆ ಮಾಡಲಾಗಿದೆ.

    ಬೇರೆ ಏನೇನು ಸಿಗುತ್ತೆ?
    ಕ್ಷೇತ್ರದೊಳಗಿನ ತಿರುಗಾಟದ ಖರ್ಚಿಗಾಗಿ ಕ್ಷೇತ್ರದ ಭತ್ಯೆಯಾಗಿ ಪ್ರತಿ ತಿಂಗಳು 70,000 ರೂ. ಸಿಗುತ್ತದೆ. ಕಚೇರಿ ನಿರ್ವಹಣೆಗಾಗಿ ಪ್ರತಿ ತಿಂಗಳು 60,000 ರೂ. ಸಿಗುತ್ತದೆ

    ಸಂಸದರಿಗೆ ಪ್ರತಿವರ್ಷ ತಾವೂ ಸೇರಿದಂತೆ ಕುಟುಂಬ ಸದಸ್ಯರು 34 ಬಾರಿ ಉಚಿತವಾಗಿ ವಿಮಾನ ಪ್ರಯಾಣ ಕೈಗೊಳ್ಳಬಹುದು. ಅದೇ ರೀತಿ ವೈಯಕ್ತಿಕವಾಗಿ ಹಾಗೂ ಸಂಸದರ ಕಾರ್ಯಗಳಿಗಾಗಿ ಉಚಿತವಾಗಿ ಫಸ್ಟ್‌ ಕ್ಲಾಸ್‌ ರೈಲು ಪ್ರಯಾಣ ಮಾಡಬಹುದು. ಅಷ್ಟೇ ಅಲ್ಲ ತಮ್ಮ ಕ್ಷೇತ್ರ ಸುತ್ತಾಟಕ್ಕಾಗಿ ಮೈಲೇಜ್‌ ಭತ್ಯೆಯನ್ನು ಪಡೆಯಬಹುದಾಗಿದೆ.

     

  • ಗ್ಯಾರಂಟಿಯಿಂದ ಸರ್ಕಾರಿ ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ: ತೆಲಂಗಾಣ ಸಿಎಂ

    ಗ್ಯಾರಂಟಿಯಿಂದ ಸರ್ಕಾರಿ ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ: ತೆಲಂಗಾಣ ಸಿಎಂ

    – ಹಿಮಾಚಲದ ಬಳಿಕ ತೆಲಂಗಾಣ ಸರ್ಕಾರಕ್ಕೆ ಸಂಕಷ್ಟ
    – ಆರ್‌ಬಿಐನಿಂದ 4 ಸಾವಿರ ಕೋಟಿ ಕೈ ಸಾಲ

    ಹೈದರಾಬಾದ್‌: ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗಾಗಲೇ ಹಿಮಾಚಲ ಪ್ರದೇಶದಲ್ಲಿರುವ (Himachal Pradesh) ಕಾಂಗ್ರೆಸ್‌ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ತೆಲಂಗಾಣದಲ್ಲಿರುವ (Telangana) ರೇವಂತ್‌ ರೆಡ್ಡಿ (Revanth Reddy) ಸರ್ಕಾರವೂ ಸಂಕಷ್ಟಕ್ಕೆ ತುತ್ತಾಗಿದ್ದು ಸರ್ಕಾರಿ ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ ಎಂದು ಹೇಳಿದೆ.

    ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ ಈಗ ಸರ್ಕಾರದ ಬಳಿ ಸಂಬಳ ಕೊಡುವುದಕ್ಕೂ ಹಣ ಇಲ್ಲ. ನಮ್ಮ ಸರ್ಕಾರ ಸಾಲದ ಹೊರೆ ಮತ್ತು ಇತರ ಕಾರಣಗಳಿಂದ ಹಣಕಾಸಿನ ಕೊರತೆಯನ್ನು ಎದುರಿಸುತ್ತಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಆರ್‌ಬಿಐಯಿಂದ 4 ಸಾವಿರ ಕೋಟಿ ರೂ. ಕೈ ಸಾಲ ಪಡೆದಿದ್ದೇವೆ ಎಂದು ಸಿಎಂ ರೇವಂತ್‌ ರೆಡ್ಡಿ ಅವರೇ ಅಧಿಕೃತವಾಗಿ ತಿಳಿಸಿದ್ದಾರೆ.

