Tag: ಸಂಬಿತ್ ಪಾತ್ರ

  • ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡ್ಬೇಡಿ – ರಾಹುಲ್‌ಗೆ ಬಿಜೆಪಿ ತಿರುಗೇಟು

    ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡ್ಬೇಡಿ – ರಾಹುಲ್‌ಗೆ ಬಿಜೆಪಿ ತಿರುಗೇಟು

    – ರಾಹುಲ್‌ ಗಾಂಧಿ ಹೇಳಿಕೆ ನಾಚಿಗೇಡು ಎಂದು ವಾಗ್ದಾಳಿ

    ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ (Manmohan Singh) ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರ (Sambit Patra) ತಿರುಗೇಟು ನೀಡಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್‌ ಗಾಂಧಿ (Rahul Gandhi) ಹೇಳಿಕೆ ನಾಚಿಗೇಡು ಮತ್ತು ದುರದೃಷ್ಟಕರ ಸಂಗತಿ, ಕೀಳುಮಟ್ಟದ ರಾಜಕೀಯ ಎಂದು ಕಿಡಿ ಕಾರಿದರು.

    ದೇಶದ ಶ್ರೇಷ್ಠ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರ ಸಾವಿನಲ್ಲಿ ಘನತೆ ಮೆರೆಬೇಕು. ಆದ್ರೆ ರಾಹುಲ್‌ ಅವರ ಹೇಳಿಕೆ ನಾಡಿಗೇಡಿನ ಸಂಗತಿಯಾಗಿದೆ. ಕಾಂಗ್ರೆಸ್‌ ಮನಮೋಹನ್‌ ಸಿಂಗ್‌ ಅವರ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿತ್ತು. ಅದಕ್ಕೆ ಸರ್ಕಾರ ಒಪ್ಪಿದೆ, ಸಿಂಗ್‌ರ ಗೌರವಾರ್ಥವಾಗಿ ಸ್ಮಾರಕ ನಿರ್ಮಿಸುವ ಉದ್ದೇಶವನ್ನು ವ್ಯಕ್ತಪಡಿಸಿದೆ. ಸ್ಮಾರಕ ಮಾಡುವುದರಿಂದ ಇಡೀ ಜಗತ್ತು ಅವರ ಸಕಾರಾತ್ಮ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.

    ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಕೆಲವು ಕಾರ್ಯವಿಧಾನವಿದೆ. ಆದ್ರೆ ಅಂತ್ಯಕ್ರಿಯು ಕಾಯಲು ಸಾಧ್ಯವಿಲ್ಲದ ಪ್ರಕ್ರಿಯೆಯಾಗಿದೆ. ಆದ್ದರಿಂದಲೇ ಬೋಧ್‌ ಘಾಟ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

    ರಾಹುಲ್‌ ಗಾಂಧಿ ಹೇಳಿದ್ದೇನು?
    ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗಮಬೋಧ್ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಸ್ತುತ ಸರ್ಕಾರ ಅವರಿಗೆ ಸಂಪೂರ್ಣ ಅವಮಾನ ಮಾಡಿದೆ. ಮನಮೋಹನ್‌ ಸಿಂಗ್‌ ಒಂದು ದಶಕದ ಕಾಲ ಭಾರತದ ಪ್ರಧಾನಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ದೇಶವು ಆರ್ಥಿಕ ಮಹಾಶಕ್ತಿಯಾಯಿತು ಮತ್ತು ಅವರ ನೀತಿಗಳು ಇನ್ನೂ ದೇಶದ ಬಡ ಮತ್ತು ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುತ್ತಿವೆ.

