Tag: ಸಂಭಾಜಿ ಭಿಡೆ

  • ಭಾರತಮಾತೆ ವಿಧವೆಯಲ್ಲ – ಹಣೆಗೆ ಬೊಟ್ಟು ಇಡದ ಪತ್ರಕರ್ತೆಗೆ ಪ್ರತಿಭಟನಾಕಾರನಿಂದ ತರಾಟೆ

    ಭಾರತಮಾತೆ ವಿಧವೆಯಲ್ಲ – ಹಣೆಗೆ ಬೊಟ್ಟು ಇಡದ ಪತ್ರಕರ್ತೆಗೆ ಪ್ರತಿಭಟನಾಕಾರನಿಂದ ತರಾಟೆ

    ಮುಂಬೈ: ಮಹಿಳಾ ಪತ್ರಕರ್ತೆಯೊಬ್ಬರು ಹಣೆಗೆ ಬಿಂದಿ ಹಾಕದೇ ಇರುವ ಕಾರಣ ಅವರೊಂದಿಗೆ ಮಾತನಾಡಲು ಮಹಾರಾಷ್ಟ್ರದ (Maharashtra) ಕಾರ್ಯಕರ್ತ ಸಂಭಾಜಿ ಭಿಡೆ ( Sambhaji Bhide) ನಿರಾಕರಿಸಿದ್ದಾರೆ.

    ದಕ್ಷಿಣ ಮುಂಬೈನಲ್ಲಿರುವ (South Mumbai) ರಾಜ್ಯ ಸಚಿವಾಲಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Chief Minister Eknath Shinde) ಅವರನ್ನು ಭೇಟಿಯಾದ ಬಳಿಕ ಹೊರಗೆ ಬರುತ್ತಿದ್ದ ಸಂಭಾಜಿ ಭಿಡೆ ಅವರು ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಅವರನ್ನು ಮಾತನಾಡಿಸಲು ಮುಂದಾದ ಪತ್ರಕರ್ತೆ ಜೊತೆಗೆ ಸಂಭಾಷಣೆ ನಡೆಸಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮ-ಲಕ್ಷ್ಮಣ ವಿಗ್ರಹಕ್ಕೆ ಮೀಸೆ ಬೇಕೇ ಬೇಕು: ಸಂಭಾಜಿ ಭಿಡೆ

    ವೀಡಿಯೊವೊಂದರಲ್ಲಿ ಸಂಭಾಜಿ ಭಿಡೆ ಅವರು ಮರಾಠಿಯಲ್ಲಿ ಬೈಟ್ ತೆಗೆದುಕೊಳ್ಳಲು ಬರುವ ಮಹಿಳಾ ಪತ್ರಕರ್ತೆಗೆ, ತಮ್ಮ ಬೈಟ್ ತೆಗೆದುಕೊಳ್ಳಲು ಬರುವ ಮುನ್ನ ಬಿಂದಿಯನ್ನು ಇಡಬೇಕೆಂದು ಹೇಳಿ, ಆಕೆಯೊಂದಿಗೆ ಮಾತನಾಡಲು ನಿರಾಕರಿಸುತ್ತಾರೆ. ಜೊತೆಗೆ ಮಹಿಳೆಯನ್ನು ಭಾರತಮಾತೆಗೆ ಹೋಲಿಸಿ, ಭಾರತಮಾತೆ ಬಿಂದಿ ಇಡದೇ ವಿಧವೆಯಂತೆ ಕಾಣಿಸಿಕೊಳ್ಳಬಾರದು ಎಂದು ಹೇಳುವುದನ್ನು ಕಾಣಬಹುದಾಗಿದೆ.

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ಸಂಭಾಜಿ ಭಿಡೆ ಅವರ ಹೇಳಿಕೆಗೆ ವಿವರಣೆ ನೀಡುವಂತೆ ಕೋರಿ ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿಂದೆ 2018ರಲ್ಲಿ ನಮ್ಮ ತೋಟದಲ್ಲಿ ಬೆಳೆದ ಮಾವಿನ ಹಣ್ಣನ್ನು ತಿಂದು ದಂಪತಿಯೊಬ್ಬರಿಗೆ ಗಂಡು ಮಕ್ಕಳು ಜನಿಸಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಸಂಭಾಜಿ ಭಿಡೆ ಅವರು ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು – ಬಸ್ ಚಾಲಕನಿಗೆ ಸಾರ್ವಜನಿಕರಿಂದ ಥಳಿತ