     

     

     

    ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಹಣ ಇಲ್ಲದ ಕಾರಣ ರಾಜ್ಯ ನೌಕರರಿಗೆ ಪ್ರತೀ ತಿಂಗಳ ಆರಂಭದಲ್ಲಿ ವೇತನ (Salary) ನೀಡಲು ಕಷ್ಟವಾಗುತ್ತಿದೆ. ನೌಕರರ ತುಟ್ಟಿ ಭತ್ಯೆ (ಡಿಎ) ಬೇಡಿಕೆ ನ್ಯಾಯಯುತವಾದದ್ದೇ. ಆದರೆ ಪ್ರಸ್ತುತ ಕಠಿಣ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಾಗಿ ಒತ್ತಾಯಿಸಬೇಡಿ. ಮುಂದೆ ಸರ್ಕಾರದ ಹಣಕಾಸು ಪರಿಸ್ಥಿತಿಯ ಸಂಪೂರ್ಣ ವಿವರವನ್ನು ನೀಡುತ್ತೇನೆ. ಸರ್ಕಾರಿ ನೌಕರರು ಮುಂದಿನ ದಿನಗಳಲ್ಲಿ ತಮ್ಮ ಕೆಲಸಗಳನ್ನು ಸೇವೆಯಂತೆ ಮಾಡಬೇಕು. ನೌಕರರು ದಯವಿಟ್ಟು ಸರ್ಕಾರದ ಜೊತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಹೊಡೆತಕ್ಕೆ ತತ್ತರ – ದೇವಸ್ಥಾನದ ಹಣಕ್ಕೆ ಕೈ ಹಾಕಿತಾ ಹಿಮಾಚಲ ಸರ್ಕಾರ?

     

     

    ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ರೇವಂತ್‌ ರೆಡ್ಡಿ ರಾಜ್ಯದ ಕರಾಳ ಆರ್ಥಿಕ ಪರಿಸ್ಥಿತಿಯನ್ನು ತೆರೆದಿಟ್ಟಿದ್ದರು. ರಾಜ್ಯದ ಸಾಲದ ಮೊತ್ತ ಈಗ 7 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ರಾಜ್ಯದ ಮಾಸಿಕ ಆದಾಯ 18,500 ಕೋಟಿ ರೂ. ಇದೆ. ಅದರಲ್ಲಿ 6,500 ಕೋಟಿ ರೂ. ವೇತನ ಮತ್ತು ಪಿಂಚಣಿ ಪಾವತಿಗೆ ಹೋಗುತ್ತಿದೆ. 6,500 ಕೋಟಿ ರೂ. ಸಾಲ ಮತ್ತು ಬಡ್ಡಿ ಮರುಪಾವತಿಗೆ ಬೇಕು. ಉಳಿದ ಕೇವಲ 5,000 ಕೋಟಿ ರೂ. ಮೊತ್ತವನ್ನು ವಿವಿಧ ಯೋಜನೆಗಳಿಗೆ ಬಳಸಲಾಗುತ್ತಿದೆ. ಹೀಗಾಗಿ ಉಳಿದ ವೆಚ್ಚಗಳಿಗೆ ಸರ್ಕಾರದ ಬಳಿ ದುಡ್ಡೇ ಇಲ್ಲ ಎಂದಿದ್ದರು.

    2023ರ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 5 ಗ್ಯಾರಂಟಿಗಳನ್ನು ಪ್ರಕಟಿಸಿ ಅಧಿಕಾರಕ್ಕೆ ಏರಿತ್ತು. ಇದರಿಂದ ಉತ್ತೇಜನಗೊಂಡ ಕಾಂಗ್ರೆಸ್‌ ತೆಲಂಗಾಣ ಚುನಾವಣೆಯಲ್ಲೂ ಗ್ಯಾರಂಟಿ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಏರಿತ್ತು. ಇದನ್ನೂ ಓದಿ: ಗ್ಯಾರಂಟಿ ಹೊಡೆತಕ್ಕೆ ಹಿಮಾಚಲ ತತ್ತರ – ಮಂತ್ರಿಗಳು, ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ಸಂಬಳ ಕಟ್‌

    ಕೆಲ ತಿಂಗಳ ಹಿಂದೆ ಕಾಂಗ್ರೆಸ್‌ ಆಡಳಿತದ ಮತ್ತೊಂದು ರಾಜ್ಯವಾದ ಹಿಮಾಚಲಪ್ರದೇಶದಲ್ಲೇ ಇದೇ ಪರಿಸ್ಥಿತಿ ನಿರ್ಮಾಣವಾಗಿ, ಇತಿಹಾಸದಲ್ಲೇ ಮೊದಲ ಬಾರಿಗೆ ವೇತನ, ಪಿಂಚಣಿ ಪಾವತಿ ವಿಳಂಬವಾಗಿತ್ತು. ಸಿಎಂ, ಶಾಸಕರ ವೇತನ ಪಾವತಿ ಮುಂದೂಡಲಾಗಿತ್ತು.

