Tag: ಸಂಸದರು

  • 75 ವರ್ಷ, 75 ಗ್ರಾಮ, 75 ಗಂಟೆ – ಆಗಸ್ಟ್ 15ಕ್ಕೆ ಸಂಸದರಿಗೆ ಮೋದಿ ಟಾಸ್ಕ್

    75 ವರ್ಷ, 75 ಗ್ರಾಮ, 75 ಗಂಟೆ – ಆಗಸ್ಟ್ 15ಕ್ಕೆ ಸಂಸದರಿಗೆ ಮೋದಿ ಟಾಸ್ಕ್

    ನವದೆಹಲಿ: ಅಧಿವೇಶನದ ನಡುವೆ ಮಂಗಳವಾರ ಬಿಜೆಪಿ ಸಂಸದರ ಬೈಠಕ್ ನಡೆಯಿತು. ದೇಶಕ್ಕೆ ಸ್ವತಂತ್ರ ಬಂದು 75 ವರ್ಷ ಪೂರೈಸುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದರಿಂದ ನೂತನ ಟಾಸ್ಕ್ ನೀಡಿದ್ದಾರೆ.

    2047ಕ್ಕೆ ಭಾರತಕ್ಕೆ ಸ್ವತಂತ್ರ ಸಿಕ್ಕು 100 ವರ್ಷ ಆಗುವ ವೇಳೆ ಭಾರತ ಹೇಗೆ ಅಭಿವೃದ್ಧಿ ಹೊಂದಿರುತ್ತೆ ಎಂಬುದರ ಬಗ್ಗೆ ಜನರಿಂದ ನೇರವಾಗಿ ಮಾಹಿತಿ ಸಂಗ್ರಹಿಸಿ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ಇಬ್ಬರ ಕಾರ್ಯಕರ್ತರ ಜೋಡಿಯನ್ನು ಸಿದ್ಧಪಡಿಸಬೇಕು. ಈ ಜೋಡಿ 75 ಗ್ರಾಮಗಳ ಪ್ರವಾಸ ಮಾಡಿ ಒಂದು ಪಟ್ಟಿಯನ್ನು ಸಿದ್ಧಪಡಿಸಬೇಕು. ಡಿಜಿಟಲ್ ಲಿಟ್ರೆಸೆಯಲ್ಲಿ ದೇಶ ಎಲ್ಲಿಯವರೆಗೂ ತಲುಪಿದೆ ಮತ್ತು ಎಲ್ಲಿಯವರೆಗೂ ತಲುಪಬಹುದು ಮಾಹಿತಿಯನ್ನು ಆ ಪಟ್ಟಿ ಒಳಗೊಂಡಿರಬೇಕು. ಈ ವೇಳೆ ದೇಶಕ್ಕಾಗಿ ನಾನೇನು ಮಾಡಬಲ್ಲೆ ಅನ್ನೋ ಭಾವನೆಯನ್ನು ಜನರಲ್ಲಿ ಹುಟ್ಟು ಹಾಕಬೇಕು ಎಂದು ಪ್ರಧಾನಿಗಳು ಬೈಠಕ್ ನಲ್ಲಿ ಹೇಳಿದ್ದಾರೆ.

    ಕಾರ್ಯಕ್ರಮ ಜನಾಂದೋಲನ ಆಗಬೇಕು:
    ದೇಶಕ್ಕೆ ಸ್ವತಂತ್ರ ಬಂದ ಈ ಸಂದರ್ಭದಲ್ಲಿ ಮಾಡುತ್ತಿರುವ ಕಾರ್ಯಕ್ರಮ ಜನಾಂದೋಲನವಾಗಬೇಕು. 75 ವರ್ಷದ ಸಂಭ್ರಮಾಚರಣೆಯಲ್ಲಿ 75 ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿ ಜನತೆಯೊಂದಿಗೆ 75 ಗಂಟೆ ಸಮಯ ಕಳೆಯಿರಿ. ಈ ಸಮಯದಲ್ಲಿ ದೇಶದ ಸಾಧನೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಿ. ಆದ್ರೆ ಇದು ಸರ್ಕಾರಿ ಕಾರ್ಯಕ್ರಮ ಆಗದಂತೆ ಎಚ್ಚರಿಕೆ ವಹಿಸಬೇಕು. ಈ ವಿಶೇಷ ಕಾರ್ಯಕ್ರಮದಲ್ಲಿ ಹೆಚ್ಚು ಜನರು ಭಾಗಿಯಾಗುವಂತೆ ನೋಡಿಕೊಳ್ಳುವ ಮೂಲಕ ಜನ ಆಂದೋಲನವಾಗಿ ಬದಲಾಗಬೇಕೆಂದು ಸಂಸದರಿಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

    ಇದೇ ಬೈಠಕ್ ನಲ್ಲಿ ವಿಪಕ್ಷ ನಾಯಕರ ಕೆಲಸಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿ, ಅವರನ್ನ ಇಕ್ಕಟ್ಟಿನಲ್ಲಿ ಸಿಲುಕಿಸುವ ತಂತ್ರಗಾರಿಕೆ ಮಾಡಬೇಕು. ಪ್ರತಿಬಾರಿಯೂ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ ಚರ್ಚೆಗಳಿಗೆ ನೀವೆಲ್ಲರೂ ಸಿದ್ಧರಾಗಿರಬೇಕು ಎಂದು ಸಂಸದರಿಗೆ ಒಪಾಠ ಮಾಡಿದ್ದಾರೆ. ಆಗಸ್ಟ್ 15ರ ಹೊಸ ಟಾಸ್ಕ್ ನ್ನು ಆಗಸ್ಟ್ 15ರ ದ್ವಜಾರೋಹಣದ ಬಳಿಕ ಪ್ರಧಾನಿಗಳು ಬಹಿರಂಗವಾಗಿ ಘೋಷಣೆ ಮಾಡುವ ಸಾಧ್ಯತೆಗಳಿವೆ.

    ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಗೌರವ್ ಗೊಗೊಯಿ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಶ್ನೆ ಕೇಳಿದ್ದರು. ಕೇಂದ್ರ ಸರ್ಕಾರ ಸಿಎಎ ನಿಯಮಗಳನ್ನು ನೋಟಿಫೈ ಮಾಡಲು ದಿನಾಂಕವನ್ನು ಅಂತಿಮಗೊಳಿಸಿದೆಯೇ? ಒಂದು ನಿಗದಿಯಾಗಿದ್ರೆ ದಿನಾಂಕ ತಿಳಿಸಿ? ಇಲ್ಲ ಅಂದ್ರೆ ಯಾಕೆ ಎಂದು ಪ್ರಶ್ನೆ ಮಾಡಿದ್ದರು. ಗೌರವ್ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಸಚಿವಾಲಯ, ಡಿಸೆಂಬರ್ 12, 2019ರಂದು ಸಿಎಎ ನೋಟಿಫೈ ಮಾಡಲಾಗಿತ್ತು. 2020ರಲ್ಲಿ ಸಿಎಎ ಕಾನೂನಿನ ರೂಪ ಪಡೆದುಕೊಂಡಿತ್ತು. ಆದ್ರೆ ಲೋಕಸಭೆ ಮತ್ತು ರಾಜ್ಯಸಭೆಯ ಸಮಿತಿ ಈ ಕಾನೂನಿನ ನಿಯಮಗಳನ್ನು ಸಿದ್ಧಪಡಿಸಲು ಜನವರಿ 2022ರವರೆಗೆ ಸಮಯ ಕೇಳಿದೆ ಎಂದು ಉತ್ತರ ನೀಡಿದೆ. ಇದನ್ನೂ ಓದಿ: ಆಗಸ್ಟ್ ನಲ್ಲಿಯೇ ಮಕ್ಕಳಿಗೆ ಕೊರೊನಾ ಲಸಿಕೆ – ಆರೋಗ್ಯ ಸಚಿವರ ಸುಳಿವು

    ಕೇಂದ್ರ ಸರ್ಕಾರ 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ. ಇದನ್ನೂ ಓದಿ: ಅಸ್ಸಾಂ, ಮಿಜೊರಾಂ ಗಡಿಯಲ್ಲಿ ಹಿಂಸಾಚಾರ – ಐವರು ಪೊಲೀಸರು ಹುತಾತ್ಮ

  • ಸಚಿವ, ಸಂಸದರ ಹೊಸ ಕಾರು ಖರೀದಿಗೆ ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

    ಸಚಿವ, ಸಂಸದರ ಹೊಸ ಕಾರು ಖರೀದಿಗೆ ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

    ಬೆಂಗಳೂರು: ಕೊರೊನಾ ಆರ್ಥಿಕ ಸಂಕಷ್ಟ ಕಾಸಿಲ್ಲ ಎಂದು ಹೇಳುವ ಸರ್ಕಾರ ಸಚಿವರು ಮತ್ತು ಸಂಸದರಿಗೆ ಹೊಸ ಕಾರು ಖರೀದಿಗೆ ಗ್ರೀನ್ ಸಿಗ್ನಲ್ ಕೊಟ್ಟಿರುವುದು ಟೀಕೆಗೆ ಗುರಿಯಾಗಿದೆ.

    ಸಚಿವರು, ಸಂಸದರಿಗೆ ಹೊಸ ಕಾರು ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಹಿಂದೆ ಶೋರೂಂ ದರ 22 ಲಕ್ಷಕ್ಕೆ ಖರೀದಿ ಮಿತಿ ನಿಗದಿ ಮಾಡಲಾಗಿತ್ತು. ಈಗ ಶೋರೂಮ್ ದರ 23 ಲಕ್ಷಕ್ಕೆ ಖರೀದಿ ಮಿತಿ ಏರಿಕೆ ನಿಗದಿ ಪರಿಷ್ಕರಿಸಿ ಆದೇಶಿಸಲಾಗಿದೆ. 60 ಕಾರುಗಳನ್ನು ಖರೀದಿಸಲು ಸರ್ಕಾರ ಮುಂದಾಗಿದೆ.

    ಕೊರೊನಾ ಕಾಲದಲ್ಲೇ ಇದು ಎರಡನೇ ಬಾರಿ ಖರೀದಿ ದರ ಮಿತಿ ಪರಿಷ್ಕರಣೆ ಮಾಡಲಾಗುತ್ತಿದೆ. ಬರೋಬ್ಬರಿ 32ಸಚಿವರು, 28 ಸಂಸದರು ಹೊಸ ಕಾರು ಖರೀದಿ ಮಾಡ್ತಾರಾ ಎನ್ನಲಾಗುತ್ತಿದೆ. 60 ಕಾರು ಖರೀದಿ ಮಾಡಿದ್ರೆ ರಾಜ್ಯದಕ್ಕೆ ಬೊಕ್ಕಸಕ್ಕೆ ಬರೋಬ್ಬರಿ 13.80 ಕೋಟಿ ರೂ. ಹೊರೆ ಬೀಳಲಿದೆ.

    ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಿ ಎಂದರೆ ಕೊರೊನಾ ಕಾರಣವನ್ನು ಹೇಳುತ್ತಾರೆ. ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಲು ದುಡ್ಡಿಲ್ಲ ಎಂದು ಹೇಳುತ್ತಾರೆ. ಸಾರಿಗೆ ನೌಕರರ ಸಂಬಳ ಸರಿಯಾಗಿ ಪಾವತಿಯಾಗತ್ತಿಲ್ಲ. ತೆರಿಗೆ ಕಡಿಮೆ ಮಾಡಿ ತೈಲ ಬೆಲೆ ಇಳಿಸಿ ಎಂದರೂ ಕೇಳದ ಸರ್ಕಾರ ಈಗ ನಮ್ಮ ತೆರಿಗೆ ಹಣದಿಂದಲೇ ಕಾರು ಖರೀದಿಗೆ ಮುಂದಾಗುತ್ತಿರುವುದು ಎಷ್ಟು ಸರಿ ಎಂದು ಜನ ಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದಾರೆ.


    ಸಚಿವರಿಗೆ ವಾಹನ ಬೇಕು ನಿಜ. ಆದರೆ ಸುಸಜ್ಜಿತವಾಗಿರಬೇಕು. ಆದರೆ ಐಶಾರಾಮಿಯಾಗಿರಬೇಕು ಎಂಬ ನಿಯಮವಿಲ್ಲ. ಕೋವಿಡ್ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವಾಗ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಬೇಕಾದ ಸರ್ಕಾರವೇ ಖರ್ಚು ಮಾಡಲು ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

  • ಸಂಸತ್ ಕ್ಯಾಂಟೀನ್ ಹೊಸ ದರಪಟ್ಟಿ

    ಸಂಸತ್ ಕ್ಯಾಂಟೀನ್ ಹೊಸ ದರಪಟ್ಟಿ

    ನವದೆಹಲಿ: ಶುಕ್ರವಾರದಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಆದರೆ ಸಂಸತ್ ಕ್ಯಾಂಟೀನ್ ನಲ್ಲಿ ಪೈಸೆ, ರೂಪಾಯಿ ಲೆಕ್ಕದಲ್ಲಿ ಸಂಸದರು ಭೂರಿ ಭೋಜನ ಮಾಡಲು ಆಗುವುದಿಲ್ಲ. ಏಕೆಂದರೆ ದಶಕಗಳ ಕಾಲ ಸಂಸತ್ತಿನ ಪಾರ್ಲಿಮೆಂಟ್ ನಲ್ಲಿ ಸಂಸದರಿಗೆ ನೀಡ್ತಾ ಬರ್ತಿದ್ದ ರಿಯಾಯ್ತಿಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.

    ನಾಳೆಯಿಂದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲೋಕಸಭೆಯ ಕಾರ್ಯದರ್ಶಿಗಳ, ಆಹಾರ ಪದಾರ್ಥಗಳ ದರಪಟ್ಟಿ ಪ್ರಕಟಿಸಿದೆ. ಹೊಸ ದರ ಪಟ್ಟಿಯಲ್ಲಿ ದರ ಹೆಚ್ಚಳ ಸ್ಪಷ್ಟವಾಗಿ ಕಂಡು ಬರುತ್ತದೆ. ಸಂಸತ್ ಕ್ಯಾಂಟೀನ್‍ನಲ್ಲಿ ಅತ್ಯಂತ ಅಗ್ಗದಲ್ಲಿ ಸಿಗೋ ಆಹಾರ ಅಂದ್ರೆ ಅದು ಚಪಾತಿ. ಇದರ ಬೆಲೆ ಮೂರು ರೂಪಾಯಿ. ಹಾಗೆಯೇ ದುಬಾರಿ ದರ ಅಂದ್ರೆ ಅದು ನಾನ್‍ವೆಜ್ ಊಟ. ಅದರ ದರ 700 ರೂಪಾಯಿ. ಸಂಸದರಿಗೆ ರಿಯಾಯ್ತಿ ಕಡಿತ ಮಾಡಿರುವ ಕಾರಣ ಸರ್ಕಾರಕ್ಕೆ ಪ್ರತಿವರ್ಷ 8 ಕೋಟಿ ಉಳಿತಾಯ ಆಗಲಿದೆ.

    ಸಂಸತ್ ಕ್ಯಾಂಟೀನ್, ಹೊಸ ದರಪಟ್ಟಿ
    * ಒಂದು ಚಪಾತಿ – 3 ರೂ.
    * ನಾನ್ ವೆಜ್ ಊಟ (ಬಫೆ ಸ್ಟೈಲ್) – 700 ರೂ.
    * ವೆಜ್ ಊಟ (ಬಫೆ ಸ್ಟೈಲ್) – 500 ರೂ.
    * ಸಸ್ಯಹಾರಿ ಥಾಲಿ – 100 ರೂ.
    * ಚಿಕನ್ ಬಿರಿಯಾನಿ – 100 ರೂ.
    * ಮಸಾಲೆ ದೋಸೆ – 50 ರೂ.
    * 2 ಇಡ್ಲಿ, ಚಟ್ನಿ, ಸಾಂಬರ್ – 25 ರೂ.
    * ಚಿತ್ರನ್ನ – 30 ರೂ.

  • ಸಂಸದರನ್ನ ಹುಬ್ಬಳ್ಳಿಯಲ್ಲಿ  ಹರಾಜು ಹಾಕ್ತೀವಿ ಕೊಳ್ಳುವವರು ಕೊಳ್ಳಬಹುದು: ವಾಟಾಳ್

    ಸಂಸದರನ್ನ ಹುಬ್ಬಳ್ಳಿಯಲ್ಲಿ ಹರಾಜು ಹಾಕ್ತೀವಿ ಕೊಳ್ಳುವವರು ಕೊಳ್ಳಬಹುದು: ವಾಟಾಳ್

    – ಕೋವಿಡ್‍ನಿಂದ ವಿದ್ಯಾರ್ಥಿ, ಶಿಕ್ಷಕ ಸತ್ತರೆ ಒಂದು ಕೋಟಿ ಕೊಡಬೇಕು
    – ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ

    ರಾಯಚೂರು: ಸರ್ಕಾರ ಪ್ರವಾಹ ಪರಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ ಅಂತ ರಾಯಚೂರಿನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

    ರಾಯಚೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ವಾಟಾಳ್ ನಾಗರಾಜ್ ಸರ್ಕಾರ ಹಾಗೂ ವಿವಿಧ ಪಕ್ಷಗಳ ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ. ಯಡಿಯೂರಪ್ಪನವರ ಬಳಿ ಹೆಲಿಕಾಪ್ಟರ್ ಇದೆ. ಜೆಡಿಎಸ್, ಕಾಂಗ್ರೆಸ್ಸಿನವರು ಹೆಲಿಕಾಪ್ಟರಿನಲ್ಲೇ ಬರುತ್ತಾರೆ. ಇನ್ನು ಮುಂದೆ ಕಾರಲ್ಲಿ ಕೆಳಗಡೆ ಓಡಾಡಲು ಆಗದ ರೋಗ ಬಂದಿದೆ ಅಂತ ವೈದ್ಯರು ಸರ್ಟಿಫಿಕೇಟ್ ಕೊಡಬೇಕು. ಹೆಲಿಕಾಪ್ಟರಿನಲ್ಲಿ ಓಡಾಡುವವರಿಗಾಗಿ ಈ ಹೊಸ ನಿರ್ಣಯವಾಗಬೇಕಿದೆ ಎಂದರು.

    ಕರ್ನಾಟಕವನ್ನು ಕೇಂದ್ರ ಸರ್ಕಾರ ಗುಲಾಮರ ರೀತಿ ನೋಡುತ್ತಿದೆ. ಪ್ರಧಾನಿ ಮೋದಿ ಎಲ್ಲಾ ಕಡೆ ಹೋಗುತ್ತಾರೆ ಕರ್ನಾಟಕಕ್ಕೆ ಬರಲ್ಲ. ನಮ್ಮ ಎಂಪಿಗಳು ದನಕಾಯುತ್ತಿದ್ದಾರಾ? ಯಾಕೆ ಪ್ರಧಾನಿಯನ್ನು ಕರೆದುಕೊಂಡು ಬರುತ್ತಿಲ್ಲ ಅಂತ ಪ್ರಶ್ನಿಸಿದರು. ಸದಾನಂದಗೌಡ ಸತ್ತರೂ ನಗ್ತಾರೆ, ಬದುಕಿದರೂ ನಗ್ತಾರೆ ಅವರ ನಗುವೆ ಒಂದು ವಿಚಿತ್ರ ಎಂದರು. ಪ್ರವಾಹ ಪೀಡಿತ ಜಿಲ್ಲೆಗಳಿಗೆ 50 ಸಾವಿರ ಕೋಟಿ ಪರಿಹಾರ ನೀಡಬೇಕು ಅಂತ ಆಗ್ರಹಿಸಿದರು. ಅ.29 ರಂದು ಎಂಪಿಗಳನ್ನ ಹುಬ್ಬಳ್ಳಿ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಮುಂದೆ ಹರಾಜು ಹಾಕಿ ಪ್ರತಿಭಟನೆ ಮಾಡುತ್ತೇವೆ. ಕೊಳ್ಳುವವರು ಬಂದು ಕೊಳ್ಳಬಹುದು, ವಿನೂತನ ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.