    ಇಲ್ಲಿಯವರೆಗೆ, ಎಲ್ಲಾ ಮಾಜಿ ಪ್ರಧಾನಿಗಳ ಘನತೆಯನ್ನು ಗೌರವಿಸಿ, ಅವರ ಅಂತಿಮ ವಿಧಿಗಳನ್ನು ಅಧಿಕೃತ ಸಮಾಧಿಗಳಲ್ಲಿ ನಡೆಸಲಾಯಿತು, ಇದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಅನಾನುಕೂಲತೆ ಇಲ್ಲದೇ ಗೌರವ ಸಲ್ಲಿಸಬದಾಗಿದೆ. ಹಾಗೆಯೇ ದೇಶದ ಈ ಮಹಾನ್ ಪುತ್ರ ಮತ್ತು ಅವರ ಸಮುದಾಯದ ಬಗ್ಗೆ ಸರ್ಕಾರ ಗೌರವ ತೋರಿಸಬೇಕಿತ್ತು. ಆದ್ರೆ ಸಂಪೂರ್ಣ ಅಪಮಾನ ಮಾಡಿದೆ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

  • ನಾನು ತಪ್ಪು ಮಾಡಿದ್ರೆ ಜೈಲಿಗೆ ಹಾಕಿ, ಗಲ್ಲಿಗೂ ಏರಲು ಸಿದ್ಧ: ಡಿಕೆಶಿ ಗುಡುಗು

    ನಾನು ತಪ್ಪು ಮಾಡಿದ್ರೆ ಜೈಲಿಗೆ ಹಾಕಿ, ಗಲ್ಲಿಗೂ ಏರಲು ಸಿದ್ಧ: ಡಿಕೆಶಿ ಗುಡುಗು

    ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡಿದರೆ ನನ್ನನ್ನು ಜೈಲಿಗೆ ಹಾಕಿ, ಗಲ್ಲಿಗೂ ಏರಲು ನಾನು ಸಿದ್ಧ ಎಂದು ಜಲಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಗುಡುಗಿದ್ದಾರೆ.

    ಫುಡ್ ಪಾಯ್ಸಸನ್ ಆಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಡಿಕೆ ಶಿವಕುಮಾರ್ ಬುಧವಾರ ಸಂಜೆ ಡಿಸ್ಚಾರ್ಜ್ ಆಗಿ ಕ್ರೆಸೆಂಟ್ ಸರ್ಕಾರಿ ಬಂಗಲೆಯಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ತನ್ನ ವಿರುದ್ಧದ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ರಾಷ್ಟ್ರಮಟ್ಟದಲ್ಲಿ ಪ್ರಸಾರವಾಗಬೇಕು ಎನ್ನುವ ಉದ್ದೇಶದಿಂದ ಡಿಕೆಶಿ ಇಂಗ್ಲಿಷಿನಲ್ಲೇ ಸುದ್ದಿಗೋಷ್ಠಿ ನಡೆಸಿದ್ದು ವಿಶೇಷವಾಗಿತ್ತು.

    ಬಿಜೆಪಿ ಆರೋಪಗಳಿಗೆ ಉತ್ತರಿಸಲು ಅನಾರೋಗ್ಯದ ನಡುವೆಯೂ ಸುದ್ದಿಗೋಷ್ಠಿ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಅಧಿಕಾರ ಪಡೆಯಲು ನನ್ನ ವಿರುದ್ಧ ಐಟಿ, ಇಡಿ ಇಲಾಖೆಗಳನ್ನು ಬಳಕೆ ಮಾಡಿಕೊಂಡು ಒತ್ತಡ ಹಾಕಲಾಗುತ್ತಿದೆ. ತನಿಖಾ ಸಂಸ್ಥೆಗಳಿಗೆ ರಾಜಕೀಯ ಒತ್ತಡ ಹೆಚ್ಚಾಗಿರುವುದರಿಂದ ನನ್ನ ಹಾಗೂ ಸ್ನೇಹಿತರ ನಿವಾಸದ ಮೇಲೆ ದಾಳಿ ನಡೆಸಿ ಒತ್ತಾಯ ಪೂರ್ವಕವಾಗಿ ಹೇಳಿಕೆ ಪಡೆದಿದ್ದಾರೆ. ಅಧಿಕಾರಿಗಳು ನನ್ನ ಬಳಿ ತಮ್ಮ ಅವರ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ ಎಂದು ತನ್ನ ವಿರುದ್ಧದ ಆರೋಪಗಳನ್ನು ತಿರಸ್ಕರಿಸಿದರು.