     

  • ಸಂಬಳ ಬೇಕೇ, ಹಾಗಾದ್ರೆ ಕಮೀಷನ್‌ ಕೊಡಿ – ಇಂಧನ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ಗುತ್ತಿಗೆದಾರರ ಕಾಟ

    ಸಂಬಳ ಬೇಕೇ, ಹಾಗಾದ್ರೆ ಕಮೀಷನ್‌ ಕೊಡಿ – ಇಂಧನ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ಗುತ್ತಿಗೆದಾರರ ಕಾಟ

    ಬೆಂಗಳೂರು: ಇಂಧನ ಇಲಾಖೆಯ (Energy Department) ಹೊರ ಗುತ್ತಿಗೆ ಸಿಬ್ಬಂದಿಗೆ ಏಜೆನ್ಸಿ ಗುತ್ತಿಗೆದಾರರು ಕಿರುಕುಳ ನೀಡುತ್ತಿದ್ದಾರೆ. ತಿಂಗಳ ವೇತನದಲ್ಲಿಯೂ (Salary) ಕಮೀಷನ್‌ (Commission) ಕೇಳುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಇಂಧನ ಇಲಾಖೆಯ ಕೆಪಿಟಿಸಿಎಲ್, ಎಸ್ಕಾಂನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ತಿಂಗಳಿಗೆ ಸಿಗುವುದು 15 ಸಾವಿರ ರೂ. ಅಲ್ಪ ಸಂಬಳದಲ್ಲಿಯೇ ಜೀವನ ಸಾಗಿಸೋದು ಕಷ್ಟ. ಹೀಗಿರುವಾಗ ದುಡ್ಡಿನಲ್ಲಿ ತಿಂಗಳು ತಿಂಗಳು 2 ಸಾವಿರ ರೂ. ನಿಂದ ಹಿಡಿದು 5 ಸಾವಿರದವರೆಗೂ ಕಮೀಷನ್ ಕೇಳುತ್ತಿದ್ದಾರೆ.

    ಸಾಮಾನ್ಯವಾಗಿ ಏಜೆನ್ಸಿ ಅಥವಾ ಗುತ್ತಿಗೆದಾರರಿಗೆ ಸಿಬ್ಬಂದಿಯನ್ನು ನೀಡಿದ್ದಕ್ಕೆ ಸರ್ಕಾರದಿಂದ ಹಣ ಪಾವತಿಯಾಗಿರುತ್ತದೆ. ಆದರೆ ಕೆಲ ಏಜೆನ್ಸಿಯವರು ಸರ್ಕಾರದ ದುಡ್ಡು ಪಡೆದು ನಮ್ಮ ಬಳಿಯೂ ವಸೂಲಿ ಮಾಡುತ್ತಿದ್ದಾರೆ ಎನ್ನುವುದು ಸಿಬ್ಬಂದಿ ಆರೋಪ. ಇದನ್ನೂ ಓದಿ: ಬೆಂಗ್ಳೂರಿಂದ ಕುಂಭಮೇಳಕ್ಕೆ ಹೋಗ್ಬೇಕಾ? – ನಿಮಗಾಗಿಯೇ ಹೊರಡಲಿದೆ ವಿಶೇಷ ರೈಲು

     

    ವಿಚಿತ್ರ ಅಂದರೆ ಈ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಮಾಡಿಕೊಂಡರೆ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗುತ್ತೆ ಎಂದು ಇಲಾಖೆಯೇ ವರದಿ ಕೊಟ್ಟಿದೆ. ಆದರೆ ಸರ್ಕಾರ ಮಾತ್ರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಕಾರ್ಮಿಕ ಸಂಘದ ಬೆಟ್ಟೇಗೌಡ ಪಬ್ಲಿಕ್‌ ಟಿವಿಗೆ ತಿಳಿಸಿದ್ದಾರೆ.