    ಚುನಾವಣೆಯಲ್ಲಿ ನಾನು ಗೆಲ್ಲಲೇ ಬೇಕು ಗೆದ್ದರೆ ವಿಧಾನಪರಿಷತ್ತಿನಲ್ಲಿ ಧ್ವನಿ ಭಾರೀ ಜೋರಾಗುತ್ತೆ ಅಂತ ಶಿಕ್ಷಕರ ಮತಯಾಚಿಸಿದರು. ಪ್ರೌಢಶಾಲಾ ಶಿಕ್ಷಕರಿಗೆ, ಪಿಯು ಉಪನ್ಯಾಸಕರಿಗೆ ಬಡ್ತಿ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಇಟ್ಟುಕೊಂಡು ನವೆಂಬರ್ 1 ರಿಂದ ಒಂದು ವರ್ಷದವರೆಗೆ ಹೋರಾಟ ಮಾಡುವುದಾಗಿ ಹೇಳಿದರು. ಕೊರೊನಾ ಸಮಯದಲ್ಲಿ ಕಾಲೇಜು ತೆರೆಯಲು ನನ್ನ ವಿರೋಧವಿದೆ. ಆನ್‍ಲೈನ್ ಒಂದು ಬೋಗಸ್, ಖಾಸಗಿ ಸಂಸ್ಥೆಗಳ ಹಣ ವಸೂಲಿ ವಿರುದ್ಧ ಹೋರಾಟ ಮಾಡುತ್ತೇವೆ. ಕಾಲೇಜು ಆರಂಭಿಸುವುದು ಬೇಡ ಶೂನ್ಯ ವರ್ಷ ಅಂತ ತೀರ್ಮಾನ ಮಾಡಬೇಕು. ಕೋವಿಡ್‍ನಿಂದ ವಿದ್ಯಾರ್ಥಿ, ಶಿಕ್ಷಕ ಸತ್ತರೆ ಒಂದು ಕೋಟಿ ಕೊಡಬೇಕು ಅಂತ ವಾಟಾಳ್ ನಾಗರಾಜ್ ಒತ್ತಾಯಿಸಿದರು.

  • ಸಾಂಸ್ಕೃತಿಕ ಸಮಿತಿಯನ್ನು ರದ್ದುಗೊಳಿಸಿ – 32 ಸಂಸದರಿಂದ ರಾಷ್ಟ್ರಪತಿಗೆ ಪತ್ರ

    ಸಾಂಸ್ಕೃತಿಕ ಸಮಿತಿಯನ್ನು ರದ್ದುಗೊಳಿಸಿ – 32 ಸಂಸದರಿಂದ ರಾಷ್ಟ್ರಪತಿಗೆ ಪತ್ರ

    – ದಕ್ಷಿಣ ಭಾರತದವರಿಗೆ ಸ್ಥಾನ ಇಲ್ಲ

    ನವದೆಹಲಿ: ಕೇಂದ್ರ ಸಾಂಸ್ಕೃತಿಕ ಸಮಿತಿಯಲ್ಲಿ ದಕ್ಷಿಣ ಭಾರತದವರಿಗೆ ಸ್ಥಾನ ಇಲ್ಲ. ಹೀಗಾಗಿ ಇದನ್ನು ರದ್ದು ಮಾಡಬೇಕು ಎಂದು 32 ಸಂಸದರು ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದಾರೆ.

    ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಈ ಸಮಿತಿಯಲ್ಲಿ ಒಬ್ಬರು ಮಹಿಳೆಯರು ಹಾಗೂ ದಕ್ಷಿಣ ಭಾರತದವರನ್ನು ನೇಮಿಸದ್ದಕ್ಕೆ ವಿರೋಧ ವ್ಯಕ್ತವಾಗಿದೆ.

    ಈಗ ಇದನ್ನು ವಿರೋಧಿಸಿ ರಾಷ್ಟ್ರಪತಿ ರಾಮನಾಥ್ ಕೋವಿದ್ ಅವರಿಗೆ ಪತ್ರ ಬರೆದಿರುವ ಸಂಸದರು, ಕೇಂದ್ರ ಸಾಂಸ್ಕೃತಿಕ ಇಲಾಖೆ ರಚಿಸಿರುವ ಈ ಸಮಿತಿಯಲ್ಲಿ, ದಕ್ಷಿಣ ಭಾರತೀಯರು, ಈಶಾನ್ಯ ಭಾರತೀಯರು, ಅಲ್ಪಸಂಖ್ಯಾತರು, ದಲಿತರು ಅಥವಾ ಮಹಿಳೆಯರಿಗೆ ಸ್ಥಾನ ನೀಡಿಲ್ಲ. ಈ ಸಮಿತಿಯ ಬಹುತೇಕ ಎಲ್ಲ ಸದಸ್ಯರು ಕೆಲವು ನಿರ್ದಿಷ್ಟ ಸಾಮಾಜಿಕ ಗುಂಪುಗಳಿಗೆ ಸೇರಿದವರಾಗಿದ್ದು, ಅವರು ಭಾರತೀಯ ಸಮಾಜದ ಜಾತಿ ಶ್ರೇಣಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಇದರ ಬಗ್ಗೆ ಈ ಹಿಂದೆ ಅಸಮಾಧಾನ ಹೊರ ಹಾಕಿದ್ದ ಮಾಜಿ ಸಿಎಂ ಕುಮಾರಸ್ವಾಮಿಯವರು, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದಿದ್ದರು.

    ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದರು.

    ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದ್ದರು.

  • ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ 17 ಸಂಸದರಿಗೆ ಕೊರೊನಾ

    ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ 17 ಸಂಸದರಿಗೆ ಕೊರೊನಾ

    ನವದೆಹಲಿ: ಮೊದಲ ದಿನದ ಸಂಸತ್ ಅಧಿವೇಶನದ ವೇಳೆ 17 ಜನ ಸಂಸದರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿವೆ.

