Tag: ಸಂಯುಕ್ತ ಕಿಸಾನ್ ಮೋರ್ಚಾ

  • BJP, RSS ನಾಯಕರು ತಮ್ಮ ಮಕ್ಕಳನ್ನು ಯಾಕೆ ಅಗ್ನಿಪಥ್ ಯೋಜನೆಯಡಿ ಸೈನ್ಯಕ್ಕೆ ಸೇರಿಸುತ್ತಿಲ್ಲ: ರೈತ ಮುಖಂಡರ ಕಿಡಿ

    BJP, RSS ನಾಯಕರು ತಮ್ಮ ಮಕ್ಕಳನ್ನು ಯಾಕೆ ಅಗ್ನಿಪಥ್ ಯೋಜನೆಯಡಿ ಸೈನ್ಯಕ್ಕೆ ಸೇರಿಸುತ್ತಿಲ್ಲ: ರೈತ ಮುಖಂಡರ ಕಿಡಿ

    ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಗೆ ಸೇನೆ ಸೇರ ಬಯಸುವ ಅಭ್ಯರ್ಥಿಗಳಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಈ ಯೋಜನೆಗೆ ರೈತ ಮುಖಂಡರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರು ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಗ್ನಿಪಥ್ ಯೋಜನೆ ಮೂಲಕ ಸೇನೆಗೆ ಅಭ್ಯರ್ಥಿಗಳನ್ನು ಸೇರಿಸಿಕೊಂಡು ಕೇವಲ ಎರಡೂವರೆ ವರ್ಷಗಳ ಕಾಲ ಮಾತ್ರ ಅವರನ್ನು ಬಳಸಿಕೊಂಡು, ನಂತರ ಅವರನ್ನು ಸೇನೆಯಿಂದ ಕೈಬಿಡುವುದು ಯಾವ ನ್ಯಾಯ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ 

    ಈ ಯೋಜನೆ ಯುವಕರನ್ನು ದಾರಿ ತಪ್ಪಿಸುವ ಯೋಜನೆಯಾಗಿದೆ. ಕೂಡಲೇ ಈ ಯೋಜನೆಯನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಅಗ್ನಿಪಥ್ ಯೋಜನೆ ಒಳ್ಳೆಯ ಯೋಜನೆ ಎಂದು ಅದನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ಹಾಗೂ ಆರ್‌ಎಸ್‍ಎಸ್ ನಾಯಕರು ತಮ್ಮ ಮಕ್ಕಳನ್ನು ಯಾಕೆ ಈ ಯೋಜನೆಯಡಿ ಸೈನ್ಯಕ್ಕೆ ಸೇರಿಸುತ್ತಿಲ್ಲ ಎಂದು ಕಿಡಿಕಾರಿದರು.

    ARMY

    ಈ ನಾಯಕರ ಮಕ್ಕಳು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಅಗ್ನಿಪಥ್ ಎಂದು ಈ ದೇಶದ ಯುವ ಜನರ ದಿಕ್ಕು ತಪ್ಪಿಸುವುದನ್ನು ಕೂಡಲೇ ಬಿಡಬೇಕು ಎಂದು ಆಗ್ರಹಿಸಿದರು.

    Live Tv

  • ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ತರಕಾರಿ ಇಟ್ಟು ಪ್ರತಿಭಟನೆ

    ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ತರಕಾರಿ ಇಟ್ಟು ಪ್ರತಿಭಟನೆ

    ಬೆಳಗಾವಿ: ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ತರಕಾರಿ ಇಟ್ಟು ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ತರಕಾರಿ ಮಾರಾಟ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು.

    BASAVARJ BOMMAI (1)

    ಎಂಎಸ್‍ಪಿ ಕಾನೂನಾತ್ಮಕವಾಗಿ ಖಾತರಿ ಪಡಿಸಲು ತಜ್ಞರ ಸಮಿತಿ ರಚಿಸುವ ವಾಗ್ದಾನವನ್ನು ಮಾಡಿದ ಕೇಂದ್ರ ಸರ್ಕಾರವು ಮರೆತಿದೆ. ಈ ನಿಟ್ಟಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ರೈತ ವಿಶ್ವಾಸ ದ್ರೋಹ ಸಪ್ತಾಹ ಆಚರಿಸಲಾಗುತ್ತಿದೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್

    ಕೇಂದ್ರ ಸರ್ಕಾರ ಹಿಂಪಡೆದ ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆದಿದೆ. ಆದರೆ ಈವರೆಗೂ ರಾಜ್ಯ ಸರ್ಕಾರ ಈ ಕಾನೂನುಗಳನ್ನು ಹಿಂಪಡೆಯದೇ ಮೊಂಡುತನ ಪ್ರದರ್ಶಿಸುತ್ತಿದೆ. ಅಲ್ಲದೇ ನಗರದಲ್ಲಿ ಪ್ರಾರಂಭವಾದ ಖಾಸಗಿ ತರಕಾರಿ ಮಾರುಕಟ್ಟೆ ಸ್ಥಗಿತಗೊಳಿಸಿ ಸರ್ಕಾರಿ ಎಪಿಎಂಸಿ ಉಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ: ಗೃಹ ಸಚಿವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆಗಲ್ಲ: ಆರ್.ಧ್ರುವನಾರಾಯಣ್

    ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದ್ದಗೌಡ ಮೋದಗಿ, ಜಿಲ್ಲಾಧ್ಯಕ್ಷೆ ಶಿವಲೀಲಾ ಮಿಸಾಲೆ, ರಮೇಶ್ ವರಲಿ, ಶಂಕರ್ ಡವಳಿ, ರವಿ ಪಾಟೀಲ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

  • ಭರವಸೆಗಳನ್ನು ಉಲ್ಲಂಘಿಸಿದ ಮೋದಿ ಸರ್ಕಾರ- ಮಾ.21ರಿಂದ ರೈತರಿಂದ ಮತ್ತೆ ಸರಣಿ ಪ್ರತಿಭಟನೆ

    ಭರವಸೆಗಳನ್ನು ಉಲ್ಲಂಘಿಸಿದ ಮೋದಿ ಸರ್ಕಾರ- ಮಾ.21ರಿಂದ ರೈತರಿಂದ ಮತ್ತೆ ಸರಣಿ ಪ್ರತಿಭಟನೆ

    ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿ ಭಾಗಗಳಲ್ಲಿ ರೈತರ ಬೃಹತ್‌ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಮಾ.21ರಿಂದ ಮತ್ತೆ ಸರಣಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

    ಪ್ರಧಾನಿ ಮೋದಿ ಸರ್ಕಾರ ಭರವಸೆಗಳನ್ನು ಉಲ್ಲಂಘಿಸುತ್ತಿದೆ ಎಂದು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಎಸ್‌ಕೆಎಂ ನಾಯಕ ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ. ಇದನ್ನೂ ಓದಿ: ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿದೆ: ಕೇಂದ್ರ

    ರೈತರು ಕಳೆದ ವರ್ಷದಂತೆ ದೆಹಲಿಯ ಗಡಿಭಾಗದ ಪ್ರತಿಭಟನಾ ಸ್ಥಳಗಳಲ್ಲಿ ನಿರಂತರ ಮುತ್ತಿಗೆ ಹಾಕುವ ಬದಲಾಗಿ ಈ ಬಾರಿ ಹಂತ ಹಂತವಾಗಿ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.

    ಮಾರ್ಚ್‌ 21ರಂದು ಒಂದು ದಿನ ಬೃಹತ್‌ ಪ್ರತಿಭಟನೆ ನಡೆಸಲಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಮಾನದಂಡದ ಬೆಲೆ ನೀಡುವಂತೆ ಒತ್ತಾಯಿಸಿ ಮುಂದಿನ ಹಂತದಲ್ಲಿ ಏಪ್ರಿಲ್‌ 9ರಿಂದ 17ರವರೆಗೆ ದೇಶಾದ್ಯಂತ ಮುಷ್ಕರ ಹೂಡಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ನಾಳೆ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಕೇಂದ್ರದಿಂದ ಅಧಿಕೃತ ಭರವಸೆಗಳ ಹೊರತಾಗಿಯೂ ರೈತರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲಾಗಿಲ್ಲ. ಲಖಿಮ್‌ಪುರ ಖೇರಿಯಲ್ಲಿ ನಡೆದ ಕೊಲೆ ಅಪರಾಧಕ್ಕೆ ಸಂಬಂಧಿಸಿದಂತೆ ರೈತರಿಗೆ ನಿಜವಾದ ನ್ಯಾಯ ಸಿಕ್ಕಿಲ್ಲ ಎಂದು ಕೃಷಿ ಮುಖಂಡ ಯೋಗೇಂದ್ರ ಯಾದವ್‌ ಹೇಳಿದ್ದಾರೆ.

    ಕೇಂದ್ರ ಕೃಷಿ ಕಾರ್ಯದರ್ಶಿ ಸಂಜಯ್‌ ಅಗರ್ವಾಲ್‌ ಅವರು ಬರೆದ ಪತ್ರದಲ್ಲಿ ಕೇಂದ್ರದ ಪ್ರಸ್ತಾವನೆಗಳನ್ನು ಎಸ್‌ಕೆಎಂ ಅಂಗೀಕರಿಸಿದ ನಂತರ ರೈತರು 2021ರ ಡಿಸೆಂಬರ್‌ 19 ರಂದು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಇದನ್ನೂ ಓದಿ: ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವುದಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಇನ್ನೂ ಸಮಿತಿಯನ್ನು ರಚಿಸಿಲ್ಲ.