    ಗುತ್ತಿಗೆದಾರರು, ಏಜೆನ್ಸಿ ಪರ ನಿಲ್ಲದೇ ಇಂಧನ ಇಲಾಖೆ ಈ ವಿಚಾರ ದಲ್ಲಿ ಸಿಬ್ಬಂದಿ ಪರ ನಿಲ್ಲಬೇಕಾಗಿದೆ.

  • ಕಳ್ಳತನದ ಕೆಲಸಕ್ಕೆ 20 ಸಾವಿರ ಸಂಬಳ- ಆರೋಪಿಗಳ ಬಂಧನ

    ಕಳ್ಳತನದ ಕೆಲಸಕ್ಕೆ 20 ಸಾವಿರ ಸಂಬಳ- ಆರೋಪಿಗಳ ಬಂಧನ

    – ಕಳ್ಳತನಕ್ಕೆಂದೇ ನೇಮಕ ಮಾಡಿಕೊಂಡಿದ್ದ ಮಾಲೀಕ

    ತುಮಕೂರು: ನಾವು ಸಂಬಳಕ್ಕೆ ಕೆಲಸ ಮಾಡುವ ಶಿಕ್ಷಕ, ವೈದ್ಯ, ಎಂಜಿನಿಯರ್ ಈ ರೀತಿಯ ವೃತ್ತಿಗಳನ್ನ ಕೇಳಿರ್ತೀವಿ, ಕಂಪನಿಗಳು ಸಂಬಳಕ್ಕೆ ಸಿಬ್ಬಂದಿ ಅನ್ನು ನೇಮಕ ಮಾಡುತ್ತವೆ ಎಂದು ನೋಡ್ತೀರ್ತಿವಿ. ಆದರೆ ತುಮಕೂರಿನಲ್ಲಿ (Tumakuru) ಕಳ್ಳತನಕ್ಕೆಂದೇ ಸಂಬಳಕ್ಕೆ ನೇಮಕ ಮಾಡಿಕೊಂಡ ಅಪರೂಪದ ಕೆಲಸವೊಂದನ್ನು ಪತ್ತೆ ಹಚ್ಚಿದ್ದಾರೆ.

    ಇಂತಹ ಅಪರೂಪದ ಪ್ರಕರಣ ನೋಡಿ ಗೃಹ ಸಚಿವರ ತವರು ಕ್ಷೇತ್ರ ಕೊರಟಗೆರೆ ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ. ಬೆಂಗಳೂರು ಮೂಲದ ರಾಘವೇಂದ್ರ ಎಂಬಾತ ವೆಂಕಟೇಶ್ ಎಂಬಾತನನ್ನ ಕಳ್ಳತನಕ್ಕಾಗಿ ಕೆಲಸಕ್ಕೆ ಇಟ್ಟುಕೊಂಡಿದ್ದಾನೆ. ವೆಂಕಟೇಶನಿಗೆ 20 ಸಾವಿರ ರೂ. ಸಂಬಳ ಕೂಡ ಫಿಕ್ಸ್ ಮಾಡಿದ್ದಾನೆ. 20 ಸಾವಿರ ಸಂಬಳ ಪಡೆದ ಮೇಲೆ ಸುಮ್ನೆ ಕುಳಿತ್ತುಕೊಳ್ಳೊಕ್ಕೆ ಆಗುತ್ತಾ?. ಅದಕ್ಕೆ ಕಳ್ಳ ವೆಂಕಟೇಶ್ ಕೊರಟಗೆರೆ ಸುತ್ತಮುತ್ತ ರಾತ್ರಿ ಹೊತ್ತು ಕೊಳವೆ ಬಾವಿಯಲ್ಲಿದ್ದ ವೈರ್ ಗಳನ್ನ ಕದ್ದು ರಾಘವೇಂದ್ರನಿಗೆ ಕೊಡ್ತಿದ್ನಂತೆ. ಈ ಕದ್ದ ಕೇಬಲ್ ವೈರ್ ಗಳನ್ನ ರಾಘವೇಂದ್ರನು ವಿನೇಶ್ ಪಟೇಲ್ ಎಂಬಾತನಿಗೆ ಮಾರಾಟ ಮಾಡ್ತಿದ್ನಂತೆ. ಸರಣಿ ಕಳ್ಳತನದ ಮೇಲೆ ಕಣ್ಣಿಟ್ಟು ಕಾದು ಕುಳಿತಿದ್ದ ಪೊಲೀಸರಿಗೆ ವಡ್ಡಗೆರೆಯಲ್ಲಿ ಈ ಐನಾತಿ ಖದೀಮರು ತೋರಿದ ಕಳ್ಳತನದ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