    ಪ್ರಕರಣದಲ್ಲಿ ಆರೋಪಿಗಳಾಗಿರುವ ಆಪ್ತರೆಲ್ಲರೂ ಆದಾಯವನ್ನು ಘೋಷಿಸಿಕೊಂಡಿದ್ದಾರೆ. ನಾನು ನಾನು ದೆಹಲಿಯಲ್ಲೇ ಪತ್ರಿಕಾಗೋಷ್ಠಿ ಮಾಡಿ ಅವರಿಗೆ ಉತ್ತರ ಕೊಡುತ್ತೇನೆ. ಅಲ್ಲದೇ ಎಲ್ಲಾ ಆರೋಪದಿಂದ ಮುಕ್ತನಾಗಿ ಪರಿಶುದ್ಧನಾಗಿ ಹೊರ ಬರುತ್ತೇನೆ. ಈ ದೇಶದ ಪ್ರಜೆಯಾಗಿ ನನಗೂ ಈ ನೆಲದ ಕಾನೂನು ಗೊತ್ತು. ತಪ್ಪು ಮಾಡಿದ್ದರೆ ಜೈಲಿಗೆ ಹೋಗಲು ಗಲ್ಲಿಗೇರಲು ಸಿದ್ಧ ಎಂದು ಸವಾಲು ಎಸೆದರು.

    1 ವರ್ಷ ಬೇಕೇ: ನನ್ನ ವಿರುದ್ಧ ಐಟಿ ಅಧಿಕಾರಿಗಳು ದಾಳಿ ನಡೆಸಿ 1 ವರ್ಷ ಕಳೆದಿದೆ. ಆದರೆ ಒಂದು ಪ್ರಕರಣ ದಾಖಲಿಸಲು ಇಡಿಗೆ 1 ವರ್ಷ ಅವಧಿ ಬೇಕೇ ಆದರೆ ನನಗೆ ಎಂತಹ ಟಾರ್ಚರ್ ಕೊಟ್ಟರು ಸಹಿಸಲು ಸಿದ್ಧ. ಯಾವುದೇ ಅಕ್ರಮ ಹಣ ವರ್ಗಾವಣೆ ಮಾಡಿಲ್ಲ. ನನ್ನ ಮನೆಯಲ್ಲಿ ಸಿಕ್ಕ 41 ಲಕ್ಷ ರೂ. ನನ್ನದೇ. ಪ್ರತಿಯೊಂದು ರೂಪಾಯಿಗೂ ಲೆಕ್ಕ ಕೊಟ್ಟಿದ್ದೇನೆ. ನನ್ನ ಆಪ್ತರು ತಮ್ಮ ಆಸ್ತಿಯ ಕುರಿತು ಲೆಕ್ಕ ನೀಡಿದ್ದಾರೆ ಎಂದರು.

    ಕುಟುಂಬಕ್ಕೂ ಒತ್ತಡ: ಆದಾಯ ತೆರಿಗೆ ಇಲಾಖೆ ಅವರು ನನ್ನ ಆಪ್ತರು, ಕುಟುಂಬ, ಸಹೋದರ ಸೇರಿದಂತೆ ಎಲ್ಲರಿಗೂ ಒತ್ತಡ ಹಾಕಿದ್ದಾರೆ. ಈ ಮೂಲಕ ಅವರ ಹೇಳಿಕೆ ಪಡೆಯಲಾಗಿದೆ. ಈಗಾಗಲೇ ಸಹೋದರ ಸುರೇಶ್ ಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದು, ಸುರೇಶ್ ಅಧಿಕಾರಿಗಳ ಮುಂದೇ ಹಾಜರಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಆದರೆ ಈವರೆಗೂ ತನಗೆ ಯಾವುದೇ ನೋಟಿಸ್ ಬಂದಿಲ್ಲ. ಬಂಧನದ ಭಯವೂ ಇಲ್ಲ. ಈ ಹಿಂದೆ ನನ್ನ ಬಂಧನದ ಕುರಿತು ನೀಡಿರುವ ಹೇಳಿಕೆ ನಿಜ. ಸುರೇಶ್ ಆಪ್ತ ಸ್ನೇಹಿತರು ನೀಡಿದ ಎಚ್ಚರಿಕೆ ಮೇಲೆ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಅವರ ಹೇಳಿಕೆಯನ್ನು ನಾನು ಸಮರ್ಥಿಸುತ್ತೇನೆ. ಆದರೆ ಕಾನೂನು ಕೇವಲ ಬಿಜೆಪಿ ಅವರಿಗೆ ಮಾತ್ರ ಅಲ್ಲ ನನಗೂ ತಿಳಿದಿದೆ ಎಂದು ಎಚ್ಚರಿಕೆ ನೀಡಿದರು.