  • ಪಾರ್ಲಿಮೆಂಟ್ ಟ್ರ್ಯಾಕ್ಟರ್ ರ್‍ಯಾಲಿ ರದ್ದುಗೊಳಿಸಿದ ಸಂಯುಕ್ತ ಕಿಸಾನ್ ಮೋರ್ಚಾ

    ಪಾರ್ಲಿಮೆಂಟ್ ಟ್ರ್ಯಾಕ್ಟರ್ ರ್‍ಯಾಲಿ ರದ್ದುಗೊಳಿಸಿದ ಸಂಯುಕ್ತ ಕಿಸಾನ್ ಮೋರ್ಚಾ

    ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ ನವೆಂಬರ್ 29ರಂದು ಸಂಸತ್ತಿಗೆ ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ್‍ಯಾಲಿಯನ್ನು ರದ್ದುಗೊಳಿಸಿದೆ. ಮುಂದಿನ ಹೋರಾಟದ ಬಗ್ಗೆ ಮುಂದಿನ ತಿಂಗಳು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

    ಮೂರು ಕೃಷಿ ಕಾಯ್ದೆಯನ್ನು ಸಂಸತ್ತಿನಲ್ಲಿ ವಾಪಸ್ ಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು. ಆದರೆ ಕೇಂದ್ರ ಕೃಷಿ ಸಚಿವರ ಮನವಿ ಮೇರೆಗೆ ಮೆರವಣಿಗೆಯನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ ಎಂದರು.

    ರೈತರು ಹುಲ್ಲಿಗೆ ಬೆಂಕಿ ಹಾಕುವುದು ಅಪರಾಧವಲ್ಲ ಎಂಬ ಮಸೂದೆ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಈ ಬೇಡಿಕೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ದನ್ನೂ ಓದಿ: ಅಸಹ್ಯವಾಗಿ ನೋಡಿ ಹಿಂಭಾಗದಿಂದ ಅಪ್ಪಿಕೊಂಡ್ರು- ಶೃತಿ ದೂರಿನಲ್ಲಿ ಬೆಚ್ಚಿ ಬೀಳೋ ಆರೋಪ

    ಚಳಿಗಾಲ ಅಧಿವೇಶನದಲ್ಲಿ ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸುವ ಮಸೂದೆಯನ್ನು ಜಾರಿಗೊಳಿಸಲಾಗುವುದು. ಹಾಗೆಯೇ ಅಂದೇ ಈ ಎಲ್ಲ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ತಿಳಿಸಿದ್ದರು.

    ಕೃಷಿ ಕಾಯ್ದೆ ವಿರುದ್ಧ ಕಳೆದ ಒಂದು ವರ್ಷದಿಂದ ಸಂಯುಕ್ತ ಕಿಸಾನ್ ಮೊರ್ಚಾ ಹಾಗೂ ಇನ್ನಿತರೆ ರೈತ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೃಷಿ ಕಾಯ್ದೆಯನ್ನು ವಾಪಸ್ ಪಡೆದು ಸಂಸತ್ತಿನಲ್ಲಿ ಮಸೂದೆಯನ್ನು ಜಾರಿಗೊಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು. ದನ್ನೂ ಓದಿ: #MeToo ಪ್ರಕರಣ – ನಟಿ ಶೃತಿ ಹರಿಹರನ್‌ಗೆ ನೋಟಿಸ್

    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಕೆಎಂ ಮುಖಂಡ ದರ್ಶನ್‍ಪಾಲ್ ಅವರು, ನಾಳೆ ಮೆರವಣಿಗೆಯನ್ನು ರದ್ದುಗೊಳಿಸಿದ್ದೇವೆ. ರೈತರ ಮೇಲೆ ದಾಖಲಾಗಿದ್ದ ಎಲ್ಲಾ ದೂರುಗಳನ್ನು ಹಿಂಪಡೆಯಲು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇವೆ, ಸಚಿವ ಅಜಯ್ ಮಿಶ್ರಾ ಅವರನ್ನು ಅಮಾನತುಗೊಳಿಸವುದು ಸೇರಿದಂತೆ ಇನ್ನಿತರೆ ಬೇಡಿಕೆಯನ್ನು ಈಡೇರಿಸುವ ನಿರೀಕ್ಷೆಯಿದೆ. ಈ ಬಗ್ಗೆ ಡಿ.4ರಂದು ಎಸ್‍ಕೆಎಂ ಮತ್ತೊಮ್ಮೆ ಸಭೆ ನಡೆಸಲಿದೆ ಎಂದು ಮಾಹಿತಿ ನೀಡಿದರು.

    ಸರ್ಕಾರವೂ ರೈತರೊಂದಿಗೆ ಸಂವಾದವನ್ನು ಪ್ರಾರಂಭಿಸಬೇಕು ಎಂದು ಎಸ್‍ಕೆಎಂ ಒತ್ತಾಯಿಸಿದೆ. ಇತ್ತೀಚೆಗಷ್ಟೇ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದರು.

    ಸರ್ಕಾರದ ಕ್ರಮವನ್ನು ರೈತ ಸಂಘಗಳು ಸ್ವಾಗತಿಸಿದ್ದವು. ಆದರೆ ಆ ಕಾಯ್ದೆಗಳನ್ನು ಕಾನೂನು ರೀತಿಯಲ್ಲಿ ಹಿಂಪಡೆಯುವವರೆಗೆ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ವಿವಿಧ ರೈತ ಸಂಘಗಳು ತಿಳಿಸಿದ್ದವು.