    ಇದನ್ನೇ ಆಧಾರವಾಗಿ ಇಟ್ಟುಕೊಂಡು ತನಿಖೆ ನಡೆಸಿದ ಪೊಲೀಸರು ವೆಂಕಟೇಶ್, ರಾಘವೇಂದ್ರ, ವಿನೇಶ್ ಪಟೇಲ್‍ನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆಯಲ್ಲಿ ಸಂಬಳ ಪಡೆದು ಕಳ್ಳತನ ಮಾಡುತ್ತಿರುವ ವಿಚಾರವನ್ನ ವೆಂಕಟೇಶ್ ಬಾಯ್ಬಿಟ್ಟಿದ್ದಾನೆ. ಕೊರಟಗೆರೆ ಪೊಲೀಸರು ಈ ಮೂವರನ್ನ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಸಾಲ ಮರುಪಾವತಿಸುವಂತೆ ಪತ್ನಿ, ಪುತ್ರನಿಗೆ 2 ದಿನ ಗೃಹ ಬಂಧನ- ಮನನೊಂದು ರೈತ ಆತ್ಮಹತ್ಯೆ

    ಒಟ್ಟಾರೆ ವಿಚಿತ್ರ ಮತ್ತು ಅಪರೂಪದ ಪ್ರಕರಣಕ್ಕೆ ಕೊರಟಗೆರೆ ಠಾಣೆ ಸಾಕ್ಷಿಯಾಗಿದೆ. ಗೃಹ ಸಚಿವರ ತವರು ಕ್ಷೇತ್ರದಲ್ಲೇ ಈ ಪ್ರಕರಣ ಬಯಲಿಗೆ ಬಂದಿರೋದು ಇನ್ನಷ್ಟು ಕುತೂಹಲ ಕೆರಳಿಸಿದೆ.

  • ಸಂಬಳ ಪಾವತಿ ಮಾಡದ್ದಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರಿಂದ ದಿಢೀರ್‌ ಪ್ರತಿಭಟನೆ

    ಸಂಬಳ ಪಾವತಿ ಮಾಡದ್ದಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರಿಂದ ದಿಢೀರ್‌ ಪ್ರತಿಭಟನೆ

    – ಶಾಂತಿನಗರ ಡಿಪೋ ಮುಂದೆ ಚಾಲಕರಿಂದ ಪ್ರೊಟೆಸ್ಟ್‌
    – ಅಧಿಕಾರಿಗಳ ಸಂಧಾನ ಯಶಸ್ವಿ, ಕರ್ತವ್ಯಕ್ಕೆ ಹಾಜರ್‌

    ಬೆಂಗಳೂರು: ಸಂಬಳ (Salary) ಪಾವತಿ ಮಾಡದ್ದಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ (BMTC Electric Bus) ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದ್ದಾರೆ. ಸರಿಯಾಗಿ ಸಂಬಳ ಪಾವತಿ ಮಾಡದ್ದಕ್ಕೆ ಪ್ರತಿಭಟಿಸಿದ ನೌಕರರು ಮಂಗಳವಾರ ಬೆಳಗ್ಗೆಯಿಂದ ಗಾಡಿಯನ್ನು ಹೊರಗಡೆ ತೆಗೆದಿರಲಿಲ್ಲ. ಕೊನೆಗೆ ಬಿಎಂಟಿಸಿ ಅಧಿಕಾರಿಗಳ ಸಂಧಾನ ಯಶಸ್ವಿಯಾದ ಬಳಿಕ ಚಾಲಕರು (Drivers) ಡಿಪೋದಿಂದ ಬಸ್ಸುಗಳನ್ನು ಹೊರಗಡೆ ತೆಗೆದಿದ್ದಾರೆ.

