Tag: ಸಂವಾದ

  • ಈಗ ಕಿಂಗ್ ಮೇಕರ್, ಮುಂದೆ ನಾವೇ ಕಿಂಗ್ ಆಗ್ತೀವಿ: ಎಚ್‍ಡಿಕೆ

    ಈಗ ಕಿಂಗ್ ಮೇಕರ್, ಮುಂದೆ ನಾವೇ ಕಿಂಗ್ ಆಗ್ತೀವಿ: ಎಚ್‍ಡಿಕೆ

    ಬೆಂಗಳೂರು: ಇವತ್ತು ಜೆಡಿಎಸ್ ಗೆ ಕಿಂಗ್ ಮೇಕರ್ ಸ್ಥಾನ ತೋರಿಸಿದ್ದೀರಿ. ಮುಂದೆ ನಾವೇ ಕಿಂಗ್ ಆಗುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಸರ್ವೆ ಬಗ್ಗೆ ನನಗೆ ಆಕ್ಷೇಪ ಇಲ್ಲ. ನಿಮ್ಮ ವಿಧಾನದಲ್ಲಿ ನೀವು ಮಾಡಿದ್ದೀರಿ. ನಾನು ನಮ್ಮದೇ ವಿಧಾನದಲ್ಲಿ ಲೆಕ್ಕ ಹಾಕಿದ್ದೇನೆ ಎಂದು ತಿಳಿಸಿದರು.

    ಗುಜರಾತ್ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾದಾಗ ಬಿಜೆಪಿಗೆ 110ಕ್ಕೂ ಹೆಚ್ಚಿನ ಸ್ಥಾನ ಸಿಗಲಿದೆ ಎಂದು ಮಾಧ್ಯಮಗಳು ಹೇಳಿತ್ತು. ಆದರೆ ಫಲಿತಾಂಶ ಪ್ರಕಟವಾದಾಗ 99ಕ್ಕೆ ಬಿಜೆಪಿ ಸುಸ್ತು ಹೊಡೆಯಿತು ಎಂದರು. ಇದನ್ನೂ  ಓದಿ: ಯಾರಿಗೂ ಬಹುಮತವಿಲ್ಲ, ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ!

    ಹಿರಿಯರ ಜೊತೆ ಸಂವಾದ: ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಿರಿಯ ನಾಗರಿಕರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಸ್ಥಾನ ನನ್ನಪ್ಪನ ಆಸ್ತಿ ಅಲ್ಲ. ಅವಕಾಶ ಕೊಟ್ಟರೆ ದಿನದ 20 ಗಂಟೆ ನಿಮಗಾಗಿ ಚಾಕರಿ ಮಾಡುತ್ತೇನೆ. ಅವಕಾಶ ಕೊಡದಿದ್ದರೆ ಮನೆಯಲ್ಲಿ ಕುಳಿತುಕೊಳ್ಳುವೆ. ಇದರಲ್ಲಿ ನನ್ನ ಆಸ್ತಿ ಏನು ಹೋಗಲ್ಲ ಎಂದು ಹೇಳಿದರು.

    113 ಸ್ಥಾನವನ್ನು ಗೆಲ್ಲಲು ನಾನು ಹೊರಟಿದ್ದೇನೆ. ಸ್ವತಂತ್ರವಾಗಿ ಯಾರ ಹಂಗಿಲ್ಲದೇ ಅಧಿಕಾರ ನಡೆಸುವಂತಾಗಬೇಕು. ನಾನು ಅಧಿಕಾರಕ್ಕೆ ಬಂದರೆ 24 ತಾಸು ವಿಧಾನಸೌಧ ತೆರೆಯುತ್ತೇನೆ. ವಿಧಾನಸೌಧದ ಸುತ್ತ ಇರುವ ಬ್ಯಾರಿಕೇಡ್ ತಗೆಯುತ್ತೇನೆ. ನಾನು ಮುಖ್ಯಮಂತ್ರಿಯಾದ್ರೆ ಯಾರೂ ಬೇಕಾದ್ರೂ ಸಿಎಂ ಶರ್ಟ್ ಎಳೆದು ಪ್ರಶ್ನೆ ಮಾಡಬಹುದು ಎಂದು ಭರವಸೆ ನೀಡಿದರು.