    ದೇಶದಲ್ಲಿ ಕೊರೊನಾ ಸಂಕಷ್ಟವಿದ್ದರೂ ಹಲವಾರು ಮನ್ನೆಚ್ಚೆರಿಕೆ ಕ್ರಮಗಳನ್ನು ತೆಗೆದುಕೊಂಡು ಇಂದು ಸಂಸತ್ ಅಧಿವೇಶನವನ್ನು ಆರಂಭ ಮಾಡಲಾಗಿತ್ತು. ಆದರೆ ಇದರಲ್ಲಿ ಭಾಗವಹಿಸಿದ್ದ ಬಿಜೆಪಿಯ ಮೀನಾಕ್ಷಿ ಲೇಖಿ, ಅನಂತ್ ಕುಮಾರ್ ಹೆಗ್ಡೆ ಮತ್ತು ಪರ್ವೇಶ್ ಸಾಹಿಬ್ ಸಿಂಗ್ ಸೇರಿದಂತೆ 17 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

    ಅಧಿವೇಶನಕ್ಕೂ ಮುನ್ನ ಮಾತನಾಡಿದ್ದ ಪ್ರಧಾನಿ ಮೋದಿಯವರು, ಈ ಬಾರಿ ವಿಭಿನ್ನ ಪರಿಸ್ಥಿತಿಯಲ್ಲಿ ಅಧಿವೇಶನ ಆರಂಭಗೊಳ್ಳಲಿದೆ. ಕೊರೊನಾ ಜೊತೆಗೆ ಕರ್ತವ್ಯ ನಿರ್ವಹಿಬೇಕಾದ ಸ್ಥಿತಿಯಲ್ಲಿ ನಾವಿದ್ದೇವೆ. ಗಡಿಯಲ್ಲಿ ಚೀನಾ ವಿರುದ್ಧ ಹೋರಾಡುತ್ತಿರುವ ಸೈನಿಕರಿಗಾಗಿ ಎಲ್ಲ ಸಂಸದರು ಒಗ್ಗಟ್ಟು ಪ್ರದರ್ಶಿಸಬೇಕಿದೆ. ನಮ್ಮ ಸಂಸದರು ಇಂತಹ ಕಠಿಣ ಪರಿಸ್ಥಿತಿಯಲ್ಲೂ ಕರ್ತವ್ಯವನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಬಜೆಟ್ ಅಧಿವೇಶನವನ್ನ ಸಮಯಕ್ಕಿಂಂತ ಮುಂಚಿತವಾಗಿ ನಿಲ್ಲಿಸಬೇಕಾಯ್ತು ಎಂದಿದ್ದರು.

    ಮಾಹಾಮಾರಿ ಕೊರೊನಾಗೆ ಲಸಿಕೆ ಸಿಗೋವರೆಗೂ ನಿರ್ಲಕ್ಷ್ಯ ಬೇಡ. ನಮ್ಮ ವಿಜ್ಞಾನಿಗಳು ಲಸಿಕೆ ಕಂಡುಹಿಡಿಯುವಲ್ಲಿ ಆದಷ್ಟು ಬೇಗ ಸಫಲರಾಗಬೇಕಿದೆ. ವಿಶ್ವದ ಯಾವುದೇ ಮೂಲೆಯಿಂದ ಔಷಧಿ ಸಿದ್ಧವಾದ್ರೆ ಅದುವೇ ಸಂತೋಷದ ವಿಚಾರ. ಹಾಗೆ ಪತ್ರಕರ್ತರು ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಕೊರೊನಾ ವೈರಸ್ ಹಿನ್ನೆಲೆ ಸದನಗಳಲ್ಲಿ ಹಲವು ನಿಯಮಗಳನ್ನ ರೂಪಿಸಲಾಗಿದ್ದು, ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದರು.

    ಕೊರೊನಾ, ಆರ್ಥಿಕತೆ ಕುಸಿತ ಸೇರಿದಂತೆ ದೇಶದ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚಿಸಲು ಮುಂಗಾರು ಸಂಸತ್ ಅಧಿವೇಶನ ಆರಂಭಿಸುವಂತೆ ವಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಒತ್ತಾಯ ಮೇರೆಗೆ ಕೊರೊನಾ ಸಂಕಷ್ಟದ ನಡುವೆ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಎಚ್ಚರಿಕೆಯ ನಡುವೆ ಇಂದಿನಿಂದ ಸಂಸತ್ ಕಲಾಪ ಆರಂಭವಾಗಿತ್ತು.

  • ಲೋಕಸಭೆಯಲ್ಲಿ ಹೈಡ್ರಾಮಾ: ಕಲಾಪದಲ್ಲಿ ಕೈಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಸಂಸದರು

    ಲೋಕಸಭೆಯಲ್ಲಿ ಹೈಡ್ರಾಮಾ: ಕಲಾಪದಲ್ಲಿ ಕೈಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಸಂಸದರು

    ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಸಂಸದರು ಕಲಾಪದ ವೇಳೆ ಕೈಕೈ ಮಿಲಾಯಿಸಿದ ಪ್ರಸಂಗ ಇಂದು ನಡೆಯಿತು.

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಾಠಿಯಿಂದ ಹೊಡೆಯಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಹೇಳಿಕೆ ಇಂದೂ ಕೂಡ ಕಲಾಪದಲ್ಲಿ ಪ್ರಸ್ತಾಪವಾಯಿತು. ಪ್ರಶ್ನೋತ್ತರ ಸಮಯದಲ್ಲಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಸಂಬಂಧಿಸಿದ ಪೂರಕ ಪ್ರಶ್ನೆಗಳನ್ನು ಕೇಳಲು ಸ್ಪೀಕರ್ ಬಿರ್ಲಾ ಅವರು ರಾಹುಲ್ ಗಾಂಧಿ ಅವರಿಗೆ ಕೇಳಿದರು. ಆಗ ಪ್ರಶ್ನೆಯನ್ನು ಕೇಳಲು ಮುಂದಾಗುತ್ತಿದ್ದಂತೆ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು, ಪ್ರಧಾನಿ ಬಗ್ಗೆ ರಾಹುಲ್ ಗಾಂಧಿ ಅವರ ವಿಲಕ್ಷಣ ಹೇಳಿಕೆಯನ್ನು ಸದನವು ಖಂಡಿಸಬೇಕು ಎಂದು ಆಗ್ರಹಿಸಿದರು.