    ಶಾಂತಿನಗರ ಡಿಪೋ- 3 ರ (Shanti Nagar Depot) ಮುಂದೆ ಬಸ್ಸನ್ನು ಹೊರ ತೆಗೆಯದೇ ಪ್ರತಿಭಟಿಸಿದರು. ಶೀಘ್ರವೇ ಬಿಎಂಟಿಸಿ ಅಧಿಕಾರಿಗಳು ವೇತನ ನೀಡುವ ಭರವಸೆ ನೀಡಿದ ಬಳಿಕ ಮಧ್ಯಾಹ್ನ ಮುಷ್ಕರವನ್ನು ಹಿಂದಕ್ಕೆ ಪಡೆದು ಚಾಲಕರು ಕರ್ತವ್ಯಕ್ಕೆ ಹಾಜರಾದರು. ಇದನ್ನೂ ಓದಿ: ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸಲು ಹೇಳಿದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

     

    ಮುಷ್ಕರಕ್ಕೆ ಕಾರಣ ಏನು?
    ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೌಕರರನ್ನಾಗಿ ತೆಗೆದುಕೊಳ್ಳಲಾಗಿದೆ. ಉದ್ಯೋಗ ನೀಡುವಾಗ ಪ್ರತಿ ತಿಂಗಳು 26,000 ರೂ. ಸಂಬಳ ನೀಡುವುದಾಗಿ ಕಂಪನಿ ಹೇಳಿತ್ತು. ಆದರೆ ಕೇವಲ 18,000 ರೂ. ಸಂಬಳ ನೀಡುತ್ತಿದೆ. ಆರಂಭದಲ್ಲಿ ಪಿಎಫ್‌ಗೆ ಹಣ ಕಡಿತ ಮಾಡಲಾಗುತ್ತದೆ ಎಂದು ಹೇಳಿತ್ತು. ಆದರೆ ಪಿಎಫ್‌ಗೆ ನಮ್ಮ ಹಣ ಕಡಿತವಾಗಿಲ್ಲ.

    ಮೊದಲ ಎರಡು ತಿಂಗಳು 2,000 ರೂ. ಕಡಿತ ಮಾಡಿದ್ದರೆ ಈಗ ಈ ತಿಂಗಳ ಸಂಬಳದಲ್ಲಿ 5,000 ರೂ. ಕಡಿತ ಮಾಡಲಾಗಿದೆ. ಈ ತಿಂಗಳು ಕೆಲವರಿಗೆ ಮಾತ್ರ ಸಂಬಳ ನೀಡಿದ್ದರೆ ಉಳಿದ ನೌಕರರಿಗೆ ಸಂಬಳವೇ ಆಗಿಲ್ಲ. ಆರಂಭದಲ್ಲಿ ಟಾಟಾ ಕಂಪನಿಯಲ್ಲಿ ಚಾಲಕರಾಗಿ ನೇಮಕ ಮಾಡಲಾಗುವುದು ಎಂದು ಹೇಳಿತ್ತು. ಆದರೆ ಈಗ ಆರ್ಯ ಹೆಸರಿನ ಕಂಪನಿಯಲ್ಲಿ ಕೆಲಸ ನೀಡಲಾಗಿದೆ. ವಸತಿ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ನಮಗೆ ವಸತಿ ನೀಡಿಲ್ಲ ಎಂದು ಚಾಲಕರು ಆರೋಪಿಸಿದ್ದಾರೆ.

     

    ಬಿಎಂಟಿಸಿ ವ್ಯಾಪ್ತಿಗೆ ಬರಲ್ಲ
    ಡಿಪೋ- 3 ರಲ್ಲಿ 136 ಎಲೆಕ್ಟ್ರಿಕ್ ಬಸ್ಸುಗಳಿವೆ. ಮೂರು ಶಿಫ್ಟ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರು ಕೆಲಸ ಮಾಡುತ್ತಿದ್ದಾರೆ. ಈ ಎಲೆಕ್ಟ್ರಿಕ್ ಬಸ್ ಚಾಲಕರು ಬಿಎಂಟಿಸಿ ಸಂಸ್ಥೆಯ ಅಧೀನಕ್ಕೆ ಒಳಪಡುವುದಿಲ್ಲ. ಎಲೆಕ್ಟ್ರಿಕ್ ಬಸ್ ನೋಡಿಕೊಳ್ಳುವ ಕಂಪನಿಯೇ ಚಾಲಕರನ್ನು ನೇಮಕ ಮಾಡಿಕೊಳ್ಳಬೇಕೆಂಬ ನಿಯಮವಿದೆ. ಈ ಕಾರಣಕ್ಕೆ ಖಾಸಗಿ ಕಂಪನಿಯ ಮಾನಂದಂಡಕ್ಕೆ ಅನುಗುಣವಾಗಿ ಸಂಬಳ ನಿಗದಿ ಮಾಡಿದೆ.

  • ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ.

    ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ.

    ನೋಟಿಸ್‍ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

    ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.