    Live Tv
    [brid partner=56869869 player=32851 video=960834 autoplay=true]

  • ಅಯೋಧ್ಯೆಯಲ್ಲಿ ರಾಮ-ಲಕ್ಷ್ಮಣ ವಿಗ್ರಹಕ್ಕೆ ಮೀಸೆ ಬೇಕೇ ಬೇಕು: ಸಂಭಾಜಿ ಭಿಡೆ

    ಅಯೋಧ್ಯೆಯಲ್ಲಿ ರಾಮ-ಲಕ್ಷ್ಮಣ ವಿಗ್ರಹಕ್ಕೆ ಮೀಸೆ ಬೇಕೇ ಬೇಕು: ಸಂಭಾಜಿ ಭಿಡೆ

    ಪುಣೆ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡುವ ರಾಮ-ಲಕ್ಷ್ಮಣನ ವಿಗ್ರಹಕ್ಕೆ ಮೀಸೆ ಬೇಕು ಎಂದು ಹಿಂದುತ್ವ ಪ್ರತಿಪಾದಕ ಸಂಭಾಜಿ ಭಿಡೆ ಆಗ್ರಹಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಬುಧವಾರ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ನಡೆಯಲಿದೆ. ಭೂಮಿ ಪೂಜೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ ಮಾಡಲಿದ್ದಾರೆ.

    ಈ ಸಂಬಂಧ ಈಗಾಗಲೇ ಶ್ರೀರಾಮಂದಿರ ಟ್ರಸ್ಟ್ ನ ಗೋವಿಂದಗಿರಿ ಜೀ ಮಹಾರಾಜ್ ಜೊತೆ ಮಾತನಾಡಿ, ನೀವು ಸ್ಥಾಪಿಸುವ ರಾಮ ಹಾಗೂ ಲಕ್ಷ್ಣಣ ಪ್ರತಿಮೆಗಳಿಗೆ ಮೀಸೆ ಇರಬೇಕು. ಒಂದು ವೇಳೆ ನೀವು ರಾಮ-ಲಕ್ಷ್ಮಣ ವಿಗ್ರಹಗಳಿಗೆ ಮೀಸೆ ಇಟ್ಟಿಲ್ಲವೆಂದರೆ, ನನ್ನಂತಹ ಭಕ್ತರಿಗೆ ದೇವಾಲಯ ನಿರ್ಮಿಸಿದರೂ ಪ್ರಯೋಜನವಿಲ್ಲದಂತಾಗುತ್ತದೆ ಎಂದಿದ್ದಾರೆ.

    ಶ್ರೀರಾಮಮಂದಿರಕ್ಕೆ ಭೂಮಿಪೂಜೆ ಮಾಡುವ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಆಗಸ್ಟ್ 5ರಂದು ನಡೆಯುವ ಕಾರ್ಯವನ್ನು ದಸರಾ, ದೀಪಾವಳಿ ಹಬ್ಬಗಳಂತೆ ಆಚರಿಸೋಣ ಎಂದು ಇದೇ ವೇಳೆ ಭಿಡೆ ಕರೆ ನೀಡಿದರು. ಇದನ್ನೂ ಓದಿ: ಭೂಮಿ ಪೂಜೆಯಂದು ದಯವಿಟ್ಟು ಅಯೋಧ್ಯೆಗೆ ಬರಬೇಡಿ- ಟ್ರಸ್ಟ್ ಮನವಿ

    ಮಧ್ಯಾಹ್ನ 12.15ಕ್ಕೆ ಭೂಮಿಪೂಜೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ 40 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯನ್ನು ಇಡುವ ಮೂಲಕ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. 25 ನಿಮಿಷಗಳ ಕಾಲ ನಡೆಯಲಿರುವ ಪೂಜೆ ನಡೆಯಲಿದ್ದು, ಭೂಮಿ ಪೂಜೆ ಬಳಿಕ 45 ನಿಮಿಷ ಮೋದಿ ಭಾಷಣ ಮಾಡಲಿದ್ದಾರೆ. ಇದಾದ ಬಳಿಕ ಸರಯೂ ನದಿ ಬಳಿ ಮೋದಿ ತೆರಳಲಿದ್ದಾರೆ. ಒಟ್ಟು 2 ಗಂಟೆ 15 ನಿಮಿಷಕ್ಕೂ ಅಧಿಕ ಕಾಲ ಅಯೋಧ್ಯೆಯಲ್ಲಿ ಮೋದಿ ಇರಲಿದ್ದಾರೆ.