    ಎಲ್ಲರ ಮಾಹಿತಿ ಬಿಚ್ಚಿಡುತ್ತೇನೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಅವರು ನೇರ ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋಗಿ ಬಂದಿದ್ದಾರೆ. ಅಲ್ಲದೇ ಈ ಕುರಿತು ಅಧಿಕಾರಿಗಳು ಸ್ವಷ್ಟಪಡಿಸಿದ್ದಾರೆ. ಜೈಲಿಗೆ ಹೋಗಿ ಬಂದ ವ್ಯಕ್ತಿಗಳಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಎಲ್ಲಾ ವಿಚಾರದಲ್ಲೂ ರಾಜಕೀಯ ಮಾಡಲಾಗುತ್ತಿದೆ. ನಾನು ಏಕೆ ರಾಜೀನಾಮೆ ನೀಡಬೇಕು. ಜೈಲಿಗೆ ಹೋಗಿ ಬಂದವರಿಗೆ ರಾಜ್ಯಾಧ್ಯಕ್ಷ ಸಿಎಂ ಅಭ್ಯರ್ಥಿ ಎಂದು ಘೋಷಿಸುತ್ತಾರೆ. ಅಧಿಕಾರ, ಹಣದ ಆಮಿಷ ಎಲ್ಲವೂ ಈ ಹಿಂದಿದೆ. 2019 ಚುನಾವಣೆಯಲ್ಲಿ ಜನರು ಇವುಗಳಿಗೆ ಎಲ್ಲ ತಕ್ಕ ಉತ್ತರ ಕೊಡುತ್ತಾರೆ ಎಂದು ತಿರುಗೇಟು ನೀಡಿದರು.

    ಅಧಿಕಾರಿಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ, ನನಗೆ ಭೇಟಿ ಮಾಡಿ ಚರ್ಚೆ ನಡೆಸಿ ಎಲ್ಲರ ಬಗ್ಗೆಯೂ ಮಾಹಿತಿ ನೀಡುತ್ತೇನೆ. ಯಾವುದೇ ಆರೋಪಕ್ಕೂ ಹೆದರಿ ಓಡಿ ಹೋಗುವುದಿಲ್ಲ. ಸಹರಾ ಡೈರಿ ಕಥೆ ಏನಾಯ್ತು? ಯಾರು ಎಷ್ಟು ಹಣ ಪಡೆಯಲಾಗಿದೆ ಎನ್ನುವುದು ಗೊತ್ತಿದೆ. ನನ್ನ ಮನೆಯಲ್ಲಿ ಡೈರಿ ಸಿಕ್ಕಿದೆ ಎಂದು ಕಥೆ ಕಟ್ಟಿ ಅದರಲ್ಲಿ ಕೋಡ್ ವರ್ಡ್ ಗಳನ್ನು ಸೃಷ್ಟಿಸಿ ಸುಳ್ಳು ಆರೋಪ ಮಾಡಲಾಗುತ್ತಿದೆ. ಗೋವಿಂದ ರಾಜು ಡೈರಿಯನ್ನು ಬಿಜೆಪಿ ಅವರೇ ಕ್ರಿಯೇಟ್ ಮಾಡಿದ್ದಾರೆ. ಅಲ್ಲಿ ಕೆಲ ಹೆಸರುಗಳನ್ನು ಬರೆದಿದ್ದಾರೆ. ನಾನು ರಾಜೀನಾಮೆ ನೀಡಲ್ಲ. ಈ ಕುರಿತು ಸಮ್ಮಿಶ್ರ ಸರ್ಕಾರದ ಸಿಎಂ ಎಚ್‍ಡಿಕೆ ಅವರಿಗೆ ಏನು ಹೇಳುವ ಅಗತ್ಯವಿಲ್ಲ. ಅವರಿಗೆ ಎಲ್ಲವೂ ಅರಿವಿದೆ. ಮಾಜಿ ಸಿಎಂ ಅವರಿಗೂ ಸಿದ್ದರಾಮಯ್ಯ ಅರಿವಿದೆ ಎಂದರು. ಇದನ್ನು ಓದಿ: ಕರ್ನಾಟಕ ಕಾಂಗ್ರೆಸ್‍ನ ಮತ್ತೊಂದು ಎಟಿಎಂ-ಕೆಜಿ ಲೆಕ್ಕದಲ್ಲಿ ಹವಾಲ ಹಣ ರವಾನೆ: ಸಂಬಿತ್ ಪಾತ್ರ