    ಆಕಸ್ಮಿಕ ಪ್ರವೇಶ: ಸರ್ವಸಂಘ ಪರಿತ್ಯಾಗಿ ಆದವರು ಆಧಿಕಾರ ನಡೆಸಬೇಕು. ಆಗ ಮಾತ್ರ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಸಾಧ್ಯ. ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕ. ದೇವೇಗೌಡರ ಮಗ ಅನ್ನೋದು ಬಿಟ್ಟರೆ ನನಗೆ ಬೇರೆ ಯಾವುದೇ ಅರ್ಹತೆ ಇರಲಿಲ್ಲ. ಐಎಎಸ್ ಅಧಿಕಾರಿಗಳನ್ನು ನಂಬಿ ಆಡಳಿತ ಸಾಧ್ಯವಿಲ್ಲ. ಜನರ ಬಳಿ ಹೋದಾಗಲೇ ಸಮಸ್ಯೆ ಅರಿವಾಗುತ್ತದೆ ಎಂದು ಹೇಳಿದರು.

    ಇಸ್ರೇಲ್ ಕೃಷಿಗೆ ಒತ್ತು: ಹಿರಿಯ ವ್ಯಕ್ತಿಯೊಬ್ಬರು ಕೃಷಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಸಾಲ ಮನ್ನಾ ಮಾಡಿದ ತಕ್ಷಣ ರೈತರು ಉದ್ಧಾರ ಆಗುವುದಿಲ್ಲ. ರೈತರಿಗೆ ಅನುಕೂಲ ಆಗುವಂತಹ ಕಾರ್ಯಕ್ರಮ ತಂದರೆ ಮಾತ್ರ ಅವರು ಉದ್ಧಾರ ಆಗುತ್ತಾರೆ. ಇಸ್ರೇಲಿನಲ್ಲಿ ಸಮುದ್ರದ ನೀರನ್ನು ಕೃಷಿಗೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲಿ ರೈತ ಮಾರುಕಟ್ಟೆ ದರದಲ್ಲಿ ನೀರು ಖರೀದಿಸಿ ಉತ್ತಮ ಕೃಷಿ ಮಾಡುತ್ತಿದ್ದಾನೆ. ನಮ್ಮಲ್ಲಿ ಉಚಿತ ನೀರು ಉಚಿತ ವಿದ್ಯುತ್ ಕೊಟ್ಟರೂ ರೈತರು ಯಾಕೆ ಅಭಿವೃದ್ಧಿ ಹೊಂದುತ್ತಿಲ್ಲ? ಅನಾರೋಗ್ಯದ ನಡುವೆಯೂ ನಾನು ಇಸ್ರೇಲ್ ಕೃಷಿ ಪದ್ಧತಿ ಅಧ್ಯಯನ ಮಾಡಿದ್ದೇನೆ. ನಮ್ಮ ಸರ್ಕಾರ ಬಂದಲ್ಲಿ ಇಸ್ರೇಲ್ ಮಾದರಿಯ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಎಚ್‍ಡಿಕೆ ಉತ್ತರಿಸಿದರು.