    ಹರ್ಷವರ್ಧನ್ ಒತ್ತಾಯದ ಬೆನ್ನಲ್ಲೇ ಬಿಜೆಪಿ ಸಂಸದರು ಜೋರು ಧ್ವನಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಮಧ್ಯೆ ಕಾಂಗ್ರೆಸ್ ಸದಸ್ಯರೊಬ್ಬರು ಆಡಳಿತ ಪಕ್ಷದ ಮುಂದಿನ ಸಾಲಿಗೆ ತಲುಪಿದ್ದು ಮತ್ತಷ್ಟು ಗಲಾಟೆಗೆ ಕಾರಣವಾಯಿತು.

    ತಮಿಳುನಾಡಿನ ಕಾಂಗ್ರೆಸ್ ಸಂಸದ ಟ್ಯಾಗೋರ್ ಅವರು ಹರ್ಷವರ್ಧನ್ ಮುಂದೆ ಆಗಮಿಸಿದರು. ಅವರನ್ನು ತಡೆಯಲು ಅನೇಕ ಸಚಿವರು ಮತ್ತು ಬಿಜೆಪಿ ಸಂಸದರು ಮುಂದೆ ಬಂದರು. ಟ್ಯಾಗೋರ್ ನಂತರ, ಕೇರಳದ ಕಾಂಗ್ರೆಸ್ ಸಂಸದರೊಬ್ಬರು ಸಹ ಆಡಳಿತ ಪಕ್ಷದತ್ತ ಬಂದರು. ಈ ಸಂದರ್ಭದಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಸೇರಿದಂತೆ ಅನೇಕ ಸಚಿವರು ಮತ್ತು ಬಿಜೆಪಿ ಸದಸ್ಯರು ಅವರನ್ನು ತಡೆಯಲು ಮುಂದಾದರು. ಆದರೆ ಕಾಂಗ್ರೆಸ್ ಸಂಸದರು ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದರು.

    ಕಾಂಗ್ರೆಸ್-ಬಿಜೆಪಿ ನಾಯಕರು ಕೈಕೈ ಮಿಲಾಯಿಸಿದ್ದು ಕಲಾಪವನ್ನು ಕೋಲಾಹಲಕ್ಕೆ ನೂಕಿತು. ಆಗ ಸ್ಪೀಕರ್ ಬಿರ್ಲಾ ಅವರು ಸಭೆಯನ್ನು ಮಧ್ಯಾಹ್ನ ಒಂದು ಗಂಟೆಯವರೆಗೆ ಮುಂದೂಡಿದರು.

  • ಪ್ರಧಾನಿಗೆ ಒತ್ತಡ ಹೇರದಿದ್ದರೆ ಸಂಸದರು ರಾಜೀನಾಮೆ ನೀಡಲಿ – ರೈತ ಮಹಿಳೆ ಜಯಶ್ರೀ

    ಪ್ರಧಾನಿಗೆ ಒತ್ತಡ ಹೇರದಿದ್ದರೆ ಸಂಸದರು ರಾಜೀನಾಮೆ ನೀಡಲಿ – ರೈತ ಮಹಿಳೆ ಜಯಶ್ರೀ

    – ರಾಜ್ಯಕ್ಕಾಗಮಿಸಿದರೂ ನೆರೆ ಬಗ್ಗೆ ತುಟಿ ಬಿಚ್ಚಿಲ್ಲ

    ಬೆಳಗಾವಿ: ನೆರೆಯಿಂದ ಉತ್ತರ ಕರ್ನಾಟಕ ತತ್ತರಿಸಿದರೂ ಪರಿಹಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತುಟಿ ಬಿಚ್ಚುತ್ತಿಲ್ಲ. ಈ ಕುರಿತು ಪ್ರಧಾನಿಗೆ ಒತ್ತಡ ಹೇರಲು ಆಗದಿದ್ದರೆ ರಾಜ್ಯದ 25 ಸಂಸದರು ರಾಜೀನಾಮೆ ನೀಡಿ ಹೊರಬರಬೇಕು ಎಂದು ರೈತ ಮಹಿಳೆ ಜಯಶ್ರೀ ಗುರೆನ್ನವರ ಆಗ್ರಹಿಸಿದ್ದಾರೆ.

    ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಎರಡು ಸಲ ಭೇಟಿ ನೀಡಿದ್ದಾರೆ. ಪರಿಹಾರ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗೆ 50 ಸಾವಿರ ಕೋಟಿ ರೂ., ನೀಡುವಂತೆ ಸಾರ್ವಜನಿಕ ಸಭೆಯಲ್ಲಿ ಸಿಎಂ ಕೋರಿದ್ದರು. ಆದರೂ ಪ್ರಧಾನಿ ಪರಿಹಾರ ಹಾಗೂ ವಿಶೇಷ ಅನುದಾನದ ಬಗ್ಗೆ ತುಟಿ ಬಿಚ್ಚಲಿಲ್ಲ. ಬಿಜೆಪಿಯ 25 ಸಂಸದರು ಗೆದ್ದು ದೆಹಲಿಗೆ ಹೋದರೂ ರಾಜ್ಯಕ್ಕೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ಹೀಗಾಗಿ ಎಲ್ಲ ಸಂಸದರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

    ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜ.13ರಂದು ಬೆಂಗಳೂರಿನಲ್ಲಿ ಎಲ್ಲ ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದೇವೆ. ಮಹದಾಯಿ ಯೋಜನೆ ಜಾರಿ, ತೊಗರಿ ಸೇರಿದಂತೆ ಎಲ್ಲ ಬೆಳೆಗಳಿಗೆ ಬೆಂಬಲ ಬೆಳೆ, ಕಬ್ಬಿನ ಬಾಕಿ ಬಿಲ್ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ 1 ಲಕ್ಷಕ್ಕೂ ಹೆಚ್ಚು ರೈತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

  • ಅಭಿವೃದ್ದಿಗಿಂತ ಶಾಸಕರನ್ನು ಸಮಾಧಾನಪಡಿಸುವುದೇ ಸಿಎಂಗೆ ದೊಡ್ಡ ಕೆಲಸವಾಗುತ್ತೆ- ನಾರಾಯಣಸ್ವಾಮಿ

    ಅಭಿವೃದ್ದಿಗಿಂತ ಶಾಸಕರನ್ನು ಸಮಾಧಾನಪಡಿಸುವುದೇ ಸಿಎಂಗೆ ದೊಡ್ಡ ಕೆಲಸವಾಗುತ್ತೆ- ನಾರಾಯಣಸ್ವಾಮಿ

    – ಶರತ್ ಬಚ್ಚೆಗೌಡ ಪಕ್ಷಕ್ಕೆ ಬಂದ್ರೆ ಸ್ವಾಗತ
    – ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಲಿ

    ಕೋಲಾರ: ಬಿಜೆಪಿ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಪಕ್ಷದ ಶಾಸಕರನ್ನು ಸಮಾದಾನ ಪಡಿಸುವುದೇ ದೊಡ್ಡ ಕೆಲಸವಾಗುತ್ತದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲಾ ಪಂಚಾಯತ ಕೆಡಿಪಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿನಲ್ಲಿ ಅಧಿಕಾರ ಪಡೆದುಕೊಂಡವರು ಬಿಜೆಪಿಗೆ ಹೋಗಿದ್ದಾರೆ, ಹೊಸ ನೀರು ಹೋದಮೇಲೆ ಹಳೆ ನೀರಿಗೆ ಅಲ್ಲಿ ಬೆಲೆ ಇಲ್ಲ ಹಾಗಾಗಿ ಬಿಜೆಪಿಯಲ್ಲಿ ಸಚಿವ ಸಂಪುಟ ವಿಚಾರವಾಗಿ ಗೊಂದಲ ಮುಂದುವರೆಯುತ್ತದೆ. ಎಂಟಿಬಿಗೆ ಬಿಜೆಪಿಯಲ್ಲಿ ಸ್ಥಾನಮಾನ ಕೊಡಲು ಸಾಧ್ಯವೇ ಇಲ್ಲ. ಗೆದ್ದಿರುವವರಿಗೆ ಸ್ಥಾನಮಾನ ಕೊಡುವುದೇ ಕಷ್ಟವಾಗಿದೆ. ಹಳಬರು-ಹೊಸಬರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದೇ ಸಿಎಂಗೆ ಸರ್ಕಸ್ ಆಗುತ್ತದೆ ಎಂದರು.

    ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ನೂತನ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್‍ಗೆ ಬಂದರೆ ಸ್ವಾಗತಿಸುತ್ತೇವೆ. ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿರುವ ಶರತ್ ಏಕೆ ಕಾಂಗ್ರೆಸ್‍ಗೆ ಬರಬಾರದು ಎಂದು ಪ್ರಶದನಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವಂತೆ ಹೈಕಮಾಂಡ್‍ಗೆ ಒತ್ತಾಯ ಮಾಡುತ್ತೇನೆ ಎಂದರು.

    ಸಂಸದ, ಶಾಸಕರ ನಡುವೆ ವಾಗ್ವಾದ
    ಕೆಡಿಪಿ ಸಭೆಯಲ್ಲಿ ಸಂಸದ ಮುನಿಸ್ವಾಮಿ ಹಾಗೂ ಮಾಲೂರು ಕಾಂಗ್ರೇಸ್ ಶಾಸಕ ಹಾಗೂ ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ನಂಜೇಗೌಡ ನಡುವೆ ಏರು ಧ್ವನಿಯಲ್ಲಿ ವಾಗ್ವಾದ ನಡೆಯಿತು. ಕೆಎಂಎಫ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂದು ಸಂಸದ ಮುನಿಸ್ವಾಮಿಗೆ ಆರೋಪಿಸಿದರು. ಇದಕ್ಕೆ ಉತ್ತರಿಸುವ ವೇಳೆ ಶಾಸಕರು ಏಕವಚನದಲ್ಲಿ ಮಾತನಾಡಿ ನೀನು ಎಂದು ಸಂಭೋಧಿಸಿದರು. ಇದಕ್ಕೆ ಕೋಪಗೊಂಡ ಸಂಸದರು ನ್ಯಾಯವಾಗಿ ಮಾತನಾಡಿ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಸಂಸದರು ಹಾಗೂ ಶಾಸಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ಸಭೆಯಲ್ಲಿದ್ದ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಮತ್ತು ಸಚಿವ ನಾಗೇಶ್ ಸಮಾಧಾನ ಪಡಿಸಿದರು. ನಂತರ ಸಭೆಯಲ್ಲಿ ಒಬ್ಬರಿಗೊಬ್ಬರು ಸಮರ್ಥಿಸಿಕೊಂಡರು. ಮಧ್ಯಾಹ್ನದ ಊಟವನ್ನು ಇಬ್ಬರೂ ಜೊತೆಯಲ್ಲೆ ಸವಿದರು.

    ಉಸ್ತುವಾರಿ ಸಚಿವರ ಮೌನ
    ಸಂಸದರ ಜೊತೆ ಮಾತನಾಡುತ್ತ ಕುಳಿತ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಬದಲಾಗಿ ಇಡೀ ಸಭೆಯನ್ನು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ನಡೆಸಿಕೊಟ್ಟರು. ಸಚಿವ ನಾಗೇಶ್ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೂರು ತಿಂಗಳ ನಂತರ ಮೂರು ಬಾರಿ ದಿನಾಂಕ ನಿಗದಿ ಮಾಡಿ ನಂತರ ಮುಂದೂಡಿ ಕೊನೆಗೆ ಇಂದು ಸಭೆ ನಡೆಸಿದರು. ಆದರೆ ನಡೆಸಿಕೊಟ್ಟವರು ಮಾತ್ರ ನಾರಾಯಣಸ್ವಾಮಿ.

    ಸಭೆಯಲ್ಲಿ ಪ್ರತಿ ವಿಷಯದ ಮೇಲೆ ಚರ್ಚೆ ಬಂದಾಗಲೂ ಅಧಿಕಾರಿಗಳನ್ನು ಪ್ರಶ್ನೆ ಮಾಡಿ ಸಚಿವರೇ ಅದೇಶ ನೀಡುತ್ತಿದ್ದರು. ಆದರೆ ಈ ಬಾರಿ ನಾರಾಯಣಸ್ವಾಮಿಯವರು ಮಾಡಿದ್ದಾರೆ.