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಾನೇ ಅಡ್ಡಿ ಎಂದು ಅವರು ಭಾವಿಸಿದ್ದು, ನನ್ನನ್ನು ಜೈಲಿಗೆ ಕಳುಹಿಸಿದರೆ ಸರ್ಕಾರ ರಚನೆ ಮಾಡಬಹುದು ಎಂಬುವುದು ಅವರ ಅನಿಸಿಕೆ. ಆದರೆ ನಾನು ಜೈಲಿಗೆ ಹೋದರೂ ಅವರು ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ನಾನು ನನ್ನ ಪಕ್ಷ ಸಿದ್ಧಾಂತಕ್ಕೆ ಬದ್ಧವಾಗಿದ್ದು ಅದನ್ನೇ ಇಲ್ಲಿವರೆಗೂ ಮಾಡಿದ್ದೇನೆ. ಯಾವುದೇ ಹಣ, ಅಧಿಕಾರ ಅಮಿಷಕ್ಕೆ ಒಳಗಾಗಿಲ್ಲ ಅದ್ದರಿಂದ ಹೆಚ್ಚಿನ ಒತ್ತಡ ಬಂದಿದೆ ಎಂದು ಹೇಳಿದರು.

    ವೈದ್ಯರ ಸಲಹೆ ನಿರ್ಲಕ್ಷ್ಯ ಮಾಡಿ ನಾನು ಇಲ್ಲಿಗೆ ಬಂದಿದ್ದೇನೆ. ನಾನು ಆಸ್ಪತ್ರೆ ಸೇರಿದ ಸಮಯವನ್ನು ಅವರು ಬೇಕಾದ ಹಾಗೇ ನನ್ನನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹಾಗೆಯೇ ನಾನು ಸಮಯವನ್ನು ಬಳಕೆ ಮಾಡಿಕೊಡುತ್ತೇನೆ. ಇದು ಕೇವಲ ಮೊದಲ ಡೋಸ್ ಅಷ್ಟೇ, ಸಮಯ ಬಂದಾಗ ಎಲ್ಲಾವನ್ನು ಬಹಿರಂಗ ಪಡಿಸುತ್ತೇನೆ. ಇದುವರೆಗೂ ನನಗೆ 40 ರಿಂದ 50 ಬಾರಿ ವಾಂತಿ ಆಗಿದೆ. ಅದರು ನಾನು ನಿಮ್ಮ ಮುಂದೇ ಬಂದು ಮಾತನಾಡುತ್ತಿದ್ದೇನೆ ಎಂದರು. ಇದನ್ನು ಓದಿ: ದೇವೇಗೌಡರ ಕುಟುಂಬದಿಂದ ಭೂ ಹಗರಣ -ಕುಮಾರಸ್ವಾಮಿ ಯಾಕ್ ಮಾತಾಡ್ತಿಲ್ಲ, ಬಿಎಸ್‍ವೈ ಪ್ರಶ್ನೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕರ್ನಾಟಕ ಕಾಂಗ್ರೆಸ್‍ನ ಮತ್ತೊಂದು ಎಟಿಎಂ-ಕೆಜಿ ಲೆಕ್ಕದಲ್ಲಿ ಹವಾಲ ಹಣ ರವಾನೆ: ಸಂಬಿತ್ ಪಾತ್ರ