    ನಾವು ಕೆಲ್ಸ ಮಾಡಿಲ್ಲವೇ: ಮಾದ್ಯಮಗಳ ಸಮೀಕ್ಷೆಗಳು ಏನಾದರೂ ಬರಲಿ. ಜ್ಯೋತಿಷಿಗಳು ಏನಾದರೂ ಹೇಳಿಕೊಳ್ಳಲಿ. ಆದರೆ ನನಗೆ ನಮ್ಮ ಸರ್ಕಾರ ಬಂದೇ ಬರುತ್ತದೆ ಎನ್ನುವ ವಿಶ್ವಾಸವಿದೆ. ಸಮೀಕ್ಷೆ ಗಳು ಎಲ್ಲೋ ಕೆಲವು ಸಲ ನಿಜವಾಗಿರಬಹುದು. ಮಾಧ್ಯಮಗಳ ಸಮೀಕ್ಷೆ ಬಗ್ಗೆ ನಾನು ಹೆಚ್ಚು ಮಾತನಾಡಲು ಬಯಸುವುದಿಲ್ಲ. ಪದೇ ಪದೇ ಕಾಂಗ್ರೆಸ್ 100 ಸ್ಥಾನ, ಬಿಜೆಪಿ 80 ಅಂತೆಲ್ಲಾ ಮಾಧ್ಯಮದವರು ತೋರಿಸುತ್ತಾರೆ. ಯಾಕೆ ನಾವು ಏನೂ ಕೆಲಸ ಮಾಡಿಲ್ಲವಾ ಎಂದು ಮಾಧ್ಯಮಗಳ ಸಮೀಕ್ಷೆ ಬಗ್ಗೆ ಪ್ರಶ್ನಿಸಿ ಪರೋಕ್ಷವಾಗಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

    ಉತ್ತರ ಭಾರತದ ಅಧಿಕಾರಿಗಳು ನಮ್ಮ ಸರ್ಕಾರಕ್ಕೆ ಬೇಕಿಲ್ಲ. ಕರ್ನಾಟಕವನ್ನು ದಿವಾಳಿ ಮಾಡಿ ತಮ್ಮ ರಾಜ್ಯಗಳಲ್ಲಿ ಬಹು ಅಂತಸ್ತಿನ ಮಹಡಿ ಮಾಲ್ ಕಟ್ಟಿದ್ದಾರೆ ಎಂದು ಎಚ್‍ಡಿಕೆ ಕಿಡಿಕಾರಿದರು.  ಇದನ್ನೂ  ಓದಿ: :ಹೊಸ ವರ್ಷಕ್ಕೆ ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ-ಕರ್ನಾಟಕ ಮತದಾರರ ಮನದಾಳದ ಉತ್ತರ ಇಲ್ಲಿದ

  • ವಯಸ್ಕರ ಚಿತ್ರ ನೋಡಿದ ಅನುಭವವನ್ನು ಮಕ್ಕಳೊಂದಿಗೆ ಹಂಚಿಕೊಂಡ ಗೋವಾ ಸಿಎಂ

    ವಯಸ್ಕರ ಚಿತ್ರ ನೋಡಿದ ಅನುಭವವನ್ನು ಮಕ್ಕಳೊಂದಿಗೆ ಹಂಚಿಕೊಂಡ ಗೋವಾ ಸಿಎಂ

    ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ತಾವು ಮೊದಲ ಬಾರಿಗೆ ವಯಸ್ಕರ ಚಿತ್ರವನ್ನು ನೋಡಿದ ಅನುಭವವನ್ನು ಮಕ್ಕಳ ದಿನಾಚರಣೆಯಂದು ನಡೆದ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಹಂಚಿಕೊಂಡಿದ್ದಾರೆ.

    ಪರಿಕ್ಕರ್ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳೊಂದಿಗೆ ಸಂವಾದದಲ್ಲಿ ತೊಡಗಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ನೀವು ಯುವಕರಾಗಿದ್ದಾಗ ಯಾವ ತರಹದ ಸಿನಿಮಾಗಳನ್ನು ನೋಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾನೆ. ಅದಕ್ಕೆ ಪರಿಕ್ಕರ್, ನಾನು ಯುವಕನಿದ್ದಾಗ ಕೇವಲ ಸಿನಿಮಾಗಳಲ್ಲ, ಅದರ ಜೊತೆಗೆ ವಯಸ್ಕರ ಚಿತ್ರಗಳನ್ನು ನೋಡುತ್ತಿದ್ದೆವು. ಅಂದು ನಾವು ಏನು ವಯಸ್ಕರ ಚಿತ್ರಗಳು ಎಂದು ಕರೆಯಲ್ಪಡುತ್ತಿದ್ದ ಆ ಚಿತ್ರಗಳ ಹೆಚ್ಚಿನ ದೃಶ್ಯಗಳು ಈಗ ಟಿವಿಯಲ್ಲಿ ಪ್ರಸಾರಗೊಳ್ಳುತ್ತಿದೆ ಎಂದು ಉತ್ತರಿಸಿದ್ದಾರೆ.

    ನಾನು ಯುವಕನಾಗಿದ್ದಾಗ ಪಾಪ್ಯೂಲರ್ ಅಡಲ್ಟ್ ಮೂವಿ ಬಂದಿತ್ತು. ನಾನು ಮತ್ತು ನನ್ನ ಸಹೋದರ ಇಬ್ಬರೂ ಸಿನಿಮಾ ನೋಡಲು ಥಿಯೇಟರ್ ಗೆ ಹೋಗಿದ್ದೆವು. ಸಿನಿಮಾದಲ್ಲಿ ಇಂಟರ್ ವೆಲ್ ನಲ್ಲಿ ಥಿಯೇಟರ್ ಲೈಟ್ ಗಳೆಲ್ಲಾ ಹಚ್ಚಲಾಯಿತು. ನೋಡಿದರೆ ನಮ್ಮ ನೆರೆ ಮನೆಯ ವ್ಯಕ್ತಿಯೊಬ್ಬ ನಮ್ಮ ಪಕ್ಕದಲ್ಲಿಯೇ ಕುಳಿತಿದ್ದ. ಆ ವ್ಯಕ್ತಿ ಪ್ರತಿದಿನ ನನ್ನ ತಾಯಿಯ ಜೊತೆ ಮಾತನಾಡುತ್ತಿದ್ದರಿಂದ ಅವರಿಗೆ ನಮ್ಮಿಬ್ಬರ ಪರಿಚಯವಿತ್ತು. ಆ ಕ್ಷಣದಲ್ಲಿ ಭಯಗೊಂಡ ನಾನು ನಾವು ಸತ್ತೆ ಹೋದೆವು ಎಂದು ಹೇಳಿದೆ ಅಂತಾ ಪರಿಕ್ಕರ್ ತಿಳಿಸಿದರು.

    ಥಿಯೇಟರ್ ನಲ್ಲಿ ನೆರೆಮನೆಯ ವ್ಯಕ್ತಿಯನ್ನು ನೋಡುತ್ತಲೇ ನಾವಿಬ್ಬರು ಸಿನಿಮಾವನ್ನು ಅರ್ಧಕ್ಕೆ ಬಿಟ್ಟು ಓಡಿ ಬಂದೆವು. ಮನೆಗೆ ಹೋಗುವ ದಾರಿ ಮಧ್ಯೆಯೇ ಈ ಸಮಸ್ಯೆಯನ್ನು ಬಗಹರಿಸುವ ಪ್ಲಾನ್ ಮಾಡಿಕೊಂಡು ಹೊರಟೆವು. ಮನೆಗೆ ಹೋದ ಮೇಲೆ ತಾಯಿಯ ಜೊತೆ, ನಾವು ಇವತ್ತು ಸಿನಿಮಾಗೆ ಹೋಗಿದ್ದೆವು. ಆದರೆ ನಮಗೆ ಅದು ಯಾವ ಸಿನಿಮಾ ಎಂದು ಗೊತ್ತಿರಲಿಲ್ಲ. ಅಲ್ಲಿಗೆ ಹೋದ ಮೇಲೆ ಅದು ಕೆಟ್ಟ ಸಿನಿಮಾ ಎಂದು ಗೊತ್ತಾಯಿತು. ಕೂಡಲೇ ಚಿತ್ರ ನೋಡುವುದನ್ನು ಬಿಟ್ಟು ಅರ್ಧಕ್ಕೆ ಚಿತ್ರ ಮಂದಿರದಿಂದ ಹೊರ ಬಂದೆವು. ಮತ್ತೆ ನಿಧಾನವಾಗಿ ನಮ್ಮ ನೆರೆಮನೆಯ ವ್ಯಕ್ತಿಯೂ ಆ ಸಿನಿಮಾವನ್ನು ನೋಡಲು ಬಂದಿದ್ದ ಎನ್ನುವುದನ್ನು ಎಂದು ತಿಳಿಸಿದೆವು ಎಂದರು.

    ಮರುದಿನ ಆ ವ್ಯಕ್ತಿ ನಮ್ಮ ತಾಯಿಯನ್ನು ಕರೆದು ನಿಮ್ಮ ಮಕ್ಕಳಿಬ್ಬರು ಥಿಯೇಟರ್ ಗೆ ಬಂದಿದ್ದರು ಎಂದು ಹೇಳಿದರು. ಕೂಡಲೇ ನಮ್ಮ ತಾಯಿ ನನ್ನ ಮಕ್ಕಳು ಯಾವ ಸಿನಿಮಾಗೆ ಹೋಗಿದ್ದರು ಎಂದು ನನಗೆ ಗೊತ್ತಿದೆ. ಆದರೆ ನೀವ್ಯಾಕೆ ಅಂತಹ ಸಿನಿಮಾ ನೋಡಲು ಹೋಗಿದ್ರಿ ಎಂದು ಮರು ಪ್ರಶ್ನೆ ಮಾಡಿದರು. ನಾವು ಮೊದಲೇ ಎಲ್ಲವನ್ನು ಪ್ಲಾನ್ ಮಾಡಿದ್ದರಿಂದ ನಾವು ಬಚಾವ್ ಆಗಿದ್ದೆವು ಎಂದು ಹೇಳಿ ಪರಿಕ್ಕರ್ ನಕ್ಕರು.

     

  • ಉಡುಪಿಯ ಎಂಐಟಿ ಕಾಲೇಜಿಗೆ ನಿರ್ದೇಶಕ ರಾಜಮೌಳಿ ಭೇಟಿ ನೀಡಿ ಹೀಗಂದ್ರು

    ಉಡುಪಿಯ ಎಂಐಟಿ ಕಾಲೇಜಿಗೆ ನಿರ್ದೇಶಕ ರಾಜಮೌಳಿ ಭೇಟಿ ನೀಡಿ ಹೀಗಂದ್ರು

    ಉಡುಪಿ: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಶುಕ್ರವಾರ ಉಡುಪಿಗೆ ಭೇಟಿ ನೀಡಿದ್ದಾರೆ.

    ಜಿಲ್ಲೆಯಲ್ಲಿರೋ ಮಣಿಪಾಲ್ ತಾಂತ್ರಿಕ ಶಿಕ್ಷಣ ಸಂಸ್ಥೆ (ಎಂಐಟಿ) ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಜಮೌಳಿ ಪಾಲ್ಗೊಂಡಿದ್ದರು. ಶಿಕ್ಷಣ ಸಂಸ್ಥೆಯಿಂದ ಅವರಿಗೆ ಅದ್ಧೂರಿ ಸ್ವಾಗತವೇ ಸಿಕ್ಕಿದೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಸಂತಸದಿಂದ ಉತ್ತರಿಸುತ್ತಾ ತಮ್ಮ ಸಿನಿಮಾ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹೆಚ್ಚಿನ ನಿರ್ದೇಶಕರಿಗೆ ಹೀರೋಗಳಿಗೆ ಸೂಕ್ತವಾಗುವ ಕಥೆ ಮಾಡುವ ಅನಿವಾರ್ಯತೆ ಇರುತ್ತದೆ. ಆದರೆ ಕಥೆಗೆ ತಕ್ಕಂತ ಹೀರೋಗಳನ್ನು ಆಯ್ಕೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಕೆಲವೇ ಕೆಲವು ಡೈರೆಕ್ಟರ್‍ಗಳಿಗೆ ಮಾತ್ರ ಅಂತಹ ಅವಕಾಶ ಸಿಗುತ್ತದೆ. ಆದರೆ ನಾನು ಅದೃಷ್ಟವಂತ ನಿರ್ದೇಶಕ ಅಂತ ಹೇಳಿದ್ರು.

    ಸಂವಾದ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಡ್ಯಾನ್ಸ್ ಪ್ರೇಕ್ಷಕರ ಗಮನ ಸೆಳೆಯಿತು.