    ಈ ವೇಳೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಸರಿಯಾಗಿ ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ. ಕೋಲಾರ ತಾಲೂಕು ವಡಗೂರು ಗ್ರಾಮದಲ್ಲಿ ರಾಜೀವ್‍ಗಾಂಧಿ ಸೇವಾ ಕೇಂದ್ರವನ್ನು ನನ್ನ ಗಮನಕ್ಕೆ ತರದೆ ಉದ್ಘಾಟನೆ ಮಾಡಲಾಗಿದೆ ಎಂದು ಆರೋಪಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಇದಕ್ಕೆ ಸಭೆಯಲ್ಲಿದ್ದ ಎಲ್ಲ ಜನಪ್ರತಿನಿಧಿಗಳು ಧ್ವನಿಗೂಡಿಸಿದರು. ಜಿಲ್ಲಾಧಿಕಾರಿಗಳು ಉತ್ತರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಸಭೆಗೂ ನಮಗೂ ಸಂಬಂಧವೇ ಇಲ್ಲವೆಂದು ಕುಳಿತಿದ್ದ ಅಧಿಕಾರಿಗಳು, ಕೆಲವರು ನಿದ್ದೆಗೆ ಜಾರಿದರೆ, ಬಹುತೇಕರು ಮೊಬೈಲ್ ನಲ್ಲೇ ಮುಳುಗಿದ್ದರು. ಸಭೆಯಲ್ಲಿ ಜನರ ಸಮಸ್ಯೆಗಳಿಗಿಂತ ಹೆಚ್ಚಾಗಿ ಶಾಸಕರು ಮತ್ತು ಸಚಿವರು ತಮ್ಮ ಸಮಸ್ಯೆಗಳ ಬಗ್ಗೆಯೇ ಚಿಂತಿಸಿದ್ದು, ಮತ್ತೊಂದು ವಿಶೇಷವಾಗಿತ್ತು.

  • ಸಂಸತ್ತಿನಲ್ಲಿ ಸಂಸದರ ಸಬ್ಸಿಡಿ ಆಹಾರಕ್ಕೆ ಕತ್ತರಿ – ಯಾವ ಆಹಾರಕ್ಕೆ ಎಷ್ಟು ರೂ. ಇತ್ತು?

    ಸಂಸತ್ತಿನಲ್ಲಿ ಸಂಸದರ ಸಬ್ಸಿಡಿ ಆಹಾರಕ್ಕೆ ಕತ್ತರಿ – ಯಾವ ಆಹಾರಕ್ಕೆ ಎಷ್ಟು ರೂ. ಇತ್ತು?

    ನವದೆಹಲಿ: ಬಹು ವರ್ಷಗಳಿಂದ ಚರ್ಚೆಯಾಗುತ್ತಿದ್ದ ಸಂಸದರ ಊಟ, ಉಪಹಾರದ ಸಬ್ಸಿಡಿ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

    ಲೋಕಸಭೆಯ ಆವರಣದಲ್ಲಿರುವ ಯಾವುದೇ ಕ್ಯಾಂಟೀನ್‍ಗಳಲ್ಲಿ ಸಬ್ಸಿಡಿ ನೀಡದಿರಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಸ್ಪೀಕರ್ ಓಂ ಬಿರ್ಲಾ ಅವರ ಮನವಿಯಂತೆ ಸಂಸದರು ಅವಿರೋಧವಾಗಿ ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸಂಸತ್ತಿನ ಕ್ಯಾಂಟೀನಲ್ಲಿ ಆಹಾರಕ್ಕೆ ನೀಡುವ ಸಬ್ಸಿಡಿಯಿಂದಾಗಿ ಸರ್ಕಾರಕ್ಕೆ ಪ್ರತಿ ವರ್ಷ 17 ಕೋಟಿ ರೂ ನಷ್ಟ ಉಂಟಾಗುತ್ತಿತ್ತು. ಲೋಕಸಭೆಯ ಕ್ಯಾಂಟೀನ್‍ಗಳಲ್ಲಿ ಸಂಸದರಿಗೆ, ಅಧಿಕಾರಿಗಳಿಗೆ ಹಾಗೂ ಲೋಕಸಭೆಗೆ ಭೇಟಿ ನೀಡುವವರಿಗೆ ಕಡಿಮೆ ಬೆಲೆಗೆ ಆಹಾರವನ್ನು ನೀಡಲಾಗುತ್ತದೆ. ಈ ಕುರಿತು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದು, ಈ ಸಬ್ಸಿಡಿಯನ್ನು ತೆಗೆಯಬೇಕೆಂಬ ಒತ್ತಾಯ ಕೇಳಿ ಬಂದಿತ್ತು.

    ಲೋಕಸಭೆಯಲ್ಲಿನ ನಾಲ್ಕು ಕ್ಯಾಂಟೀನ್‍ಗಳ ನಿರ್ವಹಣೆ ವೆಚ್ಚ 16.43 ಕೋಟಿ ರೂ.ಗಳಾಗಿದ್ದು ಈ ಹಣವನ್ನು ಪಾವತಿಸಬೇಕು ಎಂದು ಉತ್ತರ ರೈಲ್ವೇ ಕಳೆದ ವರ್ಷ ಲೋಕಸಭೆಯ ಕಾರ್ಯಾಲಯಕ್ಕೆ ಮನವಿ ಮಾಡಿತ್ತು. ಇದು ಕೇವಲ 2017-18ನೇ ಸಾಲಿನ ವೆಚ್ಚವಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿತ್ತು.

    ಪಾರ್ಲಿಮೆಂಟ್ ಹೌಸ್, ಪಾರ್ಲಿಮೆಂಟ್ ಹೌಸ್ ಅನೆಕ್ಸ್, ಪಾರ್ಲಿಮೆಂಟ್ ಹೌಸ್ ರಿಸೆಪ್ಷನ್ ಹಾಗೂ ಪಾರ್ಲಿಮೆಂಟ್ ಹೌಸ್‍ನ ಗ್ರಂಥಾಲಯಗಳಲ್ಲಿ ಉತ್ತರ ರೈಲ್ವೇ ಕ್ಯಾಂಟೀನ್ ಸ್ಥಾಪಿಸಿದೆ.

    ಡಿಸೆಂಬರ್ 2015ರಲ್ಲಿ ಲೋಕಸಭಾ ಕಾರ್ಯಾಲಯವು ಜ.1, 2016ರಿಂದ ಕ್ಯಾಂಟೀನ್‍ಗಳು ಯಾವುದೇ ಲಾಭ, ಯಾವುದೇ ನಷ್ಟ ಇಲ್ಲದೇ ಕಾರ್ಯ ನಿರ್ವಹಿಸಬೇಕು ಎಂದು ಹೇಳಿತ್ತು.

    ಡಿಸೆಂಬರ್ 2018ರ ಆರ್‍ಟಿಐ ಮಾಹಿತಿ ಪ್ರಕಾರ, ಲೋಕಸಭೆಯ ಕ್ಯಾಂಟೀನ್‍ಗಳಲ್ಲಿ ರೋಟಿಗೆ 2 ರೂ., ದಾಲ್ 5 ರೂ., ಅನ್ನ 7 ರೂ., ಮಸಾಲ ದೋಸೆ 18 ರೂ. ಹಾಗೂ ಚಿಕ್ಕನ್ ಕರ್ರಿ ಕೇವಲ 50 ರೂ. ದರ ನಿಗದಿಯಾಗಿತ್ತು.