    ಕರ್ನಾಟಕ ಕಾಂಗ್ರೆಸ್‍ನ ಮತ್ತೊಂದು ಎಟಿಎಂ-ಕೆಜಿ ಲೆಕ್ಕದಲ್ಲಿ ಹವಾಲ ಹಣ ರವಾನೆ: ಸಂಬಿತ್ ಪಾತ್ರ

    ನವದೆಹಲಿ: ಸಮ್ಮಿಸ್ರ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಇಡಿ ಎಫ್‍ಐಆರ್ ದಾಖಲಿಸುತ್ತಿದಂತೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾಂಗ್ರೆಸ್ ವಿರುದ್ಧ ಹವಾಲ ಹಣ ದಂಧೆ ಆರೋಪ ಮಾಡಿದೆ.

    ದೆಹಲಿಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಎಟಿಎಂ ಆಗಿದ್ದು, ಎಐಸಿಸಿ ಹೈಕಮಾಂಡ್‍ಗೆ ಹವಾಲ ಮೂಲಕ ಸಂಗ್ರಹಣೆ ಮಾಡಿದ್ದ 600 ಕೋಟಿ ರೂ. ರವಾನೆ ಮಾಡಲಾಗಿದೆ. ಭ್ರಷ್ಟಾಚಾರ ಹಾಗೂ ಹವಾಲ ಹಣ ಕಾಂಗ್ರೆಸ್ ಪಕ್ಷಕ್ಕೆ ಆಧಾರವಾಗಿದೆ ಎಂದು ಆರೋಪ ಮಾಡಿದ್ದಾರೆ.

    ಇದೇ ವೇಳೆ ದೆಹಲಿ ಅಪಾರ್ಟ್‍ಮೆಂಟ್‍ನಿಂದ 8 ಕೋಟಿ ರೂ. ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಎಫ್‍ಐಆರ್ ದಾಖಲಿಸಿದ್ದನ್ನು ಪ್ರಸ್ತಾಪಿಸಿದ ಅವರು, ಕೆಜಿ ಲೆಕ್ಕದಲ್ಲಿ ಕಾಂಗ್ರೆಸ್ ಹೈಕಮಾಂಡ್‍ಗೆ ಹಣ ರವಾನೆ ಮಾಡಲಾಗಿದೆ ಎಂದು ಆರೋಪಿಸಿದರು.

    ಮೂಲಗಳ ಮಾಹಿತಿ ಅನ್ವಯ ಹವಾಲ ಹಣವನ್ನು ಮೊದಲು ದೆಹಲಿಗೆ ವರ್ಗಾವಣೆ ಮಾಡಲಾಗಿದ್ದು, ಬಳಿಕ ಮಂತ್ರಿಗಳಿಗೆ ನೀಡಲಾಗಿದೆ. ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಚಾಲಕ ಐಟಿ ಇಲಾಖೆ ಎದುರು ಎಐಸಿಸಿಗೆ ಕೆಜಿ ಲೆಕ್ಕದಲ್ಲಿ ಹಣ ನೀಡಿರುವ ಕುರಿತು ಹೇಳಿಕೆ ನೀಡಿದ್ದಾರೆ. ನೋಟು ನಿಷೇಧದ ವೇಳೆ ಕಾಂಗ್ರೆಸ್ ಏಕೆ ಭಾರೀ ಪ್ರತಿಭಟನೆ ಮಾಡಿತ್ತು ಎನ್ನುವುದು ಈಗ ತಿಳಿಯುತ್ತಿದೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv